ಅಮೆರಿಕ-ಇರಾನ್ ಸಂಘರ್ಷದ ನಡುವೆ ಸಂಕಷ್ಟಕ್ಕೆ ಸಿಲುಕಿದವರಿಗೆ ಸೋನು ಸೂದ್ ಕಡೆಯಿಂದ ವಸತಿ ಸೌಲಭ್ಯ

ಅಮೆರಿಕಾ ಮತ್ತು ಇರಾನ್ ನಡುವಿನ ಯುದ್ಧದಿಂದಾಗಿ ವಿದೇಶದ ಹಲವು ಪ್ರವಾಸಿಗರಿಗೆ ತೊಂದರೆ ಆಗಿದೆ. ದುಬೈನಲ್ಲಿ ಅನೇಕ ಭಾರತೀಯರು ಸಿಲುಕಿಕೊಂಡಿದ್ದಾರೆ. ತಾಯ್ನಾಡಿಗೆ ವಾಪಸ್ ಬರಲು ಆಗದೇ ಪರಡಾಡುತ್ತಿದ್ದಾರೆ. ಭಾರತೀಯರು ಮಾತ್ರವಲ್ಲದೇ ಬೇರೆ ದೇಶದ ಜನರಿಗೂ ನೆರವು ನೀಡಲು ನಟ ಸೋನು ಸೂದ್ ಮುಂದಾಗಿದ್ದಾರೆ.
ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ಸೋನು ಸೂದ್ ಕಡೆಯಿಂದ ಉಚಿತ ವಸತಿ ಸೌಲಭ್ಯ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಅಮೆರಿಕ-ಇರಾನ್ ಸಂಘರ್ಷದ ನಡುವೆ, ವಿಮಾನಯಾನ ರದ್ದತಿಯಿಂದಾಗಿ ದುಬೈನಲ್ಲಿ ಸಿಲುಕಿರುವ ನೂರಾರು ಪ್ರವಾಸಿಗರ ನೆರವಿಗೆ ಬಾಲಿವುಡ್ ನಟ ಸೋನು ಸೂದ್ (Sonu Sood) ಧಾವಿಸಿದ್ದಾರೆ. ಸಂಕಷ್ಟದಲ್ಲಿ ಇರುವವರಿಗೆ ಉಚಿತವಾಗಿ ವಸತಿ ಸೌಲಭ್ಯ ಕಲ್ಪಿಸುವುದಾಗಿ ಘೋಷಿಸುವ ಮೂಲಕ ಅವರು ಮತ್ತೊಮ್ಮೆ ತಮ್ಮ ದೊಡ್ಡ ಗುಣವನ್ನು ಪ್ರದರ್ಶಿಸಿದ್ದಾರೆ. ಈ ಹಿಂದೆ 2020-21ರ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಮನೆಗಳಿಗೆ ತಲುಪಿಸುವ ಮೂಲಕ ಸೋನು ಸೂದ್ ದೇಶಾದ್ಯಂತ ಅಪಾರ ಪ್ರೀತಿ ಗಳಿಸಿದ್ದರು. ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲೂ ಸಂಕಷ್ಟಕ್ಕೆ ಸ್ಪಂದಿಸುವ ಮೂಲಕ ಅವರು ಸುದ್ದಿಯಲ್ಲಿದ್ದಾರೆ.

ಇತ್ತೀಚಿನ ಜಾಗತಿಕ ಮಟ್ಟದ ರಾಜಕೀಯ ಉದ್ವಿಗ್ನತೆಯಿಂದಾಗಿ ಹಲವು ವಿಮಾನಯಾನ ಸಂಸ್ಥೆಗಳು ತಮ್ಮ ಹಾರಾಟವನ್ನು ರದ್ದುಗೊಳಿಸಿವೆ. ಇದರಿಂದಾಗಿ ಪ್ರವಾಸಿಗರು ತಾಯ್ನಾಡಿಗೆ ಮರಳಲಾಗದೆ ದುಬೈನಲ್ಲಿ ಪರದಾಡುತ್ತಿದ್ದಾರೆ. ಈ ಪರಿಸ್ಥಿತಿಯನ್ನು ಗಮನಿಸಿದ ಸೋನು ಸೂದ್, ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

‘ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಯಾರೆಲ್ಲಾ ದುಬೈನಲ್ಲಿ ಸಿಲುಕಿಕೊಂಡಿದ್ದಾರೋ, ಅವರಿಗೆ ನಾವು ನೆರವಾಗಲು ಸಿದ್ಧರಿದ್ದೇವೆ. ನೀವು ಉಳಿದುಕೊಳ್ಳಲು ನಾವು ಉಚಿತ ವ್ಯವಸ್ಥೆ ಮಾಡುತ್ತೇವೆ’ ಎಂದು ಅವರು ಭರವಸೆ ನೀಡಿದ್ದಾರೆ. ಕೇವಲ ಭಾರತೀಯರಿಗೆ ಮಾತ್ರವಲ್ಲದೆ, ಯಾವುದೇ ದೇಶದವರಾಗಿದ್ದರೂ ಅವರಿಗೆ ಆಶ್ರಯ ನೀಡುವುದಾಗಿ ಸೋನು ಸೂದ್ ತಿಳಿಸಿದ್ದಾರೆ.

‘ನಮ್ಮ ಭಾರತೀಯ ಸಹೋದರರು ಇರಲಿ ಅಥವಾ ಬೇರೆ ಯಾವುದೇ ರಾಷ್ಟ್ರದವರೇ ಇರಲಿ, ನೀವು ದುಬೈನಲ್ಲಿ ಸಂಕಷ್ಟದಲ್ಲಿದ್ದರೆ ದಯವಿಟ್ಟು ನಮಗೆ ಅಥವಾ ದುಗಾಸ್ತ ಪ್ರಾಪರ್ಟೀಸ್ ಸಂಸ್ಥೆಗೆ ನೇರವಾಗಿ ಸಂದೇಶ ಕಳುಹಿಸಿ. ನೀವು ಸುರಕ್ಷಿತವಾಗಿ ನಿಮ್ಮ ದೇಶಕ್ಕೆ ಮರಳುವವರೆಗೆ ನಿಮ್ಮ ವಾಸ್ತವ್ಯದ ಜವಾಬ್ದಾರಿ ನಮ್ಮದು’ ಎಂದು ಸೋನು ಸೂದ್ ಹೇಳಿದ್ದಾರೆ.

ಸೋನು ಸೂದ್ ಅವರ ಈ ಕಾರ್ಯಕ್ಕೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ‘ಬಾಲಿವುಡ್‌ನ ಏಕೈಕ ರಿಯಲ್ ಹೀರೋ ಎಂದರೆ ನೀವೇ’, ‘ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದನ್ನು ನೀವು ಸಾಬೀತುಪಡಿಸಿದ್ದೀರಿ’ ಎಂಬಿತ್ಯಾದಿ ಕಮೆಂಟ್​ಗಳ ಮೂಲಕ ಸೋನು ಸೂದ್ ಅವರನ್ನು ಹೊಗಳಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!