ಸೊಸೈಟಿಗಳ ಮೂಲಕವೇ ಬೆಳೆ ಖರೀದಿ-ಮಾರಾಟ: ರೈತರ ಸ್ವಾವಲಂಬನೆಗೆ ಹೊಸ ಯೋಜನೆ.

ಪಾಂಡವಪುರ : ಬೆಳೆಗಳನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕವೇ ಖರೀದಿಸಿ ಮಾರಾಟ ಮಾಡಿ, ರೈತರ ಬೆಳೆಗೆ ಅಧಿಕ ಲಾಭ ನೀಡುವ ಹೊಸ ಕಾಠ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಸೊಸೈಟಿಗಳು ಇಷ್ಟು ದಿನ ರೈತರಿಗೆ ಬೇಕಾದ ರಸಗೊಬ್ಬರ, ಬ್ಯಾಂಕ್ ಸಾಲ ಸೌಲಭ್ಯ ಹಾಗೂ ಪಡಿತರ ವಿತರಣೆಯನ್ನು ಮಾತ್ರ ಮಾಡುತ್ತಿ ದ್ದರು. ಅದರ ಜತೆಗೆ ರೈತರು ಬೆಳೆಯುವ ಭತ್ತ, ರಾಗಿ, ಜೋಳ, ಕಾಳುಗಳನ್ನು ಸಹ ನೇರವಾಗಿ ರೈತರಿಂದ ಖರೀದಿಸಿ ಅಧಿಕ ಲಾಭನೀಡುವುದರೊಂದಿಗೆ ಸೊಸೈಟಿಗಳ ಮೂಲಕವೇ ಸಿದ್ದಪಡಿಸಿದ ಬೆಳೆಗಳನ್ನು ಮಾರಾಟ ಮಾಡಲು ಕ್ರಮ ವಹಿಸಲಾಗಿದೆ. ಇದರಿಂದ ದಲ್ಲಾಳಿಗಳ ಹಾವಳಿ ತಪ್ಪಿಸಿದಂತಾಗುತ್ತದೆ, ಜತೆಗೆ ರೈತರಿಗೂ ಅಧಿಕ

ಲಾಭವಾಗಿ ಸೊಸೈಟಿಗಳು ಲಾಭದಾಯಕ ವಾಗಲಿವೆ. ಇದಕ್ಕಾಗಿ ನಬಾರ್ಡ್ ಅಥವಾ ಡಿಸಿಸಿ ಬ್ಯಾಂಕ್‌ಗಳಿಂದ ಸೊಸೈಟಿಗಳಿಗೆ ಆರ್ಥಿಕ ನೆರವು ನೀಡಲು ಕ್ರಮ ವಹಿಸಲಾಗುತ್ತಿದೆ,” ಎಂದು ತಿಳಿಸಿದರು. ”ಈ ಸಂಬಂಧ ಈಗಾಗಲೇ ಸೊಸೈಟಿಗಳ ಸಿಇಒ, ಸಿಬ್ಬಂದಿಗಳೊಂದಿಗೆ ಹಲವು ಬಾರಿ ಸಭೆ ನಡೆಸಿ ಚರ್ಚಿಸಲಾಗಿದೆ. ಜತೆಗೆ ಹೊಸ ಸಾಫ್ಟ್‌ವೇರ್ ಅನ್ನು ಡೆವಲಪ್ ಮಾಡಲಾಗಿದೆ. ಮೊದಲ ಹಂತದಲ್ಲಿ ಭತ್ತ.
ರಾಗಿ, ಜೋಳ, ಕಾಳುಗಳು, ಮೆಣಸಿನ ಕಾಯಿಗಳನ್ನು ಖರೀದಿಸಲಾಗುವುದು, ಬಳಿಕ ಕೋಲ್ಡ್ ಸ್ಟೋರೇಜ್‌ಗಳನ್ನು ನಿರ್ಮಿಸಿ ತರಕಾರಿ ಖರೀದಿಸಲು ತೀರ್ಮಾನಿ ಸಲಾಗುತ್ತಿದೆ. ಈ ಕೆಲಸಕ್ಕೆ ಸಹಕಾರ ಸಂಘಗಳ ಸಹಕಾರ ಇಲ್ಲಿ ನೀಡಬೇಕು, ಯಾವುದೇ ರೀತಿಯ ರಾಜಕೀಯ ನಡೆಸುತ್ತಿಲ್ಲ, ಇದು ಕೇವಲ ರೈತರು ಆರ್ಥಿಕ ಸ್ವಾವಲಂಬಿ ನಡೆಸುವುದಕ್ಕಾಗಿ ಮಾತ್ರ ಈ ಕಾಠ್ಯಕ್ರಮ ಆಯೋಜಿಸಲಾಗಿದೆ,”ಎಂದರು.

‘ಈಗಾಗಲೇ ತಾಲೂಕಿನ ಅರಳಕುಪ್ಪೆ, ಕ್ಯಾತನಹಳ್ಳಿ ಸೊಸೈಟಿಗಳಲ್ಲಿ ರೈತರಿಂದ ನೇರವಾಗಿ ಭತ್ತ ಖರೀದಿಸಿ ಮಾರಾಟ ಮಾಡಿ ಲಾಭ ಗಳಿಸುವ ಕೆಲಸ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇಡೀ ಕ್ಷೇತ್ರದಾದ್ಯಂತ ಮಾಡಲಾಗುತ್ತಿದೆ. ಈ ವಿಚಾರವಾಗಿ ಚರ್ಚಿಸಲು ಏ.1ರಂದು ಪಟ್ಟಣದ ಟಿಎಪಿಸಿಎಂಎಸ್‌ ರೈತ ಸಭಾಂಗಣದಲ್ಲಿ ಎಲ್ಲಾ ತ ಸಹಕಾರ ಸಂಘಗಳ ಆಡಳಿತ ಮಂಡಳಿಯ ನಿರ್ದೇಶಕ ಸಭೆಯನ್ನು ಕರೆಯಲಾಗಿದೆ,” ಎಂದು ಮನವಿ ಮಾಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಎ,ಎಲ್. ಕೆಂಪೂಗೌಡ, ತಾಲೂಕು ಅಧ್ಯಕ್ಷ ಎಣ್ಣೆಹೊಳೆ ಕೊಪ್ಪಲು ಮಂಜುನಾಥ್, ಮಾಜಿ ಅಧ್ಯಕ್ಷ ಕೆನ್ನಾಳು ವಿಜಯ್‌ಕುಮಾರ್, ನಾಗರಾಜು, ಪ್ರಕಾಶ್, ಪ್ರಧಾನ ಕಾಠ್ಯದರ್ಶಿ ಡಾಮಡಹಳ್ಳಿ ಅಶೋಕ್, ಕೆ.ಟಿ.ಗೋವಿಂದೇಗೌಡ, ಬಿ.ಟಿ.ಶಿವಣ್ಣ, ಶಂಕರ, ರೂಪಾ, ಕಟ್ಟೇರಿ ಮಹದೇವು, ಮುಖಂಡ ಗೋವಿಂದರಾಜು, ರಾಘು, ಪ್ರಕಾಶ್ ಸೇರಿದಂತೆ ಇತರರು ಇದ್ದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು