ಸೊಸೈಟಿಗಳ ಮೂಲಕವೇ ಬೆಳೆ ಖರೀದಿ-ಮಾರಾಟ: ರೈತರ ಸ್ವಾವಲಂಬನೆಗೆ ಹೊಸ ಯೋಜನೆ.

ಪಾಂಡವಪುರ : ಬೆಳೆಗಳನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕವೇ ಖರೀದಿಸಿ ಮಾರಾಟ ಮಾಡಿ, ರೈತರ ಬೆಳೆಗೆ ಅಧಿಕ ಲಾಭ ನೀಡುವ ಹೊಸ ಕಾಠ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಸೊಸೈಟಿಗಳು ಇಷ್ಟು ದಿನ ರೈತರಿಗೆ ಬೇಕಾದ ರಸಗೊಬ್ಬರ, ಬ್ಯಾಂಕ್ ಸಾಲ ಸೌಲಭ್ಯ ಹಾಗೂ ಪಡಿತರ ವಿತರಣೆಯನ್ನು ಮಾತ್ರ ಮಾಡುತ್ತಿ ದ್ದರು. ಅದರ ಜತೆಗೆ ರೈತರು ಬೆಳೆಯುವ ಭತ್ತ, ರಾಗಿ, ಜೋಳ, ಕಾಳುಗಳನ್ನು ಸಹ ನೇರವಾಗಿ ರೈತರಿಂದ ಖರೀದಿಸಿ ಅಧಿಕ ಲಾಭನೀಡುವುದರೊಂದಿಗೆ ಸೊಸೈಟಿಗಳ ಮೂಲಕವೇ ಸಿದ್ದಪಡಿಸಿದ ಬೆಳೆಗಳನ್ನು ಮಾರಾಟ ಮಾಡಲು ಕ್ರಮ ವಹಿಸಲಾಗಿದೆ. ಇದರಿಂದ ದಲ್ಲಾಳಿಗಳ ಹಾವಳಿ ತಪ್ಪಿಸಿದಂತಾಗುತ್ತದೆ, ಜತೆಗೆ ರೈತರಿಗೂ ಅಧಿಕ

ಲಾಭವಾಗಿ ಸೊಸೈಟಿಗಳು ಲಾಭದಾಯಕ ವಾಗಲಿವೆ. ಇದಕ್ಕಾಗಿ ನಬಾರ್ಡ್ ಅಥವಾ ಡಿಸಿಸಿ ಬ್ಯಾಂಕ್‌ಗಳಿಂದ ಸೊಸೈಟಿಗಳಿಗೆ ಆರ್ಥಿಕ ನೆರವು ನೀಡಲು ಕ್ರಮ ವಹಿಸಲಾಗುತ್ತಿದೆ,” ಎಂದು ತಿಳಿಸಿದರು. ”ಈ ಸಂಬಂಧ ಈಗಾಗಲೇ ಸೊಸೈಟಿಗಳ ಸಿಇಒ, ಸಿಬ್ಬಂದಿಗಳೊಂದಿಗೆ ಹಲವು ಬಾರಿ ಸಭೆ ನಡೆಸಿ ಚರ್ಚಿಸಲಾಗಿದೆ. ಜತೆಗೆ ಹೊಸ ಸಾಫ್ಟ್‌ವೇರ್ ಅನ್ನು ಡೆವಲಪ್ ಮಾಡಲಾಗಿದೆ. ಮೊದಲ ಹಂತದಲ್ಲಿ ಭತ್ತ.
ರಾಗಿ, ಜೋಳ, ಕಾಳುಗಳು, ಮೆಣಸಿನ ಕಾಯಿಗಳನ್ನು ಖರೀದಿಸಲಾಗುವುದು, ಬಳಿಕ ಕೋಲ್ಡ್ ಸ್ಟೋರೇಜ್‌ಗಳನ್ನು ನಿರ್ಮಿಸಿ ತರಕಾರಿ ಖರೀದಿಸಲು ತೀರ್ಮಾನಿ ಸಲಾಗುತ್ತಿದೆ. ಈ ಕೆಲಸಕ್ಕೆ ಸಹಕಾರ ಸಂಘಗಳ ಸಹಕಾರ ಇಲ್ಲಿ ನೀಡಬೇಕು, ಯಾವುದೇ ರೀತಿಯ ರಾಜಕೀಯ ನಡೆಸುತ್ತಿಲ್ಲ, ಇದು ಕೇವಲ ರೈತರು ಆರ್ಥಿಕ ಸ್ವಾವಲಂಬಿ ನಡೆಸುವುದಕ್ಕಾಗಿ ಮಾತ್ರ ಈ ಕಾಠ್ಯಕ್ರಮ ಆಯೋಜಿಸಲಾಗಿದೆ,”ಎಂದರು.

‘ಈಗಾಗಲೇ ತಾಲೂಕಿನ ಅರಳಕುಪ್ಪೆ, ಕ್ಯಾತನಹಳ್ಳಿ ಸೊಸೈಟಿಗಳಲ್ಲಿ ರೈತರಿಂದ ನೇರವಾಗಿ ಭತ್ತ ಖರೀದಿಸಿ ಮಾರಾಟ ಮಾಡಿ ಲಾಭ ಗಳಿಸುವ ಕೆಲಸ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇಡೀ ಕ್ಷೇತ್ರದಾದ್ಯಂತ ಮಾಡಲಾಗುತ್ತಿದೆ. ಈ ವಿಚಾರವಾಗಿ ಚರ್ಚಿಸಲು ಏ.1ರಂದು ಪಟ್ಟಣದ ಟಿಎಪಿಸಿಎಂಎಸ್‌ ರೈತ ಸಭಾಂಗಣದಲ್ಲಿ ಎಲ್ಲಾ ತ ಸಹಕಾರ ಸಂಘಗಳ ಆಡಳಿತ ಮಂಡಳಿಯ ನಿರ್ದೇಶಕ ಸಭೆಯನ್ನು ಕರೆಯಲಾಗಿದೆ,” ಎಂದು ಮನವಿ ಮಾಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಎ,ಎಲ್. ಕೆಂಪೂಗೌಡ, ತಾಲೂಕು ಅಧ್ಯಕ್ಷ ಎಣ್ಣೆಹೊಳೆ ಕೊಪ್ಪಲು ಮಂಜುನಾಥ್, ಮಾಜಿ ಅಧ್ಯಕ್ಷ ಕೆನ್ನಾಳು ವಿಜಯ್‌ಕುಮಾರ್, ನಾಗರಾಜು, ಪ್ರಕಾಶ್, ಪ್ರಧಾನ ಕಾಠ್ಯದರ್ಶಿ ಡಾಮಡಹಳ್ಳಿ ಅಶೋಕ್, ಕೆ.ಟಿ.ಗೋವಿಂದೇಗೌಡ, ಬಿ.ಟಿ.ಶಿವಣ್ಣ, ಶಂಕರ, ರೂಪಾ, ಕಟ್ಟೇರಿ ಮಹದೇವು, ಮುಖಂಡ ಗೋವಿಂದರಾಜು, ರಾಘು, ಪ್ರಕಾಶ್ ಸೇರಿದಂತೆ ಇತರರು ಇದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!