ಸೊಸೈಟಿಗಳ ಮೂಲಕವೇ ಬೆಳೆ ಖರೀದಿ-ಮಾರಾಟ: ರೈತರ ಸ್ವಾವಲಂಬನೆಗೆ ಹೊಸ ಯೋಜನೆ.

ಪಾಂಡವಪುರ : ಬೆಳೆಗಳನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕವೇ ಖರೀದಿಸಿ ಮಾರಾಟ ಮಾಡಿ, ರೈತರ ಬೆಳೆಗೆ ಅಧಿಕ ಲಾಭ ನೀಡುವ ಹೊಸ ಕಾಠ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಸೊಸೈಟಿಗಳು ಇಷ್ಟು ದಿನ ರೈತರಿಗೆ ಬೇಕಾದ ರಸಗೊಬ್ಬರ, ಬ್ಯಾಂಕ್ ಸಾಲ ಸೌಲಭ್ಯ ಹಾಗೂ ಪಡಿತರ ವಿತರಣೆಯನ್ನು ಮಾತ್ರ ಮಾಡುತ್ತಿ ದ್ದರು. ಅದರ ಜತೆಗೆ ರೈತರು ಬೆಳೆಯುವ ಭತ್ತ, ರಾಗಿ, ಜೋಳ, ಕಾಳುಗಳನ್ನು ಸಹ ನೇರವಾಗಿ ರೈತರಿಂದ ಖರೀದಿಸಿ ಅಧಿಕ ಲಾಭನೀಡುವುದರೊಂದಿಗೆ ಸೊಸೈಟಿಗಳ ಮೂಲಕವೇ ಸಿದ್ದಪಡಿಸಿದ ಬೆಳೆಗಳನ್ನು ಮಾರಾಟ ಮಾಡಲು ಕ್ರಮ ವಹಿಸಲಾಗಿದೆ. ಇದರಿಂದ ದಲ್ಲಾಳಿಗಳ ಹಾವಳಿ ತಪ್ಪಿಸಿದಂತಾಗುತ್ತದೆ, ಜತೆಗೆ ರೈತರಿಗೂ ಅಧಿಕ

ಲಾಭವಾಗಿ ಸೊಸೈಟಿಗಳು ಲಾಭದಾಯಕ ವಾಗಲಿವೆ. ಇದಕ್ಕಾಗಿ ನಬಾರ್ಡ್ ಅಥವಾ ಡಿಸಿಸಿ ಬ್ಯಾಂಕ್‌ಗಳಿಂದ ಸೊಸೈಟಿಗಳಿಗೆ ಆರ್ಥಿಕ ನೆರವು ನೀಡಲು ಕ್ರಮ ವಹಿಸಲಾಗುತ್ತಿದೆ,” ಎಂದು ತಿಳಿಸಿದರು. ”ಈ ಸಂಬಂಧ ಈಗಾಗಲೇ ಸೊಸೈಟಿಗಳ ಸಿಇಒ, ಸಿಬ್ಬಂದಿಗಳೊಂದಿಗೆ ಹಲವು ಬಾರಿ ಸಭೆ ನಡೆಸಿ ಚರ್ಚಿಸಲಾಗಿದೆ. ಜತೆಗೆ ಹೊಸ ಸಾಫ್ಟ್‌ವೇರ್ ಅನ್ನು ಡೆವಲಪ್ ಮಾಡಲಾಗಿದೆ. ಮೊದಲ ಹಂತದಲ್ಲಿ ಭತ್ತ.
ರಾಗಿ, ಜೋಳ, ಕಾಳುಗಳು, ಮೆಣಸಿನ ಕಾಯಿಗಳನ್ನು ಖರೀದಿಸಲಾಗುವುದು, ಬಳಿಕ ಕೋಲ್ಡ್ ಸ್ಟೋರೇಜ್‌ಗಳನ್ನು ನಿರ್ಮಿಸಿ ತರಕಾರಿ ಖರೀದಿಸಲು ತೀರ್ಮಾನಿ ಸಲಾಗುತ್ತಿದೆ. ಈ ಕೆಲಸಕ್ಕೆ ಸಹಕಾರ ಸಂಘಗಳ ಸಹಕಾರ ಇಲ್ಲಿ ನೀಡಬೇಕು, ಯಾವುದೇ ರೀತಿಯ ರಾಜಕೀಯ ನಡೆಸುತ್ತಿಲ್ಲ, ಇದು ಕೇವಲ ರೈತರು ಆರ್ಥಿಕ ಸ್ವಾವಲಂಬಿ ನಡೆಸುವುದಕ್ಕಾಗಿ ಮಾತ್ರ ಈ ಕಾಠ್ಯಕ್ರಮ ಆಯೋಜಿಸಲಾಗಿದೆ,”ಎಂದರು.

‘ಈಗಾಗಲೇ ತಾಲೂಕಿನ ಅರಳಕುಪ್ಪೆ, ಕ್ಯಾತನಹಳ್ಳಿ ಸೊಸೈಟಿಗಳಲ್ಲಿ ರೈತರಿಂದ ನೇರವಾಗಿ ಭತ್ತ ಖರೀದಿಸಿ ಮಾರಾಟ ಮಾಡಿ ಲಾಭ ಗಳಿಸುವ ಕೆಲಸ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇಡೀ ಕ್ಷೇತ್ರದಾದ್ಯಂತ ಮಾಡಲಾಗುತ್ತಿದೆ. ಈ ವಿಚಾರವಾಗಿ ಚರ್ಚಿಸಲು ಏ.1ರಂದು ಪಟ್ಟಣದ ಟಿಎಪಿಸಿಎಂಎಸ್‌ ರೈತ ಸಭಾಂಗಣದಲ್ಲಿ ಎಲ್ಲಾ ತ ಸಹಕಾರ ಸಂಘಗಳ ಆಡಳಿತ ಮಂಡಳಿಯ ನಿರ್ದೇಶಕ ಸಭೆಯನ್ನು ಕರೆಯಲಾಗಿದೆ,” ಎಂದು ಮನವಿ ಮಾಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಎ,ಎಲ್. ಕೆಂಪೂಗೌಡ, ತಾಲೂಕು ಅಧ್ಯಕ್ಷ ಎಣ್ಣೆಹೊಳೆ ಕೊಪ್ಪಲು ಮಂಜುನಾಥ್, ಮಾಜಿ ಅಧ್ಯಕ್ಷ ಕೆನ್ನಾಳು ವಿಜಯ್‌ಕುಮಾರ್, ನಾಗರಾಜು, ಪ್ರಕಾಶ್, ಪ್ರಧಾನ ಕಾಠ್ಯದರ್ಶಿ ಡಾಮಡಹಳ್ಳಿ ಅಶೋಕ್, ಕೆ.ಟಿ.ಗೋವಿಂದೇಗೌಡ, ಬಿ.ಟಿ.ಶಿವಣ್ಣ, ಶಂಕರ, ರೂಪಾ, ಕಟ್ಟೇರಿ ಮಹದೇವು, ಮುಖಂಡ ಗೋವಿಂದರಾಜು, ರಾಘು, ಪ್ರಕಾಶ್ ಸೇರಿದಂತೆ ಇತರರು ಇದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 13 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಸತತ 12 ಸೀಸನ್‌ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಮೊದಲ ಸೀಸನ್ ನೆನಪುಗಳು ಯಾವಾಗಲೂ ಅತ್ಯಂತ ಪ್ರಿಯವಾದವು. ಈ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!