ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಜ್ವಲ್ ರೇವಣ್ಣ ಅ*ಚಾರ ಪ್ರಕರಣ ಸಂಬಂಧ ಮಹತ್ವದ ತೀರ್ಪು!

ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ತೀರ್ಪು ಪ್ರಕಟಿಸಿದರು. ನಾಳೆ ಶಿಕ್ಷೆ ಪ್ರಕಟ: ಪ್ರಕರಣದಲ್ಲಿ ಎಲ್ಲ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಪರಿಗಣಿಸಿದ್ದು, ನಾಳೆ (ಶನಿವಾರ) ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಾಧೀಶರು ಹೇಳಿದರು.
ಪ್ರಕರಣದ ವಿವರ: ಮೈಸೂರಿನ ಕೆ.ಆರ್.ನಗರದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ಗಳಾದ 376(2) (ಎನ್), 376(2)(ಕೆ), 506, 354-ಎ, 354(ಎ), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಇ ಅಡಿ ಪ್ರಕರಣ ದಾಖಲಿಸಲಾಗಿತ್ತು.

 

 

 

 

 

ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಸುಮಾರು 2 ಸಾವಿರ ಪುಟಗಳ ಆರೋಪಪಟ್ಟಿಯನ್ನು ಕಳೆದ ವರ್ಷಾಂತ್ಯದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪ್ರಜ್ವಲ್ ಮೊದಲ ಬಾರಿಗೆ ಸಂತ್ರಸ್ತೆಯ ಮೇಲೆ ಹಾಸನದ ಗನ್ನಿಗಢ ಫಾರ್ಮ್ ಹೌಸ್ ಮತ್ತು ಆ ನಂತರ ಬೆಂಗಳೂರಿನ ಬಸವನಗುಡಿಯಲ್ಲಿರುವ ತಂದೆ ಹೆಚ್.ಡಿ.ರೇವಣ್ಣ ಅವರ ನಿವಾಸದಲ್ಲಿ ಬಲವಂತವಾಗಿ ಅತ್ಯಾಚಾರ ಎಸಗಿ, ಆ ಕೃತ್ಯವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದರು ಎಂದು ಆರೋಪಿಸಲಾಗಿತ್ತು.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದರು. ಬಳಿಕ ಮರಳುತ್ತಿದ್ದಂತೆ 2024ರ ಮೇ 21ರಂದು ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದ್ದರು.
ಇಂದು ಆದೇಶ ಪ್ರಕಟವಾಗುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಿದ್ದರು.  14 ತಿಂಗಳಿಂದ ಜೈಲುವಾಸ: ಕಳೆದ 14 ತಿಂಗಳಿನಿಂದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!