2000 ಇರುವವರಿಗೆ ಮಾತ್ರ ಆಷಾಢ ಶುಕ್ರವಾರದ ವಿಶೇಷ ದರ್ಶನದ ಪ್ಯಾಕೇಜ್! ಉಳಿದವರ ಗತಿ ಏನು?

ಮೈಸೂರು :- ಈ ಬಾರಿ ಆಷಾಢ ಮಾಸದ ಶುಕ್ರವಾರದ ದರ್ಶನದ ಹಿನ್ನೆಲೆಯಲ್ಲಿ ವಾರಾಂತ್ಯದ ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನ ಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಚಾಮುಂಡಿಬೆಟ್ಟದ ಶ್ರೀ ಚಾಮುಂ ಡೇಶ್ವರಿ ದೇಗುಲದಲ್ಲಿ ಜೂ.27, ಜು.4, 11 ಮತ್ತು 15ರಂದು ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಜ.17ರಂದು ಶ್ರೀ ಚಾಮುಂಡೇಶ್ವರಿ ಅಾನವರ ವರ್ಧಂತ್ಯುತ್ಸವ ನಡೆಯಲಿದ್ದು, ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿ ಕಾರ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ದೇವರ ದರ್ಶನಕ್ಕೆ ಸರ್ವ ಸಿದ್ಧತೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಮೈಸೂರಿನ ಜಿಲ್ಲಾ ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಆಷಾಢ ಶುಕ್ರವಾರ ಸಂಬಂಧ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಚಾಮುಂಡಿಬೆಟ್ಟದಲ್ಲಿ ಜೂನ್ 27ರಿಂದ ಜುಲೈ 18ರವರೆಗೆ ನಾಲ್ಕು ಶುಕ್ರವಾರಗಳಂದು ಆಷಾಢ ಮಾಸಾಚರಣೆ ಇರುವುದರಿಂದ ಲಕ್ಷಾಂತರ ಭಕ್ತರು ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆಯಲು ಬರುವುದರಿಂದ ಸರ್ವ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನೂಕು-ನುಗ್ಗಲನ್ನು ತಡೆಯುವ ಸಲು ವಾಗಿ ವಾರಾಂತ್ಯದ ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದ್ದು, ಲಲಿತಮಹಲ್ ಹೆಲಿಪ್ಯಾಡ್ ನಿಂದ 2,000 ರೂ. ವಿಶೇಷ ಗಾಗಿ ಪ್ರತ್ಯೇಕ ಎಸಿ ಬಸ್ಗಳನ್ನು ವ್ಯವಸ್ಥೆ. ಈ ಪ್ಯಾಕೇಜ್ ನಲ್ಲಿ ತೆರಳುವ ದರ್ಶನದ ಟಿಕೆಟ್ ಪಡೆಯುವ ಭಕ್ತರಿಗೆ ಪ್ರತ್ಯೇಕ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಮಾಡಬಹುದಾಗಿದ್ದು, ಅಂತಹ ಭಕ್ತರಿಗೆ ಲಾಡು ಪ್ರಸಾದ, ಗಂಡ ಭೇರುಂಡ ವಿಗ್ರಹ, ಕುಂಕುಮ, ಕೈ ದಾರ ವುಳ್ಳ ಕಿಟ್ ಅನ್ನು ನೀಡಲಾಗುವುದು. ಆದೇ ರೀತಿ 300 ರೂ.ಗಳ ಟಿಕೆಟ್ ದರ್ಶನದ ಸರತಿ ಸಾಲಿನ ವ್ಯವಸ್ಥೆಯೂ ಇರುತ್ತದೆ . 2000 ರೂ. ವಿಶೇಷ 6ನೇ ಪುಟಕ್ಕೆ ಸರತಿ ಸಾಲು ಹಾಗೂ ಉಚಿತ ದರ್ಶನದ
ದರ್ಶನದ ಟಿಕೆಟ್ ಪಡೆದು ಬರುವ ಭಕ್ತರನ್ನು ಸಿಬ್ಬಂದಿ ಕರೆದೊಯ್ದು ದೇವರ ದರ್ಶನ ಮಾಡಿಸಿ ಸುರಕ್ಷಿತವಾಗಿ ಕರೆತರು ವರಲ್ಲದೆ, ಅವರ ವಾಹನಗಳಿಗೂ ಪ್ರತ್ಯೇಕ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ.

ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಭಕ್ತರಿಗಾಗಿ ಚಾಮುಂಡಿಬೆಟ್ಟದಲ್ಲಿ ಕುಡಿಯುವ ನೀರು, ಶೌಚಾಲಯ, ಪ್ರಸಾದ, ಸ್ವಚ್ಛತೆ ವ್ಯವಸ್ಥೆ ಯನ್ನು ಮಾಡಲಾಗಿದ್ದು, ವಿವಿಧ ಇಲಾಖೆ ಗಳ ಅಧಿಕಾರಿಗಳು ಸಮನ್ವಯ ಸಾಧಿಸಿ ಯಾವುದೇ ತೊಂದರೆ, ಗೊಂದಲ ಉಂಟಾಗದಂತೆ ಸರ್ವ ರೀತಿಯಲ್ಲಿ ಸೌಲಭ್ಯ ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ನಿರ್ದೆಶನ ನೀಡಲಾಗಿದ್ದು, ಭದ್ರತೆಗಾಗಿ ನಗರ ಪೊಲೀಸ್ ಘಟಕದ ವತಿಯಿಂದ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿ ಭಕ್ತರ ಸುರಕ್ಷತೆಗೆ ಆಧ್ಯತೆ ನೀಡ ಲಾಗುವುದು ಎಂದು ಡಾ. ಹೆಚ್.ಸಿ. ಮಹದೇವಪ್ಪ ಇದೇ ವೇಳೆ ತಿಳಿಸಿದರು.

ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರ, ಮೈಸೂರು ಮಹಾನಗರಪಾಲಿಕೆ, ನಿರ್ಮಿತಿ ಕೇಂದ್ರ, ಆರೋಗ್ಯ ಇಲಾಖೆ, ಅಗ್ನಿಶಾಮಕ ದಳ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಕೆಎಸ್ಆರ್ಟಿಸಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ಕೂ ಆಷಾಢ ಶುಕ್ರವಾರಗಳಂದು ಹಾಜರಿದ್ದು, ಭಕ್ತರಿಗೆ ಸಕಲ ಸೌಲಭ್ಯ ಗಳನ್ನು ಒದಗಿಸುವಂತೆ ನಿರ್ದೇಶನ ನೀಡಲಾಗಿದ್ದು, ಬೆಟ್ಟಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಲ್ಲಿರುವ ಲಲಿತ ಮಹಲ್ ಹೆಲಿಪ್ಯಾಡ್ ಮೈದಾನದಿಂದ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಉಚಿತ ವಾಗಿ ತೆರಳಲು ವ್ಯವಸ್ಥೆ ಮಾಡಲಾಗಿದೆ ಎಂದರು. ಈ ಸಂಬಂಧ ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಗಳನ್ನು ನಡೆಸಿ ಪೂರ್ವ ಸಿದ್ಧತೆ ಮಾಡಿಕೊಂಡಿ ದ್ದಾರೆ. ಭಕ್ತರು ಯಾವುದೇ ಗೊಂದಲ ಇಲ್ಲದಂತೆ ಶಾಂತಿಯಿಂದ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಮಾಡುವಂತೆಯೂ ಅವರು ಇದೇ ಸಂದರ್ಭ ತಿಳಿಸಿದರು.


ಶಾಸಕ ಜಿ.ಟಿ.ದೇವೇಗೌಡ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದ ರಾಮಯ್ಯ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀ ಕಾಂತ ರೆಡ್ಡಿ, ನಗರಪಾಲಿಕೆ ಆಯುಕ್ತ ಶೇಕ್ ತನ್ನೀರ್ ಆಸಿಫ್, ನಗರ ಪೊಲೀಸ್ ಕಮಿಷ್ಕರ್ ಸೀಮಾ ಲಾಟ್ಕರ್, ಎಸ್ಪಿ ಎನ್.ವಿಷ್ಣುವರ್ಧನ, ಎಂಡಿಎ ಆಯುಕ್ತ ಕೆ.ಆರ್.ರಕ್ಷಿತ್, ಕಬಿನಿ ವೃತ್ತದ ಸೂಪರಿಂ ಟೆಂಡಿಂಗ್ ಇಂಜಿನಿಯರ್ ಕೆ.ಮಹೇಶ್, ಮೈಸೂರು ವೃತ್ತದ ಅರಣ್ಯ ಸಂರಕ್ಷಣಾ ಧಿಕಾರಿ (ಸಿಎಫ್) ಡಾ. ಮಾಲತಿಪ್ರಿಯ, ಎಐಎಡಿಬಿ ವಿಶೇಷ ಭೂ ಸ್ವಾಧೀನಾಧಿ ಕಾರಿ ಡಾ. ಎನ್.ಸಿ.ವೆಂಕಟರಾಜು, ಸೆಸ್ಕ್ ಸೂಪರಿಂಟೆಂಡಿಂಗ್ ಇಂಜಿನಿಯರ್ ಸುನಿಲ್, ತಹಸೀಲ್ದಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ ಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!