ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪ್ಯಾಕೇಜ್ ; ಭಕ್ತರ ಆಕ್ರೋಶ!

ಮೈಸೂರು: ಆಷಾಢ ಮಾಸದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಶುಕ್ರವಾರದ ದಿನಗಳಂದು ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವಿಶೇಷ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಮುಖ್ಯವಾಗಿ ವಿಶೇಷ ದರ್ಶನಕ್ಕೆ 2 ಸಾವಿರ ರೂ. ನಿಗದಿ, ಚಾಮುಂಡಿಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಹಾಗೂ ಖಾಸಗಿ ವಾಹನಗಳಿಗೆ ನಿರ್ಬಂಧ ಸೇರಿದಂತೆ ಹಲವಾರು ವಿಶೇಷ ವ್ಯವಸ್ಥೆಗಳನ್ನು ಮಾಡಿಕೊಂಡಿದೆ.


ಜೂನ್ ತಿಂಗಳ ಆಷಾಢ ಶುಕ್ರವಾರದ ಹಿನ್ನೆಲೆ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಪಡೆಯುವ ಭಕ್ತರಿಗೆ ಈ ಬಾರಿ ಮೊದಲ ಬಾರಿಗೆ ವಿಶೇಷ ಪ್ಯಾಕೇಜ್ ಕಲ್ಪಿಸಲಾಗಿದೆ.
ಜೂನ್ 27ರಂದು ಆಷಾಢ ಶುಕ್ರವಾರ ಆರಂಭವಾಗಲಿದ್ದು, ಜುಲೈ 4, 11 ಮತ್ತು 18 ಆಷಾಢ ಶುಕ್ರವಾರವಾಗಿದೆ. ದೇವಿಗೆ ವಿಶೇಷ ಪೂಜೆ ಜೊತೆಗೆ ಜುಲೈ 17ರಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತ್ಯೋತ್ಸವ ನಡೆಯಲಿದೆ.
ಆಷಾಢ ವಿಶೇಷ ಪ್ರಯುಕ್ತ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ದೇವರ ದರ್ಶನಕ್ಕೆ ಸಕಲ ಸಿದ್ಧತೆ ಕೈಗೊಂಡಿದೆ. ಯಾವುದೇ ಗೊಂದಲ, ಅಡಚಣೆಯಾಗದಂತೆ ಶಾಂತಿಯುತವಾಗಿ ದೇವಿಯ ದರ್ಶನ ಪಡೆಯಲು ಭಕ್ತರ ಅನುಕೂಲಕ್ಕಾಗಿ ಹಾಗೂ ನೂಕುನುಗ್ಗಲು ತಡೆಗಟ್ಟಲು 2000 ರೂ. ವೆಚ್ಚದ ವಿಶೇಷ ದರ್ಶನದ ಟಿಕೆಟ್ ನೀಡಲು ಮುಂದಾಗಿದೆ.
ಈ ಬಾರಿ ವಿಶೇಷ ದಶರ್ನಕ್ಕೆ 2 ಸಾವಿರ ರೂ ನಿಗದಿ ಮಾಡಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. “ಇದು ಹಗಲು ದರೋಡೆ” ಎನ್ನುತ್ತಾರೆ
“ತಮಿಳುನಾಡಿನ ದೇವಾಲಯಗಳಲ್ಲಿ ಎಲ್ಲರಿಗೂ ಸಮಾನತೆ ಕಲ್ಪಿಸುವ ದೃಷ್ಟಿಯಿಂದ ಯಾವುದೇ ತಾರತಮ್ಯವಿಲ್ಲದೆ ದೇವಾಲಯಕ್ಕೆ ಅವಕಾಶ ನೀಡಲಾಗಿದೆ. ಅದೇ ರೀತಿ ಚಾಮುಂಡೇಶ್ವರಿ ದರ್ಶನಕ್ಕೂ ಅವಕಾಶ ಕಲ್ಪಿಸಿ, ಉಚಿತ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು” ಎಂದು ಭಕ್ತರು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್

ಅವರು ಕೂಡ ವಿಶೇಷ ದರ್ಶನಕ್ಕೆ ಹಣ ನಿಗದಿ ಮಾಡಿರುವುದು ಬೇಕಿಲ್ಲ. ದೇವರನ್ನು ದುಡ್ಡು ಕೊಟ್ಟು ನೋಡಬೇಕಾ? ಎರಡು ಸಾವಿರ ದುಬಾರಿಯಾಯಿತು” ಎನ್ನುತ್ತಾರೆ.

ಸಂಸದ ಯದುವೀರ್ ಒಡೆಯರ್,

“ಆಷಾಢ ಮಾಸದಂದು ದೇವಿಯ ವಿಶೇಷ ದರ್ಶನಕ್ಕೆ ಎರಡು ಸಾವಿರ ನಿಗದಿ ಮಾಡಿರುವುದು ಸರಿಯಲ್ಲ. ದೇವರ ದರ್ಶನಕ್ಕೆ ಏಕೆ ಇಷ್ಟು ದುಬಾರಿ ಹಣ ವಸೂಲಿ? ಕೂಡಲೇ ವಾಪಸ್ ಪಡೆಯಬೇಕು” ಎಂದು ಆಗ್ರಹಿಸಿದರು.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!