ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿದ ಸಿ.ಎಂ.ಸಿದ್ದರಾಮಯ್ಯ

Shri Chamundeshwari Field Development Authorityದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿದ ಸಿ.ಎಂ.ಸಿದ್ದರಾಮಯ್ಯ

ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದರು‌. ಹಿಂದೆಯೂ ಸಮಿತಿ ಇತ್ತು. ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದರು.

ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ ಮಟ್ಟದ ಆರೋಗ್ಯಕರ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ ಎಂದರು. ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು ಎಂದರು.

ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಕಾಲ ಕಾಲಕ್ಕೆ ಸಭೆಗಳು ನಡೆದು ಹೆಚ್ಚಿನ ಶ್ರಮ ಶುಚಿತ್ವಕ್ಕೆ ಹಾಕಬೇಕು. ಕಸವನ್ನು ಆಗ್ಗಿಂದಾಗೇ ತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕಿದೆ.

ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ನಾನು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಎಚ್ಚರಿಸಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!