SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ.

ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ತಿಳಿಸಿದರು.

SSLC ಪರೀಕ್ಷಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ
ಮಾರ್ಚ್​ 18ರಿಂದ ಆರಂಭವಾಗಲಿರುವ ಎಸ್​​ಎಸ್​​ಎಲ್​ಸಿ ಪರೀಕ್ಷೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿವೆ. ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ 9,02,889. ಹೊಸಬರು 8,12,855, ಪುನರಾವರ್ತಿತ 62,845 ವಿದ್ಯಾರ್ಥಿಗಳು. 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಒಟ್ಟು ಪರೀಕ್ಷಾ ಕೇಂದ್ರಗಳ ಸಂಖ್ಯೆ 2871
1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ

ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ
ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಪೈಕಿ 6,46,801 ಹೊಸಬರು, 50,540 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 13,022 ಖಾಸಗಿ ಅಭ್ಯರ್ಥಿಗಳು ಪಿಯು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ರಾಜ್ಯಾದ್ಯಂತ ಒಟ್ಟು 1217 ದ್ವಿತೀಯ ಪಿಯು ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದ್ದು, ಏಪ್ರಿಲ್ 7ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.

ಎಸ್​​ಎಸ್​​ಎಲ್​ಸಿ ಪರೀಕ್ಷಾ ವೇಳಾಪಟ್ಟಿ: ಮೇ 18ರಿಂದ ಆರಂಭವಾಗಲಿರುವ ಎಸ್​ಎಲ್​ಎಲ್​ಸಿ ಪರೀಕ್ಷೆ-2; ಮೇ 18ರಂದು ಪ್ರಥಮ ಭಾಷೆ, ಮೇ 19ರಂದು ವಿಜ್ಞಾನ, ಮೇ 20ರಂದು ದ್ವೀತಿಯ ಭಾಷೆ, ಮೇ 21ರಂದು ಗಣಿತ, ಮೇ 22ರಂದು ತೃತೀಯ ಭಾಷೆ, ಮೇ 23ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ
ಫೆಬ್ರವರಿ 28- ಕನ್ನಡ, ಅರೇಬಿಕ್
ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3- ಇಂಗ್ಲಿಷ್
ಮಾರ್ಚ್ 4- ತಮಿಳು,ತೆಲುಗು,ಮಲಯಾಳಂ, ಮರಾಠಿ,ಉರ್ದು,ಸಂಸ್ಕೃತ ಫ್ರೆಂಚ್.
ಮಾರ್ಚ್ 5- ಇತಿಹಾಸ
ಮಾರ್ಚ್ 6- ಭೌತಶಾಸ್ತ್ರ
ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ,ಭೂಗರ್ಭ ಶಾಸ್ತ್ರ.
ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10- ಅರ್ಥಶಾಸ್ತ್ರ
ಮಾರ್ಚ್ 11- ತರ್ಕಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗೃಹ ವಿಜ್ಞಾನ
ಮಾರ್ಚ್ 12- ಹಿಂದಿ
ಮಾರ್ಚ್ 13- ರಾಜ್ಯಶಾಸ್ತ್ರ
ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16- ಸಮಾಜಶಾಸ್ತ್ರ,ಜೀವಶಾಸ್ತ್ರ,ಗಣಕ ವಿಜ್ಞಾನ.
ಮಾರ್ಚ್ 17- ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!