SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ.

ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ತಿಳಿಸಿದರು.

SSLC ಪರೀಕ್ಷಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ
ಮಾರ್ಚ್​ 18ರಿಂದ ಆರಂಭವಾಗಲಿರುವ ಎಸ್​​ಎಸ್​​ಎಲ್​ಸಿ ಪರೀಕ್ಷೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿವೆ. ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ 9,02,889. ಹೊಸಬರು 8,12,855, ಪುನರಾವರ್ತಿತ 62,845 ವಿದ್ಯಾರ್ಥಿಗಳು. 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಒಟ್ಟು ಪರೀಕ್ಷಾ ಕೇಂದ್ರಗಳ ಸಂಖ್ಯೆ 2871
1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ

ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ
ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಪೈಕಿ 6,46,801 ಹೊಸಬರು, 50,540 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 13,022 ಖಾಸಗಿ ಅಭ್ಯರ್ಥಿಗಳು ಪಿಯು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ರಾಜ್ಯಾದ್ಯಂತ ಒಟ್ಟು 1217 ದ್ವಿತೀಯ ಪಿಯು ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದ್ದು, ಏಪ್ರಿಲ್ 7ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.

ಎಸ್​​ಎಸ್​​ಎಲ್​ಸಿ ಪರೀಕ್ಷಾ ವೇಳಾಪಟ್ಟಿ: ಮೇ 18ರಿಂದ ಆರಂಭವಾಗಲಿರುವ ಎಸ್​ಎಲ್​ಎಲ್​ಸಿ ಪರೀಕ್ಷೆ-2; ಮೇ 18ರಂದು ಪ್ರಥಮ ಭಾಷೆ, ಮೇ 19ರಂದು ವಿಜ್ಞಾನ, ಮೇ 20ರಂದು ದ್ವೀತಿಯ ಭಾಷೆ, ಮೇ 21ರಂದು ಗಣಿತ, ಮೇ 22ರಂದು ತೃತೀಯ ಭಾಷೆ, ಮೇ 23ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ
ಫೆಬ್ರವರಿ 28- ಕನ್ನಡ, ಅರೇಬಿಕ್
ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3- ಇಂಗ್ಲಿಷ್
ಮಾರ್ಚ್ 4- ತಮಿಳು,ತೆಲುಗು,ಮಲಯಾಳಂ, ಮರಾಠಿ,ಉರ್ದು,ಸಂಸ್ಕೃತ ಫ್ರೆಂಚ್.
ಮಾರ್ಚ್ 5- ಇತಿಹಾಸ
ಮಾರ್ಚ್ 6- ಭೌತಶಾಸ್ತ್ರ
ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ,ಭೂಗರ್ಭ ಶಾಸ್ತ್ರ.
ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10- ಅರ್ಥಶಾಸ್ತ್ರ
ಮಾರ್ಚ್ 11- ತರ್ಕಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗೃಹ ವಿಜ್ಞಾನ
ಮಾರ್ಚ್ 12- ಹಿಂದಿ
ಮಾರ್ಚ್ 13- ರಾಜ್ಯಶಾಸ್ತ್ರ
ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16- ಸಮಾಜಶಾಸ್ತ್ರ,ಜೀವಶಾಸ್ತ್ರ,ಗಣಕ ವಿಜ್ಞಾನ.
ಮಾರ್ಚ್ 17- ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!