ಸ್ಟಾರ್ ನಟ ವಿಶಾಲ್ ನಿಶ್ಚಿತಾರ್ಥ !

ತಮಿಳು ಸ್ಟಾರ್ ನಟ ವಿಶಾಲ್ ಅವರ ಮನೆಯಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ. ಇಂದು ನಟ ವಿಶಾಲ್​ ಅವರ ಹುಟ್ಟು ಹಬ್ಬ. ಮತ್ತೊಂದು ಹುಟ್ಟು ಹಬ್ಬದ ದಿನವೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಹೌದು, ನಟ ವಿಶಾಲ್, ನಟಿ ಸಾಯಿ ಧನ್ಶಿಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು. ಸಾಯಿ ಧನ್ಶಿಕಾ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ಕಬಾಲಿ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

ವಿಶಾಲ್ ಹಾಗೂ ಸಾಯಿ ಧನ್ಶಿಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ. ಇದೇ ವಿಚಾರವನ್ನು ವಿಶಾಲ್​ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅಭಿಮಾನಿಗಳೆಲ್ಲ ಮದುವೆ ಯಾವಾಗ ಎಂದು ಕೇಳಿ ಕೇಳಿ ಸುಸ್ತಾಗಿದ್ದರು. ಆದರೆ ಇದೀಗ ಬ್ಯಾಚುಲರ್​ ಲೈಫ್​​ಗೆ ಬ್ರೇಕ್​ ಹಾಕಿದ ವಿಶಾಲ್​ ಅವರು ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡೋದಕ್ಕೆ ಸಜ್ಜಾಗಿದ್ದಾರೆ. ಈ ಹಿಂದೆ ನನ್ನ ಬಹುದಿನಗಳ ಗೆಳತಿಯನ್ನು ವಿವಾಹ ಆಗಲಿದ್ದೇನೆ ಎಂದು ಸ್ವತಹ ವಿಶಾಲ್ ಅವರೇ ಹೇಳಿಕೊಂಡಿದ್ದರು.

ಚೆನ್ನೈನಲ್ಲಿ ನಡೆದ ಯೋಗಿ ದ ಎನ್ನುವ ಸಿನಿಮಾದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ನಟ ವಿಶಾಲ್ ಅವರು, ನಾನು ಮದುವೆ ಆಗುತ್ತಿದ್ದೇನೆ. ಹುಡುಗಿ ಯಾರು ಅಲ್ಲ. ಹುಡುಗಿ ಹಾಗೂ ಅವರ ತಂದೆ ಕೂಡ ಇಲ್ಲೇ ಇದ್ದಾರೆ. ನಟಿ ಸಾಯಿ ಅವರ ಜೊತೆ ನಾನು ಸಪ್ತಪದಿ ತುಳಿಯಲಿದ್ದೇನೆ. ನಾವಿಬ್ಬರು ಒಳ್ಳೆಯ ಲೈಫ್ ಲೀಡ್​ ಮಾಡಲಿದ್ದೇವೆ ಎಂದು ಹೇಳಿದ್ದರು. ಇದೀಗ ನಟ ವಿಶಾಲ್​, ನಟಿ ಸಾಯಿ ಧನ್ಶಿಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

Related Posts

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣ !

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣಕ್ಕೆ ಶಾಸಕ ಜಿ.ಟಿ. ದೇವೇಗೌಡ ಭರವಸೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ತಮ್ಮ ಅಮೋಘ ಗಾಯನದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ಗಾನಕೋಗಿಲೆ ಎಸ್. ಜಾನಕಿ ಅವರ ಸ್ಮರಣಾರ್ಥ…

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

  ಕೆಲವು ಸಿನಿಮಾಗಳನ್ನು ನಿರ್ದೇಶಿಸಿ, ನಟನೆ ಸಹ ಮಾಡಿದ್ದರು ಪಿ ಲಂಕೇಶ್. ಇದೀಗ ಅವರ ಮೂರನೇ ತಲೆಮಾರು ಅಂದರೆ ಮೊಮ್ಮಕ್ಕಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಲಂಕೇಶ್ ಅವರ ಪುತ್ರ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇದೀಗ…

You Missed

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !