ರಾಜ್ಯ ಸರ್ಕಾರದಿಂದ ದಲಿತ ಒಳ ಮೀಸಲಾತಿ ಹಂಚಿಕೆ ಮಾಡಿ ಆದೇಶ

ಕರ್ನಾಟಕ ರಾಜ್ಯ ಸರ್ಕಾರ ನಿರೀಕ್ಷೆಯಂತೆ, ರಾಜ್ಯದಲ್ಲಿ ಪರಿಶಿಷ್ಟ ಜಾತಿಯ 101 ಜಾತಿಗಳಿಗೆ ಶೇ.17 ರ ಮೀಸಲಾತಿಯನ್ನು ಹಂಚಿಕೆ ಮಾಡಿ ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಗುಂಪು-1 ರಲ್ಲಿರುವ ದಲಿತ ಬಲಗೈ ಜಾತಿಗಳಿಗೆ ಶೇ.6 ರಷ್ಟು ಮೀಸಲಾತಿ ಸಿಗಲಿದೆ. ಗುಂಪು-2ರ ದಲಿತ ಎಡಗೈ ಹಾಗೂ ಸಂಬಂಧಿತ ಉಪಜಾತಿಗಳಿಗೆ ಶೇ.6 ರಷ್ಟು ಮೀಸಲಾತಿ ಸಿಗಲಿದೆ. ಗುಂಪು-3ರ ಭೋವಿ, ಲಂಬಾಣಿ ಸೇರಿದಂತೆ ಸ್ಪೃಶ್ಯ ಜಾತಿಗಳು ಹಾಗೂ ಅಲೆಮಾರಿ ಸಮುದಾಯಗಳಿಗೆ ಶೇ.5 ರಷ್ಟು ಮೀಸಲಾತಿ ಸಿಗಲಿದೆ. ಆಗಸ್ಟ್ 19 ರಂದು ರಾಜ್ಯ ಸಚಿವ ಸಂಪುಟ ಶೇ.17 ರಷ್ಟು ಮೀಸಲಾತಿಯನ್ನು ದಲಿತ ಸಮುದಾಯಗಳಿಗೆ ಹಂಚಿಕೆ ಮಾಡಿದ್ದ ನಿರ್ಧಾರದಂತೆ ಸಮಾಜ ಕಲ್ಯಾಣ ಇಲಾಖೆಯು ಈಗ ಮೀಸಲಾತಿಯನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಹಂಚಿಕೆ ಮಾಡಿ ನಿನ್ನೆ( ಆಗಸ್ಟ್ 25) ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಕಳೆದ ನವಂಬರ್ ನಲ್ಲಿ ದಲಿತ ಒಳ ಮೀಸಲಾತಿಯ ಬಗ್ಗೆ ತೀರ್ಮಾನ ಕೈಗೊಳ್ಳುವವರೆಗೂ ಯಾವುದೇ ಹೊಸ ನೇಮಕಾತಿಯನ್ನು ಮಾಡಿಕೊಳ್ಳದಂತೆ ರಾಜ್ಯ ಸರ್ಕಾರವು ಹಣಕಾಸು ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳಿಗೂ ಸ್ಪಷ್ಟ ಸೂಚನೆ ನೀಡಿತ್ತು.
ಈಗ ದಲಿತ ಒಳ ಮೀಸಲಾತಿ ಹಂಚಿಕೆಯಾಗಿದ್ದು, ಸರ್ಕಾರದ ಆದೇಶ ಹೊರಬಿದ್ದಿದೆ. ಇದರಿಂದಾಗಿ ಕರ್ನಾಟಕದಲ್ಲಿ ಎಲ್ಲ ಇಲಾಖೆಗಳಲ್ಲೂ ಹೊಸ ನೇಮಕಾತಿ ಮಾಡಿಕೊಳ್ಳದಂತೆ ನೀಡಿದ್ದ ಸೂಚನೆಯು ರದ್ದಾಗಿದೆ.
ಇದರಿಂದಾಗಿ ಕರ್ನಾಟಕದಲ್ಲಿ ಕಳೆದ 10 ತಿಂಗಳಿನಿಂದ ನೆನೆಗೆದಿಗೆ ಬಿದ್ದಿದ್ದ ಎಲ್ಲ ಸರ್ಕಾರಿ ಇಲಾಖೆಗಳ ನೇಮಕಾತಿಗೂ ಮರು ಚಾಲನೆ ಸಿಕ್ಕಿದೆ. ವಿವಿಧ ಇಲಾಖೆಗಳು ತಮ್ಮ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಬಹುದು. ಈಗಾಗಲೇ ಆರಂಭಿಸಿರುವ ಪ್ರಕ್ರಿಯೆಯನ್ನು ಈಗ ಮುಂದುವರಿಸಬಹುದು.
ಉದ್ಯೋಗ ನೇಮಕಾತಿಯಲ್ಲಿ ಹಾಜರಾಗುವ ಎಲ್ಲ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ ಸಡಿಲಿಕೆಗೆ ತೀರ್ಮಾನಿಸಿದ್ದು, ಡಿಪಿಎಆರ್ ಪ್ರತ್ಯೇಕ ಆದೇಶ ಹೊರಡಿಸಲಿದೆ.
ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಸದ್ಯ 2.76 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇವುಗಳ ಪೈಕಿ ವಿವಿಧ ಇಲಾಖೆಗಳಲ್ಲಿ ಮೊದಲಿಗೆ 80 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತೆ. ಇದು ನಿರುದ್ಯೋಗಿಗಳ ಪಾಲಿಗೆ ಗುಡ್ ನ್ಯೂಸ್. ಸರ್ಕಾರಿ ನೌಕರಿಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವವರಿಗೆ ಸದ್ಯದಲ್ಲೇ ಸರ್ಕಾರಿ ಉದ್ಯೋಗ ಸಿಗಲಿದೆ.

 

ಶಿಕ್ಷಣ ಹಾಗೂ ಉದ್ಯೋಗದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಆದೇಶ ಪ್ರಕಟವಾಗಿರುವುದು ಸ್ವಾಗತಾರ್ಹ ಸಂಗತಿ. ಈ ಮೂಲಕ ನೇಮಕಾತಿ ಪ್ರಕ್ರಿಯೆಗೆ ಇದ್ದ ಅಡೆತಡೆಯನ್ನು ರಾಜ್ಯ ಸರ್ಕಾರ ನಿವಾರಿಸಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್‌.ಸಾಹುಕಾರ್ ಹೇಳಿದ್ದಾರೆ. ಕೆಪಿಸಿಎಸ್‌ಸಿ ಬಾಕಿ ನೇಮಕಾತಿಗಳನ್ನು ತಕ್ಷಣದಿಂದಲೇ ಆದ್ಯತೆ ಮೇಲೆ ಪುನರ್ ಆರಂಭಿಸಿ ನಿರುದ್ಯೋಗಿಗಳ ಸಂಕಷ್ಟವನ್ನು ನಿವಾರಿಸಲಿದೆ ಎಂದು ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಹೇಳಿದ್ದಾರೆ.
ಇನ್ನೂ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ದಲಿತ ಒಳ ಮೀಸಲಾತಿ ಹಂಚಿಕೆ ಮಾಡಿ ಆದೇಶ ಹೊರಡಿಸಿರುವುದರಿಂದ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಮತ್ತು ಮುಂಬಡ್ತಿಗೂ ಚಾಲನೆ ದೊರೆಯಲಿದೆ. ಇದಕ್ಕೂ ಮೊದಲು ಡಿಪಿಎಆರ್‌ ನಿಂದ ಮತ್ತೊಂದು ವಯೋಮಿತಿ ಸಡಿಲಿಕೆ ಆದೇಶ ಬರಲಿದ್ದು, ಬಳಿಕ ಮಾರ್ಗಸೂಚಿ ಹೊರಡಿಸಿ ಎಲ್ಲ ಇಲಾಖೆಗೂ ನೇಮಕಾತಿಗೆ ಸೂಚನೆಯನ್ನು ನೀಡಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಕ್ಷರಿ ಹೇಳಿದ್ದಾರೆ

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!