ಸುಮುಖನ ವಿಸರ್ಜನೆಗೆ ಬೆಂಗಳೂರಲ್ಲಿ ಖಡಕ್ ರೂಲ್ಸ್.. !

ಇವತ್ತು ವಿಘ್ನವಿನಾಶಕ, ಮೂಷಿಕ ವಾಹನ, ಮೋದಕ ಪ್ರಿಯ, ವಿನಾಯಕನ ಹಬ್ಬ. ಗಣೇಶನ ಕೂರಿಸಿ ಸಂಭ್ರಮಿಸುವವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖಡಕ್​ ನಿಯಮಗಳನ್ನ ಕೂಡ ಜಾರಿ ಮಾಡಿದೆ. ಅದ್ರಲ್ಲೂ ಪರಿಸರ ಸ್ನೇಹಿ ಗಣಪನ ಆಚರಣೆಗೆ ಕರೆ ಕೊಟ್ಟಿರುವ ಬಿಬಿಎಂಪಿ ನೀವು ಕೂರಿಸುವ ಗಣೇಶನನ್ನ ವಿಸರ್ಜನೆ ಮಾಡಿಸೋಕೆ ತಯಾರಾಗಿದೆ.
41 ಕೆರೆ-ಕಲ್ಯಾಣಿ ಹಾಗೂ 489 ಸಂಚಾರಿ ವಾಹನಗಳ ಸಿದ್ಧತೆ
ಗಣೇಶ ಮೂರ್ತಿ ವಿಸರ್ಜನೆಗಾಗಿ ಈಗಾಗಲೇ ಬಿಬಿಎಂಪಿ ಸಕಲ ತಯಾರಿ ಮಾಡಿಕೊಂಡಿದೆ. ಹೀಗಾಗಿ ಕೆರೆ, ಕಲ್ಯಾಣಿ, ಸಂಚಾರಿ ವಾಹನಗಳ ವ್ಯವಸ್ಥೆಯನ್ನ ಮಾಡಿಕೊಳ್ಳುತ್ತಿದೆ. ಯಡಿಯೂರು ಕೆರೆ ಅಂತೂ ಮದುವಣಗಿತ್ತಿ ಹಾಗೇ ಜಗಮಗಿಸುವ ಲೈಟ್ಸ್​ಗಳಿಂದ ಅಲಂಕೃತಗೊಂಡಿದೆ. ಇನ್ನ ಸ್ಯಾಂಕಿ ಟ್ಯಾಂಕ್, ಹಲಸೂರು ಕೆರೆ ಸೇರಿದಂತೆ ಒಟ್ಟು 41 ಕೆರೆಗಳು ಹಾಗೂ ತಾತ್ಕಾಲಿಕ ಕಲ್ಯಾಣಿಗಳನ್ನ ಗಣೇಶನ ವಿಸರ್ಜನೆಗೆ ವ್ಯವಸ್ಥೆಯನ್ನ ಮಾಡಿಕೊಳ್ಳಲಾಗಿದೆ.

ಸುಮುಖನ ವಿಸರ್ಜನೆಗೆ ತಯಾರಿ
ಒಟ್ಟು 489 ಸಂಚಾರಿ ವಾಹನ ಅಂದ್ರೆ ಮೊಬೈಲ್ ಟ್ಯಾಂಕ್‌ಗಳ ವ್ಯವಸ್ಥೆ
ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು 75 ಏಕಗವಾಕ್ಷಿ ಕೇಂದ್ರಗಳ ವ್ಯವಸ್ಥೆ
ಹೇರೋಹಳ್ಳಿ ಕೆರೆಯ ಕಲ್ಯಾಣಿಯಲ್ಲಿಲ್ಲ ವಿನಾಯಕನ ವಿಸರ್ಜನೆಗೆ ಅವಕಾಶ
ಮೇಲ್ವಿಚಾರಣೆಗಾಗಿ ಬಿಬಿಎಂಪಿಯಿಂದ ನೋಡಲ್ ಅಧಿಕಾರಿಗಳ ನೇಮಕ
ನಾಗರಿಕರ ಮಾಹಿತಿಗಾಗಿ ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಹೆಚ್ಚಿನ ವಿವರ ಲಭ್ಯ
ಕ್ಯೂಆರ್ ಕೋಡ್ ಸ್ಕ್ಯಾನ್ ಮೂಲಕವೂ ಮಾಹಿತಿ ಪಡೆಯಲು ಅವಕಾಶ
2025ರ ಆಗಸ್ಟ್ 27 ಅಂದ್ರೆ ಇವತ್ತಿನಿಂದ ಸೆಪ್ಟೆಂಬರ್ 17ರವರೆಗೆ, ಸಾರ್ವಜನಿಕರು ಪರಿಸರ ಸ್ನೇಹಿ ಹಾಗೂ ಮಣ್ಣಿನಿಂದ ತಯಾರಿಸಲಾದ ಗಣೇಶ ಮೂರ್ತಿಗಳನ್ನು ಇಲ್ಲಿ ವಿಸರ್ಜನೆ ಮಾಡಿಕೊಳ್ಳಬಹುದು. ಒಟ್ನಲ್ಲಿ ಗಣೇಶ ಹಬ್ಬಕ್ಕೆ ಬೇಕಾದ ಎಲ್ಲಾ ತಯಾರಿಗಳು ಬಿರುಸಿನಿಂದ ಸಾಗುತಿದ್ದು. ಇನ್ನೇನೇ ಇದ್ರೂ ಗಣೇಶನನ್ನ ಕೂರಿಸಿ ಹಬ್ಬ ಆಚರಿಸೋದೊಂದೇ ಬಾಕಿ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!