ಸುಮುಖನ ವಿಸರ್ಜನೆಗೆ ಬೆಂಗಳೂರಲ್ಲಿ ಖಡಕ್ ರೂಲ್ಸ್.. !

ಇವತ್ತು ವಿಘ್ನವಿನಾಶಕ, ಮೂಷಿಕ ವಾಹನ, ಮೋದಕ ಪ್ರಿಯ, ವಿನಾಯಕನ ಹಬ್ಬ. ಗಣೇಶನ ಕೂರಿಸಿ ಸಂಭ್ರಮಿಸುವವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖಡಕ್​ ನಿಯಮಗಳನ್ನ ಕೂಡ ಜಾರಿ ಮಾಡಿದೆ. ಅದ್ರಲ್ಲೂ ಪರಿಸರ ಸ್ನೇಹಿ ಗಣಪನ ಆಚರಣೆಗೆ ಕರೆ ಕೊಟ್ಟಿರುವ ಬಿಬಿಎಂಪಿ ನೀವು ಕೂರಿಸುವ ಗಣೇಶನನ್ನ ವಿಸರ್ಜನೆ ಮಾಡಿಸೋಕೆ ತಯಾರಾಗಿದೆ.
41 ಕೆರೆ-ಕಲ್ಯಾಣಿ ಹಾಗೂ 489 ಸಂಚಾರಿ ವಾಹನಗಳ ಸಿದ್ಧತೆ
ಗಣೇಶ ಮೂರ್ತಿ ವಿಸರ್ಜನೆಗಾಗಿ ಈಗಾಗಲೇ ಬಿಬಿಎಂಪಿ ಸಕಲ ತಯಾರಿ ಮಾಡಿಕೊಂಡಿದೆ. ಹೀಗಾಗಿ ಕೆರೆ, ಕಲ್ಯಾಣಿ, ಸಂಚಾರಿ ವಾಹನಗಳ ವ್ಯವಸ್ಥೆಯನ್ನ ಮಾಡಿಕೊಳ್ಳುತ್ತಿದೆ. ಯಡಿಯೂರು ಕೆರೆ ಅಂತೂ ಮದುವಣಗಿತ್ತಿ ಹಾಗೇ ಜಗಮಗಿಸುವ ಲೈಟ್ಸ್​ಗಳಿಂದ ಅಲಂಕೃತಗೊಂಡಿದೆ. ಇನ್ನ ಸ್ಯಾಂಕಿ ಟ್ಯಾಂಕ್, ಹಲಸೂರು ಕೆರೆ ಸೇರಿದಂತೆ ಒಟ್ಟು 41 ಕೆರೆಗಳು ಹಾಗೂ ತಾತ್ಕಾಲಿಕ ಕಲ್ಯಾಣಿಗಳನ್ನ ಗಣೇಶನ ವಿಸರ್ಜನೆಗೆ ವ್ಯವಸ್ಥೆಯನ್ನ ಮಾಡಿಕೊಳ್ಳಲಾಗಿದೆ.

ಸುಮುಖನ ವಿಸರ್ಜನೆಗೆ ತಯಾರಿ
ಒಟ್ಟು 489 ಸಂಚಾರಿ ವಾಹನ ಅಂದ್ರೆ ಮೊಬೈಲ್ ಟ್ಯಾಂಕ್‌ಗಳ ವ್ಯವಸ್ಥೆ
ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು 75 ಏಕಗವಾಕ್ಷಿ ಕೇಂದ್ರಗಳ ವ್ಯವಸ್ಥೆ
ಹೇರೋಹಳ್ಳಿ ಕೆರೆಯ ಕಲ್ಯಾಣಿಯಲ್ಲಿಲ್ಲ ವಿನಾಯಕನ ವಿಸರ್ಜನೆಗೆ ಅವಕಾಶ
ಮೇಲ್ವಿಚಾರಣೆಗಾಗಿ ಬಿಬಿಎಂಪಿಯಿಂದ ನೋಡಲ್ ಅಧಿಕಾರಿಗಳ ನೇಮಕ
ನಾಗರಿಕರ ಮಾಹಿತಿಗಾಗಿ ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಹೆಚ್ಚಿನ ವಿವರ ಲಭ್ಯ
ಕ್ಯೂಆರ್ ಕೋಡ್ ಸ್ಕ್ಯಾನ್ ಮೂಲಕವೂ ಮಾಹಿತಿ ಪಡೆಯಲು ಅವಕಾಶ
2025ರ ಆಗಸ್ಟ್ 27 ಅಂದ್ರೆ ಇವತ್ತಿನಿಂದ ಸೆಪ್ಟೆಂಬರ್ 17ರವರೆಗೆ, ಸಾರ್ವಜನಿಕರು ಪರಿಸರ ಸ್ನೇಹಿ ಹಾಗೂ ಮಣ್ಣಿನಿಂದ ತಯಾರಿಸಲಾದ ಗಣೇಶ ಮೂರ್ತಿಗಳನ್ನು ಇಲ್ಲಿ ವಿಸರ್ಜನೆ ಮಾಡಿಕೊಳ್ಳಬಹುದು. ಒಟ್ನಲ್ಲಿ ಗಣೇಶ ಹಬ್ಬಕ್ಕೆ ಬೇಕಾದ ಎಲ್ಲಾ ತಯಾರಿಗಳು ಬಿರುಸಿನಿಂದ ಸಾಗುತಿದ್ದು. ಇನ್ನೇನೇ ಇದ್ರೂ ಗಣೇಶನನ್ನ ಕೂರಿಸಿ ಹಬ್ಬ ಆಚರಿಸೋದೊಂದೇ ಬಾಕಿ.

Related Posts

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

  ಒಡಿಶಾದ ಪುರಿಯಲ್ಲಿ ಭವ್ಯ ಜಗನ್ನಾಥ ರಥಯಾತ್ರೆ ಇಂದಿನಿಂದ ಆರಂಭಗೊಂಡಿದೆ. ಲಕ್ಷಾಂತರ ಭಕ್ತರು ‘ಜಯ ಜಗನ್ನಾಥ’ ಘೋಷಗಳೊಂದಿಗೆ ಈ ಮಹಾ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಜಗನ್ನಾಥ ಸ್ವಾಮಿ, ಬಲಭದ್ರ ಮತ್ತು ಸುಭದ್ರಾ ದೇವಿ ದೇವಾಲಯದಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಾರೆ. ಹೊಸ ರಥಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!