ಹೋಮ್ ವರ್ಕ್​ ಮಾಡಿಲ್ಲ ಎಂದು ವಿದ್ಯಾರ್ಥಿನಿ ಆತ್ಮಹ*?

ಪ್ರೌಢಶಾಲೆ ವಿದ್ಯಾರ್ಥಿನಿಯಾಗಿದ್ದ ಬಾಲಕಿ ಸಾಕಷ್ಟು ಹೋಮ್ ವರ್ಕ್ ಮಾಡದೇ ಹಾಗೇ ಇಟ್ಟುಕೊಂಡಿದ್ದಳು. ಶಿಕ್ಷಕರು ಹೋಮ್ ವರ್ಕ್ ಕೇಳುತ್ತಾರೆ ಅನ್ನೋ ಭಯದಿಂದ ಮೊನ್ನೆ ಶಾಲೆ ಬಿಟ್ಟು ಮನೆಯಲ್ಲಿ ಉಳಿದಿದ್ದಳು.
ಬೆಂಗಳೂರು: 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ನೇಣಿಗೆ ಶರಣಾಗಿದ್ದು ಶಾಲೆಯ ಹೋಮ್​ ವರ್ಕ್​​ ಒತ್ತಡದಿಂದ ಹೀಗೆ ಮಾಡಿಕೊಂಡಿದ್ದಾಳೆ ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ದಾಸನಪುರ ಗ್ರಾಮದ ನಿವಾಸಿ ರಾಮು ಮತ್ತು ಶೋಭ ದಂಪತಿಯ ಮಗಳು ಕುಸುಮ (15) ಜೀವ ಕಳೆದುಕೊಂಡವರು. ಮಾಕಳಿಯ ಸೃಷ್ಟಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದ ಕುಸುಮ ಸಾಕಷ್ಟು ಹೋಮ್ ವರ್ಕ್ ಮಾಡದೇ ಹಾಗೇ ಇಟ್ಟುಕೊಂಡಿದ್ದಳು. ಶಿಕ್ಷಕರು ಹೋಮ್ ವರ್ಕ್ ಕೇಳುತ್ತಾರೆ ಅನ್ನೋ ಭಯದಿಂದ ಮೊನ್ನೆ ಶಾಲೆ ಬಿಟ್ಟು ಮನೆಯಲ್ಲಿ ಉಳಿದಿದ್ದಳು.

ಹೋಮ್ ವರ್ಕ್ ಮಾಡಿಲ್ಲ ಅಂದರೆ ಟೀಚರ್ ಹೊಡೆಯುತ್ತಾರೆ ಎನ್ನುವ ಭಯ, ಶಾಲೆಗೆ ರಜೆ ಹಾಕಿದರೆ ಪೋಷಕರು ಬೈಯ್ಯುತ್ತಾರೆ ಎನ್ನುವ ಮನಸ್ಥಿತಿಯಲ್ಲಿ ಕುಸುಮ ಮನನೊಂದಿದ್ದಳು. ಹೀಗಾಗಿ ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣಿನ ಕುಣಿಕೆಗೆ ಕೊರಳೊಡ್ಡಿದ್ದಾಳೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹ ಹಸ್ತಾಂತರ ಮಾಡಲಾಗಿದೆ.

ಸದ್ಯ ಈ ಸಂಬಂಧ ಶಾಲಾ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದು, ಎಲ್ಲಾ ಮಕ್ಕಳಿಗೂ ಒಂದೇ ರೀತಿ ಹೋಮ್ ವರ್ಕ್ ನೀಡಲಾಗಿದೆ. ಅವರ ಸಾವಿಗೆ ಬೇರೆ ಕಾರಣವೂ ಇರಬಹುದು. ಪೊಲೀಸರ ತನಿಖೆ ಬಳಿಕ ಸತ್ಯ ಹೊರ ಬರುತ್ತದೆ ಎಂದು ಘಟನೆ ಕುರಿತಂತೆ ಶಾಲೆಯ ಮುಖ್ಯ ಶಿಕ್ಷಕ ಅಶೋಕ್ ಅವರು ಹೇಳಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!