ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬ*

ಮಡಿಕೇರಿ ಸಮೀಪದ ಬೆಟ್ಟತ್ತೂರು ಗ್ರಾ ಮದಲ್ಲಿಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಸಾವಿನ ಹಿನ್ನೆಲೆ ಗ್ರಾಮ ಸ್ಥರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸುವ ಮೂಲಕ ಅರಣ್ಯ ಇಲಾ ಖೆಯ ವಿರುದ್ದ ಆಕ್ರೋಶ ವ್ಯಕ್ತಪಡಿ ಸಿದ್ದಾರೆ.
ಮಡಿಕೇರಿಯ ಸಂತ ಮೈಕಲರ ಪದವಿಪೂರ್ವ ಕಾಲೇಜಿನ ಕುಡಿಯರ ಗಿರೀಶ್ ಎಂಬುವವರ ಪುತ್ರಿ ಪೂಜಾ (17) ಮೃ* ದುರ್ದೈವಿ. ಮನೆಗೆ ತೆರಳುತ್ತಿದ್ದ ಸಂದರ್ಭಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಪೂಜಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾದ ಹಿನ್ನೆಲೆ ಜಿಲ್ಲೆ ಯಲ್ಲಿ ಕಾಡಾನೆ ಹಾವಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತಿ. ಮೃತ ವಿದ್ಯಾರ್ಥಿನಿಯ ಕುಟುಂಬದವರಿಗೆ ಸರಕಾರಿ ಕೆಲಸ ನೀಡಬೇಕು, ವಿದ್ಯಾರ್ಥಿನಿ ಸಾವಿಗೆ ಕಾರಣರಾದಅಧಿಕಾರಿಗಳನ್ನುಅಮಾನತುಗೊಳಿಸಬೇಕು. ಈ ಭಾಗ ದಲ್ಲಿ ಕಾಡಾನೆಗಳ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ವಿದ್ಯಾರ್ಥಿನಿ ಸಾವಿನ ವಿಚಾರದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೇ ಶನಿವಾರ ರಾತ್ರಿಯೇ ತರಾತುರಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿ ಸುವಂತೆ ಮಾಡಿದ್ದ ಅರಣ್ಯ ಅಧಿಕಾರಿಗಳು ಆಗಲೇ ಪರಿಹಾರದ ಚೆಕ್ ನೀಡಿ ತೆರಳಿದ್ದರು. ಆದರೆ ಅವರು ನೀಡಿದ ಚೆಕ್‌ ನಲ್ಲಿ ಸಹಿಯೇ ಇರಲಿಲ್ಲ, ಈ ವಿಚಾರ ವಾಗಿಯೂ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೊನೆಗೆ ಭಾನುವಾರ ಸಹಿ ಹಾಕಿದ ಚೆಕ್ ನೀಡಲಾಯಿತೆಂದು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕಾಡಾನೆಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ಕೂಡಲೇ ಈ ಭಾಗದ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಯಾಗಬೇಕು. ಅನುಕಂಪದ ಆಧಾರದಲ್ಲಿ ಮೃತ ವಿದ್ಯಾರ್ಥಿನಿ ಕುಟುಂಬದಲ್ಲಿ ಒಬ್ಬ ರಿಗೆ ಸರಕಾರಿ ಕೆಲಸ ನೀಡಬೇಕು.
-ಕೆ.ಜಿ ಬೋಪಯ್ಯ, ಮಾಜಿ ಸ್ಪೀಕರ್ ಎಂದು ಪ್ರತಿಕ್ರಿಯಿಸಿದ್ದಾರೆ

ರಾಷ್ಟ್ರೀಯ ಹೆದ್ದಾರಿ 275ನ್ನು ಬಂದ್ ಮಾಡಿ ಪ್ರತಿಭಟಿಸಿದ ಹಿನ್ನೆಲೆ ಮಂಗಳೂರು – ಮೈಸೂರು ನಡು ವೆ ಸಂಚರಿಸುವ ವಾಹನಗಳು ಸುಮಾರು 2 ಗಂಟೆಗಳಿಗೂ ಹೆಚ್ಚುಕಾಲ ರಸ್ತೆಯಲ್ಲಿಯೇ ನಿಲ್ಲಬೇಕಾಯಿತು. ಪೊಲೀ ಸರ ಮಾತಿಗೂ ಜಗ್ಗದ ಪ್ರತಿಭಟನಾ ನಿರತರು ಅರಣ್ಯ ಸಂರಕ್ಷಣಾಧಿಕಾರಿ ಸ್ಥಳಕ್ಕೆ ಬರಲು ಪಟ್ಟುಹಿಡಿದರು. ಕೊನೆಗೆ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸ್ಥಳ ಕ್ಯಾಗಮಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ ಮೆಹ ರೆಗೆ ಪ್ರತಿಭಟನೆ ಕೊನೆಗೊಂಡಿತು.

 

.

Related Posts

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಈ ಮಹತ್ವದ ಆಯವ್ಯಯ ಮಂಡಿಸುತ್ತಿದ್ದಾರೆ. ಇದು ಕೇವಲ ಬಜೆಟ್ ಮಾತ್ರವಲ್ಲ, ರಾಜ್ಯದ ಇತಿಹಾಸದಲ್ಲೇ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ಇದೊಂದು ಹೊಸ ಮೈಲುಗಲ್ಲಾಗಿದೆ.ಕರುನಾಡಿನ ರಾಜಕೀಯ ಮತ್ತು ಆರ್ಥಿಕ ವಲಯದಲ್ಲಿ ಈಗ ಎಲ್ಲರ ಕಣ್ಣು…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!