ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬ*

ಮಡಿಕೇರಿ ಸಮೀಪದ ಬೆಟ್ಟತ್ತೂರು ಗ್ರಾ ಮದಲ್ಲಿಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಸಾವಿನ ಹಿನ್ನೆಲೆ ಗ್ರಾಮ ಸ್ಥರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸುವ ಮೂಲಕ ಅರಣ್ಯ ಇಲಾ ಖೆಯ ವಿರುದ್ದ ಆಕ್ರೋಶ ವ್ಯಕ್ತಪಡಿ ಸಿದ್ದಾರೆ.
ಮಡಿಕೇರಿಯ ಸಂತ ಮೈಕಲರ ಪದವಿಪೂರ್ವ ಕಾಲೇಜಿನ ಕುಡಿಯರ ಗಿರೀಶ್ ಎಂಬುವವರ ಪುತ್ರಿ ಪೂಜಾ (17) ಮೃ* ದುರ್ದೈವಿ. ಮನೆಗೆ ತೆರಳುತ್ತಿದ್ದ ಸಂದರ್ಭಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಪೂಜಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾದ ಹಿನ್ನೆಲೆ ಜಿಲ್ಲೆ ಯಲ್ಲಿ ಕಾಡಾನೆ ಹಾವಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತಿ. ಮೃತ ವಿದ್ಯಾರ್ಥಿನಿಯ ಕುಟುಂಬದವರಿಗೆ ಸರಕಾರಿ ಕೆಲಸ ನೀಡಬೇಕು, ವಿದ್ಯಾರ್ಥಿನಿ ಸಾವಿಗೆ ಕಾರಣರಾದಅಧಿಕಾರಿಗಳನ್ನುಅಮಾನತುಗೊಳಿಸಬೇಕು. ಈ ಭಾಗ ದಲ್ಲಿ ಕಾಡಾನೆಗಳ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ವಿದ್ಯಾರ್ಥಿನಿ ಸಾವಿನ ವಿಚಾರದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೇ ಶನಿವಾರ ರಾತ್ರಿಯೇ ತರಾತುರಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿ ಸುವಂತೆ ಮಾಡಿದ್ದ ಅರಣ್ಯ ಅಧಿಕಾರಿಗಳು ಆಗಲೇ ಪರಿಹಾರದ ಚೆಕ್ ನೀಡಿ ತೆರಳಿದ್ದರು. ಆದರೆ ಅವರು ನೀಡಿದ ಚೆಕ್‌ ನಲ್ಲಿ ಸಹಿಯೇ ಇರಲಿಲ್ಲ, ಈ ವಿಚಾರ ವಾಗಿಯೂ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೊನೆಗೆ ಭಾನುವಾರ ಸಹಿ ಹಾಕಿದ ಚೆಕ್ ನೀಡಲಾಯಿತೆಂದು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕಾಡಾನೆಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ಕೂಡಲೇ ಈ ಭಾಗದ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಯಾಗಬೇಕು. ಅನುಕಂಪದ ಆಧಾರದಲ್ಲಿ ಮೃತ ವಿದ್ಯಾರ್ಥಿನಿ ಕುಟುಂಬದಲ್ಲಿ ಒಬ್ಬ ರಿಗೆ ಸರಕಾರಿ ಕೆಲಸ ನೀಡಬೇಕು.
-ಕೆ.ಜಿ ಬೋಪಯ್ಯ, ಮಾಜಿ ಸ್ಪೀಕರ್ ಎಂದು ಪ್ರತಿಕ್ರಿಯಿಸಿದ್ದಾರೆ

ರಾಷ್ಟ್ರೀಯ ಹೆದ್ದಾರಿ 275ನ್ನು ಬಂದ್ ಮಾಡಿ ಪ್ರತಿಭಟಿಸಿದ ಹಿನ್ನೆಲೆ ಮಂಗಳೂರು – ಮೈಸೂರು ನಡು ವೆ ಸಂಚರಿಸುವ ವಾಹನಗಳು ಸುಮಾರು 2 ಗಂಟೆಗಳಿಗೂ ಹೆಚ್ಚುಕಾಲ ರಸ್ತೆಯಲ್ಲಿಯೇ ನಿಲ್ಲಬೇಕಾಯಿತು. ಪೊಲೀ ಸರ ಮಾತಿಗೂ ಜಗ್ಗದ ಪ್ರತಿಭಟನಾ ನಿರತರು ಅರಣ್ಯ ಸಂರಕ್ಷಣಾಧಿಕಾರಿ ಸ್ಥಳಕ್ಕೆ ಬರಲು ಪಟ್ಟುಹಿಡಿದರು. ಕೊನೆಗೆ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸ್ಥಳ ಕ್ಯಾಗಮಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ ಮೆಹ ರೆಗೆ ಪ್ರತಿಭಟನೆ ಕೊನೆಗೊಂಡಿತು.

 

.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!