ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬ*

ಮಡಿಕೇರಿ ಸಮೀಪದ ಬೆಟ್ಟತ್ತೂರು ಗ್ರಾ ಮದಲ್ಲಿಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಸಾವಿನ ಹಿನ್ನೆಲೆ ಗ್ರಾಮ ಸ್ಥರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸುವ ಮೂಲಕ ಅರಣ್ಯ ಇಲಾ ಖೆಯ ವಿರುದ್ದ ಆಕ್ರೋಶ ವ್ಯಕ್ತಪಡಿ ಸಿದ್ದಾರೆ.
ಮಡಿಕೇರಿಯ ಸಂತ ಮೈಕಲರ ಪದವಿಪೂರ್ವ ಕಾಲೇಜಿನ ಕುಡಿಯರ ಗಿರೀಶ್ ಎಂಬುವವರ ಪುತ್ರಿ ಪೂಜಾ (17) ಮೃ* ದುರ್ದೈವಿ. ಮನೆಗೆ ತೆರಳುತ್ತಿದ್ದ ಸಂದರ್ಭಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಪೂಜಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾದ ಹಿನ್ನೆಲೆ ಜಿಲ್ಲೆ ಯಲ್ಲಿ ಕಾಡಾನೆ ಹಾವಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತಿ. ಮೃತ ವಿದ್ಯಾರ್ಥಿನಿಯ ಕುಟುಂಬದವರಿಗೆ ಸರಕಾರಿ ಕೆಲಸ ನೀಡಬೇಕು, ವಿದ್ಯಾರ್ಥಿನಿ ಸಾವಿಗೆ ಕಾರಣರಾದಅಧಿಕಾರಿಗಳನ್ನುಅಮಾನತುಗೊಳಿಸಬೇಕು. ಈ ಭಾಗ ದಲ್ಲಿ ಕಾಡಾನೆಗಳ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ವಿದ್ಯಾರ್ಥಿನಿ ಸಾವಿನ ವಿಚಾರದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೇ ಶನಿವಾರ ರಾತ್ರಿಯೇ ತರಾತುರಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿ ಸುವಂತೆ ಮಾಡಿದ್ದ ಅರಣ್ಯ ಅಧಿಕಾರಿಗಳು ಆಗಲೇ ಪರಿಹಾರದ ಚೆಕ್ ನೀಡಿ ತೆರಳಿದ್ದರು. ಆದರೆ ಅವರು ನೀಡಿದ ಚೆಕ್‌ ನಲ್ಲಿ ಸಹಿಯೇ ಇರಲಿಲ್ಲ, ಈ ವಿಚಾರ ವಾಗಿಯೂ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೊನೆಗೆ ಭಾನುವಾರ ಸಹಿ ಹಾಕಿದ ಚೆಕ್ ನೀಡಲಾಯಿತೆಂದು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕಾಡಾನೆಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ಕೂಡಲೇ ಈ ಭಾಗದ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಯಾಗಬೇಕು. ಅನುಕಂಪದ ಆಧಾರದಲ್ಲಿ ಮೃತ ವಿದ್ಯಾರ್ಥಿನಿ ಕುಟುಂಬದಲ್ಲಿ ಒಬ್ಬ ರಿಗೆ ಸರಕಾರಿ ಕೆಲಸ ನೀಡಬೇಕು.
-ಕೆ.ಜಿ ಬೋಪಯ್ಯ, ಮಾಜಿ ಸ್ಪೀಕರ್ ಎಂದು ಪ್ರತಿಕ್ರಿಯಿಸಿದ್ದಾರೆ

ರಾಷ್ಟ್ರೀಯ ಹೆದ್ದಾರಿ 275ನ್ನು ಬಂದ್ ಮಾಡಿ ಪ್ರತಿಭಟಿಸಿದ ಹಿನ್ನೆಲೆ ಮಂಗಳೂರು – ಮೈಸೂರು ನಡು ವೆ ಸಂಚರಿಸುವ ವಾಹನಗಳು ಸುಮಾರು 2 ಗಂಟೆಗಳಿಗೂ ಹೆಚ್ಚುಕಾಲ ರಸ್ತೆಯಲ್ಲಿಯೇ ನಿಲ್ಲಬೇಕಾಯಿತು. ಪೊಲೀ ಸರ ಮಾತಿಗೂ ಜಗ್ಗದ ಪ್ರತಿಭಟನಾ ನಿರತರು ಅರಣ್ಯ ಸಂರಕ್ಷಣಾಧಿಕಾರಿ ಸ್ಥಳಕ್ಕೆ ಬರಲು ಪಟ್ಟುಹಿಡಿದರು. ಕೊನೆಗೆ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸ್ಥಳ ಕ್ಯಾಗಮಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ ಮೆಹ ರೆಗೆ ಪ್ರತಿಭಟನೆ ಕೊನೆಗೊಂಡಿತು.

 

.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 13 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಸತತ 12 ಸೀಸನ್‌ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಮೊದಲ ಸೀಸನ್ ನೆನಪುಗಳು ಯಾವಾಗಲೂ ಅತ್ಯಂತ ಪ್ರಿಯವಾದವು. ಈ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!