ಬೀದಿ ನಾಯಿ ಕಚ್ಚಿದ್ದರಿಂದ ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ!

ಕಾನ್ಪುರದಲ್ಲಿ ಭಯಾನಕ ಘಟನೆ ನಡೆದಿದೆ. ಬೀದಿ ನಾಯಿಗಳು 21 ವರ್ಷದ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಆಕೆಯ ಮುಖಕ್ಕೆ 17 ಹೊಲಿಗೆಗಳು ಬಿದ್ದಿವೆ. ಮೈ ತುಂಬ ಹಲವು ಗಾಯಗಳಾಗಿವೆ. 21 ವರ್ಷದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬೀದಿ ನಾಯಿಗಳು ಅವಳ ಮುಖದ ಮೇಲೆ ತೀವ್ರವಾದ ದಾಳಿ ನಡೆಸಿವೆ. ಇದರಿಂದ ಆಕೆಯ ಮುಖಕ್ಕೆ 17 ಹೊಲಿಗೆಗಳನ್ನು ಹಾಕಲಾಗಿದೆ.
ಕಾನ್ಪುರ: ಕಾನ್ಪುರದಲ್ಲಿ 21 ವರ್ಷದ ಬಿಬಿಎ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳು ಕ್ರೂರವಾಗಿ ದಾಳಿ ಮಾಡಿವೆ. ಆಕೆಯ ಮುಖಕ್ಕೆ ತೀವ್ರ ಗಾಯಗಳು ಉಂಟಾಗಿದ್ದು, 17 ಹೊಲಿಗೆಗಳನ್ನು ಹಾಕಲಾಗಿದೆ. ಕಾಲೇಜಿನಿಂದ ಮನೆಗೆ ಮರಳುತ್ತಿದ್ದ 21 ವರ್ಷದ ಯುವತಿಯ ಮೇಲೆ ಬೀದಿ ನಾಯಿಗಳು ಕ್ರೂರವಾಗಿ ದಾಳಿ ಮಾಡಿವೆ. ಈ ದಾಳಿಯಿಂದ ಆಕೆಯ ಮುಖದ ಮೇಲೆ ಆಳವಾದ ಗಾಯಗಳಾಗಿದ್ದು, ವೈದ್ಯರು ಆಕೆಯ ಕೆನ್ನೆಗೆ 17 ಹೊಲಿಗೆಗಳನ್ನು ಹಾಕಿದ್ದಾರೆ. ಬೀದಿ ನಾಯಿಗಳು ಅವಳನ್ನು ನೆಲಕ್ಕೆ ಎಳೆದುಕೊಂಡು ಮುಖ ಮತ್ತು ದೇಹದ ಮೇಲೆ ಕ್ರೂರವಾಗಿ ದಾಳಿ ಮಾಡಿವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ನಾಯಿ ಕಚ್ಚಿ ಎಳೆದಿದ್ದರಿಂದ ಆಕೆಯ ಬಲ ಕೆನ್ನೆ ಎರಡು ಭಾಗವಾಗಿದ್ದು, ಆಕೆಯ ಮೂಗಿನ ಮೇಲೆ, ದೇಹದ ಇತರ ಭಾಗಗಳ ಮೇಲೆ ಗಂಭೀರವಾದ ಗಾಯಗಳಾಗಿವೆ. ಆಗಸ್ಟ್ 20ರಂದು ಆಕೆ ಮನೆಗೆ ಹಿಂದಿರುಗುತ್ತಿದ್ದಾಗ ಬೀದಿ ನಾಯಿಗಳು ಆ 21 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ದಾಳಿ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದಾಳಿಯಲ್ಲಿ ಆಕೆಗೆ ಹಲವು ಬಾರಿ ಕಚ್ಚಿ ಗಾಯಗಳಾಗಿದ್ದು, ವೈದ್ಯರು ಆಕೆಯ ಕೆನ್ನೆ ಮತ್ತು ಮೂಗಿನ ಮೇಲೆ 17 ಹೊಲಿಗೆಗಳನ್ನು ಹಾಕಬೇಕಾಯಿತು. ಅಲೆನ್ ಹೌಸ್ ರುಮಾ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿನಿ ವೈಷ್ಣವಿ ಸಾಹು ಎಂದು ಗುರುತಿಸಲ್ಪಟ್ಟ ಯುವತಿ ಶ್ಯಾಮ್ ನಗರದ ಮೂಲಕ ನಡೆದುಕೊಂಡು ಹೋಗುತ್ತಿದ್ದಾಗ ಬೀದಿ ನಾಯಿಗಳು ಮತ್ತು ಕೋತಿಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಅವುಗಳ ಜಗಳದಲ್ಲಿ ಕೋಪಗೊಂಡಿದ್ದ ಮೂರು ನಾಯಿಗಳು ಇದ್ದಕ್ಕಿದ್ದಂತೆ ಆಕೆಯ ಮೇಲೆ ದಾಳಿ ಮಾಡಿದವು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಪ್ರಾಣಿಗಳು ಆಕೆಯನ್ನು ನೆಲಕ್ಕೆ ಎಳೆದುಕೊಂಡು ಹೋಗಿ, ಆಕೆಯ ಮುಖ ಮತ್ತು ದೇಹವನ್ನು ಕಚ್ಚಿದವು. ಆಕೆಯ ಬಲ ಕೆನ್ನೆ ಎರಡು ಭಾಗಗಳಾಗಿ ಹರಿದುಹೋಗಿತ್ತು.ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಆವೇಶದಲ್ಲಿದ್ದ ಬೀದಿ ನಾಯಿಗಳು ಮತ್ತೆ ಆಕೆಯ ಮೇಲೆ ದಾಳಿ ಮಾಡಿ ರಸ್ತೆಗೆ ಎಳೆದುಕೊಂಡು ಹೋದವು. ಆಕೆಯ ಕೂಗು ಕೇಳಿ, ಸ್ಥಳೀಯರು ಕೋಲುಳಿಂದ ಹೊಡೆದು ನಾಯಿಗಳನ್ನು ಓಡಿಸಿದರು. ಅಷ್ಟರಲ್ಲಿ ಆ ಯುವತಿಯ ದೇಹದಿಂದ ರಕ್ತಸ್ರಾವವಾಗುತ್ತಿತ್ತು. ವಿಷಯ ತಿಳಿದ ಕೂಡಲೆ ಆಕೆಯ ಕುಟುಂಬ ಸದಸ್ಯರು ತಕ್ಷಣ ಆಕೆಯನ್ನು ಕಾನ್ಶಿರಾಮ್ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ವೈದ್ಯರು ಆಕೆಯ ಗಾಯಗಳನ್ನು ಹೊಲಿದರು.

ಸುಪ್ರೀಂ ಕೋರ್ಟ್ ಇತ್ತೀಚೆಗೆ ದೆಹಲಿಯ ಬೀದಿ ನಾಯಿಗಳನ್ನು ಸಂತಾನಹರಣ ಚಿಕಿತ್ಸೆ ನಡೆಸಬೇಕು ಮತ್ತು ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕು ಎಂಬ ಕುರಿತು ನೀಡಿದ ತೀರ್ಪಿನ ಕುರಿತು ದೇಶಾದ್ಯಂತ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿರುವ ನಡುವೆಯೇ ಈ ದಾಳಿ ನಡೆದಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!