ಗದ್ದೆಗೆ ಇಳಿದು ಭತ್ತದ ನಾಟಿಯಲ್ಲಿ ತೊಡಗಿದ ವಿದ್ಯಾರ್ಥಿಗಳು: ಪ್ರಾಯೋಗಿಕ ಅನುಭವದಿಂದ ಕೃಷಿಯ ಅರಿವು.

ನಾಪೋಕ್ಲು: ಹಳೆ ತಾಲೂಕು ಸಮೀಪದ ಅಂಕುರ್ ಪಬ್ಲಿಕ್ ಶಾಲೆಯ ಸೈನ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಕೃಷಿಯ ಪ್ರಾಯೋಗಿಕ ಅರಿವು ನೀಡುವ ಉದ್ದೇಶದಿಂದ ಭತ್ತದ ನಾಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮದ ಅಂಗವಾಗಿ, 9ನೇ ತರಗತಿಯ ವಿದ್ಯಾರ್ಥಿಗಳು ಕೊಳಕೇರಿ ಗ್ರಾಮದ ಕೆಟೋಳಿರ ರಾಜಾ ಚರ್ಮಣ ಅವರ ಹೊಲದಲ್ಲಿ ಕೆಸರು ಗದ್ದೆಗೆ ಇಳಿದು ನಾಟಿ ನಡೆಸಿದರು. ತಮ್ಮ ಕೈಯಾರೆ ಭತ್ತದ ಅಗೆ ನೆಡುವ ಮೂಲಕ ಕೃಷಿ ಬದುಕಿನ ಮಹತ್ವ, ಶ್ರಮದ ಮೌಲ್ಯ ಮತ್ತು ಅನ್ನದಾತರ ಪರिश್ರಮವನ್ನು ನೇರವಾಗಿ ಅನುಭವಿಸಿದರು.

ಶಾಲೆಯ ಕಾರ್ಯದರ್ಶಿ ರತ್ನಾ ಚರ್ಮಣ ಅವರು ಮಕ್ಕಳೊಂದಿಗೆ ನೇರವಾಗಿ ಭಾಗವಹಿಸಿ, ಭತ್ತದ ಸಸಿ ಎಡೆಯುವುದು, ನಾಟಿ ಮಾಡುವುದು, ಕಳೆ ಕೀಳುವುದು ಹಾಗೂ ಬೆಳೆ ಬೆಳೆಸುವ ವಿಧಾನಗಳ ಬಗ್ಗೆ ಪ್ರಾತ್ಯಕ್ಷತೆ ನೀಡಿದರು. ಕೃಷಿಯ ಮಹತ್ವವನ್ನು ವಿವರಿಸುತ್ತಾ, “ಭೂಮಿಯನ್ನು ಬಂಜರಾಗಿ ಬಿಡದೆ ಉಪಯೋಗಿಸಬೇಕು, ಅದು ನಮ್ಮ ಭವಿಷ್ಯದ ಪಾಲಿಗೆ ಅತಿಮಹತ್ವದ ದಾರಿ” ಎಂದು ವಿದ್ಯಾರ್ಥಿಗಳಿಗೆ ಮನಮಿಡಿಯುವಂತೆ ವಿವರಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಶೈಲಾ ನರೇಶ್ ಮತ್ತು ಶೃತಿ ಅವರು ಭತ್ತದ ನಾಟಿಯ ತಂತ್ರ, ವಿಧಾನಗಳು ಹಾಗೂ ಕೃಷಿಯ ಪ್ರಾಮುಖ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಈ ರೀತಿಯ ಕಾರ್ಯಕ್ರಮಗಳು ಶಾಲೆಯ ಪಾಠ್ಯೇತರ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳನ್ನು ಕೃಷಿಯ ಹತ್ತಿರ ತರಲು ಸಹಾಯ ಮಾಡುತ್ತಿದ್ದು, ಪರಿಸರ ಸ್ನೇಹಿ ಶಿಕ್ಷಣದತ್ತ ಒಂದು ಹೆಜ್ಜೆಯೆಂದು ಶಾಲಾ ಆಡಳಿತ ಮಂಡಳಿ ಅಭಿಪ್ರಾಯಪಟ್ಟಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 13 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಸತತ 12 ಸೀಸನ್‌ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಮೊದಲ ಸೀಸನ್ ನೆನಪುಗಳು ಯಾವಾಗಲೂ ಅತ್ಯಂತ ಪ್ರಿಯವಾದವು. ಈ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!