‘ಸು ಫ್ರಮ್ ಸೋ‘ 20 ದಿನಕ್ಕೆ ‘ಕಾಟೇರ’ ಕಲೆಕ್ಷನ್ ದಾಖಲೆ ಮುರಿದಿದೆ.

ನಟ ದರ್ಶನ್ ಅಭಿನಯದ ‘ಕಾಟೇರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಹೊಸ ದಾಖಲೆ ಸೃಷ್ಟಿ ಮಾಡಿತ್ತು. ಈ ಚಿತ್ರದ ಕಲೆಕ್ಷನ್ ಸರಿ ಸುಮಾರು 90 ಕೋಟಿ ರೂಪಾಯಿ ಆಸುಪಾಸಿನಲ್ಲಿತ್ತು. ಈ ದಾಖಲೆಯನ್ನು ಕನ್ನಡದ ಮತ್ತೊಂದು ಚಿತ್ರ ‘ಸು ಫ್ರಮ್ ಸೋ’ ಮುರಿದು ಹಾಕಿದೆ. ಬಾಕ್ಸ್ ಆಫೀಸ್ ಟ್ರ್ಯಾಕರ್​ sacnilk ಅಲ್ಲಿರೋ ಅಂಕಿ-ಅಂಶ ಈ ವಿಚಾರವನ್ನು ಸ್ಪಷ್ಟಪಡಿಸಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಸು ಫ್ರಮ್ ಸೋ’ ಸಿನಿಮಾ ಇಷ್ಟು ದೊಡ್ಡ ಮಟ್ಟದಲ್ಲಿ ಹಿಟ್ ಆಗುತ್ತದೆ ಎಂದು ತಂಡದವರೇ ಭಾವಿಸಿರಲಿಲ್ಲ. 20ನೇ ದಿನ (ಆಗಸ್ಟ್ 13) ಸಿನಿಮಾ 1.24 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಕನ್ನಡ ಒಂದರಲ್ಲೇ ಸಿನಿಮಾ 63 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ವಿಶ್ವ ಮಟ್ಟದಲ್ಲಿ ಚಿತ್ರ 90 ಕೋಟಿ ರೂಪಾಯಿ ಗಳಿಸಿದೆ. ಇದರಲ್ಲಿ ಭಾರತದ ನೆಟ್ ಕಲೆಕ್ಷನ್ 70 ಕೋಟಿ ರೂಪಾಯಿ ಇದೆ. ಗ್ರಾಸ್ ಕಲೆಕ್ಷನ್ 80 ಕೋಟಿ ರೂಪಾಯಿ ಆಗಿದೆ. ಹೊರ ದೇಶಗಳಿಂದ 10 ಕೋಟಿ ರೂಪಾಯಿ ಹರಿದು ಬಂದಿದೆ.

ಮಲಯಾಳಂ ಭಾಷೆಯಲ್ಲಿ ‘ಸು ಫ್ರಮ್ ಸೋ’ ಸಿನಿಮಾ 4.75 ಕೋಟಿ ರೂಪಾಯಿ ಕಲೆ ಹಾಕಿದೆ. ತೆಲುಗಿನಿಂದ ಚಿತ್ರಕ್ಕೆ 1.05 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಒಟ್ಟಾರೆ ಸಿನಿಮಾ ದಾಖಲೆಯ ಮೇಲೆ ದಾಖಲೆ ಬರೆಯುತ್ತಿದೆ. ಇದು ದರ್ಶನ್ ಅಭಿನಯದ ‘ಕಾಟೇರ’ ದಾಖಲೆಯನ್ನೂ ಉಡೀಸ್ ಮಾಡಿದೆ.

‘ಕಾಟೇರ’ ಸಿನಿಮಾ ಭಾರತದಲ್ಲಿ 68.1 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ‘ಸು ಫ್ರಮ್ ಸೋ’ ಭಾರತದ ನೆಟ್ ಕಲೆಕ್ಷನ್ 70 ಕೋಟಿ ರೂಪಾಯಿ ಇದೆ. ಈ ಮೂಲಕ ದರ್ಶನ್ ಮಾಡಿದ ದಾಖಲೆಯನ್ನು ರಾಜ್ ಬಿ. ಶೆಟ್ಟಿ ಅವರು ಮುರಿದು ಹಾಕಿದ್ದಾರೆ. ಅಂದಹಾಗೆ ಈ ಬಗ್ಗೆ ತಂಡದವರು ಯಾವುದೇ ಅಧಿಕೃತ ಲೆಕ್ಕ ಬಿಡುಗಡೆ ಮಾಡಿಲ್ಲ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!