‘ಸು ಫ್ರಮ್ ಸೋ’ ಒಟಿಟಿಗೆ ಬಂದರೂ ಥಿಯೇಟರ್​ನಲ್ಲಿ ನಿಂತಿಲ್ಲ ಕಲೆಕ್ಷನ್

ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಾಮ್ ಸೋ’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾದ ನಂತರವೂ ಥಿಯೇಟರ್‌ಗಳಲ್ಲಿ ಉತ್ತಮ ಪ್ರದರ್ಶನ ಕಂಡಿತು. 46 ದಿನಗಳ ಯಶಸ್ವಿ ಪ್ರದರ್ಶನದ ನಂತರ ಒಟಿಟಿಗೆ ಬಿಡುಗಡೆಯಾದರೂ, ಸಿನಿಮಾ ಉತ್ತಮ ಗಳಿಕೆ ಮಾಡುತ್ತಲೇ ಇದೆ. ಇದು ಸಿನಿಮಾದ ಜನಪ್ರಿಯತೆ ಮತ್ತು ಪ್ರೇಕ್ಷಕರ ಆಸಕ್ತಿಯನ್ನು ತೋರಿಸುತ್ತದೆ.

ಕೆಲವು ಸಿನಿಮಾಗಳು ಒಟಿಟಿಗೆ ಬರೋ ಮೊದಲೇ ಥಿಯೇಟರ್​ನಿಂದ ಕಾಲ್ಕಿತ್ತಿರುತ್ತವೆ. ಕಲೆಕ್ಷನ್ ಕೂಡ ಸಂಪೂರ್ಣವಾಗಿ ನಿಂತು ಹೋಗಿರುತ್ತದೆ. ಆದರೆ, ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ (Su From So) ಇದಕ್ಕೆ ಭಿನ್ನ. ಈ ಚಿತ್ರ ಸೆಪ್ಟೆಂಬರ್ 9ರಂದು ಒಟಿಟಿಗೆ ಕಾಲಿಟ್ಟಿದೆ. ಆದಾಗ್ಯೂ ಚಿತ್ರ ಥಿಯೇಟರ್​​ನಲ್ಲಿ ಕಲೆಕ್ಷನ್ ಮಾಡೋದನ್ನು ಮುಂದುವರಿಸಿದೆ. ಇದು ಅನೇಕರಿಗೆ ಅಚ್ಚರಿ ತಂದಿದೆ. ಇದು ಸಿನಿಮಾದ ಜನಪ್ರಿಯತೆಯನ್ನು ಸೂಚಿಸುತ್ತದೆ. ‘ಸು ಫ್ರಮ್ ಸೋ’ ಸಿನಿಮಾ ಜುಲೈ 25ರಂದು ಥಿಯೇಟರ್​​ನಲ್ಲಿ ರಿಲೀಸ್ ಆಯಿತು. ಸುಮಾರು 46 ದಿನಗಳ ಕಾಲ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ನಂತರದಲ್ಲಿ ಸಿನಿಮಾ ಒಟಿಟಿಗೆ ಕಾಲಿಟ್ಟಿದೆ. ಈ ಸಿನಿಮಾ ಒಂದೇ ದಿನ 6 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಉದಾಹರಣೆ ಇದೆ. ಈಗ ಚಿತ್ರ ಸೆಪ್ಟೆಂಬರ್ 9ರಂದು ಒಟಿಟಿಗೆ ಕಾಲಿಟ್ಟಿದೆ. ಆದರೆ, ಸಿನಿಮಾದ ಕಲೆಕ್ಷನ್ ಮಾತ್ರ ತಗ್ಗಿಲ್ಲ.

 

‘ಸು ಫ್ರಮ್ ಸೋ’ ಸಿನಿಮಾ ಸೆಪ್ಟೆಂಬರ್ 9ರಂದು 5 ಲಕ್ಷ ರೂಪಾಯಿ ಕಲೆಕ್ಷನ್ ಮಾಡಿದೆ. ಸಿನಿಮಾ ಒಟಿಟಿಗೆ ಬಂದ ಹೊರತಾಗಿಯೂ ಥಿಯೇಟರ್​ನಲ್ಲಿ ಸಾಕಷ್ಟು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಇದು ಚಿತ್ರದ ಹೆಚ್ಚುಗಾರಿಕೆ. ಅನೇಕರಿಗೆ ಸಿನಿಮಾ ಒಟಿಟಿಗೆ ಕಾಲಿಟ್ಟ ವಿಚಾರ ತಿಳಿದಿಲ್ಲದೇ ಇರಬಹುದು. ಹೀಗಾಗಿ, ದುಡ್ಡು ಕೊಟ್ಟು ಥಿಯೇಟರ್​ನಲ್ಲಿ ಸಿನಿಮಾ ವೀಕ್ಷಿಸುತ್ತಿದ್ದಾರೆ. ‘ಸು ಫ್ರಮ್ ಸೋ’ ಸಿನಿಮಾಗೆ ರಾಜ್​ ಬಿ ಶೆಟ್ಟಿ ನಿರ್ಮಾಣ ಇದೆ. ಈ ಸಿನಿಮಾದಿಂದ ಅವರು ದೊಡ್ಡ ಮಟ್ಟದಲ್ಲಿ ಲಾಭ ಕಂಡಿದ್ದಾರೆ. ಈ ಚಿತ್ರ ವಿಶ್ವ ಮಟ್ಟದಲ್ಲಿ 122.34 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇದು ಸಿನಿಮಾದ ಅಂತಿಮ ಕಲೆಕ್ಷನ್ ಎಂದೇ ಹೇಳಬಹುದು. ಈ ಚಿತ್ರದ ಭಾರತದಲ್ಲಿ 107.34 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಚಿತ್ರಕ್ಕೆ ವಿದೇಶದಿಂದ 15 ಕೋಟಿ ರೂಪಾಯಿ ಹರಿದು ಬಂದಿದೆ. ‘ಸು ಫ್ರಮ್ ಸೋ’ ಚಿತ್ರವನ್ನು ರಾಜ್ ಬಿ ಶೆಟ್ಟಿ ನಿರ್ಮಾಣ ಮಾಡುವುದರ ಜೊತೆಗೆ ನಟನೆಯನ್ನೂ ಮಾಡಿದ್ದಾರೆ. ಈ ಸಿನಿಮಾಗೆ ಜೆಪಿ ತುಮಿನಾಡ್ ನಿರ್ದೇಶನ ಇದೆ. ಈ ಚಿತ್ರದಲ್ಲಿ ಹಲವು ಸ್ಥಳೀಯ ಕಲಾವಿದರು ನಟಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!