‘ಸು ಫ್ರಮ್ ಸೋ’ ಒಟಿಟಿಗೆ ಬಂದರೂ ಥಿಯೇಟರ್​ನಲ್ಲಿ ನಿಂತಿಲ್ಲ ಕಲೆಕ್ಷನ್

ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಾಮ್ ಸೋ’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾದ ನಂತರವೂ ಥಿಯೇಟರ್‌ಗಳಲ್ಲಿ ಉತ್ತಮ ಪ್ರದರ್ಶನ ಕಂಡಿತು. 46 ದಿನಗಳ ಯಶಸ್ವಿ ಪ್ರದರ್ಶನದ ನಂತರ ಒಟಿಟಿಗೆ ಬಿಡುಗಡೆಯಾದರೂ, ಸಿನಿಮಾ ಉತ್ತಮ ಗಳಿಕೆ ಮಾಡುತ್ತಲೇ ಇದೆ. ಇದು ಸಿನಿಮಾದ ಜನಪ್ರಿಯತೆ ಮತ್ತು ಪ್ರೇಕ್ಷಕರ ಆಸಕ್ತಿಯನ್ನು ತೋರಿಸುತ್ತದೆ.

ಕೆಲವು ಸಿನಿಮಾಗಳು ಒಟಿಟಿಗೆ ಬರೋ ಮೊದಲೇ ಥಿಯೇಟರ್​ನಿಂದ ಕಾಲ್ಕಿತ್ತಿರುತ್ತವೆ. ಕಲೆಕ್ಷನ್ ಕೂಡ ಸಂಪೂರ್ಣವಾಗಿ ನಿಂತು ಹೋಗಿರುತ್ತದೆ. ಆದರೆ, ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ (Su From So) ಇದಕ್ಕೆ ಭಿನ್ನ. ಈ ಚಿತ್ರ ಸೆಪ್ಟೆಂಬರ್ 9ರಂದು ಒಟಿಟಿಗೆ ಕಾಲಿಟ್ಟಿದೆ. ಆದಾಗ್ಯೂ ಚಿತ್ರ ಥಿಯೇಟರ್​​ನಲ್ಲಿ ಕಲೆಕ್ಷನ್ ಮಾಡೋದನ್ನು ಮುಂದುವರಿಸಿದೆ. ಇದು ಅನೇಕರಿಗೆ ಅಚ್ಚರಿ ತಂದಿದೆ. ಇದು ಸಿನಿಮಾದ ಜನಪ್ರಿಯತೆಯನ್ನು ಸೂಚಿಸುತ್ತದೆ. ‘ಸು ಫ್ರಮ್ ಸೋ’ ಸಿನಿಮಾ ಜುಲೈ 25ರಂದು ಥಿಯೇಟರ್​​ನಲ್ಲಿ ರಿಲೀಸ್ ಆಯಿತು. ಸುಮಾರು 46 ದಿನಗಳ ಕಾಲ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ನಂತರದಲ್ಲಿ ಸಿನಿಮಾ ಒಟಿಟಿಗೆ ಕಾಲಿಟ್ಟಿದೆ. ಈ ಸಿನಿಮಾ ಒಂದೇ ದಿನ 6 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಉದಾಹರಣೆ ಇದೆ. ಈಗ ಚಿತ್ರ ಸೆಪ್ಟೆಂಬರ್ 9ರಂದು ಒಟಿಟಿಗೆ ಕಾಲಿಟ್ಟಿದೆ. ಆದರೆ, ಸಿನಿಮಾದ ಕಲೆಕ್ಷನ್ ಮಾತ್ರ ತಗ್ಗಿಲ್ಲ.

 

‘ಸು ಫ್ರಮ್ ಸೋ’ ಸಿನಿಮಾ ಸೆಪ್ಟೆಂಬರ್ 9ರಂದು 5 ಲಕ್ಷ ರೂಪಾಯಿ ಕಲೆಕ್ಷನ್ ಮಾಡಿದೆ. ಸಿನಿಮಾ ಒಟಿಟಿಗೆ ಬಂದ ಹೊರತಾಗಿಯೂ ಥಿಯೇಟರ್​ನಲ್ಲಿ ಸಾಕಷ್ಟು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಇದು ಚಿತ್ರದ ಹೆಚ್ಚುಗಾರಿಕೆ. ಅನೇಕರಿಗೆ ಸಿನಿಮಾ ಒಟಿಟಿಗೆ ಕಾಲಿಟ್ಟ ವಿಚಾರ ತಿಳಿದಿಲ್ಲದೇ ಇರಬಹುದು. ಹೀಗಾಗಿ, ದುಡ್ಡು ಕೊಟ್ಟು ಥಿಯೇಟರ್​ನಲ್ಲಿ ಸಿನಿಮಾ ವೀಕ್ಷಿಸುತ್ತಿದ್ದಾರೆ. ‘ಸು ಫ್ರಮ್ ಸೋ’ ಸಿನಿಮಾಗೆ ರಾಜ್​ ಬಿ ಶೆಟ್ಟಿ ನಿರ್ಮಾಣ ಇದೆ. ಈ ಸಿನಿಮಾದಿಂದ ಅವರು ದೊಡ್ಡ ಮಟ್ಟದಲ್ಲಿ ಲಾಭ ಕಂಡಿದ್ದಾರೆ. ಈ ಚಿತ್ರ ವಿಶ್ವ ಮಟ್ಟದಲ್ಲಿ 122.34 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇದು ಸಿನಿಮಾದ ಅಂತಿಮ ಕಲೆಕ್ಷನ್ ಎಂದೇ ಹೇಳಬಹುದು. ಈ ಚಿತ್ರದ ಭಾರತದಲ್ಲಿ 107.34 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಚಿತ್ರಕ್ಕೆ ವಿದೇಶದಿಂದ 15 ಕೋಟಿ ರೂಪಾಯಿ ಹರಿದು ಬಂದಿದೆ. ‘ಸು ಫ್ರಮ್ ಸೋ’ ಚಿತ್ರವನ್ನು ರಾಜ್ ಬಿ ಶೆಟ್ಟಿ ನಿರ್ಮಾಣ ಮಾಡುವುದರ ಜೊತೆಗೆ ನಟನೆಯನ್ನೂ ಮಾಡಿದ್ದಾರೆ. ಈ ಸಿನಿಮಾಗೆ ಜೆಪಿ ತುಮಿನಾಡ್ ನಿರ್ದೇಶನ ಇದೆ. ಈ ಚಿತ್ರದಲ್ಲಿ ಹಲವು ಸ್ಥಳೀಯ ಕಲಾವಿದರು ನಟಿಸಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು