ಅವರ ಮಾನ ಕಾಪಾಡಲು ನೀವ್ಯಾರು ಎಂದು ಅಶ್ವಿನಿಗೆ ಸುದೀಪ್ ನೇರ ಪ್ರಶ್ನೆ

Bigg Boss Kannada 12: ಬಿಗ್​​ಬಾಸ್ ಮನೆಯಲ್ಲಿರುವ ಅಶ್ವಿನಿ ಅವರು ಹೊರಗೆ ಹೋರಾಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಆಗಾಗ್ಗೆ ಮನೆಯಲ್ಲೂ ಹೋರಾಟಗಾರ್ತಿ ಆಗುತ್ತಿರುತ್ತಾರೆ. ಆದರೆ ಕೆಲವೊಮ್ಮೆ ಅವಶ್ಯಕತೆ ಇಲ್ಲದಾಗಲೂ ಹೋರಾಟ ಮಾಡಲು ಮುಂದಾಗುತ್ತಾರೆ. ಅದರಲ್ಲೂ ಹೆಣ್ಣಿಗೆ ಹಾಗೆ ಮಾಡಬೇಡ, ಹಾಗೆ ಅನ್ನಬೇಡ ಎನ್ನುವುದು ಹೆಚ್ಚು. ಇದೇ ವಿಷಯದ ಬಗ್ಗೆ ಸುದೀಪ್, ಅಶ್ವಿನಿ ಅವರಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಬಿಗ್​​ಬಾಸ್ (Bigg Boss) ಸ್ಪರ್ಧಿ ಅಶ್ವಿನಿ ಅವರ ನಟಿ ಆಗಿರುವ ಜೊತೆಗೆ ಕನ್ನಡಪರ ಹೋರಾಟಗಾರ್ತಿಯೂ ಹೌದು. ಸಮಾಜ ಸೇವೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕನ್ನಡಪರ ಸಂಘಟನೆಗಳ ಸಕ್ರಿಯ ಸದಸ್ಯೆ ಆಗಿರುವ ಅಶ್ವಿನಿ ಅವರು ಸಾಕಷ್ಟು ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ಆಗುವ ಕಾರ್ಯವನ್ನು ಮಾಡಿದ್ದಾರಂತೆ. ಬಿಗ್​​ಬಾಸ್ ಮನೆಯಲ್ಲಿಯೂ ಸಹ ತಮ್ಮ ಹೋರಾಟದ ಮುಖವನ್ನು ಆಗಾಗ್ಗೆ ತೋರಿಸುತ್ತಲೇ ಇರುತ್ತಾರೆ. ಅದರಲ್ಲೂ ಕೆಲವೊಮ್ಮೆ ಅವಶ್ಯಕತೆ ಇಲ್ಲದ ಸಂದರ್ಭದಲ್ಲಿಯೂ ಅವರು ಬೇರೆಯವರ ಪರವಾಗಿ ದನಿ ಎತ್ತುವುದುಂಟು. ಆದರೆ ಇದೇ ಅವರಿಗೆ ಮುಳುವಾಗಿದೆ.

ಅಶ್ವಿನಿ ಅವರು ಬಿಗ್​​ಬಾಸ್ ಮನೆಯಲ್ಲಿ ಮಹಿಳೆಯರ ಪರವಾಗಿ ಆಗಾಗ್ಗೆ ಮಾತನಾಡುತ್ತಿರುತ್ತಾರೆ. ಅದರಲ್ಲೂ ಗಿಲ್ಲಿ, ರಘು ಅವರೊಟ್ಟಿಗೆ ಜಗಳವಾದಾಗ ಮಹಿಳೆಗೆ ನೀನು ಹಾಗೆ ಮಾತನಾಡಬೇಡ, ಹೆಣ್ಣುಮಕ್ಕಳಿಗೆ ಎಂದಿಗೂ ಹಾಗೆ ಅನ್ನಬೇಡ, ಅವರ ಗೌರವಕ್ಕೆ ಧಕ್ಕೆ ತರಬೇಡ ಎಂದೆಲ್ಲ ಜಗಳದ ಮಧ್ಯೆ ವಾಕ್ಯಗಳನ್ನು ಬಳಸುತ್ತಿರುತ್ತಾರೆ. ಇಂದು ಸುದೀಪ್ ಅವರು ಈ ಬಗ್ಗೆ ಅಶ್ವಿನಿ ಅವರಿಗೆ ಸ್ಪಷ್ಟವಾಗಿ ಒಂದು ಕ್ಲಾಸ್ ತೆಗೆದುಕೊಂಡರು ಮತ್ತು ಬಿಗ್​​ಬಾಸ್ ಮನೆಯಲ್ಲಿ ಮಹಿಳಾ ಕಾರ್ಡ್ ಬಳಸುವಂತಿಲ್ಲ ಎಂದು ಸ್ಪಷ್ಟವಾಗಿ ಬಿಗ್​​ಬಾಸ್ ಮನೆಯ ಮಹಿಳೆಯರಿಗೆ ಎಚ್ಚರಿಕೆ ನೀಡಿದರು.

‘ಅಶ್ವಿನಿ ಅವರೇ ಬಿಗ್​​ಬಾಸ್ ಮನೆಯ ಮಹಿಳೆಯರ ಮಾನ, ಗೌರವ ಕಾಪಾಡುವ ನೀವು ಗುತ್ತಿಗೆ ನೀವು ಪಡೆದಿದ್ದೀರ? ಏಕೆ ಅವರ ಹಿತವನ್ನು ಅವರು ಕಾಪಾಡಿಕೊಳ್ಳುವಷ್ಟು ಧೈರ್ಯ, ಶಕ್ತಿ ಬಿಗ್​​ಬಾಸ್ ಮನೆಯಲ್ಲಿ ಬೇರೆ ಮಹಿಳೆಯರಿಗೆ ಇಲ್ಲವಾ? ಅಥವಾ ಅವರೇ ಅವರ ಗೌರವ, ಮರ್ಯಾದೆಗಳನ್ನು ಕಾಪಾಡುವಂತೆ ನಿಮ್ಮ ಬಳಿ ಕೇಳಿಕೊಂಡಿದ್ದಾರಾ?’ ಎಂದು ಪ್ರಶ್ನೆ ಮಾಡಿದರು. ಅದೇ ಪ್ರಶ್ನೆಯನ್ನು ಮನೆಯ ಇತರೆ ಮಹಿಳಾ ಸದಸ್ಯರಿಗೂ ಮಾಡಿದ ಸುದೀಪ್, ‘ನಿಮ್ಮ ಮರ್ಯಾದೆಗಳನ್ನು ನೀವುಗಳು ಕಾಪಾಡಿಕೊಳ್ಳದಷ್ಟು ದುರ್ಬಲರಾ ನೀವು? ಎಂದು ಕೇಳಿದರು.

ಮಾತೆತ್ತಿದರೆ ‘ಯಾವ ಹೆಣ್ಣಿಗೂ ಹೀಗೆ ಮಾಡಬೇಡಿ’, ‘ಹೆಣ್ಣಿಗೆ ಗೌರವ ಕೊಡಿ’ ಎನ್ನುತ್ತೀರಿ. ಹೆಣ್ಣಿಗೆ ಈ ಮನೆಯಲ್ಲಿ ಎಂದೂ ಗೌರವ ಕಡಿಮೆ ಆಗಿಲ್ಲ. ಹೆಣ್ಣುಮಕ್ಕಳಿಗೆ ಅವಮಾನ ಆಗದಂತೆ ನಾವು ಕಾವಲು ಕಾಯುತ್ತಿದ್ದೇವೆ. ಎಲ್ಲಿಯಾದರೂ ಸಣ್ಣ ತಪ್ಪು ನಡೆದರೂ ಸಹ ನಾವು ಅದಕ್ಕೆ ಶೀಘ್ರವೇ ಆಕ್ಷನ್ ತೆಗೆದುಕೊಳ್ಳುತ್ತೇವೆ. ಅಷ್ಟು ಮಾತ್ರವೇ ಅಲ್ಲ, ಯಾರಾದರೂ ಮಹಿಳೆಯರ ಬಗ್ಗೆ ಕೆಟ್ಟದಾಗಿ ವರ್ತಿಸಿದರೆ, ಕೆಟ್ಟ ಉದ್ದೇಶದಿಂದ ಮಾತನಾಡಿದರೆ, ಮುಟ್ಟಿದರೆ ಅದು ಮೊದಲಿಗೆ ಗೊತ್ತಾಗುವುದು ಆ ಮಹಿಳೆಗೆ. ಹಾಗೇನಾದರೂ ಆಗಿದ್ದರೆ ಕೂಡಲೇ ಹೇಳಿ, ಈಗಲೇ ಕ್ರಮ ಕೈಗೊಳ್ಳೋಣ. ನೀವುಗಳು ಹೀಗೆ ಮಾತನಾಡುವುದರಿಂದ ಮನೆಯಲ್ಲಿರುವ ಗಂಡಸರ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುತ್ತದೆ’ ಎಂದರು ಸುದೀಪ್.

‘ಈ ಮನೆಯಲ್ಲಿ ಯಾರೂ ವುಮೆನ್ ಕಾರ್ಡ್ ಪ್ಲೇ ಮಾಡಬೇಡಿ. ಅದು ಕೆಟ್ಟದಾಗಿ ಕಾಣುತ್ತದೆ. ಅಲ್ಲದೆ ನಿಮ್ಮ ಗೌರವ, ಮರ್ಯಾದೆಗಳನ್ನು ನೀವೇ ಕಾಪಾಡಿಕೊಳ್ಳಿ, ಅವುಗಳನ್ನು ಕಾಪಾಡುವ ಹೊಣೆಯನ್ನು ಬೇರೆ ಸ್ಪರ್ಧಿಗಳಿಗೆ ಕೊಡಬೇಡಿ. ಯಾಕೆ ನೀವು ಅಷ್ಟೋಂದು ವೀಕಾ? ನಿಮಗೆ ಶಕ್ತಿ, ಧೈರ್ಯ ಇಲ್ಲವಾ’ ಎಂದು ಸುದೀಪ್ ಮಹಿಳಾ ಸ್ಪರ್ಧಿಗಳನ್ನು ಪ್ರಶ್ನೆ ಮಾಡಿದರು.

Related Posts

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ಖ್ಯಾತ ದಳಪತಿ ವಿಜಯ್ ಮುಚ್ಚುಮರೆ ಇಲ್ಲದೇ ನಟಿ ತ್ರಿಷಾ ಕೃಷ್ಣನ್ ಜೊತೆ ತಿರುಗಾಡುತ್ತಿದ್ದಾರೆ. ಅವರ ಈ ವರ್ತನೆಯಿಂದ ಅಭಿಮಾನಿಗಳಿಗೆ ಮುಜುಗರ ಆಗಿದೆ. ಆದರೆ ಕೆಲವು ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ. ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ತ್ರಿಷಾ ಜೊತೆಗಿನ ಒಟನಾಟದಿಂದ ತೊಂದರೆ ಆಗುವ…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!