ಟಾಸ್ಕ್ ಸೋತ ಅಶ್ವಿನಿಗೆ ಸಂಗೀತಾ, ಡ್ರೋನ್ ಉದಾಹರಣೆ ಕೊಟ್ಟ ಸುದೀಪ್

Bigg Boss: 10ನೇ ಸೀಸನ್​ನಲ್ಲಿ ಸಂಗೀತಾ ಹಾಗೂ ಪ್ರತಾಪ್ ಚೇರ್ ಮೇಲೆ ಕುಳಿತುಕೊಳ್ಳಯವ ಟಾಸ್ಕ್ ಇತ್ತು. ಅವರನ್ನು ಮುಟ್ಟದೆಯೇ ಮೇಲಕ್ಕೆ ಎಬ್ಬಿಸಬೇಕಿತ್ತು. ಈ ವೇಳೆ ಸೋಪಿನ ನೀರು ಎರಚಲಾಗಿತ್ತು ಮತ್ತು ಇದರಿಂದ ಅವರಿನ ಕಣ್ಣಿನ ದೃಷ್ಟಿಗೆ ತೊಂದರೆ ಆಗಿತ್ತು. ಇದನ್ನು ಸುದೀಪ್ ನೆನಪಿಸಿಕೊಂಡರು.

ಬಿಗ್ ಬಾಸ್ ಮನೆಯಲ್ಲಿ ಕೆಲವೊಮ್ಮೆ ಟಾಸ್ಕ್​ಗಳು ನಡೆಯುವಾಗ ಅದು ಯಾವ ಹಂತಕ್ಕೆ ಬೇಕಾದರೂ ಹೋಗಬಹುದು. ಆಟವನ್ನು ಗೆಲ್ಲಬೇಕು ಎಂಬ ಭರದಲ್ಲಿ ಸಾಕಷ್ಟು ತಪ್ಪುಗಳು ನಡೆದು ಹೋಗುತ್ತವೆ. ಈ ವಾರವೂ ಕೆಲವು ತಪ್ಪುಗಳು ನಡೆದವು. ಅದನ್ನು ಸುದೀಪ್ ತಿದ್ದಿದ್ದಾರೆ. ಇನ್ನು, ಆಟವನ್ನು ವೈಯಕ್ತಿಕವಾಗಿ ತೆಗೆದುಕೊಂಡ ಅಶ್ವಿನಿ ಗೌಡ ಅವರಿಗೆ ಸುದೀಪ್ ಪಾಠ ಮಾಡಿದರು. 10ನೇ ಸೀಸನ್​ನ ಸಂಗೀತಾ ಹಾಗೂ ಡ್ರೋನ್ ಪ್ರತಾಪ್ ಉದಾಹರಣೆಯನ್ನು ನೀಡಿದರು.

ಬಿಗ್ ಬಾಸ್ ಕನ್ನಡದಲ್ಲಿ ಈ ವಾರ ಒಂದು ಟಾಸ್ಕ್ ನೀಡಲಾಗಿತ್ತು. ಕ್ಯಾಪ್ಟನ್ ರೇಸ್​ ಅಲ್ಲಿ ಕುಳಿತ ಅಶ್ವಿನಿ ಹಾಗೂ ಅಭಿಷೇಕ್ ಅವರನ್ನು ಡಿಸ್ಟ್ರಾಕ್ಟ್ ಮಾಡಬೇಕು. ಗಿಲ್ಲಿ ಅವರು ಅಶ್ವಿನಿ ಅವರ ವೈಯಕ್ತಿಕ ವಿಚಾರ ಇಟ್ಟುಕೊಂಡು ಅವರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಿದರು. ಈ ಪ್ರಯತ್ನ ಯಶಸ್ಸು ಆಗಿದೆ ಎಂದೇ ಹೇಳಿದರೂ ತಪ್ಪಾಗಲಿಕ್ಕಿಲ್ಲ. ಏಕೆಂದರೆ ಗಿಲ್ಲಿ ಮಾತು ಕೇಳುತ್ತಾ ಕೇಳುತ್ತಾ ಅವರು ತಾವು 12 ನಿಮಿಷಕ್ಕೆ ಬೆಲ್ ಹೊಡೆಯಬೇಕು ಎಂಬುದನ್ನು ಮರೆತಿದ್ದರು. ತಮ್ಮ ಕೆಲಸವನ್ನು ಅವರು ಸಮರ್ಥಿಸಿಕೊಳ್ಳಲು ಬಂದರು. ‘ಗಿಲ್ಲಿ ಮನಸ್ಸಲ್ಲಿ ಎಷ್ಟು ಕೆಟ್ಟ ಅಂಶಗಳು ಇವೆ ಎಂಬುದನ್ನು ನೋಡಬೇಕಿತ್ತು’ ಎಂದು ಅಶ್ವಿನಿ ಹೇಳಿದರು. ಇದನ್ನು ಸುದೀಪ್ ಒಪ್ಪಲಿಲ್ಲ. ‘10ನೇ ಸೀಸನ್​ನಲ್ಲಿ ಸಂಗೀತಾ ಹಾಗೂ ಪ್ರತಾಪ್ ಟಾಸ್ಕ್ ಆಡುವಾಗ ಸಾಕಷ್ಟು ತೊಂದರೆ ಅನುಭವಿಸಿದರು. ಅವರು ಆಸ್ಪತ್ರೆಗೆ ಕೂಡ ಹೋಗಬೇಕಾಯಿತು. ಅಲ್ಲಿ ಆಟ ಆಡಿ ಗೆಲ್ಲೋದಷ್ಟೇ ಮುಖ್ಯ. ಹಾಗೆ ನೋಡಿದರೆ ಗಿಲ್ಲಿ-ಕಾವ್ಯಾ ಗೆದ್ದರು’ ಎಂದು ಹೇಳಿದರು.

‘ನೀವು ಟ್ರಿಗರ್ ಆಗದೆ 12 ನಿಮಿಷದ ಲೆಕ್ಕಾಚಾರಕ್ಕೆ ಬೆಲ್ ಹೊಡೆದಿದ್ದರೆ ಮೊದಲ ಮಹಿಳಾ ಕ್ಯಾಪ್ಟನ್ ಆಗುತ್ತಿದ್ದಿರಿ ಅಲ್ಲವೇ’ ಎಂದು ಸುದೀಪ್ ಪ್ರಶ್ನೆ ಮಾಡಿದರು. ಆದರೂ ಅಶ್ವಿನಿ ಅವರು ತಾವು ಮಾಡಿದ್ದೇ ಸರಿ ಎಂದು ಸಮರ್ಥಿಸಿಕೊಳ್ಳಲು ಬಂದರು. 10ನೇ ಸೀಸನ್​ನಲ್ಲಿ ಸಂಗೀತಾ ಹಾಗೂ ಪ್ರತಾಪ್ ಚೇರ್ ಮೇಲೆ ಕುಳಿತುಕೊಳ್ಳಯವ ಟಾಸ್ಕ್ ಇತ್ತು. ಅವರನ್ನು ಮುಟ್ಟದೆಯೇ ಮೇಲಕ್ಕೆ ಎಬ್ಬಿಸಬೇಕಿತ್ತು. ಈ ವೇಳೆ ಸೋಪಿನ ನೀರು ಎರಚಲಾಗಿತ್ತು ಮತ್ತು ಇದರಿಂದ ಅವರಿನ ಕಣ್ಣಿನ ದೃಷ್ಟಿಗೆ ತೊಂದರೆ ಆಗಿತ್ತು. ಇದನ್ನು ಸುದೀಪ್ ನೆನಪಿಸಿಕೊಂಡರು.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!