ಕೆ.ಎನ್.ರಾಜಣ್ಣ ವಜಾ ಖಂಡಿಸಿ ಬೆಂಬಲಿಗರ ಆಕ್ರೋಶ : ಮಧುಗಿರಿ ಬಂದ್ !

ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಿರುವುದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧುಗಿರಿ ಪಟ್ಟಣ ಬಂದ್ ಮಾಡಿ ಮಂಗಳವಾರ ಪ್ರತಿಭಟನೆ ನಡೆಸಿದರು.

ರಾಜಣ್ಣ ಬೆಂಬಲಿಗರು ಮತ್ತು ಅಭಿಮಾನಿಗಳು ಮಧುಗಿರಿ ಪಟ್ಟಣದಲ್ಲಿ ಜಮಾವಣೆಗೊಂಡರು. ಬಸ್ ನಿಲ್ದಾಣದ ಸರ್ಕಲ್‌ನಲ್ಲಿ ಟೈರ್‌ಗೆ ಬೆಂಕಿ ಹಚ್ಚಲು ಮುಂದಾದರು. ಈ ವೇಳೆ ಅವರನ್ನು ಪೊಲೀಸರು ತಡೆದರು. ರಾಜಣ್ಣರ ರಾಜೀನಾಮೆ ವಾಪಸ್ ಪಡೆಯುವಂತೆ ಬೆಂಬಲಿಗರು ಒತ್ತಾಯಿಸಿದರು. ಬಳಿಕ ಪಾದಯಾತ್ರೆ ಮೂಲಕ ಎಸಿ ಕಚೇರಿ ವರೆಗೆ ಅಭಿಮಾನಿಗಳು ಸಾಗಿದರು.

ಬೇಕೆ ಬೇಕು ನ್ಯಾಯ ಬೇಕು ಎಂದು ಎಸಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಅವರನ್ನು ಚದುರಿಸಲು ಪೊಲೀಸರು ಹರಸಾಹಸಪಟ್ಟರು. ಎಸಿ ಕಚೇರಿಯಿಂದ ತುಮಕೂರು ಗೇಟ್ ವರೆಗೂ ರಾಜಣ್ಣ ಬೆಂಬಲಿಗರ ಪಾದಯಾತ್ರೆ ನಡೆಯಿತು.

ತುಮಕೂರು ಗೇಟ್‌ನ ರಸ್ತೆಯಲ್ಲಿ ಪ್ರತಿಭಟನಾಕಾರರು ಧರಣಿ ಕುಳಿತರು. ಇದೇ ವೇಳೆ, ಬೇಕರಿಯೊಂದಕ್ಕೆ ನುಗ್ಗಲು ಪ್ರಯತ್ನಿಸಿದರು. ಎಂಜಿ ಕ್ರೀಡಾಂಗಣದ ಬಳಿ ಬೆಂಬಲಿಗರು ಹೈಡ್ರಾಮಾ ನಡೆಸಿದರು. ಅಭಿಮಾನಿಯೊಬ್ಬ ವಿಷ ಕುಡಿಯಲು ಪ್ರಯತ್ನಿಸಿದ ಪ್ರಸಂಗವೂ ನಡೆಯಿತು. ಆತನನ್ನು ತಕ್ಷಣವೇ ಅಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು.

ತಮ್ಮ ಸಡಿಲ ಹೇಳಿಕೆಗಳ ಮೂಲಕವೇ ಪಕ್ಷದೊಳಗಡೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದ ಕೆ.ಎನ್.ರಾಜಣ್ಣ ಅವರನ್ನು ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರು ಸೋವಾರ ಸಂಪುಟದಿಂದ ವಜಾಗೊಳಿಸಿದರು. ಈ ಸಂಬಂಧ ರಾಜಣ್ಣ ಬೇಸರಗೊಂಡಿದ್ದಾರೆ. ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!