ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ವಜಾಗೊಳಿಸಿದೆ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಇತ್ತೀಚೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದೀಗ ಬೆಂಗಳೂರು ನಿವಾಸಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿ ಆದೇಶ ಹೊರಡಿಸಿದೆ.

ಬೆಂಗಳೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ (mysuru dasara) ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ (Banu Mushtaq)​​ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ವಿಚಾರಣೆ ಮಾಡಿ ಈ ಪ್ರಕರಣವನ್ನು ವಜಾಗೊಳಿಸಿದೆ.

ಬೆಂಗಳೂರು ನಿವಾಸಿ ಹೆಚ್.ಎಸ್.ಗೌರವ್ ಅವರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪಿ.ಬಿ. ಸುರೇಶ್​ ವಾದ ಮಂಡಿಸಿದ್ದು, ಹಿಂದೂಯೇತರ ವ್ಯಕ್ತಿಗೆ ಪೂಜೆ ಮಾಡಲು ಅವಕಾಶ ನೀಡಲಾಗುವುದಿಲ್ಲ ಎಂದಿದ್ದಾರೆ.

ದೇವಸ್ಥಾನದ ಒಳಗೆ ಪೂಜೆ ನಡೆಸುವುದನ್ನು ಜಾತ್ಯತೀತ ಕ್ರಿಯೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ಸಂಪೂರ್ಣವಾಗಿ ಇದೊಂದು ರಾಜಕೀಯವಾಗಿದ್ದು, ಧಾರ್ಮಿಕ ಕಾರ್ಯಗಳಿಗಾಗಿ ಅವರನ್ನು ಆಹ್ವಾನಿಸಬಾರದು ಎಂಬುದಕ್ಕೆ ಯಾವುದೇ ಕಾರಣವಿಲ್ಲ ಎಂದು ಹಿರಿಯ ವಕೀಲ ಪಿ.ಬಿ. ಸುರೇಶ್​ ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

ಹೈಕೋರ್ಟ್​ನಲ್ಲೂ ವಜಾ
ಬಾನು ಮುಷ್ತಾಕ್​​ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಇತ್ತೀಚೆಗೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಹೈಕೋರ್ಟ್, ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ ಎಂದು ಅರ್ಜಿಯನ್ನು ತಿರಸ್ಕರಿಸಿತ್ತು. ಹೈಕೋರ್ಟಿನಲ್ಲಾದರೂ ನ್ಯಾಯ ಸಿಗಬಹುದು ಎಂಬ ಭರವಸೆ ಇತ್ತು. ಆದರೆ ಅದು ಕೂಡ ಇಲ್ಲವಾಯಿತು ಎಂದು ತೀರ್ಪಿನ ನಂತರ ಪ್ರತಾಪ್ ಸಿಂಹ ನಿರಾಶೆ ವ್ಯಕ್ತಪಡಿಸಿದ್ದರು.

ಬಾನು ಮುಷ್ತಾಕ್​​ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿಯ ಅನೇಕ ನಾಯಕರು ಟೀಕೆ ಮಾಡಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟ ಸಚಿವರು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!