ಮಾಧ್ಯಮ ಪ್ರಸಾರ ನಿರ್ಭಂಧಕ್ಕೆ ಸುಪ್ರೀಂ ಹಿಂದೇಟು ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಅರ್ಜಿಯನ್ನು ಹೊಸದಾಗಿ ನಿರ್ಧರಿಸುವಂತೆ ಆದೇಶಿಸಿದ ಸುಪ್ರೀಂ ಕೋರ್ಟ್

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಮಾನಹಾನಿಕರ ವರದಿಗಳ ಪ್ರಕಟಣೆ ತಡೆಯುವಂತೆ ಹರ್ಷೇಂದ್ರ ಕುಮಾರ್ ಅವರು ಸುಪ್ರೀಂಗೆ ಸಲ್ಲಿಸಿದ ಅರ್ಜಿಯನ್ನು ಹೊಸದಾಗಿ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ರಾಜ್ಯ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

“ದಿನೇ ದಿನೇ ಸುದ್ದಿ ವಾಹಿನಿಗಳು ಮತ್ತು ಸಾಮಾಜಿಕ ಮಾಧ್ಯಮಗಳು ಮಾನಿಹಾನಿಕರ ವರದಿಗಳನ್ನು ಪ್ರಕಟಿಸುತ್ತಿವೆ” ಎಂದು ಧರ್ಮಸ್ಥಳ ದೇವಾಲಯದ ಆಡಳಿತ ಮಂಡಳಿ ಪರ ಹಿರಿಯ ವಕೀಲ ಮುಕುಲ್ ರೊಹಟಗಿ ವಾದ ಮಂಡಿಸಿದರು.
ವಿಚಾರ ಆಲಿಸಿದ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರಿಂದ ಪೀಠವು “ವಿರಳ ಮತ್ತು ಅಪರೂಪದ ಪ್ರಕರಣಗಳಲ್ಲಿ ಮಾತ್ರ, ಗ್ಯಾಗ್ ಆದೇಶ ಹೊರಡಿಸಲಾಗುತ್ತದೆ. ಇಂತಹ ಆದೇಶ ವಾಕ್ ಸ್ವಾತಂತ್ರ್ಯವನ್ನು ಹತ್ತಿಕುತ್ತವೆ. ನಾವು ತಡೆಯಾಗ್ನೇ ನೀಡಿದರೆ ಅನಾಮಿಕ ವ್ಯಕ್ತಿಯ ಹೇಳಿಕೆಯನ್ನು ಸಹ ವರದಿ ಮಾಡಲು ಸಾಧ್ಯವಿಲ್ಲ” ಎಂದು ಹೇಳಿತು

ವಿಚಾರಣೆ ವೇಳೆ ಮಾತನಾಡಿದ ಹೊರಟಗಿಯವರು “ಮಾಧ್ಯಮ ನಿರ್ಬಂಧದ ತೆರವು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು ಒಬ್ಬ ವ್ಯಕ್ತಿ ಅಷ್ಟೇ, ಅವರಿಗಷ್ಟೇ ಪರಿಹಾರ ಸಿಗಬೇಕಿತ್ತು, ಆದರೆ ಈ ಪ್ರಕರಣದಲ್ಲಿ ಉಳಿದ 299 ಮಂದಿಗೂ ಅಂದರೆ ಮಾಧ್ಯಮ ಸಂಸ್ಥೆಗಳಿಗೂ ಸಹ ಲಾಭ ದೊರೆತಿದ್ದು ಹೇಗೆ? ಹೀಗಾಗಿ ಪೀಠವು ಏನಾದರೂ ಒಂದು ರಕ್ಷಣೆಯನ್ನು ನೀಡಬೇಕು” ಎಂದು ಮಧ್ಯಂತರ ಪರಿಹಾರಕ್ಕಾಗಿ ಮನವಿ ಮಾಡಿದರು .

ವಾದ ಆಲಿಸಿದ ಸುಪ್ರೀಂ ಕೋರ್ಟ್ ಅಂತಿಮವಾಗಿ ಮಧ್ಯಂತರ ನಿರ್ಬಂಧಕ ಆದೇಶವನ್ನು ಕೋರಿರುವ ದೇವಾಲಯ ಆಡಳಿತದ ಅರ್ಜಿಯನ್ನು ಹೊಸದಾಗಿ ನಿರ್ಧರಿಸಲು ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿತು

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!