
ನಾಳೆಯಿಂದ 6 ದಿನಗಳ ಕಾಲ ನಿರಂತರವಾಗಿ ಭಕ್ತರಿಗೆ ಪ್ರಸಾದ ವ್ಯವಸ್ಥೆ ಇರುತ್ತದೆ. ಪ್ರಸಿದ್ಧ ಸುತ್ತೂರು ಶಿವರಾತ್ರಿ ಶಿವಯೋಗಿಯವರ ಜಾತ್ರಾ ಮಹೋತ್ಸವ ಜನವರಿ 26 ರಿಂದ 31ರ ವರೆಗೆ ನಂಜನಗೂಡು ತಾಲ್ಲೂಕಿನ ಸುತ್ತೂರಿನಲ್ಲಿ ವಿಜೃಂಭಣೆಯಿಂದ ಜರುಗಲಿದೆ.

ಈ ಜಾತ್ರೆ ಕೇವಲ ಭಕ್ತಿಗಷ್ಟೇ ಸಿಮಿತವಾಗದೆ, ರೈತರಿಗೆ ಮಾಹಿತಿ ನೀಡುವ ಹಲವಾರು ಹೊಸ ಕೃಷಿ ಸಂಶೋಧನೆಗಳು ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳಿಗೆ ಪ್ರಸಿದ್ಧವಾಗಿದೆ. ಜಾತ್ರಾ ಮಹೋತ್ಸಕ್ಕೆ ಭಕ್ತರು, ಸೇವಾರ್ಥದಾರರು, ಸಂಘ ಸಂಸ್ಥೆಗಳು, ಅಕ್ಕಪಕ್ಕದ ಗ್ರಾಮಸ್ಥರು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರದಿಂದ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.





