birthday Archives - Good News 24x7 https://www.goodnews24x7.com/tag/birthday/ Kannada Sat, 13 Sep 2025 12:13:00 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg birthday Archives - Good News 24x7 https://www.goodnews24x7.com/tag/birthday/ 32 32 ಹುಟ್ಟು ಹಬ್ಬದ ದಿನವೇ ಮಸಣ ಸೇರಿದ ಚಿತ್ರದುರ್ಗದ ಯುವಕ: ಹಾಸನ ದುರಂತ https://www.goodnews24x7.com/chitradurga-youth-dies-on-birthday-hassan-tragedy/ Sat, 13 Sep 2025 12:13:00 +0000 https://www.goodnews24x7.com/?p=7515 ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್‌ ಹರಿದು 9 ಮಂದಿ ಸಾವನ್ನಪ್ಪಿರುವ ಘನಘೋರ ದುರಂತ ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿಯಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಹುಟ್ಟುಹಬ್ಬದ ದಿನವೇ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಇಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದ 22 ವರ್ಷ…

The post ಹುಟ್ಟು ಹಬ್ಬದ ದಿನವೇ ಮಸಣ ಸೇರಿದ ಚಿತ್ರದುರ್ಗದ ಯುವಕ: ಹಾಸನ ದುರಂತ appeared first on Good News 24x7.

]]>

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್‌ ಹರಿದು 9 ಮಂದಿ ಸಾವನ್ನಪ್ಪಿರುವ ಘನಘೋರ ದುರಂತ ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿಯಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಹುಟ್ಟುಹಬ್ಬದ ದಿನವೇ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಇಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದ 22 ವರ್ಷ ವಯಸ್ಸಿನ ಮಿಥುನ್‌ ತನ್ನ ಬರ್ತ್‌ ಡೇ ದಿನವೇ ಸಾವನ್ನಪ್ಪಿದ್ದಾನೆ. ಈ ದುರಂತದಲ್ಲಿ ಈವರೆಗೆ 9 ಜನರು ಸಾವನ್ನಪ್ಪಿದ್ದು, ಮೃತರಲ್ಲಿ ಯುವಕರೇ ಹೆಚ್ಚಿದ್ದಾರೆ. 20 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

The post ಹುಟ್ಟು ಹಬ್ಬದ ದಿನವೇ ಮಸಣ ಸೇರಿದ ಚಿತ್ರದುರ್ಗದ ಯುವಕ: ಹಾಸನ ದುರಂತ appeared first on Good News 24x7.

]]>
ಸುದೀಪ್​ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಟೀಸರ್ ಬಿಡುಗಡೆ ! https://www.goodnews24x7.com/new-movie-teaser-released-for-sudeeps-birthday/ Tue, 02 Sep 2025 05:50:42 +0000 https://www.goodnews24x7.com/?p=7254 ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹೊಸ ಸಿನಿಮಾದ ಟೈಟಲ್ ಅನ್ನು ಅನೌನ್ಸ್ ಮಾಡಲಾಗಿದೆ. ಸದ್ಯ ಈ ಮೂವಿಯ ಶೂಟಿಂಗ್ ಎಲ್ಲ ಪೂರ್ಣವಾಗಿದ್ದು ಟೈಟಲ್ ಮಾತ್ರ ಘೋಷಣೆ ಮಾಡಿರಲಿಲ್ಲ. ಅಭಿನಯ ಚಕ್ರವರ್ತಿ, ಬಾದ್ ಷಾ ಕಿಚ್ಚ ಸುದೀಪ್​ಗೆ ಇಂದು ಹುಟ್ಟು ಹಬ್ಬದ…

The post ಸುದೀಪ್​ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಟೀಸರ್ ಬಿಡುಗಡೆ ! appeared first on Good News 24x7.

]]>

ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹೊಸ ಸಿನಿಮಾದ ಟೈಟಲ್ ಅನ್ನು ಅನೌನ್ಸ್ ಮಾಡಲಾಗಿದೆ. ಸದ್ಯ ಈ ಮೂವಿಯ ಶೂಟಿಂಗ್ ಎಲ್ಲ ಪೂರ್ಣವಾಗಿದ್ದು ಟೈಟಲ್ ಮಾತ್ರ ಘೋಷಣೆ ಮಾಡಿರಲಿಲ್ಲ.

ಅಭಿನಯ ಚಕ್ರವರ್ತಿ, ಬಾದ್ ಷಾ ಕಿಚ್ಚ ಸುದೀಪ್​ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಇಂದು ಸ್ಯಾಂಡಲ್​ವುಡ್​ ಸ್ಟಾರ್​ 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕಿಚ್ಚನ ಅಭಿಮಾನಿಗಳು ಮಧ್ಯರಾತ್ರಿಯೇ ಹಬ್ಬದ ರೀತಿಯಲ್ಲಿ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದಾರೆ. ಸಾಲು ಸಾಲು ಸಿನಿಮಾಗಳ ಶೂಟಿಂಗ್​ನಲ್ಲಿ ಬ್ಯುಸಿ ಇರೋ ಕಿಚ್ಚ ಸುದೀಪ್ ಅವರ ಮುಂದಿನ ಪ್ಯಾನ್ ಇಂಡಿಯಾ ಸಿನಿಮಾದ ಟೈಟಲ್ ಅನೌನ್ಸ್​ ಆಗಿದೆ.

ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಒಂದಿನ ಮೊದಲೇ ಹೊಸ ಸಿನಿಮಾದ ಟೈಟಲ್ ಅನ್ನು ಅನೌನ್ಸ್ ಮಾಡಲಾಗಿದೆ. ಸದ್ಯ ಈ ಮೂವಿಯ ಶೂಟಿಂಗ್ ಎಲ್ಲ ಪೂರ್ಣವಾಗಿದ್ದು ಟೈಟಲ್ ಮಾತ್ರ ಘೋಷಣೆ ಮಾಡಿರಲಿಲ್ಲ. ಈವರೆಗೂ ಕೆ-47 ಎನ್ನುವ ಹೆಸರಿನಲ್ಲೇ ಶೂಟಿಂಗ್ ಮಾಡಿ ಪೂರ್ಣಗೊಳಿಸಲಾಗಿದೆ. ಕಿಚ್ಚನ ಹೊಸ ಸಿನಿಮಾ ರಿಲೀಸ್​ಗೂ ರೆಡಿಯಾಗಿದ್ದು ಡಿಸೆಂಬರ್​ನಲ್ಲಿ ಅಂದರೆ ಕ್ರಿಸ್​ಮಸ್​ಗೆ ಅಭಿಮಾನಿಗಳು ಈ ಸಿನಿಮಾವನ್ನು ಬಿಗ್​ ಸ್ಕ್ರೀನ್​ನಲ್ಲಿ ನೋಡಬಹುದು.

ಹೆಸರಿಡದ ಈ ಸಿನಿಮಾದ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಅದರಂತೆ ಕಿಚ್ಚನ ಬರ್ತ್​ಡೇಗೂ ಒಂದಿನ ಮೊದಲೇ ಮೂವಿಯ ಟೈಟಲ್​ ಟೀಸರ್​ ರಿಲೀಸ್ ಮಾಡಲಾಗಿದೆ. ಮಾರ್ಕ್​ ಎನ್ನುವುದು ಮೂವಿಯ ಹೆಸರು ಆಗಿದೆ. ಸುದೀಪ್ ಕೂಡ ಮಾರ್ಕ್​ ಟೀಸರ್​ನಲ್ಲಿ ರಗಡ್​ ಅಂದರೆ ಫುಲ್ ರಗಡ್​ ಲುಕ್​ನಲ್ಲಿ ಕಾಣಿಸಿದ್ದಾರೆ. ಮಾರ್ಕ್​ ಸಿನಿಮಾದ ಬ್ಯಾಗ್ರೌಂಡ್ ಮ್ಯೂಸಿಕ್​ ಅಂತೂ ಮೈನವಿರೇಳಿಸುವಂತೆ ಇದೆ.

ನಿರ್ದೇಶಕ ವಿಜಯ್ ಕಾರ್ತಿಕೇಯ ಹಾಗೂ ಕಿಚ್ಚನ ಕಾಂಬೋದಲ್ಲಿ ಬರುತ್ತಿರುವ ಇದು 2ನೇ ಮೂವಿ ಆಗಿದೆ. ಈ ಹಿಂದೆ ಇವರಿಬ್ಬರ ಕಾಂಬಿನೇಷನ್​​ನಲ್ಲಿ ಮ್ಯಾಕ್ಸ್​ ಸಿನಿಮಾ ತೆರೆ ಮೇಲೆ ಅಬ್ಬರಿಸಿತ್ತು. ಅಭಿಮಾನಿಗಳಿಗೂ ಸಖತ್ ಮನರಂಜನೆ ನೀಡಿತ್ತು. ಇದು ಕಿಚ್ಚ ಸುದೀಪ್ ಹಾಗೂ ವಿಜಯ್ ಕಾರ್ತಿಕೇಯನ ಮೊದಲ ವಿಜಯ ಆಗಿತ್ತು. ಅದರಂತೆ ಮತ್ತೊಂದು ಜಯಭೇರಿ ಬಾರಿಸಲು ಇಬ್ಬರು ರೆಡಿಯಾಗಿದ್ದಾರೆ. ಹಿಂದಿ, ತೆಲುಗು, ತಮಿಳು ಹಾಗೂ ಕನ್ನಡದಲ್ಲಿ ತೆರೆಗೆ ಬರಲಿದೆ.

ಈ ಮಾರ್ಕ್​ ಸಿನಿಮಾಕ್ಕೆ ನಿರ್ದೇಶಕ ವಿಜಯ್ ಕಾರ್ತಿಕೇಯ ಡೈರೆಕ್ಷನ್ ಮಾಡಿದ್ದಾರೆ. ಅಜನೀಶ್ ಬಿ ಲೋಕನಾಥ್ ಮ್ಯೂಸಿಕ್ ಇದಕ್ಕಿದೆ. ಸತ್ಯಜ್ಯೋತಿ ಫಿಲಂ ಮತ್ತು ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ಗಳು ಜೊತೆಯಾಗಿ ಈ ಮೂವಿಗೆ ಬಂಡವಾಳ ಹಾಕಿದ್ದು ಲಾಭದ ನಿರೀಕ್ಷೆಯಲ್ಲಿವೆ. ಕಿಚ್ಚನ ಬರ್ತ್​ಡೇಗೆ ಸದ್ಯ ಟೈಟಲ್​ ಟೀಸರ್​ ಒಂದೇ ರಿಲೀಸ್ ಮಾಡಲಾಗಿದೆ. ಈ ಸಿನಿಮಾದಲ್ಲಿ ಯಾರು ಯಾರು ಅಭಿನಯ ಮಾಡುತ್ತಿದ್ದಾರೆ, ಹೀರೋಯಿನ್ ಯಾರು, ಪೋಷಕ ಪಾತ್ರಗಳ ಹೆಸರು ರಿವೀಲ್ ಆಗಬೇಕಿದೆ ಅಷ್ಟೇ. ಇದಕ್ಕೆಲ್ಲ ಮುಂದಿನ ದಿನಗಳಲ್ಲಿ ಉತ್ತರ ಸಿಗುತ್ತದೆ.

The post ಸುದೀಪ್​ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಟೀಸರ್ ಬಿಡುಗಡೆ ! appeared first on Good News 24x7.

]]>
ಅಭಿಮಾನಿಗಳಿಗೆ ‘ಅಮ್ಮನಿಲ್ಲದ ಮೊದಲ ವರ್ಷವಿದು..’ಕಿಚ್ಚ ಭಾವುಕ ಮನವಿ https://www.goodnews24x7.com/this-is-the-first-year-without-a-mother-kicchas-emotional-appeal-to-fans/ Wed, 27 Aug 2025 06:40:47 +0000 https://www.goodnews24x7.com/?p=6784 ಸೆಪ್ಟೆಂಬರ್ 02 ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಹುಟ್ಟು ಹಬ್ಬ. ಪ್ರತಿ ವರ್ಷದಂತೆ ಈ ವರ್ಷಗಳು ಅಭಿಮಾನಿಗಳು ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಗ್ರ್ಯಾಂಡ್​ ಆಗಿ ಆಚರಿಸೋದಕ್ಕೆ ತಯಾರಿ ನಡೆಸುತ್ತಿದ್ದಾರೆ. ಆದ್ರೆ ಇದರ ಮಧ್ಯೆ ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ.…

The post ಅಭಿಮಾನಿಗಳಿಗೆ ‘ಅಮ್ಮನಿಲ್ಲದ ಮೊದಲ ವರ್ಷವಿದು..’ಕಿಚ್ಚ ಭಾವುಕ ಮನವಿ appeared first on Good News 24x7.

]]>

ಸೆಪ್ಟೆಂಬರ್ 02 ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಹುಟ್ಟು ಹಬ್ಬ. ಪ್ರತಿ ವರ್ಷದಂತೆ ಈ ವರ್ಷಗಳು ಅಭಿಮಾನಿಗಳು ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಗ್ರ್ಯಾಂಡ್​ ಆಗಿ ಆಚರಿಸೋದಕ್ಕೆ ತಯಾರಿ ನಡೆಸುತ್ತಿದ್ದಾರೆ. ಆದ್ರೆ ಇದರ ಮಧ್ಯೆ ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ಟ್ವಿಟರ್​ ಖಾತೆಯಲ್ಲಿ ಕಿಚ್ಚ ಸುದೀಪ್ ಭಾವುಕರಾಗಿ​ ಈ ರೀತಿ ಬರೆದುಕೊಂಡಿದ್ದಾರೆ.

ಪ್ರಿಯ ಸ್ನೇಹಿತರೇ..

ಸೆಪ್ಟೆಂಬರ್ ಎರಡರ ಬೆಳಗಿನಲ್ಲಿ ಅಲ್ಲ ಸೆಪ್ಟೆಂಬರ್ ಒಂದರ ರಾತ್ರಿಯೇ ಸಿಗೋಣವಾ…! ಸೆಪ್ಟೆಂಬ‌ರ್ ಎರಡರಂದು ನೀವು ನನ್ನನ್ನು ಭೇಟಿಮಾಡುವುದಕ್ಕಾಗಿ ಎಷ್ಟು ಕಾಯುವಿರೋ ಅದಕ್ಕಿಂತ ಹೆಚ್ಚಾಗಿ ನಾನು ನಿಮಗಾಗಿ ಕಾಯುತ್ತೇನೆ. ಆ ದಿನ ನೀವು ಪಡುವ ಸಂಭ್ರಮ, ಆಚರಿಸುವ ವಿಡಿಯೋಗಳನ್ನು ನೋಡಿದಾಗ ಪ್ರತಿಸಲವೂ ನನಗೆ ಮರುಹುಟ್ಟು ಪಡೆದಂತಾಗುತ್ತದೆ. ನಿಸ್ಸಂದೇಹವಾಗಿ ನನ್ನ ಬದುಕಿಗೆ ಮೌಲ್ಯ ತುಂಬಿದವರು ನೀವು. ನಿಮ್ಮೆದರು ನಿಂತು ವಿನೀತನಾಗುವುದಕ್ಕಿಂತ ಖುಷಿ ಏನಿದೆ? ಆದ್ದರಿಂದಲೇ ದಶಕಗಳಿಂದ ನಿಮ್ಮನ್ನು ಮನೆಯ ಹತ್ತಿರ ಭೇಟಿಮಾಡುತ್ತಲೇ ನಾನೂ ಸಂಭ್ರಮಸಿದ್ದೇನೆ. ಆದರೆ ಈ ಸಲ ತುಂಬಾ ಕಷ್ಟವಾಗುತ್ತಿದೆ ಏಕೆಂದರೆ ಅಮ್ಮನಿಲ್ಲದ ಮೊದಲ ವರ್ಷವಿದು. ಅಮ್ಮನಿಲ್ಲದ ಸಂಭ್ರಮವನ್ನು ಊಹಿಸಿಕೊಳ್ಳುವುದೂ ನನಗೆ ಕಷ್ಟವಾಗುತ್ತಿದೆ. ಆದರೆ ನಿಮ್ಮನ್ನು ನಿರಾಸೆಗೊಳಿಸುವುದು ನನಗಿಷ್ಟವಿಲ್ಲ! ನಿಮ್ಮ ಮೂಲಕವೇ ನನ್ನ ಹುಟ್ಟಬ್ಬ ಹುಟ್ಟಬೇಕು! ಗಡಿಯಾರ ಹನ್ನೆರಡು ಗಂಟೆ ಎಂದು ಸದ್ದುಮಾಡುವಾಗ ನನಗೆ ನಿಮ್ಮ ಶುಭಾಶಯಗಳೇ ಕಿವಿಗೆ ಕೇಳಬೇಕು. ಅವುಗಳೇ ಎದೆಗೆ ಇಳಿಯಬೇಕು. ಆದ್ದರಿಂದ ಸೆಪ್ಟೆಂಬರ್ ಒಂದರ ರಾತ್ರಿ ನಾವೆಲ್ಲರೂ ಒಂದು ಕಡೆ ಸೇರೋಣ. ಎಲ್ಲಿ, ಹೇಗೆ? ಅನ್ನೋದನ್ನು ತಿಳಿಸುತ್ತೇನೆ. ಆದರೆ ಮಾರನೇ ದಿನ ಅಂದರೆ ಸೆಪ್ಟೆಂಬರ್ 2 ರಂದು ದಯವಿಟ್ಟು ಯಾರೂ ಮನೆ ಹತ್ತಿರ ಬರಬೇಡಿ. ನಾನು ಆ ದಿನ ಮನೆಯಲ್ಲಿ ಇರುವುದಿಲ್ಲ. ನಾನಿರುವುದಿಲ್ಲವೆಂದು ಹೇಳಿದ ಮೇಲೂ ನೀವು ಮನೆ ಬಳಿ ಬಂದು ಕಾದರೆ ನನ್ನ ಮನಸಿಗೆ ನೋವಾಗುತ್ತದೆ. ಜೊತೆಗೆ ಈ ಸಲ ಅಮ್ಮನಿಲ್ಲದ ಮೊದಲ ವರ್ಷವಾಗಿರುವುದರಿಂದ ಮನೆ ಬಳಿ ಚೂರು ಶಾಂತಿ ವಾತಾವರಣ ಇರಲೆಂದು ಬಯಸುತ್ತಿದ್ದೇನೆ. ನನಗೆ ನಂಬಿಕೆ ಇದೆ; ನೀವು ನನ್ನನ್ನು ಅರ್ಥಮಾಡಿಕೊಳ್ಳುವಿರೆಂದು ಮತ್ತು ನಿರಾಸೆಗೊಳಿಸುವುದಿಲ್ಲವೆಂದು. ಅದು ಬಿಟ್ಟರೆ ಪ್ರತಿವರ್ಷದಂತೆ ಈ ವರ್ಷವೂ ಸಾಮಾಜಿಕ ಸೇವಾ ಕಾರ್ಯಗಳು ಯಥಾಪ್ರಕಾರ ನಡೆಯಲಿವೆ. ನಿಮ್ಮ ಹಾರೈಕೆ, ಅಭಿಮಾನ ಮತ್ತು ಸಾಂಗತ್ಯವೇ ನನ್ನ ಬಹುದೊಡ್ಡ ಆಸ್ತಿ. ಸದಾ ಪ್ರೀತಿ ಇರಲಿ.

ನಿಮ್ಮ ಕಿಚ್ಚ.

ಕಳೆದ ವರ್ಷ ಕಿಚ್ಚ ಸುದೀಪ್​ ಜಯನಗರದ ಎಂಇಎಸ್​ ಗ್ರೌಂಡ್​ನಲ್ಲಿ ಅಭಿಮಾನಿಗಳಿಗಾಗಿಯೇ ಬರ್ತ್​ ಡೇ ಕೇಕ್​ ಕಟಿಂಗ್​ ಹಮ್ಮಿಕೊಂಡಿದ್ದರು. ಹಾಗಾಗಿ ನಾನಾ ಜಿಲ್ಲೆಯಿಂದ ಸಾಕಷ್ಟು ಅಭಿಮಾನಿಗಳು ಬಂದಿದ್ದರು. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಬೆಳಗ್ಗೆ 10 ಗಂಟೆ ಕೇಕ್​ ಕಟ್​ ಮಾಡಿ ಸಂಭ್ರಮಿಸಿದ್ದರು. ಆದ್ರೆ, ಈ ಬಾರಿಯ ಹುಟ್ಟು ಹಬ್ಬಕ್ಕೆ ಮನೆಯ ಬಳಿ ಬರಬೇಡಿ, ಸೆಪ್ಟೆಂಬರ್ ಒಂದರ ರಾತ್ರಿ ನಾವೆಲ್ಲರೂ ಒಂದು ಕಡೆ ಸೇರೋಣ ಎಂದು ಹೇಳಿದ್ದಾರೆ. ಅಮ್ಮನ ಅಗಲಿಕೆಯ ನೋವಿನಿಂದ ಕಿಚ್ಚ ಸುದೀಪ್​ ಈಗಲೂ ಹೊರ ಬಂದಿಲ್ಲ. ಹೀಗಾಗಿ ಈ ಸಲ ಅಮ್ಮನಿಲ್ಲದ ಮೊದಲ ವರ್ಷವಾಗಿರುವುದರಿಂದ ಮನೆ ಬಳಿ ಚೂರು ಶಾಂತಿ ವಾತಾವರಣ ಇರಲೆಂದು ಬಯಸುತ್ತಿದ್ದೇನೆ ಎಂದು ಮನವಿ ಮಾಡಿಕೊಂಡಿದ್ದಾರೆ.

 

The post ಅಭಿಮಾನಿಗಳಿಗೆ ‘ಅಮ್ಮನಿಲ್ಲದ ಮೊದಲ ವರ್ಷವಿದು..’ಕಿಚ್ಚ ಭಾವುಕ ಮನವಿ appeared first on Good News 24x7.

]]>