birthday Archives - Good News 24x7 https://www.goodnews24x7.com/tag/birthday/ Kannada Thu, 17 Sep 2026 07:52:35 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg birthday Archives - Good News 24x7 https://www.goodnews24x7.com/tag/birthday/ 32 32 76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ : ಹರಿದು ಬಂತು ಶುಭಾಶಯಗಳ ಮಹಾ ಪೂರಾ! https://www.goodnews24x7.com/pm-enters-76th-year-a-flood-of-wishes-pours-in/ Thu, 17 Sep 2026 07:52:35 +0000 https://www.goodnews24x7.com/?p=9995 ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ 76ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಸಂಸದರು ಸೇರಿದಂತೆ ದೇಶದ ಹಲವು ಗಣ್ಯರು ಅವರಿಗೆ ಶುಭಾಶಯ ಕೋರಿದ್ದಾರೆ. ಪ್ರಧಾನಿಯವರ ಹುಟ್ಟುಹಬ್ಬದ ಅಂಗವಾಗಿ…

The post 76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ : ಹರಿದು ಬಂತು ಶುಭಾಶಯಗಳ ಮಹಾ ಪೂರಾ! appeared first on Good News 24x7.

]]>

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ 76ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಸಂಸದರು ಸೇರಿದಂತೆ ದೇಶದ ಹಲವು ಗಣ್ಯರು ಅವರಿಗೆ ಶುಭಾಶಯ ಕೋರಿದ್ದಾರೆ. ಪ್ರಧಾನಿಯವರ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ದೇಶಾದ್ಯಂತ ವಿವಿಧ ಸೇವಾ ಕಾರ್ಯಕ್ರಮಗಳು ಹಾಗೂ ರಕ್ತದಾನ ಶಿಬಿರಗಳನ್ನು ಆಯೋಜಿಸಿದೆ.

ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿ ನರೇಂದ್ರ ಮೋದಿ ಅವರು 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭ ಹಾರೈಸಿದ್ದಾರೆ. ದೇಶದ ಸಮಗ್ರ ಅಭಿವೃದ್ಧಿಗೆ ಅವರು ನೀಡುತ್ತಿರುವ ಕೊಡುಗೆಯನ್ನು ಉಲ್ಲೇಖಿಸಿದ ರಾಷ್ಟ್ರಪತಿ, ಪ್ರಧಾನಿಯವರಿಗೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯವನ್ನು ಕೋರಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಾಮಾನ್ಯ ಸ್ವಯಂಸೇವಕರಾಗಿ ಆರಂಭಗೊಂಡು ಪ್ರಧಾನಿಯ ಹುದ್ದೆಯವರೆಗೆ ಸಾಗಿದ ಮೋದಿ ಅವರ ಸಾರ್ವಜನಿಕ ಜೀವನವನ್ನು ಸ್ಮರಿಸಿದ್ದಾರೆ. ಅಧಿಕಾರವನ್ನು ಜನಕಲ್ಯಾಣ ಮತ್ತು ರಾಷ್ಟ್ರ ನಿರ್ಮಾಣದ ಸಾಧನವಾಗಿ ಬಳಸುವ ಅವರ ಬದ್ಧತೆಯನ್ನು ಅಮಿತ್ ಶಾ ತಮ್ಮ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪ್ರಧಾನಿಯವರ ನಾಯಕತ್ವದಲ್ಲಿ ದೇಶದ ಅಭಿವೃದ್ಧಿಯ ಕುರಿತಾದ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಶುಭಾಶಯ ತಿಳಿಸಿದ್ದಾರೆ. ‘ವಿಕಸಿತ ಭಾರತ’ದ ಸಂಕಲ್ಪವನ್ನು ಜನರ ಆಶಯವಾಗಿ ರೂಪಿಸುವಲ್ಲಿ ಮೋದಿ ಅವರ ಪಾತ್ರವನ್ನು ಅವರು ಶ್ಲಾಘಿಸಿದ್ದಾರೆ.

ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಶಿವರಾಜ್ ಸಿಂಗ್ ಚೌಹಾಣ್ ಮತ್ತು ಹರ್ದೀಪ್ ಸಿಂಗ್ ಪುರಿ ಸೇರಿದಂತೆ ಹಲವು ಸಚಿವರು ಪ್ರಧಾನಿಯವರಿಗೆ ಶುಭಾಶಯ ಕೋರಿದ್ದಾರೆ. ಗಡ್ಕರಿ ಅವರು ‘ರಾಷ್ಟ್ರ ಮೊದಲು’ ಎಂಬ ನೀತಿಗೆ ಒತ್ತು ನೀಡಿದರೆ, ಚೌಹಾಣ್ ಅವರು ಆತ್ಮನಿರ್ಭರ ಭಾರತದ ನಿರ್ಮಾಣದ ಕುರಿತು ಮೋದಿ ಅವರ ಪ್ರಯತ್ನಗಳನ್ನು ಉಲ್ಲೇಖಿಸಿದ್ದಾರೆ. ಪುರಿ ಅವರು ಜನ್ ಧನ್, ಸ್ವಚ್ಛ ಭಾರತ್, ಉಜ್ವಲ ಮತ್ತು ಆಯುಷ್ಮಾನ್ ಭಾರತ್ ಸೇರಿದಂತೆ ವಿವಿಧ ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರಸ್ತಾಪಿಸಿದ್ದಾರೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭಾರತವು ಜಾಗತಿಕ ವೇದಿಕೆಯಲ್ಲಿ ಆತ್ಮವಿಶ್ವಾಸದಿಂದ ತನ್ನ ಸ್ಥಾನವನ್ನು ಪ್ರತಿಪಾದಿಸುತ್ತಿರುವುದನ್ನು ಉಲ್ಲೇಖಿಸಿ ಪ್ರಧಾನಿಯವರಿಗೆ ಶುಭಾಶಯ ತಿಳಿಸಿದ್ದಾರೆ. ಡಿಜಿಟಲ್ ಆಡಳಿತ ಮತ್ತು ತಂತ್ರಜ್ಞಾನ ಆಧಾರಿತ ಆಡಳಿತ ಕ್ರಮಗಳನ್ನೂ ಅವರು ಪ್ರಸ್ತಾಪಿಸಿದ್ದಾರೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಉಲ್ಲೇಖಿಸಿ ಶುಭಾಶಯ ಕೋರಿದ್ದಾರೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ಹಲವು ನಾಯಕರು ಪ್ರಧಾನಿಯವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಹಾರೈಸಿದ್ದಾರೆ.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಸ್ಪರ್ಧಾತ್ಮಕ ಪ್ರಜಾಪ್ರಭುತ್ವದಲ್ಲಿ ದೀರ್ಘಕಾಲ ಸಾರ್ವಜನಿಕ ಜೀವನದಲ್ಲಿ ಮುಂದುವರಿದಿರುವ ಮೋದಿ ಅವರ ರಾಜಕೀಯ ಪಯಣವನ್ನು ಉಲ್ಲೇಖಿಸಿ, ಅದು ಯುವಜನರಿಗೆ ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದ್ದಾರೆ.

ದೇಶಾದ್ಯಂತ ‘ಸೇವಾ ಪರ್ವ’
ಪ್ರಧಾನಿಯವರ ಜನ್ಮದಿನದ ಅಂಗವಾಗಿ ಬಿಜೆಪಿ ಸೆಪ್ಟೆಂಬರ್ 17ರಿಂದ ತಿಂಗಳಾಂತ್ಯದವರೆಗೆ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಕ್ತದಾನ ಶಿಬಿರಗಳು, ಸ್ವಚ್ಛತಾ ಅಭಿಯಾನಗಳು, ಬಡವರಿಗೆ ವೈದ್ಯಕೀಯ ತಪಾಸಣೆ ಹಾಗೂ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮಗಳಡಿ ಅಗತ್ಯವಿರುವವರಿಗೆ ನೆರವು ನೀಡುವಂತಹ ಚಟುವಟಿಕೆಗಳನ್ನು ಆಯೋಜಿಸಲಾಗಿದೆ.

ಗುಜರಾತ್‌ನ ವಡ್ನಗರದಿಂದ ಉತ್ತರ ಪ್ರದೇಶದ ವಾರಾಣಸಿವರೆಗೆ ಪ್ರಧಾನಿಯವರ ಜೀವನ ಮತ್ತು ಸಾರ್ವಜನಿಕ ಸೇವೆಯನ್ನು ಕೇಂದ್ರವಾಗಿಟ್ಟುಕೊಂಡು ವಿವಿಧ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ. ವಡ್ನಗರ ಮತ್ತು ವಾರಾಣಸಿಯಲ್ಲಿ ಬೈಕ್ ರ‍್ಯಾಲಿಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಸೇರಿದಂತೆ ಹಲವು ಚಟುವಟಿಕೆಗಳು ನಡೆಯುತ್ತಿವೆ.

‘ವಿಕಸಿತ ಭಾರತ 2047’ ಗುರಿ
2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಗುರಿಯನ್ನು ಕೇಂದ್ರ ಸರ್ಕಾರ ಮುಂದಿಟ್ಟಿದ್ದು, ಆಡಳಿತ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿ, ಡಿಜಿಟಲೀಕರಣ ಮತ್ತು ವಿವಿಧ ಕಲ್ಯಾಣ ಯೋಜನೆಗಳಿಗೆ ಒತ್ತು ನೀಡುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳು ಹಾಗೂ ಗಣ್ಯರ ಶುಭಾಶಯಗಳ ನಡುವೆ, ಅವರ ದೀರ್ಘ ಸಾರ್ವಜನಿಕ ಜೀವನ ಮತ್ತು ಕೇಂದ್ರ ಸರ್ಕಾರದ ಮುಂದಿನ ಗುರಿಗಳು ಮತ್ತೊಮ್ಮೆ ಚರ್ಚೆಯಲ್ಲಿವೆ.

The post 76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ : ಹರಿದು ಬಂತು ಶುಭಾಶಯಗಳ ಮಹಾ ಪೂರಾ! appeared first on Good News 24x7.

]]>
ಡಿಕೆಶಿಗೆ ಸಿಎಂ ಪಟ್ಟ? ಮೇ 15ರೊಳಗೆ ಸಿಗಲಿದೆ ‘ಬರ್ತ್‌ಡೇ ಗಿಫ್ಟ್’ ಎಂದ ಶಾಸಕ ರಂಗನಾಥ್ https://www.goodnews24x7.com/dk-shivakumar-to-be-cm-mla-ranganath-says-he-will-get-birthday-gift-by-may-15/ Mon, 27 Apr 2026 10:28:03 +0000 https://www.goodnews24x7.com/?p=9415 ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನ ಬದಲಾವಣೆಯ ಕುರಿತು ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಈ ಕುರಿತು ಮಾತನಾಡಿರುವ ಕುಣಿಗಲ್ ಶಾಸಕ ಡಾ. ರಂಗನಾಥ್, ಡಿ.ಕೆ.ಶಿವಕುಮಾರ್ ಅವರು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ ಶ್ರಮಿಸಿದ್ದಾರೆ. ಅವರ ಈ ಪರಿಶ್ರಮಕ್ಕೆ ಹೈಕಮಾಂಡ್‌ನಿಂದ…

The post ಡಿಕೆಶಿಗೆ ಸಿಎಂ ಪಟ್ಟ? ಮೇ 15ರೊಳಗೆ ಸಿಗಲಿದೆ ‘ಬರ್ತ್‌ಡೇ ಗಿಫ್ಟ್’ ಎಂದ ಶಾಸಕ ರಂಗನಾಥ್ appeared first on Good News 24x7.

]]>

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನ ಬದಲಾವಣೆಯ ಕುರಿತು ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಈ ಕುರಿತು ಮಾತನಾಡಿರುವ ಕುಣಿಗಲ್ ಶಾಸಕ ಡಾ. ರಂಗನಾಥ್, ಡಿ.ಕೆ.ಶಿವಕುಮಾರ್ ಅವರು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ ಶ್ರಮಿಸಿದ್ದಾರೆ. ಅವರ ಈ ಪರಿಶ್ರಮಕ್ಕೆ ಹೈಕಮಾಂಡ್‌ನಿಂದ ಸೂಕ್ತ ಪ್ರತಿಫಲ ಸಿಗಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ. ಮೇ 15ರಂದು ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬವಿದ್ದು, ಅಷ್ಟರೊಳಗೆ ಅವರಿಗೆ ಸಿಹಿ ಸುದ್ದಿ ಸಿಗುವ ಸಾಧ್ಯತೆಯಿದೆ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ವದಂತಿಗಳಿಗೆ ಪರೋಕ್ಷವಾಗಿ ಪುಷ್ಟಿ ನೀಡಿದ್ದಾರೆ.

ಅಧಿಕಾರ ಹಂಚಿಕೆ ಒಪ್ಪಂದದ ಗೊಂದಲ:
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕರು, ಇಂತಹದೊಂದು ಒಪ್ಪಂದದ ಬಗ್ಗೆ ಎಲ್ಲರಲ್ಲೂ ಕುತೂಹಲವಿದೆ ಎಂದು ತಿಳಿಸಿದರು. ಒಪ್ಪಂದದ ಸ್ವರೂಪ ಮತ್ತು ಸಮಯದ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡುವ ಮೂಲಕ ಸದ್ಯ ಚಾಲ್ತಿಯಲ್ಲಿರುವ ಗೊಂದಲಗಳಿಗೆ ತೆರೆ ಎಳೆಯಬೇಕು. ಇದು ಕೇವಲ ನನ್ನೊಬ್ಬನ ಅಭಿಪ್ರಾಯವಲ್ಲ, ಪಕ್ಷದ ಎಲ್ಲರೂ ಇದನ್ನು ಬಯಸುತ್ತಿದ್ದಾರೆ ಎಂದು ಅವರು ಹೈಕಮಾಂಡ್ ಗಮನ ಸೆಳೆದಿದ್ದಾರೆ.

ಹೈಕಮಾಂಡ್ ನಿರ್ಧಾರಕ್ಕೆ ಬದ್ಧ:
ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಆದರೆ, ಮುಂದಿನ ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಅವರು ಕೂಡ ಮುಖ್ಯಮಂತ್ರಿ ಸ್ಥಾನ ಅಲಂಕರಿಸಬೇಕು ಎಂಬುದು ನಮ್ಮ ನಿರೀಕ್ಷೆಯಾಗಿದೆ. ನಾವು ಪ್ರಾಮಾಣಿಕವಾಗಿ ಕೆಲಸ ಮಾಡಿ ಫಲಿತಾಂಶವನ್ನು ದೇವರಿಗೆ ಬಿಡಬೇಕು. ಅದೇ ರೀತಿ ಡಿ.ಕೆ.ಶಿವಕುಮಾರ್ ಅವರು ಪಕ್ಷದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಅಂತಿಮವಾಗಿ ವರಿಷ್ಠರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಶಾಸಕ ರಂಗನಾಥ್ ಸ್ಪಷ್ಟಪಡಿಸಿದ್ದಾರೆ.

The post ಡಿಕೆಶಿಗೆ ಸಿಎಂ ಪಟ್ಟ? ಮೇ 15ರೊಳಗೆ ಸಿಗಲಿದೆ ‘ಬರ್ತ್‌ಡೇ ಗಿಫ್ಟ್’ ಎಂದ ಶಾಸಕ ರಂಗನಾಥ್ appeared first on Good News 24x7.

]]>
ಹುಟ್ಟು ಹಬ್ಬದ ದಿನವೇ ಮಸಣ ಸೇರಿದ ಚಿತ್ರದುರ್ಗದ ಯುವಕ: ಹಾಸನ ದುರಂತ https://www.goodnews24x7.com/chitradurga-youth-dies-on-birthday-hassan-tragedy/ Sat, 13 Sep 2025 12:13:00 +0000 https://www.goodnews24x7.com/?p=7515 ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್‌ ಹರಿದು 9 ಮಂದಿ ಸಾವನ್ನಪ್ಪಿರುವ ಘನಘೋರ ದುರಂತ ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿಯಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಹುಟ್ಟುಹಬ್ಬದ ದಿನವೇ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಇಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದ 22 ವರ್ಷ…

The post ಹುಟ್ಟು ಹಬ್ಬದ ದಿನವೇ ಮಸಣ ಸೇರಿದ ಚಿತ್ರದುರ್ಗದ ಯುವಕ: ಹಾಸನ ದುರಂತ appeared first on Good News 24x7.

]]>

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್‌ ಹರಿದು 9 ಮಂದಿ ಸಾವನ್ನಪ್ಪಿರುವ ಘನಘೋರ ದುರಂತ ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿಯಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಹುಟ್ಟುಹಬ್ಬದ ದಿನವೇ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಇಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದ 22 ವರ್ಷ ವಯಸ್ಸಿನ ಮಿಥುನ್‌ ತನ್ನ ಬರ್ತ್‌ ಡೇ ದಿನವೇ ಸಾವನ್ನಪ್ಪಿದ್ದಾನೆ. ಈ ದುರಂತದಲ್ಲಿ ಈವರೆಗೆ 9 ಜನರು ಸಾವನ್ನಪ್ಪಿದ್ದು, ಮೃತರಲ್ಲಿ ಯುವಕರೇ ಹೆಚ್ಚಿದ್ದಾರೆ. 20 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

The post ಹುಟ್ಟು ಹಬ್ಬದ ದಿನವೇ ಮಸಣ ಸೇರಿದ ಚಿತ್ರದುರ್ಗದ ಯುವಕ: ಹಾಸನ ದುರಂತ appeared first on Good News 24x7.

]]>
ಸುದೀಪ್​ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಟೀಸರ್ ಬಿಡುಗಡೆ ! https://www.goodnews24x7.com/new-movie-teaser-released-for-sudeeps-birthday/ Tue, 02 Sep 2025 05:50:42 +0000 https://www.goodnews24x7.com/?p=7254 ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹೊಸ ಸಿನಿಮಾದ ಟೈಟಲ್ ಅನ್ನು ಅನೌನ್ಸ್ ಮಾಡಲಾಗಿದೆ. ಸದ್ಯ ಈ ಮೂವಿಯ ಶೂಟಿಂಗ್ ಎಲ್ಲ ಪೂರ್ಣವಾಗಿದ್ದು ಟೈಟಲ್ ಮಾತ್ರ ಘೋಷಣೆ ಮಾಡಿರಲಿಲ್ಲ. ಅಭಿನಯ ಚಕ್ರವರ್ತಿ, ಬಾದ್ ಷಾ ಕಿಚ್ಚ ಸುದೀಪ್​ಗೆ ಇಂದು ಹುಟ್ಟು ಹಬ್ಬದ…

The post ಸುದೀಪ್​ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಟೀಸರ್ ಬಿಡುಗಡೆ ! appeared first on Good News 24x7.

]]>

ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹೊಸ ಸಿನಿಮಾದ ಟೈಟಲ್ ಅನ್ನು ಅನೌನ್ಸ್ ಮಾಡಲಾಗಿದೆ. ಸದ್ಯ ಈ ಮೂವಿಯ ಶೂಟಿಂಗ್ ಎಲ್ಲ ಪೂರ್ಣವಾಗಿದ್ದು ಟೈಟಲ್ ಮಾತ್ರ ಘೋಷಣೆ ಮಾಡಿರಲಿಲ್ಲ.

ಅಭಿನಯ ಚಕ್ರವರ್ತಿ, ಬಾದ್ ಷಾ ಕಿಚ್ಚ ಸುದೀಪ್​ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಇಂದು ಸ್ಯಾಂಡಲ್​ವುಡ್​ ಸ್ಟಾರ್​ 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕಿಚ್ಚನ ಅಭಿಮಾನಿಗಳು ಮಧ್ಯರಾತ್ರಿಯೇ ಹಬ್ಬದ ರೀತಿಯಲ್ಲಿ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದಾರೆ. ಸಾಲು ಸಾಲು ಸಿನಿಮಾಗಳ ಶೂಟಿಂಗ್​ನಲ್ಲಿ ಬ್ಯುಸಿ ಇರೋ ಕಿಚ್ಚ ಸುದೀಪ್ ಅವರ ಮುಂದಿನ ಪ್ಯಾನ್ ಇಂಡಿಯಾ ಸಿನಿಮಾದ ಟೈಟಲ್ ಅನೌನ್ಸ್​ ಆಗಿದೆ.

ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಒಂದಿನ ಮೊದಲೇ ಹೊಸ ಸಿನಿಮಾದ ಟೈಟಲ್ ಅನ್ನು ಅನೌನ್ಸ್ ಮಾಡಲಾಗಿದೆ. ಸದ್ಯ ಈ ಮೂವಿಯ ಶೂಟಿಂಗ್ ಎಲ್ಲ ಪೂರ್ಣವಾಗಿದ್ದು ಟೈಟಲ್ ಮಾತ್ರ ಘೋಷಣೆ ಮಾಡಿರಲಿಲ್ಲ. ಈವರೆಗೂ ಕೆ-47 ಎನ್ನುವ ಹೆಸರಿನಲ್ಲೇ ಶೂಟಿಂಗ್ ಮಾಡಿ ಪೂರ್ಣಗೊಳಿಸಲಾಗಿದೆ. ಕಿಚ್ಚನ ಹೊಸ ಸಿನಿಮಾ ರಿಲೀಸ್​ಗೂ ರೆಡಿಯಾಗಿದ್ದು ಡಿಸೆಂಬರ್​ನಲ್ಲಿ ಅಂದರೆ ಕ್ರಿಸ್​ಮಸ್​ಗೆ ಅಭಿಮಾನಿಗಳು ಈ ಸಿನಿಮಾವನ್ನು ಬಿಗ್​ ಸ್ಕ್ರೀನ್​ನಲ್ಲಿ ನೋಡಬಹುದು.

ಹೆಸರಿಡದ ಈ ಸಿನಿಮಾದ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಅದರಂತೆ ಕಿಚ್ಚನ ಬರ್ತ್​ಡೇಗೂ ಒಂದಿನ ಮೊದಲೇ ಮೂವಿಯ ಟೈಟಲ್​ ಟೀಸರ್​ ರಿಲೀಸ್ ಮಾಡಲಾಗಿದೆ. ಮಾರ್ಕ್​ ಎನ್ನುವುದು ಮೂವಿಯ ಹೆಸರು ಆಗಿದೆ. ಸುದೀಪ್ ಕೂಡ ಮಾರ್ಕ್​ ಟೀಸರ್​ನಲ್ಲಿ ರಗಡ್​ ಅಂದರೆ ಫುಲ್ ರಗಡ್​ ಲುಕ್​ನಲ್ಲಿ ಕಾಣಿಸಿದ್ದಾರೆ. ಮಾರ್ಕ್​ ಸಿನಿಮಾದ ಬ್ಯಾಗ್ರೌಂಡ್ ಮ್ಯೂಸಿಕ್​ ಅಂತೂ ಮೈನವಿರೇಳಿಸುವಂತೆ ಇದೆ.

ನಿರ್ದೇಶಕ ವಿಜಯ್ ಕಾರ್ತಿಕೇಯ ಹಾಗೂ ಕಿಚ್ಚನ ಕಾಂಬೋದಲ್ಲಿ ಬರುತ್ತಿರುವ ಇದು 2ನೇ ಮೂವಿ ಆಗಿದೆ. ಈ ಹಿಂದೆ ಇವರಿಬ್ಬರ ಕಾಂಬಿನೇಷನ್​​ನಲ್ಲಿ ಮ್ಯಾಕ್ಸ್​ ಸಿನಿಮಾ ತೆರೆ ಮೇಲೆ ಅಬ್ಬರಿಸಿತ್ತು. ಅಭಿಮಾನಿಗಳಿಗೂ ಸಖತ್ ಮನರಂಜನೆ ನೀಡಿತ್ತು. ಇದು ಕಿಚ್ಚ ಸುದೀಪ್ ಹಾಗೂ ವಿಜಯ್ ಕಾರ್ತಿಕೇಯನ ಮೊದಲ ವಿಜಯ ಆಗಿತ್ತು. ಅದರಂತೆ ಮತ್ತೊಂದು ಜಯಭೇರಿ ಬಾರಿಸಲು ಇಬ್ಬರು ರೆಡಿಯಾಗಿದ್ದಾರೆ. ಹಿಂದಿ, ತೆಲುಗು, ತಮಿಳು ಹಾಗೂ ಕನ್ನಡದಲ್ಲಿ ತೆರೆಗೆ ಬರಲಿದೆ.

ಈ ಮಾರ್ಕ್​ ಸಿನಿಮಾಕ್ಕೆ ನಿರ್ದೇಶಕ ವಿಜಯ್ ಕಾರ್ತಿಕೇಯ ಡೈರೆಕ್ಷನ್ ಮಾಡಿದ್ದಾರೆ. ಅಜನೀಶ್ ಬಿ ಲೋಕನಾಥ್ ಮ್ಯೂಸಿಕ್ ಇದಕ್ಕಿದೆ. ಸತ್ಯಜ್ಯೋತಿ ಫಿಲಂ ಮತ್ತು ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ಗಳು ಜೊತೆಯಾಗಿ ಈ ಮೂವಿಗೆ ಬಂಡವಾಳ ಹಾಕಿದ್ದು ಲಾಭದ ನಿರೀಕ್ಷೆಯಲ್ಲಿವೆ. ಕಿಚ್ಚನ ಬರ್ತ್​ಡೇಗೆ ಸದ್ಯ ಟೈಟಲ್​ ಟೀಸರ್​ ಒಂದೇ ರಿಲೀಸ್ ಮಾಡಲಾಗಿದೆ. ಈ ಸಿನಿಮಾದಲ್ಲಿ ಯಾರು ಯಾರು ಅಭಿನಯ ಮಾಡುತ್ತಿದ್ದಾರೆ, ಹೀರೋಯಿನ್ ಯಾರು, ಪೋಷಕ ಪಾತ್ರಗಳ ಹೆಸರು ರಿವೀಲ್ ಆಗಬೇಕಿದೆ ಅಷ್ಟೇ. ಇದಕ್ಕೆಲ್ಲ ಮುಂದಿನ ದಿನಗಳಲ್ಲಿ ಉತ್ತರ ಸಿಗುತ್ತದೆ.

The post ಸುದೀಪ್​ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಟೀಸರ್ ಬಿಡುಗಡೆ ! appeared first on Good News 24x7.

]]>
ಅಭಿಮಾನಿಗಳಿಗೆ ‘ಅಮ್ಮನಿಲ್ಲದ ಮೊದಲ ವರ್ಷವಿದು..’ಕಿಚ್ಚ ಭಾವುಕ ಮನವಿ https://www.goodnews24x7.com/this-is-the-first-year-without-a-mother-kicchas-emotional-appeal-to-fans/ Wed, 27 Aug 2025 06:40:47 +0000 https://www.goodnews24x7.com/?p=6784 ಸೆಪ್ಟೆಂಬರ್ 02 ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಹುಟ್ಟು ಹಬ್ಬ. ಪ್ರತಿ ವರ್ಷದಂತೆ ಈ ವರ್ಷಗಳು ಅಭಿಮಾನಿಗಳು ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಗ್ರ್ಯಾಂಡ್​ ಆಗಿ ಆಚರಿಸೋದಕ್ಕೆ ತಯಾರಿ ನಡೆಸುತ್ತಿದ್ದಾರೆ. ಆದ್ರೆ ಇದರ ಮಧ್ಯೆ ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ.…

The post ಅಭಿಮಾನಿಗಳಿಗೆ ‘ಅಮ್ಮನಿಲ್ಲದ ಮೊದಲ ವರ್ಷವಿದು..’ಕಿಚ್ಚ ಭಾವುಕ ಮನವಿ appeared first on Good News 24x7.

]]>

ಸೆಪ್ಟೆಂಬರ್ 02 ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಹುಟ್ಟು ಹಬ್ಬ. ಪ್ರತಿ ವರ್ಷದಂತೆ ಈ ವರ್ಷಗಳು ಅಭಿಮಾನಿಗಳು ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಗ್ರ್ಯಾಂಡ್​ ಆಗಿ ಆಚರಿಸೋದಕ್ಕೆ ತಯಾರಿ ನಡೆಸುತ್ತಿದ್ದಾರೆ. ಆದ್ರೆ ಇದರ ಮಧ್ಯೆ ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ಟ್ವಿಟರ್​ ಖಾತೆಯಲ್ಲಿ ಕಿಚ್ಚ ಸುದೀಪ್ ಭಾವುಕರಾಗಿ​ ಈ ರೀತಿ ಬರೆದುಕೊಂಡಿದ್ದಾರೆ.

ಪ್ರಿಯ ಸ್ನೇಹಿತರೇ..

ಸೆಪ್ಟೆಂಬರ್ ಎರಡರ ಬೆಳಗಿನಲ್ಲಿ ಅಲ್ಲ ಸೆಪ್ಟೆಂಬರ್ ಒಂದರ ರಾತ್ರಿಯೇ ಸಿಗೋಣವಾ…! ಸೆಪ್ಟೆಂಬ‌ರ್ ಎರಡರಂದು ನೀವು ನನ್ನನ್ನು ಭೇಟಿಮಾಡುವುದಕ್ಕಾಗಿ ಎಷ್ಟು ಕಾಯುವಿರೋ ಅದಕ್ಕಿಂತ ಹೆಚ್ಚಾಗಿ ನಾನು ನಿಮಗಾಗಿ ಕಾಯುತ್ತೇನೆ. ಆ ದಿನ ನೀವು ಪಡುವ ಸಂಭ್ರಮ, ಆಚರಿಸುವ ವಿಡಿಯೋಗಳನ್ನು ನೋಡಿದಾಗ ಪ್ರತಿಸಲವೂ ನನಗೆ ಮರುಹುಟ್ಟು ಪಡೆದಂತಾಗುತ್ತದೆ. ನಿಸ್ಸಂದೇಹವಾಗಿ ನನ್ನ ಬದುಕಿಗೆ ಮೌಲ್ಯ ತುಂಬಿದವರು ನೀವು. ನಿಮ್ಮೆದರು ನಿಂತು ವಿನೀತನಾಗುವುದಕ್ಕಿಂತ ಖುಷಿ ಏನಿದೆ? ಆದ್ದರಿಂದಲೇ ದಶಕಗಳಿಂದ ನಿಮ್ಮನ್ನು ಮನೆಯ ಹತ್ತಿರ ಭೇಟಿಮಾಡುತ್ತಲೇ ನಾನೂ ಸಂಭ್ರಮಸಿದ್ದೇನೆ. ಆದರೆ ಈ ಸಲ ತುಂಬಾ ಕಷ್ಟವಾಗುತ್ತಿದೆ ಏಕೆಂದರೆ ಅಮ್ಮನಿಲ್ಲದ ಮೊದಲ ವರ್ಷವಿದು. ಅಮ್ಮನಿಲ್ಲದ ಸಂಭ್ರಮವನ್ನು ಊಹಿಸಿಕೊಳ್ಳುವುದೂ ನನಗೆ ಕಷ್ಟವಾಗುತ್ತಿದೆ. ಆದರೆ ನಿಮ್ಮನ್ನು ನಿರಾಸೆಗೊಳಿಸುವುದು ನನಗಿಷ್ಟವಿಲ್ಲ! ನಿಮ್ಮ ಮೂಲಕವೇ ನನ್ನ ಹುಟ್ಟಬ್ಬ ಹುಟ್ಟಬೇಕು! ಗಡಿಯಾರ ಹನ್ನೆರಡು ಗಂಟೆ ಎಂದು ಸದ್ದುಮಾಡುವಾಗ ನನಗೆ ನಿಮ್ಮ ಶುಭಾಶಯಗಳೇ ಕಿವಿಗೆ ಕೇಳಬೇಕು. ಅವುಗಳೇ ಎದೆಗೆ ಇಳಿಯಬೇಕು. ಆದ್ದರಿಂದ ಸೆಪ್ಟೆಂಬರ್ ಒಂದರ ರಾತ್ರಿ ನಾವೆಲ್ಲರೂ ಒಂದು ಕಡೆ ಸೇರೋಣ. ಎಲ್ಲಿ, ಹೇಗೆ? ಅನ್ನೋದನ್ನು ತಿಳಿಸುತ್ತೇನೆ. ಆದರೆ ಮಾರನೇ ದಿನ ಅಂದರೆ ಸೆಪ್ಟೆಂಬರ್ 2 ರಂದು ದಯವಿಟ್ಟು ಯಾರೂ ಮನೆ ಹತ್ತಿರ ಬರಬೇಡಿ. ನಾನು ಆ ದಿನ ಮನೆಯಲ್ಲಿ ಇರುವುದಿಲ್ಲ. ನಾನಿರುವುದಿಲ್ಲವೆಂದು ಹೇಳಿದ ಮೇಲೂ ನೀವು ಮನೆ ಬಳಿ ಬಂದು ಕಾದರೆ ನನ್ನ ಮನಸಿಗೆ ನೋವಾಗುತ್ತದೆ. ಜೊತೆಗೆ ಈ ಸಲ ಅಮ್ಮನಿಲ್ಲದ ಮೊದಲ ವರ್ಷವಾಗಿರುವುದರಿಂದ ಮನೆ ಬಳಿ ಚೂರು ಶಾಂತಿ ವಾತಾವರಣ ಇರಲೆಂದು ಬಯಸುತ್ತಿದ್ದೇನೆ. ನನಗೆ ನಂಬಿಕೆ ಇದೆ; ನೀವು ನನ್ನನ್ನು ಅರ್ಥಮಾಡಿಕೊಳ್ಳುವಿರೆಂದು ಮತ್ತು ನಿರಾಸೆಗೊಳಿಸುವುದಿಲ್ಲವೆಂದು. ಅದು ಬಿಟ್ಟರೆ ಪ್ರತಿವರ್ಷದಂತೆ ಈ ವರ್ಷವೂ ಸಾಮಾಜಿಕ ಸೇವಾ ಕಾರ್ಯಗಳು ಯಥಾಪ್ರಕಾರ ನಡೆಯಲಿವೆ. ನಿಮ್ಮ ಹಾರೈಕೆ, ಅಭಿಮಾನ ಮತ್ತು ಸಾಂಗತ್ಯವೇ ನನ್ನ ಬಹುದೊಡ್ಡ ಆಸ್ತಿ. ಸದಾ ಪ್ರೀತಿ ಇರಲಿ.

ನಿಮ್ಮ ಕಿಚ್ಚ.

ಕಳೆದ ವರ್ಷ ಕಿಚ್ಚ ಸುದೀಪ್​ ಜಯನಗರದ ಎಂಇಎಸ್​ ಗ್ರೌಂಡ್​ನಲ್ಲಿ ಅಭಿಮಾನಿಗಳಿಗಾಗಿಯೇ ಬರ್ತ್​ ಡೇ ಕೇಕ್​ ಕಟಿಂಗ್​ ಹಮ್ಮಿಕೊಂಡಿದ್ದರು. ಹಾಗಾಗಿ ನಾನಾ ಜಿಲ್ಲೆಯಿಂದ ಸಾಕಷ್ಟು ಅಭಿಮಾನಿಗಳು ಬಂದಿದ್ದರು. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಬೆಳಗ್ಗೆ 10 ಗಂಟೆ ಕೇಕ್​ ಕಟ್​ ಮಾಡಿ ಸಂಭ್ರಮಿಸಿದ್ದರು. ಆದ್ರೆ, ಈ ಬಾರಿಯ ಹುಟ್ಟು ಹಬ್ಬಕ್ಕೆ ಮನೆಯ ಬಳಿ ಬರಬೇಡಿ, ಸೆಪ್ಟೆಂಬರ್ ಒಂದರ ರಾತ್ರಿ ನಾವೆಲ್ಲರೂ ಒಂದು ಕಡೆ ಸೇರೋಣ ಎಂದು ಹೇಳಿದ್ದಾರೆ. ಅಮ್ಮನ ಅಗಲಿಕೆಯ ನೋವಿನಿಂದ ಕಿಚ್ಚ ಸುದೀಪ್​ ಈಗಲೂ ಹೊರ ಬಂದಿಲ್ಲ. ಹೀಗಾಗಿ ಈ ಸಲ ಅಮ್ಮನಿಲ್ಲದ ಮೊದಲ ವರ್ಷವಾಗಿರುವುದರಿಂದ ಮನೆ ಬಳಿ ಚೂರು ಶಾಂತಿ ವಾತಾವರಣ ಇರಲೆಂದು ಬಯಸುತ್ತಿದ್ದೇನೆ ಎಂದು ಮನವಿ ಮಾಡಿಕೊಂಡಿದ್ದಾರೆ.

 

The post ಅಭಿಮಾನಿಗಳಿಗೆ ‘ಅಮ್ಮನಿಲ್ಲದ ಮೊದಲ ವರ್ಷವಿದು..’ಕಿಚ್ಚ ಭಾವುಕ ಮನವಿ appeared first on Good News 24x7.

]]>