Channapatna Archives - Good News 24x7 https://www.goodnews24x7.com/tag/channapatna/ Kannada Sun, 24 Aug 2025 06:30:34 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Channapatna Archives - Good News 24x7 https://www.goodnews24x7.com/tag/channapatna/ 32 32 ಚನ್ನಪಟ್ಟಣದಲ್ಲಿ ಗಣೇಶ ಪಾಲಿಟಿಕ್ಸ್: ರಾಜಕಾರಣಿಗಳ ಉಚಿತ ವಿತರಣೆಯಿಂದ ವ್ಯಾಪಾರಸ್ಥರಿಗೆ ಸಂಕಷ್ಟ. https://www.goodnews24x7.com/ganesh-politics-in-channapatna-traders-suffer-due-to-politicians-free-distribution/ Sun, 24 Aug 2025 06:30:34 +0000 https://www.goodnews24x7.com/?p=6627 ರಾಮನಗರ : ಗಣೇಶ ಚತುರ್ಥಿಯ ದಿನಗಳು ಹತ್ತಿರವಾಗುತ್ತಿದ್ದಂತೆ ಜನರು ಶ್ರದ್ಧೆಯಿಂದ ಗಣಪನ ಮೂರ್ತಿಗಳನ್ನು ಮನೆಗೆ ತರುವ ತಯಾರಿನಲ್ಲಿ ತೊಡಗಿದ್ದಾರೆ. ಆದರೆ ಬೊಂಬೆನಗರಿ ಎಂದೇ ಹೆಸರಾಗಿರುವ ಚನ್ನಪಟ್ಟಣದಲ್ಲಿ ಈ ಬಾರಿ ಹಬ್ಬದ ಜತೆಗೆ ರಾಜಕೀಯ ತೀವ್ರತೆಯೂ ಹೆಚ್ಚಾಗಿದೆ. ಕೆಲ ರಾಜಕೀಯ ನಾಯಕರು ಉಚಿತವಾಗಿ…

The post ಚನ್ನಪಟ್ಟಣದಲ್ಲಿ ಗಣೇಶ ಪಾಲಿಟಿಕ್ಸ್: ರಾಜಕಾರಣಿಗಳ ಉಚಿತ ವಿತರಣೆಯಿಂದ ವ್ಯಾಪಾರಸ್ಥರಿಗೆ ಸಂಕಷ್ಟ. appeared first on Good News 24x7.

]]>

ರಾಮನಗರ : ಗಣೇಶ ಚತುರ್ಥಿಯ ದಿನಗಳು ಹತ್ತಿರವಾಗುತ್ತಿದ್ದಂತೆ ಜನರು ಶ್ರದ್ಧೆಯಿಂದ ಗಣಪನ ಮೂರ್ತಿಗಳನ್ನು ಮನೆಗೆ ತರುವ ತಯಾರಿನಲ್ಲಿ ತೊಡಗಿದ್ದಾರೆ. ಆದರೆ ಬೊಂಬೆನಗರಿ ಎಂದೇ ಹೆಸರಾಗಿರುವ ಚನ್ನಪಟ್ಟಣದಲ್ಲಿ ಈ ಬಾರಿ ಹಬ್ಬದ ಜತೆಗೆ ರಾಜಕೀಯ ತೀವ್ರತೆಯೂ ಹೆಚ್ಚಾಗಿದೆ. ಕೆಲ ರಾಜಕೀಯ ನಾಯಕರು ಉಚಿತವಾಗಿ ಗಣೇಶ ಮೂರ್ತಿಗಳನ್ನು ವಿತರಿಸುತ್ತಿರುವ ಕಾರಣ, ಈ ವಹಿವಾಟಿನಲ್ಲಿ ನಿರೀಕ್ಷಿಸಿದ್ದ ಲಾಭವನ್ನು ತಲಪಿಸಿಕೊಳ್ಳಲು ನಿರೀಕ್ಷಿಸಿದ್ದ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಉಚಿತ ಮೂರ್ತಿಗಳ politics!

ಸಾಮಾನ್ಯವಾಗಿ ಗಣೇಶ ಹಬ್ಬದಂದು ಪ್ರತಿ ಮನೆ, ಗಲ್ಲಿ, ಹಳ್ಳಿಯಲ್ಲಿ ಪೂಜಾ ಸಂಭ್ರಮ ಮನೆಮಾಡಿರುತ್ತದೆ. ಆದರೆ ಈ ಬಾರಿ ಚನ್ನಪಟ್ಟಣದಲ್ಲಿ ಪಬ್ಲಿಸಿಟಿ ಪಡೆಯುವ ಉದ್ದೇಶದಿಂದ ಕೆಲ ರಾಜಕಾರಣಿಗಳು ಉಚಿತ ಗಣೇಶ ಮೂರ್ತಿಗಳ ವಿತರಣೆಗೆ ಮುಂದಾಗಿದ್ದಾರೆ.

ಬಡಾವಣೆಗಳಲ್ಲೂ, ಹಳ್ಳಿಗಳಲ್ಲೂ ಜನರನ್ನು ಸೆಳೆಯಲು, ತಮ್ಮ ಪರವಾಗಿ ಮತದಾನ ಮಾಡಿಸಲು ಉಚಿತ ಮೂರ್ತಿಗಳ ಪ್ರದಾನ ನಡೆಯುತ್ತಿದೆ. ಈ ಮೂಲಕ ಹಬ್ಬದ ನಿಜವಾದ ಸಾರ್ಥಕತೆಗಿಂತ ಮತರಾಜಕೀಯವೇ ಮುಖ್ಯವಾಗುತ್ತಿದೆ ಎಂಬ ಅನಿಸಿಕೆ ವ್ಯಕ್ತವಾಗಿದೆ.

ಯಾರೆಲ್ಲ ಮೂರ್ತಿಗಳನ್ನ ವಿತರಿಸುತ್ತಿದ್ದಾರೆ?

ಚನ್ನಪಟ್ಟಣ ಕ್ಷೇತ್ರದ ಬಿಜೆಪಿ ಶಾಸಕ ಸಿ.ಪಿ. ಯೋಗೇಶ್ವರ್ ಹಾಗೂ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಹೆಚ್.ಸಿ. ಜಯಮುತ್ತು ನೇತೃತ್ವದಲ್ಲಿ ಈ ಉಚಿತ ಮೂರ್ತಿ ವಿತರಣಾ ಕಾರ್ಯಕ್ರಮಗಳು ನಡೆಯುತ್ತಿವೆ. ಯುವಕರು ಹೆಸರು ನೋಂದಾಯಿಸಿಕೊಂಡರೆ, ಯಾವುದೇ ಗ್ರಾಮದಿಂದ ಅಥವಾ ಪಟ್ಟಣದಿಂದ ಬಂದವರಿಗು ಮೂರ್ತಿ ಉಚಿತವಾಗಿ ನೀಡಲಾಗುತ್ತಿದೆ.

ವ್ಯಾಪಾರಿಗಳಿಗೆ ಹೊಟ್ಟೆನೋವು

ಈ ಉಚಿತ ವಿತರಣೆಯಿಂದಾಗಿ ಗಣೇಶ ಮೂರ್ತಿ ವ್ಯಾಪಾರಸ್ಥರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಹಲವರು ಮೂರ್ತಿ ಬುಕ್ ಮಾಡಿದ್ದರೂ ಈಗ ಹಣ ವಾಪಸ್ ಕೇಳುತ್ತಿದ್ದಾರೆ. ಬೇರೆಡೆಗಳಿಂದ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಮೂರ್ತಿಗಳನ್ನು ತಯಾರಿಸಿ ತಂದ ವ್ಯಾಪಾರಿಗಳು ಈಗ ಮಾರಾಟವಾಗದ ಸ್ಥಿತಿಯಲ್ಲಿದ್ದಾರೆ.

ವ್ಯಾಪಾರಸ್ಥ ವಿನಯ್ ತಮ್ಮ ಅಸಮಾಧಾನ ಹೀಗೆ ವ್ಯಕ್ತಪಡಿಸಿದರು:

“ಎರಡು ಮೂರು ತಿಂಗಳ ಮುಂಚೆಯೇ ಉಚಿತ ಮೂರ್ತಿ ವಿತರಣೆಯ ಮಾಹಿತಿ ಇದ್ದರೆ, ನಾವು ಇಷ್ಟು ಹೂಡಿಕೆ ಮಾಡುತ್ತಿರಲಿಲ್ಲ. ರಾಜಕಾರಣಿಗಳು literally ನಮ್ಮ ಹೊಟ್ಟೆ ಮೇಲೆ ಲಾತಿ ಹೊಡೆದಂತಾಗಿದೆ.”

ಗಣೇಶ ಹಬ್ಬದ ಹಿನ್ನಲೆಯಲ್ಲಿ ಮತದಾರರ ಮನಗೆಲ್ಲುವ ರಾಜಕೀಯ ನಾಟಕ ಇದಾಗಿದ್ದು, ಇದರಿಂದಾಗಿ ಶ್ರಮಪಟ್ಟು ಮೂರ್ತಿ ತಯಾರಿಸಿದ ಹಾಗೂ ವ್ಯಾಪಾರಮಾಡುತ್ತಿರುವವರಿಗೆ ಹೊಡೆತವಾಗಿದೆ. ಉಚಿತ ವಿತರಣೆಯ ಮೂಲಕ ಜನಪ್ರತಿನಿಧಿಗಳು ಪ್ರಚಾರ ಸಾಧಿಸುತ್ತಿರುವ ಈ ನಡೆ ವ್ಯಾಪಾರಸ್ಥರಲ್ಲಿ ತೀವ್ರ ಅಸಮಾಧಾನ ಹುಟ್ಟಿಸಿದೆ.

The post ಚನ್ನಪಟ್ಟಣದಲ್ಲಿ ಗಣೇಶ ಪಾಲಿಟಿಕ್ಸ್: ರಾಜಕಾರಣಿಗಳ ಉಚಿತ ವಿತರಣೆಯಿಂದ ವ್ಯಾಪಾರಸ್ಥರಿಗೆ ಸಂಕಷ್ಟ. appeared first on Good News 24x7.

]]>
ಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ https://www.goodnews24x7.com/nikhil-kumaraswamy-has-filed-nomination-papers-as-channapatna-nda-candidate/ Fri, 25 Oct 2024 08:57:59 +0000 https://www.goodnews24x7.com/?p=930 ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್‌ ಮಿನಿ ಸಮರವನ್ನ ಮತ್ತಷ್ಟು ರಣರೋಚಕ…

The post ಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ appeared first on Good News 24x7.

]]>

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್‌ ಮಿನಿ ಸಮರವನ್ನ ಮತ್ತಷ್ಟು ರಣರೋಚಕ ಘಟ್ಟಕ್ಕೆ ಕೊಂಡೊಯ್ದಿದ್ದಾರೆ.

ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಸಿದರು. ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ಕುಮಾರಸ್ವಾಮಿ, ಸದಾನಂದ ಗೌಡ, ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.

The post ಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ appeared first on Good News 24x7.

]]>
ಇಂದು ಬೆಳಗ್ಗೆ 11 ಗಂಟೆಗೆ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ https://www.goodnews24x7.com/nikhil-kumaraswamy-nomination-submission-at-11-am-today/ Fri, 25 Oct 2024 02:10:13 +0000 https://www.goodnews24x7.com/?p=927 ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಇವತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್‌ ಮಿನಿ ಸಮರವನ್ನ…

The post ಇಂದು ಬೆಳಗ್ಗೆ 11 ಗಂಟೆಗೆ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ appeared first on Good News 24x7.

]]>

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಇವತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್‌ ಮಿನಿ ಸಮರವನ್ನ ಮತ್ತಷ್ಟು ರಣರೋಚಕ ಘಟ್ಟಕ್ಕೆ ಕೊಂಡೊಯ್ದಿದ್ದಾರೆ. ಬೊಂಬೆನಾಡಿನ ಕೈ ಅಧಿಪತಿಯಾಗಿ ಈಗಾಗಲೇ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದಾರೆ.

ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಚನ್ನಪಟ್ಟಣದ ಶೇರ್ವಾ ಹೋಟೆಲ್ ಸರ್ಕಲ್‌ನಿಂದ ರೋಡ್ ಶೋ ಮೂಲಕ ತಾಲೂಕು ಕಚೇರಿಗೆ ಆಗಮಿಸಲಿದ್ದಾರೆ. ಬಳಿಕ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹೆಚ್‌.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಮಧ್ಯಾಹ್ನ 12ಗಂಟೆಗೆ ನಿಖಿಲ್ ನಾಮಪತ್ರ ಸಲ್ಲಿಸಲಿದ್ದಾರೆ.

The post ಇಂದು ಬೆಳಗ್ಗೆ 11 ಗಂಟೆಗೆ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ appeared first on Good News 24x7.

]]>
ಚನ್ನಪಟ್ಟಣಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ https://www.goodnews24x7.com/nikhil-kumaraswamy-as-nda-candidate-for-channapatnam/ Thu, 24 Oct 2024 11:13:00 +0000 https://www.goodnews24x7.com/?p=922 ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಂಗೇರಿದೆ. ಅದರಲ್ಲೂ ತೀವ್ರ ಕುತೂಹಲ ಮೂಡಿಸಿದ್ದ ಎನ್​ಡಿಎ ಅಭ್ಯರ್ಥಿ ಕೊನೆಗೂ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಅಳೆದು ತೂಗಿ ಕೊನೆ ಕ್ಷಣದಲ್ಲಿ ನಿಖಿಲ್​ ಕುಮಾರಸ್ವಾಮಿ…

The post ಚನ್ನಪಟ್ಟಣಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ appeared first on Good News 24x7.

]]>

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಂಗೇರಿದೆ. ಅದರಲ್ಲೂ ತೀವ್ರ ಕುತೂಹಲ ಮೂಡಿಸಿದ್ದ ಎನ್​ಡಿಎ ಅಭ್ಯರ್ಥಿ ಕೊನೆಗೂ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಅಳೆದು ತೂಗಿ ಕೊನೆ ಕ್ಷಣದಲ್ಲಿ ನಿಖಿಲ್​ ಕುಮಾರಸ್ವಾಮಿ ಅವರಿಗೆ ಮಣೆಹಾಕಲಾಗಿದೆ.

ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿಂದು ನಡೆದ ಜೆಡಿಎಸ್​​-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್​ ಹೆಸರು ಘೋಷಣೆ ಮಾಡಲಾಯಿತು. ಸ್ವತಃ ಯಡಿಯೂರಪ್ಪ ಅವರೇ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನಿಖಿಲ್ ಸ್ಪರ್ಧೆಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಬಳಿಕ ಯಡಿಯೂರಪ್ಪ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಮನ್ವಯ ಸಭೆ ನಡೆಸಿ ನಂತರ ನಿಖಿಲ್​ ಕುಮಾರಸ್ವಾಮಿ ಎನ್​ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು. ಇದೀಗ ಚನ್ನಪಟ್ಟಣ ಎನ್​ಡಿಎ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ.

The post ಚನ್ನಪಟ್ಟಣಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ appeared first on Good News 24x7.

]]>
ಸಿಪಿ ಯೋಗೇಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು : ಸಿಎಂ ಸಿದ್ದರಾಮಯ್ಯ https://www.goodnews24x7.com/cp-yogeshwar-should-win-by-50-thousand-votes-cm-siddaramaiah/ Thu, 24 Oct 2024 08:16:23 +0000 https://www.goodnews24x7.com/?p=913 ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು…

The post ಸಿಪಿ ಯೋಗೇಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು : ಸಿಎಂ ಸಿದ್ದರಾಮಯ್ಯ appeared first on Good News 24x7.

]]>

ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದು ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಸಿಪಿ ಯೋಗೇಶ್ವರ್ ಗೆಲ್ಲುವ ಮೂಲಕ‌ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ ಎಂದು ಕರೆ ನೀಡಿದರು.

ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಸಿಪಿ ಯೋಗೇಶ್ವರ್ ಅವರೇ ಭರ್ಜರಿ ಜಯಗಳಿಸೋದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದರು.

The post ಸಿಪಿ ಯೋಗೇಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು : ಸಿಎಂ ಸಿದ್ದರಾಮಯ್ಯ appeared first on Good News 24x7.

]]>
ಇಂದು ಬೆಳಗ್ಗೆ 11 ಗಂಟೆಗೆ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ https://www.goodnews24x7.com/presentacion-de-nominaciones-del-cp-yogeshwar-hoy-a-las-11-a-m/ Thu, 24 Oct 2024 04:09:44 +0000 https://www.goodnews24x7.com/?p=909 ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನೆನ್ನೆ ಕಾಂಗ್ರೆಸ್ ಸೇರ್ಪಡೆಯಾ ಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ರಾಜಕೀಯದಲ್ಲಿ ಅದಲು ಬದಲು ಆಟ, ಆಪರೇಷನ್​ ಎಲ್ಲವೂ ಕಾಮನ್​. ಇವತ್ತು ಜೊತೆಗೆ ಇದ್ದವರು ವಿರೋಧಿಗಳೂ…

The post ಇಂದು ಬೆಳಗ್ಗೆ 11 ಗಂಟೆಗೆ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ appeared first on Good News 24x7.

]]>

ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನೆನ್ನೆ ಕಾಂಗ್ರೆಸ್ ಸೇರ್ಪಡೆಯಾ ಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ರಾಜಕೀಯದಲ್ಲಿ ಅದಲು ಬದಲು ಆಟ, ಆಪರೇಷನ್​ ಎಲ್ಲವೂ ಕಾಮನ್​. ಇವತ್ತು ಜೊತೆಗೆ ಇದ್ದವರು ವಿರೋಧಿಗಳೂ ಆಗಬಹುದು. ಶತ್ರುಗಳು ಸ್ನೇಹಿತರೂ ಆಗಬಹುದು. ರಾಜಕೀಯದಲ್ಲಿ ಯಾವುದೂ ಅಸಾಧ್ಯವಲ್ಲ. ಅದೇ ರೀತಿ ರಾತ್ರಿ ಕಳೆದು ಬೆಳಗಾಗೋದ್ರೊಳಗೆ ಚನ್ನಪಟ್ಟಣದ ರಾಜಕೀಯ ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಸಿ.ಪಿ. ಯೋಗೇಶ್ವರ್‌ಗೆ ಬೈ ಎಲೆಕ್ಷನ್ ಯೋಗ ಕೂಡಿ ಬಂದಿದೆ. ಕಾಂಗ್ರೆಸ್ ಹೈಕಮಾಂಡ್ ಯೋಗೇಶ್ವರ್‌ಗೆ ಟಿಕೆಟ್‌ ನೀಡಿದೆ. ಈ ಮೂಲಕ ಸೈನಿಕ ಮಿನಿಯುದ್ಧದ ಅಖಾಡಕ್ಕೆ ಅಧಿಕೃತವಾಗಿ ಎಂಟ್ರಿಕೊಟ್ಟಿದ್ದಾರೆ. ಇವತ್ತು ಬೆಳಗ್ಗೆ 11 ಗಂಟೆಗೆ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬೈ ಎಲೆಕ್ಷನ್‌ಗೆ ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

The post ಇಂದು ಬೆಳಗ್ಗೆ 11 ಗಂಟೆಗೆ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ appeared first on Good News 24x7.

]]>