Court Archives - Good News 24x7 https://www.goodnews24x7.com/tag/court/ Kannada Tue, 28 Apr 2026 12:18:34 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Court Archives - Good News 24x7 https://www.goodnews24x7.com/tag/court/ 32 32 ನಾಸಿಕ್ ಟಿಸಿಎಸ್ ಮತಾಂತರ ಪ್ರಕರಣ: ಎಸ್‌ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ https://www.goodnews24x7.com/nashik-tcs-conversion-case-explosive-information-in-sit-investigation%e0%b2%a8%e0%b2%be%e0%b2%b8%e0%b2%bf%e0%b2%95%e0%b3%8d-%e0%b2%9f%e0%b2%bf%e0%b2%b8%e0%b2%bf%e0%b2%8e%e0%b2%b8%e0%b3%8d-%e0%b2%ae/ Tue, 28 Apr 2026 12:18:34 +0000 https://www.goodnews24x7.com/?p=9469 ನಾಸಿಕ್‌ನ ಟಿಸಿಎಸ್ (TCS) ಕಚೇರಿಯಲ್ಲಿ ನಡೆದಿದೆ ಎನ್ನಲಾದ ಧಾರ್ಮಿಕ ಮತಾಂತರ ಮತ್ತು ಭಾವನೆಗಳಿಗೆ ಧಕ್ಕೆ ತಂದ ಪ್ರಕರಣವು ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದ ಪ್ರಮುಖ ಆರೋಪಿಯಾದ ನಿದಾ ಖಾನ್ ವಿರುದ್ಧದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (SIT), ಈ…

The post ನಾಸಿಕ್ ಟಿಸಿಎಸ್ ಮತಾಂತರ ಪ್ರಕರಣ: ಎಸ್‌ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ appeared first on Good News 24x7.

]]>

ನಾಸಿಕ್‌ನ ಟಿಸಿಎಸ್ (TCS) ಕಚೇರಿಯಲ್ಲಿ ನಡೆದಿದೆ ಎನ್ನಲಾದ ಧಾರ್ಮಿಕ ಮತಾಂತರ ಮತ್ತು ಭಾವನೆಗಳಿಗೆ ಧಕ್ಕೆ ತಂದ ಪ್ರಕರಣವು ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದ ಪ್ರಮುಖ ಆರೋಪಿಯಾದ ನಿದಾ ಖಾನ್ ವಿರುದ್ಧದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (SIT), ಈ ಜಾಲವು ಕೇವಲ ನಾಸಿಕ್‌ಗೆ ಸೀಮಿತವಾಗಿಲ್ಲ, ಬದಲಾಗಿ ಮಾಲೆಗಾಂವ್‌ನಿಂದ ಹಿಡಿದು ಮಲೇಷ್ಯಾದವರೆಗೂ ಹರಡಿದೆ ಎಂಬ ಆಘಾತಕಾರಿ ಅಂಶಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ವಿಶೇಷ ಸರ್ಕಾರಿ ವಕೀಲ ಅಜಯ್ ಮಿಶ್ರಾ ಅವರು ಈ ಕುರಿತು ಹೊಸ ಸಾಕ್ಷ್ಯಗಳನ್ನು ಮಂಡಿಸಿದ್ದು, ಪ್ರಕರಣದ ಅಂತರರಾಷ್ಟ್ರೀಯ ಆಯಾಮಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಆರೋಪಿ ನಿದಾ ಖಾನ್ ದೂರುದಾರರ ಮೇಲೆ ತೀವ್ರವಾದ ಧಾರ್ಮಿಕ ಪ್ರಭಾವ ಬೀರಲು ಯತ್ನಿಸಿದ ಆರೋಪ ಎದುರಿಸುತ್ತಿದ್ದಾರೆ. ಸಂತ್ರಸ್ತರಿಗೆ ಬುರ್ಖಾ, ಹಿಜಾಬ್ ಮತ್ತು ಧಾರ್ಮಿಕ ಪುಸ್ತಕಗಳನ್ನು ನೀಡಿ, ನಮಾಜ್ ಮಾಡುವ ತರಬೇತಿ ನೀಡಲಾಗುತ್ತಿತ್ತು ಎನ್ನಲಾಗಿದೆ. ಅಲ್ಲದೆ, ದೂರುದಾರರ ಮೊಬೈಲ್‌ನಲ್ಲಿ ಧಾರ್ಮಿಕ ಶಿಕ್ಷಣದ ಆ್ಯಪ್‌ಗಳನ್ನು ಇನ್‌ಸ್ಟಾಲ್ ಮಾಡಿಸಿ, ಅವರ ಹೆಸರನ್ನು ‘ಹಾನಿಯಾ’ ಎಂದು ಬದಲಾಯಿಸುವ ಸಂಚು ರೂಪಿಸಲಾಗಿತ್ತು. ಮಲೇಷ್ಯಾದಲ್ಲಿ ಉದ್ಯೋಗದ ಆಮಿಷವೊಡ್ಡಿ ಮತಾಂತರಕ್ಕೆ ಪ್ರೇರೇಪಿಸಲಾಗುತ್ತಿತ್ತು ಎಂಬುದು ಎಸ್‌ಐಟಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪ್ರಸ್ತುತ ನಿದಾ ಖಾನ್ ತಲೆಮರೆಸಿಕೊಂಡಿದ್ದು, ಆಕೆಯ ಮೊಬೈಲ್ ಫೋನ್ ವಶಪಡಿಸಿಕೊಳ್ಳುವುದು ತನಿಖೆಗೆ ಅತ್ಯಗತ್ಯವಾಗಿದೆ ಎಂದು ಸರ್ಕಾರಿ ವಕೀಲರು ವಾದಿಸಿದ್ದಾರೆ. ಒಂದು ವೇಳೆ ಆಕೆಗೆ ನಿರೀಕ್ಷಣಾ ಜಾಮೀನು ನೀಡಿದರೆ, ಸಾಕ್ಷ್ಯಗಳನ್ನು ನಾಶಪಡಿಸುವ ಅಥವಾ ಸಂತ್ರಸ್ತರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ನೀಡಬಾರದು ಎಂದು ಮನವಿ ಮಾಡಲಾಗಿದೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ಸಂತ್ರಸ್ತರು ಇರುವ ಸಾಧ್ಯತೆಯನ್ನು ತನಿಖಾ ಸಂಸ್ಥೆಗಳು ಶಂಕಿಸಿವೆ.

ಮತ್ತೊಂದೆಡೆ, ನಿದಾ ಖಾನ್ ಪರ ವಕೀಲ ರಾಹುಲ್ ಕಸ್ಲಿವಾಲ್ ಈ ಎಲ್ಲಾ ಆರೋಪಗಳನ್ನು ಸುಳ್ಳು ಎಂದು ತಳ್ಳಿಹಾಕಿದ್ದಾರೆ. ಮಹಾರಾಷ್ಟ್ರದಲ್ಲಿ ನಿರ್ದಿಷ್ಟವಾದ ಮತಾಂತರ ವಿರೋಧಿ ಕಾನೂನು ಇಲ್ಲದಿರುವುದನ್ನು ಉಲ್ಲೇಖಿಸಿದ ಅವರು, ಕೇವಲ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಇಷ್ಟು ದೊಡ್ಡ ಮಟ್ಟದ ತನಿಖೆ ಅನಗತ್ಯ ಎಂದು ವಾದಿಸಿದರು. ಅಲ್ಲದೆ, ಒಂದೇ ಘಟನೆಗೆ ಸಂಬಂಧಿಸಿದಂತೆ ಒಂಬತ್ತು ಪ್ರತ್ಯೇಕ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಸದ್ಯ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮೇ 02ಕ್ಕೆ ಮುಂದೂಡಿದ್ದು, ಅಂದು ಎರಡೂ ಕಡೆಯ ವಾದ-ಪ್ರತಿವಾದಗಳು ಮುಂದುವರಿಯಲಿವೆ.

The post ನಾಸಿಕ್ ಟಿಸಿಎಸ್ ಮತಾಂತರ ಪ್ರಕರಣ: ಎಸ್‌ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ appeared first on Good News 24x7.

]]>
ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು https://www.goodnews24x7.com/the-number-of-criminal-cases-in-our-society-is-increasing-day-by-day-complex-cases-like-murder-property-disputes-and-marital-disputes-have-been-gathering-dust-in-the-courts-for-years-it-is-a-matter/ Wed, 22 Apr 2026 06:41:44 +0000 https://www.goodnews24x7.com/?p=9371 ನಮ್ಮ ಸಮಾಜದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕೊಲೆ, ಆಸ್ತಿ ಕಲಹ ಹಾಗೂ ದಾಂಪತ್ಯ ಕಲಹಗಳಂತಹ ಜಟಿಲ ಪ್ರಕರಣಗಳು ನ್ಯಾಯಾಲಯದ ಕಟಕಟೆಯಲ್ಲಿ ವರ್ಷಗಟ್ಟಲೆ ಧೂಳು ಹಿಡಿಯುತ್ತಿವೆ. ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಲಕ್ಷಾಂತರ ಪ್ರಕರಣಗಳು ಇಂದಿಗೂ ವಿಲೇವಾರಿಯಾಗದೆ ಬಾಕಿ…

The post ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು appeared first on Good News 24x7.

]]>

ನಮ್ಮ ಸಮಾಜದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕೊಲೆ, ಆಸ್ತಿ ಕಲಹ ಹಾಗೂ ದಾಂಪತ್ಯ ಕಲಹಗಳಂತಹ ಜಟಿಲ ಪ್ರಕರಣಗಳು ನ್ಯಾಯಾಲಯದ ಕಟಕಟೆಯಲ್ಲಿ ವರ್ಷಗಟ್ಟಲೆ ಧೂಳು ಹಿಡಿಯುತ್ತಿವೆ. ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಲಕ್ಷಾಂತರ ಪ್ರಕರಣಗಳು ಇಂದಿಗೂ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಕಳವಳಕಾರಿ ಸಂಗತಿ. ಕೆಲವು ಜಮೀನು ವಿವಾದಗಳಂತೂ ಎಷ್ಟು ಸುದೀರ್ಘವಾಗಿ ನಡೆಯುತ್ತವೆ ಎಂದರೆ, ಒಂದು ತಲೆಮಾರು ನ್ಯಾಯಾಲಯ ಅಲೆದು ಸುಸ್ತಾಗಿ, ಅಂತಿಮವಾಗಿ ಅವರ ಮಕ್ಕಳು ಹೋರಾಟವನ್ನು ಮುಂದುವರಿಸುವ ಅನಿವಾರ್ಯತೆ ಎದುರಾಗಿದೆ. ಇಂತಹ ಸನ್ನಿವೇಶಗಳ ನಡುವೆ ಅಮಾನವೀಯ ಕೃತ್ಯ ಎಸಗಿದವರಿಗೆ ಗಲ್ಲು ಅಥವಾ ಜೀವಾವಧಿ ಶಿಕ್ಷೆಯಾದಾಗ ನ್ಯಾಯಾಂಗದ ಮೇಲೆ ತುಸು ನಂಬಿಕೆ ಮೂಡುತ್ತದೆ. ಆದರೂ, ಶಿಕ್ಷೆಗೊಳಗಾದವರು ಪ್ರಭಾವ ಬಳಸಿ ಅಥವಾ ಕ್ಷಮಾದಾನದ ಮೂಲಕ ಬಿಡುಗಡೆಯಾದಾಗ ಸಮಾಜದಲ್ಲಿ ಕೆಲವೊಮ್ಮೆ ಸಂಶಯಗಳು ಹುಟ್ಟಿಕೊಳ್ಳುವುದು ಸಹಜ.

ಇತ್ತೀಚಿನ ಕೆಲವು ಮಹತ್ವದ ತೀರ್ಪುಗಳು ಕಾನೂನಿನ ಶಕ್ತಿಯನ್ನು ಮರುಸ್ಥಾಪಿಸಿವೆ. ತಮಿಳುನಾಡಿನ ಸಾತಾಂಕುಳಂನಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ತಂದೆ ಜಯರಾಜ್ ಮತ್ತು ಮಗ ಬೆನಿಕ್ಸ್ ಎಂಬವರನ್ನು ಪೊಲೀಸರು ಅಮಾನವೀಯವಾಗಿ ಥಳಿಸಿ ಕೊಂದ ಘಟನೆ ದೇಶವನ್ನೇ ಬೆಚ್ಚಿಬೀಳಿಸಿತ್ತು. ಪೊಲೀಸರೇ ಸಾಕ್ಷ್ಯ ನಾಶಪಡಿಸಲು ಯತ್ನಿಸಿದರೂ, ಅದೇ ಠಾಣೆಯ ಕಾನ್ಸ್ಟೇಬಲ್ ರೇವತಿ ಎಂಬವರು ಯಾವುದೇ ಬೆದರಿಕೆಗೆ ಬಗ್ಗದೆ ಸತ್ಯ ನುಡಿದ ಪರಿಣಾಮ ಒಂಬತ್ತು ಪೊಲೀಸರಿಗೆ ಮಧುರೈ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ಇದು ಕರ್ತವ್ಯ ಪ್ರಜ್ಞೆ ಮತ್ತು ನ್ಯಾಯಕ್ಕೆ ಸಂದ ಜಯವಾಗಿದೆ.

ಹಾಗೆಯೇ ಕರ್ನಾಟಕದಲ್ಲಿ ಸಂಚಲನ ಮೂಡಿಸಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ರಾಜಕೀಯ ಪ್ರಭಾವದ ನಡುವೆಯೂ ಸಿಬಿಐ ತನಿಖೆ ನಡೆದು, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆಯಾಗಿದೆ. ಇದರ ಜೊತೆಗೆ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣ, ನಟ ದರ್ಶನ್ ಪ್ರಕರಣ ಹಾಗೂ ಜನಾರ್ದನ ರೆಡ್ಡಿ ಅವರ ಪ್ರಕರಣಗಳಲ್ಲಿ ನಡೆಯುತ್ತಿರುವ ಕಾನೂನು ಪ್ರಕ್ರಿಯೆಗಳು ಸಮಾಜಕ್ಕೆ ಒಂದು ಸ್ಪಷ್ಟ ಸಂದೇಶ ನೀಡಿವೆ. “ಕಾನೂನಿಗಿಂತ ಯಾರೂ ದೊಡ್ಡವರಲ್ಲ” ಮತ್ತು ತಪ್ಪೆಸಗಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ನ್ಯಾಯದ ಮುಂದೆ ತಲೆಬಾಗಲೇಬೇಕು ಎಂಬ ಆಶಾವಾದವನ್ನು ಈ ಬೆಳವಣಿಗೆಗಳು ನಾಗರಿಕ ಸಮಾಜದಲ್ಲಿ ಮೂಡಿಸಿವೆ.

The post ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು appeared first on Good News 24x7.

]]>
ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ; ಪಾಲನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ. https://www.goodnews24x7.com/hindi-exam-high-court-orders-to-give-marks-instead-of-grades-cm-siddaramaiah-announces-compliance/ Tue, 21 Apr 2026 11:32:56 +0000 https://www.goodnews24x7.com/?p=9356 ಚಾಮರಾಜನಗರ: ತೃತೀಯ ಭಾಷೆ ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ರಾಜಕೀಯ ಮತ್ತು ಸಾಮಾಜಿಕ ವಿಚಾರಗಳ ಬಗ್ಗೆಯೂ ಪ್ರತಿಕ್ರಿಯೆ…

The post ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ; ಪಾಲನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ. appeared first on Good News 24x7.

]]>

ಚಾಮರಾಜನಗರ: ತೃತೀಯ ಭಾಷೆ ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ರಾಜಕೀಯ ಮತ್ತು ಸಾಮಾಜಿಕ ವಿಚಾರಗಳ ಬಗ್ಗೆಯೂ ಪ್ರತಿಕ್ರಿಯೆ ನೀಡಿದರು.

ಸುದ್ದಿಯ ಮುಖ್ಯಾಂಶಗಳು:
ಹಿಂದಿ ಮೌಲ್ಯಮಾಪನ: ತೃತೀಯ ಭಾಷೆ ಹಿಂದಿಗೆ ಈ ವರ್ಷ ಗ್ರೇಡ್‌ ಬದಲಿಗೆ ಅಂಕಗಳನ್ನೇ ನೀಡಬೇಕು ಎಂಬ ಉಚ್ಚ ನ್ಯಾಯಾಲಯದ ನಿರ್ದೇಶನವನ್ನು ಸರ್ಕಾರ ಜಾರಿಗೆ ತರಲಿದೆ. ಹಳೆಯ ಪದ್ಧತಿಯಂತೆಯೇ ಮೌಲ್ಯಮಾಪನ ನಡೆಯಲಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಕೇಂದ್ರದ ವಿರುದ್ಧ ಕಿಡಿ: ಐಟಿ ಮತ್ತು ಇಡಿ ದಾಳಿಗಳು ಕೇವಲ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ನಡೆಯುತ್ತಿವೆ. ಬಿಜೆಪಿಯವರ ಮೇಲೆ ಯಾವುದೇ ದಾಳಿಗಳು ನಡೆಯುತ್ತಿಲ್ಲ ಎಂದು ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಮನೆ ಮೇಲಿನ ಇಡಿ ದಾಳಿಯನ್ನು ಉಲ್ಲೇಖಿಸಿ ಟೀಕಿಸಿದರು.

ಮೂಢನಂಬಿಕೆ ಮತ್ತು ಚಾಮರಾಜನಗರ: “ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬ ಮೂಢನಂಬಿಕೆಯಲ್ಲಿ ನನಗೆ ನಂಬಿಕೆಯಿಲ್ಲ. ಇಲ್ಲಿಗೆ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ ಎಂಬುದು ನನ್ನ ಅನುಭವ,” ಎಂದು ಸಿಎಂ ಮಾರ್ಮಿಕವಾಗಿ ನುಡಿದರು.

ಕ್ಷೇತ್ರ ಮರು ವಿಂಗಡಣೆಗೆ ವಿರೋಧ: ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿಯ ಪರವಾಗಿದೆ, ಆದರೆ ಮೀಸಲಾತಿಯೊಂದಿಗೆ ಕ್ಷೇತ್ರ ಮರು ವಿಂಗಡನೆಯನ್ನು ಸೇರಿಸುತ್ತಿರುವುದಕ್ಕೆ ನಮ್ಮ ವಿರೋಧವಿದೆ ಎಂದು ಕೇಂದ್ರದ ನಡೆಯನ್ನು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಗಳು: ಆರಂಭದಲ್ಲಿ ಗ್ಯಾರಂಟಿಗಳನ್ನು ವಿರೋಧಿಸುತ್ತಿದ್ದವರಿಗೇ ಈಗ ಇದು ಬಡವರ ಕಾರ್ಯಕ್ರಮ ಎಂಬುದು ಅರ್ಥವಾಗಿದೆ. ಅದಕ್ಕಾಗಿಯೇ ಅವರೂ ಈಗ ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

ಇತರ ಪ್ರಮುಖ ಪ್ರತಿಕ್ರಿಯೆಗಳು:
ಸತ್ತವರಿಗೆ ಪರಿಹಾರ ನೀಡುವ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ ಎಂದು ಜೆಡಿಎಸ್ ಶಾಸಕ ಶರಣಗೌಡ ಅವರ ಪತ್ರಕ್ಕೆ ಉತ್ತರಿಸಿದ ಸಿಎಂ, ಆಮ್ಲಜನಕ ದುರಂತದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು. ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

The post ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ; ಪಾಲನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ. appeared first on Good News 24x7.

]]>
ಯೋಗೇಶ್‌ ಗೌಡ ಹ*ತ್ಯೆ ಪ್ರಕರಣದಲ್ಲಿ ಕೋರ್ಟ್‌ ಮಹತ್ವದ  ತೀರ್ಪು ನೀಡಿದೆ ! https://www.goodnews24x7.com/court-gives-important-verdict-in-yogesh-gowda-murder-case/ Wed, 15 Apr 2026 14:23:40 +0000 https://www.goodnews24x7.com/?p=9277 ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್‌ ಗೌಡರ ಕೊಲೆ ಪ್ರಕರಣದ ಆರೋಪಿ ಆದ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಅವರನ್ನು ಅಪರಾಧಿ ಎಂದು ಜನಪ್ರತಿನಿಧಿಗಳ ಸೆಷನ್ಸ್‌ ನ್ಯಾಯಾಲಯ ಘೋಷಿಸಿದ್ದು . ಶಿಕ್ಷೆಯ ಪ್ರಮಾಣವನ್ನು…

The post ಯೋಗೇಶ್‌ ಗೌಡ ಹ*ತ್ಯೆ ಪ್ರಕರಣದಲ್ಲಿ ಕೋರ್ಟ್‌ ಮಹತ್ವದ  ತೀರ್ಪು ನೀಡಿದೆ ! appeared first on Good News 24x7.

]]>

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್‌ ಗೌಡರ ಕೊಲೆ ಪ್ರಕರಣದ ಆರೋಪಿ ಆದ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಅವರನ್ನು ಅಪರಾಧಿ ಎಂದು ಜನಪ್ರತಿನಿಧಿಗಳ ಸೆಷನ್ಸ್‌ ನ್ಯಾಯಾಲಯ ಘೋಷಿಸಿದ್ದು . ಶಿಕ್ಷೆಯ ಪ್ರಮಾಣವನ್ನು ಕೋರ್ಟ್‌ ನಾಳೆ ಪ್ರಕಟಿಸಲಿದೆ.

ಯೋಗೇಶ್‌ಗೌಡ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಪಟ್ಟ ಏರಲು ವಿನಯ್ ಕುಲಕರ್ಣಿ ಕಾರಣವಾಗಿದ್ದರು. ಒಪ್ಪಂದದಂತೆ ಒಂದು ವರ್ಷದ ಬಳಿಕ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡಬೇಕಿತ್ತು. ಅದರೆ ಅಧಿಕಾರ ಹಸ್ತಾಂತರ ಮಾಡದ್ದು ವಿನಯ್‌ ಕುಲಕರ್ಣಿ ಸಿಟ್ಟಿಗೆ ಕಾರಣವಾಗಿತ್ತು.

ಹೆಬ್ಬಳ್ಳಿ ಜಿಲ್ಲಾ ಪಂಚಾಯತ್‌ ಸ್ಥಾನಕ್ಕೆ ಯೋಗೇಶ್ ಗೌಡ ನಿಂತಾಗ ಎಲೆಕ್ಷನ್ ನಡೆಯಬೇಕಿದ್ದ ದಿನವೇ ಅವರನ್ನು ಬಂಧಿಸಲಾಗಿತ್ತು. ಪಿಎಸ್‌ಐ ಮೇಲೆ ಹಲ್ಲೆ ಎಸಗಿದ ಆರೋಪದ ಅಡಿ ಅವರನ್ನು ಬಂಧಿಸಲಾಗಿತ್ತು. ಹೀಗಿದ್ದರೂ ಜೈಲಿನಲ್ಲಿದ್ದಾಗಲೇ ಜಿಲ್ಲಾ ಪಂಚಾಯತ್‌ ಚುನಾವಣೆ ಗೆದ್ದಿದ್ದರು. ಇದು ರಾಜಕೀಯ ದ್ವೇಷಕ್ಕೆ ಕಾರಣವಾಗಿತ್ತು.

ಚುನಾವಣೆಯಲ್ಲಿ ಗೆದ್ದು ಬಂದ ನಂತರ 2016ರ ಏಪ್ರಿಲ್‌ನಲ್ಲಿ ಜಿಲ್ಲಾ ಪಂಚಾಯತ್‌ ಸಭಾ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆಗಿದ್ದ ವಿನಯ ಕುಲಕರ್ಣಿ ಅವರ ಜೊತೆ ಮಾತಿನ ಚಕಮಕಿ ಕೂಡಾ ನಡೆದಿತ್ತು. ಇದು ವಿನಯ್ ಕುಲಕರ್ಣಿ ಅವರನ್ನು ಕೆರಳಿಸಿದ್ದರಿಂದ ಇವರ ನಡುವೆ ಮತ್ತಷ್ಟು ವೈಮನಸ್ಸಿಗೆ ಕಾರಣ ಆಗಿತ್ತು.

ಏಪ್ರಿಲ್ ಕಳೆದ ಬಳಿಕ ಜೂನ್‌ 15 ರಂದು ಯೋಗೇಶ್‌ ಗೌಡ ಧಾರವಾಡದ ಸಪ್ತಾಪೂರದ ಉದಯ್ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

ರಾಜಕೀಯ ದ್ವೇಷದಿಂದಲೇ ಕೊಲೆ ನಡೆದಿದೆ ಎಂದು ಬಿಜೆಪಿ ಆರೋಪಗಳ ಸುರಿಮಳೆಗೈದಿತ್ತು. ಪೊಲೀಸರು ಕೂಡ ಎಫ್‌ಐಆರ್‌ನಲ್ಲಿ ಜಮೀನು ವಿವಾದದಿಂದಲೇ ಕೊಲೆ ನಡೆದಿದೆ ಎಂದು ದಾಖಲಿಸಿದ್ದರು.

2019ರಲ್ಲಿ ಬಿಎಸ್‌ವೈ ಸರ್ಕಾರ ರಚನೆಯಾದ ನಂತರ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿತ್ತು. ತನಿಖೆ ಆರಂಭಿಸಿದ  ಸಿಬಿಐ ವಿನಯ್ ಕುಲಕರ್ಣಿ ಅವರನ್ನು 15ನೇ ಆರೋಪಿಯನ್ನಾಗಿ ಮಾಡಿತ್ತು.

ಕೊಲೆಯ ಸಾಕ್ಷಿ ನಾಶ ಮಾಡಲು ವಿನಯ ಕುಲಕರ್ಣಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದರು ಎಂದು ಸಿಬಿಐ ತನಿಖೆಯಲ್ಲಿ ಹೇಳಿತ್ತು. ಈ ಕಾರಣಕ್ಕೆ ವಿನಯ್‌ ಕುಲಕರ್ಣಿ ಅವರನ್ನು 2020ರಲ್ಲಿ ಸಿಬಿಐ ಬಂಧನ ಮಾಡಿತ್ತು. ಅಲ್ಲದೇ ಪೊಲೀಸ್ ಎಫ್‌ಐಆರ್‌ನಲ್ಲಿ ಇರುವ ಆರೋಪಿಗಳು ಕೊಲೆ ಮಾಡಿಲ್ಲ ಎನ್ನುವ ವಿಚಾರವನ್ನು ಜಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿತ್ತು.

ಇದೀಗ ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ ಎಂದು ಕೋರ್ಟ್‌ ಮಹತ್ವದ  ತೀರ್ಪು ನೀಡಿದೆ.

The post ಯೋಗೇಶ್‌ ಗೌಡ ಹ*ತ್ಯೆ ಪ್ರಕರಣದಲ್ಲಿ ಕೋರ್ಟ್‌ ಮಹತ್ವದ  ತೀರ್ಪು ನೀಡಿದೆ ! appeared first on Good News 24x7.

]]>
ವಿಷ ಕೊಡಿ ಎಂದ ದರ್ಶನ್​ ಬಿಗ್ ರಿಲೀಫ್ ನೀಡಿದ ಕೋರ್ಟ್ https://www.goodnews24x7.com/court-gives-big-relief-to-darshan-who-asked-to-give-him-poison/ Tue, 09 Sep 2025 12:01:13 +0000 https://www.goodnews24x7.com/?p=7424 ನಟ ದರ್ಶನ್​​ಗೆ ಬೆಂಗಳೂರು ಸೆಷನ್ಸ್ ಕೋರ್ಟ ಬಿಗ್ ರಿಲೀಫ್ ನೀಡಿದೆ. ದರ್ಶನ್​ರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂಬ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ಅಲ್ಲದೆ, ಅಲ್ಲದೆ, ದರ್ಶನ್​ಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿದೆ. ಇದರೊಂದಿಗೆ ದರ್ಶನ್​ಗೆ ಬಿಗ್ ರಿಲೀಫ್ ದೊರೆತಂತಾಗಿದೆ.…

The post ವಿಷ ಕೊಡಿ ಎಂದ ದರ್ಶನ್​ ಬಿಗ್ ರಿಲೀಫ್ ನೀಡಿದ ಕೋರ್ಟ್ appeared first on Good News 24x7.

]]>

ನಟ ದರ್ಶನ್​​ಗೆ ಬೆಂಗಳೂರು ಸೆಷನ್ಸ್ ಕೋರ್ಟ ಬಿಗ್ ರಿಲೀಫ್ ನೀಡಿದೆ. ದರ್ಶನ್​ರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂಬ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ಅಲ್ಲದೆ, ಅಲ್ಲದೆ, ದರ್ಶನ್​ಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿದೆ. ಇದರೊಂದಿಗೆ ದರ್ಶನ್​ಗೆ ಬಿಗ್ ರಿಲೀಫ್ ದೊರೆತಂತಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್​ (Darshan) ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಕೋರ್ಟ್ ನಿರಾಕರಿಸಿದೆ. ಅಲ್ಲದೆ, ಅವರ ಕೆಲವು ಬೇಡಿಕೆಗಳನ್ನು ಈಡೇರಿಸಲು ಸಮ್ಮತಿಸಿದ್ದು, ಬಿಗ್ ರಿಲೀಫ್ ದೊರೆತಂತಾಗಿದೆ. A2 ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಸಕಾರಣಗಳಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೆ, ಕೊಲೆ ಆರೋಪಿ ದರ್ಶನ್​ಗೆ ಜೈಲಿನ ಆವರಣದಲ್ಲಿ ಓಡಾಡಲು ಅನುಮತಿ ಕೊಟ್ಟಿದೆ.
ದರ್ಶನ್ ಮನವಿಗೆ ಸ್ಪಂದಿಸಿದ ಕೋರ್ಟ್ ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ದರ್ಶನ್ ಮಾಡಿದ್ದ ಮನವಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಪುರಸ್ಕರಿಸಿದೆ. ದರ್ಶನ್​ಗೆ ಹೆಚ್ಚುವರಿ ಹಾಸಿಗೆ ಮತ್ತು ದಿಂಬು ನೀಡಲು ಅನುಮತಿ ನೀಡಿದೆ. ಆದರೆ, ಜೈಲಿನ ಕೈಪಿಡಿ ಅನುಸರಿಸಬೇಕು ಎಂದು ನ್ಯಾಯಾಲಯ ಸೂಚನೆ ನೀಡಿದೆ. ಜೈಲು ನಿಯಮ ಉಲ್ಲಂಘಿಸಿದರೆ ಜೈಲು ಐಜಿಯಿಂದ ಕ್ರಮ ಜರುಗಿಸಬೇಕು. ನಿಯಮ ಉಲ್ಲಂಘಿಸಿದ್ದೇ ಆದಲ್ಲಿ ಬೇರೆ ಜೈಲಿಗೆ ಸ್ಥಳಾಂತರಿಸಲು ಐಜಿ ಕ್ರಮ ಕೈಗೊಳ್ಳಬಹುದು ಎಂದೂ ಆದೇಶದಲ್ಲಿ ನ್ಯಾಯಾಲಯ ತಿಳಿಸಿದೆ.

ವಿಷ ಕೊಡಿ ಎಂದಿದ್ದ ದರ್ಶನ್: ತೀರ್ಪಿಗೂ ಮುನ್ನ ವಿಚಾರಣೆ ವೇಳೆ ಜಡ್ಜ್ ಬಳಿ ಮನವಿ ಮಾಡಿದ್ದ ದರ್ಶನ್, ‘ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ, ನನಗೆ ಮಾತ್ರ ವಿಷ ನೀಡಲಿ. ಕೋರ್ಟ್​​ನಿಂದಲೇ ಈ ಆದೇಶ ನೀಡಬೇಕು’ ಎಂದು ಮನವಿ ಮಾಡಿದ್ದರು. ಆಗ ಜಡ್ಜ್ ‘ನೀವು ಹಾಗೆಲ್ಲಾ ಹೇಳುವಂತಿಲ್ಲ’ ಎಂದಿದ್ದರು.

ವಿಷ ಕೊಡಿ ಎಂದಿದ್ದೇಕೆ ದರ್ಶನ್? ಸುಪ್ರೀಂ ಕೋರ್ಟ್​ ಖಡಕ್ ಸೂಚನೆಯ ನಂತರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊದಲಿನಂತೆ ವಿಐಪಿ ಸೌಲಭ್ಯ ಸಿಗುತ್ತಿರಲಿಲ್ಲ. ರಾಜಾತಿಥ್ಯ ಸಿಗುತ್ತಿರಲಿಲ್ಲ. ಜೈಲಿನಲ್ಲಿ ಓರ್ವ ಸಾಮಾನ್ಯ ಖೈದಿಯಂತೆ ಪರಿಗಣಿಸಲಾಗುತ್ತಿತ್ತು. ಜೈಲಿನ ಖೈದಿಗಳ ಕೊಠಡಿಯಿಂದಲೂ ಹೊರಗೆ ಬರಲಾಗುತ್ತಿರಲಿಲ್ಲ. ಇದರಿಂದ ನರಕಯಾತನೆ ಅನುಭವಿಸುತ್ತಿರುವ ದರ್ಶನ್ ವಿಷ ಕೊಡಿ ಎಂದು ಮನವಿ ಮಾಡಿದ್ದರು. ಇದೀಗ ಕೋರ್ಟ್ ಸಹ ದರ್ಶನ್ ಬಗ್ಗೆ ತುಸು ಕನಿಕರ ತೋರಿದ್ದು, ಹಾಸಿಗೆ ದಿಂಬು ಹಾಗೂ ಜೈಲಿನಲ್ಲಿ ಓಡಾಡಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಇದರಿಂದ ದರ್ಶನ್​ಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.

The post ವಿಷ ಕೊಡಿ ಎಂದ ದರ್ಶನ್​ ಬಿಗ್ ರಿಲೀಫ್ ನೀಡಿದ ಕೋರ್ಟ್ appeared first on Good News 24x7.

]]>
ದಾಸನಿಗಿಲ್ಲ ಜೈಲಿನಲ್ಲಿ ರಾಜಾತಿಥ್ಯ.. ದರ್ಶನ್​ಗೆ ಬೆಡ್​ಶೀಟ್, ಹಾಸಿಗೆ ನೀಡಲು ಹಿಂದೇಟು https://www.goodnews24x7.com/dasani-does-not-have-royal-hospitality-in-jail-darshan-is-hesitant-to-provide-bedsheets-and-bedding/ Sat, 06 Sep 2025 07:53:22 +0000 https://www.goodnews24x7.com/?p=7415 ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರೋ ನಟ ದರ್ಶನ್​​​ ಬಳ್ಳಾರಿ ಜೈಲು ಭವಿಷ್ಯ ಸೆಪ್ಟೆಂಬರ್ 9ಕ್ಕೆ ನಿರ್ಧಾರ ಆಗಲಿದೆ. ಈ ಮಧ್ಯೆ ದಾಸನಿಗೆ ಜೈಲಿನ ಅಸಲಿ ದರ್ಶನ ಆಗ್ತಿದ್ದು ಹೆಚ್ಚುವರಿ ಸೌಲಭ್ಯ ಕೊಡಲು ಜೈಲಾಧಿಕಾರಿಗಳೇ ಹಿಂದೇಟು ಹಾಕ್ತಿದ್ದಾರೆ. ಯಾಕೆ ಗೊತ್ತಾ? ಚಿತ್ರದುರ್ಗದ ರೇಣುಕಾಸ್ವಾಮಿ…

The post ದಾಸನಿಗಿಲ್ಲ ಜೈಲಿನಲ್ಲಿ ರಾಜಾತಿಥ್ಯ.. ದರ್ಶನ್​ಗೆ ಬೆಡ್​ಶೀಟ್, ಹಾಸಿಗೆ ನೀಡಲು ಹಿಂದೇಟು appeared first on Good News 24x7.

]]>

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರೋ ನಟ ದರ್ಶನ್​​​ ಬಳ್ಳಾರಿ ಜೈಲು ಭವಿಷ್ಯ ಸೆಪ್ಟೆಂಬರ್ 9ಕ್ಕೆ ನಿರ್ಧಾರ ಆಗಲಿದೆ. ಈ ಮಧ್ಯೆ ದಾಸನಿಗೆ ಜೈಲಿನ ಅಸಲಿ ದರ್ಶನ ಆಗ್ತಿದ್ದು ಹೆಚ್ಚುವರಿ ಸೌಲಭ್ಯ ಕೊಡಲು ಜೈಲಾಧಿಕಾರಿಗಳೇ ಹಿಂದೇಟು ಹಾಕ್ತಿದ್ದಾರೆ. ಯಾಕೆ ಗೊತ್ತಾ? ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ನಟ ದರ್ಶನ್​​ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲುವಾಸ ಅನುಭವಿಸ್ತಿದ್ದಾರೆ.. ಕೆಲ ದಿನಗಳಲ್ಲೇ ಟ್ರಯಲ್ ಕೋರ್ಟ್​ನಲ್ಲಿ ವಿಚಾರಣೆ ಆರಂಭ ಆಗಲಿದ್ದು ಬಳ್ಳಾರಿಗೆ ಶಿಫ್ಟ್ ಆಗ್ತಾರಾ ಅಥವಾ ಇಲ್ವಾ

ನಟ ದರ್ಶನ್​ಗೆಗೆ ಪರಪ್ಪನ ಅಗ್ರಹಾರ ಜೈಲು ನರಕವಾಗಿ ಪರಿಣಮಿಸಿದೆ. ಹೀಗಾಗಿ ಹಾಸಿಗೆ, ದಿಂಬು ಹಾಗೂ ಮನೆ ಊಟಕ್ಕೆ ಅನುಮತಿ ಕೋರಿ ನ್ಯಾಯಾಲಯದಲ್ಲಿ ವಿಚಾರಣೆ ನಡೀತಿದ್ದು ಇನ್ನಷ್ಟೇ ತೀರ್ಮಾನ ಆಗ್ಬೇಕಿದೆ.. ಈ ನಡುವೆ ನಟ ದರ್ಶನ್​ಗೆ ರಾಜಾತಿಥ್ಯ ಸಿಗುತ್ತಾ, ಇಲ್ವಾ ಅನುಮಾನ ಮೂಡಿಸಿದೆ.. ಈ ಹಿಂದೆಯೂ ಜೈಲಿನ ನಿಯಮದ ಪ್ರಕಾರ ಸೌಕರ್ಯ ನೀಡಿದ್ರೂ ಕೈದಿಗಳು ಅದನ್ನು ದುರುಪಯೋಗ ಪಡಿಸಿಕೊಂಡಿದ್ದರು. ಮತ್ತೊಂದೆಡೆ ದರ್ಶನ್​ಗೆ ಸೌಲಭ್ಯ ನೀಡಿದ್ದಕ್ಕೆ ಗರಂ ಆಗಿದ್ದ ಸುಪ್ರೀಂಕೋರ್ಟ್ ಅಧಿಕಾರಿಗಳಿಗೆ ಅಮಾನತಿಗೆ ಎಚ್ಚರಿಕೆ ಕೂಡ ನೀಡಿತ್ತು.. ಹೀಗಾಗಿ ನಟ ದರ್ಶನ್​ಗೆ ಜೈಲಾಧಿಕಾರಿಗಳು ಸೌಕರ್ಯ ಕೊಡಲು ಹಿಂದೇಟು ಹಾಕ್ತಿದ್ದಾರೆ.

ದಾಸನಿಗಿಲ್ಲ ರಾಜಾತಿಥ್ಯ!

ದಪ್ಪನೆ ಹಾಸಿಗೆಗಳಲ್ಲಿ ಮೊಬೈಲ್, ಸಿಮ್ ಕಾರ್ಡ್ ಇಡುವ ಸಾಧ್ಯತೆ
ಈ ಹಿಂದೆ ಹಲವರ ಬಳಿ ಮೊಬೈಲ್ ಸಿಮ್ ಪತ್ತೆ ಹಚ್ಚಿ ಪೊಲೀಸರು
ಜೈಲಿನ ಮೇಲೆ ಸಿಸಿಬಿ ದಾಳಿಯ ವೇಳೆಯೂ ಮೊಬೈಲ್​ಗಳು ಪತ್ತೆ
ಹಾಸಿಗೆ, ದಿಂಬುಗಳಲ್ಲಿ ಮೊಬೈಲ್​ಗಳನ್ನು ಅಡಗಿಸಿಡುವ ಆತಂಕ
ಹಳೆಯ ಘಟನೆಗಳಿಂದ ಆರೋಪಿ ದರ್ಶನ್ ಮೇಲೂ ಪರಿಣಾಮ
ಅಲ್ಲದೇ ರಾಜಾತಿಥ್ಯ ವಿಚಾರವಾಗಿ ಸುಪ್ರೀಂಕೋರ್ಟ್ ತರಾಟೆ
ಸೆಲೆಬ್ರಿಟಿ ಅಂತಾ ವಿಶೇಷ ಫೆಸಿಲಿಟಿ ಕೊಡಬಾರದು ಅಂತ ಆದೇಶ
ಅಂತಹ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ
ಆದೇಶದ ಮಧ್ಯೆಯೂ ವ್ಯವಸ್ಥೆ ಮಾಡಿದ್ರೆ ಕುತ್ತು ಬರುವ ಆತಂಕ
ದರ್ಶನ್​ಗೆ ಸವಲತ್ತು ಕೊಟ್ರೆ ಉಳಿದ ಕೈದಿಗಳು ಕೇಳುವ ಸಾಧ್ಯತೆ
ಇದೇ ಕಾರಣ ದರ್ಶನ್​ಗೆ ಬೆಡ್​ಶೀಟ್, ಹಾಸಿಗೆ ನೀಡಲು ಹಿಂದೇಟು

ಒಂದ್ಕಡೆ ಸುಪ್ರೀಂ ಕೋರ್ಟ್ ಭಯ.. ಮತ್ತೊಂದೆಡೆ ಉಳಿದ ಕೈದಿಗಳು ಸೌಲಭ್ಯ ಕೇಳುವ ಪರಿಸ್ಥಿತಿ ಇದೆ, ಬೆನ್ನುನೋವು ಸೇರಿ ಇತರೆ ಆರೋಗ್ಯ ಸಮಸ್ಯೆಗಳಿದ್ದು ಹಾಸಿಗೆ, ತಲೆದಿಂಬು ಇಲ್ಲದೆ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ. ಜೈಲೂಟ ಕೂಡ ದೇಹಕ್ಕೆ ಒಗ್ಗದೆ ಅನಾರೋಗ್ಯಕ್ಕೆ ಒಳಗಾಗುತ್ತಿದ್ದೇನೆ. ಹೀಗಾಗಿ ಕನಿಷ್ಠ ಸೌಲಭ್ಯ ನೀಡ್ಬೇಕು ಅಂತ ದರ್ಶನ್ ಮನವಿ ಮಾಡಿದ್ದಾರೆ.. ಸದ್ಯ ಸೆಪ್ಟೆಂಬರ್ 9ಕ್ಕೆ ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಾರಾ ಅಥವಾ ಇಲ್ವಾ ಅನ್ನೋ ತೀರ್ಪು ಹೊರಬೀಳಲಿದೆ.. ಆವತ್ತೇ ಜೈಲಲ್ಲಿ ಸವಲತ್ತು ನೀಡುವ ಕುರಿತು ಕೋರ್ಟ್​ ತೀರ್ಪು ನೀಡುವ ಸಾಧ್ಯತೆ ಇದೆ, ಅದೇನೇ ಇರಲಿ, ಬಣ್ಣದ ಲೋಕದಲ್ಲಿ ಕೋಟ್ಯಂತರ ಅಭಿಮಾನಿಗಳ ದಾಸನ ಪರಿಸ್ಥಿತಿ ಮಾತ್ರ​​​ ಮಾಡಿದ್ದುಣ್ಣೋ ಮಹರಾಯ ಎನ್ನುವಂತಾಗಿದೆ.

The post ದಾಸನಿಗಿಲ್ಲ ಜೈಲಿನಲ್ಲಿ ರಾಜಾತಿಥ್ಯ.. ದರ್ಶನ್​ಗೆ ಬೆಡ್​ಶೀಟ್, ಹಾಸಿಗೆ ನೀಡಲು ಹಿಂದೇಟು appeared first on Good News 24x7.

]]>
ಟ್ರಂಪ್‌ ಸುಂಕ ನಿರ್ಧಾರಕ್ಕೆ ಯುಎಸ್‌ ಕೋರ್ಟ್‌ ಛೀಮಾರಿ ! https://www.goodnews24x7.com/us-court-rebukes-trumps-tariff-decision/ Sat, 30 Aug 2025 07:44:06 +0000 https://www.goodnews24x7.com/?p=7006 ಭಾರತ ಸೇರಿ ಹಲವು ದೇಶಗಳ ಮೇಲೆ ಮಿತಿ ಮೀರಿದ ಟ್ಯಾರಿಫ್ ಹೇರಿರುವ ಟ್ರಂಪ್ . ಆಮದು ಸುಂಕ ಕಾನೂನು ಬಾಹಿರ ಎಂದು ಯುಎಸ್‌ ಕೋರ್ಟ್‌ ಹೇಳಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಿರ್ಧಾರಕ್ಕೆ ಕೋರ್ಟ್‌ ಛೀಮಾರಿ ಹಾಕಿದೆ. ಟ್ರಂಪ್‌ ನಿರ್ಧಾರಕ್ಕೆ ವಾಷಿಂಗ್ಟನ್‌ನ…

The post ಟ್ರಂಪ್‌ ಸುಂಕ ನಿರ್ಧಾರಕ್ಕೆ ಯುಎಸ್‌ ಕೋರ್ಟ್‌ ಛೀಮಾರಿ ! appeared first on Good News 24x7.

]]>

ಭಾರತ ಸೇರಿ ಹಲವು ದೇಶಗಳ ಮೇಲೆ ಮಿತಿ ಮೀರಿದ ಟ್ಯಾರಿಫ್ ಹೇರಿರುವ ಟ್ರಂಪ್ . ಆಮದು ಸುಂಕ ಕಾನೂನು ಬಾಹಿರ ಎಂದು ಯುಎಸ್‌ ಕೋರ್ಟ್‌ ಹೇಳಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಿರ್ಧಾರಕ್ಕೆ ಕೋರ್ಟ್‌ ಛೀಮಾರಿ ಹಾಕಿದೆ.

ಟ್ರಂಪ್‌ ನಿರ್ಧಾರಕ್ಕೆ ವಾಷಿಂಗ್ಟನ್‌ನ ಫೆಡರಲ್ ಮೇಲ್ಮನವಿ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ. ಕೆಳ ನ್ಯಾಯಾಲಯದ ತೀರ್ಪನ್ನು ನ್ಯಾಯಾಲಯವು ಅನುಮೋದಿಸಿದ್ದು, ಟ್ರಂಪ್ ವಿಧಿಸಿರುವ ಹೆಚ್ಚಿನ ಆಮದು ಸುಂಕಗಳು ಕಾನೂನುಬಾಹಿರ ಎಂದು ಹೇಳಿದೆ. ಈ ಸಂದರ್ಭದಲ್ಲಿ ಈ ಅಧಿಕಾರವನ್ನು ಬಳಸಲು ಅಧ್ಯಕ್ಷರ ಅಧಿಕಾರವನ್ನು ನ್ಯಾಯಾಲಯವು ಪ್ರಶ್ನಿಸಿದೆ.

ಫೆಡರಲ್ ಮೇಲ್ಮನವಿ ನ್ಯಾಯಾಲಯವು ಅಮೆರಿಕ ಅಧ್ಯಕ್ಷರು ತುರ್ತು ಅಧಿಕಾರಗಳ ದುರುಪಯೋಗದ ಬಗ್ಗೆ ಮಾತನಾಡಿದೆ. 11 ನ್ಯಾಯಾಧೀಶರ ಪೀಠದಲ್ಲಿ, 7 ನ್ಯಾಯಾಧೀಶರು ಟ್ರಂಪ್ ಅವರ ಸುಂಕ ವಿಧಿಸುವ ನಿರ್ಧಾರವನ್ನು ಕಾನೂನುಬಾಹಿರವೆಂದು ಘೋಷಿಸಿದರೆ, 4 ನ್ಯಾಯಾಧೀಶರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಆದೇಶ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಶ್ವೇತ ಭವನ ನಿರ್ಧರಿಸಿದೆ.

ಇತರೆ ದೇಶಗಳ ಮೇಲೆ ವಿಧಿಸಿರುವ ಎಲ್ಲಾ ಸುಂಕಗಳು ಜಾರಿಯಲ್ಲಿರುತ್ತವೆ. ಒಂದು ವೇಳೆ ಟ್ಯಾರಿಫ್‌ ತೆಗೆದುಹಾಕಿದರೆ, ದೇಶಕ್ಕೆ ಹಾನಿಕಾರಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪುನರುಚ್ಚರಿಸಿದ್ದಾರೆ. ‌ಟ್ರಂಪ್ ಅವರ ಹಲವು ಸುಂಕಗಳು ಕಾನೂನುಬಾಹಿರ ಎಂದು ಯುಎಸ್ ನ್ಯಾಯಾಲಯ ತೀರ್ಪು ನೀಡಿದ ಬೆನ್ನಲ್ಲೇ ಟ್ರಂಪ್‌ ಪ್ರತಿಕ್ರಿಯಿಸಿದ್ದಾರೆ.

ಎಲ್ಲಾ ಸುಂಕಗಳು ಇನ್ನೂ ಜಾರಿಯಲ್ಲಿವೆ. ಇಂದು ಅತ್ಯಂತ ಪಕ್ಷಪಾತದ ಮೇಲ್ಮನವಿಗೆ ನ್ಯಾಯಾಲಯವು ನಮ್ಮ ಸುಂಕಗಳನ್ನು ತೆಗೆದುಹಾಕಬೇಕು ಎಂದು ತಪ್ಪಾಗಿ ಹೇಳಿದೆ. ಆದರೆ, ಕೊನೆಯಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ ಗೆಲ್ಲುತ್ತದೆ ಎಂದು ಅವರಿಗೆ ತಿಳಿದಿದೆ. ಈ ಸುಂಕಗಳು ಎಂದಾದರೂ ರದ್ದಾದರೆ, ಅದು ದೇಶಕ್ಕೆ ವಿಪತ್ತು. ಅದು ನಮ್ಮನ್ನು ಆರ್ಥಿಕವಾಗಿ ದುರ್ಬಲಗೊಳಿಸುತ್ತದೆ. ನಾವು ಬಲಿಪಶು ಆಗಬೇಕಾಗುತ್ತದೆ ಎಂದು ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ನಮ್ಮ ತಯಾರಕರು, ರೈತರು ಮತ್ತು ಎಲ್ಲರನ್ನೂ ದುರ್ಬಲಗೊಳಿಸುವ ಅನ್ಯಾಯದ ಸುಂಕಗಳನ್ನು ನಾವು ಒಪ್ಪಲ್ಲ. ಇತರ ದೇಶಗಳು, ಅವರು ಮಿತ್ರರಾಗಿರಲಿ ಅಥವಾ ವೈರಿಯಾಗಿರಲಿ ವಿಧಿಸುವ ಸುಂಕೇತರ ವ್ಯಾಪಾರ ಅಡೆತಡೆಗಳನ್ನು ಅಮೆರಿಕ ಇನ್ಮುಂದೆ ಸಹಿಸುವುದಿಲ್ಲ. ಒಂದು ವೇಳೆ ಈ ನಿರ್ಧಾರವನ್ನು (ಟ್ಯಾರಿಫ್) ತಡೆಯಲು ಮುಂದಾದರೆ, ಅಕ್ಷರಶಃ ಅಮೆರಿಕ ಸಂಯುಕ್ತ ಸಂಸ್ಥಾನವನ್ನು ನಾಶಪಡಿಸಿದಂತೆ ಎಂದು ಟ್ರಂಪ್‌ ಹೇಳಿದ್ದಾರೆ.

ಸುಂಕಗಳು ಕಾರ್ಮಿಕರಿಗೆ ಸಹಾಯ ಮಾಡಲು ಮತ್ತು ‘ಮೇಡ್ ಇನ್ ಅಮೆರಿಕ’ ಉತ್ಪನ್ನಗಳನ್ನು ಉತ್ಪಾದಿಸುವ ಕಂಪನಿಗಳನ್ನು ಬೆಂಬಲಿಸಲು ಅತ್ಯುತ್ತಮ ಸಾಧನವಾಗಿದೆ ಎಂದು ಟ್ರಂಪ್‌ ನಿಲುವು.

ಹಲವು ವರ್ಷಗಳಿಂದ ಕಾಳಜಿಯಿಲ್ಲದ ಮತ್ತು ಅವಿವೇಕದ ರಾಜಕಾರಣಿಗಳು ಸುಂಕಗಳನ್ನು ನಮ್ಮ ವಿರುದ್ಧವೇ ಬಳಸಲು ಅನುಮತಿಸಿದ್ದರು. ಈಗ ಯುನೈಟೆಡ್ ಸ್ಟೇಟ್ಸ್ ಸುಪ್ರೀಂ ಕೋರ್ಟ್ ಸಹಾಯದಿಂದ, ಅವುಗಳನ್ನು ನಮ್ಮ ರಾಷ್ಟ್ರದ ಪ್ರಯೋಜನಕ್ಕಾಗಿ ಬಳಸುತ್ತೇವೆ. ಅಮೆರಿಕವನ್ನು ಮತ್ತೆ ಶ್ರೀಮಂತ, ಬಲಿಷ್ಠ ಮತ್ತು ಶಕ್ತಿಶಾಲಿಯನ್ನಾಗಿ ಮಾಡುತ್ತೇವೆ ಎಂದು ಟ್ರಂಪ್‌ ಪ್ರತಿಜ್ಞೆ ಮಾಡಿದ್ದಾರೆ.

The post ಟ್ರಂಪ್‌ ಸುಂಕ ನಿರ್ಧಾರಕ್ಕೆ ಯುಎಸ್‌ ಕೋರ್ಟ್‌ ಛೀಮಾರಿ ! appeared first on Good News 24x7.

]]>
ಕೆಲ ಹೊತ್ತಲ್ಲೇ ಮಾಸ್ಕ್‌ಮ್ಯಾನ್ ಬಂಧನ ಕೋರ್ಟ್​ಗೆ ಹಾಜರು. https://www.goodnews24x7.com/maskman-arrested-and-produced-in-court-shortly/ Sat, 23 Aug 2025 08:28:00 +0000 https://www.goodnews24x7.com/?p=6538 ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಮಾಸ್ಕ್‌ಮ್ಯಾನ್ ಚಿನ್ನಯ್ಯ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಸಾಕ್ಷಿಯಾಗಿ ಕಾಣಿಸಿಕೊಂಡಿದ್ದ ಅನಾಮಿಕ ಮಾಸ್ಕ್​ಮ್ಯಾನ್​​ನನ್ನು ಇದೀಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಪೊಲೀಸರು ನಿನ್ನೆ ಸುಮಾರು 19 ಗಂಟೆಗಳ ಕಾಲ ಆತನನ್ನು ವಿಚಾರಣೆ…

The post ಕೆಲ ಹೊತ್ತಲ್ಲೇ ಮಾಸ್ಕ್‌ಮ್ಯಾನ್ ಬಂಧನ ಕೋರ್ಟ್​ಗೆ ಹಾಜರು. appeared first on Good News 24x7.

]]>

ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಮಾಸ್ಕ್‌ಮ್ಯಾನ್ ಚಿನ್ನಯ್ಯ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಸಾಕ್ಷಿಯಾಗಿ ಕಾಣಿಸಿಕೊಂಡಿದ್ದ ಅನಾಮಿಕ ಮಾಸ್ಕ್​ಮ್ಯಾನ್​​ನನ್ನು ಇದೀಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಪೊಲೀಸರು ನಿನ್ನೆ ಸುಮಾರು 19 ಗಂಟೆಗಳ ಕಾಲ ಆತನನ್ನು ವಿಚಾರಣೆ ಮಾಡಲಾಗಿತ್ತು. ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

The post ಕೆಲ ಹೊತ್ತಲ್ಲೇ ಮಾಸ್ಕ್‌ಮ್ಯಾನ್ ಬಂಧನ ಕೋರ್ಟ್​ಗೆ ಹಾಜರು. appeared first on Good News 24x7.

]]>
ಬಾಲಿವುಡ್‌ ನಟ ಗೋವಿಂದ ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ https://www.goodnews24x7.com/bollywood-actor-govinda-files-for-divorce-from-wife/ Sat, 23 Aug 2025 06:34:57 +0000 https://www.goodnews24x7.com/?p=6508 ಬಾಲಿವುಡ್‌ ಹಿರಿಯ ನಟ ಗೋವಿಂದ ಅವರ ಸಂಸಾರದಲ್ಲಿ ಬಿರುಕು ಮೂಡಿದೆ. ಗೋವಿಂದ ಅವರ ಪತ್ನಿ ಸುನೀತಾ ಅಹುಜಾಅವರು ಬಾಂದ್ರಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿ ಮತ್ತು ವಿವಾಹದಲ್ಲಿ ಮೋಸ ಹಾಗೂ ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ ಅಂತ ಕಾರಣ ಕೊಟ್ಟು ಸುನೀತಾ…

The post ಬಾಲಿವುಡ್‌ ನಟ ಗೋವಿಂದ ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ appeared first on Good News 24x7.

]]>

ಬಾಲಿವುಡ್‌ ಹಿರಿಯ ನಟ ಗೋವಿಂದ ಅವರ ಸಂಸಾರದಲ್ಲಿ ಬಿರುಕು ಮೂಡಿದೆ. ಗೋವಿಂದ ಅವರ ಪತ್ನಿ ಸುನೀತಾ ಅಹುಜಾಅವರು ಬಾಂದ್ರಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಪ್ರೀತಿ ಮತ್ತು ವಿವಾಹದಲ್ಲಿ ಮೋಸ ಹಾಗೂ ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ ಅಂತ ಕಾರಣ ಕೊಟ್ಟು ಸುನೀತಾ ಅವರು ವಿಚ್ಛೇದನ ಕೋರಿದ್ದಾರೆ. ಹಿಂದೂ ವಿವಾಹ ಕಾಯ್ದೆ 1955ರ ಸೆಕ್ಷನ್ 13 (1), (i), (ia), (ib) ಅಡಿಯಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ
ಬಾಲಿವುಡ್‌ ಹಿರಿಯ ನಟ ಗೋವಿಂದ ಅವರ ಸಂಸಾರದಲ್ಲಿ ಬಿರುಕು ಮೂಡಿದೆ. ಗೋವಿಂದ ಅವರ ಪತ್ನಿ ಸುನೀತಾ ಅಹುಜಾಅವರು ಬಾಂದ್ರಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಈ ಹಿಂದೆಯೇ ಅಹುಜಾ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದುಬಂದಿತ್ತು. ಮೇ 25ರಂದು ನ್ಯಾಯಾಲಯವು ಗೋವಿಂದ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಜೂನ್‌ನಿಂದ ಇಬ್ಬರೂ ವಿಚ್ಛೇದನ ಕುರಿತಂತೆ ಸಮಸ್ಯೆ ಬಗೆಹರಿಸಿಕೊಳ್ಳಲು ಪ್ರಯತ್ನಿಸಿದ್ದರು ಎನ್ನಲಾಗಿದೆ. ಆದರೆ, ವಿಚಾರಣೆ ಸಮಯದಲ್ಲಿ ಗೋವಿಂದ ಅವರು ಹಾಜರಾಗುತ್ತಿರಲಿಲ್ಲ. ಸುನೀತಾ ಅವರು ಹಾಜರಾಗುತ್ತಿದ್ದರು. ಇಬ್ಬರೂ ಮತ್ತೆ ಒಂದಾಗುತ್ತಿದ್ದಾರೆ ಎಂದೇ ಹೇಳಲಾಗಿತ್ತು.

ಈ ಜೋಡಿ 37 ವರ್ಷಗಳ ದಾಂಪತ್ಯವನ್ನು ಕೊನೆಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಸುನೀತಾ ತಮ್ಮ ಯೂಟ್ಯೂಬ್ ವ್ಲಾಗ್‌ನಲ್ಲಿ ವಿಚ್ಛೇದನದ ಬಗ್ಗೆ ಮಾತನಾಡಿದ ಕೆಲವು ವಾರಗಳ ನಂತರ ಈ ವರದಿ ಬಂದಿದೆ. ಸುನೀತಾ ಬಾಂದ್ರಾ ಅವರು ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ

The post ಬಾಲಿವುಡ್‌ ನಟ ಗೋವಿಂದ ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ appeared first on Good News 24x7.

]]>
ದಾಸನಿಗೆ ಜೈಲೂಟ ಫಿಕ್ಸ್ ! ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್.. https://www.goodnews24x7.com/jailbreak-fix-for-das-supreme-court-cancels-darshans-bail/ Thu, 14 Aug 2025 05:38:18 +0000 https://www.goodnews24x7.com/?p=6081 ಕಳೆದ ವರ್ಷ ಜೂನ್​ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಈಗ ಅವರು…

The post ದಾಸನಿಗೆ ಜೈಲೂಟ ಫಿಕ್ಸ್ ! ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್.. appeared first on Good News 24x7.

]]>

ಕಳೆದ ವರ್ಷ ಜೂನ್​ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಈಗ ಅವರು ಮತ್ತೆ ಜೈಲು ಸೇರಬೇಕಿದೆ.

ನಟ ದರ್ಶನ್​ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬಾನೇ ಪ್ರಭಾವ ಬೀರಲಿದೆ.

‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ‘ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್​ನನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಕೊರ್ಟ್ ಅಭಿಪ್ರಾಯಪಟ್ಟಿದೆ. ಈ ತೀರ್ಪು ಲ್ಯಾಂಡ್ ಮಾರ್ಕ್ ತೀರ್ಪೆಂದ ಸುಪ್ರೀಂಕೋರ್ಟ್ ಹೇಳಿದೆ.

ಡಿಸೆಂಬರ್​ನಲ್ಲಿ ಅವರಿಗೆ ಸಂಪೂರ್ಣ ಜಾಮೀನು ದೊರೆಯಿತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ ಬಳಿ ಪ್ರಶ್ನೆ ಮಾಡಿತ್ತು. ಹಲವು ದಿನಗಳ ಕಾಲ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿತ್ತು. ಅಲ್ಲದೆ, ಕರ್ನಾಟಕ ಹೈಕೋರ್ಟ್ ಜಾಮೀನು ಕೊಡಲು ನೀಡಿದ ಕಾರಣಗಳ ಬಗ್ಗೆ ಬೇಸರ ಹೊರಹಾಕಿತ್ತು. ಈಗ ಸುಪ್ರೀಂ ತೀರ್ಪು ನೀಡಿದೆ. ದರ್ಶನ್ ಅವರಿಗೆ ಜಾಮೀನು ನೀಡಿದ್ದರ ಬಗ್ಗೆ ಈ ಮೊದಲು ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್​ಗೆ ಛೀಮಾರಿ ಹಾಕಿತ್ತು. ದರ್ಶನ್ ಅವರು ಇಷ್ಟು ದಿನ ಹೊರಗೆ ಹಾಯಾಗಿ ಓಡಾಡಿಕೊಂಡಿದ್ದರು. ಆದರೆ, ಈಗ ಅವರಿಗೆ ತೊಂದರೆ ಎದುರಾಗಿದೆ. ಅವರು ಮತ್ತೆ ಜೈಲು ಸೇರು ಬೇಕಿದೆ. ಇದು ಫ್ಯಾನ್ಸ್ ಬೇಸರಕ್ಕೆ ಕಾರಣ ಆಗಿದೆ.

The post ದಾಸನಿಗೆ ಜೈಲೂಟ ಫಿಕ್ಸ್ ! ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್.. appeared first on Good News 24x7.

]]>