fair price Archives - Good News 24x7 https://www.goodnews24x7.com/tag/fair-price/ Kannada Thu, 20 Mar 2025 11:13:42 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg fair price Archives - Good News 24x7 https://www.goodnews24x7.com/tag/fair-price/ 32 32 ಅಖಂಡ ಕರ್ನಾಟಕ ಮಾರ್ಚ್ 22ಕ್ಕೆ ಬಂದ್. https://www.goodnews24x7.com/%e0%b2%85%e0%b2%96%e0%b2%82%e0%b2%a1-%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95-%e0%b2%ae%e0%b2%be%e0%b2%b0%e0%b3%8d%e0%b2%9a%e0%b3%8d-22%e0%b2%95%e0%b3%8d%e0%b2%95%e0%b3%86/ Thu, 20 Mar 2025 11:13:42 +0000 https://www.goodnews24x7.com/?p=2836 ಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಮೇಲಿನ ಹಲ್ಲೆಯನ್ನು ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ಗೆ  ಕರೆ ನೀಡಲಾಗಿದೆ. ಈಗಾಗಲೇ ಈ ಬಂದ್ಗೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೌಕರರ ಸಂಘ ಸೇರಿದಂತೆ ಓಲಾ, ಉಬರ್, ಆಟೋ…

The post ಅಖಂಡ ಕರ್ನಾಟಕ ಮಾರ್ಚ್ 22ಕ್ಕೆ ಬಂದ್. appeared first on Good News 24x7.

]]>

ಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಮೇಲಿನ ಹಲ್ಲೆಯನ್ನು ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ಗೆ  ಕರೆ ನೀಡಲಾಗಿದೆ. ಈಗಾಗಲೇ ಈ ಬಂದ್ಗೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೌಕರರ ಸಂಘ ಸೇರಿದಂತೆ ಓಲಾ, ಉಬರ್, ಆಟೋ ಸಂಘಗಳು ಕೂಡ ಬಂದ್ಗೆ ಸಂಪೂರ್ಣವಾಗಿ ಬೆಂಬಲ ಸೂಚಿಸಿವೆ. ಹಾಗಾದ್ರೆ ನೀವೇನಾದ್ರು ಈ ಕೆಲ ಕೆಲಸಗಳನ್ನು ಶನಿವಾರಕ್ಕೆ ಮುಂದೂಡಿದ್ದರೆ ಇಂದು ನಾಳೆಯೊಳಗೆ ಕೆಲಸ ಮುಗಿಸಿಕೊಳ್ಳುವುದು ಒಳ್ಳೆಯದು.

ಸಾರಿಗೆ ವ್ಯವಸ್ಥೆ ಇರುವುದಿಲ್ಲ


ಮಾರ್ಚ್ 22 ರ ಶನಿವಾರದಂದು ಓಲಾ, ಉಬರ್, ಆಟೋ, ಸಾರಿಗೆ ವ್ಯವಸ್ಥೆಯನ್ನು ನಂಬಿ ರಸ್ತೆಗಿಳಿಯುವ ಮುನ್ನ ಜನರು ಯೋಚಿಸಬೇಕು. ಓಲಾ ಉಬರ್ ಚಾಲಕರು ಮತ್ತು ಮಾಲೀಕರ ಸಂಘದೊಂದಿಗೆ ಕ್ಯಾಬ್ ಚಾಲಕರು ಬಂದ್ಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಯಾವುದಾದರೂ ಕೆಲಸಕ್ಕಾಗಿ ಅಥವಾ ದೈನಂದಿನ ಪ್ರಯಾಣಕ್ಕಾಗಿ ಓಲಾ, ಉಬರ್, ಆಟೋಗಳನ್ನು ಅವಲಂಬಿಸಿಕೊಂಡಿದ್ದರೆ ಸ್ವಂತ ವಾಹನದಲ್ಲಿ ತೆರಳುವುದು ಒಳ್ಳೆಯದು. ಸಾರಿಗೆ ಬಸ್ ಸಂಚಾರ ಇಲ್ಲದ ಕಾರಣ ಇದರಿಂದ ದೂರದ ಊರುಗಳಿಗೆ ತೆರಳುವವರಿಗೆ ಇದರಿಂದ ಸಮಸ್ಯೆಯಾಗಬಹುದು. ಹೀಗಾಗಿ ಬೇರೆ ಜಿಲ್ಲೆಗಳಿಗೆ ತೆರಳುವವರು ಶುಕ್ರವಾರ ಸಂಜೆಯೇ ತೆರಳುವುದು ಉತ್ತಮ.

ಬ್ಯಾಂಕ್ ಗಳು ತೆರೆದಿರುವುದಿಲ್ಲ


ಕರ್ನಾಟಕ ಬಂದ್ ಬಿಸಿ ಬ್ಯಾಂಕ್ ಗಳಿಗೆ ತಟ್ಟುವುದಿಲ್ಲವಾದರೂ ಕೂಡ ಮಾರ್ಚ್ 22 ನಾಲ್ಕನೇ ಶನಿವಾರವಾರ ಕಾರಣ ಬ್ಯಾಂಕ್ ಗಳು ತೆರೆದಿರುವುದಿಲ್ಲ. ಹೀಗಾಗಿ ಜನರು ತಮ್ಮ ಬ್ಯಾಂಕ್ ಕೆಲಸಗಳೇನಾದರೂ ಇದ್ದರೆ ಶುಕ್ರವಾರದೊಳಗೆ ಮಾಡಿ ಮುಗಿಸಿ.

ನ್ಯಾಯ ಬೆಲೆ ಅಂಗಡಿಗಳು ತೆರೆದಿರುತ್ತಾ?


ಪಡಿತರ ಚೀಟಿದಾರರು ಮಾರ್ಚ್ 22 ರಂದು ರೇಷನ್ ಅಕ್ಕಿ ತರಲು ಯೋಚಿಸಿಕೊಂಡಿದ್ದರೆ ಈ ಕೆಲಸವನ್ನು ಇಂದು ನಾಳೆಯೊಳಗೆ ಮುಗಿಸಿಕೊಳ್ಳುವುದು ಒಳ್ಳೆಯದು. ಇದೇ ಶನಿವಾರ ಕರ್ನಾಟಕ ಬಂದ್ ಇರುವ ಕಾರಣ ಈ ಬಂದ್ ಬಿಸಿ ನ್ಯಾಯ ಬೆಲೆ ಅಂಗಡಿಗಳ ಮೇಲೂ ತಟ್ಟಲಿದೆ.

The post ಅಖಂಡ ಕರ್ನಾಟಕ ಮಾರ್ಚ್ 22ಕ್ಕೆ ಬಂದ್. appeared first on Good News 24x7.

]]>