Friday Archives - Good News 24x7 https://www.goodnews24x7.com/tag/friday/ Kannada Wed, 01 Jul 2026 11:01:01 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Friday Archives - Good News 24x7 https://www.goodnews24x7.com/tag/friday/ 32 32 ಆಷಾಢ ಶುಕ್ರವಾರಗಳ ಪೂರ್ವಸಿದ್ಧತೆ ಸಭೆ https://www.goodnews24x7.com/preparation-meeting-for-ashada-fridays/ Wed, 01 Jul 2026 11:01:01 +0000 https://www.goodnews24x7.com/?p=9722 ಮೈಸೂರು, ಜುಲೈ 1: ಮೈಸೂರಿನ ಚಾಮುಂಡಿ ಬೆಟ್ಟದ ಸಭಾಂಗಣದಲ್ಲಿ ಇಂದು ಆಷಾಢ ಶುಕ್ರವಾರಗಳ ಅಂಗವಾಗಿ ನಡೆಯಲಿರುವ ವಿಶೇಷ ಪೂಜಾ ಕಾರ್ಯಕ್ರಮಗಳ ಪೂರ್ವಸಿದ್ಧತೆ ಕುರಿತು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ…

The post ಆಷಾಢ ಶುಕ್ರವಾರಗಳ ಪೂರ್ವಸಿದ್ಧತೆ ಸಭೆ appeared first on Good News 24x7.

]]>

ಮೈಸೂರು, ಜುಲೈ 1: ಮೈಸೂರಿನ ಚಾಮುಂಡಿ ಬೆಟ್ಟದ ಸಭಾಂಗಣದಲ್ಲಿ ಇಂದು ಆಷಾಢ ಶುಕ್ರವಾರಗಳ ಅಂಗವಾಗಿ ನಡೆಯಲಿರುವ ವಿಶೇಷ ಪೂಜಾ ಕಾರ್ಯಕ್ರಮಗಳ ಪೂರ್ವಸಿದ್ಧತೆ ಕುರಿತು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಆಷಾಢ ಶುಕ್ರವಾರಗಳ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ, ಸುಗಮ ದರ್ಶನ ವ್ಯವಸ್ಥೆ, ಕುಡಿಯುವ ನೀರು, ಸ್ವಚ್ಛತೆ, ಸಾರಿಗೆ, ಸಂಚಾರ ನಿಯಂತ್ರಣ, ಭದ್ರತೆ ಹಾಗೂ ತುರ್ತು ವೈದ್ಯಕೀಯ ಸೇವೆಗಳು ಸೇರಿದಂತೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಪೂಜಾ ಕಾರ್ಯಕ್ರಮಗಳು ಸುಗಮವಾಗಿ, ಶಿಸ್ತುಬದ್ಧವಾಗಿ ಹಾಗೂ ಸಾಂಪ್ರದಾಯಿಕವಾಗಿ ನೆರವೇರಲು ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ-ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಶ್ರೀಮತಿ ಸೀಮಾ ಲಾಟ್ಕರ್, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಶ್ರೀಮತಿ ರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀ ಶೇಖ್ ತನ್ವೀರ್ ಆಸೀಫ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

The post ಆಷಾಢ ಶುಕ್ರವಾರಗಳ ಪೂರ್ವಸಿದ್ಧತೆ ಸಭೆ appeared first on Good News 24x7.

]]>
ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್! https://www.goodnews24x7.com/congress-mla-veerendra-puppy-arrested/ Sat, 23 Aug 2025 11:09:39 +0000 https://www.goodnews24x7.com/?p=6585 ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ (Veerendra Puppy) ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ ಗ್ಯಾಂಗ್‌ಟಕ್‌ನಲ್ಲಿ ಬಂಧಿಸಲಾಗಿದೆ. ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್…

The post ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್! appeared first on Good News 24x7.

]]>

ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ (Veerendra Puppy) ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ ಗ್ಯಾಂಗ್‌ಟಕ್‌ನಲ್ಲಿ ಬಂಧಿಸಲಾಗಿದೆ.

ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್ ಮಾಡಿ ಕೋರ್ಟ್ಗೆ ಹಾಜರುಪಡಿಸಿರುವ ಇ.ಡಿ ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ ಶುಕ್ರವಾರ ಮುಂಜಾನೆ ಚಿತ್ರದುರ್ಗದ ಕಾಂಗ್ರೆಸ್ ಶಾಸನ ವೀರೇಂದ್ರ ಪಪ್ಪಿ ಮತ್ತು ಇತರರ ಮೇಲೆ ಒಟ್ಟು 30 ಸ್ಥಳಗಳಲ್ಲಿ ದಾಳಿ ನಡೆಸಿ ಇ.ಡಿ ದಾಖಲೆ ಪರಿಶೀಲನೆ ಮಾಡಿದೆ. ಈ ವೇಳೆ 12 ಕೋಟಿ ನಗದು, 1 ಕೋಟಿ ವಿದೇಶಿ ಹಣ, 6 ಕೋಟಿ ಮೌಲ್ಯದ ಚಿನ್ನ, 10 ಕೆಜಿ ಬೆಳ್ಳಿ, 17 ಬ್ಯಾಂಕ್ ಖಾತೆ ಹಾಗೂ 2 ಬ್ಯಾಂಕ್ ಲಾಕರ್‌ಗಳನ್ನು ಇ.ಡಿ ಸೀಜ್ ಮಾಡಿದೆ.

ಚಿತ್ರದುರ್ಗ ಜಿಲ್ಲೆಯಾದ್ಯಂತ 6, ಬೆಂಗಳೂರು ನಗರ 10, ಜೋಧ್‌ಪುರ 3, ಹುಬ್ಬಳ್ಳಿ 1, ಮುಂಬೈ 2 ಮತ್ತು ಗೋವಾದಲ್ಲಿರುವ ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ, ಬಿಗ್ ಡ್ಯಾಡಿ ಕ್ಯಾಸಿನೊಗಳ ಮೇಲೆ ದಾಳಿ ನಡೆಸಲಾಗಿದೆ. ವೀರೇಂದ್ರ ಪಪ್ಪಿ ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಇತ್ಯಾದಿಗಳ ಹೆಸರಿನಲ್ಲಿ ಹಲವಾರು ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದಾರೆ.

ವೀರೇಂದ್ರ ಪಪಿ ಸಹೋದರ ಕೆಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಎಂಬ 3 ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ. ಈ ಘಟಕಗಳು ಕೆಸಿ ವೀರೇಂದ್ರ ಅವರ ಕಾಲ್ ಸೆಂಟರ್ ಸೇವೆಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಿಸಿವೆ ಎಂದು ಇ.ಡಿ ತಿಳಿಸಿದೆ.

1 ಕೋಟಿ ಫಾರಿನ್ ಕರೆನ್ಸಿ ಪತ್ತೆ
ಇದಲ್ಲದೇ ಎಂಜಿಎಂ ಕ್ಯಾಸಿನೊ, ಮೆಟ್ರೋಪಾಲಿಟನ್ ಕ್ಯಾಸಿನೊ, ಬೆಲಾಜಿಯೊ ಕ್ಯಾಸಿನೊ, ಮರೀನಾ ಕ್ಯಾಸಿನೊದಲ್ಲಿ ಕ್ಯಾಸಿನೊ ಆಭರಣ, ವಿವಿಧ ಬ್ಯಾಂಕುಗಳ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಗಳು, ತಾಜ್, ಹಯಾತ್ ಮತ್ತು ಲೀಲಾ ಪಂಚತಾರಾ ಹೋಟೆಲ್‌ಗಳ ಐಷಾರಾಮಿ ಆತಿಥ್ಯ ಸದಸ್ಯತ್ವ ಕಾರ್ಡ್‌ಗಳು, 6 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ. ಇದರ ಜೊತೆಗೆ ಐಷಾರಾಮಿ ಕಾರು, 12 ಕೋಟಿ ಮೌಲ್ಯದ ಇಂಡಿಯನ್ ಕರೆನ್ಸಿ, 1 ಕೋಟಿ ಫಾರಿನ್ ಕರೆನ್ಸಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

The post ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್! appeared first on Good News 24x7.

]]>
ಧರ್ಮ ದರ್ಶನದ ಸಾಲಿನಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ದರ್ಶನಕ್ಕೆ ಅವಕಾಶ. https://www.goodnews24x7.com/devotees-who-climb-the-steps-in-the-darshan-queue-will-be-allowed-to-have-darshan/ Thu, 03 Jul 2025 07:59:49 +0000 https://www.goodnews24x7.com/?p=4860 ಮೈಸೂರು : ಎರಡನೇ ಆಷಾಢ ಶುಕ್ರವಾರದಿಂದ ಚಾಮುಂಡಿ ಬೆಟ್ಟದಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ಧರ್ಮ ದರ್ಶನದ ಸರತಿ ಸಾಲಿನಲ್ಲಿ ನಿಂತು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ಈ ಕುರಿತು ಶ್ರೀ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದ್ದು,…

The post ಧರ್ಮ ದರ್ಶನದ ಸಾಲಿನಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ದರ್ಶನಕ್ಕೆ ಅವಕಾಶ. appeared first on Good News 24x7.

]]>

ಮೈಸೂರು : ಎರಡನೇ ಆಷಾಢ ಶುಕ್ರವಾರದಿಂದ ಚಾಮುಂಡಿ ಬೆಟ್ಟದಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ಧರ್ಮ ದರ್ಶನದ ಸರತಿ ಸಾಲಿನಲ್ಲಿ ನಿಂತು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ.

ಈ ಕುರಿತು ಶ್ರೀ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದ್ದು, ಆಷಾಢ ಮಾಸದಲ್ಲಿ ಚಾಮುಂಡಿ‌ಬೆಟ್ಟಕ್ಕೆ ಮೆಟ್ಟಿಲು ಮೂಲಕ ಹತ್ತಿ ಬರುವ ಭಕ್ತರ ದರ್ಶನಕ್ಕೆ ಸಂಬಂಧಿಸಿದಂತೆ ಮೊದಲ ಆಷಾಡ ಶುಕ್ರವಾರ ಮೆಟ್ಟಿಲುಗಳ ಮೂಲಕ ನಿರೀಕ್ಷೆಗೂ ಮೀರಿ ಹೆಚ್ಚು ಜನರ ಬಂದ ಕಾರಣ ಜನಸಂದಣಿಯಿಂದಾಗಿ ದೇವರ ದರ್ಶನ ಮೆಟ್ಟಿಲು ಹತ್ತಿ ಬಂದ ಭಕ್ತರಿಗೆ ತಡವಾಗಿತ್ತು. ಆದರೆ ಧರ್ಮದರ್ಶನ ಅಥವಾ ಟಿಕೆಟ್ ಪಡೆದು ದರ್ಶನ ಪಡೆದವರು ತ್ವರಿತಗತಿಯಲ್ಲಿ ದೇವಿಯ ದರ್ಶನ ಪಡೆದು ವಾಪಸ್ಸಾದರು.

ಈ ಹಿನ್ನೆಲೆಯಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ಆಗಬಹುದಾದ ಅನಾನೂಕೂಲವನ್ನು ತಪ್ಪಿಸಲು ಜಿಲ್ಲಾಡಳಿತ ಚಾಮುಂಡಿ ಬೆಟ್ಟದಲ್ಲಿ ಸಾಕಷ್ಟು ಸುಧಾರಿತ ಕ್ರಮಗಳನ್ನು ತೆಗೆದುಕೊಂಡಿದೆ. ಮುಂದಿನ ಎರಡನೇ ಆಷಾಢ ಹಾಗೂ ಉಳಿದ ಆಷಾಢ ಮಾಸದ ಶುಕ್ರವಾರಗಳಲ್ಲಿ ಮೆಟ್ಟಿಲು ಹತ್ತಿ ಬಂದ ಭಕ್ತರು ಧರ್ಮ ದರ್ಶನದ ಸರತಿ ಸಾಲಿನಲ್ಲಿ ನಿಂತು ದರ್ಶನ ಮಾಡಬಹುದಾಗಿದೆ.

ಭಕ್ತರಿಗೆ ನಾಡದೇವಿಯ ಸುಗಮ ದರ್ಶನಕ್ಕಾಗಿ ಲಲಿತಮಹಲ್ ಪ್ಯಾಲೇಸ್ ಆವರಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು ಭಕ್ತಾಧಿಗಳು ಉಚಿತ ಬಸ್ ಸೇವೆ ಪಡೆದು ಕಡಿಮೆ ಸಮಯದಲ್ಲಿ ಸುಗಮವಾಗಿ ದೇವರ ದರ್ಶನ ಪಡೆದುಕೊಳ್ಳಬಹುದಾಗಿದೆ. ಆದುದರಿಂದ ಭಕ್ತಾಧಿಗಳು ಉಚಿತ ಬಸ್ ಸೇವೆಯ ಸದುಪಯೋಗವನ್ನು ಮಾಡಿಕೊಂಡು ದೇವರ ದರ್ಶನ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 

The post ಧರ್ಮ ದರ್ಶನದ ಸಾಲಿನಲ್ಲಿ ಮೆಟ್ಟಿಲು ಹತ್ತಿ ಬರುವ ಭಕ್ತರಿಗೆ ದರ್ಶನಕ್ಕೆ ಅವಕಾಶ. appeared first on Good News 24x7.

]]>
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪ್ಯಾಕೇಜ್ ; ಭಕ್ತರ ಆಕ್ರೋಶ! https://www.goodnews24x7.com/special-package-for-ashada-friday-at-chamundi-hills-in-mysore-devotees-outrage/ Sun, 15 Jun 2025 09:10:35 +0000 https://www.goodnews24x7.com/?p=4420 ಮೈಸೂರು: ಆಷಾಢ ಮಾಸದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಶುಕ್ರವಾರದ ದಿನಗಳಂದು ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವಿಶೇಷ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಮುಖ್ಯವಾಗಿ ವಿಶೇಷ ದರ್ಶನಕ್ಕೆ 2 ಸಾವಿರ ರೂ. ನಿಗದಿ, ಚಾಮುಂಡಿಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಹಾಗೂ ಖಾಸಗಿ…

The post ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪ್ಯಾಕೇಜ್ ; ಭಕ್ತರ ಆಕ್ರೋಶ! appeared first on Good News 24x7.

]]>

ಮೈಸೂರು: ಆಷಾಢ ಮಾಸದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಶುಕ್ರವಾರದ ದಿನಗಳಂದು ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವಿಶೇಷ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಮುಖ್ಯವಾಗಿ ವಿಶೇಷ ದರ್ಶನಕ್ಕೆ 2 ಸಾವಿರ ರೂ. ನಿಗದಿ, ಚಾಮುಂಡಿಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಹಾಗೂ ಖಾಸಗಿ ವಾಹನಗಳಿಗೆ ನಿರ್ಬಂಧ ಸೇರಿದಂತೆ ಹಲವಾರು ವಿಶೇಷ ವ್ಯವಸ್ಥೆಗಳನ್ನು ಮಾಡಿಕೊಂಡಿದೆ.


ಜೂನ್ ತಿಂಗಳ ಆಷಾಢ ಶುಕ್ರವಾರದ ಹಿನ್ನೆಲೆ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಪಡೆಯುವ ಭಕ್ತರಿಗೆ ಈ ಬಾರಿ ಮೊದಲ ಬಾರಿಗೆ ವಿಶೇಷ ಪ್ಯಾಕೇಜ್ ಕಲ್ಪಿಸಲಾಗಿದೆ.
ಜೂನ್ 27ರಂದು ಆಷಾಢ ಶುಕ್ರವಾರ ಆರಂಭವಾಗಲಿದ್ದು, ಜುಲೈ 4, 11 ಮತ್ತು 18 ಆಷಾಢ ಶುಕ್ರವಾರವಾಗಿದೆ. ದೇವಿಗೆ ವಿಶೇಷ ಪೂಜೆ ಜೊತೆಗೆ ಜುಲೈ 17ರಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತ್ಯೋತ್ಸವ ನಡೆಯಲಿದೆ.
ಆಷಾಢ ವಿಶೇಷ ಪ್ರಯುಕ್ತ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ದೇವರ ದರ್ಶನಕ್ಕೆ ಸಕಲ ಸಿದ್ಧತೆ ಕೈಗೊಂಡಿದೆ. ಯಾವುದೇ ಗೊಂದಲ, ಅಡಚಣೆಯಾಗದಂತೆ ಶಾಂತಿಯುತವಾಗಿ ದೇವಿಯ ದರ್ಶನ ಪಡೆಯಲು ಭಕ್ತರ ಅನುಕೂಲಕ್ಕಾಗಿ ಹಾಗೂ ನೂಕುನುಗ್ಗಲು ತಡೆಗಟ್ಟಲು 2000 ರೂ. ವೆಚ್ಚದ ವಿಶೇಷ ದರ್ಶನದ ಟಿಕೆಟ್ ನೀಡಲು ಮುಂದಾಗಿದೆ.
ಈ ಬಾರಿ ವಿಶೇಷ ದಶರ್ನಕ್ಕೆ 2 ಸಾವಿರ ರೂ ನಿಗದಿ ಮಾಡಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. “ಇದು ಹಗಲು ದರೋಡೆ” ಎನ್ನುತ್ತಾರೆ
“ತಮಿಳುನಾಡಿನ ದೇವಾಲಯಗಳಲ್ಲಿ ಎಲ್ಲರಿಗೂ ಸಮಾನತೆ ಕಲ್ಪಿಸುವ ದೃಷ್ಟಿಯಿಂದ ಯಾವುದೇ ತಾರತಮ್ಯವಿಲ್ಲದೆ ದೇವಾಲಯಕ್ಕೆ ಅವಕಾಶ ನೀಡಲಾಗಿದೆ. ಅದೇ ರೀತಿ ಚಾಮುಂಡೇಶ್ವರಿ ದರ್ಶನಕ್ಕೂ ಅವಕಾಶ ಕಲ್ಪಿಸಿ, ಉಚಿತ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು” ಎಂದು ಭಕ್ತರು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್

ಅವರು ಕೂಡ ವಿಶೇಷ ದರ್ಶನಕ್ಕೆ ಹಣ ನಿಗದಿ ಮಾಡಿರುವುದು ಬೇಕಿಲ್ಲ. ದೇವರನ್ನು ದುಡ್ಡು ಕೊಟ್ಟು ನೋಡಬೇಕಾ? ಎರಡು ಸಾವಿರ ದುಬಾರಿಯಾಯಿತು” ಎನ್ನುತ್ತಾರೆ.

ಸಂಸದ ಯದುವೀರ್ ಒಡೆಯರ್,

“ಆಷಾಢ ಮಾಸದಂದು ದೇವಿಯ ವಿಶೇಷ ದರ್ಶನಕ್ಕೆ ಎರಡು ಸಾವಿರ ನಿಗದಿ ಮಾಡಿರುವುದು ಸರಿಯಲ್ಲ. ದೇವರ ದರ್ಶನಕ್ಕೆ ಏಕೆ ಇಷ್ಟು ದುಬಾರಿ ಹಣ ವಸೂಲಿ? ಕೂಡಲೇ ವಾಪಸ್ ಪಡೆಯಬೇಕು” ಎಂದು ಆಗ್ರಹಿಸಿದರು.

 

The post ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪ್ಯಾಕೇಜ್ ; ಭಕ್ತರ ಆಕ್ರೋಶ! appeared first on Good News 24x7.

]]>