government Archives - Good News 24x7 https://www.goodnews24x7.com/tag/government/ Kannada Wed, 01 Jul 2026 07:42:35 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg government Archives - Good News 24x7 https://www.goodnews24x7.com/tag/government/ 32 32 ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ https://www.goodnews24x7.com/tamil-nadu-government-moves-supreme-court/ Wed, 01 Jul 2026 07:39:35 +0000 https://www.goodnews24x7.com/?p=9717 ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಆದೇಶವು 1958ರ ಪ್ರಾಣಿ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಯನ್ನು ಮೀರಿದೆ ಎಂದು ಸರ್ಕಾರ ವಾದಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ…

The post ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ appeared first on Good News 24x7.

]]>

ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಆದೇಶವು 1958ರ ಪ್ರಾಣಿ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಯನ್ನು ಮೀರಿದೆ ಎಂದು ಸರ್ಕಾರ ವಾದಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ ಎಂದು ಆರೋಪಿಸಿ, ಅದನ್ನು ತಡೆಯುವಂತೆ ಮಕ್ಕಳ್ ಕಚ್ಚಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹಸು, ಕರು ಹಾಗೂ ಹಾಲು ಮತ್ತು ಕೃಷಿಗೆ ಉಪಯುಕ್ತ ಜಾನುವಾರುಗಳ ಹ*ತ್ಯೆಯನ್ನು ತಡೆಯಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್​​ ಹೇಳಿತ್ತು.

 

ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಆದೇಶವು 1958ರ ಪ್ರಾಣಿ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಯನ್ನು ಮೀರಿದೆ ಎಂದು ಸರ್ಕಾರ ವಾದಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ ಎಂದು ಆರೋಪಿಸಿ, ಅದನ್ನು ತಡೆಯುವಂತೆ ಮಕ್ಕಳ್ ಕಚ್ಚಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹಸು, ಕರು ಹಾಗೂ ಹಾಲು ಮತ್ತು ಕೃಷಿಗೆ ಉಪಯುಕ್ತ ಜಾನುವಾರುಗಳ ಹ*ತ್ಯೆಯನ್ನು ತಡೆಯಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್​​ ಹೇಳಿತ್ತು.
ಮದ್ರಾಸ್ ಹೈಕೋರ್ಟ್​​ನ ಗೋಹ*ತ್ಯೆ ನಿಷೇಧ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಜುಲೈ 01 ನವದೆಹಲಿ : ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಹೈಕೋರ್ಟ್ ಆದೇಶವು ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ–1958ರ ವ್ಯಾಪ್ತಿಯನ್ನು ಮೀರಿ ನೀಡಲಾಗಿದೆ ಎಂದು ಸರ್ಕಾರ ತನ್ನ ಅರ್ಜಿಯಲ್ಲಿ ವಾದಿಸಿದೆ. ಮೇ 27ರಂದು ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಾಥನ್ ಮತ್ತು ವಿ. ಲಕ್ಷ್ಮೀನಾರಾಯಣ್ ಅವರ ವಿಭಾಗೀಯ ಪೀಠವು, ಕಾಯ್ದೆಯಡಿ ಅನುಮತಿಸಲಾದ ಸಂದರ್ಭಗಳನ್ನು ಹೊರತುಪಡಿಸಿ, ಬಕ್ರೀದ್ ಸೇರಿದಂತೆ ಯಾವುದೇ ದಿನ ಹಸು ಅಥವಾ ಕರುವಿನ ಹ*ತ್ಯೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಸರ್ಕಾರದ ವಾದವೇನು?
ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ–1958ರ ಸೆಕ್ಷನ್ 4ರ ಪ್ರಕಾರ, 10 ವರ್ಷ ಮೇಲ್ಪಟ್ಟ, ಕೆಲಸಕ್ಕೆ ಅಥವಾ ಸಂತಾನೋತ್ಪತ್ತಿಗೆ ಅಯೋಗ್ಯವೆಂದು ಸಂಬಂಧಪಟ್ಟ ಪ್ರಾಧಿಕಾರದಿಂದ ಪ್ರಮಾಣೀಕರಿಸಲ್ಪಟ್ಟ ಹಸುವನ್ನು ಮಾತ್ರ ವ*ಧೆ ಮಾಡಲು ಅವಕಾಶವಿದೆ. ಆದರೆ ಹೈಕೋರ್ಟ್ ಈ ಕಾನೂನು ಚೌಕಟ್ಟನ್ನು ಮೀರಿ ಸಂಪೂರ್ಣ ನಿಷೇಧ ಹೇರಿರುವುದು ಕಾನೂನು ವ್ಯಾಪ್ತಿಯನ್ನು ಮೀರಿದ ಕ್ರಮ ಎಂದು ಸರ್ಕಾರ ಹೇಳಿದೆ.

ಹೈಕೋರ್ಟ್​​ ಆದೇಶ ಏನು?
ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ ಎಂದು ಆರೋಪಿಸಿದ್ದ ಮಕ್ಕಳ್ ಕಚ್ಚಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ, ಅದನ್ನು ತಡೆಯುವಂತೆ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ವೇಳೆ ಭಾರತ ಸಂವಿಧಾನದ ವಿಧಿ 48ನ್ನು ಉಲ್ಲೇಖಿಸಿದ್ದ ಹೈಕೋರ್ಟ್, ಹಸು, ಕರು ಹಾಗೂ ಹಾಲು ಮತ್ತು ಕೃಷಿಗೆ ಉಪಯುಕ್ತ ಜಾನುವಾರುಗಳ ಹತ್ಯೆಯನ್ನು ತಡೆಯಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿತ್ತು. ಬಕ್ರೀದ್ ಸಂದರ್ಭದಲ್ಲಿ ಗೋಹ*ತ್ಯೆ ಮಾಡುವುದು ಇಸ್ಲಾಂ ಧರ್ಮದ ಕಡ್ಡಾಯ ಧಾರ್ಮಿಕ ಆಚರಣೆಯಲ್ಲ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ತೀರ್ಪುಗಳನ್ನೂ ಉಲ್ಲೇಖಿಸಿತ್ತು.

ಬಹಳಷ್ಟು ಮುಸ್ಲಿಮರು ಬಕ್ರೀದ್ ದಿನ ಗೋವನ್ನು ಬ*ಲಿ ನೀಡುವುದಿಲ್ಲ. ಗೋವನ್ನು ಬ*ಲಿ ನೀಡುವುದು ಇಸ್ಲಾಂ ಧರ್ಮದ ಕಡ್ಡಾಯ ಆಚರಣೆಯಲ್ಲ. ಬಕ್ರೀದ್ ಸಂದರ್ಭದಲ್ಲಿ ಯಾವುದೇ ಪ್ರಾಣಿಯನ್ನು ಬ*ಲಿ ನೀಡಬಹುದು; ಅದಕ್ಕೆ ಗೋಹತ್ಯೆಯೇ ಏಕೈಕ ಮಾರ್ಗವಲ್ಲ ಎಂದು ಸುಪ್ರೀಂ ಕೋರ್ಟ್ ಹಿಂದಿನ ತೀರ್ಪಿನಲ್ಲಿ ಹೇಳಿರುವುದನ್ನು ಹೈಕೋರ್ಟ್ ತಿಳಿಸಿತ್ತು. ಆದರೀಗ ಹೈಕೋರ್ಟ್​​ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ

 

 

The post ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ appeared first on Good News 24x7.

]]>
SIRಗೆ ಕೌಂಟರ್ ಕೊಡುತ್ತಾ ಗೃಹ ಜ್ಯೋತಿ ಪರಿಶೀಲನೆ? https://www.goodnews24x7.com/giving-counter-to-sir-griha-jyoti-verification/ Wed, 01 Jul 2026 06:07:14 +0000 https://www.goodnews24x7.com/?p=9714 ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಂದ ಎಪಿಕ್ ಕಾರ್ಡ್ ಹಾಗೂ ಜಾತಿ ವಿವರ ಸಂಗ್ರಹಿಸಲು ಸರ್ಕಾರ ಮುಂದಾಗಿದ್ದು, ಇದು ಚುನಾವಣಾ ಆಯೋಗ ನಡೆಸುತ್ತಿರುವ ‘ಎಸ್‌ಐಆರ್’ ಪ್ರಕ್ರಿಯೆಗೆ ಕೌಂಟರ್ ಕೊಡುವ ತಂತ್ರವೇ ಎಂಬ ಬಲವಾದ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಹಾಗಾದರೆ, ಈ ಕ್ರಮದಿಂದ…

The post SIRಗೆ ಕೌಂಟರ್ ಕೊಡುತ್ತಾ ಗೃಹ ಜ್ಯೋತಿ ಪರಿಶೀಲನೆ? appeared first on Good News 24x7.

]]>

ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಂದ ಎಪಿಕ್ ಕಾರ್ಡ್ ಹಾಗೂ ಜಾತಿ ವಿವರ ಸಂಗ್ರಹಿಸಲು ಸರ್ಕಾರ ಮುಂದಾಗಿದ್ದು, ಇದು ಚುನಾವಣಾ ಆಯೋಗ ನಡೆಸುತ್ತಿರುವ ‘ಎಸ್‌ಐಆರ್’ ಪ್ರಕ್ರಿಯೆಗೆ ಕೌಂಟರ್ ಕೊಡುವ ತಂತ್ರವೇ ಎಂಬ ಬಲವಾದ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಹಾಗಾದರೆ, ಈ ಕ್ರಮದಿಂದ ಸರ್ಕಾರಕ್ಕೆ ಏನು ಲಾಭ? ಇಲ್ಲಿದೆ ವಿವರ.

SIRಗೆ ಕೌಂಟರ್ ಕೊಡುತ್ತಾ ಗೃಹ ಜ್ಯೋತಿ ಪರಿಶೀಲನೆ? ಬಲವಾಯ್ತು ಅನುಮಾನ, ಕಾರಣ ಇಲ್ಲಿದೆ

ಗೃಹ ಜ್ಯೋತಿಗೆ ವೋಟರ್ ಐಡಿ ಕಡ್ಡಾಯ
ಫಲಾನುಭವಿಗಳ ಜಾತಿ ವಿವರ ಸಂಗ್ರಹ
ಐಟಿ ಪಾವತಿದಾರರಿಗೆ ಯೋಜನೆ ಕಟ್

ಜುಲೈ 1,ಬೆಂಗಳೂರು: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ವಿದ್ಯುತ್ ಯೋಜನೆ ‘ಗೃಹ ಜ್ಯೋತಿ’ ಫಲಾನುಭವಿಗಳ ಮನೆ ಬಾಗಿಲಿಗೆ ಎಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುವ ಪ್ರಕ್ರಿಯೆ ಇಂದಿನಿಂದ ಆರಂಭವಾಗುತ್ತಿದೆ. ಇದರ ಬೆನ್ನಲ್ಲೇ ಹೊಸದೊಂದು ರಾಜಕೀಯ ಹಾಗೂ ಸಾಮಾಜಿಕ ಚರ್ಚೆ ಮುನ್ನೆಲೆಗೆ ಬಂದಿದೆ. ಯಾವುದೇ ಸರ್ಕಾರಿ ಯೋಜನೆಗೆ ಕಡ್ಡಾಯವಲ್ಲದ ಎಪಿಕ್ (EPIC) ಕಾರ್ಡ್ ಅಥವಾ ವೋಟರ್ ಐಡಿಯನ್ನು ಈಗ ಗೃಹ ಜ್ಯೋತಿ ಯೋಜನೆಗೆ ಕಡ್ಡಾಯಗೊಳಿಸಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಇದರೊಂದಿಗೆ ಫಲಾನುಭವಿಗಳ ಜಾತಿ ಹಾಗೂ ಪ್ರವರ್ಗಗಳ (ಎಸ್‌ಸಿ, ಎಸ್‌ಟಿ, ಓಬಿಸಿ, ಅಲ್ಪಸಂಖ್ಯಾತ) ವಿವರಗಳನ್ನೂ ಅಪ್‌ಡೇಟ್ ಮಾಡಲಾಗುತ್ತಿದ್ದು, ಸರ್ಕಾರ ಪರೋಕ್ಷವಾಗಿ ಮತದಾರರ ಇಂಚಿಂಚೂ ಮಾಹಿತಿ ಸಂಗ್ರಹಕ್ಕೆ ಮುಂದಾಗಿದೆಯೇ ಎಂಬ ಪ್ರಶ್ನೆ ಎದ್ದಿದೆ.

ಮತದಾರರ ಅಧಿಕೃತ ದತ್ತಾಂಶ ಕ್ರೂಢೀಕರಣ ತಂತ್ರವೇ?

ಚುನಾವಣಾ ಆಯೋಗದ ಬಳಿ ಇರುವ ಮತದಾರರ ಅಧಿಕೃತ ದತ್ತಾಂಶವನ್ನು ತಾನೂ ಕ್ರೋಢೀಕರಿಸಿಕೊಳ್ಳಲು ಸರ್ಕಾರ ಈ ಹೊಸ ಮಾರ್ಗವನ್ನು ಕಂಡುಕೊಂಡಿದೆ ಎನ್ನಲಾಗುತ್ತಿದೆ. ಇದರ ಮೂಲಕ ಕರ್ನಾಟಕದ ನೈಜ ಮತದಾರರು ಎಷ್ಟು ಎಂಬ ಅಧಿಕೃತ ವಿವರ ಸರ್ಕಾರದ ಕೈಸೇರಲಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ಪರಿಷ್ಕರಣೆಯ ಕಟ್ಟುನಿಟ್ಟಿನ ‘ಎಸ್‌ಐಆರ್’ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ನಡೆಯುತ್ತಿದೆ. ಈ ಪರಿಷ್ಕರಣೆ ವೇಳೆ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಸಾರ್ವಜನಿಕರೇ ಎಚ್ಚೆತ್ತುಕೊಳ್ಳಲಿ ಮತ್ತು ಯೋಜನೆಯ ಲಾಭ ಪಡೆಯುವವರು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗಿಯಾಗಲಿ ಎಂಬ ಗುಪ್ತ ಯೋಜನೆ ಇದರ ಹಿಂದಿದೆ ಎನ್ನಲಾಗಿದೆ.

ಹೊರ ರಾಜ್ಯದವರಿಗೆ ಸಿಗಲ್ಲ ಗ್ಯಾರಂಟಿ

ಈ ಸಮೀಕ್ಷೆಯಿಂದಾಗಿ ಕರ್ನಾಟಕದ ಮೂಲ ಮತದಾರರಲ್ಲದವರು ಮತ್ತು ಹೊರರಾಜ್ಯದವರು ಯೋಜನೆಯಿಂದ ಹೊರಗುಳಿಯಲಿದ್ದಾರೆ. ಇದರ ಜೊತೆಗೆ, ಆದಾಯ ತೆರಿಗೆ (ಐಟಿ) ಪಾವತಿಸುತ್ತಿರುವ ಶ್ರೀಮಂತ ವರ್ಗದವರನ್ನು ಪತ್ತೆ ಹಚ್ಚಿ ಅವರಿಗೆ ಗೃಹ ಜ್ಯೋತಿ ಯೋಜನೆಯಿಂದ ಕೊಕ್ ನೀಡಲು ಸರ್ಕಾರ ಈ ಪರಿಶೀಲನೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎನ್ನಲಾಗಿದೆ.

ಒಟ್ಟಿನಲ್ಲಿ ಉಚಿತ ವಿದ್ಯುತ್ ನೆಪದಲ್ಲಿ ನಡೆಯುತ್ತಿರುವ ಈ ಹಠಾತ್ ಜಾತಿವಾರು ಮತ್ತು ವೋಟರ್ ಐಡಿ ಮಾಹಿತಿ ಸಂಗ್ರಹ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಮುಂದಿನ ದಿನಗಳಲ್ಲಿ ದೊಡ್ಡ ರಾಜಕೀಯ ಬಿರುಗಾಳಿ ಎಬ್ಬಿಸುವ ಮುನ್ಸೂಚನೆ ನೀಡಿದೆ.

The post SIRಗೆ ಕೌಂಟರ್ ಕೊಡುತ್ತಾ ಗೃಹ ಜ್ಯೋತಿ ಪರಿಶೀಲನೆ? appeared first on Good News 24x7.

]]>
ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ! https://www.goodnews24x7.com/mp-tejaswi-suryas-anger-against-the-state-government/ Tue, 30 Jun 2026 09:01:18 +0000 https://www.goodnews24x7.com/?p=9709 ಬೆಂಗಳೂರಿನ ಬಿಎಂಟಿಸಿ ಬಸ್‌ಗಳ ಕೊರತೆ ಹಾಗೂ ಪ್ರಯಾಣಿಕರ ನಿತ್ಯದ ಪರದಾಟದ ಕುರಿತು ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಐಟಿ ನಗರಿಯಲ್ಲಿ ಹೊಸ ಸರ್ಕಾರ ಮತ್ತು ಹೊಸ ಸಾರಿಗೆ ಸಚಿವರು ಬಂದರೂ ಪರಿಸ್ಥಿತಿ ಬದಲಾಗಿಲ್ಲ, ಬಸ್‌ಗಾಗಿ…

The post ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ! appeared first on Good News 24x7.

]]>

ಬೆಂಗಳೂರಿನ ಬಿಎಂಟಿಸಿ ಬಸ್‌ಗಳ ಕೊರತೆ ಹಾಗೂ ಪ್ರಯಾಣಿಕರ ನಿತ್ಯದ ಪರದಾಟದ ಕುರಿತು ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಐಟಿ ನಗರಿಯಲ್ಲಿ ಹೊಸ ಸರ್ಕಾರ ಮತ್ತು ಹೊಸ ಸಾರಿಗೆ ಸಚಿವರು ಬಂದರೂ ಪರಿಸ್ಥಿತಿ ಬದಲಾಗಿಲ್ಲ, ಬಸ್‌ಗಾಗಿ ಕಾಯುವುದು ಒಂದು ದೊಡ್ಡ ತಪಸ್ಸಾಗಿದೆ ಎಂದು ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು, ಜನರು ಕೆಲಸ ಮಾಡಬೇಕೋ ಅಥವಾ ರಸ್ತೆಯಲ್ಲೇ ಕಾಯಬೇಕೋ ಎಂದು ಸಿಎಂಗೆ ಪ್ರಶ್ನಿಸಿದ್ದಾರೆ.

ಬಿಎಂಟಿಸಿ ಬಸ್‌ಗಾಗಿ ಕಾಯುವುದು ಒಂದು ದೊಡ್ಡ ತಪಸ್ಸು! ರಾಜ್ಯ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ

ಬಿಎಂಟಿಸಿ ಬಸ್‌ಗಳ ಕೊರತೆ ಕುರಿತು ಸಂಸದ ತೇಜಸ್ವಿ ಸೂರ್ಯ ಅಸಮಾಧಾನ.
ಪ್ರಯಾಣಿಕರು ಗಂಟೆಗಟ್ಟಲೆ ಬಸ್‌ಗಾಗಿ ರಸ್ತೆಯಲ್ಲೇ ಕಾಯುವಂತಾಗಿದೆ ಎಂದು ಟೀಕೆ.
ಜನರು ಕೆಲಸ ಮಾಡಬೇಕೋ ಅಥವಾ ರಸ್ತೆಯಲ್ಲೇ ನಿಲ್ಲಬೇಕೋ ಎಂದು ಪ್ರಶ್ನೆ.
ಜೂನ್ 30,ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejaswi Surya) ಸೋಮವಾರ ಖುದ್ದು ಬಿಎಂಟಿಸಿ ಬಸ್ಸಿನಲ್ಲಿ ಕತ್ರಿಗುಪ್ಪೆಯಿಂದ ಬನಶಂಕರಿವರೆಗೆ ಪ್ರಯಾಣಿಸುವ ಸಂದರ್ಭದಲ್ಲಿ ಪ್ರಯಾಣಿಕರ ಅಳಲು ಆಲಿಸಿದ್ದರು. ಇದೀಗ ಬಿಎಂಟಿಸಿ ಬಸ್​ ಸ್ಟ್ಯಾಂಡ್​ ಒಂದರಲ್ಲಿ ಪ್ರಯಾಣಿಕರೊಂದಿಗೆ ಮಾತನಾಡಿ ಅಲ್ಲಿನ ದುಸ್ಥಿತಿಯ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಎಂಟಿಸಿ ಪ್ರಯಾಣಿಕರ ದೈನಂದಿನ ಪರದಾಟವನ್ನು ತಪಸ್ಸಿಗೆ ಹೋಲಿಸಿ ವಾಗ್ದಾಳಿ ನಡೆಸಿದ್ದಾರೆ.

ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ!

ಉತ್ತಮ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳಿಲ್ಲದೆ ಯಾವುದೇ ಸಾರಿಗೆ ವ್ಯವಸ್ಥೆ ಯಶಸ್ವಿಯಾಗಲು ಸಾಧ್ಯವಿಲ್ಲ. ಬೆಂಗಳೂರಿನಲ್ಲಿ ಬಸ್‌ಗಳ ಸಂಖ್ಯೆಯನ್ನು ಕನಿಷ್ಠ 15,000 ಕ್ಕೆ ಹೆಚ್ಚಿಸಬೇಕು. ನಗರದ ಯಾವುದೇ ಭಾಗದಲ್ಲಾದರೂ ಸರಿ, ಪ್ರತಿ ಪ್ರಜೆಗೆ ಐದು ನಿಮಿಷಗಳಲ್ಲಿ ಬಸ್ ಸಿಗುವಂತಾಗಲು ಖಾಸಗಿ ಸಹಭಾಗಿತ್ವವನ್ನು ಪ್ರೋತ್ಸಾಹಿಸಬೇಕು ಎಂದು ತೇಜಸ್ವಿ ಸೂರ್ಯ ಅವರು ಈ ಹಿಂದೆ ಮಾಡಿದ್ದ ಹಳೆಯ ಪೋಸ್ಟ್ ಅನ್ನು ನೆನಪಿಸಿಕೊಂಡಿದ್ದಾರೆ. ಆ ಪೋಸ್ಟ್ ಮಾಡಿ ಎಂಟು ತಿಂಗಳು ಕಳೆದಿದ್ದು, ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ, ಹೊಸ ಉಪಮುಖ್ಯಮಂತ್ರಿ ಹಾಗೂ ಹೊಸ ಸಾರಿಗೆ ಸಚಿವರು ಅಧಿಕಾರಕ್ಕೆ ಬಂದಿದ್ದರೂ ಬೆಂಗಳೂರಿನ ಬಿಎಂಟಿಸಿ ಸ್ಥಿತಿ ಮಾತ್ರ ಹಳೇ ಕಥೆಯನ್ನೇ ಮುಂದುವರಿಸಿದೆ ಎಂದು ಅವರು ಟೀಕಿಸಿದ್ದಾರೆ.

The post ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ! appeared first on Good News 24x7.

]]>
ನಾಡಪ್ರಭು ಕೆಂಪೇಗೌಡರ ಜನ್ಮದಿನದ ಶುಭಾಶಯಗಳು! https://www.goodnews24x7.com/happy-birthday-to-nadaprabhu-kempegowda/ Sat, 27 Jun 2026 05:50:23 +0000 https://www.goodnews24x7.com/?p=9683 ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಎಲ್ಲರೂ ಗೌರವ ಭಾವದಿಂದ ಸ್ಮರಿಸಬೇಕಾದ ದಿನ; ಆಡಳಿತಗಾರರು ಕೃತಜ್ಞತೆಯಿಂದ ನೆನಪಿಸಿಕೊಳ್ಳಬೇಕಾದ ದಿನ. ಏಕೆಂದರೆ, ಬೆಂಗಳೂರಿನಂಥ ಮಹಾಮಹಿಮ ನಗರಕ್ಕೆ ತಳಪಾಯ ಹಾಕಿದ ನಾಡಪ್ರಭುಗಳ 513ನೇ ಜನ್ಮದಿನವಿದು. ಇದನ್ನು ಸರ್ಕಾರವೇ ವಿಜೃಂಭಣೆಯಿಂದ ಆಚರಿಸುತ್ತಿದ್ದು, ‘ಬೆಂಗಳೂರಿನ ಜನಕ’ರನ್ನು ಸ್ಮರಿಸುತ್ತಿದೆ. ಈ ಮೂಲಕ,…

The post ನಾಡಪ್ರಭು ಕೆಂಪೇಗೌಡರ ಜನ್ಮದಿನದ ಶುಭಾಶಯಗಳು! appeared first on Good News 24x7.

]]>

ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಎಲ್ಲರೂ ಗೌರವ ಭಾವದಿಂದ ಸ್ಮರಿಸಬೇಕಾದ ದಿನ; ಆಡಳಿತಗಾರರು ಕೃತಜ್ಞತೆಯಿಂದ ನೆನಪಿಸಿಕೊಳ್ಳಬೇಕಾದ ದಿನ. ಏಕೆಂದರೆ, ಬೆಂಗಳೂರಿನಂಥ ಮಹಾಮಹಿಮ ನಗರಕ್ಕೆ ತಳಪಾಯ ಹಾಕಿದ ನಾಡಪ್ರಭುಗಳ 513ನೇ ಜನ್ಮದಿನವಿದು. ಇದನ್ನು ಸರ್ಕಾರವೇ ವಿಜೃಂಭಣೆಯಿಂದ ಆಚರಿಸುತ್ತಿದ್ದು, ‘ಬೆಂಗಳೂರಿನ ಜನಕ’ರನ್ನು ಸ್ಮರಿಸುತ್ತಿದೆ. ಈ ಮೂಲಕ, ಕೆಂಪೇಗೌಡರ ವೈಭವದ ಪರಂಪರೆಯನ್ನು ತರುಣ ತಲೆಮಾರುಗಳಿಗೆ ವರ್ಗಾಯಿಸುವ ಕೆಲಸವೂ ಆಗುತ್ತಿದೆ.

ಬೆಂಗಳೂರಿಗೆ ಏನಿಲ್ಲವೆಂದರೂ 1,100 ವರ್ಷಗಳ ಇತಿಹಾಸವಿದೆ. ಕನ್ನಡ ನಾಡಿನ ಬಹುಭಾಗದಿಂದ ಹಿಡಿದು ತಮಿಳುನಾಡಿನ ಮದುರೆಯವರೆಗೂ ಆಳಿದ ಹೊಯ್ಸಳರ ದೊರೆ ಬಲ್ಲಾಳನ ಕಾಲದಿಂದಲೂ ಬೆಂಗಳೂರಿನ ಉಲ್ಲೇಖವು ನಮಗೆ ಅನೇಕ ಕಡೆಗಳಲ್ಲಿ ಸಿಗುತ್ತದೆ.
18 ಬಗೆಯ ಕಸುಬುಗಳನ್ನು ಆಧರಿಸಿದ ಮೂಲ ಬೆಂಗಳೂರಿನ ‘ಪೇಟೆ’ಗಳನ್ನು (ಉದಾ: ದೊಡ್ಡಪೇಟೆ, ಚಿಕ್ಕಪೇಟೆ, ತಿಗಳರ ಪೇಟೆ, ಕುರುಬರ ಪೇಟೆ, ಅರಳೇಪೇಟೆ, ಬಳೇಪೇಟೆ, ತರಗುಪೇಟೆ, ಅಕ್ಕಿಪೇಟೆ, ರಾಗಿಪೇಟೆ, ಕುಂಬಾರರ ಪೇಟೆ, ನಗರ್ತರ ಪೇಟೆ, ಗಾಣಿಗರ ಪೇಟೆ, ಮಡಿವಾಳ ಪೇಟೆ, ಉಪ್ಪಾರಪೇಟೆ ಇತ್ಯಾದಿಗಳು) ನೋಡಿದರೆ, ಇದು ಗೊತ್ತಾಗುತ್ತದೆ.

ಈ ‘ಮೂಲ ಬೆಂಗಳೂರೇ’ ಕೆಂಪೇಗೌಡರು ಕಟ್ಟಿದ ಬೆಂಗಳೂರು ಎನ್ನುವುದು ಅಧ್ಯಯನಗಳಿಂದ ತಿಳಿದುಬಂದಿದೆ. ಇದರ ಆಧಾರದ ಮೇಲೆ, ನಂತರದ ಕಾಲದಲ್ಲಿ ಬಂದ ಆಳ್ವಿಕೆಗಾರರು ಬೆಂಗಳೂರನ್ನು ಪೇಟೆಯಾಗಿ, ಪಟ್ಟಣವಾಗಿ, ನಗರವಾಗಿ, ಮಹಾನಗರವಾಗಿ ಬೆಳೆಸಿದ್ದಾರೆ. ಈಗಂತೂ ನಮ್ಮ ರಾಜಧಾನಿಯು ಈ ಹಿರಿಮೆಗಳನ್ನೆಲ್ಲ ದಾಟಿ, ಜಪಾನಿನಿಂದ ಹಿಡಿದು ಅಮೆರಿಕದವರೆಗೂ ಎಲ್ಲರಿಗೂ ಗೊತ್ತಿರುವ ಒಂದು ‘ಕಾಸ್ಮೋಪಾಲಿಟನ್‌ ಸಿಟಿ’ ಆಗಿ, ಹೆಮ್ಮರದಂತೆ ಬೆಳೆದಿದೆಪೇಟೆಯಿಂದ ಸಿಟಿಯವರೆಗೆ
ಬೆಂಗಳೂರು ಇಂದು ಐಟಿ ಸಿಟಿ, ಬಿಟಿ ಸಿಟಿ, ನವೋದ್ಯಮಗಳ ನಗರ, ಸಂಶೋಧನೆಗಳ ನಗರ, ಏರೋನಾಟಿಕ್ಸ್‌ ಸಿಟಿ.. ಇತ್ಯಾದಿಗಳೆಲ್ಲ ಆಗಿದೆ. ಜೊತೆಗೆ, ಉದ್ಯಾನ ನಗರಿ ಎಂಬ ಖ್ಯಾತಿಯನ್ನೂ ಉಳಿಸಿಕೊಂಡಿದೆ. ಇದಲ್ಲದೆ, ಇತ್ತೀಚಿನ ವರ್ಷಗಳಲ್ಲಿ ಭಾರತದ ಆರ್ಥಿಕ ಕೇಂದ್ರವಾಗಿಯೂ ನಮ್ಮ ಬೆಂಗಳೂರು ಬೆಳೆದಿದೆ; ಇದಕ್ಕೆ ಪೂರಕವಾಗಿ ಇದು ನಿಜವಾದ ಅರ್ಥದಲ್ಲಿ ‘ನಾಲೆಡ್ಜ್‌ ಸಿಟಿ’ಯೂ ಆಗಿ ಬೆಳೆಯುತ್ತಿದೆ. ಒಟ್ಟಿನಲ್ಲಿ, ಇಲ್ಲಿ ಎಲ್ಲವೂ ಕೆಂಪೇಗೌಡರು ಹಾಕಿದ ಬುನಾದಿಯ ಮೇಲೆಯೇ ವಿಸ್ತರಣೆ ಆಗುತ್ತಿವೆ ಎನ್ನುವುದು ಹೆಮ್ಮೆಯ ಸಂಗತಿ.ಹೀಗಾಗಿಯೇ ಬೆಂಗಳೂರು ಇಂದು ಬಹುದೊಡ್ಡ ಶಿಕ್ಷಣ ತಾಣವಾಗಿದೆ; ಒಂದೂ ಕಾಲು ಕೋಟಿ ಜನರ ಪಾಲಿಗೆ ಸೂರಾಗಿದೆ; ವಿದೇಶೀಯರ ಪಾಲಿಗೆ ಅಚ್ಚುಮೆಚ್ಚಿನ ‘ಡೆಸ್ಟಿನೇಶನ್‌’ ಆಗಿದೆ! ಕಲಿಕೆ, ಹೂಡಿಕೆ, ಕೈಗಾರಿಕೆ, ಆಡಳಿತ, ಸಂಸ್ಕೃತಿ, ಶಾಂತಿ, ಹಿತಕರ ಹವೆ- ಹೀಗೆ ಎಲ್ಲದಕ್ಕೂ ಬೆಂಗಳೂರು ಇನ್ನೊಂದು ಹೆಸರಾಗಿದೆ. ಇವೆಲ್ಲಕ್ಕೆ ಕಿರೀಟವಿಟ್ಟಂತೆ ಈಗ ಇದು ‘ದೇಶದ ಡೆಕಾಕಾರ್ನ್‌ ಕಂಪನಿಗಳ ರಾಜಧಾನಿ’ಯಾಗಿಯೂ ಹೊರಹೊಮ್ಮಿದೆ. ಐಟಿ-ಬಿಟಿ ಖಾತೆಗಳ ಜವಾಬ್ದಾರಿಯನ್ನೂ ಹೊತ್ತುಕೊಂಡಿರುವ ನನಗೆ ದಿನನಿತ್ಯವೂ ಇದರ ಸಾಕ್ಷಾತ್‌ ದರ್ಶನವೇ ಆಗುತ್ತಿದೆ.

ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ

ಕೆಂಪೇಗೌಡರಿಗೆ ಸಂಬಂಧಿಸಿದ 46 ತಾಣಗಳನ್ನು ಅಭಿವೃದ್ಧಿಪಡಿಸಲು ‘ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರ’ವನ್ನೇ ರಚಿಸಲಾಗಿದ್ದು, ಇದಕ್ಕೆ ಅಗತ್ಯ ಹಣಕಾಸಿನ ಅನುದಾನ ಒದಗಿಸಲಾಗುತ್ತಿದೆ. ಇದರಡಿಯಲ್ಲಿ ಮಾಗಡಿ ತಾಲ್ಲೂಕಿನಲ್ಲಿರುವ ಕೆಂಪೇಗೌಡರ ಸಮಾಧಿ ಸ್ಥಳವಾದ ಕೆಂಪಾಪುರವನ್ನು ಸ್ಥಳಾಂತರಿಸಿ, ಅಲ್ಲಿ ‘ವೀರಸಮಾಧಿ ಅಭಿವೃದ್ಧಿ’ಯನ್ನು ಕೋಟ್ಯಂತರ ವೆಚ್ಚದಲ್ಲಿ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಭೂಸ್ವಾಧೀನ ಕಾರ್ಯ ಈಗಾಗಲೇ ಅಂತಿಮ ಹಂತದಲ್ಲಿ ಪ್ರಗತಿಯಲ್ಲಿದೆ. ಹಾಗೆಯೇ, ಮಾಗಡಿಯಲ್ಲಿ ಕೆಂಪೇಗೌಡರು ಕಟ್ಟಿದ ಕೋಟೆಯನ್ನು ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡಲಾಗುತ್ತಿದೆ. ಒಟ್ಟಿನಲ್ಲಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಕೆಂಪೇಗೌಡರಿಗೆ ಸಂಬಂಧಿಸಿದ ಸ್ಥಳಗಳನ್ನೆಲ್ಲ ‘ಮಾಗಡಿ, ಬೆಂಗಳೂರು ಮತ್ತು ನಂದಿ ಸಕ್ರ್ಯೂಟ್‌ ಗಳನ್ನಾಗಿ’ ವಿಂಗಡಿಸಿ, ಆಕರ್ಷಕ ಸ್ಥಳಗಳನ್ನಾಗಿ ಮಾಡಲಾಗುತ್ತಿದೆ. ಇದರಿಂದ ಪ್ರವಾಸೋದ್ಯಮ ಚಟುವಟಿಕೆಗಳೂ ಗರಿಗೆದರುತ್ತವೆ. ಈಗಾಗಲೇ ಈ ಪೈಕಿ ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳ ತಾಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ, ‘ಐಡೆಕ್‌’ ಸಂಸ್ಥೆಯಿಂದ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ.
ಒಟ್ಟಿನಲ್ಲಿ, ಕೆಂಪೇಗೌಡರು ಕಟ್ಟಿಸಿದ ಕೋಟೆಗಳು, ಕೆರೆಗಳು, ಪಾರಂಪರಿಕ ತಾಣಗಳೆಲ್ಲವೂ ಚಿರಸ್ಥಾಯಿಯಾಗಿ ಉಳಿಯಬೇಕೆನ್ನುವುದು ನಮ್ಮ ಸರ್ಕಾರದ ಸಂಕಲ್ಪವಾಗಿದೆ. ಮಿಗಿಲಾಗಿ, ಕೆಂಪೇಗೌಡರ ವಂಶಕ್ಕೆ ಸೇರಿದ ಇತಿಹಾಸ, ಕಲೆ, ಸಾಹಿತ್ಯ, ವಾಸ್ತುಶಿಲ್ಪ, ನೀರಾವರಿ, ಯೋಜನೆಗಳು ಇತ್ಯಾದಿಗಳ ಬಗ್ಗೆ ಆಯಾ ಕ್ಷೇತ್ರಗಳ ತಜ್ಞರಿಂದ ಸಮಗ್ರ ಮತ್ತು ತಲಸ್ಪರ್ಶಿ ಅಧ್ಯಯನಕ್ಕೆ ಬೇಕಾದ ಸೌಲಭ್ಯವನ್ನು ಮಾಡಿಕೊಡುವುದೂ ಸರ್ಕಾರದ ಚಿಂತನೆಯಲ್ಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ

ಕೆಂಪೇಗೌಡರ ಗೌರವಾರ್ಥವಾಗಿ, ಈ ವರ್ಷದಿಂದಲೇ ನಾನಾ ಕ್ಷೇತ್ರಗಳ ಅನುಪಮ ಸಾಧಕರಿಗೆ ‘ಅಂತಾರಾಷ್ಟ್ರೀಯ ಪ್ರಶಸ್ತಿ’ಯನ್ನು ಸರ್ಕಾರ ಆರಂಭಿಸಿದೆ. ಮೊದಲ ವರ್ಷದ ಈ ಪ್ರಶಸ್ತಿಗೆ ಬೆಂಗಳೂರು ವಿಶ್ವ ಭೂಪಟದಲ್ಲಿ ಕಾಣಿಸಿಕೊಳ್ಳುವಂತೆ ಮಾಡಿದ ಎಸ್‌.ಎಂ.ಕೃಷ್ಣ, ಇಸ್ಫೋಸಿಸ್‌ ಕಂಪನಿಯನ್ನು ಸ್ಥಾಪಿಸುವ ಮೂಲಕ ನಮ್ಮ ನಗರಕ್ಕೆ ‘ಭಾರತದ ಸಿಲಿಕಾನ್‌ ಸಿಟಿ’ ಎನ್ನುವ ಶ್ರೇಯಸ್ಸನ್ನು ತಂದಿತ್ತ ಎನ್‌.ಆರ್‌.ನಾರಾಯಣಮೂರ್ತಿ ಮತ್ತು ಬ್ಯಾಡ್ಮಿಂಟನ್‌ ತಾರೆ ಪ್ರಕಾಶ್‌ ಪಡುಕೋಣೆ ಅವರನ್ನು ತಜ್ಞರ ಸಮಿತಿಯು ಆರಿಸಿದೆ. ಇಂದು ನಡೆಯಲಿರುವ ‘ಕೆಂಪೇಗೌಡರ ಜಯಂತಿ’ಯಲ್ಲಿ ಈ ಮೂವರಿಗೂ ತಲಾ 5 ಲಕ್ಷ ರು. ನಗದಿನೊಂದಿಗೆ ಈ ಪ್ರತಿಷ್ಠಿತ ಪುರಸ್ಕಾರವನ್ನು ಪ್ರದಾನ ಮಾಡಲಾಗುವುದು.

ಕೆಂಪೇಗೌಡರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ಹೀಗೆ ಹಲವು ಅರ್ಥಪೂರ್ಣ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಇಂದು ಗಳಿಸಿರುವ ಅತಿಶಯವಾದ ಕೀರ್ತಿಗೆ ಕೆಂಪೇಗೌಡರೇ ಮೂಲಕಾರಣ! ಅವರು ಹಾಕಿಕೊಟ್ಟಿರುವ ಹಾದಿಯಲ್ಲೇ ನಾವೂ ಹೆಜ್ಜೆ ಇಡುತ್ತಿದ್ದೇವೆ. ನಾಡಿನ ಸಮಸ್ತ ಜನತೆ ಗುಡ್ ನ್ಯೂಸ್ ವಾಹಿನಿಯ ವತಿಯಿಂದ ನಾಡಪ್ರಭು ಕೆಂಪೇಗೌಡರ ಜನ್ಮದಿನದ ಶುಭಾಶಯಗಳು!

The post ನಾಡಪ್ರಭು ಕೆಂಪೇಗೌಡರ ಜನ್ಮದಿನದ ಶುಭಾಶಯಗಳು! appeared first on Good News 24x7.

]]>
ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ https://www.goodnews24x7.com/sdpi-urges-government-to-drop-bus-fare-hike-proposal/ Fri, 26 Jun 2026 12:37:53 +0000 https://www.goodnews24x7.com/?p=9678 ಮೈಸೂರು, ಜೂನ್ 26: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ರಾಜ್ಯ ಸರ್ಕಾರ ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು. ಅದೇ…

The post ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ appeared first on Good News 24x7.

]]>

ಮೈಸೂರು, ಜೂನ್ 26: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ರಾಜ್ಯ ಸರ್ಕಾರ ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು. ಅದೇ ರೀತಿ ರಾಜ್ಯದ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಪ್ರಯತ್ನವನ್ನು ಕೈಬಿಡಬೇಕು ಹಾಗೂ ಸಾರಿಗೆ ನಿಗಮಗಳ ನಷ್ಟದ ನೆಪದಲ್ಲಿ ಮತ್ತೆ ಬಸ್ ಪ್ರಯಾಣ ದರ ಹೆಚ್ಚಿಸುವ ಪ್ರಸ್ತಾವವನ್ನು ಸರ್ಕಾರ ತಕ್ಷಣವೇ ತಿರಸ್ಕರಿಸಬೇಕು ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಆಗ್ರಹಿಸಿದರು.
ಇಂದು ಮೈಸೂರಿನ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಜನಹಿತಕ್ಕೆ ಸಂಬಂಧಿಸಿದ ಮೂರು ಮಹತ್ವದ ವಿಷಯಗಳ ಕುರಿತು ಎಸ್‌ಡಿಪಿಐ ಪಕ್ಷದ ನಿಲುವನ್ನು ವಿವರಿಸಿದರು.
1. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಹಕ್ಕು ರಕ್ಷಣೆ ಸರ್ಕಾರದ ಹೊಣೆ
ಭಾರತದ ಚುನಾವಣಾ ಆಯೋಗವು ದೇಶಾದ್ಯಂತ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಅದರ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸಿಬ್ಬಂದಿಯೇ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಹೀಗಾಗಿ ಯಾವುದೇ ಅರ್ಹ ಮತದಾರರ ಹೆಸರು ಅನಗತ್ಯವಾಗಿ ಮತದಾರರ ಪಟ್ಟಿಯಿಂದ ಕೈಬಿಡದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿಯೂ ಆಗಿದೆ ಎಂದು ಅಬ್ದುಲ್ ಮಜೀದ್ ಹೇಳಿದರು.
ಪಶ್ಚಿಮ ಬಂಗಾಳದಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಪರಿಶೀಲನೆ ವೇಳೆ “Logical Discrepancy” ಎಂಬ ಕಾರಣವನ್ನು ಉಲ್ಲೇಖಿಸಿ ಲಕ್ಷಾಂತರ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ವರದಿಗಳು ಆತಂಕಕಾರಿ ಬೆಳವಣಿಗೆಯಾಗಿದೆ. ಭಾರತದಂತಹ ಬಹುಭಾಷಾ, ಬಹುಸಂಸ್ಕೃತಿಯ ದೇಶದಲ್ಲಿ ಹೆಸರುಗಳ ಕಾಗುಣಿತ ಅಥವಾ ದಾಖಲೆಗಳಲ್ಲಿನ ಸಣ್ಣಪುಟ್ಟ ವ್ಯತ್ಯಾಸಗಳನ್ನು ಆಧಾರವಾಗಿಸಿಕೊಂಡು ಮತದಾರರನ್ನು ಹೊರಗಿಡುವುದು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.
ಕೃತಕ ಬುದ್ಧಿಮತ್ತೆಯ ತಾಂತ್ರಿಕ ದೋಷ ಅಥವಾ ಆಡಳಿತಾತ್ಮಕ ಲೋಪದಿಂದ ಒಬ್ಬ ಅರ್ಹ ನಾಗರಿಕನೂ ಮತದಾನದ ಹಕ್ಕು ಕಳೆದುಕೊಳ್ಳಬಾರದು. ಆದ್ದರಿಂದ ರಾಜ್ಯ ಸರ್ಕಾರ ಚುನಾವಣಾ ಆಯೋಗದೊಂದಿಗೆ ಚರ್ಚಿಸಿ, “Logical Discrepancy”ಯನ್ನು ಮತದಾರರನ್ನು ಕೈಬಿಡುವ ಮಾನದಂಡವಾಗಿ ಬಳಸಬಾರದು ಎಂದು ಒತ್ತಾಯಿಸಬೇಕು. ಯಾವುದೇ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವ ಮೊದಲು ಮನೆ-ಮನೆಗೆ ಪರಿಶೀಲನೆ, ನೇರ ಭೇಟಿ ಹಾಗೂ ಸಂಬಂಧಪಟ್ಟ ವ್ಯಕ್ತಿಗೆ ಪೂರ್ವ ನೋಟಿಸ್ ನೀಡುವಂತಹ ಮಾನವೀಯ ಮತ್ತು ಪಾರದರ್ಶಕ ಕ್ರಮಗಳನ್ನು ಕಡ್ಡಾಯಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
2. ವಿದ್ಯುತ್ ವಿತರಣಾ ಕಂಪನಿಗಳ ಖಾಸಗೀಕರಣ ಜನವಿರೋಧಿ ಕ್ರಮ
ರಾಜ್ಯ ಸರ್ಕಾರ ವಿದ್ಯುತ್ ವಿತರಣಾ ಸಂಸ್ಥೆಗಳ (ESCOMs) ಕಾರ್ಯಾಚರಣೆಯನ್ನು ಹಂತ ಹಂತವಾಗಿ ಖಾಸಗಿ ಕಂಪನಿಗಳಿಗೆ ಒಪ್ಪಿಸುವ ಪ್ರಯತ್ನ ನಡೆಸುತ್ತಿರುವ ವರದಿಗಳು ಸಾರ್ವಜನಿಕರಲ್ಲಿ ತೀವ್ರ ಆತಂಕವನ್ನು ಉಂಟುಮಾಡಿವೆ ಎಂದು ಅಬ್ದುಲ್ ಮಜೀದ್ ಹೇಳಿದರು.
ವಿದ್ಯುತ್ ಎಂಬುದು ಸಾಮಾನ್ಯ ವಾಣಿಜ್ಯ ವಸ್ತುವಲ್ಲ; ಅದು ಜನಜೀವನ, ಕೃಷಿ, ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಅಭಿವೃದ್ಧಿಯ ಬೆನ್ನೆಲುಬಾಗಿದೆ. ಈ ಸೇವೆಯನ್ನು ಖಾಸಗಿ ಕಂಪನಿಗಳ ಲಾಭದ ಉದ್ದೇಶಕ್ಕೆ ಒಪ್ಪಿಸಿದರೆ ವಿದ್ಯುತ್ ದರ ಏರಿಕೆ, ಗ್ರಾಮೀಣ ಪ್ರದೇಶಗಳ ನಿರ್ಲಕ್ಷ್ಯ ಹಾಗೂ ಸೇವೆಯ ಗುಣಮಟ್ಟ ಕುಸಿಯುವ ಅಪಾಯವಿದೆ.
ಸರ್ಕಾರ ಖಾಸಗೀಕರಣದ ಮೂಲಕ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯುವ ಬದಲು, ಎಸ್ಕಾಂಗಳನ್ನು ಆರ್ಥಿಕವಾಗಿ ಸದೃಢಗೊಳಿಸಿ, ತಾಂತ್ರಿಕ ಸುಧಾರಣೆಗಳನ್ನು ಜಾರಿಗೆ ತಂದು, ಸಾರ್ವಜನಿಕ ಸ್ವಾಮ್ಯದಲ್ಲಿಯೇ ಉತ್ತಮ ಗುಣಮಟ್ಟದ ವಿದ್ಯುತ್ ಸೇವೆ ಒದಗಿಸಲು ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.
3. ಬಸ್ ದರ ಏರಿಕೆ ಪ್ರಸ್ತಾವವನ್ನು ಸರ್ಕಾರ ತಕ್ಷಣ ತಿರಸ್ಕರಿಸಲಿ
ರಾಜ್ಯದ ರಸ್ತೆ ಸಾರಿಗೆ ನಿಗಮಗಳು ಮತ್ತೊಮ್ಮೆ ಬಸ್ ಪ್ರಯಾಣ ದರ ಹೆಚ್ಚಿಸುವ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಿರುವುದು ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದೆ ಎಂದು ಅಬ್ದುಲ್ ಮಜೀದ್ ಹೇಳಿದರು.
ಈಗಾಗಲೇ 2025ರ ಜನವರಿ 5ರಿಂದ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸಲಾಗಿದೆ. ಇದೀಗ ಬಿಎಂಟಿಸಿ ಶೇ.44, ಕೆಎಸ್‌ಆರ್‌ಟಿಸಿ ಶೇ.33 ಹಾಗೂ ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯೂಕೆಆರ್‌ಟಿಸಿಗಳೂ ದರ ಏರಿಕೆಗೆ ಪ್ರಸ್ತಾವ ಸಲ್ಲಿಸಿರುವುದು ಸಾಮಾನ್ಯ ಜನರ ಬದುಕಿನ ಮೇಲೆ ಮತ್ತಷ್ಟು ಹೊರೆ ಹೊರಿಸುವ ಕ್ರಮವಾಗಿದೆ.
ಬೆಲೆ ಏರಿಕೆ, ನಿರುದ್ಯೋಗ ಹಾಗೂ ಜೀವನೋಪಾಯದ ಸಂಕಷ್ಟದಿಂದ ಜನರು ತತ್ತರಿಸಿರುವ ಸಂದರ್ಭದಲ್ಲಿ ಮತ್ತೆ ಬಸ್ ದರ ಹೆಚ್ಚಿಸುವುದು ವಿದ್ಯಾರ್ಥಿಗಳು, ಕಾರ್ಮಿಕರು, ರೈತರು, ಮಹಿಳೆಯರು, ಉದ್ಯೋಗಿಗಳು ಹಾಗೂ ಪ್ರತಿದಿನ ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಿರುವ ಲಕ್ಷಾಂತರ ಜನರಿಗೆ ದೊಡ್ಡ ಹೊಡೆತವಾಗಲಿದೆ.
ಸಾರಿಗೆ ನಿಗಮಗಳ ಆರ್ಥಿಕ ಸಂಕಷ್ಟಕ್ಕೆ ಪ್ರಯಾಣಿಕರು ಕಾರಣರಲ್ಲ. ಸರ್ಕಾರದ ನೀತಿ ವೈಫಲ್ಯ, ಸಮರ್ಪಕ ಅನುದಾನದ ಕೊರತೆ ಮತ್ತು ಆಡಳಿತಾತ್ಮಕ ದೌರ್ಬಲ್ಯವೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಈ ವೈಫಲ್ಯದ ಹೊರೆ ಜನರ ಮೇಲೆ ಹಾಕುವುದು ಸರಿಯಲ್ಲ. ಸರ್ಕಾರ ದರ ಏರಿಕೆಯನ್ನು ಸುಲಭ ಪರಿಹಾರವಾಗಿ ಪರಿಗಣಿಸದೆ, ನಿಗಮಗಳ ಆರ್ಥಿಕ ಪುನಶ್ಚೇತನಕ್ಕಾಗಿ ಸಮಗ್ರ ಕಾರ್ಯಯೋಜನೆ ರೂಪಿಸಬೇಕು. ಬಸ್ ದರ ಏರಿಕೆ ಪ್ರಸ್ತಾವವನ್ನು ತಕ್ಷಣವೇ ತಿರಸ್ಕರಿಸಿ ಜನಸಾಮಾನ್ಯರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಅವರು ಒತ್ತಾಯಿಸಿದರು.
ಅಂತಿಮವಾಗಿ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು, ಸಾರ್ವಜನಿಕ ವಿದ್ಯುತ್ ಸೇವೆ ಹಾಗೂ ಕೈಗೆಟುಕುವ ಸಾರ್ವಜನಿಕ ಸಾರಿಗೆ ಇವು ಜನರ ಮೂಲಭೂತ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳಾಗಿದ್ದು, ಸರ್ಕಾರವು ಜನವಿರೋಧಿ ನೀತಿಗಳನ್ನು ಕೈಬಿಟ್ಟು ಜನಪರ ಆಡಳಿತಕ್ಕೆ ಆದ್ಯತೆ ನೀಡಬೇಕು ಎಂದು ಅಬ್ದುಲ್ ಮಜೀದ್ ಕರೆ ನೀಡಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷರಾದ ದೇವನೂರು ಪುಟ್ಟನಂಜಯ್ಯ, ರಾಜ್ಯ ಕಾರ್ಯದರ್ಶಿ ಮೌಲಾನಾ ಅಕ್ರಮ್, ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್, ಮೈಸೂರು ಜಿಲ್ಲಾ ಕಾರ್ಯಾಧ್ಯಕ್ಷ ಶಫಿವುಲ್ಲಾ ಹಾಗೂ ಜಿಲ್ಲಾ ಉಪಾಧ್ಯಕ್ಷ ಎಸ್. ಸ್ವಾಮಿ ಉಪಸ್ಥಿತರಿದ್ದರು.
ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI), ಕರ್ನಾಟಕ

The post ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ appeared first on Good News 24x7.

]]>
ನೈಜೀರಿಯಾದಲ್ಲಿ ರಕ್ತಪಾ*: 29 ರೈತರನ್ನು ಗುಂಡಿಕ್ಕಿ ಕೊಂ* ಇಸ್ಲಾಮಿಕ್ ಸ್ಟೇಟ್ ಉಗ್ರರು. https://www.goodnews24x7.com/the-violence-in-the-african-country-of-nigeria-continues-with-at-least-29-farmers-killed-in-a-fierce-attack-by-islamic-state-is-militants/ Tue, 28 Apr 2026 09:20:26 +0000 https://www.goodnews24x7.com/?p=9451 ಅಬುಜಾ: ಆಫ್ರಿಕಾ ರಾಷ್ಟ್ರ ನೈಜೀರಿಯಾದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಇಸ್ಲಾಮಿಕ್ ಸ್ಟೇಟ್ (IS) ಉಗ್ರಗಾಮಿಗಳು ನಡೆಸಿದ ಭೀಕರ ದಾಳಿಯಲ್ಲಿ ಕನಿಷ್ಠ 29 ರೈತರು ಬಲಿಯಾಗಿದ್ದಾರೆ. ಈ ಘಟನೆಯು ದೇಶದ ಈಶಾನ್ಯ ಭಾಗದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ನಡುರಾತ್ರಿಯ ನರಮೇಧ: ಅಧಿಕಾರಿಗಳು ನೀಡಿರುವ…

The post ನೈಜೀರಿಯಾದಲ್ಲಿ ರಕ್ತಪಾ*: 29 ರೈತರನ್ನು ಗುಂಡಿಕ್ಕಿ ಕೊಂ* ಇಸ್ಲಾಮಿಕ್ ಸ್ಟೇಟ್ ಉಗ್ರರು. appeared first on Good News 24x7.

]]>

ಅಬುಜಾ: ಆಫ್ರಿಕಾ ರಾಷ್ಟ್ರ ನೈಜೀರಿಯಾದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಇಸ್ಲಾಮಿಕ್ ಸ್ಟೇಟ್ (IS) ಉಗ್ರಗಾಮಿಗಳು ನಡೆಸಿದ ಭೀಕರ ದಾಳಿಯಲ್ಲಿ ಕನಿಷ್ಠ 29 ರೈತರು ಬಲಿಯಾಗಿದ್ದಾರೆ. ಈ ಘಟನೆಯು ದೇಶದ ಈಶಾನ್ಯ ಭಾಗದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.

ನಡುರಾತ್ರಿಯ ನರಮೇಧ:
ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ನೈಜೀರಿಯಾದ ಅಡಮಾವಾ ರಾಜ್ಯದ ಗೊಂಬಿ ಸ್ಥಳೀಯ ಸರ್ಕಾರಿ ಪ್ರದೇಶದ ‘ಗಯಾಕು’ ಎಂಬ ಹಳ್ಳಿಯ ಮೇಲೆ ಉಗ್ರರು ತಡರಾತ್ರಿ ದಾಳಿ ನಡೆಸಿದ್ದಾರೆ. ಗ್ರಾಮಸ್ಥರು ನಿದ್ರೆಯಲ್ಲಿದ್ದಾಗ ನುಗ್ಗಿದ ಉಗ್ರರ ಗುಂಪು ಮನಬಂದಂತೆ ಗುಂಡಿನ ಸುರಿಮಳೆಗೈದಿದೆ. ಈ ದಾಳಿಯಲ್ಲಿ 29ಕ್ಕೂ ಹೆಚ್ಚು ಅಮಾಯಕ ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹೊಣೆ ಹೊತ್ತುಕೊಂಡ ಇಸ್ಲಾಮಿಕ್ ಸ್ಟೇಟ್:
ಈ ಕ್ರೂರ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಸಂಘಟನೆ ಹೊತ್ತುಕೊಂಡಿದೆ. ಟೆಲಿಗ್ರಾಮ್ ಮೆಸೇಜಿಂಗ್ ಆಪ್ ಮೂಲಕ ಸಂದೇಶ ಬಿಡುಗಡೆ ಮಾಡಿರುವ ಸಂಘಟನೆಯು, ಈ ಹತ್ಯಾಕಾಂಡ ತಾನೇ ನಡೆಸಿರುವುದಾಗಿ ಒಪ್ಪಿಕೊಂಡಿದೆ.

ಗವರ್ನರ್ ಆಕ್ರೋಶ:
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಡಮಾವಾ ರಾಜ್ಯದ ಗವರ್ನರ್ ಅಹ್ಮದು ಉಮರು ಫಿಂಟಿರಿ, ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಇದೊಂದು ಅತ್ಯಂತ ದುರಂತಮಯ ಮತ್ತು ಅಮಾನವೀಯ ಕೃತ್ಯ. ಇಂತಹ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಹಳ್ಳಿಯಲ್ಲಿ ಬಿಗುವಿನ ವಾತಾವರಣವಿದ್ದು, ಭದ್ರತಾ ಪಡೆಗಳು ಉಗ್ರರ ಪತ್ತೆಗಾಗಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.

The post ನೈಜೀರಿಯಾದಲ್ಲಿ ರಕ್ತಪಾ*: 29 ರೈತರನ್ನು ಗುಂಡಿಕ್ಕಿ ಕೊಂ* ಇಸ್ಲಾಮಿಕ್ ಸ್ಟೇಟ್ ಉಗ್ರರು. appeared first on Good News 24x7.

]]>
ಜಿಬಿಎ ಚುನಾವಣೆ ವಿಳಂಬ: ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ಸತೀಶ್‌ ಉರಾಳ್‌ ಕಿಡಿ. https://www.goodnews24x7.com/gba-election-delay-bjp-leader-satish-ural-lashes-out-at-government/ Mon, 27 Apr 2026 10:11:05 +0000 https://www.goodnews24x7.com/?p=9412 ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ರದ್ದುಗೊಳಿಸಿ ರಚಿಸಲಾಗಿರುವ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ (ಜಿಬಿಎ) ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ಹಣದ ಕೊರತೆಯಿದೆ ಎಂಬ ಚುನಾವಣಾ ಆಯೋಗದ ಹೇಳಿಕೆಯನ್ನು ಬಿಜೆಪಿ ಮುಖಂಡ ಸತೀಶ್‌ ಉರಾಳ್‌ ತೀವ್ರವಾಗಿ ಟೀಕಿಸಿದ್ದಾರೆ. ಚುನಾವಣೆ ನಡೆಸಲು ಸರ್ಕಾರದ ಬಳಿ…

The post ಜಿಬಿಎ ಚುನಾವಣೆ ವಿಳಂಬ: ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ಸತೀಶ್‌ ಉರಾಳ್‌ ಕಿಡಿ. appeared first on Good News 24x7.

]]>

ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ರದ್ದುಗೊಳಿಸಿ ರಚಿಸಲಾಗಿರುವ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ (ಜಿಬಿಎ) ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ಹಣದ ಕೊರತೆಯಿದೆ ಎಂಬ ಚುನಾವಣಾ ಆಯೋಗದ ಹೇಳಿಕೆಯನ್ನು ಬಿಜೆಪಿ ಮುಖಂಡ ಸತೀಶ್‌ ಉರಾಳ್‌ ತೀವ್ರವಾಗಿ ಟೀಕಿಸಿದ್ದಾರೆ. ಚುನಾವಣೆ ನಡೆಸಲು ಸರ್ಕಾರದ ಬಳಿ ಹಣವಿಲ್ಲದಿರುವುದು ರಾಜ್ಯದ ಇಂದಿನ ಹದಗೆಟ್ಟ ಆರ್ಥಿಕ ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಲೇವಡಿ ಮಾಡಿದ್ದಾರೆ. ಅತಿ ಹೆಚ್ಚು ಆದಾಯ ತರುವ ಬೆಂಗಳೂರು ನಗರದ ಪಾಲಿಕೆಗಳ ಚುನಾವಣೆಗೆ ಹಣವಿಲ್ಲ ಎಂದು ಸಬೂಬು ನೀಡುತ್ತಿರುವುದು ಹಾಸ್ಯಾಸ್ಪದ ಸಂಗತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಭಿವೃದ್ಧಿ ಕುಂಠಿತ ಹಾಗೂ ಆಡಳಿತಾಧಿಕಾರಿಗಳ ಆಡಳಿತ:

ಬೆಂಗಳೂರಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಆಡಳಿತ ಕೊನೆಗೊಂಡು ಸುಮಾರು 5 ವರ್ಷ 7 ತಿಂಗಳುಗಳೇ ಕಳೆದಿವೆ. ಕಾನೂನಿನ ಪ್ರಕಾರ ಆಡಳಿತಾಧಿಕಾರಿಗಳ ಅವಧಿ ಕೇವಲ ಆರು ತಿಂಗಳು ಮಾತ್ರ ಇರಬೇಕಿತ್ತು, ಆದರೆ ಈಗ ಆರು ವರ್ಷಗಳಾಗುತ್ತಾ ಬಂದರೂ ಚುನಾವಣೆ ನಡೆಸುತ್ತಿಲ್ಲ ಎಂದು ಅವರು ದೂರಿದ್ದಾರೆ. ಚುನಾಯಿತ ಪ್ರತಿನಿಧಿಗಳಿಲ್ಲದೆ ನಗರದ ಅಭಿವೃದ್ಧಿ ವೇಗ ಕುಂಠಿತಗೊಂಡಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ಕೂಡ ಎಚ್ಚರಿಕೆ ನೀಡಿದ್ದರೂ ಸಹ, ಸರ್ಕಾರವು ಸಿಬ್ಬಂದಿ ಕೊರತೆ ಮತ್ತು ಗಣತಿ ಕಾರ್ಯದ ನೆಪ ಹೇಳಿ ಸಮಯ ಕಳೆಯುತ್ತಿದೆ ಎಂದು ಸತೀಶ್ ಉರಾಳ್ ಗಂಭೀರವಾಗಿ ಆರೋಪಿಸಿದ್ದಾರೆ.

ಪ್ರಜಾಪ್ರಭುತ್ವದ ಆಶಯಕ್ಕೆ ಧಕ್ಕೆ:

ಉಪಮುಖ್ಯಮಂತ್ರಿಗಳು ಬೆಂಗಳೂರು ಅಭಿವೃದ್ಧಿಯ ಉಸ್ತುವಾರಿ ಹೊತ್ತಿದ್ದರೂ, ಜಿಬಿಎ ಆರ್ಥಿಕವಾಗಿ ಸಬಲವಾಗಿದೆ ಎಂದು ಜಂಭ ಕೊಚ್ಚಿಕೊಳ್ಳುತ್ತಲೇ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ನಾಗರಿಕರು ಇದನ್ನು ಒಂದು ನಾಟಕದಂತೆ ನೋಡುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಪಾತ್ರ ಮುಖ್ಯವಾಗಿದೆ. ಆದರೆ, ರಾಜ್ಯ ಸರ್ಕಾರವು ಚುನಾವಣಾ ಆಯೋಗದ ಜೊತೆ ಸೇರಿ ಕಣ್ಣ ಮುಚ್ಚಾಲೆ ಆಟವಾಡುತ್ತಿದ್ದು, ಚುನಾವಣೆ ನಡೆಸದೆ ಜನರಿಗೆ ಮೋಸ ಮಾಡುತ್ತಿದೆ ಎಂದು ಸತೀಶ್ ಉರಾಳ್ ವಾಗ್ದಾಳಿ ನಡೆಸಿದ್ದಾರೆ.


The post ಜಿಬಿಎ ಚುನಾವಣೆ ವಿಳಂಬ: ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ಸತೀಶ್‌ ಉರಾಳ್‌ ಕಿಡಿ. appeared first on Good News 24x7.

]]>
ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ. https://www.goodnews24x7.com/scheduled-caste-internal-reservation-implementation-state-governments-historic-order/ Fri, 24 Apr 2026 13:36:37 +0000 https://www.goodnews24x7.com/?p=9394 ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ (SC) ದಶಕಗಳ ಕಾಲದ ಬೇಡಿಕೆಯಾದ ಒಳ ಮೀಸಲಾತಿಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಆಗಸ್ಟ್ 19ರಂದು ಕೈಗೊಂಡ ನಿರ್ಧಾರದಂತೆ, ಶಿಕ್ಷಣ ಮತ್ತು ಉದ್ಯೋಗದ ನೇಮಕಾತಿ ಪ್ರಕ್ರಿಯೆಗಳಲ್ಲಿ ಈ ಮೀಸಲಾತಿ…

The post ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ. appeared first on Good News 24x7.

]]>

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ (SC) ದಶಕಗಳ ಕಾಲದ ಬೇಡಿಕೆಯಾದ ಒಳ ಮೀಸಲಾತಿಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಆಗಸ್ಟ್ 19ರಂದು ಕೈಗೊಂಡ ನಿರ್ಧಾರದಂತೆ, ಶಿಕ್ಷಣ ಮತ್ತು ಉದ್ಯೋಗದ ನೇಮಕಾತಿ ಪ್ರಕ್ರಿಯೆಗಳಲ್ಲಿ ಈ ಮೀಸಲಾತಿ ಅನ್ವಯವಾಗಲಿದೆ. ಈ ಮಹತ್ವದ ಬದಲಾವಣೆಗೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಆಯೋಗದ ಶಿಫಾರಸುಗಳು ಮೂಲಾಧಾರವಾಗಿದ್ದು, ಒಟ್ಟು ಶೇಕಡಾ 17 ರಷ್ಟು ಲಭ್ಯವಿರುವ ಮೀಸಲಾತಿಯನ್ನು ವಿವಿಧ ಉಪಪಂಗಡಗಳಿಗೆ ಹಂಚಿಕೆ ಮಾಡಲಾಗಿದೆ.

ಸರ್ಕಾರದ ಹೊಸ ಆದೇಶದ ಪ್ರಕಾರ, ಮೀಸಲಾತಿಯನ್ನು ಪ್ರಮುಖವಾಗಿ ಮೂರು ಭಾಗಗಳಾಗಿ ವಿಂಗಡಿಸಲಾಗಿದೆ. ಮಾದಿಗ ಸೇರಿದಂತೆ 18 ಉಪಜಾತಿಗಳನ್ನು ಹೊಂದಿರುವ ‘ಎಡಗೈ’ (Left Wing) ಸಮುದಾಯಕ್ಕೆ ಶೇ. 6 ರಷ್ಟು ಮೀಸಲಾತಿ ನೀಡಲಾಗಿದೆ. ಅದೇ ರೀತಿ, ಹೊಲೆಯ ಹಾಗೂ ಚಲವಾದಿ ಸೇರಿದಂತೆ 20 ಜಾತಿಗಳನ್ನೊಳಗೊಂಡ ‘ಬಲಗೈ’ (Right Wing) ಸಮುದಾಯಕ್ಕೂ ಶೇ. 6 ರಷ್ಟು ಮೀಸಲಾತಿಯನ್ನು ನಿಗದಿಪಡಿಸಲಾಗಿದೆ. ಇನ್ನುಳಿದಂತೆ ಲಂಬಾಣಿ, ಭೋವಿ, ಕೊರಚ, ಕೊರಮ ಹಾಗೂ ಅಲೆಮಾರಿಗಳು ಸೇರಿದಂತೆ ಒಟ್ಟು 63 ಉಪಜಾತಿಗಳನ್ನು ಹೊಂದಿರುವ ‘ಇತರೆ’ ಸಮುದಾಯಗಳಿಗೆ ಶೇ. 5 ರಷ್ಟು ಒಳ ಮೀಸಲಾತಿಯನ್ನು ಹಂಚಿಕೆ ಮಾಡಲಾಗಿದೆ.

ನಾಗಮೋಹನದಾಸ್ ಆಯೋಗವು ಈ ಹಿಂದೆ ಸಮುದಾಯಗಳನ್ನು ಐದು ಪ್ರವರ್ಗಗಳಾಗಿ ವಿಂಗಡಿಸಿ ವಿಭಿನ್ನ ಪ್ರಮಾಣದ ಮೀಸಲಾತಿಗೆ ಶಿಫಾರಸು ಮಾಡಿತ್ತಾದರೂ, ರಾಜ್ಯ ಸರ್ಕಾರವು ಸಮುದಾಯಗಳ ಹಿತದೃಷ್ಟಿಯಿಂದ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾದ (ತಲಾ ಶೇ. 6) ಮೀಸಲಾತಿಯನ್ನು ನೀಡಿ ಅಂತಿಮ ಆದೇಶ ಹೊರಡಿಸಿದೆ. ಇದರಿಂದಾಗಿ ಸಮಾಜದ ಕಟ್ಟಕಡೆಯ ಸಮುದಾಯಗಳಿಗೂ ಸರ್ಕಾರಿ ಸೌಲಭ್ಯಗಳು ಮತ್ತು ಉದ್ಯೋಗಾವಕಾಶಗಳು ನ್ಯಾಯಯುತವಾಗಿ ತಲುಪಲಿವೆ ಎಂಬುದು ಸರ್ಕಾರದ ಆಶಯವಾಗಿದೆ.

The post ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ. appeared first on Good News 24x7.

]]>
ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ; ಪಾಲನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ. https://www.goodnews24x7.com/hindi-exam-high-court-orders-to-give-marks-instead-of-grades-cm-siddaramaiah-announces-compliance/ Tue, 21 Apr 2026 11:32:56 +0000 https://www.goodnews24x7.com/?p=9356 ಚಾಮರಾಜನಗರ: ತೃತೀಯ ಭಾಷೆ ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ರಾಜಕೀಯ ಮತ್ತು ಸಾಮಾಜಿಕ ವಿಚಾರಗಳ ಬಗ್ಗೆಯೂ ಪ್ರತಿಕ್ರಿಯೆ…

The post ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ; ಪಾಲನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ. appeared first on Good News 24x7.

]]>

ಚಾಮರಾಜನಗರ: ತೃತೀಯ ಭಾಷೆ ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ರಾಜಕೀಯ ಮತ್ತು ಸಾಮಾಜಿಕ ವಿಚಾರಗಳ ಬಗ್ಗೆಯೂ ಪ್ರತಿಕ್ರಿಯೆ ನೀಡಿದರು.

ಸುದ್ದಿಯ ಮುಖ್ಯಾಂಶಗಳು:
ಹಿಂದಿ ಮೌಲ್ಯಮಾಪನ: ತೃತೀಯ ಭಾಷೆ ಹಿಂದಿಗೆ ಈ ವರ್ಷ ಗ್ರೇಡ್‌ ಬದಲಿಗೆ ಅಂಕಗಳನ್ನೇ ನೀಡಬೇಕು ಎಂಬ ಉಚ್ಚ ನ್ಯಾಯಾಲಯದ ನಿರ್ದೇಶನವನ್ನು ಸರ್ಕಾರ ಜಾರಿಗೆ ತರಲಿದೆ. ಹಳೆಯ ಪದ್ಧತಿಯಂತೆಯೇ ಮೌಲ್ಯಮಾಪನ ನಡೆಯಲಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಕೇಂದ್ರದ ವಿರುದ್ಧ ಕಿಡಿ: ಐಟಿ ಮತ್ತು ಇಡಿ ದಾಳಿಗಳು ಕೇವಲ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ನಡೆಯುತ್ತಿವೆ. ಬಿಜೆಪಿಯವರ ಮೇಲೆ ಯಾವುದೇ ದಾಳಿಗಳು ನಡೆಯುತ್ತಿಲ್ಲ ಎಂದು ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಮನೆ ಮೇಲಿನ ಇಡಿ ದಾಳಿಯನ್ನು ಉಲ್ಲೇಖಿಸಿ ಟೀಕಿಸಿದರು.

ಮೂಢನಂಬಿಕೆ ಮತ್ತು ಚಾಮರಾಜನಗರ: “ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬ ಮೂಢನಂಬಿಕೆಯಲ್ಲಿ ನನಗೆ ನಂಬಿಕೆಯಿಲ್ಲ. ಇಲ್ಲಿಗೆ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ ಎಂಬುದು ನನ್ನ ಅನುಭವ,” ಎಂದು ಸಿಎಂ ಮಾರ್ಮಿಕವಾಗಿ ನುಡಿದರು.

ಕ್ಷೇತ್ರ ಮರು ವಿಂಗಡಣೆಗೆ ವಿರೋಧ: ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿಯ ಪರವಾಗಿದೆ, ಆದರೆ ಮೀಸಲಾತಿಯೊಂದಿಗೆ ಕ್ಷೇತ್ರ ಮರು ವಿಂಗಡನೆಯನ್ನು ಸೇರಿಸುತ್ತಿರುವುದಕ್ಕೆ ನಮ್ಮ ವಿರೋಧವಿದೆ ಎಂದು ಕೇಂದ್ರದ ನಡೆಯನ್ನು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಗಳು: ಆರಂಭದಲ್ಲಿ ಗ್ಯಾರಂಟಿಗಳನ್ನು ವಿರೋಧಿಸುತ್ತಿದ್ದವರಿಗೇ ಈಗ ಇದು ಬಡವರ ಕಾರ್ಯಕ್ರಮ ಎಂಬುದು ಅರ್ಥವಾಗಿದೆ. ಅದಕ್ಕಾಗಿಯೇ ಅವರೂ ಈಗ ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

ಇತರ ಪ್ರಮುಖ ಪ್ರತಿಕ್ರಿಯೆಗಳು:
ಸತ್ತವರಿಗೆ ಪರಿಹಾರ ನೀಡುವ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ ಎಂದು ಜೆಡಿಎಸ್ ಶಾಸಕ ಶರಣಗೌಡ ಅವರ ಪತ್ರಕ್ಕೆ ಉತ್ತರಿಸಿದ ಸಿಎಂ, ಆಮ್ಲಜನಕ ದುರಂತದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು. ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

The post ಹಿಂದಿ ಪರೀಕ್ಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಆದೇಶ; ಪಾಲನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ. appeared first on Good News 24x7.

]]>
ರೈತರಿಗೆ ನೆಮ್ಮದಿ: ತೊಗರಿ ಮತ್ತು ಕಡಲೆ ಖರೀದಿ ಅವಧಿ ಒಂದು ತಿಂಗಳು ವಿಸ್ತರಣೆ! https://www.goodnews24x7.com/farmers-relief-chickpea-and-chickpea-procurement-period-extended-by-one-month/ Sat, 18 Apr 2026 11:30:21 +0000 https://www.goodnews24x7.com/?p=9310 ರಾಜ್ಯದ ರೈತರ ಹಿತದೃಷ್ಟಿಯಿಂದ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೇಂದ್ರ ಸಚಿವರೊಂದಿಗೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಇದರ ಫಲವಾಗಿ, 2025-26ನೇ ಸಾಲಿನ ಬೆಲೆ ಬೆಂಬಲ ಯೋಜನೆ (MSP) ಅಡಿಯಲ್ಲಿ ತೊಗರಿ ಖರೀದಿ ಅವಧಿಯನ್ನು ಒಂದು ತಿಂಗಳ ಕಾಲ ವಿಸ್ತರಿಸಲಾಗಿದೆ. ಈಗಾಗಲೇ 98,610…

The post ರೈತರಿಗೆ ನೆಮ್ಮದಿ: ತೊಗರಿ ಮತ್ತು ಕಡಲೆ ಖರೀದಿ ಅವಧಿ ಒಂದು ತಿಂಗಳು ವಿಸ್ತರಣೆ! appeared first on Good News 24x7.

]]>

ರಾಜ್ಯದ ರೈತರ ಹಿತದೃಷ್ಟಿಯಿಂದ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೇಂದ್ರ ಸಚಿವರೊಂದಿಗೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಇದರ ಫಲವಾಗಿ, 2025-26ನೇ ಸಾಲಿನ ಬೆಲೆ ಬೆಂಬಲ ಯೋಜನೆ (MSP) ಅಡಿಯಲ್ಲಿ ತೊಗರಿ ಖರೀದಿ ಅವಧಿಯನ್ನು ಒಂದು ತಿಂಗಳ ಕಾಲ ವಿಸ್ತರಿಸಲಾಗಿದೆ. ಈಗಾಗಲೇ 98,610 ರೈತರು ನೋಂದಾಯಿಸಿಕೊಂಡಿದ್ದರೂ, ಹೆಚ್ಚಿನ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಅಷ್ಟೇ ಅಲ್ಲದೆ, ಮಾರುಕಟ್ಟೆ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿಯಾಗಿ 58 ಸಾವಿರ ಕ್ವಿಂಟಾಲ್ ಕಡಲೆ ಖರೀದಿಸಲು ಮತ್ತು ಅದರ ಕಾಲಾವಧಿಯನ್ನು ಒಂದು ತಿಂಗಳು ವಿಸ್ತರಿಸಲು ಕೇಂದ್ರ ಸರ್ಕಾರ ಸಮ್ಮತಿಸಿದೆ. ಸೂರ್ಯಕಾಂತಿ ಬೆಳೆಗಾರರಿಗೂ ನೆರವಾಗಲು ಕ್ವಿಂಟಾಲ್‌ಗೆ 7,721 ರೂ. ದರದಂತೆ 11 ಸಾವಿರ ಮೆಟ್ರಿಕ್ ಟನ್ ಖರೀದಿಗಾಗಿ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಈ ಕ್ರಮಗಳಿಂದಾಗಿ ರಾಜ್ಯದ ಸಾವಿರಾರು ರೈತರಿಗೆ ತಮ್ಮ ಬೆಳೆಗೆ ನ್ಯಾಯಯುತ ಬೆಲೆ ಸಿಗುವಂತಾಗಿದೆ.

The post ರೈತರಿಗೆ ನೆಮ್ಮದಿ: ತೊಗರಿ ಮತ್ತು ಕಡಲೆ ಖರೀದಿ ಅವಧಿ ಒಂದು ತಿಂಗಳು ವಿಸ್ತರಣೆ! appeared first on Good News 24x7.

]]>