Hassan Archives - Good News 24x7 https://www.goodnews24x7.com/tag/hassan/ Kannada Wed, 04 Mar 2026 15:02:15 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Hassan Archives - Good News 24x7 https://www.goodnews24x7.com/tag/hassan/ 32 32 ತಿಳಿ ಹೇಳಿದ್ದಕ್ಕೆ ಕಾರು ಹರಿಸಿ ಯುವಕನ ಹತ್ಯೆ! https://www.goodnews24x7.com/a-young-man-was-killed-by-being-hit-by-a-car-for-telling-him-to-drive-slowlya-young-man-was-killed-by-being-hit-by-a-car-for-telling-him-to-drive-slowly/ Wed, 04 Mar 2026 15:01:26 +0000 https://www.goodnews24x7.com/?p=8652   ಹಾಸನದಲ್ಲಿ ನಿಧಾನವಾಗಿ ಕಾರು ಓಡಿಸುವಂತೆ ತಿಳಿ ಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ ಮಾಡಿದ ಘಟನೆ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಮನು(27) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 12 ಗಂಟೆ ಸಮಯದಲ್ಲಿ ಮನು, ಅಭಿಷೇಕ್, ರಾಕೇಶ್…

The post ತಿಳಿ ಹೇಳಿದ್ದಕ್ಕೆ ಕಾರು ಹರಿಸಿ ಯುವಕನ ಹತ್ಯೆ! appeared first on Good News 24x7.

]]>

 

ಹಾಸನದಲ್ಲಿ ನಿಧಾನವಾಗಿ ಕಾರು ಓಡಿಸುವಂತೆ ತಿಳಿ ಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ ಮಾಡಿದ ಘಟನೆ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹತ್ಯೆಯಾದ ಯುವಕನನ್ನು ಮನು(27) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 12 ಗಂಟೆ ಸಮಯದಲ್ಲಿ ಮನು, ಅಭಿಷೇಕ್, ರಾಕೇಶ್ ಹಾಗೂ ಕುಶಾಲ್ ರಸ್ತೆ ಪಕ್ಕದಲ್ಲಿ ನಿಂತು ಮಾತನಾಡುತ್ತಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿ ಚಾಲನೆ ಮಾಡುತ್ತಿದ್ದ ಕಾರು ವೇಗವಾಗಿ ಬಂದಿದೆ. ಇದನ್ನು ಕಂಡ ಯುವಕರ ತಂಡ, ಕಾರು ಚಾಲಕನಿಗೆ ನಿಧಾನವಾಗಿ ಹೋಗು ಎಂದು ತಿಳಿ ಹೇಳಿದ್ದಾರೆ. ಇದರಿಂದ ಕೋಪಗೊಂಡ ಕಾರು ಚಾಲಕ ಸ್ವಲ್ಪ ದೂರು ಹೋಗಿ ತಿರುಗಿಸಿಕೊಂಡು ಬಂದು, ಮಾತನಾಡುತ್ತ ನಿಂತಿದ್ದವರಿಗೆ ಡಿಕ್ಕಿ ಹೊಡೆಸಿ, ಪರಾರಿಯಾಗಿದ್ದಾನೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಮನು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಸ್ನೇಹಿತರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳೀಯರು ಪ್ರತಿಭಟನೆ ನಡೆಸಿ, ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

The post ತಿಳಿ ಹೇಳಿದ್ದಕ್ಕೆ ಕಾರು ಹರಿಸಿ ಯುವಕನ ಹತ್ಯೆ! appeared first on Good News 24x7.

]]>
ಸಪ್ತಪದಿ ತುಳಿದು ತಾಳಿ ಕಟ್ಟಿದ್ದ ಗಂಡನೇ ಮಡದಿಯನ್ನ ಹ* ಮಾಡಿದ್ದಾನೆ https://www.goodnews24x7.com/the-husband-who-had-trampled-on-the-seven-pointed-star-and-tied-the-knot-killed-the-woman/ Sat, 18 Oct 2025 11:57:27 +0000 https://www.goodnews24x7.com/?p=7756 ಹಾಸನ: ಆಕೆಗೆ ಎಂಟು ವರ್ಷದ ಕೆಳಗೆ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಮದುವೆಯಾಗಿ ಮೂರು ವರ್ಷ ಚೆನ್ನಾಗಿ ಸಂಸಾರ ಮಾಡಿದ ಗಂಡ ಆಸ್ತಿಗಾಗಿ ಅಪ್ಪ ಅಮ್ಮನ ಮಾತು ಕೇಳಿ ಯಮ ಗಂಡನಾಗಿದ್ದ. ಗಂಡನ ಮನೆಯವರ ಕಿರುಕುಳದ ಜೊತೆಗೆ ಕುಡುಕ ಗಂಡನ ಜೊತೆ ಬಾಳೋದಕ್ಕಿಂತ…

The post ಸಪ್ತಪದಿ ತುಳಿದು ತಾಳಿ ಕಟ್ಟಿದ್ದ ಗಂಡನೇ ಮಡದಿಯನ್ನ ಹ* ಮಾಡಿದ್ದಾನೆ appeared first on Good News 24x7.

]]>

ಹಾಸನ: ಆಕೆಗೆ ಎಂಟು ವರ್ಷದ ಕೆಳಗೆ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಮದುವೆಯಾಗಿ ಮೂರು ವರ್ಷ ಚೆನ್ನಾಗಿ ಸಂಸಾರ ಮಾಡಿದ ಗಂಡ ಆಸ್ತಿಗಾಗಿ ಅಪ್ಪ ಅಮ್ಮನ ಮಾತು ಕೇಳಿ ಯಮ ಗಂಡನಾಗಿದ್ದ. ಗಂಡನ ಮನೆಯವರ ಕಿರುಕುಳದ ಜೊತೆಗೆ ಕುಡುಕ ಗಂಡನ ಜೊತೆ ಬಾಳೋದಕ್ಕಿಂತ ಒಂಟಿಯಾಗಿ ಇರೋದೇ ಮೇಲು ಎಂದು ಡೈವೋರ್ಸ್ ಗೆ ಅಪ್ಲೈ ಮಾಡಿಕೊಂಡಿದ್ದವಳನ್ನ ಚೆನ್ನಾಗಿರೋನ ಬಾ ಎಂದು ಪುಸಲಾಯಿಸಿ ಕರೆದುಕೊಂಡು ಬಂದವನು ಚಾಕುವಿನಿಂದ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ತನುಜಾ ಜೀವಕ್ಕೆ ಜೀವ ಆಗಿರ್ತಿನಿ.. ಕಣ್ಣಲ್ಲಿ ಕಣ್ಣಾಗಿ ನೋಡ್ಕೊಳ್ತಿನಿ ಅಂತಾ ಸಪ್ತಪದಿ ತುಳಿದು ತಾಳಿ ಕಟ್ಟಿದ್ದ ಗಂಡನೇ ಈಕೆಯನ್ನ ಕೊಂದು ಕೆಡವಿದ್ದಾನೆ. ರಣರಾಕ್ಷಸನಂತೆ ತಾನೇ ತಾಳಿ ಕಟ್ಟಿದ ಕುತ್ತಿಗೆಯನ್ನ ಚಾಕುವಿನಿಂದ ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಹೌದು ಕಳೆದ 8 ವರ್ಷಗಳ ಕೆಳಗೆ ಹಾಸನ ಜಿಲ್ಲೆಯ ಗುಡ್ಡೇನಹಳ್ಳಿಯ ತನುಜಳನ್ನ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಹಿರೇಕಾನವಂಗಲ ಗ್ರಾಮದ ರಮೇಶ್ ಜೊತೆ ಮದುವೆ ಮಾಡಿಕೊಡಲಾಗಿತ್ತು. ಮದುವೆಯಾದ ಹೊಸತರಲ್ಲಿ ನೀನೆ ನನ್ನ ಜೀವ.. ನೀನೆ ನನ್ನುಸಿರು ಅಂತಾ ಅಂತಾ ಹೆಂಡತಿಯನ್ನ ಮುದ್ದು ಮಾಡ್ತಿದ್ದವನು. ಒಂದು ಗಂಡು ಮಗು ಆಗಿ ಹೆಂಡತಿ ತವರು ಮನೆಗೆ ಹೋದಾಗ್ಲಿಂದ ತನ್ನ ತಂದೆ, ತಾಯಿ, ಅಕ್ಕಂದಿರ ಮಾತು ಕೇಳಿ ಹೆಂಡತಿಗೆ ಕೊಡಬಾರದ ಚಿತ್ರ ಹಿಂಸೆ ಕೊಡ್ತಿದ್ನಂತೆ. ತನ್ನ ಮಗುವಿನ ನಾಮಕರಣಕ್ಕೂ ಹೋಗಿರ್ಲಿಲ್ವಂತೆ. ಹೆಂಡತಿ ಬಾಣಂತನ ಮುಗಿಸಿಕೊಂಡು ಗಂಡನ ಮನೆಗೆ ಬರ್ತಿದ್ದಂತೆ ಮನೆ ಮಂದಿ ಎಲ್ಲ ಸೇರಿ ಕಾಟ ಕೊಟ್ಟಿದ್ದಾರೆ. ಸಾಲದು ಅಂತಾ ಮನೆಯಿಂದ ಹೊರಗೆ ಹಾಕಿದ್ರಂತೆ. ಮೊದಲೇ ಗಂಡ ಕುಡುಕ ಅಪ್ಪ, ಅಮ್ಮ, ಅಕ್ಕಂದಿರ ಮಾತು ನಂಬಿ ಹೊಡೆದು ಬಡಿದು ಮಾಡ್ತಿದ್ನಂತೆ. ಇಲ್ಲೇ ಇದ್ರೆ ಸರಿಯಾಗಲ್ಲ ಅಂತಾ ತನುಜಾ ತನ್ನ ಗಂಡನ ಕರೆದುಕೊಂಡು ಬಂದು ಬೇರೆ ಸಂಸಾರ ಮಾಡ್ತಿದ್ದಳಂತೆ. ಮನೆ ಬಿಟ್ಟು ಬೇರೆ ಮನೆಗೆ ಬಂದ್ರೂ ಕೂಡಾ ಗಂಡ ರಮೇಶ ಕುಡಿಯೋದನ್ನ‌ ಬಿಟ್ಟಿಲ್ಲ ಇದರಿಂದ ಬೇಸತ್ತ ತನುಜಾ ಮೂರು ವರ್ಷಗಳ ಕೆಳಗೆ ಡಿವೋರ್ಸ್‌ಗೆ ಅಪ್ಲೆ ಮಾಡಿಕೊಂಡಿದ್ದಾಳೆ.. ಕೆಲ ದಿನಗಳ ಹಿಂದೆ ಮಗನ ಸ್ಕೂಲ್‌ಗೆ ರಜೆ ಅಂತಾ ತವರು ಮನೆಗೆ ಹೋಗಿದ್ದ ತನುಜಾಳಿಗೆ ಕಾಲ್ ಮಾಡಿದ್ದ ರಮೇಶ ಕೋರ್ಟ್‌ಗೆ ಹೋಗಬೇಕು.. ಲಾಯರ್ ಕಾಲ್ ಮಾಡಿದ್ರು.. ಇನ್ಮೇಲೆ ಚೆನ್ನಾಗಿರೋಣ ಬಾ ಅಂತ ಕರೆದಿದ್ದಾನೆ. ಸೋಮವಾರವಷ್ಟೇ ಗುಡ್ಡೇನಹಳ್ಳಿಯಿಂದ ತನುಜಾಳನ್ನ ಕರೆದುಕೊಂಡು ಬಂದಿದ್ದಾನೆ.. ಆದ್ರೆ ನಿನ್ನೆ ಸಂಜೆ ಗಂಡ ಹೆಂಡತಿ ನಡುವೆ ಅದೇನು ನಡೆಯಿತೋ ಗೊತ್ತಿಲ್ಲ ಚಾಕುವಿನಿಂದ ತನಜಾಳ ಕುತ್ತಿಗೆ ಸೀಳಿದ್ದಾನೆ.

ನಿನ್ನೆ ಸಂಜೆ ತನುಜಾ ಮತ್ತು ರಮೇಶನ ನಡುವೆ ಯಾವ ಜಗಳ ನಡೆದಿತ್ತೋ ಗೊತ್ತಿಲ್ಲ. ಕಂಠಪೂರ್ತಿ ಕುಡಿದು ಬಂದಿದ್ದ ರಮೇಶನಿಗೆ ಎಣ್ಣೆಯ ನಶೆಯ ಜೊತೆಗೆ ಪಿತ್ತ ನೆತ್ತಿಗೆ ಹತ್ತುತ್ತಿದ್ದಂತೆ ಮನೆಯಲ್ಲಿದ್ದ ಚಾಕುವನ್ನ ಕೈಗೆತ್ತಿಕೊಂಡು ಸಿಕ್ಕ ಸಿಕ್ಕಲ್ಲಿ ಚುಚ್ಚಿದ್ದಾನೆ.. ಚಾಕುವಿನಿಂದ ಚುಚ್ಚಿದ ತಕ್ಷಣ ಕೆಳಗೆ ಬಿದ್ದ ತನುಜಾಳ ಎದೆಯ ಮೇಲೆ ಹತ್ತಿ ಕೂತವ್ನೇ ತಾನೇ ತನ್ನ ಕೈಯ್ಯಾರೆ ತಾಳಿ ಕಟ್ಟಿದ್ದ ಕುತ್ತಿಗೆಯನ್ನ ರಣ ರಾಕ್ಷಸನಂತೆ ಸೀಳಿ ಕೊಂದಿದ್ದಾನೆ.. ಯಾವಗ ತನ್ನ ಹೆಂಡತಿ ತನುಜಾ ಸಾವನ್ನಪ್ಪಿದ್ದಾಳೆ ಅನ್ನೋದು ಕನ್ಫರ್ಮ್ ಆಯ್ತೋ ಆಗ ಅದೇ ಚಾಕುವಿನಿಂದ ತಾನೂ ಕೂಡಾ ಕೈ ಕೊಯ್ದುಕೊಂಡು ನನ್ನ ಹೆಂಡತಿ ನನಗೆ ಹೊಡೆದಿದ್ದಾಳೆ ಅಂತಾ ಆಸ್ಪತ್ರೆಗೆ ಹೋಗಿ ಅಡ್ಮೆಂಟ್ ಆಗಿದ್ದಾನೆ.. ಆಸತ್ರೆಯಿಂದ ಬಂದ ಮಾಹಿತಿ ಆಧರಿಸಿ ಹಿರೇಕಾನವಂಗಲ ಗ್ರಾಮದ ರಮೇಶನ ಮನೆಗೆ ಹೋದ ಅಜ್ಜಂಪುರ ಠಾಣೆಯ ಇನ್ಸ್ಪೆಕ್ಟರ್ ವೀರೇಂದ್ರ ಮತ್ತು ಪಿಎಸ್‌ಐ ಗಜೇಂದ್ರ ಇಬ್ಬರೂ ಒಂದು ಕ್ಷಣ ಶಾಕ್ ಆಗಿಹೋಗಿದ್ದಾನೆ. ಯಾಕಂದ್ರೆ ತನ್ನ ಹೆಂಡತಿ ತನಗೆ ಹೊಡೆದ್ದಾಳೆ ಅಂತಾ ಆಸ್ಪತ್ರೆ ಸೇರಿದ್ದ ಗಂಡ ರಮೇಶ ಇಲ್ಲಿ ತನ್ನ ಹೆಂಡತಿಯನ್ನ ಕತ್ತು ಸೀಳಿ ಕೊಂದು ಮಲಗಿಸಿ ಹೋಗಿದ್ದ. ಕೂಡಲೇ ಆಸ್ಪತ್ರೆಗೆ ಹೋಗಿ ಅಡ್ಮೆಂಟ್ ಆಗಿದ್ದ ರಮೇಶನನ್ನ ವಿಚಾರಿಸ್ತಿದ್ದಂತೆ ತಾನೇ ತನ್ನ ಹೆಂಡತಿಯನ್ನ ಕೊಂದಿದ್ದು ಅಂತ ಸತ್ಯ ಬಾಯಿಬಿಟ್ಟಿದ್ದಾನೆ. ಇನ್ನೂ ರಮೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಕೊಲೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ರಮೇಶನ ತಂದೆ ಪುಟ್ಟಪ್ಪ ಹಾಗೂ ತಾಯಿ ಲಲಿತಮ್ಮರನ್ನ ಪೊಲೀಸರು ಬಂಧಿಸಿದ್ದಾರೆ.

ಒಟ್ನಲ್ಲಿ ಕುಡಿತದ ಚಟಕ್ಕೆ ದಾಸನಾಗಿದ್ದ ಗಂಡ ಆಸ್ತಿಗಾಗಿ ಅಪ್ಪ, ಅಮ್ಮ, ಅಕ್ಕಂದಿರ ಮಾತು ಕೇಳಿ ತನ್ನನ್ನೇ ನಂಬಿ ಅಗ್ನಿಸಾಕ್ಷಿಯಾಗಿ ಕೈ ಹಿಡಿದು ತನ್ನವರನ್ನೆಲ್ಲ ಬಿಟ್ಟು ಬಂದಿದ್ದ ಹೆಂಡತಿಯನ್ನೇ ಕೊಂದು ಕೆಡವಿದ್ದು. ತಾಯಿ ಸತ್ತು ಸುಟ್ಟು ಬೂಧಿಯಾಗಿ ತಂದೆ ಜೈಲುಪಾಲಾಗಿದ್ದಾನೆ. ಆದ್ರೆ ಏನೂ ಅರಿಯದ 6 ವರ್ಷದ ಕಂದಮ್ಮ ಅನಾಥವಾಗಿದ್ದು ಮಾತ್ರ ದುರಂತ

The post ಸಪ್ತಪದಿ ತುಳಿದು ತಾಳಿ ಕಟ್ಟಿದ್ದ ಗಂಡನೇ ಮಡದಿಯನ್ನ ಹ* ಮಾಡಿದ್ದಾನೆ appeared first on Good News 24x7.

]]>
ಹಾಸನದ ದುರಂತಕ್ಕೂ ಮುನ್ನ ಮತ್ತೊಂದು ಅಪಘಾತ ಮಾಡಿದ್ದ ಟ್ರಕ್ ಚಾಲಕ? https://www.goodnews24x7.com/truck-driver-had-another-accident-before-the-hassan-tragedy/ Sat, 13 Sep 2025 10:16:58 +0000 https://www.goodnews24x7.com/?p=7506 ಹಾಸನ: ಹಾಸನದ ಹೊರವಲಯದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಟ್ರಕ್ ಅಪಘಾತದಲ್ಲಿ 9 ಮಂದಿ ಸಾವಿಗೀಡಾಗಿ ಹಲವು ಮಂದಿ ಗಾಯಗೊಂಡಿದ್ದಾರೆ. ಟ್ರಕ್ ಚಾಲಕನು ಚನ್ನಪಟ್ಟಣ ಬೈಪಾಸ್‌ನಲ್ಲಿಯೂ ಅಪಘಾತ ಮಾಡಿ ಮುಂದುವರಿದಿದ್ದ. ಅಲ್ಲಿ ಅಪಘಾ ಮಾಡಿ ಬಂದು ಗಣೇಶ ಮೆರವಣಿಗೆ…

The post ಹಾಸನದ ದುರಂತಕ್ಕೂ ಮುನ್ನ ಮತ್ತೊಂದು ಅಪಘಾತ ಮಾಡಿದ್ದ ಟ್ರಕ್ ಚಾಲಕ? appeared first on Good News 24x7.

]]>

ಹಾಸನ: ಹಾಸನದ ಹೊರವಲಯದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಟ್ರಕ್ ಅಪಘಾತದಲ್ಲಿ 9 ಮಂದಿ ಸಾವಿಗೀಡಾಗಿ ಹಲವು ಮಂದಿ ಗಾಯಗೊಂಡಿದ್ದಾರೆ. ಟ್ರಕ್ ಚಾಲಕನು ಚನ್ನಪಟ್ಟಣ ಬೈಪಾಸ್‌ನಲ್ಲಿಯೂ ಅಪಘಾತ ಮಾಡಿ ಮುಂದುವರಿದಿದ್ದ. ಅಲ್ಲಿ ಅಪಘಾ ಮಾಡಿ ಬಂದು ಗಣೇಶ ಮೆರವಣಿಗೆ ವೇಳೆ ಟ್ರಕ್ ನುಗ್ಗಿಸಿದ್ದಾನೆ ಎಂಬ ಸ್ಫೋಟಕ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ಥಳೀಯರು ಆರೋಪ ಮಾಡಿದ್ದು, ಬೈಪಾಸ್‌ನಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಆಟೋ ಮತ್ತು ಬೈಕ್‌ಗಳಿಗೆ ಹಾನಿಯಾಗಿದೆ ಎನ್ನಲಾಗಿದೆ. ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ನಡೆಸಲಿ. ಆಗ ಸತ್ಯ ಗೊತ್ತಾಗಲಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಮದ್ಯಪಾನ ಮಾಡಿ ಟ್ರಕ್ ಚಲಾಯಿಸಿರುವುದು ಕೂಡ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.

 

 

The post ಹಾಸನದ ದುರಂತಕ್ಕೂ ಮುನ್ನ ಮತ್ತೊಂದು ಅಪಘಾತ ಮಾಡಿದ್ದ ಟ್ರಕ್ ಚಾಲಕ? appeared first on Good News 24x7.

]]>
ಸಾವಿರಾರು ಜನರಿದ್ದ ಗಣೇಶ ಮೆರವಣಿಗೆಗೆ ಯಮನಂತೆ ನುಗ್ಗಿದ ಟ್ರಕ್ https://www.goodnews24x7.com/truck-ploughs-into-ganesh-procession-with-thousands-of-people-2/ Sat, 13 Sep 2025 10:06:12 +0000 https://www.goodnews24x7.com/?p=7501 ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಭೀಕರ ದುರಂತ ಸಂಭವಿಸಿದೆ. ಮೊಸಳೆಹೊಸಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಒಂದು ಬದಿಯಲ್ಲಿ ಗಣೇಶ ಮೆರವಣಿಗೆ ಹೋಗುತ್ತಿದ್ದು, ಈ ವೇಳೆ ಟ್ರಂಕ್ ವೊಂದು ಯಮನಂತೆ ಬಂದು ಸಾವಿರಾರರು ಜನರಿದ್ದ ಮೆರಣಿಗೆಗೆ ನುಗ್ಗಿದೆ.…

The post ಸಾವಿರಾರು ಜನರಿದ್ದ ಗಣೇಶ ಮೆರವಣಿಗೆಗೆ ಯಮನಂತೆ ನುಗ್ಗಿದ ಟ್ರಕ್ appeared first on Good News 24x7.

]]>

ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಭೀಕರ ದುರಂತ ಸಂಭವಿಸಿದೆ. ಮೊಸಳೆಹೊಸಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಒಂದು ಬದಿಯಲ್ಲಿ ಗಣೇಶ ಮೆರವಣಿಗೆ ಹೋಗುತ್ತಿದ್ದು, ಈ ವೇಳೆ ಟ್ರಂಕ್ ವೊಂದು ಯಮನಂತೆ ಬಂದು ಸಾವಿರಾರರು ಜನರಿದ್ದ ಮೆರಣಿಗೆಗೆ ನುಗ್ಗಿದೆ. ಪರಿಣಾಮ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಗಾಯಗೊಂಡರಿಗೆ ಚಿಕಿತ್ಸೆ ಮುಂದುರೆದಿದೆ. ಮೆರವಣಿಯಲ್ಲಿ ಸಾವಿರಾರು ಜನರು ಡಿಜೆ ಸಾಂಗ್ ಗೆ ಭರ್ಜರಿ ಸ್ಟೆಪ್ ಹಾಕುತ್ತ ಎಂಜಾಯ್ ಮಾಡುತ್ತಿದ್ದರು. ಈ ವೇಳೆ ನೋಡ ನೋಡುತ್ತಿದ್ದಂತೆಯೇ ಟ್ರಕ್ ವೇಗವಾಗಿ ಬಂದು ಜನರ ಮೇಲೆ ಹರಿದಿದೆ.

The post ಸಾವಿರಾರು ಜನರಿದ್ದ ಗಣೇಶ ಮೆರವಣಿಗೆಗೆ ಯಮನಂತೆ ನುಗ್ಗಿದ ಟ್ರಕ್ appeared first on Good News 24x7.

]]>
ಪ್ರಜ್ವಲ್ ರೇವಣ್ಣ ಈಗ ಜೈಲಿನಲ್ಲಿ ಕೂಲಿಕೆಲಸಗಾರ…! https://www.goodnews24x7.com/prajwal-revanna-is-now-a-wage-laborer-in-jail/ Thu, 28 Aug 2025 14:59:02 +0000 https://www.goodnews24x7.com/?p=6908 ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಕೃಷಿ ಕೂಲಿ ಕೆಲಸ ಮಾಡುವುದಾಗಿ ಹೇಳಿದ ಪ್ರಜ್ವಲ್ ಕೃಷಿ ಜೊತೆಗೆ ಅಡ್ಮಿನಿಸ್ಟ್ರೇಟೀವ್ ಕೆಲಸ ಮಾಡುವ ಪ್ರಜ್ವಲ್ ಅಪರಾಧಿಗಳು ಜೈಲಿನಲ್ಲಿ ಯಾವುದಾದರೂ ಕೆಲಸ ಮಾಡಲೇಬೇಕು ರೇಪ್ ಕೇಸ್ ನಲ್ಲಿ ಅಪರಾಧಿ ಆಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ…

The post ಪ್ರಜ್ವಲ್ ರೇವಣ್ಣ ಈಗ ಜೈಲಿನಲ್ಲಿ ಕೂಲಿಕೆಲಸಗಾರ…! appeared first on Good News 24x7.

]]>

ಪ್ರಜ್ವಲ್ ರೇವಣ್ಣ
ಜೈಲಿನಲ್ಲಿ ಕೃಷಿ ಕೂಲಿ ಕೆಲಸ ಮಾಡುವುದಾಗಿ ಹೇಳಿದ ಪ್ರಜ್ವಲ್
ಕೃಷಿ ಜೊತೆಗೆ ಅಡ್ಮಿನಿಸ್ಟ್ರೇಟೀವ್ ಕೆಲಸ ಮಾಡುವ ಪ್ರಜ್ವಲ್
ಅಪರಾಧಿಗಳು ಜೈಲಿನಲ್ಲಿ ಯಾವುದಾದರೂ ಕೆಲಸ ಮಾಡಲೇಬೇಕು
ರೇಪ್ ಕೇಸ್ ನಲ್ಲಿ ಅಪರಾಧಿ ಆಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ಹಾಸನದ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ, ಕೊನೆಗೂ ಜೈಲಿನಲ್ಲಿ ಏನು ಕೆಲಸ ಮಾಡುತ್ತೇನೆ ಎಂದು ಆಯ್ಕೆ ಮಾಡಿಕೊಂಡಿದ್ದಾರೆ. ಜೈಲಿನಲ್ಲಿ ಆರೋಪ ಸಾಬೀತಾದ ಅಪರಾಧಿಗಳು ಯಾವುದಾದರೊಂದು ಕೆಲಸವನ್ನು ಕಡ್ಡಾಯವಾಗಿ ಮಾಡಲೇಬೇಕು. ಜೈಲಿನಲ್ಲಿ ಈ ಕೂಲಿ ಕೆಲಸ ಮಾಡಿದ್ದಕ್ಕೆ ಕೂಲಿ ಹಣವನ್ನು ನೀಡಲಾಗುತ್ತೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನಲ್ಲಿ ಈಗ ತಾನು ಕೃಷಿ ಕೆಲಸ ಮಾಡುತ್ತೇನೆ. ಜೊತೆಗೆ ಅಡ್ಮಿನಿಸ್ಟ್ರೇಟೀವ್ ಕೆಲಸಗಳನ್ನು ಮಾಡುತ್ತೇನೆ ಎಂದು ಜೈಲು ಅಧಿಕಾರಿಗಳಿಗೆ ಹೇಳಿದ್ದಾರೆ. ಹೀಗಾಗಿ ಈಗ ಪ್ರಜ್ವಲ್ , ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೃಷಿ ಕೂಲಿ ಕೆಲಸಗಾರ. ಜೊತೆಗೆ ಅಡ್ಮಿನಿಸ್ಟ್ರೇಟಿವ್ ಕೆಲಸಗಳ ಕೂಲಿ ಕೆಲಸಗಾರ.
ಪ್ರಜ್ವಲ್ ಗೆ ಜೈಲಿನಲ್ಲಿ ಮಾಡಿದ ಕೆಲಸಕ್ಕೆ ದಿನಕ್ಕೆ 540 ರೂಪಾಯಿ ಕೂಲಿ ಸಿಗಲಿದೆ. ಒಂದು ವರ್ಷ ಆದ ನಂತರ ದಿನಕ್ಕೆ 615 ರೂಪಾಯಿ ಕೂಲಿ ನಿಗದಿಯಾಗಲಿದೆ.
ಜೈಲಿನ ಹೊರಗೆ ಹತ್ತಾರು ಜನಕ್ಕೆ ತನ್ನ ತೋಟದಲ್ಲೇ ಪ್ರಜ್ವಲ್ ರೇವಣ್ಣ ಕೆಲಸ ಕೊಟ್ಟಿದ್ದ. ಇಡೀ ಲೋಕಸಭಾ ಕ್ಷೇತ್ರಕ್ಕೆ ಎಂಪಿಯಾಗಿದ್ದ. ಪ್ರಜ್ವಲ್ ಗೆ ಜೈಲು ಹೊರಗೆ ಎಲ್ಲದ್ದಕ್ಕೂ ಅಳುಗಳು ಇದ್ದರು. ಆದರೇ, ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣನೇ ಕೂಲಿ ಕೆಲಸ ಮಾಡಿ, ನಿತ್ಯದ ಕೂಲಿಯಾಗಿ 540 ರೂಪಾಯಿ ಹಣವನ್ನು ಪಡೆಯಬೇಕಾದ ಸ್ಥಿತಿ ಬಂದಿದೆ.

ಜೈಲು ಕಾಯ್ದೆ ಪ್ರಕಾರ ಜೈಲು ಅಧಿಕಾರಿಗಳು ನೀಡುವ ಕೆಲಸವನ್ನು ಸಜಾ ಬಂಧಿಗಳು ಮಾಡಬೇಕು ಅಥವಾ ವ್ಯಾಸಂಗಕ್ಕೆ ಅನುಗುಣವಾಗಿ ಕೆಲಸ ಮಾಡ್ತೀನಿ ಅಂತ ಜೈಲು ಅಧಿಕಾರಿಗಳಿಗೆ ತಿಳಿಸಬೇಕು. ಈಗ ಪ್ರಜ್ವಲ್ ರೇವಣ್ಣ ತಾನು ಕೃಷಿ ಕೆಲಸ ಹಾಗೂ ಅಡ್ಮಿನಿಸ್ಟ್ರೇಟಿವ್ ಕೆಲಸ ಮಾಡುವುದಾಗಿ ಜೈಲು ಅಧಿಕಾರಿಗಳಿಗೆ ತಿಳಿಸಿದ್ದಾರೆ.

 

The post ಪ್ರಜ್ವಲ್ ರೇವಣ್ಣ ಈಗ ಜೈಲಿನಲ್ಲಿ ಕೂಲಿಕೆಲಸಗಾರ…! appeared first on Good News 24x7.

]]>
ಹಾಸನಾಂಬ ದೇವಿ ದರ್ಶನಕ್ಕೆ ವಿಐಪಿ ವಿವಿಐಪಿ ಪಾಸ್ ಗಳು ರದ್ದು…..! https://www.goodnews24x7.com/from-now-on-vip-vvip-passes-for-hasanamba-devi-darshan-will-be-cancelled/ Wed, 27 Aug 2025 11:04:47 +0000 https://www.goodnews24x7.com/?p=6808 ಹಾಸನಾಂಬಾ ದೇವಿ ದರ್ಶನ 2025 ಅಕ್ಟೋಬರ್ 10 ರಿಂದ 22 ರ ವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳು ಸಂಪೂರ್ಣ ರದ್ದು ಹೊಸದಾಗಿ ಗೋಲ್ಡ್ ಪಾಸ್ ವಿತರಣೆ ಗೋಲ್ಡ್ ಕಾರ್ಡ್ ಪಡೆದರೆ ಮುಂಜಾನೆ 5 ರಿಂದ…

The post ಹಾಸನಾಂಬ ದೇವಿ ದರ್ಶನಕ್ಕೆ ವಿಐಪಿ ವಿವಿಐಪಿ ಪಾಸ್ ಗಳು ರದ್ದು…..! appeared first on Good News 24x7.

]]>

ಹಾಸನಾಂಬಾ ದೇವಿ ದರ್ಶನ 2025
ಅಕ್ಟೋಬರ್ 10 ರಿಂದ 22 ರ ವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳು ಸಂಪೂರ್ಣ ರದ್ದು ಹೊಸದಾಗಿ ಗೋಲ್ಡ್ ಪಾಸ್ ವಿತರಣೆ ಗೋಲ್ಡ್ ಕಾರ್ಡ್ ಪಡೆದರೆ ಮುಂಜಾನೆ 5 ರಿಂದ 11 ಗಂಟೆಯವರೆಗೆ ದರ್ಶನ ಗೋಲ್ಡ್ ಪಾಸ್ ನಲ್ಲಿ ಒಬ್ಬರಿಗೆ ಮಾತ್ರ ಅವಕಾಶ. ಹಾಸನಾಂಬೆ ಉತ್ಸವದಲ್ಲಿ ವಿಐಪಿ ಹಾಗೂ ವಿವಿಐಪಿ ಭಕ್ತರಿಂದ ಸಾಮಾನ್ಯ ಭಕ್ತರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಲು ದರ್ಶನಕ್ಕೆ ಸಮಯ ನಿಗದಿಪಡಿಸುವಂತೆ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಸಲಹೆ ನೀಡಿದರು. “ಗೋಲ್ಡ್ ಕಾರ್ಡ್ ಭಕ್ತರಿಗೆ ಎರಡು ಗಂಟೆ, ಶಿಷ್ಟಾಚಾರ ಭಕ್ತರಿಗೆ ಎರಡು ಗಂಟೆ ಮಾತ್ರ ಅವಕಾಶ ನೀಡಿದರೆ ಸಾಮಾನ್ಯ ಜನರಿಗೆ ದರ್ಶನ ಸುಗಮವಾಗುತ್ತದೆ’ ಎಂದು ಅವರು ತಿಳಿಸಿದರು. ಹಾಸನದ ಜಿ.ಪಂ. ಸಭಾಂಗಣದಲ್ಲಿ ನಡೆದ ಉತ್ಸವದ ತಯಾರಿ ಸಭೆಯಲ್ಲಿ ಮಾತನಾಡಿದ ಸಚಿವರು, “ಹಾಸನಾಂಬೆ ಉತ್ಸವದ ವೇಳೆ ಒಂದೂವರೆ ತಿಂಗಳು ಇಲಾಖೆಯ ಬೇರೆ ಯಾವುದೇ ಕೆಲಸಗಳು ಆಗದೆ ನಿಂತುಹೋಗುತ್ತವೆ. ಕಳೆದ ವರ್ಷವೂ ಇದೇ ಪರಿಸ್ಥಿತಿ ಕಂಡಿದ್ದೆ. ಉತ್ಸವದ ಸಿದ್ಧತೆಯ ಜೊತೆಗೆ ಜನರ ಕೆಲಸವನ್ನೂ ನಿರ್ಲಕ್ಷಿಸಬಾರದು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ ಎಲ್ಲೆಡೆಗಳಿಂದ ಭಕ್ತರು ಹಾಸನಾಂಬೆ ದರ್ಶನಕ್ಕೆ ಬರುತ್ತಾರೆ. ಆದ್ದರಿಂದ ವಿಶೇಷ ಭಕ್ತರ ಸಂಸ್ಕೃತಿ ಸಾಮಾನ್ಯ ಜನರಿಗೆ ತೊಂದರೆ ತರಬಾರದು ಎಂದು ಸಚಿವರು ಮನವಿ ಮಾಡಿದರು. ಜನರ ಅನುಕೂಲಕ್ಕಾಗಿ ಬೇಕಾದ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಸಭೆಯಲ್ಲಿ ಇಲಾಖೆಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು

The post ಹಾಸನಾಂಬ ದೇವಿ ದರ್ಶನಕ್ಕೆ ವಿಐಪಿ ವಿವಿಐಪಿ ಪಾಸ್ ಗಳು ರದ್ದು…..! appeared first on Good News 24x7.

]]>
ಹಾಸನ ಮೂಲದ ಮೂವರು ಯುವಕರು ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆ. https://www.goodnews24x7.com/three-youths-from-hassan-go-missing-after-swimming-in-tungabhadra-river-near-mantralaya/ Sun, 13 Jul 2025 06:25:09 +0000 https://www.goodnews24x7.com/?p=5064 ರಾಯಚೂರು: ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ಶನಿವಾರ ನಡೆದಿದೆ. ಯುವಕರನ್ನು ಹಾಸನ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು ಗುರುತಿಸಲಾಗಿದೆ. ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ರಾಯರ…

The post ಹಾಸನ ಮೂಲದ ಮೂವರು ಯುವಕರು ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆ. appeared first on Good News 24x7.

]]>

ರಾಯಚೂರು: ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ಶನಿವಾರ ನಡೆದಿದೆ. ಯುವಕರನ್ನು ಹಾಸನ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು ಗುರುತಿಸಲಾಗಿದೆ.

ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ರಾಯರ ದರ್ಶನಕ್ಕಾಗಿ ಹಾಸನದಿಂದ 7 ಜನ ಯುವಕರ ತಂಡ ಬಂದಿತ್ತು. ಯುವಕರು ಸ್ನಾನಘಟ್ಟದ ಬಳಿ ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದರು. ಆಗ ನದಿಗೆ ಹೆಚ್ಚಿನ ನೀರು ಹರಿಬಿಟ್ಟಿರುವುದ್ದರಿಂದ, ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನದಿಯಲ್ಲಿ ನೀರಿನ ರಭಸ ಕಂಡು ಬೇಡವೆಂದು ಹೇಳಿದರೂ ಈಜಲು ಹೋಗಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಪೊಲೀಸರು ಹಾಗೂ ಈಜುಗಾರರ ತಂಡದಿಂದ ಯುವಕರ ಶೋಧ ಕಾರ್ಯ ನಡೆದಿದೆ. ರಾತ್ರಿಯಾಗಿದ್ದರಿಂದ ಶೋಧ ಕಾರ್ಯಾಚರಣೆ ನಿಲ್ಲಿಸಿದ್ದು, ಭಾನುವಾರ ಬೆಳಗ್ಗೆ ಪುನರಾರಂಭಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

The post ಹಾಸನ ಮೂಲದ ಮೂವರು ಯುವಕರು ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆ. appeared first on Good News 24x7.

]]>
ಹಾಸನದಲ್ಲಿ21 ವರ್ಷದ ಯುವಕನ ಜೀ*ವ ಕಸಿದ ಹೃದಯಾಘಾತ, ಜೀ*ವ ಕಳೆದುಕೊಂಡವರ ಸಂಖ್ಯೆ 34ಕ್ಕೆ ಏರಿಕೆ! https://www.goodnews24x7.com/heart-attack-claims-life-of-21-year-old-in-hassan-death-toll-rises-to-34/ Fri, 04 Jul 2025 07:54:19 +0000 https://www.goodnews24x7.com/?p=4889 ಹಾಸನ :  ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರಿದಿವೆ. ಇದೀಗ ಚಿಕ್ಕಕೊಂಡಗುಳ ಗ್ರಾಮದ 21 ವರ್ಷದ ಮದನ್ ಎಂಬಾತ ಹೃದಯಾಘಾತಕ್ಕೆ ಕಣ್ಮುಚ್ಚಿದ್ದಾನೆ. ಮದನ್ ಮೂಲತಃ ಹಾಸನ ತಾಲ್ಲೂಕಿನ ಚಿಟ್ನಳ್ಳಿ ಗ್ರಾಮದವರಾಗಿದ್ದರು. ಕಳೆದ ಎರಡು ದಿನಗಳಿಂದ ಚಿಕ್ಕಕೊಂಡಗುಳದ ಬಾವನ ಮನೆಗೆ ಬಂದಿದ್ದರು. ನಿನ್ನೆ ರಾತ್ರಿ…

The post ಹಾಸನದಲ್ಲಿ21 ವರ್ಷದ ಯುವಕನ ಜೀ*ವ ಕಸಿದ ಹೃದಯಾಘಾತ, ಜೀ*ವ ಕಳೆದುಕೊಂಡವರ ಸಂಖ್ಯೆ 34ಕ್ಕೆ ಏರಿಕೆ! appeared first on Good News 24x7.

]]>

ಹಾಸನ :  ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರಿದಿವೆ. ಇದೀಗ ಚಿಕ್ಕಕೊಂಡಗುಳ ಗ್ರಾಮದ 21 ವರ್ಷದ ಮದನ್ ಎಂಬಾತ ಹೃದಯಾಘಾತಕ್ಕೆ ಕಣ್ಮುಚ್ಚಿದ್ದಾನೆ. ಮದನ್ ಮೂಲತಃ ಹಾಸನ ತಾಲ್ಲೂಕಿನ ಚಿಟ್ನಳ್ಳಿ ಗ್ರಾಮದವರಾಗಿದ್ದರು. ಕಳೆದ ಎರಡು ದಿನಗಳಿಂದ ಚಿಕ್ಕಕೊಂಡಗುಳದ ಬಾವನ ಮನೆಗೆ ಬಂದಿದ್ದರು. ನಿನ್ನೆ ರಾತ್ರಿ ಮನೆಯಲ್ಲಿದ್ದ ವೇಳೆ ಮದನ್ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ.


ಎದೆನೋವಿನಿಂದ ಮದನ್ ಕುಸಿದು ಬಿದ್ದಿದ್ದಾನೆ. ಕೂಡಲೇ ಸಂಬಂಧಿಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರಲ್ಲೇ ಮದನ್ ಮೃಪಟ್ಟಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಹೃದಯಾಘಾತದಿಂದ ಜೀವ ಕಳೆದುಕೊಂಡವರ ಸಂಖ್ಯೆ 34ಕ್ಕೆ ಏರಿಕೆ ಆಗಿದೆ.

ಸಂಪತ್ಕುಮಾರ್ (53), ಸಿ.ಬಿ ವಿರೂಪಾಕ್ಷ (70), ಸಂತೋಷ್ (41), ದೇವಮ್ಮ (72) ಮೃತಪಟ್ಟವರು. ಹಾಸನ ನಗರದ ಕರಿಗೌಡ ಕಾಲೋನಿ ನಿವಾಸಿ ಸಂಪತ್ಕುಮಾರ್ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಕುಟುಂಬಸ್ಥರು ಹಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಂಪತ್ಕುಮಾರ್ ಸಾವನ್ನಪ್ಪಿದ್ದಾರೆ.

 

 

 

ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ದುರಂತ
ಸಕಲೇಶಪುರ ತಾಲ್ಲೂಕಿನ, ಬೆಳಗೋಡು ಹೋಬಳಿ ಚಿಕ್ಕನಾಯಕನಹಳ್ಳಿ ಗ್ರಾಮದ ಸಿ.ಬಿ ವಿರೂಪಾಕ್ಷ ಅವರಿಗೆ ಕಳೆದ ರಾತ್ರಿ 11:30ರ ಸುಮಾರಿನಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಕುಟುಂಬಸ್ಥರು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದ್ರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಮಲಗಿದ್ದಲ್ಲೇ ಸಾವು

ಗ್ರಾಪಂ ಸದಸ್ಯ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಆಲೂರು ತಾಲ್ಲೂಕಿನ, ಕಲ್ಲಾರೆ ಗ್ರಾಮದಲ್ಲಿ ನಡೆದಿದೆ. ಸಂತೋಷ್ (41) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ. ರಾತ್ರಿ ಮಲಗಿದ್ದಲ್ಲಿಯೇ ಹೃದಯಾಘಾತವಾಗಿದೆ. ಬೆಳಗ್ಗೆ ಮೇಲೆಳದಿದ್ದಾಗ ಕುಟುಂಬಸ್ಥರು ನೋಡಿದ್ದು ಕೂಡಲೇ ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲಿ ಹೃದಯಾಘಾತದಿಂದ ಸಂತೋಷ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಸಂತೋಷ್ ಕಾರಗೋಡು ಗ್ರಾ.ಪಂ. ಸದಸ್ಯರಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

ಚಿಕಿತ್ಸೆ ಪಡೆದು ವಾಪಸ್ ಬರುವಾಗ ಸಾವು
ಮತ್ತೊಂದು ಪ್ರಕರಣದಲ್ಲಿ ಹೃದಯಾಘಾತದಿಂದ ವೃದ್ದೆ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಅರೆಕೆರೆ ಗ್ರಾಮದಲ್ಲಿ ನಡೆದಿದೆ. ದೇವಮ್ಮ (72) ಹೃದಯಾಘಾತಕ್ಕೆ ಬಲಿಯಾದ ವೃದ್ದೆ. ದೇವಮ್ಮ ಮನೆಯಲ್ಲಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಎದೆನೋವು ಹೆಚ್ಚಾಗುತ್ತಲೇ ಬೆಂಗಳೂರು ಜಯದೇವ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆ, ಚಿಕಿತ್ಸೆ, ಔಷಧಿ ಪಡೆದು ಗ್ರಾಮಕ್ಕೆ ವಾಪಾಸ್ಸಾಗುತ್ತಿದ್ದರು. ಬೆಂಗಳೂರಿನಿಂದ ಗ್ರಾಮಕ್ಕೆ ವಾಪಸ್ಸಾಗುವ ಮಾರ್ಗ ಮಧ್ಯೆ ದೇವಮ್ಮ ಮೃತಪಟ್ಟಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.

The post ಹಾಸನದಲ್ಲಿ21 ವರ್ಷದ ಯುವಕನ ಜೀ*ವ ಕಸಿದ ಹೃದಯಾಘಾತ, ಜೀ*ವ ಕಳೆದುಕೊಂಡವರ ಸಂಖ್ಯೆ 34ಕ್ಕೆ ಏರಿಕೆ! appeared first on Good News 24x7.

]]>
40 ದಿನಗಳಲ್ಲಿ ಹಾಸನದಲ್ಲಿ ಹೃದಯಘಾತದಿಂದ ಮೃ*ತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ, ವೈದ್ಯರು ಹೇಳಿದ್ದೇನು…? https://www.goodnews24x7.com/the-number-of-people-who-died-due-to-heart-attacks-in-hassan-in-40-days-has-increased-to-22-what-did-the-doctors-say/ Mon, 30 Jun 2025 09:06:51 +0000 https://www.goodnews24x7.com/?p=4850 ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಸರಣಿ ಮುಂದುವರಿದಿದ್ದು, ಒಂದೇ ದಿನ ನಾಲ್ವರು ಮೃತಪಟ್ಟಿದ್ದಾರೆ. ಇದರೊಂದಿಗೆ, ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಹೃದಯಾಘಾತದಿಂದ ಅಸುನೀಗಿದ್ದಾರೆ.…

The post 40 ದಿನಗಳಲ್ಲಿ ಹಾಸನದಲ್ಲಿ ಹೃದಯಘಾತದಿಂದ ಮೃ*ತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ, ವೈದ್ಯರು ಹೇಳಿದ್ದೇನು…? appeared first on Good News 24x7.

]]>

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಸರಣಿ ಮುಂದುವರಿದಿದ್ದು, ಒಂದೇ ದಿನ ನಾಲ್ವರು ಮೃತಪಟ್ಟಿದ್ದಾರೆ. ಇದರೊಂದಿಗೆ, ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಹೃದಯಾಘಾತದಿಂದ ಅಸುನೀಗಿದ್ದಾರೆ. ಬೇಲೂರಿನ ಜೆಪಿ. ಲೇಪಾಕ್ಷಿ (50), ಹೊಳೆನರಸೀಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕ ಮುತ್ತಯ್ಯ (58), ನುಗ್ಗೆಹಳ್ಳಿ ನಾಡಕಚೇರಿ ಡಿ ಗ್ರೂಪ್ ನೌಕರ ಕುಮಾರ್ (53) ಕೂಡ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
ಲೋಹಿತ್ ಕಳೆದ 18 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಜೆಯಲ್ಲಿ ಊರಿಗೆ ಬಂದಿದ್ದ ಅವರು, ಜುಲೈ 3ರಂದು ರಜೆ ಮುಗಿಸಿ ಕರ್ತವ್ಯಕ್ಕೆ ಮರಳುವವರಿದ್ದರು. ದುರದೃಷ್ಟವಶಾತ್, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನುಗ್ಗೆಹಳ್ಳಿ ಗ್ರಾಮದ ನಾಡಕಚೇರಿ ಡಿ ಗ್ರೂಪ್ ನೌಕರ ಕುಮಾರ್ಗೆ ಭಾನುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಚನ್ನರಾಯಪಟ್ಟಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. ಇವರು ಚನ್ನರಾಯಪಟ್ಟಣ ತಾಲೂಕಿನ ನಲ್ಲೂರು ಗ್ರಾಮದ ನಿವಾಸಿಯಾಗಿದ್ದಾರೆ.


ನಿಯಂತ್ರಣಕ್ಕೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ
ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಾದ ವಿಚಾರವಾಗಿ ಮೈಸೂರಿನಲ್ಲ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಆ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಹೃದಯಘಾತ ಹೆಚ್ಚಾಗಲು ಕಾರಣ ಏನು ಎಂಬುದಕ್ಕೆ ತಜ್ಞರ ಮೂಲಕ ಮಾಹಿತಿ ತರಿಸಿಕೊಳ್ಳುತ್ತೇನೆ. ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಎರಡು ದಿನ ಹಿಂದಷ್ಟೇ ಹೃದಯಾಘಾತದಿಂದ ಮೃತಪಟ್ಟಿದ್ದ ಆಟೋ ಚಾಲಕ
ಎರಡು ದಿನಗಳ ಹಿಂದಷ್ಟೇ ಹಾಸನದ ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ (37) ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಆಟೋ ಚಾಲಕರಾಗಿರುವ ಗೋವಿಂದ ಅವರಿಗೆ ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದರು. ಆದಾಗ್ಯೂ, ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.

ಏತನ್ಮಧ್ಯೆ, ಹಾಸನ ಜಿಲ್ಲೆಯಲ್ಲಿ ಮತ್ತು ಕರ್ನಾಟಕದ ಇತರ ಕಡೆಗಳಲ್ಲಿ ಯುವಕ ಯುವತಿಯರಲ್ಲೇ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜತೆ ಚರ್ಚಿಸಲು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿಎನ್ ಮಂಜುನಾಥ್ ಮುಂದಾಗಿದ್ದಾರೆ. ಹೃದಯಘಾತ ನಿಯಂತ್ರಣಕ್ಕೆ ಸಂಬಂಧಿಸಿ ಸಿಎನ್ ಮಂಜುನಾಥ್ ಈಗಾಗಲೇ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಮತ್ತು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಜೊತೆಯೂ ಚರ್ಚೆ ಮಾಡಿದ್ದಾರೆ.

ಮತ್ತೊಂದೆಡೆ, ಎದೆ ನೋವಿನಿಂದ ಬಳಲಿ ಬರುವವರಿಗೆ ಜಯದೇವ ಆಸ್ಪತ್ರೆ ಸಹಯೋಗದೊಂದಿಗೆ ಚಿಕಿತ್ಸೆ ನೀಡುವುದಕ್ಕಾಗಿ ಹಾಸನ ಜಿಲ್ಲೆಯ ಬೇಲೂರು, ಸಕಲೇಶಪುರ, ಆಲೂರು, ಅರಕಲಗೂಡು ಹಾಗು ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಗಳಲ್ಲಿ ಸ್ಟೆಮಿ ಯೋಜನೆ ಜಾರಿ ಮಾಡುವಂತೆ ಜಿಲ್ಲಾ ಅರೋಗ್ಯ ಅಧಿಕಾರಿ ಡಾ. ಅನಿಲ್ ಕುಮಾರ್ ಅವರು ಆರೋಗ್ಯ ಇಲಾಖೆಗೆ ಈಗಾಗಲೇ ಮನವಿ ಮಾಡಿದ್ದಾರೆ.

ಹೃದಯಾಘಾತಕ್ಕೆ ಕಾರಣವಾಗುವ ಅಂಶಗಳೇನು? ಈ ಬಗ್ಗೆ ವೈದ್ಯರು ಹೇಳಿದ್ದೇನು
ಈ ಬಗ್ಗೆ ಅವರನ್ನು ಕೌನ್ಸೆಲಿಂಗ್ಗೂ ಒಳಪಡಿಸಲಾಗಿದೆ. ಈ ವಿದ್ಯಾರ್ಥಿಗಳಲ್ಲಿ ಬೊಜ್ಜು ಹೆಚ್ಚಿರಲು, ದೈಹಿಕ ಚಟುವಟಿಕೆ ಇಲ್ಲದೇ ಇರುವುದು, ಪ್ರತಿನಿತ್ಯ ಶಾಲೆಗೆ ಹೋಗುವುದು ಹಾಗೂ ಮನೆಗೆ ಹೋಗುವುದಷ್ಟನ್ನೇ ಮಾಡುತ್ತಿದ್ದಾರೆ. ಮನೆಯಲ್ಲಾಗಲಿ, ಶಾಲೆಯಲ್ಲಾಗಲಿ ಮಕ್ಕಳು ದೈಹಿಕ ಶ್ರಮದ ಆಟವನ್ನೇ ಆಡುತ್ತಿರಲಿಲ್ಲ. ಪಠ್ಯೇತರ ಚಟುವಟಿಕೆಯಲ್ಲಿಯೂ ಭಾಗಿಯಾಗುತ್ತಿಲ್ಲ ಎಂಬ ಅಂಶಗಳನ್ನು ಪತ್ತೆ ಹಚ್ಚಲಾಗಿದೆ.

The post 40 ದಿನಗಳಲ್ಲಿ ಹಾಸನದಲ್ಲಿ ಹೃದಯಘಾತದಿಂದ ಮೃ*ತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ, ವೈದ್ಯರು ಹೇಳಿದ್ದೇನು…? appeared first on Good News 24x7.

]]>
ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಬ*ಲಿ! https://www.goodnews24x7.com/another-victim-of-heart-attack-in-hassan/ Sat, 28 Jun 2025 05:54:18 +0000 https://www.goodnews24x7.com/?p=4744 ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಮುಂದುವರೆಯುತ್ತಿದ್ದು ಇದೀಗ ಆಟೋ ಚಾಲಕನೋರ್ವ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆ ಸಿದ್ದೇಶ್ವರ್ ನಗರ ನಿವಾಸಿ ಗೋವಿಂದ(37) ಮೃತಪಟ್ಟ ಆಟೋಚಾಲಕ. ಗೋವಿಂದ ಅವರು ಬೆಳಿಗ್ಗೆ 7 ಗಂಟೆ ಸುಮಾರಿಗೆ ಆಟೋ…

The post ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಬ*ಲಿ! appeared first on Good News 24x7.

]]>

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಮುಂದುವರೆಯುತ್ತಿದ್ದು ಇದೀಗ ಆಟೋ ಚಾಲಕನೋರ್ವ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆ ಸಿದ್ದೇಶ್ವರ್ ನಗರ ನಿವಾಸಿ ಗೋವಿಂದ(37) ಮೃತಪಟ್ಟ ಆಟೋಚಾಲಕ. ಗೋವಿಂದ ಅವರು ಬೆಳಿಗ್ಗೆ 7 ಗಂಟೆ ಸುಮಾರಿಗೆ ಆಟೋ ಚಲಾಯಿಸುವಾಗಲೇ ಎದೆನೋವು ಶುರುವಾಗಿದೆ. ಈ ವೇಳೆ ಗೋವಿಂದ ಆಟೋದಲ್ಲೇ ಹಾಸನ ಜಿಲ್ಲಾಸ್ಪತ್ರೆಗೆ ತೆರಳಿದ್ದಾರೆ. ಆದರೆ ಆಸ್ಪತ್ರೆಯಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಮೂಲಕ ಹಾಸನ ಜಿಲ್ಲೆಯಲ್ಲಿ ಒಂದೇ ತಿಂಗಳ ಅಂತರದಲ್ಲಿ ಹೃದಯಾಘಾತಕ್ಕೆ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

The post ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಬ*ಲಿ! appeared first on Good News 24x7.

]]>