Hospital Archives - Good News 24x7 https://www.goodnews24x7.com/tag/hospital/ Kannada Wed, 29 Apr 2026 08:42:21 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Hospital Archives - Good News 24x7 https://www.goodnews24x7.com/tag/hospital/ 32 32 ಕರಾವಳಿಯಲ್ಲಿ ಬಿಸಿಲಿನ ಅಬ್ಬರ: ಆರೋಗ್ಯ ಇಲಾಖೆ ಕಟ್ಟೆಚ್ಚರ https://www.goodnews24x7.com/heatwave-on-the-coast-health-department-on-high-alert9482-2/ Wed, 29 Apr 2026 08:42:21 +0000 https://www.goodnews24x7.com/?p=9482 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹೆಚ್ಚುತ್ತಿರುವ ಬಿಸಿಲು ಮತ್ತು ಆರ್ದ್ರತೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಚಿಕಿತ್ಸಾ ಸೌಲಭ್ಯಗಳನ್ನು ಸಜ್ಜುಗೊಳಿಸಿದೆ.…

The post ಕರಾವಳಿಯಲ್ಲಿ ಬಿಸಿಲಿನ ಅಬ್ಬರ: ಆರೋಗ್ಯ ಇಲಾಖೆ ಕಟ್ಟೆಚ್ಚರ appeared first on Good News 24x7.

]]>

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹೆಚ್ಚುತ್ತಿರುವ ಬಿಸಿಲು ಮತ್ತು ಆರ್ದ್ರತೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಚಿಕಿತ್ಸಾ ಸೌಲಭ್ಯಗಳನ್ನು ಸಜ್ಜುಗೊಳಿಸಿದೆ.

ಆಸ್ಪತ್ರೆಗಳಲ್ಲಿ ವಿಶೇಷ ಸಿದ್ಧತೆ
ಬಿಸಿಲಿನ ತಾಪದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳಿಗೆ ತಕ್ಷಣದ ಚಿಕಿತ್ಸೆ ನೀಡಲು ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಪ್ರತ್ಯೇಕ ಹಾಸಿಗೆಗಳನ್ನು ಮೀಸಲಿರಿಸಲಾಗಿದೆ:

ತಾಲೂಕು ಆಸ್ಪತ್ರೆಗಳು: ತಲಾ 5 ವಿಶೇಷ ಬೆಡ್‌ಗಳು.

ಸಮುದಾಯ ಆರೋಗ್ಯ ಕೇಂದ್ರಗಳು: ತಲಾ 2 ವಿಶೇಷ ಬೆಡ್‌ಗಳು.

ಚರ್ಮದ ಕಾಯಿಲೆಗಳ ಹೆಚ್ಚಳ
ಬಿಸಿಲಿನ ತೀವ್ರತೆಯಿಂದಾಗಿ ಜಿಲ್ಲೆಯಲ್ಲಿ ಚರ್ಮದ ಕಾಯಿಲೆಗಳು ಕಾಣಿಸಿಕೊಳ್ಳಲಾರಂಭಿಸಿವೆ. ವಿಶೇಷವಾಗಿ ಬೆವರು ಸಾಲೆ, ಚರ್ಮದ ತುರಿಕೆ ಮತ್ತು ಕಜ್ಜಿಯಂತಹ ಸಮಸ್ಯೆಗಳಿಂದ ಬಳಲುತ್ತಿರುವವರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ದಿನವೊಂದಕ್ಕೆ ಸರಾಸರಿ 3 ರಿಂದ 5 ರೋಗಿಗಳು ಇಂತಹ ಲಕ್ಷಣಗಳೊಂದಿಗೆ ಚಿಕಿತ್ಸೆಗೆ ಬರುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ
ಹೀಟ್ ಸ್ಟ್ರೋಕ್ ಸೇರಿದಂತೆ ಬಿಸಿಲಿನಿಂದ ಉಂಟಾಗುವ ಯಾವುದೇ ಪ್ರಕರಣಗಳು ದಾಖಲಾದಲ್ಲಿ, ತಕ್ಷಣವೇ ಮಾಹಿತಿಯನ್ನು ಆರೋಗ್ಯ ಇಲಾಖೆಯ ವೆಬ್ ಪೋರ್ಟಲ್‌ನಲ್ಲಿ ದಾಖಲಿಸುವಂತೆ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಓಆರ್‌ಎಸ್ (ORS) ಕಾರ್ನರ್ ಸೌಲಭ್ಯ
ನಿರ್ಜಲೀಕರಣ ತಡೆಗಟ್ಟಲು ಜಿಲ್ಲಾಸ್ಪತ್ರೆಯಿಂದ ಹಿಡಿದು ಪ್ರಾಥಮಿಕ ಆರೋಗ್ಯ ಕೇಂದ್ರಗಳವರೆಗೆ ‘ಓಆರ್‌ಎಸ್ ಕಾರ್ನರ್’ಗಳನ್ನು ಸ್ಥಾಪಿಸಲಾಗಿದೆ. ಔಷಧಗಳ ಕೊರತೆಯಾಗದಂತೆ ಸ್ಥಳೀಯವಾಗಿಯೇ ಖರೀದಿಸಲು ಅವಕಾಶ ನೀಡಲಾಗಿದ್ದು, ಕಳೆದ ಒಂದು ವಾರದಿಂದ ಓಆರ್‌ಎಸ್ ಪ್ಯಾಕೆಟ್‌ಗಳ ಬಳಕೆ ಗಣನೀಯವಾಗಿ ಹೆಚ್ಚಾಗಿದೆ.

ಗಮನಿಸಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಅವರ ನೇತೃತ್ವದಲ್ಲಿ ಮಂಗಳವಾರ ವಿಶೇಷ ಸಭೆ ನಡೆದಿದ್ದು, ಬಿಸಿಲಿನಿಂದ ಗಂಭೀರ ಸಮಸ್ಯೆ ಎದುರಾದ ರೋಗಿಗಳನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ರವಾನಿಸಲು ಸೂಚಿಸಲಾಗಿದೆ. ಸದ್ಯದ ಮಾಹಿತಿಯ ಪ್ರಕಾರ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಅಧಿಕೃತ ಹೀಟ್ ಸ್ಟ್ರೋಕ್ ಪ್ರಕರಣಗಳು ವರದಿಯಾಗಿಲ್ಲ.

The post ಕರಾವಳಿಯಲ್ಲಿ ಬಿಸಿಲಿನ ಅಬ್ಬರ: ಆರೋಗ್ಯ ಇಲಾಖೆ ಕಟ್ಟೆಚ್ಚರ appeared first on Good News 24x7.

]]>
ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ! https://www.goodnews24x7.com/fire-breaks-out-in-medical-college-hospital-10-patients-killed8899-2/ Mon, 16 Mar 2026 11:35:13 +0000 https://www.goodnews24x7.com/?p=8899   ಒಡಿಶಾದ ಕಟಕ್​ನ ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಐಸಿಯುವೊಂದರಲ್ಲಿ ಅಗ್ನಿ ಅವಘಡ ಘಟನೆ ಸಂಭವಿಸಿದೆ. ಇದರಲ್ಲಿ 10 ರೋಗಿಗಳು ಬಲಿಯಾಗಿದ್ದಾರೆ. ಇನ್ನೂ ಹಲವು ರೋಗಿಗಳಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ರಕ್ಷಿಸಲು ಯತ್ನಿಸಿದ ಕೆಲ ಆಸ್ಪತ್ರೆ ಸಿಬ್ಬಂದಿಗೂ ಗಾಯಗಳಾಗಿವೆ. ಮುಖ್ಯಮಂತ್ರಿ ಮೋಹನ್…

The post ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ! appeared first on Good News 24x7.

]]>

 

ಒಡಿಶಾದ ಕಟಕ್​ನ ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಐಸಿಯುವೊಂದರಲ್ಲಿ ಅಗ್ನಿ ಅವಘಡ ಘಟನೆ ಸಂಭವಿಸಿದೆ. ಇದರಲ್ಲಿ 10 ರೋಗಿಗಳು ಬಲಿಯಾಗಿದ್ದಾರೆ. ಇನ್ನೂ ಹಲವು ರೋಗಿಗಳಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ರಕ್ಷಿಸಲು ಯತ್ನಿಸಿದ ಕೆಲ ಆಸ್ಪತ್ರೆ ಸಿಬ್ಬಂದಿಗೂ ಗಾಯಗಳಾಗಿವೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಮೃತರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಒಡಿಶಾದ ಕಟಕ್ ನಗರದಲ್ಲಿರುವ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡವೊಂದು ಸಂಭವಿಸಿದ್ದು, 10 ರೋಗಿಗಳು ಬಲಿಯಾಗಿದ್ದಾರೆ. 11ಕ್ಕೂ ಹೆಚ್ಚು ಆಸ್ಪತ್ರೆ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿರುವುದು ವರದಿಯಾಗಿದೆ. ಮಧ್ಯರಾತ್ರಿಯ ನಂತರ 2:30ರಿಂದ 3 ಗಂಟೆಯ ಸಮಯದಲ್ಲಿ ಈ ಅಗ್ನಿ ಅಪಘಾತವಾಗಿರುವುದು ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿರಬಹುದು ಎಂದು ಸದ್ಯ ಶಂಕಿಸಲಾಗಿದೆ.

ಆಸ್ಪತ್ರೆಯ ಟ್ರಾಮಾ ಕೇರ್ ವಿಭಾಗದ ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಗಂಭೀರವಾಗಿ ಗಾಯಗೊಂಡಿರುವ ರೋಗಿಗಳು ಈ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಘಟನೆಯಲ್ಲಿ ಐಸಿಯುನಲ್ಲಿದ್ದ 10 ರೋಗಿಗಳು ಬಲಿಯಾಗಿದ್ದಾರೆ. ಅವರನ್ನು ರಕ್ಷಿಸಲು ಯತ್ನಿಸಿದ ಸಿಬ್ಬಂದಿ ಪೈಕಿ 11 ಮಂದಿಗೆ ಗಾಯಗಳಾಗಿವೆ.ಬೆಂಕಿ ಅವಘಡ ಸಂಭವಿಸಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಕೂಡ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಐಸಿಯುನಲ್ಲಿದ್ದ ಇತರ ರೋಗಿಗಳನ್ನು ಆಸ್ಪತ್ರೆಯ ಬೇರೆ ವಾರ್ಡ್​ಗಳಿಗೆ ಶಿಫ್ಟ್ ಮಾಡಲಾಗಿದೆ. ಒಟ್ಟು 23 ರೋಗಿಗಳನ್ನು ಬೇರೆಡೆ ವರ್ಗಾಯಿಸಲಾಗಿದೆ. ಹೀಗೆ ಬೇರೆಡೆ ಸಾಗಿಸುವ ಹಂತದಲ್ಲಿ 7 ಮಂದಿ ರೋಗಿಗಳು ಅಸುನೀಗಿದ್ದಾರೆ. ಮೂರು ರೋಗಿಗಳು ನಂತರ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ಘೋಷಣೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಆರೋಗ್ಯ ಸಚಿವ ಮುಕೇಶ್ ಮಹಾಲಿಂಗ್ ಅವರು ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಮೃತಪಟ್ಟಿರುವ ರೋಗಿಗಳ ಸಂಬಂಧಿಕರಿಗೆ 25 ಲಕ್ಷ ರೂ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ. ಹಾಗೆಯೇ, ಗಾಯಗೊಂಡಿರುವ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

The post ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ! appeared first on Good News 24x7.

]]>
ಹೃದಯಾಘಾತದಿಂದ 9 ವರ್ಷದ ಬಾಲಕಿ ಸಾ*! https://www.goodnews24x7.com/9-year-old-girl-dies-of-heart-attack/ Thu, 26 Feb 2026 11:49:17 +0000 https://www.goodnews24x7.com/?p=8491 ರಾಜಸ್ಥಾನದ ಶಾಲೆಯಲ್ಲಿ ಆಟದ ಸಮಯದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಇದು ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತದ ಪ್ರಕರಣಗಳ ಬಗ್ಗೆ ಕಾಳಜಿ ಉಂಟುಮಾಡಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರು ದಿವ್ಯಾಳ ದೇಹದ ಮೇಲೆ ಯಾವುದೇ ಬಾಹ್ಯ…

The post ಹೃದಯಾಘಾತದಿಂದ 9 ವರ್ಷದ ಬಾಲಕಿ ಸಾ*! appeared first on Good News 24x7.

]]>

ರಾಜಸ್ಥಾನದ ಶಾಲೆಯಲ್ಲಿ ಆಟದ ಸಮಯದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಇದು ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತದ ಪ್ರಕರಣಗಳ ಬಗ್ಗೆ ಕಾಳಜಿ ಉಂಟುಮಾಡಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರು ದಿವ್ಯಾಳ ದೇಹದ ಮೇಲೆ ಯಾವುದೇ ಬಾಹ್ಯ ಗಾಯಗಳು ಕಂಡುಬಂದಿಲ್ಲ ಎಂದು ದೃಢಪಡಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ಆ ಹುಡುಗಿಯ ಕುಟುಂಬವು ಮರಣೋತ್ತರ ಪರೀಕ್ಷೆ ನಡೆಸಲು ನಿರಾಕರಿಸಿದ್ದು, ಶವವನ್ನು ಅವರಿಗೆ ಹಸ್ತಾಂತರಿಸಲಾಗಿದೆ. ಮರಣೋತ್ತರ ಪರೀಕ್ಷೆಯಿಲ್ಲದೆ ಆಕೆಯ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ರಾಜಸ್ಥಾನದ ಗೋಟನ್‌ನಲ್ಲಿರುವ ಖಾಸಗಿ ಶಾಲೆಯ ಆಟದ ಮೈದಾನದಲ್ಲಿ ಆಟವಾಡುತ್ತಿದ್ದಾಗ 9 ವರ್ಷದ ಬಾಲಕಿ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಆಕೆ ಆಡುವಾಗ ಕುಸಿದುಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೃದಯಾಘಾತದಿಂದ ಮೃತಪಟ್ಟ ಮಗುವನ್ನು 5ನೇ ತರಗತಿಯ ವಿದ್ಯಾರ್ಥಿನಿ ದಿವ್ಯಾ ಎಂದು ಗುರುತಿಸಲಾಗಿದೆ.

ಫೆಬ್ರವರಿ 23ರಂದು ಬೆಳಿಗ್ಗೆ 7.48ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬೆಳಗಿನ ಪ್ರಾರ್ಥನೆಗೆ ಇನ್ನೂ ಸಮಯವಿತ್ತು. ಹೀಗಾಗಿ ಹಲವಾರು ಮಕ್ಕಳು ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದರು. ದಿವ್ಯಾ ಬೇರೆ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಆಕೆ ಇದ್ದಕ್ಕಿದ್ದಂತೆ ಮೂರ್ಛೆ ತಪ್ಪಿ ಬಿದ್ದಿದ್ದಳು. ಶಾಲಾ ಸಿಬ್ಬಂದಿ ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸಾಗಿಸಿದರು. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಆಕೆಯ ಕುಟುಂಬದ ಒಪ್ಪಿಗೆಯೊಂದಿಗೆ, ಮರಣೋತ್ತರ ಪರೀಕ್ಷೆಯಿಲ್ಲದೆ ಬಾಲಕಿಯ ಅಂತ್ಯಕ್ರಿಯೆ ನಡೆಸಲಾಯಿತು.

ವಿಚಿತ್ರವೆಂದರೆ, ದಿವ್ಯಾಳ ಅಣ್ಣ ಅಭಿಷೇಕ್ ಸುಮಾರು 4 ತಿಂಗಳ ಹಿಂದೆ ಇದೇ ರೀತಿ ಸಾವನ್ನಪ್ಪಿದ್ದ. ಸೆಪ್ಟೆಂಬರ್ 9, 2025ರಂದು ಮನೆಯಲ್ಲಿ ಆಟವಾಡುತ್ತಿದ್ದಾಗ ಅವನು ಮೂರ್ಛೆ ತಪ್ಪಿದ್ದ. ಅವನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಆತ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ್ದರು. ಇದೀಗ ಮತ್ತೊಬ್ಬಳು ಮಗಳು ಕೂಡ ಅದೇ ರೀತಿ ಮೃತಪಟ್ಟಿರುವುದು ಅವರ ಕುಟುಂಬಕ್ಕೆ ಆಘಾತ ಉಂಟುಮಾಡಿದೆ.

The post ಹೃದಯಾಘಾತದಿಂದ 9 ವರ್ಷದ ಬಾಲಕಿ ಸಾ*! appeared first on Good News 24x7.

]]>
ಕೆಂಪು ಕೋಟೆ ಬಳಿ ಕಾರು ಸ್ಫೋ* 8 ಜನ ಸಾ*; ದೆಹಲಿಯಲ್ಲಿ ಹೈ ಅಲರ್ಟ್ https://www.goodnews24x7.com/car-explosion-near-red-fort-kills-8-delhi-on-high-alert/ Tue, 11 Nov 2025 04:42:49 +0000 https://www.goodnews24x7.com/?p=8102 ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಬಳಿ ಕಾರು ಸ್ಫೋಟವಾಗಿದೆ. ಈ ಘಟನೆಯಿಂದ ಹತ್ತಿರದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ 8 ಜನರು ವ್ಯಕ್ತಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅಗ್ನಿಶಾಮಕ ದಳದ…

The post ಕೆಂಪು ಕೋಟೆ ಬಳಿ ಕಾರು ಸ್ಫೋ* 8 ಜನ ಸಾ*; ದೆಹಲಿಯಲ್ಲಿ ಹೈ ಅಲರ್ಟ್ appeared first on Good News 24x7.

]]>

ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಬಳಿ ಕಾರು ಸ್ಫೋಟವಾಗಿದೆ. ಈ ಘಟನೆಯಿಂದ ಹತ್ತಿರದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ 8 ಜನರು ವ್ಯಕ್ತಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ಆರಿಸುವ ಪ್ರಯತ್ನ ಮಾಡುತ್ತಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಸಂಜೆ ಭಾರೀ ಸ್ಫೋಟ ಉಂಟಾಗಿದೆ. ಕೆಂಪು ಕೋಟೆ (Red Fort) ಬಳಿಯ ಮೆಟ್ರೋ ನಿಲ್ದಾಣದ ಗೇಟ್ ಬಳಿ ನಿಲ್ಲಿಸಿದ್ದ ಕಾರು ಸ್ಫೋಟವಾಗಿದೆ. ಇದರಿಂದ 8 ಜನರು ಮೃತಪಟ್ಟಿದ್ದಾರೆ. ಸುತ್ತಲೂ ಬೆಂಕಿ ಆವರಿಸಿದ್ದರಿಂದ ಹಲವು ಜನರು ಗಾಯಗೊಂಡಿದ್ದಾರೆ. ಇದರಿಂದ ದೆಹಲಿಯಲ್ಲಿ (Delhi) ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.

ದೆಹಲಿಯ ಸಂಸತ್ ಭವನ, ಇಂಡಿಯಾ ಗೇಟ್ ಸುತ್ತ ಹೈ ಅಲರ್ಟ್ ಘೋಷಿಸಲಾಗಿದೆ. ಚಾಂದನಿಚೌಕ್ ಮಾರ್ಕೆಟ್, ಕೆಂಪು ಕೋಟೆ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳನ್ನು ದೆಹಲಿ ಪೊಲೀಸರು ಬಂದ್​ ಮಾಡಿದ್ದಾರೆ.
ಇಂದು ಸಂಜೆ 6.55ರ ಸುಮಾರಿಗೆ ಕಾರು ಸ್ಫೋಟವಾಗಿದೆ ಎಂಬ ಮಾಹಿತಿ ಲಭ್ಯವಾಯಿತು. ಇದಾದ ನಂತರ 7 ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯನ್ನು ಶೀಘ್ರದಲ್ಲೇ ನಿಯಂತ್ರಣಕ್ಕೆ ತರಲಾಯಿತು.
ದೆಹಲಿ ಅಗ್ನಿಶಾಮಕ ಇಲಾಖೆಯ ಪ್ರಕಾರ, ನಿಲ್ಲಿಸಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ಕರೆ ಬಂದಿದ್ದು, ನಂತರ ಹತ್ತಿರದ 3ರಿಂದ 4 ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯನ್ನು ನಿಯಂತ್ರಿಸಲು ತಕ್ಷಣವೇ ಹಲವಾರು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಸಿಎನ್‌ಜಿ ಸಿಲಿಂಡರ್ ಸ್ಫೋಟದ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ದೃಢಪಟ್ಟಿಲ್ಲ.

The post ಕೆಂಪು ಕೋಟೆ ಬಳಿ ಕಾರು ಸ್ಫೋ* 8 ಜನ ಸಾ*; ದೆಹಲಿಯಲ್ಲಿ ಹೈ ಅಲರ್ಟ್ appeared first on Good News 24x7.

]]>
ಸಪ್ತಪದಿ ತುಳಿದು ತಾಳಿ ಕಟ್ಟಿದ್ದ ಗಂಡನೇ ಮಡದಿಯನ್ನ ಹ* ಮಾಡಿದ್ದಾನೆ https://www.goodnews24x7.com/the-husband-who-had-trampled-on-the-seven-pointed-star-and-tied-the-knot-killed-the-woman/ Sat, 18 Oct 2025 11:57:27 +0000 https://www.goodnews24x7.com/?p=7756 ಹಾಸನ: ಆಕೆಗೆ ಎಂಟು ವರ್ಷದ ಕೆಳಗೆ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಮದುವೆಯಾಗಿ ಮೂರು ವರ್ಷ ಚೆನ್ನಾಗಿ ಸಂಸಾರ ಮಾಡಿದ ಗಂಡ ಆಸ್ತಿಗಾಗಿ ಅಪ್ಪ ಅಮ್ಮನ ಮಾತು ಕೇಳಿ ಯಮ ಗಂಡನಾಗಿದ್ದ. ಗಂಡನ ಮನೆಯವರ ಕಿರುಕುಳದ ಜೊತೆಗೆ ಕುಡುಕ ಗಂಡನ ಜೊತೆ ಬಾಳೋದಕ್ಕಿಂತ…

The post ಸಪ್ತಪದಿ ತುಳಿದು ತಾಳಿ ಕಟ್ಟಿದ್ದ ಗಂಡನೇ ಮಡದಿಯನ್ನ ಹ* ಮಾಡಿದ್ದಾನೆ appeared first on Good News 24x7.

]]>

ಹಾಸನ: ಆಕೆಗೆ ಎಂಟು ವರ್ಷದ ಕೆಳಗೆ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಮದುವೆಯಾಗಿ ಮೂರು ವರ್ಷ ಚೆನ್ನಾಗಿ ಸಂಸಾರ ಮಾಡಿದ ಗಂಡ ಆಸ್ತಿಗಾಗಿ ಅಪ್ಪ ಅಮ್ಮನ ಮಾತು ಕೇಳಿ ಯಮ ಗಂಡನಾಗಿದ್ದ. ಗಂಡನ ಮನೆಯವರ ಕಿರುಕುಳದ ಜೊತೆಗೆ ಕುಡುಕ ಗಂಡನ ಜೊತೆ ಬಾಳೋದಕ್ಕಿಂತ ಒಂಟಿಯಾಗಿ ಇರೋದೇ ಮೇಲು ಎಂದು ಡೈವೋರ್ಸ್ ಗೆ ಅಪ್ಲೈ ಮಾಡಿಕೊಂಡಿದ್ದವಳನ್ನ ಚೆನ್ನಾಗಿರೋನ ಬಾ ಎಂದು ಪುಸಲಾಯಿಸಿ ಕರೆದುಕೊಂಡು ಬಂದವನು ಚಾಕುವಿನಿಂದ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ತನುಜಾ ಜೀವಕ್ಕೆ ಜೀವ ಆಗಿರ್ತಿನಿ.. ಕಣ್ಣಲ್ಲಿ ಕಣ್ಣಾಗಿ ನೋಡ್ಕೊಳ್ತಿನಿ ಅಂತಾ ಸಪ್ತಪದಿ ತುಳಿದು ತಾಳಿ ಕಟ್ಟಿದ್ದ ಗಂಡನೇ ಈಕೆಯನ್ನ ಕೊಂದು ಕೆಡವಿದ್ದಾನೆ. ರಣರಾಕ್ಷಸನಂತೆ ತಾನೇ ತಾಳಿ ಕಟ್ಟಿದ ಕುತ್ತಿಗೆಯನ್ನ ಚಾಕುವಿನಿಂದ ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಹೌದು ಕಳೆದ 8 ವರ್ಷಗಳ ಕೆಳಗೆ ಹಾಸನ ಜಿಲ್ಲೆಯ ಗುಡ್ಡೇನಹಳ್ಳಿಯ ತನುಜಳನ್ನ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಹಿರೇಕಾನವಂಗಲ ಗ್ರಾಮದ ರಮೇಶ್ ಜೊತೆ ಮದುವೆ ಮಾಡಿಕೊಡಲಾಗಿತ್ತು. ಮದುವೆಯಾದ ಹೊಸತರಲ್ಲಿ ನೀನೆ ನನ್ನ ಜೀವ.. ನೀನೆ ನನ್ನುಸಿರು ಅಂತಾ ಅಂತಾ ಹೆಂಡತಿಯನ್ನ ಮುದ್ದು ಮಾಡ್ತಿದ್ದವನು. ಒಂದು ಗಂಡು ಮಗು ಆಗಿ ಹೆಂಡತಿ ತವರು ಮನೆಗೆ ಹೋದಾಗ್ಲಿಂದ ತನ್ನ ತಂದೆ, ತಾಯಿ, ಅಕ್ಕಂದಿರ ಮಾತು ಕೇಳಿ ಹೆಂಡತಿಗೆ ಕೊಡಬಾರದ ಚಿತ್ರ ಹಿಂಸೆ ಕೊಡ್ತಿದ್ನಂತೆ. ತನ್ನ ಮಗುವಿನ ನಾಮಕರಣಕ್ಕೂ ಹೋಗಿರ್ಲಿಲ್ವಂತೆ. ಹೆಂಡತಿ ಬಾಣಂತನ ಮುಗಿಸಿಕೊಂಡು ಗಂಡನ ಮನೆಗೆ ಬರ್ತಿದ್ದಂತೆ ಮನೆ ಮಂದಿ ಎಲ್ಲ ಸೇರಿ ಕಾಟ ಕೊಟ್ಟಿದ್ದಾರೆ. ಸಾಲದು ಅಂತಾ ಮನೆಯಿಂದ ಹೊರಗೆ ಹಾಕಿದ್ರಂತೆ. ಮೊದಲೇ ಗಂಡ ಕುಡುಕ ಅಪ್ಪ, ಅಮ್ಮ, ಅಕ್ಕಂದಿರ ಮಾತು ನಂಬಿ ಹೊಡೆದು ಬಡಿದು ಮಾಡ್ತಿದ್ನಂತೆ. ಇಲ್ಲೇ ಇದ್ರೆ ಸರಿಯಾಗಲ್ಲ ಅಂತಾ ತನುಜಾ ತನ್ನ ಗಂಡನ ಕರೆದುಕೊಂಡು ಬಂದು ಬೇರೆ ಸಂಸಾರ ಮಾಡ್ತಿದ್ದಳಂತೆ. ಮನೆ ಬಿಟ್ಟು ಬೇರೆ ಮನೆಗೆ ಬಂದ್ರೂ ಕೂಡಾ ಗಂಡ ರಮೇಶ ಕುಡಿಯೋದನ್ನ‌ ಬಿಟ್ಟಿಲ್ಲ ಇದರಿಂದ ಬೇಸತ್ತ ತನುಜಾ ಮೂರು ವರ್ಷಗಳ ಕೆಳಗೆ ಡಿವೋರ್ಸ್‌ಗೆ ಅಪ್ಲೆ ಮಾಡಿಕೊಂಡಿದ್ದಾಳೆ.. ಕೆಲ ದಿನಗಳ ಹಿಂದೆ ಮಗನ ಸ್ಕೂಲ್‌ಗೆ ರಜೆ ಅಂತಾ ತವರು ಮನೆಗೆ ಹೋಗಿದ್ದ ತನುಜಾಳಿಗೆ ಕಾಲ್ ಮಾಡಿದ್ದ ರಮೇಶ ಕೋರ್ಟ್‌ಗೆ ಹೋಗಬೇಕು.. ಲಾಯರ್ ಕಾಲ್ ಮಾಡಿದ್ರು.. ಇನ್ಮೇಲೆ ಚೆನ್ನಾಗಿರೋಣ ಬಾ ಅಂತ ಕರೆದಿದ್ದಾನೆ. ಸೋಮವಾರವಷ್ಟೇ ಗುಡ್ಡೇನಹಳ್ಳಿಯಿಂದ ತನುಜಾಳನ್ನ ಕರೆದುಕೊಂಡು ಬಂದಿದ್ದಾನೆ.. ಆದ್ರೆ ನಿನ್ನೆ ಸಂಜೆ ಗಂಡ ಹೆಂಡತಿ ನಡುವೆ ಅದೇನು ನಡೆಯಿತೋ ಗೊತ್ತಿಲ್ಲ ಚಾಕುವಿನಿಂದ ತನಜಾಳ ಕುತ್ತಿಗೆ ಸೀಳಿದ್ದಾನೆ.

ನಿನ್ನೆ ಸಂಜೆ ತನುಜಾ ಮತ್ತು ರಮೇಶನ ನಡುವೆ ಯಾವ ಜಗಳ ನಡೆದಿತ್ತೋ ಗೊತ್ತಿಲ್ಲ. ಕಂಠಪೂರ್ತಿ ಕುಡಿದು ಬಂದಿದ್ದ ರಮೇಶನಿಗೆ ಎಣ್ಣೆಯ ನಶೆಯ ಜೊತೆಗೆ ಪಿತ್ತ ನೆತ್ತಿಗೆ ಹತ್ತುತ್ತಿದ್ದಂತೆ ಮನೆಯಲ್ಲಿದ್ದ ಚಾಕುವನ್ನ ಕೈಗೆತ್ತಿಕೊಂಡು ಸಿಕ್ಕ ಸಿಕ್ಕಲ್ಲಿ ಚುಚ್ಚಿದ್ದಾನೆ.. ಚಾಕುವಿನಿಂದ ಚುಚ್ಚಿದ ತಕ್ಷಣ ಕೆಳಗೆ ಬಿದ್ದ ತನುಜಾಳ ಎದೆಯ ಮೇಲೆ ಹತ್ತಿ ಕೂತವ್ನೇ ತಾನೇ ತನ್ನ ಕೈಯ್ಯಾರೆ ತಾಳಿ ಕಟ್ಟಿದ್ದ ಕುತ್ತಿಗೆಯನ್ನ ರಣ ರಾಕ್ಷಸನಂತೆ ಸೀಳಿ ಕೊಂದಿದ್ದಾನೆ.. ಯಾವಗ ತನ್ನ ಹೆಂಡತಿ ತನುಜಾ ಸಾವನ್ನಪ್ಪಿದ್ದಾಳೆ ಅನ್ನೋದು ಕನ್ಫರ್ಮ್ ಆಯ್ತೋ ಆಗ ಅದೇ ಚಾಕುವಿನಿಂದ ತಾನೂ ಕೂಡಾ ಕೈ ಕೊಯ್ದುಕೊಂಡು ನನ್ನ ಹೆಂಡತಿ ನನಗೆ ಹೊಡೆದಿದ್ದಾಳೆ ಅಂತಾ ಆಸ್ಪತ್ರೆಗೆ ಹೋಗಿ ಅಡ್ಮೆಂಟ್ ಆಗಿದ್ದಾನೆ.. ಆಸತ್ರೆಯಿಂದ ಬಂದ ಮಾಹಿತಿ ಆಧರಿಸಿ ಹಿರೇಕಾನವಂಗಲ ಗ್ರಾಮದ ರಮೇಶನ ಮನೆಗೆ ಹೋದ ಅಜ್ಜಂಪುರ ಠಾಣೆಯ ಇನ್ಸ್ಪೆಕ್ಟರ್ ವೀರೇಂದ್ರ ಮತ್ತು ಪಿಎಸ್‌ಐ ಗಜೇಂದ್ರ ಇಬ್ಬರೂ ಒಂದು ಕ್ಷಣ ಶಾಕ್ ಆಗಿಹೋಗಿದ್ದಾನೆ. ಯಾಕಂದ್ರೆ ತನ್ನ ಹೆಂಡತಿ ತನಗೆ ಹೊಡೆದ್ದಾಳೆ ಅಂತಾ ಆಸ್ಪತ್ರೆ ಸೇರಿದ್ದ ಗಂಡ ರಮೇಶ ಇಲ್ಲಿ ತನ್ನ ಹೆಂಡತಿಯನ್ನ ಕತ್ತು ಸೀಳಿ ಕೊಂದು ಮಲಗಿಸಿ ಹೋಗಿದ್ದ. ಕೂಡಲೇ ಆಸ್ಪತ್ರೆಗೆ ಹೋಗಿ ಅಡ್ಮೆಂಟ್ ಆಗಿದ್ದ ರಮೇಶನನ್ನ ವಿಚಾರಿಸ್ತಿದ್ದಂತೆ ತಾನೇ ತನ್ನ ಹೆಂಡತಿಯನ್ನ ಕೊಂದಿದ್ದು ಅಂತ ಸತ್ಯ ಬಾಯಿಬಿಟ್ಟಿದ್ದಾನೆ. ಇನ್ನೂ ರಮೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಕೊಲೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ರಮೇಶನ ತಂದೆ ಪುಟ್ಟಪ್ಪ ಹಾಗೂ ತಾಯಿ ಲಲಿತಮ್ಮರನ್ನ ಪೊಲೀಸರು ಬಂಧಿಸಿದ್ದಾರೆ.

ಒಟ್ನಲ್ಲಿ ಕುಡಿತದ ಚಟಕ್ಕೆ ದಾಸನಾಗಿದ್ದ ಗಂಡ ಆಸ್ತಿಗಾಗಿ ಅಪ್ಪ, ಅಮ್ಮ, ಅಕ್ಕಂದಿರ ಮಾತು ಕೇಳಿ ತನ್ನನ್ನೇ ನಂಬಿ ಅಗ್ನಿಸಾಕ್ಷಿಯಾಗಿ ಕೈ ಹಿಡಿದು ತನ್ನವರನ್ನೆಲ್ಲ ಬಿಟ್ಟು ಬಂದಿದ್ದ ಹೆಂಡತಿಯನ್ನೇ ಕೊಂದು ಕೆಡವಿದ್ದು. ತಾಯಿ ಸತ್ತು ಸುಟ್ಟು ಬೂಧಿಯಾಗಿ ತಂದೆ ಜೈಲುಪಾಲಾಗಿದ್ದಾನೆ. ಆದ್ರೆ ಏನೂ ಅರಿಯದ 6 ವರ್ಷದ ಕಂದಮ್ಮ ಅನಾಥವಾಗಿದ್ದು ಮಾತ್ರ ದುರಂತ

The post ಸಪ್ತಪದಿ ತುಳಿದು ತಾಳಿ ಕಟ್ಟಿದ್ದ ಗಂಡನೇ ಮಡದಿಯನ್ನ ಹ* ಮಾಡಿದ್ದಾನೆ appeared first on Good News 24x7.

]]>
ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ. https://www.goodnews24x7.com/former-prime-minister-h-d-deve-gowdas-health-improves/ Fri, 10 Oct 2025 13:03:15 +0000 https://www.goodnews24x7.com/?p=7685 ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ದೇವೇಗೌಡರು ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ಮೂತ್ರಸೋಂಕು ಸಮಸ್ಯೆಯಿಂದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಬೆಂಗಳೂರಿನ  ಮಣಿಪಾಲ್ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ದಾಖಲಿಸಲಾಗಿತ್ತು. ಸದ್ಯ ಅರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ದೇವೇಗೌಡರು ಇನ್ನೂ ಎರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್…

The post ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ. appeared first on Good News 24x7.

]]>

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ದೇವೇಗೌಡರು ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ.

ಮೂತ್ರಸೋಂಕು ಸಮಸ್ಯೆಯಿಂದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಬೆಂಗಳೂರಿನ  ಮಣಿಪಾಲ್ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ದಾಖಲಿಸಲಾಗಿತ್ತು. ಸದ್ಯ ಅರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ದೇವೇಗೌಡರು ಇನ್ನೂ ಎರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

 

 

 

 

 

 

 

ದೇವೇಗೌಡರನ್ನು ಆದಿಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಪ್ರೋ. ಕೆ.ಎಸ್ ರಂಗಪ್ಪ ಭೇಟಿಯನ್ನ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ

ಐಸಿಯುನಿಂದ ಜನರಲ್ ವಾರ್ಡ್‌ಗೆ ಶಿಫ್ಟ್

 

 

 

 

 

 

ಮೊದಲು ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ದೇವೇಗೌಡರಿಗೆ ಚಿಕಿತ್ಸೆ ನೀಡಲಾಗಿತ್ತು. ಖ್ಯಾತ ವೈದ್ಯ ಡಾ. ಸುದರ್ಶನ್ ಬಲ್ಲಾಳ್ ನೇತ್ವತ್ವದಲ್ಲಿ ಚಿಕಿತ್ಸೆ ನಡೆಯುತ್ತಿತ್ತು, ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ. ಹೀಗಾಗಿ ಬಳಿಕ ಅವರನ್ನು ನಿನ್ನೆ ಐಸಿಯುನಿಂದ ಜನರಲ್ ವಾರ್ಡ್‌ಗೆ ಶಿಫ್ಟ್ ಮಾಡಲಾಗಿತ್ತು.

ಮಾಜಿ ಪ್ರಧಾನಮಂತ್ರಿಗಳು ಹಾಗೂ ವರಿಷ್ಠರಾದ ಶ್ರೀ ಹೆಚ್‌.ಡಿ. ದೇವೇಗೌಡರು ಆರೋಗ್ಯವಾಗಿದ್ದಾರೆ. ಕಾರ್ಯಕರ್ತರು, ಅಭಿಮಾನಿಗಳು ಯಾವುದೇ ರೀತಿ ಆತಂಕಪಡುವ ಅಗತ್ಯವಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ.

The post ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ. appeared first on Good News 24x7.

]]>
11 ಮಕ್ಕಳು ಕೆಮ್ಮಿನ ಸಿರಪ್ ಸೇವಿಸಿ ಸಾ* https://www.goodnews24x7.com/11-children-die-after-consuming-cough-syrup/ Sat, 04 Oct 2025 08:49:47 +0000 https://www.goodnews24x7.com/?p=7661 ನವದೆಹಲಿ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಇತ್ತೀಚೆಗೆ 11 ಮಕ್ಕಳು ಸಾವನ್ನಪ್ಪಿದ ಘಟನೆಗೆ ಕೆಮ್ಮಿನ ಔಷಧ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಔಷಧದ ಮಾದರಿಯನ್ನು ಪರೀಕ್ಷಿಸಿ ಕ್ಲೀನ್‌ ಚಿಟ್ ನೀಡಿವೆ. ಮಕ್ಕಳ ಸಾವಿಗೆ ಔಷಧ…

The post 11 ಮಕ್ಕಳು ಕೆಮ್ಮಿನ ಸಿರಪ್ ಸೇವಿಸಿ ಸಾ* appeared first on Good News 24x7.

]]>

ನವದೆಹಲಿ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಇತ್ತೀಚೆಗೆ 11 ಮಕ್ಕಳು ಸಾವನ್ನಪ್ಪಿದ ಘಟನೆಗೆ ಕೆಮ್ಮಿನ ಔಷಧ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಔಷಧದ ಮಾದರಿಯನ್ನು ಪರೀಕ್ಷಿಸಿ ಕ್ಲೀನ್‌ ಚಿಟ್ ನೀಡಿವೆ. ಮಕ್ಕಳ ಸಾವಿಗೆ ಔಷಧ ಕಾರಣವಲ್ಲ ಎಂದು ಸಷ್ಟಪಡಿಸಿವೆ.

ಮಧ್ಯಪ್ರದೇಶದಲ್ಲಿ 9 ಮಕ್ಕಳು ಸಾವು: ಕಳೆದ 15 ದಿನದಲ್ಲಿ ಮಧ್ಯ ಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ 9 ಮಕ್ಕಳು ಮೃತಪಟ್ಟಿವೆ. ಈ ಮಕ್ಕಳ ಸಾವಿಗೆ ಕೋಲ್ಟಿಫ್ ಮತ್ತು ನೆಕ್‌ಸ್ಟೋ-ಡಿಎಸ್ ಕೆಮ್ಮಿನ ಔಷಧ ಸೇವನೆಯಿಂದ ಉಂಟಾದ ಕಿಡ್ನಿ ವೈಫಲ್ಯ ಕಾರಣ ಎಂದು ಪೋಷಕರು ಮತ್ತು ಸ್ಥಳೀಯರು ಆರೋಪಿಸಿದ್ದಾರೆ. ಆದರೆ ಮಧ್ಯ ಪ್ರದೇಶದ ಆರೋಗ್ಯ ಇಲಾಖೆಯು ಔಷಧದ ಪರೀಕ್ಷೆ ವೇಳೆ ಯಾವುದೇ ವಿಷಪೂರಿತ ಅಂಶ ಪತ್ತೆಯಾಗಿಲ್ಲ. ಔಷಧದ ನಿಷೇಧದ ಪ್ರಶ್ನೆಯೇ ಇಲ್ಲ. ಮಕ್ಕಳ ಸಾವಿಗೆ ಸಮಿತಿ ರಚಿಸಲಾಗಿದ್ದು, ತನಿಖೆ ಆರಂಭವಾಗಿದೆ ಎಂದು ಸ್ಪಷ್ಟಪಡಿಸಿದೆ.
ರಾಜಸ್ಥಾನದಲ್ಲಿ 2 ಮಕ್ಕಳ ಸಾವು: ರಾಜ ಸ್ಥಾನದ ಸಿಕಾರ್ ಮತ್ತು ಭರತ್‌ ಪುರ ಜಿಲ್ಲೆಗಳಲ್ಲಿ ತಲಾ ಒಂದೊಂದು ಸಾವಾಗಿದ್ದು, ಇಲ್ಲಿಯೂ ಸಹ ಔಷಧವೇ ಕಾರಣ ಎಂಬ ಆರೋಪವಿದೆ.

 

 

 

 

 

 

ತಮಿಳುನಾಡಿನಲ್ಲಿ ನಿಷೇಧ
ಮಕ್ಕಳ ಸಾವಿನ ಬೆನ್ನಲ್ಲೇ ತಮಿಳುನಾಡು ಸರ್ಕರ ಕೋಲ್ಟಿಫ್ ಸಿರಪ್ ಮೇಲೆ ನಿಷೇಧ ಹೇರಿದೆ. ತಮಿಳುನಾಡು ಔಷಧ ನಿಯಂತ್ರಣಾ ಮಂಡಳಿ ಈ ಕ್ರಮ ಕೈಗೊಂಡಿದೆ. ಘಟನೆ ಕುರಿತು ತನಿಖೆ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ.

ಆರೋಪವಿದೆ. ಆದರೆ ಅಲ್ಲಿನ ಸರ್ಕಾರವು ವೈದ್ಯರಿಗೆ ಕ್ಲೀನ್‌ ಚಿಟ್ ನೀಡಿದೆ. ರಾಜಸ್ಥಾನ ಔಷಧ ನಿಯಂತ್ರಣ ಮಂಡಳಿಯು ಔಷಧಗಳ ಪೂರೈಕೆಗೆ ತಾತ್ಕಾಲಿಕ ತಡೆ ನೀಡಿದೆ. ಎರಡೂ ಪ್ರಕರಣಗಳಲ್ಲಿಯೂ ಪೋಷಕರು ವೈದ್ಯರ ಸೂಚನೆಯಿಲ್ಲದೆಯೇ ಔಷಧ ನೀಡಿದ್ದೇ ಕಾರಣ ಎಂದು ಆರೋಗ್ಯ ಇಲಾಖೆ ಹೇಳಿದೆ.

2 ವರ್ಷದ ಮಕ್ಕಳಿಗೆ ಕೆಮ್ಮಿನೌಷಧ ಬೇಡ: ಕೇಂದ್ರದ ಎಚ್ಚರಿಕೆ
ಅತ್ತ ಕೇಂದ್ರ ಸರ್ಕಾರ ಕಫ್‌ಸಿರಪ್‌ನಿಂದ ಮಕ್ಕಳ ಸಾವು ಸಂಭವಿಸಿದೆ ಎಂಬ ಆರೋಪವನ್ನು ತಿರಸ್ಕರಿಸಿದೆ. ವೈದ್ಯಕೀಯ ಮತ್ತು ವೈಜ್ಞಾನಿಕ ಪರೀಕ್ಷೆಯಲ್ಲಿ ಸಿರಪ್‌ನಲ್ಲಿ ಯಾವುದೇ ವಿಷಪೂರಿತ ಅಂಶಗಳು ಪತ್ತೆಯಾಗಿಲ್ಲ. ಈ ತನಿಖೆ ಆರಂಭವಾಗಿದೆ ಎಂದು ಸ್ಪಷ್ಟಪಡಿಸಿದೆ.

ಜತೆಗೆ 2 ವರ್ಷದ ಒಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ಕೊಡಬಾರದೆಂದು ಆದೇಶಿಸಿದೆ. ಜೊತೆಗೆ ಕೆಮ್ಮಿನ ಔಷಧದ ಪರಿಣಾಮ ಎಂಬ ಯಾವುದೇ ಪ್ರಕರಣ ಬಂದಲ್ಲಿ ಖಾಸಗಿ ವೈದ್ಯರು ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಬೇಕು ಎಂದು ಆದೇಶ ಹೊರಡಿಸಿದೆ.

The post 11 ಮಕ್ಕಳು ಕೆಮ್ಮಿನ ಸಿರಪ್ ಸೇವಿಸಿ ಸಾ* appeared first on Good News 24x7.

]]>
ಹುಟ್ಟು ಹಬ್ಬದ ದಿನವೇ ಮಸಣ ಸೇರಿದ ಚಿತ್ರದುರ್ಗದ ಯುವಕ: ಹಾಸನ ದುರಂತ https://www.goodnews24x7.com/chitradurga-youth-dies-on-birthday-hassan-tragedy/ Sat, 13 Sep 2025 12:13:00 +0000 https://www.goodnews24x7.com/?p=7515 ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್‌ ಹರಿದು 9 ಮಂದಿ ಸಾವನ್ನಪ್ಪಿರುವ ಘನಘೋರ ದುರಂತ ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿಯಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಹುಟ್ಟುಹಬ್ಬದ ದಿನವೇ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಇಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದ 22 ವರ್ಷ…

The post ಹುಟ್ಟು ಹಬ್ಬದ ದಿನವೇ ಮಸಣ ಸೇರಿದ ಚಿತ್ರದುರ್ಗದ ಯುವಕ: ಹಾಸನ ದುರಂತ appeared first on Good News 24x7.

]]>

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್‌ ಹರಿದು 9 ಮಂದಿ ಸಾವನ್ನಪ್ಪಿರುವ ಘನಘೋರ ದುರಂತ ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿಯಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಹುಟ್ಟುಹಬ್ಬದ ದಿನವೇ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಇಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದ 22 ವರ್ಷ ವಯಸ್ಸಿನ ಮಿಥುನ್‌ ತನ್ನ ಬರ್ತ್‌ ಡೇ ದಿನವೇ ಸಾವನ್ನಪ್ಪಿದ್ದಾನೆ. ಈ ದುರಂತದಲ್ಲಿ ಈವರೆಗೆ 9 ಜನರು ಸಾವನ್ನಪ್ಪಿದ್ದು, ಮೃತರಲ್ಲಿ ಯುವಕರೇ ಹೆಚ್ಚಿದ್ದಾರೆ. 20 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

The post ಹುಟ್ಟು ಹಬ್ಬದ ದಿನವೇ ಮಸಣ ಸೇರಿದ ಚಿತ್ರದುರ್ಗದ ಯುವಕ: ಹಾಸನ ದುರಂತ appeared first on Good News 24x7.

]]>
ಶಾಸಕಿ ದೀಪ್ತಿ ಕಿರಣ್ ಕಾರ್ ಅಪಘಾತ : ಗಂಭೀರ ಗಯಾ ! https://www.goodnews24x7.com/mla-deepti-kiran-car-accident-serious-gayamla-deepti-kiran-car-accident-serious-gaya/ Sat, 30 Aug 2025 08:56:08 +0000 https://www.goodnews24x7.com/?p=7015 ರಾಜಸ್ಥಾನದ ರಾಜ್ಸಮಂದ್ ಕ್ಷೇತ್ರದ ಶಾಸಕಿ ದೀಪ್ತಿ ಕಿರಣ್ ಮಹೇಶ್ವರಿ ಅವರು ಉದಯಪುರ-ರಾಜ್ಸಮಂದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ 1 ಗಂಟೆ ಸುಮಾರಿಗೆ ಉದಯಪುರದ ಅಂಬೆರಿ ಬಳಿ ಗುಜರಾತ್ ನೋಂದಣಿಯ ವಾಹನವು ಬೇರೊಂದು ಕಾರಿಗೆ ಡಿಕ್ಕಿ ಹೊಡೆದಿದೆ.ಮಹೇಶ್ವರಿ…

The post ಶಾಸಕಿ ದೀಪ್ತಿ ಕಿರಣ್ ಕಾರ್ ಅಪಘಾತ : ಗಂಭೀರ ಗಯಾ ! appeared first on Good News 24x7.

]]>

ರಾಜಸ್ಥಾನದ ರಾಜ್ಸಮಂದ್ ಕ್ಷೇತ್ರದ ಶಾಸಕಿ ದೀಪ್ತಿ ಕಿರಣ್ ಮಹೇಶ್ವರಿ ಅವರು ಉದಯಪುರ-ರಾಜ್ಸಮಂದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ 1 ಗಂಟೆ ಸುಮಾರಿಗೆ ಉದಯಪುರದ ಅಂಬೆರಿ ಬಳಿ ಗುಜರಾತ್ ನೋಂದಣಿಯ ವಾಹನವು ಬೇರೊಂದು ಕಾರಿಗೆ ಡಿಕ್ಕಿ ಹೊಡೆದಿದೆ.ಮಹೇಶ್ವರಿ ಅವರ ಆಪ್ತ ಸಹಾಯಕ ಜೈ ಮತ್ತು ಚಾಲಕ ಧರ್ಮೇಂದ್ರ ಅವರೊಂದಿಗೆ ಪ್ರಯಾಣಿಸುತ್ತಿದ್ದರು. ಮೂವರನ್ನೂ ತಕ್ಷಣ ಚಿಕಿತ್ಸೆಗಾಗಿ ಉದಯಪುರದ ಗೀತಾಂಜಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತದಲ್ಲಿ ಮಹೇಶ್ವರಿ ಅವರ ಪಕ್ಕೆಲುಬು ಮುರಿತಕ್ಕೊಳಗಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಐಸಿಯುಗೆ ದಾಖಲಿಸಲಾಗಿದೆ. ಅವರ ಆಪ್ತ ಸಹಾಯಕ ಜೈ ಅವರ ತಲೆಗೆ ಗಾಯವಾಗಿದ್ದರೆ, ಚಾಲಕ ಧರ್ಮೇಂದ್ರ ಕೂಡ ಗಾಯಗೊಂಡಿದ್ದಾರೆ.

 

 

 

The post ಶಾಸಕಿ ದೀಪ್ತಿ ಕಿರಣ್ ಕಾರ್ ಅಪಘಾತ : ಗಂಭೀರ ಗಯಾ ! appeared first on Good News 24x7.

]]>
ಬೆಂಗಳೂರು ನಗರದಲ್ಲಿ ಸತತ ಮಳೆಯ ಪರಿಣಾಮ ವೈರಲ್ ಜ್ವರ ಪ್ರಕರಣಗಳಲ್ಲಿ ಹೆಚ್ಚಳ. https://www.goodnews24x7.com/viral-fever-cases-increase-in-bengaluru-city-due-to-continuous-rains/ Tue, 19 Aug 2025 05:39:41 +0000 https://www.goodnews24x7.com/?p=6384 ಬೆಂಗಳೂರು : ನಗರದ ಹವಾಮಾನದಲ್ಲಿ ನಡೆಯುತ್ತಿರುವ ಅನಿಯಮಿತ ಬದಲಾವಣೆಯ ಹಿನ್ನೆಲೆ, ಕಳೆದ ಒಂದು ವಾರದಿಂದ ಸಂಭವಿಸುತ್ತಿರುವ ನಿರಂತರ ಮಳೆಯು ವೈರಲ್ ಜ್ವರ ಪ್ರಕರಣಗಳಲ್ಲಿ ಏರಿಕೆ ತರಿಸಿದೆ. ವೈದ್ಯಕೀಯ ವರದಿಗಳ ಪ್ರಕಾರ, ಮಕ್ಕಳಲ್ಲಿ ಶೇ.5 ರಿಂದ 10 ರಷ್ಟು ಮತ್ತು ಒಟ್ಟು ಒಪಿಡಿ…

The post ಬೆಂಗಳೂರು ನಗರದಲ್ಲಿ ಸತತ ಮಳೆಯ ಪರಿಣಾಮ ವೈರಲ್ ಜ್ವರ ಪ್ರಕರಣಗಳಲ್ಲಿ ಹೆಚ್ಚಳ. appeared first on Good News 24x7.

]]>

ಬೆಂಗಳೂರು : ನಗರದ ಹವಾಮಾನದಲ್ಲಿ ನಡೆಯುತ್ತಿರುವ ಅನಿಯಮಿತ ಬದಲಾವಣೆಯ ಹಿನ್ನೆಲೆ, ಕಳೆದ ಒಂದು ವಾರದಿಂದ ಸಂಭವಿಸುತ್ತಿರುವ ನಿರಂತರ ಮಳೆಯು ವೈರಲ್ ಜ್ವರ ಪ್ರಕರಣಗಳಲ್ಲಿ ಏರಿಕೆ ತರಿಸಿದೆ. ವೈದ್ಯಕೀಯ ವರದಿಗಳ ಪ್ರಕಾರ, ಮಕ್ಕಳಲ್ಲಿ ಶೇ.5 ರಿಂದ 10 ರಷ್ಟು ಮತ್ತು ಒಟ್ಟು ಒಪಿಡಿ ರೋಗಿಗಳಲ್ಲಿ ಶೇ.15-20 ರಷ್ಟು ವೈರಲ್‌ ಫೀವರ್‌ ಪ್ರಕರಣಗಳು ಹೆಚ್ಚಾಗಿವೆ.

ಹವಾಮಾನ ಬದಲಾವಣೆಯಿಂದಾಗಿ ಜ್ವರ, ಕೆಮ್ಮು, ಶೀತ, ಗಂಟಲು ನೋವು, ವಾಂತಿ, ಅತಿಸಾರ ಮುಂತಾದ ಲಕ್ಷಣಗಳೊಂದಿಗೆ ಬಾಲಕರು ಹಾಗೂ ದೊಡ್ಡವರು ಆಸ್ಪತ್ರೆಗಳ ಒಪಿಡಿಗೆ ಬರ್ತಿದ್ದಾರೆ. ಜೊತೆಗೆ ಡೆಂಗ್ಯೂ ಮತ್ತು ಟೈಫಾಯ್ಡ್ ಪ್ರಕರಣಗಳೂ ಸಹ ಕಾಣಿಸಿಕೊಂಡಿವೆ.

ವೈದ್ಯರ ಅಭಿಪ್ರಾಯ
ಕೆ.ಸಿ. ಜನರಲ್ ಆಸ್ಪತ್ರೆಯ ವೈದ್ಯ ಡಾ. ಸುರೇಶ್ ಹೇಳುವಂತೆ, “ಮಕ್ಕಳಲ್ಲಿಯಷ್ಟೇ ಅಲ್ಲದೆ, ದೊಡ್ಡವರಲ್ಲೂ ವೈರಲ್ ಜ್ವರ ಪ್ರಕರಣಗಳು ಹೆಚ್ಚಾಗಿವೆ. ಬಹುಪಾಲು ಪ್ರಕರಣಗಳು ಮೂರು ನಾಲ್ಕು ದಿನಗಳಲ್ಲಿ ಚೇತರಿಸಿಕೊಳ್ಳುತ್ತವೆ.”

ವಾಣಿವಿಲಾಸ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಸವಿತಾ ಸಿ. ಅವರು, “ಚಳಿಯ ವಾತಾವರಣದಿಂದಾಗಿ ಗರ್ಭಿಣಿಯರಲ್ಲಿಯೂ ಜ್ವರ, ನೆಗಡಿಯಂತಹ ಲಕ್ಷಣಗಳ ಪ್ರಮಾಣದಲ್ಲಿ ಏರಿಕೆ ಕಂಡುಬರುತ್ತಿದೆ. ಇದು ಸಾಮಾನ್ಯವಾಗಿ ರೆಸ್ಪಿರೇಟರಿ ವೈರಸ್‌ನಿಂದ ಉಂಟಾಗುವ ಅಸ್ವಸ್ಥತೆ” ಎಂದರು.

ಆರೋಗ್ಯ ಕಾಳಜಿ ಅಗತ್ಯ
ಕೆ.ಸಿ. ಜನರಲ್, ವಿಕ್ಟೋರಿಯಾ, ಸಿ.ವಿ. ರಾಮನ್ ನಗರ, ವಾಣಿವಿಲಾಸ್ ಸೇರಿ ಬಹುತೇಕ ಸರ್ಕಾರಿ ಆಸ್ಪತ್ರೆಗಳ ಒಪಿಡಿಯಲ್ಲಿ ಅರ್ಧಕ್ಕಿಂತ ಹೆಚ್ಚು ರೋಗಿಗಳು ವೈರಲ್ ಜ್ವರದಿಂದ ಬಳಲುತ್ತಿರುವುದಾಗಿ ವರದಿಯಾಗಿದೆ.

ವೈದ್ಯರ ಸಲಹೆ:

  • ಮಕ್ಕಳನ್ನು ಬೆಚ್ಚಗಿರಿಸಲು ಯತ್ನಿಸಿ
  • ಮಳೆ ಅಥವಾ ಚಳಿಯಲ್ಲಿ ಹೊರಗೆ ಹೋಗದಂತೆ ತಡೆಗಟ್ಟಿರಿ
  • ಜ್ವರ ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ
  • ಆರೋಗ್ಯಕರ ಆಹಾರ ಮತ್ತು ನಿದ್ರೆ ಕಾಪಾಡಿಕೊಳ್ಳಿ

ಬೆಂಗಳೂರು ನಿವಾಸಿಗಳು ಹವಾಮಾನದ ಬದಲಾವಣೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ನಿಜವಾಗಿಯೂ ಅಗತ್ಯವಾಗಿದೆ ಎಂದು ವೈದ್ಯರು ಎಚ್ಚರಿಸುತ್ತಿದ್ದಾರೆ.

 

The post ಬೆಂಗಳೂರು ನಗರದಲ್ಲಿ ಸತತ ಮಳೆಯ ಪರಿಣಾಮ ವೈರಲ್ ಜ್ವರ ಪ್ರಕರಣಗಳಲ್ಲಿ ಹೆಚ್ಚಳ. appeared first on Good News 24x7.

]]>