hospitals Archives - Good News 24x7 https://www.goodnews24x7.com/tag/hospitals/ Kannada Sun, 01 Mar 2026 08:45:24 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg hospitals Archives - Good News 24x7 https://www.goodnews24x7.com/tag/hospitals/ 32 32 ಮಾ.11ರಿಂದ ವೈದ್ಯಕೀಯ ಸಿಬ್ಬಂದಿ ಸಂಘಗಳ ಮುಷ್ಕರ https://www.goodnews24x7.com/medical-staff-unions-to-strike-from-march-11medical-staff-unions-to-strike-from-march-11/ Sun, 01 Mar 2026 08:45:17 +0000 https://www.goodnews24x7.com/?p=8567 ಆರೋಗ್ಯ ಸೇವೆ ವ್ಯತ್ಯಯವಾದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ರಾಜ್ಯ ಸರ್ಕಾರ, ಸರ್ಕಾರಿ ವೈದ್ಯಕೀಯ ಸಿಬ್ಬಂದಿ ಸಂಘಗಳು ಮಾರ್ಚ್ 11ರಿಂದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿ ಸಿರುವ ಹಿನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಗಳ ಲಭ್ಯತೆ ಕುರಿತು…

The post ಮಾ.11ರಿಂದ ವೈದ್ಯಕೀಯ ಸಿಬ್ಬಂದಿ ಸಂಘಗಳ ಮುಷ್ಕರ appeared first on Good News 24x7.

]]>

ಆರೋಗ್ಯ ಸೇವೆ ವ್ಯತ್ಯಯವಾದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ರಾಜ್ಯ ಸರ್ಕಾರ,
ಸರ್ಕಾರಿ ವೈದ್ಯಕೀಯ ಸಿಬ್ಬಂದಿ ಸಂಘಗಳು ಮಾರ್ಚ್ 11ರಿಂದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿ ಸಿರುವ ಹಿನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಗಳ ಲಭ್ಯತೆ ಕುರಿತು ಜನಸಾಮಾನ್ಯ ರಲ್ಲಿ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರ್ತವ್ಯಕ್ಕೆ ಗೈರಾಗು ವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಆಯ್ಕೆಗಳನ್ನು ಸರ್ಕಾರ ಪರಿಶೀಲಿಸು ತ್ತಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಹುಕಾಲದಿಂದ ಬಾಕಿ ಇರುವ ಸೇವಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿವಿಧ ವೈದ್ಯಕೀಯ ಸಿಬ್ಬಂದಿ ಸಂಘಗಳು ಹಂತ ಹಂತವಾಗಿ ಸೇವೆ ಸ್ಥಗಿತಗೊಳಿ ಸುವುದಾಗಿ ಘೋಷಿಸಿವೆ. ಎರಡೂವರೆ ವರ್ಷಕ್ಕೂ ಹೆಚ್ಚು ಕಾಲ ಕಾಯುತ್ತಿ ದ್ದೇವೆ. ಪದೋನ್ನತಿ, ಕೇಡರ್ ನಿಯಮ ಗಳು, ಹಿರಿಯ ಹುದ್ದೆಗಳ ಭರ್ತಿ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂ ಡಿಲ್ಲ ಎಂದು ಕರ್ನಾಟಕ ಸರ್ಕಾರ ವೈದ್ಯ ಕೀಯ ಸಂಘದ ಅಧ್ಯಕ್ಷ ಡಾ.ರವೀಂದ್ರ ನಾಥ್ ಎಂ.ಮೇಟಿ ತಿಳಿಸಿದ್ದಾರೆ.
ಹೊರರೋಗಿ ವಿಭಾಗ ಸೇವೆಗಳು ಸ್ಥಗಿತಗೊಳ್ಳಲಿವೆ: ತುರ್ತು ಚಿಕಿತ್ಸೆ ಮಾತ್ರ ಮುಂದುವರಿ ಯಲಿದೆ. ಮಾರ್ಚ್ 16ರಿಂದ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ತುರ್ತು ಸೇವೆಗಳನ್ನು ಒಳ ಗೊಂಡಂತೆ ಸಂಪೂರ್ಣ ಕರ್ತವ್ಯ ಬಹಿಷ್ಕಾರ ಮಾಡ ಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. ಸುಮಾರು 65 ಸಾವಿರ ದಿಂದ 80 ಸಾವಿರ ಸಿಬ್ಬಂದಿ, ಅದರಲ್ಲೂ ರಾಷ್ಟ್ರೀಯ ಆರೋಗ್ಯ ಮಿಷನ್ ಸಿಬ್ಬಂದಿ ಸೇರಿದಂತೆ, ಹಲವರು ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಸರ್ಕಾರ ನಮ್ಮೆಲ್ಲರ ಮೇಲೂ ಕ್ರಮ ಕೈಗೊಳ್ಳಲಿ, ನಾವು ನಮ್ಮ ನಿರ್ಧಾರದಿಂದ ಹಿಂದೆ ಸರಿಯುವು ದಿಲ್ಲ ಎಂದು ಮೇಟಿ ಹೇಳಿದರು. ದೀರ್ಘ ಕಾಲದಿಂದ ಖಾಲಿ ಇರುವ ಹುದ್ದೆಗಳ ಕಾರಣ ಹಿರಿಯ ವೈದ್ಯರು ಪದೋನ್ನತಿ ಇಲ್ಲದೇ ನಿವೃತ್ತಿಯಾ ಗುತ್ತಿದ್ದಾರೆ ಎಂದು ಹೇಳಿದರು.
ರೋಗಿಗಳಿಗೆ ಉಂಟಾಗುವ ತೊಂದರೆ ಗಳಿಗಾಗಿ ಸಂಘ ಕ್ಷಮೆಯಾಚಿಸಿದ್ದರೂ, ಜವಾಬ್ದಾರಿ ಸರ್ಕಾರದದ್ದೇ ಎಂದು ಹೇಳಿದೆ.

The post ಮಾ.11ರಿಂದ ವೈದ್ಯಕೀಯ ಸಿಬ್ಬಂದಿ ಸಂಘಗಳ ಮುಷ್ಕರ appeared first on Good News 24x7.

]]>
ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ! https://www.goodnews24x7.com/bride-in-accident-groom-tied-the-knot-in-icu/ Sat, 22 Nov 2025 11:47:39 +0000 https://www.goodnews24x7.com/?p=8242 ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ…

The post ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ! appeared first on Good News 24x7.

]]>

ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.

ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ ನಿವಾಸಿ ಶರೋನ್ ವಿವಾಹ ಶುಕ್ರವಾರ ನಿಗದಿಯಾಗಿತ್ತು. ಈ ಹಿನ್ನೆಲೆ ವಧು ಅವನಿ ಮೇಕಪ್ ಮಾಡಿಸಿಕೊಳ್ಳಲೆಂದು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವನಿಯ ಬೆನ್ನುಮೂಳೆಗೆ ತೀವ್ರ ಗಾಯವಾಗಿ ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

https://www.facebook.com/reel/3798106020489452

ಆಸ್ಪತ್ರೆಗೆ ಬಂದ ಶರೋನ್ ಹಾಗೂ ಅವನಿ ಕುಟುಂಬಸ್ಥರು ಪೂರ್ವ ನಿಗದಿಯಾಗಿದ್ದಂತೆ ಶುಕ್ರವಾರ ಮಧ್ಯಾಹ್ನ 12:15 ರಿಂದ 12:30ರ ನಡುವೆ ಮದುವೆ ನೆರವೇರಿಸಲು ಅವಕಾಶ ಕಲ್ಪಿಸುವಂತೆ ಆಸ್ಪತ್ರೆಯವರಲ್ಲಿ ಮನವಿ ಮಾಡಿದ್ದರು. ಅದರಂತೆ ಆಸ್ಪತ್ರೆಯ ಐಸಿಯುನಲ್ಲೇ ಶರೋನ್ ಅವನಿ ಕುತ್ತಿಗೆಗೆ ತಾಳಿ ಕಟ್ಟಿದ್ದಾರೆ. ಕುಟುಂಬ ಸದಸ್ಯರು ಈ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಇದನ್ನೂ ಓದಿ: ಹಾಸ್ಟೆಲ್‌ನ 4ನೇ ಮಹಡಿಯಿಂದ ಜಿಗಿದು ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಆಸ್ಪತ್ರೆಯಲ್ಲಿಯೇ ಸಮಾರಂಭ ನಡೆಸಬೇಕೆಂದು ವರನ ಕುಟುಂಬ ಮನವಿ ಮೇರೆಗೆ ಇಲ್ಲಿಯೇ ಮದುವೆ ನಡೆಸಿದ್ದೇವೆ ಎಂದು ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. ಇಂದು (ಶನಿವಾರ) ಅವನಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ನರಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸುಧೀಶ್ ಕರುಣಾಕರನ್ ತಿಳಿಸಿದ್ದಾರೆ.

The post ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ! appeared first on Good News 24x7.

]]>
ಕೋವಿಡ್ ಉಪತಳಿ ಅಪಾಯಕಾರಿಯಲ್ಲ : ದಿನೇಶ್ ಗುಂಡೂರಾವ್. https://www.goodnews24x7.com/covid-subtype-not-dangerous-dinesh-gundu-rao/ Mon, 26 May 2025 06:42:29 +0000 https://www.goodnews24x7.com/?p=4081 ಬೆಂಗಳೂರು: ಸದ್ಯ ಹರಡುತ್ತಿರುವ ಕೋವಿಡ್ ಉಪತಳಿಯು ಅಷ್ಟೇನು ಅಪಾಯಕಾರಿಯಲ್ಲ. ಸರ್ಕಾರವು ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಜೆ-1 ಉಪತಳಿ ಹೆಚ್ಚಿನ ದುಷ್ಪರಿಣಾಮ ಬೀರಿದ ವರದಿ ಆಗಿಲ್ಲ.…

The post ಕೋವಿಡ್ ಉಪತಳಿ ಅಪಾಯಕಾರಿಯಲ್ಲ : ದಿನೇಶ್ ಗುಂಡೂರಾವ್. appeared first on Good News 24x7.

]]>

ಬೆಂಗಳೂರು: ಸದ್ಯ ಹರಡುತ್ತಿರುವ ಕೋವಿಡ್ ಉಪತಳಿಯು ಅಷ್ಟೇನು ಅಪಾಯಕಾರಿಯಲ್ಲ. ಸರ್ಕಾರವು ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಜೆ-1 ಉಪತಳಿ ಹೆಚ್ಚಿನ ದುಷ್ಪರಿಣಾಮ ಬೀರಿದ ವರದಿ ಆಗಿಲ್ಲ. ಯಾರಿಗೂ ಗಂಭೀರ ಸ್ವರೂಪದ ರೋಗ ಲಕ್ಷಣ ಕಂಡುಬಂದಿಲ್ಲ. ಮುಂದಿನ ಮೂರು, ನಾಲ್ಕು ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆತಂಕದ ವಾತಾವರಣ ಇಲ್ಲ, ಮೊದಲ ಮತ್ತು ಎರಡನೇ ಹಂತದ ಕೋವಿಡ್ ಪರಿಸ್ಥಿತಿ ಈಗಿಲ್ಲ ಎಂದು ಹೇಳಿದ್ದಾರೆ.

 

ಲಭ್ಯವಿರುವ ಟೆಸ್ಟಿಂಗ್ ಕಿಟ್ಸ್ಗಳು:


RAT = 2500
RNA extraction kits =130000
VTM= 200000
RTPCR kits = 5000 Procuring

#Bengaluru #Covid #DineshGunduRao #Health #Minister #HealthMinister #government #dangerous #Covid19 #pregnantwomen #pregnant #women #hospitals #Bengaluru #karnataka #mysore #goodnewskannada #symptoms #serious

ಶಾಲಾ, ಕಾಲೇಜುಗಳು ಆರಂಭವಾಗುತ್ತಿದ್ದು, ಯಾವ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದನ್ನು ಪರಿಶೀಲಿಸಿ ತೀರ್ಮಾನಿಸುತ್ತೇವೆ. ಸದ್ಯ ಆತಂಕಪಡುವ ಅಗತ್ಯವಿಲ್ಲ. ಕೋವಿಡ್ ಟೆಸ್ಟಿಂಗ್ಗೆ ಸೂಚನೆ ನೀಡಲಾಗಿದೆ. ಟೆಸ್ಟಿಂಗ್ ಕಿಟ್ಗಳು ಎರಡು ದಿನದೊಳಗೆ ಪೂರೈಕೆಯಾಗಲಿದೆ. ಸಾರಿ, ಐಎಲ್ಐ ಪ್ರಕರಣಗಳು, ವಯೋವೃದ್ಧರು, ಗರ್ಭಿಣಿಯರಿಗೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಟೆಸ್ಟ್ ಮಾಡಲು ಸೂಚಿಸಲಾಗಿದೆ ಎಂದಿದ್ದಾರೆ.


ಸೋಂಕಿನಿಂದ ನಿನ್ನೆ ಒಬ್ಬರು ಮೃತಪಟ್ಟಿರುವುದು ದೃಢವಾಗಿದೆ. ಅವರಿಗೆ 84 ವರ್ಷ ಆಗಿತ್ತು. ಒಂದು ವರ್ಷದಿಂದ ಅವರು ಅನಾರೋಗ್ಯ ಪೀಡಿತರಾಗಿದ್ದರು. ನಾನಾ ಆರೋಗ್ಯ ಸಮಸ್ಯೆ ಇತ್ತು. ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆಯೇ ಎಂಬ ಬಗ್ಗೆ ಆಡಿಟ್ ನಡೆಸಲು ತಿಳಿಸಲಾಗಿದೆ ಎಂದರು.ಅಗತ್ಯ ಟೆಸ್ಟಿಂಗ್ ಕಿಟ್ ಲಭ್ಯವಿದೆ: ರಾಜ್ಯದಲ್ಲಿ ಅಗತ್ಯ ಕೋವಿಡ್-19 ಟೆಸ್ಟಿಂಗ್ ಕಿಟ್ಗಳ ಲಭ್ಯತೆಯಿದೆ. SARI ಪ್ರಕರಣಗಳಲ್ಲಿ ಇಂದಿನಿಂದ ಟೆಸ್ಟಿಂಗ್ ನಡೆಸಲು ಸೂಚಿಸಲಾಗಿದೆ. ಸದ್ಯಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದರಿಂದ VRDL ಟೆಸ್ಟಿಂಗ್ ಸೌಲಭ್ಯ ಇರುವ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.


ಬೆಂಗಳೂರಿನಲ್ಲಿ ನಿಮ್ಹಾನ್ಸ್ ಆಸ್ಪತ್ರೆ, ಬೆಂಗಳೂರು ಮೆಡಿಕಲ್ ಕಾಲೇಜು, NIV ಕೇಂದ್ರ ಸೇರಿದಂತೆ ರಾಜ್ಯದ 10 ಕಡೆಗಳಲ್ಲಿ ಟೆಸ್ಟಿಂಗ್ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಂದು ತಿಂಗಳಿಗಾಗುವಷ್ಟು 5 ಸಾವಿರ RTPCR ಟೆಸ್ಟಿಂಗ್ ಕಿಟ್ಗಳನ್ನು ಖರೀದಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ, ಸೂಕ್ತ ಆರೋಗ್ಯ ಸೇವೆ ಒದಗಿಸಲು ಸನ್ನದ್ಧವಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

The post ಕೋವಿಡ್ ಉಪತಳಿ ಅಪಾಯಕಾರಿಯಲ್ಲ : ದಿನೇಶ್ ಗುಂಡೂರಾವ್. appeared first on Good News 24x7.

]]>
ಹೈದರಾಬಾದ್ ಚಾರ್ಮಿನಾರ್ ಬಳಿ ಅಗ್ನಿ ಅವಘಡ, 17ಮಂದಿ ಸ*ಜೀವ ದಹನ. https://www.goodnews24x7.com/hyderabad-fire-near-charminar-17-people-burnt-alive/ Sun, 18 May 2025 07:46:50 +0000 https://www.goodnews24x7.com/?p=3951 ಹೈದರಾಬಾದ್ : ಚಾರ್ಮಿನಾರ್ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರಜೆಗೆ ಬಂದಿದ್ದ ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸುಟ್ಟು ಕರಕಲಾಗಿದ್ದಾರೆ. ಕೇಂದ್ರ ಸಚಿವ…

The post ಹೈದರಾಬಾದ್ ಚಾರ್ಮಿನಾರ್ ಬಳಿ ಅಗ್ನಿ ಅವಘಡ, 17ಮಂದಿ ಸ*ಜೀವ ದಹನ. appeared first on Good News 24x7.

]]>

ಹೈದರಾಬಾದ್ : ಚಾರ್ಮಿನಾರ್ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರಜೆಗೆ ಬಂದಿದ್ದ ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸುಟ್ಟು ಕರಕಲಾಗಿದ್ದಾರೆ. ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಜಿ. ಕಿಶನ್ ರೆಡ್ಡಿ ಮತ್ತು ತೆಲಂಗಾಣ ಸಚಿವ ಪೊನ್ನಂ ಪ್ರಭಾಕರ್ ಗುಲ್ಜಾರ್ ಹೌಸ್ ಭೇಟಿ ನೀಡಿದ್ದಾರೆ. ಆ ಪ್ರದೇಶದ ಮಾಜಿ ಶಾಸಕ ಮತ್ತು ಎಐಎಂಐಎಂ ನಾಯಕಿ ಮುಮ್ತಾಜ್ ಅಹ್ಮದ್ ಖಾನ್ ಕೂಡ ಸ್ಥಳದಲ್ಲಿದ್ದರು.
ತೆಲಂಗಾಣದ ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭಾನುವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ದುಃಖ ವ್ಯಕ್ತಪಡಿಸಿದ್ದಾರೆ. ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


ಮೋದಿ ಸಂತಾಪ, ಪರಿಹಾರ ಘೋಷಣೆ
ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಹೈದರಾಬಾದ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಜೀವ ಮತ್ತು ಆಸ್ತಿಪಾಸ್ತಿ ನಷ್ಟವಾಗಿದ್ದರಿಂದ ಪ್ರಧಾನಿ ಮೋದಿ ತೀವ್ರ ದುಃಖಿತರಾಗಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಮೃತರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.


ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ ಕಿಶನ್ ರೆಡ್ಡಿ ಮಾತನಾಡಿ, ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿರುವ ಕಟ್ಟಡದಲ್ಲಿ ಇಂದು ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಅಪಘಾತದಲ್ಲಿ ಕೆಲವರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ. ಈ ಘಟನೆ ಬೆಳಿಗ್ಗೆ 6 ಗಂಟೆ ಸುಮಾರಿಗೆ ಸಂಭವಿಸಿದೆ. ಇಂತಹ ಘಟನೆಗಳು ತುಂಬಾ ದುಃಖಕರ ಎಂದಿದ್ದಾರೆ.


ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗಳಿಗೆ ಕಳುಹಿಸಲಾಗಿದ್ದು, ರಾಜ್ಯ ಸರ್ಕಾರ ಶೀಘ್ರದಲ್ಲೇ ಸಂಪೂರ್ಣ ವಿವರಗಳನ್ನು ಹಂಚಿಕೊಳ್ಳಲಿದೆ ಎಂದು ತೆಲಂಗಾಣ ಸಚಿವ ಪೊನ್ನಂ ಪ್ರಭಾಕರ್ ಹೇಳಿದ್ದಾರೆ.

The post ಹೈದರಾಬಾದ್ ಚಾರ್ಮಿನಾರ್ ಬಳಿ ಅಗ್ನಿ ಅವಘಡ, 17ಮಂದಿ ಸ*ಜೀವ ದಹನ. appeared first on Good News 24x7.

]]>