Hunsur Archives - Good News 24x7 https://www.goodnews24x7.com/tag/hunsur/ Kannada Mon, 04 Aug 2025 05:31:36 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Hunsur Archives - Good News 24x7 https://www.goodnews24x7.com/tag/hunsur/ 32 32 ಇಂದು ಮಧ್ಯಾಹ್ನ ಸಲ್ಲುವ ಶುಭ ಲಗ್ನದಲ್ಲಿ ಪೂಜೆ ಸಲ್ಲಿಸಿ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ. https://www.goodnews24x7.com/gajapayana-to-be-formally-inaugurated-by-offering-puja-at-the-auspicious-ascendant-this-afternoon/ Mon, 04 Aug 2025 05:30:15 +0000 https://www.goodnews24x7.com/?p=5291 ಮೈಸೂರು : – ದಸರಾ ಮಹೋತ್ಸವ ಪ್ರಮುಖ ಆಕರ್ಷಣೆ ಆಂಬಾರಿ ಆನೆ ಅಭಿಮನ್ಯು ನೇತೃತ್ವದಲ್ಲಿ ತಂಡದಲ್ಲಿ 9 ಆನೆಗಳಿಗೆ ಇಂದು ಮಧ್ಯಾಹ್ನ 12.34ರಿಂದ 12.59 ರವರೆಗೆ ಸಲ್ಲುವ ಶುಭ. ತುಲಾ (ಅಭಿಜಿನ್) ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ…

The post ಇಂದು ಮಧ್ಯಾಹ್ನ ಸಲ್ಲುವ ಶುಭ ಲಗ್ನದಲ್ಲಿ ಪೂಜೆ ಸಲ್ಲಿಸಿ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ. appeared first on Good News 24x7.

]]>

ಮೈಸೂರು : – ದಸರಾ ಮಹೋತ್ಸವ ಪ್ರಮುಖ ಆಕರ್ಷಣೆ ಆಂಬಾರಿ ಆನೆ ಅಭಿಮನ್ಯು ನೇತೃತ್ವದಲ್ಲಿ ತಂಡದಲ್ಲಿ 9 ಆನೆಗಳಿಗೆ ಇಂದು ಮಧ್ಯಾಹ್ನ 12.34ರಿಂದ 12.59 ರವರೆಗೆ ಸಲ್ಲುವ ಶುಭ. ತುಲಾ (ಅಭಿಜಿನ್) ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ ದೊರೆಯಲಿದೆ.
ಪ್ರಸಕ್ತ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಈ ಬಾರಿ ಅಂಬಾರಿ ಆನೆ ಅಭಿಮನ್ಯು ನೇತೃತ್ವದಲ್ಲಿ 14 ಆನೆಗಳನ್ನು ಆಯ್ಕೆ ಮಾಡಲು ಅರಣ್ಯ ಇಲಾಖೆ ನಿರ್ಧರಿ, ಸಿದ್ದು, ಈಗಾಗಲೇ ಮೊದಲ ಮತ್ತು ಎರ ಡನೇ ತಂಡದ ಆನೆಗಳ ಪಟ್ಟಿ ಸಿದ್ಧಪಡಿಸಿದೆ. ಜಂಬೂಸವಾರಿಗೂ 55 ದಿನ ಮುನ್ನವೇ ಮೊದಲ ತಂಡದ ಆನೆಗಳಿಗೆ ತಾಲೀಮು ಆರಂಭಿಸಿ, ವಿಶೇಷ ಆರೈಕೆ ಮಾಡಬೇಕಾದ ಹಿನ್ನೆಲೆಯಲ್ಲಿ ಅಂಬಾರಿ ಆನೆ, ಪರ್ಯಾಯ’ ಅಂಬಾರಿ ಆನೆ ಹಾಗೂ ಕುಮ್ಮಿ ಆನೆ ಜವಾಬ್ದಾರಿ ನಿಭಾಯಿಸುವ ಆನೆಗಳನ್ನು ಮೊದಲ ತಂಡದಲ್ಲಿ ಕರೆತರುವ ವಾಡಿಕೆ ಯಿದ್ದು, ಅದರಂತೆ ಇಂದು ಮಧ್ಯಾಹ್ನ ವಿವಿಧ ಕ್ಯಾಂಪ್ಗಳ 9 ಆನೆಗಳು ಸಾಂಸ್ಕೃತಿಕ ನಗರಿ ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ.

ಗಜಪಯಣ: ಹುಣಸೂರು ತಾಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನಹೊಸಳ್ಳಿ ಗೇಟ್ ಬಳಿ ನಾಳೆ ಮಧ್ಯಾಹ್ನ 9 ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸ ಲಾಗುತ್ತದೆ. ಈಗಾಗಲೇ ವೀರನಹೊಸಳ್ಳಿ ಗೇಟ್ನಲ್ಲಿ ಗಜಪಯಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮತ್ತಿಗೋಡು, ಬಳ್ಳೆ, ದುಬಾರೆ ಕ್ಯಾಂಪ್ಗಳಿಂದ ಮೊದಲ ತಂಡದ 9 ಆನೆಗಳು ಭಾನುವಾರ ಸಂಜೆ ವೇಳೆಗೆ ವೀರನ ಹೊಸಳ್ಳಿ ಗೇಟ್ ಬಳಿ ಸುರಕ್ಷಿತವಾಗಿ ಬಂದಿವೆ.

https://youtu.be/PcQMR0MEW7c?si=5hHOn5m1LJ-lrFhiಟ್ರೇಡಿಂಗ್ ಹೆಸರಲ್ಲಿ ರಾಜಕುಮಾರನನ್ನು ಬಲೆಗೆ ಕೆಡವಿದ ಸುಂದರಿ… ಸುಂದರಿ‌ ನಂಬಿ ಹಣ ಕೊಟ್ಟ ಉದ್ಯಮಿಗಳಿಗೆ ಪಂಗನಾಮ

ಮಧ್ಯಾಹ್ನ 12 ಗಂಟೆಗೆ ಅರ್ಚಕ ಎಸ್.ವಿ. ಪ್ರಹ್ಲಾದರಾವ್ ಅವರು ದ್ವಾರ ಪೂಜೆ ಮಾಡಿ, ಎಲ್ಲಾ ಆನೆಗಳ ಪಾದ ತೊಳೆದು ಅರಿಶಿನ, ಕ್ಯಾಪ್ಟನ್ ಅಭಿಮನ್ಯು ಸೇರಿ ಮೊದಲ ತಂಡದ 9 ಆನೆಗಳು ಮೈಸೂರಿಗೆ ಪಯಣ 7 ಗಂಡಾನೆ, 2 ಹೆಣ್ಣಾನೆ ಆಗಮನ ರಿಂದ 12.59 ರವರೆಗೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಪೂಜೆ ಕುಂಕುಮ, ಶ್ರೀಗಂಧ ಹಚ್ಚಿ, ಸೊಂಡಿಲ ಮೇಲೆ ಓಂಕಾರ ಬರೆದ ನಂತರ ಅಡವಿದೇವಿ ಪೂಜೆ, ಚಾಮುಂಡಿಪೂಜೆ, ಗಣಪತಿ ಪೂಜೆ ನೆರವೇರಿಸಲಿದ್ದಾರೆ. ನಂತರ ಮಧ್ಯಾಹ್ನ 12.34ರಿಂದ 12.59ರವರೆಗೆ ಸಲ್ಲುವ ಶುಭತುಲಾ(ಅಭಿಜಿನ್) ಲಗ್ನದಲ್ಲಿ ಜಿಲ್ಲಾ ಉಸ್ತು ವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಆನೆಗಳಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡ ಲಿದ್ದಾರೆ. ಬಳಿಕ ಆನೆಗಳಿಗೆ ಪಂಚಫಲ, ಕಬ್ಬು, ಬೆಲ್ಲ ಸೇರಿದಂತೆ ವಿವಿಧ ತಿನಿಸು ನೀಡಿದ ನಂತರ ದೃಷ್ಟಿ ತೆಗೆಯಲಾಗುತ್ತದೆ. ನಂತರ ವಿವಿಧ ಜಾನಪದ ಕಲಾತಂಡಗಳೊಂದಿಗೆ ಮೊದಲ ತಂಡದ ಆನೆಗಳನ್ನು ವೀರನಹೊಸಳ್ಳಿ ಗೇಟ್ನಿಂದ 1.5 ಕಿ.ಮೀ ದೂರದ ನಾಗಾಪುರ ಹಾಡಿ ಸಮೀಪದ ಮೈದಾನದಲ್ಲಿ ನಡೆಯುವ ವೇದಿಕೆ” ಕಾರ್ಯಕ್ರಮದವರೆಗೂ ಮೆರವಣಿಗೆ ಯಲ್ಲಿ ಕರೆತರಲಾಗುತ್ತದೆ.

ವೇದಿಕೆ ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ ದಸರಾ ಆನೆಗಳ ಪಟ್ಟಿ ಹಾಗೂ ಕಿರು ಹೊತ್ತಿಗೆ ಬಿಡುಗಡೆ ಮಾಡಲಿದ್ದಾರೆ. ಶಾಸಕ ಜಿ.ಡಿ.ಹರೀಶ್ ಗೌಡ ಅಧ್ಯಕ್ಷತೆ ವಹಿಸುವ ಕಾರ್ಯಕ್ರಮ ದಲ್ಲಿ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಶಾಸಕ ರಾದ ಜಿ.ಟಿ.ದೇವೇಗೌಡ, ತಸ್ವೀರ್ಸೇರ್, ಡಿ.ರವಿಶಂಕರ್, ಟಿ.ಎಸ್.ಶ್ರೀವತ್ಸ, ಕೆ.ಹರೀಶ್ ಗೌಡ, ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ಕಮಾದು, ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಸುನೀಲ್ ಭೋಸ್, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ವಿವೇಕಾನಂದ ಸೇರಿದಂತೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ.

ಐದು ಸಾವಿರ ಜನರಿಗೆ ಊಟ: ನಾಗರಹೊಳೆ ಅಭಯಾರಣ್ಯದ ವೀರನ ಹೊಸಳ್ಳಿ ಗೇಟ್ ಬಳಿ ಚಾಲನೆ ದೊರೆತ ಬಳಿಕ ನಾಗಾಪುರ ಹಾಡಿ ಸಮೀಪ ನಡೆಯುವ ಸಭಾ ಕಾರ್ಯಕ್ರಮ ವೀರನಹೊಸಳ್ಳಿ, ನಾಗಾಪುರ ಹಾಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಆಗಮಿಸುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ 5 ಸಾವಿರ ಜನರಿಗೆ ಊಟ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ವೇದಿಕೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲಿಸ ಲಾಗಿದ್ದು, ವೀರನಹೊಸಳ್ಳಿ ಗೇಟ್ನಿಂದ ಸಭಾ ಕಾರ್ಯಕ್ರಮ ನಡೆಯುವ ಸ್ಥಳದವರೆಗೂ ರಸ್ತೆಯಲ್ಲಿ ತಳಿರು ತೋರಣದಿಂದ ಶೃಂಗರಿಸಲಾಗಿದೆ. ಸಭಾ ಕಾರ್ಯಕ್ರಮದಲ್ಲಿ ಆದಿವಾಸಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಟಿಬೆಟಿಯನ್ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಕ್ರಮ ಕೈಗೊಳ್ಳಲಾಗಿದೆ.

ಮೊದಲ ತಂಡದ ಆನೆಗಳಿವು ಗಜಪಡೆ ನಾಯಕ ಅಭಿಮನ್ಯು(59) ವಿನೊಂದಿಗೆ ಮತ್ತಿಗೋಡು ಶಿಬಿರದ ಭೀಮ (25), ದುಬಾರೆ ಶಿಬಿರದ ಕಂಜನ್ (24), ಧನಂಜಯ (44) ಮತ್ತು ಪ್ರಶಾಂತ್ (53), ಬಳ್ಳೆ ಶಿಬಿರದ ಮಹೇಂದ್ರ (42), ದೊಡ್ಡಹರವೆ ಶಿಬಿರದ ಏಕಲವ್ಯ (40) ಸೇರಿದಂತೆ 7 ಗಂಡಾನೆ ಹಾಗೂ ದುಬಾರೆ ಶಿಬಿರದ ಕಾವೇರಿ (45) ಹಾಗೂ ಬಳ್ಳೆಯ (ದೊಡ್ಡಹರವೆ) ಲಕ್ಷ್ಮೀ(53) ಹೆಣ್ಣಾನೆಗಳು ಮೊದಲ ತಂಡದಲ್ಲಿ ಮೈಸೂರಿಗೆ ಆಗಮಿಸಲಿವೆ.

The post ಇಂದು ಮಧ್ಯಾಹ್ನ ಸಲ್ಲುವ ಶುಭ ಲಗ್ನದಲ್ಲಿ ಪೂಜೆ ಸಲ್ಲಿಸಿ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ. appeared first on Good News 24x7.

]]>
ಸರ್ಕಾರಿ ವಾಹನದಲ್ಲಿ ಮಧ್ಯ ಬಾಟಲಿಗಳು ಪತ್ತೆ, ಪ್ರಕರಣ ದಾಖಲಿಸಿಕೊಂಡ ಹುಣಸೂರು ಪೊಲೀಸರು. https://www.goodnews24x7.com/hunsur-police-register-case-after-finding-liquor-bottles-in-government-vehicle/ Sun, 13 Jul 2025 05:56:42 +0000 https://www.goodnews24x7.com/?p=5057 ಮೈಸೂರು : ಸಣ್ಣ ನೀರಾವರಿ ಇಲಾಖೆಗೆ ಸೇರಿದ ವಾಹನದಲ್ಲಿ ಮಧ್ಯದ ಬಾಟಲಿಗಳು ಪತ್ತೆಯಾಗಿರುವ ಘಟನೆ ಹುಣಸೂರಿನ ಬಸ್ ಸ್ಟ್ಯಾಂಡ್ ಬಳಿ ಘಟನೆ. ಸರ್ಕಾರಿ ವಾಹನದಲ್ಲಿ ಮಧ್ಯ ಬಾಟಲಿಗಳು ಪತ್ತೆಯಾಗಿವೆ, ವಾಹನದಲ್ಲಿ ಸರ್ಕಾರಿ ಕಡತಗಳು ಖಾಸಗಿ ವ್ಯಕ್ತಿ ಚಾಲಕನಾಗಿರುವುದು ತಿಳಿದು ಬಂದಿದೆ. ಸಣ್ಣ…

The post ಸರ್ಕಾರಿ ವಾಹನದಲ್ಲಿ ಮಧ್ಯ ಬಾಟಲಿಗಳು ಪತ್ತೆ, ಪ್ರಕರಣ ದಾಖಲಿಸಿಕೊಂಡ ಹುಣಸೂರು ಪೊಲೀಸರು. appeared first on Good News 24x7.

]]>

ಮೈಸೂರು : ಸಣ್ಣ ನೀರಾವರಿ ಇಲಾಖೆಗೆ ಸೇರಿದ ವಾಹನದಲ್ಲಿ ಮಧ್ಯದ ಬಾಟಲಿಗಳು ಪತ್ತೆಯಾಗಿರುವ ಘಟನೆ ಹುಣಸೂರಿನ ಬಸ್ ಸ್ಟ್ಯಾಂಡ್ ಬಳಿ ಘಟನೆ.

ಸರ್ಕಾರಿ ವಾಹನದಲ್ಲಿ ಮಧ್ಯ ಬಾಟಲಿಗಳು ಪತ್ತೆಯಾಗಿವೆ, ವಾಹನದಲ್ಲಿ ಸರ್ಕಾರಿ ಕಡತಗಳು ಖಾಸಗಿ ವ್ಯಕ್ತಿ ಚಾಲಕನಾಗಿರುವುದು ತಿಳಿದು ಬಂದಿದೆ.
ಸಣ್ಣ ನೀರಾವರಿ ಇಲಾಖೆಗೆ ಸೇರಿದ ವಾಹನದಲ್ಲಿ ಸ್ಥಳೀಯರ ಕೈಗೆ ರೆಡ್ ಹ್ಯಾಂಡಾಗಿ ಮಧ್ಯದ ಬಾಟಲಿಗಳು ಪತ್ತೆಯಾಗಿವೆ. ಹುಣಸೂರಿನ ಬಸ್ ಸ್ಟ್ಯಾಂಡ್ ಬಳಿ ಘಟನೆ ನಡೆದಿದೆ.

ಟೌನ್ ಪೊಲೀಸರಿಗೆ ಕೆಆರ್ಎಸ್ ಪಕ್ಷದ ಕಾರ್ಯಕರ್ತರಿಂದ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಸ್ಥಳಕ್ಕಾಆಗಮಿಸಿ ವಾಹನ ಪರಿಶೀಲಿಸಿದಾಗ ವಾಹನದಲ್ಲಿ ಮೂರು ಮಧ್ಯದ ಬಾಟಲ್, ಸರ್ಕಾರಕ್ಕೆ ಸೇರಿದ ಕಡತಗಳು ಪತ್ತೆ.


ಯಾವುದೇ ಅಧಿಕೃತ ಅಧಿಕಾರಿ ಇಲ್ಲದೆ ಸರ್ಕಾರಿ ವಾಹನದಲ್ಲಿ ಕಡತಗಳು, ಮಧ್ಯದ ಬಾಟಲಿಗಳು. ಅಲ್ಲದೆ ಸರ್ಕಾರಿ ವಾಹನಕ್ಕೆ ಖಾಸಗಿ ವ್ಯಕ್ತಿ ಚಾಲಕ.
ವಾಹನವನ್ನ ಸೀಜ್ ಮಾಡಿ ಹುಣಸೂರು ಟೌನ್ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ

The post ಸರ್ಕಾರಿ ವಾಹನದಲ್ಲಿ ಮಧ್ಯ ಬಾಟಲಿಗಳು ಪತ್ತೆ, ಪ್ರಕರಣ ದಾಖಲಿಸಿಕೊಂಡ ಹುಣಸೂರು ಪೊಲೀಸರು. appeared first on Good News 24x7.

]]>
ಜೆಡಿಎಸ್ ವಿರುದ್ದ ಅಸಮಾಧಾನಗೊಂಡು ಪಕ್ಷದಿಂದ ದೂರ; ಮೌನ ಮುರಿದ ಜಿಟಿಡಿ ಪುತ್ರ… https://www.goodnews24x7.com/dissatisfied-with-jds-away-from-party-gtd-son-breaks-silence/ Mon, 07 Jul 2025 08:53:31 +0000 https://www.goodnews24x7.com/?p=4944 ಮೈಸೂರು : ಶಾಸಕ ಜಿಟಿ ದೇವೇಗೌಡ ಜೆಡಿಎಸ್ ವಿರುದ್ದ ಅಸಮಾಧಾನಗೊಂಡು ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಜಿ.ಡಿ ಹರೀಶ್ ಗೌಡ, ನಮ್ಮ…

The post ಜೆಡಿಎಸ್ ವಿರುದ್ದ ಅಸಮಾಧಾನಗೊಂಡು ಪಕ್ಷದಿಂದ ದೂರ; ಮೌನ ಮುರಿದ ಜಿಟಿಡಿ ಪುತ್ರ… appeared first on Good News 24x7.

]]>

ಮೈಸೂರು : ಶಾಸಕ ಜಿಟಿ ದೇವೇಗೌಡ ಜೆಡಿಎಸ್ ವಿರುದ್ದ ಅಸಮಾಧಾನಗೊಂಡು ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಜಿ.ಡಿ ಹರೀಶ್ ಗೌಡ, ನಮ್ಮ ತಂದೆಗೆ ಪಕ್ಷದ ವಿಚಾರದಲ್ಲಿ ಬೇಸರ ಇರುವುದು ಸತ್ಯ. ಅವರು ಅಸಮಾಧಾನದಿಂದಲೇ ಜೆಡಿಎಸ್ ನಿಂದ ದೂರ ಉಳಿದಿದ್ದಾರೆ. ಜಿಟಿ ದೇವೇಗೌಡರನ್ನ ಮನವೊಲಿಸುವ ಪ್ರಯತ್ನ ಪಕ್ಷದ ವರಿಷ್ಠರು ಮಾಡುತ್ತಾರೆ ಇದು ನನ್ನ ಮನೆಯ ವೈಯಕ್ತಿಕ ವಿಚಾರ ಅಲ್ಲ. ಹೀಗಾಗಿ ಇದರ ಬಗ್ಗೆ ನಾನು ಹೆಚ್ಚು ಮಾತನಾಡಲು ಆಗಲ್ಲ. ನಾನು ಜೆಡಿಎಸ್ ನಲ್ಲಿ ಇದ್ದೇನೆ ಜೆಡಿಎಸ್ ನಲ್ಲೇ ಇರುತ್ತೇನೆ. ನಾನು ಕಾಂಗ್ರೆಸ್ ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದರು.

ಹುಣಸೂರು ಕ್ಷೇತ್ರದ ಜನರು ನನ್ನನ್ನ ಜೆಡಿಎಸ್ ನಿಂದ ಗೆಲ್ಲಿಸಿದ್ದಾರೆ. ಜನರ ನಮ್ಮನ್ನ ಸೂಕ್ಷ್ಮವಾಗಿ ನೋಡುತ್ತಿದ್ದಾರೆ. ನನ್ನ ಕ್ಷೇತ್ರದ ಜನರ ನಂಬಿಕೆಗೆ ನಾನು ದ್ರೋಹ ಮಾಡಲ್ಲ ಕುಮಾರಸ್ವಾಮಿ ಅವರನ್ನ ಮತ್ತೊಮ್ಮೆ ಸಿಎಂ ಮಾಡುವುದು ನಮ್ಮ ಉದ್ದೇಶ ಎಂದರು.

The post ಜೆಡಿಎಸ್ ವಿರುದ್ದ ಅಸಮಾಧಾನಗೊಂಡು ಪಕ್ಷದಿಂದ ದೂರ; ಮೌನ ಮುರಿದ ಜಿಟಿಡಿ ಪುತ್ರ… appeared first on Good News 24x7.

]]>
ಅವೈಜ್ಞಾನಿಕವಾಗಿ ಚರಂಡಿ ಕಾಮಗಾರಿ, ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ ಸ್ಥಳೀಯರು. https://www.goodnews24x7.com/%e0%b2%85%e0%b2%b5%e0%b3%88%e0%b2%9c%e0%b3%8d%e0%b2%9e%e0%b2%be%e0%b2%a8%e0%b2%bf%e0%b2%95%e0%b2%b5%e0%b2%be%e0%b2%97%e0%b2%bf-%e0%b2%9a%e0%b2%b0%e0%b2%82%e0%b2%a1%e0%b2%bf-%e0%b2%95%e0%b2%be%e0%b2%ae/ Wed, 02 Apr 2025 11:09:49 +0000 https://www.goodnews24x7.com/?p=2995 ಹುಣಸೂರು :- ಅವೈಜ್ಞಾನಿಕವಾಗಿ ಚರಂಡಿ ಕಾಮಗಾರಿ ನಡೆಸಿದ ಹಿನ್ನಲೆ ಚರಂಡಿ ನೀರು ಮನೆಗಳಿಗೆ ನುಗ್ಗುತ್ತಿರುವ ಘಟನೆ ಹುಣಸೂರು ಬಡಾವಣೆ ನಿವಾಸಿಗಳನ್ನ ಹೈರಾಣುಗೊಳಿಸಿದೆ. ಕಾಮಗಾರಿ ನಡೆಸಿ ಕೈಕಟ್ಟಿ ಕುಳಿತ ಅಧಿಕಾರಿಗಳಿಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ.ಕೂಡಲೇ ಅವ್ಯವಸ್ಥೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ಪ್ರತಿಭಟನೆ ದಾರಿ ಹಿಡಿಯಬೇಕಾಗುತ್ತದೆಂದು…

The post ಅವೈಜ್ಞಾನಿಕವಾಗಿ ಚರಂಡಿ ಕಾಮಗಾರಿ, ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ ಸ್ಥಳೀಯರು. appeared first on Good News 24x7.

]]>

ಹುಣಸೂರು :- ಅವೈಜ್ಞಾನಿಕವಾಗಿ ಚರಂಡಿ ಕಾಮಗಾರಿ ನಡೆಸಿದ ಹಿನ್ನಲೆ ಚರಂಡಿ ನೀರು ಮನೆಗಳಿಗೆ ನುಗ್ಗುತ್ತಿರುವ ಘಟನೆ ಹುಣಸೂರು ಬಡಾವಣೆ ನಿವಾಸಿಗಳನ್ನ ಹೈರಾಣುಗೊಳಿಸಿದೆ. ಕಾಮಗಾರಿ ನಡೆಸಿ ಕೈಕಟ್ಟಿ ಕುಳಿತ ಅಧಿಕಾರಿಗಳಿಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ.ಕೂಡಲೇ ಅವ್ಯವಸ್ಥೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ಪ್ರತಿಭಟನೆ ದಾರಿ ಹಿಡಿಯಬೇಕಾಗುತ್ತದೆಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.ಹುಣಸೂರು ತಾಲೂಕು ಮಂಜುನಾಥ ಬಡಾವಣೆ ವಾರ್ಡ್ 28 ರಲ್ಲಿನ ನಿವಾಸಿಗಳು ಚರಂಡಿ ನೀರಿನ ಅವ್ಯವಸ್ಥೆಯಿಂದಾಗಿ ಅಧಿಕಾರಿಗಳ ವಿರುದ್ದ ಆಕ್ರೋಷ ವ್ಯಕ್ತಪಡಿಸುತ್ತಿದ್ದಾರೆ.ಇತ್ತೀಚೆಗೆ ನಡೆಸಿದ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿ ಮಾಡಿರುವ ಹಿನ್ನಲೆ ನೀರು ಸರಾಗವಾಗಿ ಹರಿದುಹೋಗದೆ ಮನೆಗಳಿಗೇ ನುಗ್ಗುತ್ತಿದೆ.ಲಕ್ಷಾಂತರ ವೆಚ್ಚ ಮಾಡಿ ಮಾಡಿದ ಕಾಮಗಾರಿ ಉಪಯೋಗಕ್ಕೆ ಬಾರದಂತಾಗಿದೆ.ಶೌಚಾಲಯ ನೀರು ಹರಿದುಹೋಗಲೆಂದು ಚರಂಡಿ ನಿರ್ಮಾಣ ಮಾಡಲಾಗಿದೆ.ಆದ್ರೆ ಚರಂಡಿಗೆ ಸೇರಿದ ನೀರು ಮುಂದೆ ಹರಿದುಹೋಗದೆ ತಟಸ್ಥವಾಗಿ ನಿಂತಿದೆ.ಅಲ್ಲದೆ ಮನೆಗೇ ವಾಪಸ್ ನುಗ್ಗುತ್ತಿದೆ.

ಇದರಿಂದಾಗಿ ಸಮಸ್ಯೆ ಮತ್ತಷ್ಟು ಉಲ್ಭಣವಾಗಿದೆ.ಈಗಾಗಲೇ ಸಮಸ್ಯಗೆ ಪರಿಹಾರ ಕಲ್ಪಿಸುವಂತೆ ಸ್ಥಳೀಯರು ಸಾಕಷ್ಟು ಬಾರಿ ದೂರು ನೀಡಿದ್ದಾರೆ.ಹೀಗಿದ್ದೂ ಕ್ಯಾರೆ ಎನ್ನದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.ಕೂಡಲೇ ಚರಂಡಿಯನ್ನ ವೈಜ್ಞಾನಿಕವಾಗಿ ನಿರ್ಮಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ಪ್ರತಿಭಟನೆ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ…

The post ಅವೈಜ್ಞಾನಿಕವಾಗಿ ಚರಂಡಿ ಕಾಮಗಾರಿ, ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ ಸ್ಥಳೀಯರು. appeared first on Good News 24x7.

]]>