investigation. Archives - Good News 24x7 https://www.goodnews24x7.com/tag/investigation/ Kannada Mon, 20 Apr 2026 10:00:51 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg investigation. Archives - Good News 24x7 https://www.goodnews24x7.com/tag/investigation/ 32 32 ಬೇಸಿಗೆ ರಜೆಯ ಸಂಭ್ರಮದ ನಡುವೆ ದು*ತ: ಅಳಿಯನನ್ನು ರಕ್ಷಿಸಲು ಹೋಗಿ ಮಾವನೂ ನೀರುಪಾಲು! https://www.goodnews24x7.com/amidst-the-celebration-of-summer-vacation-the-father-in-law-also-drowned/ Mon, 20 Apr 2026 09:56:38 +0000 https://www.goodnews24x7.com/?p=9328 ಶಾಲೆಗೆ ಬೇಸಿಗೆ ರಜೆ ಇದೆ ಎಂದು ಸಂಭ್ರಮದಿಂದ ಮಾವನ ಮನೆಗೆ ಬಂದಿದ್ದ ಬಾಲಕ ಹಾಗೂ ಆತನನ್ನು ರಕ್ಷಿಸಲು ಹೋದ ಮಾವ ಇಬ್ಬರೂ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಎನ್. ಹೊಸಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಘಟನೆಯ ವಿವರ: ಸೋಮನಹಳ್ಳಿ…

The post ಬೇಸಿಗೆ ರಜೆಯ ಸಂಭ್ರಮದ ನಡುವೆ ದು*ತ: ಅಳಿಯನನ್ನು ರಕ್ಷಿಸಲು ಹೋಗಿ ಮಾವನೂ ನೀರುಪಾಲು! appeared first on Good News 24x7.

]]>

ಶಾಲೆಗೆ ಬೇಸಿಗೆ ರಜೆ ಇದೆ ಎಂದು ಸಂಭ್ರಮದಿಂದ ಮಾವನ ಮನೆಗೆ ಬಂದಿದ್ದ ಬಾಲಕ ಹಾಗೂ ಆತನನ್ನು ರಕ್ಷಿಸಲು ಹೋದ ಮಾವ ಇಬ್ಬರೂ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಎನ್. ಹೊಸಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ಘಟನೆಯ ವಿವರ:
ಸೋಮನಹಳ್ಳಿ ಗ್ರಾಮದ ಪ್ರತೀಕ್ (12) ಮೃತಪಟ್ಟ ಬಾಲಕ. ಈತ ರಜೆ ಕಳೆಯಲೆಂದು ತನ್ನ ಮಾವ ಪ್ರಭಾಕರ್ (45) ಅವರ ಮನೆಗೆ ಬಂದಿದ್ದ. ಇಂದು ಇಬ್ಬರೂ ಗ್ರಾಮದ ಕೆರೆಯ ದಡದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಆಕಸ್ಮಿಕವಾಗಿ ಪ್ರತೀಕ್ ಕಾಲು ಜಾರಿ ಕೆರೆಗೆ ಬಿದ್ದಿದ್ದಾನೆ.

ರಕ್ಷಿಸಲು ಹೋದಾಗ ಸಂಭವಿಸಿದ ವಿಧಿಲಿಖಿತ:
ತನ್ನ ಕಣ್ಣೆದುರೇ ಅಳಿಯ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಗಾಬರಿಗೊಂಡ ಪ್ರಭಾಕರ್, ಆತನನ್ನು ಹೇಗಾದರೂ ಮಾಡಿ ಉಳಿಸಬೇಕೆಂದು ತಕ್ಷಣ ಕೆರೆಗೆ ಇಳಿದಿದ್ದಾರೆ. ಆದರೆ, ಪ್ರಭಾಕರ್ ಅವರಿಗೆ ಈಜು ಬರುತ್ತಿರಲಿಲ್ಲ. ಅಳಿಯನನ್ನು ಉಳಿಸುವ ಪ್ರಯತ್ನದಲ್ಲಿ ಅವರು ಕೂಡ ನೀರಿನ ಆಳಕ್ಕೆ ಸಿಲುಕಿದ್ದಾರೆ. ಅಂತಿಮವಾಗಿ ಇಬ್ಬರೂ ಉಸಿರುಗಟ್ಟಿ ಕೆರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಭೇಟಿ:
ಘಟನೆಯ ಬಗ್ಗೆ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸಿದರು. ಸದ್ಯ ಇಬ್ಬರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ. ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

The post ಬೇಸಿಗೆ ರಜೆಯ ಸಂಭ್ರಮದ ನಡುವೆ ದು*ತ: ಅಳಿಯನನ್ನು ರಕ್ಷಿಸಲು ಹೋಗಿ ಮಾವನೂ ನೀರುಪಾಲು! appeared first on Good News 24x7.

]]>
ಲೈಂ*ಕ ದೌರ್ಜನ್ಯ ಆರೋಪ: ಖ್ಯಾತ ಮಲಯಾಳಂ ನಿರ್ದೇಶಕ ರಂಜಿತ್ ಬಂಧನ, 14 ದಿನ ನ್ಯಾಯಾಂಗ ಬಂಧನ. https://www.goodnews24x7.com/sexual-assault-charges-renowned-malayalam-director-ranjith-arrested-sent-to-14-days-judicial-custody/ Wed, 01 Apr 2026 10:06:46 +0000 https://www.goodnews24x7.com/?p=9063 ತಿರುವನಂತಪುರ: ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ನಟ ರಂಜಿತ್ (Ranjith) ಅವರನ್ನು ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿಯಲ್ಲಿ ಪೊಲೀಸರು ಮಂಗಳವಾರ ತಡರಾತ್ರಿ ಬಂಧಿಸಿದ್ದಾರೆ. ಚಿತ್ರೀಕರಣದ ಸಮಯದಲ್ಲಿ ಕ್ಯಾರವಾನ್‌ಗೆ ಕರೆದೊಯ್ದು ತಮಗೆ ಕಿರುಕುಳ ನೀಡಲಾಗಿದೆ ಎಂದು ನಟಿಯೊಬ್ಬರು…

The post ಲೈಂ*ಕ ದೌರ್ಜನ್ಯ ಆರೋಪ: ಖ್ಯಾತ ಮಲಯಾಳಂ ನಿರ್ದೇಶಕ ರಂಜಿತ್ ಬಂಧನ, 14 ದಿನ ನ್ಯಾಯಾಂಗ ಬಂಧನ. appeared first on Good News 24x7.

]]>

ತಿರುವನಂತಪುರ: ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ನಟ ರಂಜಿತ್ (Ranjith) ಅವರನ್ನು ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿಯಲ್ಲಿ ಪೊಲೀಸರು ಮಂಗಳವಾರ ತಡರಾತ್ರಿ ಬಂಧಿಸಿದ್ದಾರೆ. ಚಿತ್ರೀಕರಣದ ಸಮಯದಲ್ಲಿ ಕ್ಯಾರವಾನ್‌ಗೆ ಕರೆದೊಯ್ದು ತಮಗೆ ಕಿರುಕುಳ ನೀಡಲಾಗಿದೆ ಎಂದು ನಟಿಯೊಬ್ಬರು ಸೋಮವಾರ ಕೊಚ್ಚಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಇಡುಕ್ಕಿ ಜಿಲ್ಲೆಯ ತೋಡುಪುಳದಲ್ಲಿ ರಂಜಿತ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಬಂಧನದ ಬಳಿಕ ರಂಜಿತ್ ಅವರನ್ನು ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ (JFMC) ಮುಂದೆ ಹಾಜರುಪಡಿಸಲಾಯಿತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಲಯವು ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ. ಸದ್ಯ ಅವರನ್ನು ಎರ್ನಾಕುಲಂ ಜೈಲಿಗೆ ಸ್ಥಳಾಂತರಿಸಲಾಗಿದ್ದು, ಕೊಚ್ಚಿ ಪೊಲೀಸ್ ಆಯುಕ್ತರ ನೇತೃತ್ವದ ವಿಶೇಷ ತನಿಖಾ ತಂಡ (SIT) ಈ ಕುರಿತು ಹೆಚ್ಚಿನ ವಿಚಾರಣೆ ನಡೆಸುತ್ತಿದೆ.

ನಿರ್ದೇಶಕ ರಂಜಿತ್ ವಿರುದ್ಧ ಈ ಹಿಂದೆಯೂ ಇಂತಹ ಗಂಭೀರ ಆರೋಪಗಳು ಕೇಳಿಬಂದಿದ್ದವು. 2024ರಲ್ಲಿ ಬಂಗಾಳಿ ನಟಿಯೊಬ್ಬರು 2009ರ ಘಟನೆಯನ್ನು ಉಲ್ಲೇಖಿಸಿ ದೂರು ನೀಡಿದ್ದರು. ಇದು ರಂಜಿತ್ ವಿರುದ್ಧ ದಾಖಲಾಗಿರುವ ಮೂರನೇ ಪ್ರಕರಣವಾಗಿದ್ದು, ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಆದರೆ, ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ನಿರಾಕರಿಸಿರುವ ರಂಜಿತ್, ಇವೆಲ್ಲವೂ ಸುಳ್ಳು ದೂರುಗಳು ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ.

The post ಲೈಂ*ಕ ದೌರ್ಜನ್ಯ ಆರೋಪ: ಖ್ಯಾತ ಮಲಯಾಳಂ ನಿರ್ದೇಶಕ ರಂಜಿತ್ ಬಂಧನ, 14 ದಿನ ನ್ಯಾಯಾಂಗ ಬಂಧನ. appeared first on Good News 24x7.

]]>
ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದ ತುರ್ತು ಲ್ಯಾಂಡಿಂಗ್: ಎಂಜಿನ್ ದೋಷದ ಮಧ್ಯೆಯೂ 161 ಪ್ರಯಾಣಿಕರು ಸುರಕ್ಷಿತ https://www.goodnews24x7.com/dehali-vimana-nilda%e1%b9%87adalli-i%e1%b9%87%e1%b8%8digo-vimanada-turtu-lya%e1%b9%87%e1%b8%8di%e1%b9%85g-enjin-do%e1%b9%a3ada-madhyeyu-161-praya%e1%b9%87ikaru-surak%e1%b9%a3ita-indigoflight/ Sat, 28 Mar 2026 09:20:07 +0000 https://www.goodnews24x7.com/?p=8993 ನವದೆಹಲಿ: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ರಾಷ್ಟ್ರ ರಾಜಧಾನಿ ದೆಹಲಿಯತ್ತ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಧ್ಯಾಹ್ನದ ವೇಳೆ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ, ವಿಮಾನವನ್ನು ತುರ್ತು ಭೂಸ್ಪರ್ಶಕ್ಕೆ ಒಳಪಡಿಸಲಾಯಿತು. ಬೆಳಗ್ಗೆ ಸುಮಾರು 10:50ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದ ರನ್‌ವೇ 28ರಲ್ಲಿ ತುರ್ತು…

The post ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದ ತುರ್ತು ಲ್ಯಾಂಡಿಂಗ್: ಎಂಜಿನ್ ದೋಷದ ಮಧ್ಯೆಯೂ 161 ಪ್ರಯಾಣಿಕರು ಸುರಕ್ಷಿತ appeared first on Good News 24x7.

]]>

ನವದೆಹಲಿ: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ರಾಷ್ಟ್ರ ರಾಜಧಾನಿ ದೆಹಲಿಯತ್ತ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಧ್ಯಾಹ್ನದ ವೇಳೆ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ, ವಿಮಾನವನ್ನು ತುರ್ತು ಭೂಸ್ಪರ್ಶಕ್ಕೆ ಒಳಪಡಿಸಲಾಯಿತು. ಬೆಳಗ್ಗೆ ಸುಮಾರು 10:50ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದ ರನ್‌ವೇ 28ರಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದ್ದು, ಸುರಕ್ಷತಾ ಕ್ರಮಗಳ ನಡುವೆ ವಿಮಾನವನ್ನು ಯಶಸ್ವಿಯಾಗಿ ನೆಲಕ್ಕಿಳಿಸಲಾಯಿತು.

ಬೋಯಿಂಗ್ 737 ಮಾದರಿಯ ಈ ವಿಮಾನದಲ್ಲಿ ಒಟ್ಟು 161 ಪ್ರಯಾಣಿಕರು ಇದ್ದರು. ತುರ್ತು ಲ್ಯಾಂಡಿಂಗ್ ಬಳಿಕ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಹೊರತೆಗೆದು ಸ್ಥಳಾಂತರಿಸಲಾಗಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ದಳ ಮತ್ತು ವಿಮಾನ ನಿಲ್ದಾಣದ ತುರ್ತು ಸೇವಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆಗೆ ಮುಂದಾಗಿದ್ದು, ಯಾವುದೇ ಅನಾಹುತ ಸಂಭವಿಸದಂತೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿದರು.

ಈ ವಿಮಾನವು ಮೂಲತಃ ಟರ್ಕಿಯ ಕೊರೆಂಡನ್ ಏರ್‌ಲೈನ್ಸ್‌ಗೆ ಸೇರಿದದ್ದಾಗಿದ್ದು, ಇಂಡಿಗೋ ಕಂಪನಿಯು ಅದನ್ನು ಲೀಸ್ ಆಧಾರದಲ್ಲಿ ಬಳಸುತ್ತಿತ್ತು. ತಾಂತ್ರಿಕ ದೋಷದ ನಿಖರ ಕಾರಣವನ್ನು ಪತ್ತೆಹಚ್ಚಲು ತಜ್ಞರು ಪರಿಶೀಲನೆ ಆರಂಭಿಸಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.

The post ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದ ತುರ್ತು ಲ್ಯಾಂಡಿಂಗ್: ಎಂಜಿನ್ ದೋಷದ ಮಧ್ಯೆಯೂ 161 ಪ್ರಯಾಣಿಕರು ಸುರಕ್ಷಿತ appeared first on Good News 24x7.

]]>
ಧರ್ಮಸ್ಥಳ ಪ್ರಕರಣ: ತಮಿಳುನಾಡಿನಲ್ಲಿ ಗುಂಪೊಂದು ಸಂಪರ್ಕಿಸಿತ್ತೆಂದು ದೂರುದಾರ ಹೇಳಿಲ್ಲ – ಎಸ್‌ಐಟಿ ಸ್ಪಷ್ಟನೆ. https://www.goodnews24x7.com/dharmasthala-case-complainant-did-not-say-that-a-group-contacted-him-in-tamil-nadu-sit-clarifies/ Tue, 19 Aug 2025 04:54:46 +0000 https://www.goodnews24x7.com/?p=6373 ಮಂಗಳೂರು : ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತಮಿಳುನಾಡಿನಲ್ಲಿ ಗುಂಪೊಂದು ದೂರುದಾರನನ್ನು ಸಂಪರ್ಕಿಸಿತ್ತೆಂಬ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದೆ. ತನಿಖೆಯ ವೇಳೆ ದೂರುದಾರನು ಯಾವುದೇ ಇಂತಹ ಹೇಳಿಕೆ ನೀಡಿಲ್ಲ ಎಂದು ಅಧಿಕಾರಿಗಳು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.…

The post ಧರ್ಮಸ್ಥಳ ಪ್ರಕರಣ: ತಮಿಳುನಾಡಿನಲ್ಲಿ ಗುಂಪೊಂದು ಸಂಪರ್ಕಿಸಿತ್ತೆಂದು ದೂರುದಾರ ಹೇಳಿಲ್ಲ – ಎಸ್‌ಐಟಿ ಸ್ಪಷ್ಟನೆ. appeared first on Good News 24x7.

]]>

ಮಂಗಳೂರು : ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತಮಿಳುನಾಡಿನಲ್ಲಿ ಗುಂಪೊಂದು ದೂರುದಾರನನ್ನು ಸಂಪರ್ಕಿಸಿತ್ತೆಂಬ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದೆ. ತನಿಖೆಯ ವೇಳೆ ದೂರುದಾರನು ಯಾವುದೇ ಇಂತಹ ಹೇಳಿಕೆ ನೀಡಿಲ್ಲ ಎಂದು ಅಧಿಕಾರಿಗಳು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.

ಹಿಂದೆ ಕೆಲ ಮಾಧ್ಯಮ ವರದಿಗಳ ಪ್ರಕಾರ, “2014ರ ನಂತರ ತಮಿಳುನಾಡಿನಲ್ಲಿ ಇದ್ದಾಗ 2023ರಲ್ಲಿ ಒಂದು ಗುಂಪು ನನ್ನನ್ನು ಸಂಪರ್ಕಿಸಿತ್ತು. ಧರ್ಮಸ್ಥಳದಲ್ಲಿ ಶವ ಹೂತಿರುವ ಬಗ್ಗೆ ಕೇಳಿದ್ದರು. ನಾನು ಕಾನೂನುಬದ್ಧವಾಗಿ ಶವ ಹೂತಿದ್ದೆನೆಂದು ತಿಳಿಸಿದ್ದೆ. ಆದರೆ ಅವರು ತಪ್ಪು ಹೇಳಿಕೆ ನೀಡುವಂತೆ ಒತ್ತಡ ಹೇರಿದ್ದರು,” ಎಂಬುವಾಗಿ ದೂರುದಾರ ಹೇಳಿಕೆ ನೀಡಿದ್ದಾನೆಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿವಾದಗಳು ಹೆಚ್ಚಾಗಿದ್ದವು.

ಆದರೆ, ಎಸ್‌ಐಟಿ ಈ ವರದಿಗಳನ್ನು ನಿರಾಕರಿಸಿದ್ದು, “ವಿಚಾರಣೆಯಲ್ಲಿ ದೂರುದಾರನು ಅಂತಹ ಯಾವುದೇ ಹೇಳಿಕೆ ನೀಡಿಲ್ಲ. ಅವರು ಸೆಕ್ಷನ್ 164ರಡಿಯಲ್ಲಿ ನೀಡಿರುವ ಹೇಳಿಕೆಯನ್ನು ನಾವು ದಾಖಲಿಸುತ್ತಿದ್ದೇವೆ,” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅದಷ್ಟೇ ಅಲ್ಲದೆ, ಮೊದಲು ದೂರುದಾರ ನೀಡಿರುವ ಹೇಳಿಕೆಗಳ ನಿಖರತೆಯನ್ನು ಪರಿಶೀಲಿಸಲಾಗುವುದು. ದೂರುದಾರರೊಂದಿಗೆ ಕೆಲಸ ಮಾಡಿದ ಗ್ರಾಪಂ ಅಧಿಕಾರಿಗಳು, ಸೇವೆಯಲ್ಲಿದ್ದ ಪೊಲೀಸರು ಹಾಗೂ ಇತರ ಸಿಬ್ಬಂದಿಗಳಿಂದ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

ಈ ನಡುವೆ, ಎಸ್‌ಐಟಿ ಯೂಟ್ಯೂಬರ್‌ಗಳಿಗೆ ನೋಟಿಸ್ ನೀಡಿದೆಯೆಂಬ ಸುದ್ದಿಗಳನ್ನೂ ಅಧಿಕಾರಿಗಳು ಖಂಡಿಸಿದ್ದಾರೆ. “ಯಾವುದೇ ನೋಟಿಸ್ ನೀಡಿಲ್ಲ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

1994ರಿಂದ 2014ರವರೆಗೆ ಕೆಲಸ ಮಾಡಿದ ಕೆಲ ಸಿಬ್ಬಂದಿಗೆ ಸಮನ್ಸ್ ನೀಡಲಾಗಿದ್ದು, ಅವರಿಂದ ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ.

ಇನ್ನೊಂದು ಮೂಲದ ಪ್ರಕಾರ, ಮಂಗಳವಾರ ಸಾಕ್ಷಿ-ದೂರುದಾರರೊಂದಿಗೆ ಸೇರಿದಂತೆ ಇತರ ಪ್ರಮುಖ ವ್ಯಕ್ತಿಗಳನ್ನೂ ಎಸ್‌ಐಟಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ದೂರುದಾರರು ಉಲ್ಲೇಖಿಸಿರುವ ತಲೆಬುರುಡೆ ಹಾಗೂ ಇತರ ಸ್ಥಳಗಳ ಬಗ್ಗೆ ಮುಂದಿನ ಹಂತದಲ್ಲಿ ಪ್ರಶ್ನೆಗಳನ್ನು ಕೇಳಲಾಗುವುದು ಎಂದು ಮೂಲಗಳು ತಿಳಿಸಿವೆ.

The post ಧರ್ಮಸ್ಥಳ ಪ್ರಕರಣ: ತಮಿಳುನಾಡಿನಲ್ಲಿ ಗುಂಪೊಂದು ಸಂಪರ್ಕಿಸಿತ್ತೆಂದು ದೂರುದಾರ ಹೇಳಿಲ್ಲ – ಎಸ್‌ಐಟಿ ಸ್ಪಷ್ಟನೆ. appeared first on Good News 24x7.

]]>
ಧ*ರ್ಮಸ್ಥಳದಲ್ಲಿ ನೂರಾರು ಶ*ಗಳ ಹೂತಿಟ್ಟ ಕೇಸ್: 6ನೇ ಪಾಯಿಂಟ್ ನಲ್ಲಿ ಮೂಳೆಗಳು ಪತ್ತೆ. https://www.goodnews24x7.com/hundreds-of-bodies-buried-in-dharmasthala-bones-found-at-6th-point/ Thu, 31 Jul 2025 11:14:43 +0000 https://www.goodnews24x7.com/?p=5194 ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಮೂಳೆಗಳು ಪತ್ತೆಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ದೂರುದಾರ ಗುರುತಿಸಿದ 6 ನೇ ಪಾಯಿಂಟ್ ನಲ್ಲಿ 2 ಮೂಳೆಗಳು ಸಿಕ್ಕಿದೆ ಎಂಬ…

The post ಧ*ರ್ಮಸ್ಥಳದಲ್ಲಿ ನೂರಾರು ಶ*ಗಳ ಹೂತಿಟ್ಟ ಕೇಸ್: 6ನೇ ಪಾಯಿಂಟ್ ನಲ್ಲಿ ಮೂಳೆಗಳು ಪತ್ತೆ. appeared first on Good News 24x7.

]]>

ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಮೂಳೆಗಳು ಪತ್ತೆಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ದೂರುದಾರ ಗುರುತಿಸಿದ 6 ನೇ ಪಾಯಿಂಟ್ ನಲ್ಲಿ 2 ಮೂಳೆಗಳು ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ. 2 ಎಲುಬುಗಳು ಸಿಕ್ಕ ಬಗ್ಗೆ ಎಸ್ ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಹೆಚ್ಚಿನ ಆಳ ತೆಗೆಯಲು ಮುಂದಾಗಿದ್ದಾರೆ.

ಮೂಳೆ ಸಿಕ್ಕ ಹಿನ್ನೆಲೆಯಲ್ಲಿ ಅಕ್ಕಪಕ್ಕದಲ್ಲಿ ಅಗೆಯಲಾಗುತ್ತಿದ್ದು, ಎಸ್ ಐಟಿ ತಂಡದ ಅಧಿಕಾರಿಗಳು ಮೂಳೆ ಸಿಕ್ಕ ಬಗ್ಗೆ ಲ್ಯಾಪ್ ಟಾಪ್ ನಲ್ಲಿ ದಾಖಲು ಮಾಡಿಕೊಳ್ಳುತ್ತಿದ್ದಾರೆ. ಜಿಪಿಎಸ್ ಆನ್ ಮಾಡಿಕೊಂಡು ರಿಪೋರ್ಟ್ ದಾಖಲು ಮಾಡಿಕೊಂಡಿದ್ದಾರೆ. ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ, ಆದರೆ ದೇಹದ ಕೆಲವು ಭಾಗಗಳು ಮಾತ್ರ ಸಿಕ್ಕಿದ್ದು, ಆಳಕ್ಕೆ ತೆಗೆದು ಹುಡುಕಾಟ ನಡೆಸಲಾಗುತ್ತಿದೆ.

The post ಧ*ರ್ಮಸ್ಥಳದಲ್ಲಿ ನೂರಾರು ಶ*ಗಳ ಹೂತಿಟ್ಟ ಕೇಸ್: 6ನೇ ಪಾಯಿಂಟ್ ನಲ್ಲಿ ಮೂಳೆಗಳು ಪತ್ತೆ. appeared first on Good News 24x7.

]]>
ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಬೆನ್ನಿಗೆ ಗುಂಡು ಹಾರಿಸಿ ಕೊಂ*ದ ತಂದೆ! https://www.goodnews24x7.com/tennis-player-radhika-yadav-shot-dead-by-father/ Fri, 11 Jul 2025 10:35:09 +0000 https://www.goodnews24x7.com/?p=5031 ನವದೆಹಲಿ : ತನ್ನದೇ ಸ್ವಂತ ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3…

The post ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಬೆನ್ನಿಗೆ ಗುಂಡು ಹಾರಿಸಿ ಕೊಂ*ದ ತಂದೆ! appeared first on Good News 24x7.

]]>

ನವದೆಹಲಿ : ತನ್ನದೇ ಸ್ವಂತ ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3 ಬಾರಿ ಗುಂಡು ಹಾರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ಆಕೆಯ ಪ್ರಮುಖ ಅಂಗಗಳಿಗೆ ಗಾಯಗಳಾಗಿ ಅವರು ತಕ್ಷಣವೇ ಸಾವನ್ನಪ್ಪಿದ್ದಾರೆ.


ಕೊಲೆ ಆರೋಪಿ ಹಾಗೂ ಮೃತ ಯುವತಿಯ ತಂದೆ ದೀಪಕ್ ಯಾದವ್ ಅವರನ್ನು ಬಂಧಿಸಲಾಗಿದೆ. ಅವರ ಬಳಿಯಿದ್ದ ಲೈಸೆನ್ಸ್ ಪಡೆದ ರಿವಾಲ್ವರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆಯ ಪ್ರಾಥಮಿಕ ತನಿಖೆಯಲ್ಲಿ ರಾಧಿಕಾ ಯಾದವ್ ಅವರ 51 ವರ್ಷದ ತಂದೆ ತಮ್ಮ ಮಗಳು ಸ್ವಂತ ಟೆನಿಸ್ ಅಕಾಡೆಮಿ ನಡೆಸುತ್ತಿದ್ದುದಕ್ಕೆ ಅಸಮಾಧಾನಗೊಂಡಿದ್ದರು ಎಂದು ತಿಳಿದುಬಂದಿದೆ.


ಪೊಲೀಸರ ಪ್ರಕಾರ, ದೀಪಕ್ ಯಾದವ್ ಅವರ ಊರಾದ ವಜೀರಾಬಾದ್ನಲ್ಲಿ ಗ್ರಾಮಸ್ಥರು ಮತ್ತು ಗೆಳೆಯರಿಂದ ಬಂದ ನಿಂದನೆಗಳಿಂದ ಕೋಪಗೊಂಡಿದ್ದರು. ಅವರ ಗೆಳೆಯರು, ಸಂಬಂಧಿಕರು ದೀಪಕ್ ತಮ್ಮ ಮಗಳ ಟೆನಿಸ್ ಅಕಾಡೆಮಿಯಿಂದ ಪಡೆಯುವ ಆದಾಯದಿಂದ ಬದುಕುತ್ತಿದ್ದಕ್ಕಾಗಿ ಅಪಹಾಸ್ಯ ಮಾಡಿದ್ದರು. ಇದರಿಂದ ದೀಪಕ್ ಯಾದವ್ ಮಗಳ ಮೇಲೆ ಕೋಪಗೊಂಡಿದ್ದರು. ಮಗಳಿಗೆ ಟೆನಿಸ್ ಅಕಾಡೆಮಿ ಮುಚ್ಚುವಂತೆ ಅನೇಕ ಬಾರಿ ಹೇಳಿದ್ದರು. ಆದರೆ, ಆಕೆ ಒಪ್ಪಿರಲಿಲ್ಲ. ಇದೇ ವಿಷಯದ ಜಗಳದಿಂದ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸರ ಪ್ರಕಾರ, ತಂದೆ ತನ್ನ ಮಗಳ ವೃತ್ತಿಜೀವನ ಮತ್ತು ಗಳಿಕೆಯ ಬಗ್ಗೆ ಸಾಮಾಜಿಕ ಟೀಕೆಗಳಿಂದಾಗಿ ಕಳೆದ 15 ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ. ತಂದೆ ಮತ್ತು ಮಗಳ ನಡುವಿನ ಇತ್ತೀಚಿನ ವಾಗ್ವಾದವು ರಾಧಿಕಾ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊದಿಂದ ಹುಟ್ಟಿಕೊಂಡಿರಬಹುದು ಎಂದು ತನಿಖಾಧಿಕಾರಿಯೊಬ್ಬರು ಹೇಳಿದ್ದಾರೆ.

ರಾಧಿಕಾ ಯಾದವ್ ಯಾರು?


ರಾಧಿಕಾ ಒಬ್ಬ ಪ್ರತಿಭಾನ್ವಿತ ಮತ್ತು ಭರವಸೆಯ ಟೆನಿಸ್ ಕ್ರೀಡಾಪಟು. ಸ್ಕಾಟಿಷ್ ಹೈ ಇಂಟರ್ನ್ಯಾಷನಲ್ ಶಾಲೆಯ ಪದವೀಧರೆ. ಆಕೆ 2018ರಲ್ಲಿ ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಶಾಲೆಯಲ್ಲಿ ಓದುವಾಗಲೇ ಆಕೆ ಟೆನಿಸ್ಗೆ ಕಾಲಿಟ್ಟರು. ರಾಧಿಕಾ ಅಂತಾರಾಷ್ಟ್ರೀಯ ಟೆನಿಸ್ ಫೆಡರೇಶನ್ (ಐಟಿಎಫ್) ನಲ್ಲಿ ಡಬಲ್ಸ್ ಟೆನಿಸ್ ಆಟಗಾರ್ತಿಯಾಗಿ 113ನೇ ಸ್ಥಾನ ಪಡೆದಿದ್ದರು. ಐಟಿಎಫ್ ಡಬಲ್ಸ್ನಲ್ಲಿ ಅವರು ಅಗ್ರ 200ರೊಳಗೆ ಸ್ಥಾನ ಪಡೆದಿದ್ದರು. ಆಕೆ ಇತ್ತೀಚೆಗೆ ಭುಜದ ಗಾಯದಿಂದ ಬಳಲುತ್ತಿದ್ದರು ಮತ್ತು ಚಿಕಿತ್ಸೆಗೂ ಒಳಗಾಗಿದ್ದರು. ಆದರೂ ಅಕಾಡೆಮಿಯನ್ನು ನಡೆಸುವುದನ್ನು ನಿಲ್ಲಿಸಲಿಲ್ಲ.

The post ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಬೆನ್ನಿಗೆ ಗುಂಡು ಹಾರಿಸಿ ಕೊಂ*ದ ತಂದೆ! appeared first on Good News 24x7.

]]>
ರಾಮನಗರ ದಿವ್ಯಾಂಗ ಬಾಲಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! https://www.goodnews24x7.com/big-twist-in-ramanagara-divyang-girl-case/ Sun, 18 May 2025 07:21:47 +0000 https://www.goodnews24x7.com/?p=3947 ರಾಮನಗರ : ರಾಮನಗರದಲ್ಲಿ ನಡೆದಿದ್ದ ದಿವ್ಯಾಂಗ ಬಾಲಕಿಯ ಕೊ*ಲೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಮರ್ಡ*ರ್ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಆದರೆ ಇದೀಗ ಮರ್ಡ*ರ್ ಕೇಸ್ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇನೆಂದರೆ ಅತ್ಯಾ*ಚಾರ ನಡೆದಿಲ್ಲವೆಂಬುದು…

The post ರಾಮನಗರ ದಿವ್ಯಾಂಗ ಬಾಲಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! appeared first on Good News 24x7.

]]>

ರಾಮನಗರ : ರಾಮನಗರದಲ್ಲಿ ನಡೆದಿದ್ದ ದಿವ್ಯಾಂಗ ಬಾಲಕಿಯ ಕೊ*ಲೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಮರ್ಡ*ರ್ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಆದರೆ ಇದೀಗ ಮರ್ಡ*ರ್ ಕೇಸ್ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇನೆಂದರೆ ಅತ್ಯಾ*ಚಾರ ನಡೆದಿಲ್ಲವೆಂಬುದು ಎಫ್ಎಸ್ಎಲ್ ವರದಿಯಲ್ಲಿ ಧೃಡಪಟ್ಟಿದೆ. ಜೊತೆಗೆ ಪ್ರಕರಣದ ತನಿಖೆ ಬಗ್ಗೆ ಅಲೆಮಾರಿ ಹಕ್ಕಿಪಿಕ್ಕಿ ಬುಡುಕಟ್ಟು ಸಮುದಾಯದ ರಾಜ್ಯಾಧ್ಯಕ್ಷ ಜಗ್ಗು ಅನುಮಾನ ವ್ಯಕ್ತಪಡಿಸಿದ್ದಾರೆ.

ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದ್ದ 14 ವರ್ಷದ ದಿವ್ಯಾಂಗ ಬಾಲಕಿಯ ಕೊ*ಲೆ ಪ್ರಕರಣಕ್ಕೆ ಬಿಗ್ ಟಿಸ್ಟ್ ಸಿಕ್ಕಿದ್ದು, ಮೇಲ್ನೋಟಕ್ಕೆ ಬಾಲಕಿಯದ್ದು ಕೊ*ಲೆ ಅಲ್ಲ, ರೈಲು ಡಿಕ್ಕಿ ಹೊಡೆದು ಸಾ*ವನ್ನಪ್ಪಿದ್ದಾಳೆ. ಜೊತೆಗೆ ಬಾಲಕಿಯ ಮೇಲೆ ಯಾವುದೇ ಅತ್ಯಾ*ಚಾರ ನಡೆದಿಲ್ಲವೆಂಬುವುದು ಎಫ್ಎಸ್ಎಲ್ ವರದಿಯಲ್ಲಿ ಧೃಡವಾಗಿದೆ. ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯ 14 ವರ್ಷದ ದಿವ್ಯಾಂಗ ಬಾಲಕಿ ಮೇ 11 ರ ಸಂಜೆಯಿಂದ ಏಕಾಏಕಿ ನಾಪತ್ತೆಯಾಗಿದ್ದಳು. ಆನಂತರ ಮೇ 12 ರಂದು ಹಕ್ಕಿಪಿಕ್ಕಿ ಕಾಲೋನಿ ಬಳಿಯ ರೈಲ್ವೆ ಹಳಿ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಬಾಲಕಿಯ ಸಾ*ವು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಅತ್ಯಾ*ಚಾರ ಎಸಗಿ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದರು. ಈ ನಿಟ್ಟಿನಲ್ಲಿ ಬಿಡದಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.


ವಿಶೇಷ ತಂಡಗಳನ್ನ ರಚನೆ ಮಾಡಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದ ಬಿಡದಿ ಪೊಲೀಸರು, ಮರಣೋತ್ತರ ಪರೀಕ್ಷೆ ಜೊತೆಗೆ ಎಫ್ಎಸ್ಎಲ್ಗೂ ಕಳುಹಿಸಿದ್ದರು. ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಬಾಲಕಿಯ ಮೇಲೆ ಯಾವುದೇ ಅತ್ಯಾ*ಚಾರ ನಡೆದಿರುವುದು ಧೃಡವಾಗಿಲ್ಲ. ಜೊತೆ ಬಾಲಕಿಯ ಮೇಲೆ ಯಾವುದೇ ಸುಟ್ಟ ಗುರುತುಗಳು ಪತ್ತೆಯಾಗಿಲ್ಲ. ಅಲ್ಲದೆ ಸಿಸಿ ಟಿವಿ ಆಧಾರದ ಮೇಲೆ ಮೇಲ್ನೋಟಕ್ಕೆ ರೈಲು ಡಿಕ್ಕಿ ಹೊಡೆದು ಬಾಲಕಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಇನ್ನು ಪೊಲೀಸರ ಕೈ ಸೇರಿರುವ FSL ವರದಿಯಿಂದ ಬಾಲಕಿಯ ಮೇಲೆ ಅತ್ಯಾ*ಚಾರ ನಡೆದಿಲ್ಲದಿರುವುದು ಗೊತ್ತಾಗಿದೆ. ಆದರೆ ಮರಣೋತ್ತರ ಪರೀಕ್ಷೆ ವರದಿಯಿಂದ ಇದು ಆತ್ಮ*ಹತ್ಯೆಯಾ ಅಥವಾ ಕೊ*ಲೆಯಾ ಎಂಬುವುದು ತಿಳಿಯಲಿದೆ. ಮರಣೋತ್ತರ ವರದಿ ಸೋಮವಾರ ಪೊಲೀಸರ ಕೈ ಸೇರಲಿದೆ. ಆ ಬಳಿಕ ಸಾ*ವಿಗೆ ನಿಖರ ಕಾರಣ ತಿಳಿಯಲಿದೆ. ಇನ್ನು ಬಾಲಕಿಯ ಸಾ*ವಿನ ಸುದ್ದಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕೂಡ ಕ್ರಮ ತೆಗೆದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ.

The post ರಾಮನಗರ ದಿವ್ಯಾಂಗ ಬಾಲಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! appeared first on Good News 24x7.

]]>
ಮಾಜಿ ಸಚಿವ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ! https://www.goodnews24x7.com/%e0%b2%ae%e0%b2%be%e0%b2%9c%e0%b2%bf-%e0%b2%b8%e0%b2%9a%e0%b2%bf%e0%b2%b5-%e0%b2%a8%e0%b2%be%e0%b2%97%e0%b3%87%e0%b2%82%e0%b2%a6%e0%b3%8d%e0%b2%b0-%e0%b2%b5%e0%b2%bf%e0%b2%b0%e0%b3%81%e0%b2%a6/ Wed, 09 Apr 2025 13:16:43 +0000 https://www.goodnews24x7.com/?p=3148 ಬೆಂಗಳೂರು : ವಾಲ್ಮೀಕಿ ನಿಗಮ ಬಹುಕೋಟಿ ಹಗರಣ ಸಂಬಂಧ ಮಾಜಿ ಸಚಿವ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. 3 ದಿನಗಳ ಹಿಂದೆಯೇ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದರು. ವಾಲ್ಮೀಕಿ ನಿಗಮದಲ್ಲಿ 89 ಕೋಟಿ ಹಣ ವರ್ಗಾವಣೆ…

The post ಮಾಜಿ ಸಚಿವ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ! appeared first on Good News 24x7.

]]>

ಬೆಂಗಳೂರು : ವಾಲ್ಮೀಕಿ ನಿಗಮ ಬಹುಕೋಟಿ ಹಗರಣ ಸಂಬಂಧ ಮಾಜಿ ಸಚಿವ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. 3 ದಿನಗಳ ಹಿಂದೆಯೇ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದರು.
ವಾಲ್ಮೀಕಿ ನಿಗಮದಲ್ಲಿ 89 ಕೋಟಿ ಹಣ ವರ್ಗಾವಣೆ ಆರೋಪ ಸಂಬಂಧ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ED ಅನುಮತಿ ಕೋರಿತ್ತು. ಇದೀಗ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ಕೋರ್ಟ್ ಅನುಮತಿ ನೀಡಿದೆ. ತನಿಖೆ ವೇಳೆ ED ಅಧಿಕಾರಿಗಳು ನಾಗೇಂದ್ರರನ್ನ ಅರೆಸ್ಟ್ ಮಾಡಿದ್ದು, ಈ ಹಗರಣ ಕೇಸಲ್ಲಿ ನಾಗೇಂದ್ರ ಜೈಲು ಸೇರಿದ್ದರು. ನಂತರ ಜಾಮೀನು ಮೇಲೆ ಹೊರ ಬಂದಿದ್ದ ನಾಗೇಂದ್ರಗೆ ತನಿಖೆ ಶಾಕ್ ನೀಡಿತ್ತು.


ಪ್ರಕರಣದ ಹಿನ್ನೆಲೆ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಬಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ 89 ಕೋಟಿ ಹಣ ವರ್ಗಾಯಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಮತ್ತಿತರರ ವಿರುದ್ಧ ಇಸಿಐಆರ್ ದಾಖಲಿಸಿ ತನಿಖೆ ಕೈಗೊಂಡಿತ್ತು. ಈ ಹಗರಣ ಕೇಸಲ್ಲಿ ಮಾಜಿ ಸಚಿವ ನಾಗೇಂದ್ರರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು.

 

The post ಮಾಜಿ ಸಚಿವ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ! appeared first on Good News 24x7.

]]>
ಕೈ MLA ಪುಟ್ಟರಂಗ ಶೆಟ್ಟಿಗೆ ಸಂಕಷ್ಟ , ವಿಧಾನದ 25 ಲಕ್ಷ ಕಿಕ್ ಬ್ಯಾಕ್ ಪ್ರಕರಣ; ಹೆಚ್ಚುವರಿ ತನಿಖೆಗೆ ಹೈ ಕೋರ್ಟ್ ಆದೇಶ. https://www.goodnews24x7.com/%e0%b2%95%e0%b3%88-mla-%e0%b2%aa%e0%b3%81%e0%b2%9f%e0%b3%8d%e0%b2%9f%e0%b2%b0%e0%b2%82%e0%b2%97-%e0%b2%b6%e0%b3%86%e0%b2%9f%e0%b3%8d%e0%b2%9f%e0%b2%bf%e0%b2%97%e0%b3%86-%e0%b2%b8%e0%b2%82%e0%b2%95/ Tue, 04 Feb 2025 07:04:40 +0000 https://www.goodnews24x7.com/?p=2219 ಆರು ವರ್ಷಗಳ ಹಿಂದೆ ಸಚಿವರಿಗೆ ತಲುಪಬೇಕಿದ್ದ 25.76 ಲಕ್ಷ ರೂ.ಗಳು ವಿಧಾನಸೌಧದಲ್ಲಿಯೇ ಜಪ್ತಿಯಾದ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುವಂತೆ ಲೋಕಾಯುಕ್ತ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಆದೇಶಿಸಿದೆ. ಇದರ ಬೆನ್ನಲ್ಲೇ ಪ್ರಕರಣಕ್ಕೆ ಮರುಜೀವ ನೀಡಲು ಪ್ರತ್ಯೇಕ ತನಿಖಾ ತಂಡ ನೇಮಿಸುವ ಕುರಿತು…

The post ಕೈ MLA ಪುಟ್ಟರಂಗ ಶೆಟ್ಟಿಗೆ ಸಂಕಷ್ಟ , ವಿಧಾನದ 25 ಲಕ್ಷ ಕಿಕ್ ಬ್ಯಾಕ್ ಪ್ರಕರಣ; ಹೆಚ್ಚುವರಿ ತನಿಖೆಗೆ ಹೈ ಕೋರ್ಟ್ ಆದೇಶ. appeared first on Good News 24x7.

]]>

ಆರು ವರ್ಷಗಳ ಹಿಂದೆ ಸಚಿವರಿಗೆ ತಲುಪಬೇಕಿದ್ದ 25.76 ಲಕ್ಷ ರೂ.ಗಳು ವಿಧಾನಸೌಧದಲ್ಲಿಯೇ ಜಪ್ತಿಯಾದ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುವಂತೆ ಲೋಕಾಯುಕ್ತ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಆದೇಶಿಸಿದೆ.
ಇದರ ಬೆನ್ನಲ್ಲೇ ಪ್ರಕರಣಕ್ಕೆ ಮರುಜೀವ ನೀಡಲು ಪ್ರತ್ಯೇಕ ತನಿಖಾ ತಂಡ ನೇಮಿಸುವ ಕುರಿತು ಲೋಕಾಯುಕ್ತ ಉನ್ನತ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಮರುತನಿಖೆ ಹಿನ್ನೆಲೆಯಲ್ಲಿ ಹಾಲಿ ಶಾಸಕ ಪುಟ್ಟರಂಗಶೆಟ್ಟಿ ಹಾಗೂ ಅನಂತಶಂಕರ್, ಶ್ರೀನಿಧಿ ಸೇರಿದಂತೆ ಐವರು ಮಧ್ಯವರ್ತಿಗಳು, ಹಲವು ಗುತ್ತಿಗೆದಾರರಿಗೆ ಪುನಃ ಲೋಕಾಯುಕ್ತ ವಿಚಾರಣೆಯ ಬಿಸಿತಟ್ಟುವ ಸಾಧ್ಯತೆ ನಿಚ್ಚಳವಾಗಿವೆ. ಅಂದಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಪುಟ್ಟರಂಗಶೆಟ್ಟಿ ಅವರ ಕಚೇರಿ ಸಿಬ್ಬಂದಿಗೆ ಗುತ್ತಿಗೆದಾರರ ಪರವಾಗಿ ಲಂಚ ಕೊಟ್ಟಿದ್ದ ಮಧ್ಯವರ್ತಿಗಳಿಗೆ ‘ಕ್ಲೀನ್ ಚಿಟ್’ ಹಾಗೂ ಭ್ರಷ್ಟಾಚಾರದ ಕುರಿತ ಆಳ ತನಿಖೆಯನ್ನೇ ಕೈಗೊಳ್ಳದ ‘ಲೋಕಾ’ ಕಾರ್ಯವೈಖರಿ ಕುರಿತು ಹಲವು ಪ್ರಶ್ನೆಗಳು ಎದ್ದಿದ್ದವು. ಈ ಅಂಶಗಳನ್ನು ಪುಷ್ಟಿಕರಿಸುವಂತೆ ಇಡೀ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಶೇ.6ರಷ್ಟು ಕಮಿಷನ್ ನಡೆಯುತ್ತಿತ್ತು!:
ಆರೋಪಿ ಮೋಹನ್‌ಕುಮಾರ್, “2019ರ ಜ.3 ಹಾಗೂ 4ರಂದು ಗುತ್ತಿಗೆದಾರರ ಪರವಾಗಿ ಅನಂತಶಂಕರ್, ಶ್ರೀನಿಧಿ, ನಂದನ್, ಎ.ವಿ. ಮಂಜುನಾಥ, ಕೃಷ್ಣಮೂರ್ತಿ ಅವರಿಂದ ಪ್ರತ್ಯೇಕವಾಗಿ 25.76 ಲಕ್ಷ ರೂ. ಸಂಗ್ರಹಿಸಿ ಸಚಿವರ ಕೊಠಡಿಯಲ್ಲಿಯೇ ಇರಿಸಿದ್ದ. ಜ.4 ರಂದು ಹಣವನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಸಚಿವರಿಗೆ ಲಂಚವಾಗಿ ನೀಡಲು ತೆರಳುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದೆ. ಎಂದು ತಪ್ರೊಪ್ಪಿಗೆ ಹೇಳಿಕೆ ನೀಡಿದ್ದರು.

ಅಷ್ಟೇ ಅಲ್ಲದೆ, “ಸಚಿವ ಪುಟ್ಟರಂಗಶೆಟ್ಟಿ ಅವರು ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ನಡೆಯುವ ಕಾಮಗಾರಿಗಳಿಗೆ ಶೇ.6ರಷ್ಟು ಕಮಿಷನ್ ಪಡೆಯುತ್ತಾರೆ,” ಎಂಬ ಸಂಗತಿಯನ್ನು ಮೋಹನ್‌ಕುಮಾರ್, ಗುತ್ತಿಗೆದಾರರಿಗೆ ತಿಳಿಸಿದ್ದರು. ಜತೆಗೆ, ಮೋಹನ್ ಕುಮಾರ್. ಬಳಿ ದೊರೆತ ಹಣ ಯಾವ್ಯಾವ ಕ್ಷೇತ್ರದ ಕಾಮಗಾರಿಗೆ ಯಾವ ಗುತ್ತಿಗೆದಾರರು ಮಧ್ಯವರ್ತಿಗಳ ಬಳಿ ಕೊಟ್ಟುಕಳಿಸಿದ್ದ ಕಮಿಷನ್ ಎಂಬುದೂ ತನಿಖೆಯಲ್ಲಿ ಗೊತ್ತಾಗಿತ್ತು. ಪೂರಕ ಸಾಕ್ಷ್ಯಾಧಾರಗಳು ದೊರೆತರೂ ಸರಕಾರಿ ವ್ಯವಸ್ಥೆಯಲ್ಲಿ ಆಳವಾಗಿ ಹುದುಗಿರುವ ಭ್ರಷ್ಟಾಚಾರದ ಕುರಿತು ಲೋಕಾಯುಕ್ತ ಆಳವಾಗಿ ತನಿಖೆ ನಡೆಸಿಲ್ಲ. ಜತೆಗೆ, ಸಹ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿ ಕೈ ತೊಳೆದುಕೊಂಡಿದ್ದಾರೆ. ಹೀಗಾಗಿ, ಪ್ರಕರಣ ಹೆಚ್ಚುವರಿ ತನಿಖೆ ನಡೆಯಬೇಕಿದೆ ಎಂದು ಮೂಲಗಳು ತಿಳಿಸಿವೆ.
ಕ್ಲೀನ್ ಚಿಟ್ ನೀಡಿತ್ತು ಲೋಕಾಯುಕ್ತ
2019ರ ಜ.4ರಂದು ಅಂದಿನ ಸಚಿವ ಪುಟ್ಟರಂಗಶೆಟ್ಟಿ ಅವರ ಕಚೇರಿಯ ಟೈಪಿಸ್ಟ್‌ಎಸ್.ಜೆ. ಮೋಹನ್ ಕುಮಾರ್ ಬಳಿ 25.76 ಲಕ್ಷರೂ. ನಗದು ಇದ್ದ ಬ್ಯಾಗನ್ನು ವಿಧಾನಸೌಧ ಗೇಟ್‌ನಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದರು. ಅನಧಿ ಕೃತವಾಗಿ ದೊರೆತಿದ್ದ ಹಣ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಎಸಿಬಿ ಅಧಿಕಾರಿಗಳು, ಮೋಹನ್ ಕುಮಾರ್, ಶ್ರೀನಿಧಿ, ಆನಂತಶಂಕರ್, ನಂದನ, ಮಂಜುನಾಥ್, ಕೃಷ್ಣಮೂರ್ತಿ ಅವರನ್ನು ಆರೋಪಿಗಳನ್ನಾಗಿ ಪರಿಗಣಿಸಿ ಭ್ರಷ್ಟಾಚಾರ ನಿಗ್ರಹ ಕಾಯಿದೆ ಅನ್ವಯ ತನಿಖೆ ನಡೆಸುತ್ತಿದ್ದರು. ಈ ಪ್ರಕರಣ 2023ರಲ್ಲಿ ಲೋಕಾಯುಕ್ತಕ್ಕೆ ಹಸ್ತಾಂತರವಾಗಿದ್ದು, ತನಿಖಾಧಿಕಾರಿಯು ಮೋಹನ್‌ಕುಮಾರ್ ಅವರನ್ನು ಮಾತ್ರ ಆರೋಪಿಯನ್ನಾಗಿ ಪರಿಗಣಿಸಿ ಚಾರ್ಜ್‌ಶೀಟ್ ಸಲ್ಲಿಸಿದ್ದರು.

The post ಕೈ MLA ಪುಟ್ಟರಂಗ ಶೆಟ್ಟಿಗೆ ಸಂಕಷ್ಟ , ವಿಧಾನದ 25 ಲಕ್ಷ ಕಿಕ್ ಬ್ಯಾಕ್ ಪ್ರಕರಣ; ಹೆಚ್ಚುವರಿ ತನಿಖೆಗೆ ಹೈ ಕೋರ್ಟ್ ಆದೇಶ. appeared first on Good News 24x7.

]]>