KannadaNews Archives - Good News 24x7 https://www.goodnews24x7.com/tag/kannadanews/ Kannada Mon, 06 Jul 2026 08:46:20 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg KannadaNews Archives - Good News 24x7 https://www.goodnews24x7.com/tag/kannadanews/ 32 32 ಸೊಳ್ಳೆ ಹಿಡಿದು ಕೊಟ್ರೆ ಸಿಗುತ್ತೆ 400 ರೂ ಬಹುಮಾನ! https://www.goodnews24x7.com/catching-a-mosquito-and-getting-a-reward-of-rs-400/ Mon, 06 Jul 2026 08:42:57 +0000 https://www.goodnews24x7.com/?p=9767 ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಹಿವರೆ ಬಜಾರ್ ಗ್ರಾಮ ವಿಶಿಷ್ಟವಾಗಿದೆ. ಇಲ್ಲಿ ಒಂದೇ ಒಂದು ಸೊಳ್ಳೆಯೂ ಇಲ್ಲ, ಸೊಳ್ಳೆ ಹಿಡಿದು ಕೊಟ್ಟರೆ 400 ರೂ. ಬಹುಮಾನ. ಹಿಂದೆ ಬಡತನದಿಂದ ಬಳಲುತ್ತಿದ್ದ ಈ ಗ್ರಾಮ, ಸಮುದಾಯದ ಪ್ರಯತ್ನದಿಂದ ನೀರು ನಿರ್ವಹಣೆ ಹಾಗೂ ಸ್ವಚ್ಛತೆಯಲ್ಲಿ ಮಾದರಿಯಾಗಿದೆ.…

The post ಸೊಳ್ಳೆ ಹಿಡಿದು ಕೊಟ್ರೆ ಸಿಗುತ್ತೆ 400 ರೂ ಬಹುಮಾನ! appeared first on Good News 24x7.

]]>

ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಹಿವರೆ ಬಜಾರ್ ಗ್ರಾಮ ವಿಶಿಷ್ಟವಾಗಿದೆ. ಇಲ್ಲಿ ಒಂದೇ ಒಂದು ಸೊಳ್ಳೆಯೂ ಇಲ್ಲ, ಸೊಳ್ಳೆ ಹಿಡಿದು ಕೊಟ್ಟರೆ 400 ರೂ. ಬಹುಮಾನ. ಹಿಂದೆ ಬಡತನದಿಂದ ಬಳಲುತ್ತಿದ್ದ ಈ ಗ್ರಾಮ, ಸಮುದಾಯದ ಪ್ರಯತ್ನದಿಂದ ನೀರು ನಿರ್ವಹಣೆ ಹಾಗೂ ಸ್ವಚ್ಛತೆಯಲ್ಲಿ ಮಾದರಿಯಾಗಿದೆ. ಇಂದು 80ಕ್ಕೂ ಹೆಚ್ಚು ಕೋಟ್ಯಧಿಪತಿಗಳಿರುವ ಈ ಹಳ್ಳಿಯ ಕಥೆ ದೇಶಕ್ಕೆ ಸ್ಪೂರ್ತಿದಾಯಕ.

ಪುಣೆ, ಜುಲೈ 06: ಭಾರತದಲ್ಲಿ ಪ್ರತಿ ವರ್ಷ ಸೊಳ್ಳೆಕಡಿತ ಮತ್ತು ಅದರಿಂದ ಬರುವ ರೋಗಗಳಿಂದ ಸಾವಿರಾರು ಜನರು ಪರದಾಡುತ್ತಾರೆ. ಆದರೆ, ನಮ್ಮ ದೇಶದಲ್ಲೇ ಒಂದೇ ಒಂದು ಸೊಳ್ಳೆಯೂ ಇಲ್ಲದ ವಿಚಿತ್ರ ಹಾಗೂ ಅದ್ಭುತ ಹಳ್ಳಿಯೊಂದಿದೆ. ಅಷ್ಟೇ ಅಲ್ಲ, ಈ ಗ್ರಾಮದಲ್ಲಿ ನೀವು ಎಲ್ಲಾದರೂ ಒಂದು ಸೊಳ್ಳೆಯನ್ನು ಹುಡುಕಿ ಹಿಡಿದು ಕೊಟ್ಟರೆ ನಿಮಗೆ 400 ರೂಪಾಯಿ ಬಹುಮಾನ ಕೂಡ ಕೊಡ್ತಾರೆ. ಹೌದು, ಇದು ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ‘ಹಿವರೆ ಬಜಾರ್’ ಎಂಬ ಹಳ್ಳಿಯ ಆಸಕ್ತಿದಾಯಕ ಕಥೆ.

ಶೇ.90 ಬಡವರಿದ್ದ ಹಳ್ಳಿಯಲ್ಲಿ ಈಗ 80 ಜನ ಕೋಟ್ಯಧಿಪತಿಗಳು ಇಂದು ಹಿವರೆ ಬಜಾರ್ ಗ್ರಾಮದಲ್ಲಿ ಒಟ್ಟು 305 ಕುಟುಂಬಗಳಿದ್ದು, ಇವರಲ್ಲಿ 80 ಕ್ಕೂ ಹೆಚ್ಚು ಜನ ಕೋಟ್ಯಧಿಪತಿಗಳಿದ್ದಾರೆ . ಆದರೆ, 1990 ರ ದಶಕದ ಮೊದಲು ಈ ಗ್ರಾಮದ ಪರಿಸ್ಥಿತಿ ಹೀಗಿರಲಿಲ್ಲ. ತೀವ್ರ ಬರಗಾಲದಿಂದ ಕಂಗೆಟ್ಟಿದ್ದ ಈ ಊರಿನ ಶೇ. 90 ರಷ್ಟು ಜನರು ಅತ್ಯಂತ ಬಡವರಾಗಿದ್ದರು. ಕುಡಿಯಲು ನೀರಿಲ್ಲದೆ ಗ್ರಾಮಸ್ಥರು ಊರು ಬಿಟ್ಟು ವಲಸೆ ಹೋಗುತ್ತಿದ್ದರು

1990 ರಲ್ಲಿ ಗ್ರಾಮಸ್ಥರೆಲ್ಲಾ ಒಟ್ಟಾಗಿ ‘ಜಂಟಿ ಅರಣ್ಯ ನಿರ್ವಹಣಾ ಸಮಿತಿ’ಯನ್ನು ರಚಿಸಿಕೊಂಡರು. ಊರಿನಲ್ಲೇ ಬಾವಿಗಳನ್ನು ಅಗೆಯಲು ಮತ್ತು ಲಕ್ಷಾಂತರ ಮರಗಳನ್ನು ನೆಡಲು ನಿರ್ಧರಿಸಿದರು.ಶ್ರಮದಾನ ಮತ್ತು ಸರ್ಕಾರದ ನೆರವು: ಗ್ರಾಮಸ್ಥರು ತಾವೇ ಖುದ್ದಾಗಿ ಉಚಿತವಾಗಿ ಶ್ರಮದಾನ ಮಾಡಿದರು. ಇದಕ್ಕೆ ಮಹಾರಾಷ್ಟ್ರ ಸರ್ಕಾರದ ಉದ್ಯೋಗ ಖಾತರಿ ಯೋಜನೆಯ ಬೆಂಬಲವೂ ಸಿಕ್ಕಿತು.ಈ ನಿರಂತರ ಪ್ರಯತ್ನದ ಫಲವಾಗಿ, ಒಂದು ಕಾಲದಲ್ಲಿ ನೀರಿಲ್ಲದಿದ್ದ ಈ ಗ್ರಾಮದಲ್ಲಿ ಇಂದು ಭೂಮಿಯ ಒಳಗಿನ ನೀರಿನ ಮಟ್ಟ ಕೇವಲ 30 ರಿಂದ 35 ಅಡಿಗೆ ತಲುಪಿದೆ.

ನೀರು ಉಳಿಸಲು ಬೆಳೆಗಳ ಬದಲಾವಣೆ ಗ್ರಾಮಸ್ಥರು ಕೇವಲ ನೀರನ್ನು ಸಂಗ್ರಹಿಸಲಿಲ್ಲ, ಅದನ್ನು ಜಾಣ್ಮೆಯಿಂದ ಬಳಸಲು ಕಲಿತರು. ಹೆಚ್ಚು ನೀರು ಬೇಡುವ ಭತ್ತ, ಕಬ್ಬು ಮತ್ತು ಜೋಳದಂತಹ ಬೆಳೆಗಳನ್ನು ಗ್ರಾಮದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಯಿತು. ಬದಲಾಗಿ ಕಡಿಮೆ ನೀರಿನಲ್ಲಿ ಬೆಳೆಯುವ, ಹೆಚ್ಚು ಲಾಭ ನೀಡುವ ಆಲೂಗಡ್ಡೆ ಮತ್ತು ಈರುಳ್ಳಿಗಳನ್ನು ಬೆಳೆಯಲು ಆರಂಭಿಸಿದರು.

ಇಂದು ಹಿವರೆ ಬಜಾರ್‌ನ ರೈತರು ಮಳೆಗಾಗಿ ಕಾಯುತ್ತಾ ಕೂರುವುದಿಲ್ಲ. ಸರಿಯಾದ ಜಲ ನಿರ್ವಹಣೆ ಹಾಗೂ ಸ್ವಚ್ಛತೆಯಿಂದಾಗಿ ಇಡೀ ಗ್ರಾಮ ಹಸಿರಾಗಿದೆ ಮತ್ತು ಸೊಳ್ಳೆ ಮುಕ್ತವಾಗಿದೆ. ಬಡತನದಿಂದ ಕೋಟ್ಯಧಿಪತಿಗಳ ಹಳ್ಳಿಯಾಗಿ ಬದಲಾಗಿರುವ ಹಿವರೆ ಬಜಾರ್ ಇಡೀ ದೇಶಕ್ಕೆ ಮಾದರಿಯಾಗಿದೆ.

The post ಸೊಳ್ಳೆ ಹಿಡಿದು ಕೊಟ್ರೆ ಸಿಗುತ್ತೆ 400 ರೂ ಬಹುಮಾನ! appeared first on Good News 24x7.

]]>
ಕುಮಾರಸ್ವಾಮಿ ಗಂಭೀರ ಆರೋಪ, ಆಗಿದ್ದೇನು? https://www.goodnews24x7.com/kumaraswamy-makes-seriokumaraswamy-makes-serious-allegations-what-happenedus-allegations-what-happened/ Thu, 02 Jul 2026 11:43:42 +0000 https://www.goodnews24x7.com/?p=9735 ರಾಮನಗರದಲ್ಲಿ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪ ಕಂಡುಬಂದಿರುವ ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕೂಡ ಮಾತನಾಡಿದ್ದು, ಕಳ್ಳ ಮತದಾರರನ್ನ ಒಂದೆಡೆ ಕೂರಿಸಿ ಎಸ್​ಐಆರ್​ ಮಾಡುತ್ತಿದ್ದಾರೆ. ಈ ಬಗ್ಗೆ ಚುನಾವಣಾ…

The post ಕುಮಾರಸ್ವಾಮಿ ಗಂಭೀರ ಆರೋಪ, ಆಗಿದ್ದೇನು? appeared first on Good News 24x7.

]]>

ರಾಮನಗರದಲ್ಲಿ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪ ಕಂಡುಬಂದಿರುವ ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕೂಡ ಮಾತನಾಡಿದ್ದು, ಕಳ್ಳ ಮತದಾರರನ್ನ ಒಂದೆಡೆ ಕೂರಿಸಿ ಎಸ್​ಐಆರ್​ ಮಾಡುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ರಾಮನಗರದಲ್ಲಿ SIR ಪ್ರಕ್ರಿಯೆ ಬಗ್ಗೆ ಆಕ್ಷೇಪ
ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪ
ಸಮುದಾಯ ಭವನದಲ್ಲಿ ಕೂತು ಗಣತಿ ನಮೂನೆ ವಿತರಣೆ
ರಾಮನಗರ, ಜುಲೈ 02: ರಾಜ್ಯದಲ್ಲಿ ಜೂನ್​​ 30ರಿಂದ ಮತ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಮತದಾರರು ಸ್ವಯಂಪ್ರೇರಿತರಾಗಿ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಿದ್ದಾರೆ. ಆದರೆ ಇತ್ತ ರಾಮನಗರದಲ್ಲಿ SIR ಪ್ರಕ್ರಿಯೆ ಬಗ್ಗೆ ಆಕ್ಷೇಪಗಳು ಕೇಳಿಬಂದಿವೆ. ಬಿಎಲ್‌ಒಗಳ ಕರ್ತವ್ಯ ಲೋಪದ ಗಂಭೀರ ಆರೋಪಗಳು ಕೇಳಿಬಂದಿವೆ. ಹೀಗಾಗಿ ರಾಮನಗರ ಕ್ಷೇತ್ರದ ಪ್ರಸ್ತುತ SIR ಪ್ರಕ್ರಿಯೆ ತಕ್ಷಣ ಸ್ಥಗಿತಗೊಳಿಸುವಂತೆ ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪ
ರಾಮನಗರದಲ್ಲಿ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪಗಳು ಕಂಡುಬಂದಿರುವ ಗಂಭೀರ ಆರೋಪಗಳು ಕೇಳಿಬಂದಿವೆ. ಬಿಎಲ್​ಒಗಳು ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಆಯೋಗದ ಗಣತಿ ನಮೂನೆಗಳನ್ನು ವಿತರಿಸುವ ಬದಲಿಗೆ, ಸಮುದಾಯ ಭವನದಲ್ಲೇ ಕುಳಿತು ವಿತರಣೆ ಮಾಡುತ್ತಿದ್ದಾರೆ. ಇದು ಮನೆ ಮನೆ ಪರಿಶೀಲನೆಯ ಮೂಲ ಉದ್ದೇಶವನ್ನೇ ಬುಡಮೇಲು ಮಾಡುತ್ತದೆ ಎಂಬ ಆರೋಪಗಳು ಕೇಳಿಬಂದಿವೆ.

ಕಳ್ಳ ಮತದಾರರನ್ನ ಒಂದು ಕಡೆ ಕೂರಿಸಿ ಎಸ್​ಐಆರ್​ ಮಾಡುತ್ತಿದ್ದಾರೆ: ಹೆಚ್​ಡಿ ಕುಮಾರಸ್ವಾಮಿ
ಇನ್ನು ರಾಮನಗರದಲ್ಲಿ SIR ಪ್ರಕ್ರಿಯೆ ಲೋಪ ಕಂಡುಬಂದ ಬಗ್ಗೆ ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಕೂಡ ಮಾಡಿದ್ದಾರೆ. ಈ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ರಾಮನಗರದಲ್ಲಿ ಬಿಎಲ್‌ಒಗಳು ಸಾವಿರಾರು ಜನರನ್ನ ಸಮುದಾಯ ಭವನದಲ್ಲೇ ಕರೆಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಕಳ್ಳ ಮತದಾರರನ್ನ ಒಂದೇ ಕಡೆ ಕೂರಿಸಿ ಎಸ್​ಐಆರ್​ ಮಾಡುತ್ತಿದ್ದಾರೆ. ನಮ್ಮನ್ನ ರಾಮನಗರದಿಂದ ಹೊರಹಾಕುವ ಬಗ್ಗೆ ಮಾತಾಡಿದ್ದಾರೆ. ನಮ್ಮನ್ನ ಹೊರಹಾಕುವುದಕ್ಕೆ ಆಗಲ್ಲ. ಬೇರೆ ರಾಜ್ಯದ ಬಗ್ಗೆ ಮಾತಾಡುತ್ತಾರೆ. ಇದು ಅಧಿಕಾರಿಗಳ ವೈಪಲ್ಯ. ಸಿಎಂ ಪ್ರಭಾವ ಬೀರಿ ಕೆಲಸ ಮಾಡುತ್ತಿದ್ದಾರೆ. ಇದರ ಬಗ್ಗೆ ಚುನಾವಣಾ ಆಯೋಗ ಕೂಡ ಗಮನ ಹರಿಸಬೇಕು. ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತೇನೆ, ಗೃಹ ಸಚಿವರ ಗಮನಕ್ಕೂ ತರುತ್ತೇನೆ ಎಂದಿದ್ದಾರೆ.

ಕಳ್ಳಮತದಾನ ಸೃಷ್ಟಿ ಮಾಡುವವರ ವಿರುದ್ಧ ಕಠಿಣ ಕ್ರಮ‌ಕ್ಕೆ ಒತ್ತಾಯ
ರಾಮನಗರದ ಬಿಡದಿ ಹೋಬಳಿಯ ಕೇತಗನಹಳ್ಳಿಯಲ್ಲಿ ನಮ್ಮ ಕುಟುಂಬದ ಮತ ಇದೆ. ಮುಖ್ಯಮಂತ್ರಿಗಳೇ ಕಳ್ಳಮತದಾನ ಸೃಷ್ಟಿ ಮಾಡುತ್ತಿದ್ದಾರೆ. ಇಂತವರ ವಿರುದ್ಧ ಕಠಿಣ ಕ್ರಮ‌ ತೆಗೆದಕೊಳ್ಳಬೇಕು. ಇದು ಸರ್ಕಾರದ ದುರ್ಬಳಕೆ. ಈ ಕೆಲಸ ನಿರ್ವಹಣೆ ಮಾಡುತ್ತಿರುವುದು ರಾಜ್ಯ ಸರ್ಕಾರ, ಸಿಎಂ ಇದಕ್ಕೆ ಪ್ರೇರೆಪಣೆ. ಚುನಾವಣೆ ಆಯೋಗ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಪ್ರಾಮಾಣಿಕವಾಗಿ ಎಸ್​ಐಆರ್​ ಮಾಡಬೇಕು ಎಂದು ಒತ್ತಾಯಿಸಿದರು.

ಮುತುವರ್ಜಿ ವಹಿಸಿ ಎಸ್​ಐಆರ್​ನಲ್ಲಿ ಸರಿಯಾಗಿ ಮಾಹಿತಿ ಕೊಡಿ ಅಂತ ಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಮತದಾರರ ಲಿಸ್ಟ್​ನಿಂದ ಹೊರ ಹೋದರೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗುತ್ತೀರಿ. ಈ ದೊಡ್ಡ ಜಾಹೀರಾತಿನ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ಎಸ್​ಐಆರ್​ ಬಗ್ಗೆ ಕಟುವಾಗಿ ಮಾತಾಡುತ್ತಿದ್ದಾರೆ. ಇದು ಸಿಎಂ ಪ್ರೇರಣೆ ಇರಬೇಕು ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕಿಡಿಕಾರಿದರು.

The post ಕುಮಾರಸ್ವಾಮಿ ಗಂಭೀರ ಆರೋಪ, ಆಗಿದ್ದೇನು? appeared first on Good News 24x7.

]]>
ಜನ ನಾಯಗನ್’ ಚಿತ್ರಕ್ಕೆ ಕೊನೆಗೂ ಸಿಕ್ತು ಸೆನ್ಸಾರ್ ಪತ್ರ? https://www.goodnews24x7.com/has-the-film-jana-nayagan-finally-received-a-censor-certificate/ Thu, 02 Jul 2026 06:00:06 +0000 https://www.goodnews24x7.com/?p=9732 ದಳಪತಿ ವಿಜಯ್ ಅಭಿನಯದ ಕೊನೆಯ ಚಿತ್ರ ‘ಜನ ನಾಯಕನ್’ ಬಿಡುಗಡೆ ವಿಳಂಬವಾಗುತ್ತಿರುವುದು ಅಭಿಮಾನಿಗಳಿಗೆ ಭಾರಿ ಬೇಸರ ಮೂಡಿಸಿದೆ. ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ‘A’ ಪ್ರಮಾಣಪತ್ರ ಸಿಕ್ಕಿದೆ ಎಂಬ ವದಂತಿಗಳ ಬೆನ್ನಲ್ಲೇ, ಸಿನಿಮಾ ಜುಲೈ ಮಧ್ಯಭಾಗ ಅಥವಾ ಆಗಸ್ಟ್ 7 ರಂದು ತೆರೆಗೆ…

The post ಜನ ನಾಯಗನ್’ ಚಿತ್ರಕ್ಕೆ ಕೊನೆಗೂ ಸಿಕ್ತು ಸೆನ್ಸಾರ್ ಪತ್ರ? appeared first on Good News 24x7.

]]>

ದಳಪತಿ ವಿಜಯ್ ಅಭಿನಯದ ಕೊನೆಯ ಚಿತ್ರ ‘ಜನ ನಾಯಕನ್’ ಬಿಡುಗಡೆ ವಿಳಂಬವಾಗುತ್ತಿರುವುದು ಅಭಿಮಾನಿಗಳಿಗೆ ಭಾರಿ ಬೇಸರ ಮೂಡಿಸಿದೆ. ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ‘A’ ಪ್ರಮಾಣಪತ್ರ ಸಿಕ್ಕಿದೆ ಎಂಬ ವದಂತಿಗಳ ಬೆನ್ನಲ್ಲೇ, ಸಿನಿಮಾ ಜುಲೈ ಮಧ್ಯಭಾಗ ಅಥವಾ ಆಗಸ್ಟ್ 7 ರಂದು ತೆರೆಗೆ ಬರಬಹುದು ಎನ್ನಲಾಗುತ್ತಿದೆ. ಸಂಕ್ರಾಂತಿ ಬಿಡುಗಡೆಯಿಂದ ಮುಂದೂಡಲ್ಪಟ್ಟಿರುವ ಈ ಹೈ-ಬಜೆಟ್ ಚಿತ್ರದ ಗೊಂದಲಗಳಿಗೆ ತೆರೆ ಎಳೆಯಲು ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಅಧಿಕೃತ ಪ್ರಕಟಣೆ ನೀಡಬೇಕಿದೆ.

‘ಜನ ನಾಯಗನ್’ ಚಿತ್ರಕ್ಕೆ ಕೊನೆಗೂ ಸಿಕ್ತು ಸೆನ್ಸಾರ್ ಪತ್ರ? ರಿಲೀಸ್ ಬಗ್ಗೆ ಹರಿದಾಡ್ತಿದೆ ಹೊಸ ಸುದ್ದಿ

ಸೆನ್ಸಾರ್ ಮಂಡಳಿಯಿಂದ ‘A’ ಪ್ರಮಾಣಪತ್ರ?:
‘ಜನ ನಾಯಗನ್’ ಚಿತ್ರದ ರಿಲೀಸ್ ಕುರಿತು ಹರಿದಾಡುತ್ತಿರುವ ಹೊಸ ಸುದ್ದಿ
ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯ ಅಧಿಕೃತ ಪ್ರಕಟಣೆಗಾಗಿ ಕಾಯುತ್ತಿರುವ ಚಿತ್ರಪ್ರೇಮಿಗಳು
ಅಂದುಕೊಂಡಂತೆ ನಡೆದಿದ್ದರೆ ದಳಪತಿ ವಿಜಯ್ (Thalapathy Vijay) ಅಭಿನಯದ ಕೊನೆಯ ಚಿತ್ರ ‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಿ ಆರು ತಿಂಗಳು ಕಳೆದಿರಬೇಕಿತ್ತು. ಆರಂಭದಲ್ಲಿ ಈ ಚಿತ್ರವನ್ನು 2026ರ ಸಂಕ್ರಾಂತಿಗೆ ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆದರೆ ಹಲವು ಕಾರಣಗಳಿಂದ ಸಿನಿಮಾ ಮುಂದೂಡಲ್ಪಟ್ಟಿದೆ. ಚಿತ್ರತಂಡ ಇದುವರೆಗೆ ಯಾವುದೇ ಅಧಿಕೃತ ಬಿಡುಗಡೆ ದಿನಾಂಕವನ್ನು ಪ್ರಕಟಿಸಿಲ್ಲ. ಈಗ ಚಿತ್ರಕ್ಕೆ ಸೆನ್ಸಾರ್ ಆಗಿದೆ ಎಂದು ವರದಿ ಆಗಿದೆ.

ಸಿನಿಮಾ ಬಗ್ಗೆ ಅಧಿಕೃತ ಮಾಹಿತಿ ಇಲ್ಲದ ಕಾರಣ ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ಹೊಸ ವದಂತಿಗಳು ಹರಿದಾಡುತ್ತಿವೆ. ಈಗಾಗಲೇ ಸಿನಿಮಾ ಬಗ್ಗೆ ಹಲವು ಸುದ್ದಿಗಳು ಓಡಾಡಿವೆಹಹ. ಈ ಮೊದಲು ವಿಜಯ್ ಜನ್ಮದಿನದ ಅಂಗವಾಗಿ ಜೂನ್​ ಅಲ್ಲಿ ಸಿನಿಮಾ ತೆರೆಗೆ ಬರಲಿದೆ ಎಂದು ಹೇಳಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್ ಮಾಹಿತಿ ಪ್ರಕಾರ ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ‘A’ ಪ್ರಮಾಣಪತ್ರ ಸಿಕ್ಕಿದೆಯಂತೆ. ಹೀಗಾಗಿ ಸಿನಿಮಾ ಜುಲೈ ಮಧ್ಯಭಾಗದಲ್ಲಿ ತೆರೆಗೆ ಬರಬಹುದು ಎಂದು ಅಂದಾಜಿಸಲಾಗಿದೆ.

ಕೆಲವು ವರದಿಗಳ ಪ್ರಕಾರ ಆಗಸ್ಟ್ 7ರಂದು ಸಿನಿಮಾ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಕೂಡ ಹೇಳಲಾಗುತ್ತಿದೆ. ಈಗಾಗಲೇ ಚಿತ್ರ ಲೀಕ್ ಆಗಿ ಸಿನಿಮಾ ಮೇಲಿನ ಆಸಕ್ತಿಯೇ ಜನರಿಗೆ ಹೋಗಿದೆ. ಹೀಗಾಗಿ, ಒಂದರಿಂದ ಎರಡು ವಾರ ಮಾತ್ರ ಸಿನಿಮಾ ಪ್ರದರ್ಶನ ಕಂಡರೆ ಸಾಕು ಎಂಬುದು ತಂಡದ ಆಲೋಚನೆ ಎನ್ನಲಾಗುತ್ತಿದೆ. ಹೀಗಾಗಿ, ‘ಟಾಕ್ಸಿಕ್’ ರಿಲೀಸ್​​ಗೂ 20 ದಿನ ಮೊದಲು ಈ ಚಿತ್ರ ತೆರೆಗೆ ತರುವ ಆಲೋಚನೆ ತಂಡದ್ದಿರಬಹುದು.

ಅಧಿಕೃತ ಪ್ರಕಟಣೆಗೆ ಕಾಯುತ್ತಿರುವ ಅಭಿಮಾನಿಗಳು
ಚಿತ್ರತಂಡದಿಂದ ಈ ವರದಿಗಳಿಗೆ ಯಾವುದೇ ಅಧಿಕೃತ ಮುದ್ರೆ ಸಿಕ್ಕಿಲ್ಲ. ಈ ಹಿಂದೆ ಜೂನ್‌ನಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂಬ ಸುದ್ದಿಗಳು ಕೂಡ ಸುಳ್ಳಾಗಿದ್ದವು. ಗೊಂದಲಗಳಿಗೆ ತೆರೆ ಎಳೆಯಲು ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಶೀಘ್ರದಲ್ಲೇ ಅಧಿಕೃತ ದಿನಾಂಕ ಪ್ರಕಟಿಸಬೇಕಿದೆ.

 

ಎಚ್. ವಿನೋದ್ ನಿರ್ದೇಶನದ ಈ ಚಿತ್ರದಲ್ಲಿ ಪೂಜಾ ಹೆಗ್ಡೆ, ಬಾಬಿ ಡಿಯೋಲ್, ಮಮಿತಾ ಬೈಜು ಮತ್ತು ಪ್ರಕಾಶ್ ರಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅನಿರುದ್ಧ್ ರವಿಚಂದರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

The post ಜನ ನಾಯಗನ್’ ಚಿತ್ರಕ್ಕೆ ಕೊನೆಗೂ ಸಿಕ್ತು ಸೆನ್ಸಾರ್ ಪತ್ರ? appeared first on Good News 24x7.

]]>
ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ! https://www.goodnews24x7.com/mp-tejaswi-suryas-anger-against-the-state-government/ Tue, 30 Jun 2026 09:01:18 +0000 https://www.goodnews24x7.com/?p=9709 ಬೆಂಗಳೂರಿನ ಬಿಎಂಟಿಸಿ ಬಸ್‌ಗಳ ಕೊರತೆ ಹಾಗೂ ಪ್ರಯಾಣಿಕರ ನಿತ್ಯದ ಪರದಾಟದ ಕುರಿತು ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಐಟಿ ನಗರಿಯಲ್ಲಿ ಹೊಸ ಸರ್ಕಾರ ಮತ್ತು ಹೊಸ ಸಾರಿಗೆ ಸಚಿವರು ಬಂದರೂ ಪರಿಸ್ಥಿತಿ ಬದಲಾಗಿಲ್ಲ, ಬಸ್‌ಗಾಗಿ…

The post ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ! appeared first on Good News 24x7.

]]>

ಬೆಂಗಳೂರಿನ ಬಿಎಂಟಿಸಿ ಬಸ್‌ಗಳ ಕೊರತೆ ಹಾಗೂ ಪ್ರಯಾಣಿಕರ ನಿತ್ಯದ ಪರದಾಟದ ಕುರಿತು ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಐಟಿ ನಗರಿಯಲ್ಲಿ ಹೊಸ ಸರ್ಕಾರ ಮತ್ತು ಹೊಸ ಸಾರಿಗೆ ಸಚಿವರು ಬಂದರೂ ಪರಿಸ್ಥಿತಿ ಬದಲಾಗಿಲ್ಲ, ಬಸ್‌ಗಾಗಿ ಕಾಯುವುದು ಒಂದು ದೊಡ್ಡ ತಪಸ್ಸಾಗಿದೆ ಎಂದು ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು, ಜನರು ಕೆಲಸ ಮಾಡಬೇಕೋ ಅಥವಾ ರಸ್ತೆಯಲ್ಲೇ ಕಾಯಬೇಕೋ ಎಂದು ಸಿಎಂಗೆ ಪ್ರಶ್ನಿಸಿದ್ದಾರೆ.

ಬಿಎಂಟಿಸಿ ಬಸ್‌ಗಾಗಿ ಕಾಯುವುದು ಒಂದು ದೊಡ್ಡ ತಪಸ್ಸು! ರಾಜ್ಯ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ

ಬಿಎಂಟಿಸಿ ಬಸ್‌ಗಳ ಕೊರತೆ ಕುರಿತು ಸಂಸದ ತೇಜಸ್ವಿ ಸೂರ್ಯ ಅಸಮಾಧಾನ.
ಪ್ರಯಾಣಿಕರು ಗಂಟೆಗಟ್ಟಲೆ ಬಸ್‌ಗಾಗಿ ರಸ್ತೆಯಲ್ಲೇ ಕಾಯುವಂತಾಗಿದೆ ಎಂದು ಟೀಕೆ.
ಜನರು ಕೆಲಸ ಮಾಡಬೇಕೋ ಅಥವಾ ರಸ್ತೆಯಲ್ಲೇ ನಿಲ್ಲಬೇಕೋ ಎಂದು ಪ್ರಶ್ನೆ.
ಜೂನ್ 30,ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejaswi Surya) ಸೋಮವಾರ ಖುದ್ದು ಬಿಎಂಟಿಸಿ ಬಸ್ಸಿನಲ್ಲಿ ಕತ್ರಿಗುಪ್ಪೆಯಿಂದ ಬನಶಂಕರಿವರೆಗೆ ಪ್ರಯಾಣಿಸುವ ಸಂದರ್ಭದಲ್ಲಿ ಪ್ರಯಾಣಿಕರ ಅಳಲು ಆಲಿಸಿದ್ದರು. ಇದೀಗ ಬಿಎಂಟಿಸಿ ಬಸ್​ ಸ್ಟ್ಯಾಂಡ್​ ಒಂದರಲ್ಲಿ ಪ್ರಯಾಣಿಕರೊಂದಿಗೆ ಮಾತನಾಡಿ ಅಲ್ಲಿನ ದುಸ್ಥಿತಿಯ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಎಂಟಿಸಿ ಪ್ರಯಾಣಿಕರ ದೈನಂದಿನ ಪರದಾಟವನ್ನು ತಪಸ್ಸಿಗೆ ಹೋಲಿಸಿ ವಾಗ್ದಾಳಿ ನಡೆಸಿದ್ದಾರೆ.

ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ!

ಉತ್ತಮ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳಿಲ್ಲದೆ ಯಾವುದೇ ಸಾರಿಗೆ ವ್ಯವಸ್ಥೆ ಯಶಸ್ವಿಯಾಗಲು ಸಾಧ್ಯವಿಲ್ಲ. ಬೆಂಗಳೂರಿನಲ್ಲಿ ಬಸ್‌ಗಳ ಸಂಖ್ಯೆಯನ್ನು ಕನಿಷ್ಠ 15,000 ಕ್ಕೆ ಹೆಚ್ಚಿಸಬೇಕು. ನಗರದ ಯಾವುದೇ ಭಾಗದಲ್ಲಾದರೂ ಸರಿ, ಪ್ರತಿ ಪ್ರಜೆಗೆ ಐದು ನಿಮಿಷಗಳಲ್ಲಿ ಬಸ್ ಸಿಗುವಂತಾಗಲು ಖಾಸಗಿ ಸಹಭಾಗಿತ್ವವನ್ನು ಪ್ರೋತ್ಸಾಹಿಸಬೇಕು ಎಂದು ತೇಜಸ್ವಿ ಸೂರ್ಯ ಅವರು ಈ ಹಿಂದೆ ಮಾಡಿದ್ದ ಹಳೆಯ ಪೋಸ್ಟ್ ಅನ್ನು ನೆನಪಿಸಿಕೊಂಡಿದ್ದಾರೆ. ಆ ಪೋಸ್ಟ್ ಮಾಡಿ ಎಂಟು ತಿಂಗಳು ಕಳೆದಿದ್ದು, ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ, ಹೊಸ ಉಪಮುಖ್ಯಮಂತ್ರಿ ಹಾಗೂ ಹೊಸ ಸಾರಿಗೆ ಸಚಿವರು ಅಧಿಕಾರಕ್ಕೆ ಬಂದಿದ್ದರೂ ಬೆಂಗಳೂರಿನ ಬಿಎಂಟಿಸಿ ಸ್ಥಿತಿ ಮಾತ್ರ ಹಳೇ ಕಥೆಯನ್ನೇ ಮುಂದುವರಿಸಿದೆ ಎಂದು ಅವರು ಟೀಕಿಸಿದ್ದಾರೆ.

The post ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ! appeared first on Good News 24x7.

]]>
ಪತಿ ಕೊಂ*ದು ಕಥೆ ಕಟ್ಟಿದ್ದ ಪತ್ನಿ https://www.goodnews24x7.com/wife-who-fabricated-story-of-husbands-murder/ Mon, 29 Jun 2026 10:54:31 +0000 https://www.goodnews24x7.com/?p=9702 29 ಜೂನ್ 2026 , ಮೈಸೂರು: ಮೈಸೂರಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾ*ವಿನ ಪ್ರಕರಣ ಕೊ*ಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ ಅವರೇ ಗಂಡನನ್ನು ಹ*ತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.…

The post ಪತಿ ಕೊಂ*ದು ಕಥೆ ಕಟ್ಟಿದ್ದ ಪತ್ನಿ appeared first on Good News 24x7.

]]>

29 ಜೂನ್ 2026 , ಮೈಸೂರು: ಮೈಸೂರಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾ*ವಿನ ಪ್ರಕರಣ ಕೊ*ಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ ಅವರೇ ಗಂಡನನ್ನು ಹ*ತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದಂಪತಿಗೆ ಮಕ್ಕಳಿರಲಿಲ್ಲ ಸಾಂಸಾರಿಕ ಕಲಹ, ಹಣಕಾಸು ಮತ್ತು ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು 50 ವರ್ಷದ ನಿತ್ಯಾನಂದ ಅವರು ಖಾಸಗಿ ಮಹೀಂದ್ರಾ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿ ಸುಶೀಲ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದರು. ಎನ್ನಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ನಿತ್ಯಾನಂದ ಪ್ರತಿನಿತ್ಯ ಮದ್ಯಪಾನ ಮಾಡುತ್ತಿದ್ದರು. ಶನಿವಾರ ರಾತ್ರಿ ಕೂಡ ಸ್ನೇಹಿತರೊಂದಿಗೆ ಮದ್ಯಪಾನ ಮಾಡಿ ಮನೆಗೆ ತೆರಳಿದ್ದರು. ಬಳಿಕ ಮದ್ಯದ ಅಮಲಿನಲ್ಲಿ ಮಲಗಿದ್ದ ವೇಳೆ ಪತ್ನಿ ಸುಶೀಲ ಕುತ್ತಿಗೆಗೆ ಹಗ್ಗ ಬಿಗಿದು ಹ*ತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕೊ*ಲೆ ಬಳಿಕ ಘಟನೆಗೆ ಹೃದಯಾಘಾತದ ಬಣ್ಣ ನೀಡಲು ಸುಶೀಲ ಯತ್ನಿಸಿದ್ದಾಳೆ ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಬಹಳ ಹೊತ್ತಾದರೂ ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ನಿತ್ಯಾನಂದ ಅವರ ಸ್ನೇಹಿತ ದರ್ಶನ್ ಹಲವು ಬಾರಿ ಕರೆ ಮಾಡಿದ್ದರು. ಕರೆಗಳಿಗೆ ಸಮರ್ಪಕ ಉತ್ತರ ಸಿಗದ ಕಾರಣ ಅವರು ಮನೆ ಬಳಿ ಬಂದು ಬಾಗಿಲು ತಟ್ಟಿದರೂ ಸುಶೀಲ ಬಾಗಿಲು ತೆರೆಯಲಿಲ್ಲ ಎಂದು ತಿಳಿದುಬಂದಿದೆ.

ಬಳಿಕ ಸುಶೀಲ ಅವರು ನಿತ್ಯಾನಂದ ಅವರ ಅಣ್ಣನಿಗೆ ಕರೆ ಮಾಡಿ, “ನಿಮ್ಮ ತಮ್ಮನಿಗೆ ಹೃದಯಾಘಾತವಾಗಿದೆ” ಎಂದು ಮಾಹಿತಿ ನೀಡಿದ್ದಾರೆ. ತಕ್ಷಣ ಮನೆಗೆ ಆಗಮಿಸಿದ ನಿತ್ಯಾನಂದ ಅವರ ಅಣ್ಣ ಮೃ*ತದೇಹವನ್ನು ಪರಿಶೀಲಿಸಿದಾಗ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳು ಕಂಡುಬಂದಿವೆ.

ಇದರಿಂದ ಅನುಮಾನಗೊಂಡ ಅವರು ಕುವೆಂಪುನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಸುಶೀಲ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲೇ ಕೊ*ಲೆ ಮಾಡಿರುವ ವಿಚಾರವನ್ನು ಸುಶೀಲ ಒಪ್ಪಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಮ*ರಣೋತ್ತರ ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆಯ ಬಳಿಕ ಪ್ರಕರಣದ ಕುರಿತು ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

The post ಪತಿ ಕೊಂ*ದು ಕಥೆ ಕಟ್ಟಿದ್ದ ಪತ್ನಿ appeared first on Good News 24x7.

]]>
ಇನ್ಮೇಲೆ ಪದೇ ಪದೇ ಕರೆಂಟ್ ಹೋಗಲ್ಲ https://www.goodnews24x7.com/no-more-frequent-power-outages/ Sat, 27 Jun 2026 07:38:22 +0000 https://www.goodnews24x7.com/?p=9691 ವಿದ್ಯುತ್ ಲೈನ್‌ಗಳ ತಪಾಸಣೆಗೆ ಲಗ್ಗೆ ಇಟ್ಟ ಅತ್ಯಾಧುನಿಕ ಡ್ರೋನ್‌ಗಳು; ಶೇ. 85 ರಷ್ಟು ತಗ್ಗಿದ ವಿದ್ಯುತ್ ವ್ಯತ್ಯಯ ಕೆಪಿಟಿಸಿಎಲ್ ರಾಜ್ಯದಲ್ಲಿ ವಿದ್ಯುತ್ ಪ್ರಸರಣ ಮಾರ್ಗಗಳ ತಪಾಸಣೆಗೆ ಡ್ರೋನ್ ತಂತ್ರಜ್ಞಾನ ಅಳವಡಿಸಿಕೊಂಡಿದೆ. ಇದರಿಂದ ತಾಂತ್ರಿಕ ದೋಷಗಳಿಂದ ಉಂಟಾಗುವ ವಿದ್ಯುತ್ ವ್ಯತ್ಯಯದಲ್ಲಿ ಶೇ. 85ರಷ್ಟು…

The post ಇನ್ಮೇಲೆ ಪದೇ ಪದೇ ಕರೆಂಟ್ ಹೋಗಲ್ಲ appeared first on Good News 24x7.

]]>

ವಿದ್ಯುತ್ ಲೈನ್‌ಗಳ ತಪಾಸಣೆಗೆ ಲಗ್ಗೆ ಇಟ್ಟ ಅತ್ಯಾಧುನಿಕ ಡ್ರೋನ್‌ಗಳು; ಶೇ. 85 ರಷ್ಟು ತಗ್ಗಿದ ವಿದ್ಯುತ್ ವ್ಯತ್ಯಯ ಕೆಪಿಟಿಸಿಎಲ್ ರಾಜ್ಯದಲ್ಲಿ ವಿದ್ಯುತ್ ಪ್ರಸರಣ ಮಾರ್ಗಗಳ ತಪಾಸಣೆಗೆ ಡ್ರೋನ್ ತಂತ್ರಜ್ಞಾನ ಅಳವಡಿಸಿಕೊಂಡಿದೆ. ಇದರಿಂದ ತಾಂತ್ರಿಕ ದೋಷಗಳಿಂದ ಉಂಟಾಗುವ ವಿದ್ಯುತ್ ವ್ಯತ್ಯಯದಲ್ಲಿ ಶೇ. 85ರಷ್ಟು ಭಾರಿ ಇಳಿಕೆ ಕಂಡುಬಂದಿದೆ. 1.5 ಲಕ್ಷಕ್ಕೂ ಹೆಚ್ಚು ದೋಷಗಳನ್ನು ಮೊದಲೇ ಪತ್ತೆಹಚ್ಚಿ ಸರಿಪಡಿಸಲಾಗಿದೆ. ಇದು ನಿರಂತರ ಮತ್ತು ಗುಣಮಟ್ಟದ ವಿದ್ಯುತ್ ಸರಬರಾಜಿಗೆ ಕೆಪಿಟಿಸಿಎಲ್‌ನ ಮಹತ್ವದ ಹೆಜ್ಜೆಯಾಗಿದೆ.

ವಿದ್ಯುತ್ ಪ್ರಸರಣ ಲೈನ್‌ಗಳ ನಿಖರ ತಪಾಸಣೆಗಾಗಿ ಕೆಪಿಟಿಸಿಎಲ್ ಅತ್ಯಾಧುನಿಕ ಡ್ರೋನ್ ತಂತ್ರಜ್ಞಾನ

ವಿದ್ಯುತ್ ವ್ಯತ್ಯಯಗಳ ಸಂಖ್ಯೆಯಲ್ಲಿ ಭಾರಿ ಪ್ರಮಾಣದ ಕುಸಿತ ಕಂಡಿದೆ
ಸುರಕ್ಷತಾ ಜಾಗೃತಿಗೆ ಎಸ್ಕಾಂಗಳ ಪ್ರತಿ ಡಿವಿಷನ್‌ಗೆ ಸಿಗಲಿದೆ 1 ಲಕ್ಷ ರೂ. ಫಂಡ್
ಬೆಂಗಳೂರು, ಜೂ.27: ರಾಜ್ಯದಲ್ಲಿ ನಿರಂತರ ಮತ್ತು ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಮಹತ್ತರ ತಾಂತ್ರಿಕ ಹೆಜ್ಜೆಯನ್ನಿಟ್ಟಿದೆ. ರಾಜ್ಯಾದ್ಯಂತ ಇರುವ ಹೈ ವೋಲ್ಟೇಜ್ (HV) ಮತ್ತು ಎಕ್ಸ್‌ಟ್ರಾ ಹೈ ವೋಲ್ಟೇಜ್ (EHV) ವಿದ್ಯುತ್ ಪ್ರಸರಣ ಲೈನ್‌ಗಳ ನಿಖರ ತಪಾಸಣೆಗಾಗಿ ಕೆಪಿಟಿಸಿಎಲ್ ಅತ್ಯಾಧುನಿಕ ಡ್ರೋನ್ ತಂತ್ರಜ್ಞಾನವನ್ನು (Drone Technology) ಯಶಸ್ವಿಯಾಗಿ ಬಳಸಿಕೊಳ್ಳುತ್ತಿದೆ. ಈ ಹೊಸ ತಂತ್ರಜ್ಞಾನದ ಬಳಕೆಯಿಂದಾಗಿ ರಾಜ್ಯದಲ್ಲಿ ತಾಂತ್ರಿಕ ದೋಷಗಳಿಂದ ಉಂಟಾಗುತ್ತಿದ್ದ ವಿದ್ಯುತ್ ವ್ಯತ್ಯಯಗಳ ಸಂಖ್ಯೆಯಲ್ಲಿ ಭಾರಿ ಪ್ರಮಾಣದ ಕುಸಿತ ಕಂಡಿದೆ ಎಂದು ನಿಗಮದ ಅಧಿಕೃತ ಪ್ರಕಟಣೆ ತಿಳಿಸಿದೆ.

ಕೆಪಿಟಿಸಿಎಲ್ ಅಧಿಕಾರಿಗಳು ಇದುವರೆಗೆ ಸುಮಾರು 11,000 ವಿದ್ಯುತ್ ಪ್ರಸರಣ ಟವರ್​​ಗಳನ್ನು ಡ್ರೋನ್ ಮೂಲಕ ಯಶಸ್ವಿಯಾಗಿ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಬರೋಬ್ಬರಿ 1.5 ಲಕ್ಷಕ್ಕೂ ಹೆಚ್ಚು ತಾಂತ್ರಿಕ ದೋಷಗಳನ್ನು ಮೊದಲೇ ಪತ್ತೆಹಚ್ಚಿ, ಅವುಗಳನ್ನು ಯಶಸ್ವಿಯಾಗಿ ಸರಿಪಡಿಸಲಾಗಿದೆ. ಈ ಮುನ್ನೆಚ್ಚರಿಕಾ ಕ್ರಮಗಳಿಂದಾಗಿ ಪ್ರಸರಣ ವಲಯದ ವಿದ್ಯುತ್ ವ್ಯತ್ಯಯ ಪ್ರಕರಣಗಳ ಸಂಖ್ಯೆ 519 ರಿಂದ ಕೇವಲ 73 ಕ್ಕೆ ಕುಸಿದಿದೆ. ಅಂದರೆ ವಿದ್ಯುತ್ ಕಡಿತದಲ್ಲಿ ಶೇ. 85 ರಷ್ಟು ಬೃಹತ್ ಇಳಿಕೆ ಕಂಡಂತಾಗಿದೆ. ಇದುವರೆಗೆ ಒಟ್ಟು 3,370 ಕಿಲೋಮೀಟರ್‌ಗಿಂತಲೂ ಹೆಚ್ಚು ಉದ್ದದ ವಿದ್ಯುತ್ ಮಾರ್ಗವನ್ನು ಡ್ರೋನ್ ಮೂಲಕ ಸಮೀಕ್ಷೆ ಮಾಡಲಾಗಿದ್ದು, ಇದರಲ್ಲಿ 2,500 ಕಿ.ಮೀ ಗೂ ಹೆಚ್ಚು 220 KV ಲೈನ್‌ಗಳು ಮತ್ತು 843 ಕಿ.ಮೀ ಉದ್ದದ 400 KV ಲೈನ್‌ಗಳು ಸೇರಿವೆ.

ನಮ್ಮ ಗಮನವು ಈಗ ವಿದ್ಯುತ್ ದೋಷ ಸಂಭವಿಸಿದ ನಂತರ ದುರಸ್ತಿ ಮಾಡುವುದಕ್ಕಿಂತ, ದೋಷ ಬರುವ ಮುನ್ನವೇ ಅಪಾಯಗಳನ್ನು ಗುರುತಿಸಿ ತಡೆಯುವುದರ ಕಡೆಗೆ ಬದಲಾಗಿದೆ ಎಂದು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ವಿ. ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ. ಡ್ರೋನ್‌ಗಳಲ್ಲಿ ಅಳವಡಿಸಲಾಗಿರುವ ಹೈ-ರೆಸಲ್ಯೂಶನ್ ಕ್ಯಾಮೆರಾಗಳು, ಥರ್ಮಲ್ ಇಮೇಜಿಂಗ್ ಸಿಸ್ಟಮ್ (ಶಾಖ ಪತ್ತೆ ಹಚ್ಚುವಿಕೆ) ಮತ್ತು ಲಿಡಾರ್ ಸೆನ್ಸಾರ್‌ಗಳು ದಟ್ಟವಾದ ಕಾಡುಗಳು, ಗುಡ್ಡಗಾಡು ಪ್ರದೇಶಗಳು ಹಾಗೂ ಜನನಿಬಿಡ ನಗರ ಪ್ರದೇಶಗಳಲ್ಲಿ ಹಾದುಹೋಗುವ ವಿದ್ಯುತ್ ತಂತಿಗಳು ಮತ್ತು ಇನ್ಸುಲೇಟರ್‌ಗಳನ್ನು ಅತ್ಯಂತ ಹತ್ತಿರದಿಂದ ಪರಿಶೀಲಿಸುತ್ತವೆ. ಲೂಸ್ ಕನೆಕ್ಷನ್‌ಗಳಿಂದಾಗಿ ಉಂಟಾಗುವ ಅಸಹಜ ತಾಪಮಾನವನ್ನು ಈ ಥರ್ಮಲ್ ಕ್ಯಾಮೆರಾಗಳು ತಕ್ಷಣವೇ ಪತ್ತೆಹಚ್ಚುತ್ತವೆ. ಈ ದತ್ತಾಂಶಗಳನ್ನು ಕೆಪಿಟಿಸಿಎಲ್‌ನ ಡಿಜಿಟಲ್ ವ್ಯವಸ್ಥೆಗೆ ಸೇರಿಸಲಾಗುತ್ತಿದ್ದು, ಶೀಘ್ರದಲ್ಲೇ ಬರಲಿರುವ ‘ಡಿಜಿಟಲ್ ಟ್ವಿನ್ ಪ್ಲಾಟ್‌ಫಾರ್ಮ್’ ಮೂಲಕ ಕೇಂದ್ರ ನಿಯಂತ್ರಣ ಕೊಠಡಿಯಿಂದಲೇ ಇಡೀ ರಾಜ್ಯದ ವಿದ್ಯುತ್ ಜಾಲವನ್ನು ರಿಯಲ್-ಟೈಮ್‌ನಲ್ಲಿ ಮೇಲ್ವಿಚಾರಣೆ ಮಾಡಬಹುದು.

ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಈ ಕುರಿತು ಮಾತನಾಡಿ, “ಕರ್ನಾಟಕದ ಸುಮಾರು 45,000 ಕಿಲೋಮೀಟರ್ ವ್ಯಾಪ್ತಿಯ ವಿಶಾಲವಾದ ವಿದ್ಯುತ್ ಪ್ರಸರಣ ಜಾಲವನ್ನು ಈ ಹಿಂದಿನ ವಿಧಾನಗಳಲ್ಲಿ ಪರಿಶೀಲಿಸುವುದು ಅತ್ಯಂತ ಕಠಿಣ ಮತ್ತು ಸಮಯ ತೆಗೆದುಕೊಳ್ಳುವ ಕೆಲಸವಾಗಿತ್ತು. ಆದರೆ ಥರ್ಮಲ್ ಇಮೇಜಿಂಗ್ ಮತ್ತು ಲಿಡಾರ್ ತಂತ್ರಜ್ಞಾನದ ಡ್ರೋನ್‌ಗಳ ಮೂಲಕ ನಾವು ಕೇವಲ ಕೆಲವೇ ಗಂಟೆಗಳಲ್ಲಿ 360 ಡಿಗ್ರಿಯ ಸಮಗ್ರ ತಪಾಸಣೆ ನಡೆಸಬಹುದು. ಬರಿಗಣ್ಣಿಗೆ ಕಾಣಿಸದ ಅತ್ಯಂತ ಸಣ್ಣ ದೋಷಗಳನ್ನೂ ಇವು ಪತ್ತೆಹಚ್ಚುತ್ತವೆ. ಈ ತಪಾಸಣೆ ಆಧಾರಿತದಿಂದ ವಿದ್ಯುತ್ ವ್ಯತ್ಯಯದಲ್ಲಿ ಶೇ. 85 ರಷ್ಟು ಇಳಿಕೆ ಸಾಧಿಸಿರುವುದು ಕೆಪಿಟಿಸಿಎಲ್‌ನ ಡಿಜಿಟಲ್ ರೂಪಾಂತರದ ಹಾದಿಯಲ್ಲಿ ಒಂದು ದೊಡ್ಡ ಮೈಲಿಗಲ್ಲು,” ಎಂದು ಶ್ಲಾಘಿಸಿದ್ದಾರೆ.

ಸುರಕ್ಷತಾ ಜಾಗೃತಿಗೆ ಎಸ್ಕಾಂಗಳ ಪ್ರತಿ ಡಿವಿಷನ್‌ಗೆ ಸಿಗಲಿದೆ 1 ಲಕ್ಷ ರೂ. ಫಂಡ್

ರಾಜ್ಯದಲ್ಲಿ ವಿದ್ಯುತ್ ಅಪಘಾತಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕರಲ್ಲಿ ವಿದ್ಯುತ್ ಸುರಕ್ಷತೆಯ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಲು ಇಂಧನ ಇಲಾಖೆಯು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಉದ್ದೇಶಕ್ಕಾಗಿ ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳು ತಮ್ಮ ವ್ಯಾಪ್ತಿಯ ಪ್ರತಿ ವಿಭಾಗಕ್ಕೆ ತಲಾ 1 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡಲಿವೆ ಎಂದು ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಪ್ರಕಟಿಸಿದ್ದಾರೆ. ವಿದ್ಯುತ್ ಪರಿವೀಕ್ಷಣಾಲಯದ ವತಿಯಿಂದ ಆಯೋಜಿಸಲಾಗಿದ್ದ ‘ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಪ್ರಪಂಚದಲ್ಲಿ ಅತಿ ಹೆಚ್ಚು ಬಳಕೆಯಾಗುವ ಇಂಧನ ಮೂಲವೆಂದರೆ ಅದು ವಿದ್ಯುತ್. ದಿನದಿಂದ ದಿನಕ್ಕೆ ಇದರ ಬಳಕೆ ಅತ್ಯಂತ ವೇಗವಾಗಿ ಹೆಚ್ಚುತ್ತಿದ್ದು, ಅದಕ್ಕೆ ತಕ್ಕಂತೆ ಸುರಕ್ಷತೆಯ ಬಗೆಗಿನ ಜಾಗೃತಿಯೂ ಸಾರ್ವಜನಿಕರಲ್ಲಿ ಬೆಳೆಯಬೇಕಿದೆ. ನಾವೆಲ್ಲರೂ ಒಟ್ಟಾಗಿ, ಹಂಚಿಕೆಯ ಜವಾಬ್ದಾರಿಯೊಂದಿಗೆ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ,” ಎಂದು ಕರೆ ನೀಡಿದರು.

 

The post ಇನ್ಮೇಲೆ ಪದೇ ಪದೇ ಕರೆಂಟ್ ಹೋಗಲ್ಲ appeared first on Good News 24x7.

]]>
ನಾಡಪ್ರಭು ಕೆಂಪೇಗೌಡರ ಜನ್ಮದಿನದ ಶುಭಾಶಯಗಳು! https://www.goodnews24x7.com/happy-birthday-to-nadaprabhu-kempegowda/ Sat, 27 Jun 2026 05:50:23 +0000 https://www.goodnews24x7.com/?p=9683 ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಎಲ್ಲರೂ ಗೌರವ ಭಾವದಿಂದ ಸ್ಮರಿಸಬೇಕಾದ ದಿನ; ಆಡಳಿತಗಾರರು ಕೃತಜ್ಞತೆಯಿಂದ ನೆನಪಿಸಿಕೊಳ್ಳಬೇಕಾದ ದಿನ. ಏಕೆಂದರೆ, ಬೆಂಗಳೂರಿನಂಥ ಮಹಾಮಹಿಮ ನಗರಕ್ಕೆ ತಳಪಾಯ ಹಾಕಿದ ನಾಡಪ್ರಭುಗಳ 513ನೇ ಜನ್ಮದಿನವಿದು. ಇದನ್ನು ಸರ್ಕಾರವೇ ವಿಜೃಂಭಣೆಯಿಂದ ಆಚರಿಸುತ್ತಿದ್ದು, ‘ಬೆಂಗಳೂರಿನ ಜನಕ’ರನ್ನು ಸ್ಮರಿಸುತ್ತಿದೆ. ಈ ಮೂಲಕ,…

The post ನಾಡಪ್ರಭು ಕೆಂಪೇಗೌಡರ ಜನ್ಮದಿನದ ಶುಭಾಶಯಗಳು! appeared first on Good News 24x7.

]]>

ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಎಲ್ಲರೂ ಗೌರವ ಭಾವದಿಂದ ಸ್ಮರಿಸಬೇಕಾದ ದಿನ; ಆಡಳಿತಗಾರರು ಕೃತಜ್ಞತೆಯಿಂದ ನೆನಪಿಸಿಕೊಳ್ಳಬೇಕಾದ ದಿನ. ಏಕೆಂದರೆ, ಬೆಂಗಳೂರಿನಂಥ ಮಹಾಮಹಿಮ ನಗರಕ್ಕೆ ತಳಪಾಯ ಹಾಕಿದ ನಾಡಪ್ರಭುಗಳ 513ನೇ ಜನ್ಮದಿನವಿದು. ಇದನ್ನು ಸರ್ಕಾರವೇ ವಿಜೃಂಭಣೆಯಿಂದ ಆಚರಿಸುತ್ತಿದ್ದು, ‘ಬೆಂಗಳೂರಿನ ಜನಕ’ರನ್ನು ಸ್ಮರಿಸುತ್ತಿದೆ. ಈ ಮೂಲಕ, ಕೆಂಪೇಗೌಡರ ವೈಭವದ ಪರಂಪರೆಯನ್ನು ತರುಣ ತಲೆಮಾರುಗಳಿಗೆ ವರ್ಗಾಯಿಸುವ ಕೆಲಸವೂ ಆಗುತ್ತಿದೆ.

ಬೆಂಗಳೂರಿಗೆ ಏನಿಲ್ಲವೆಂದರೂ 1,100 ವರ್ಷಗಳ ಇತಿಹಾಸವಿದೆ. ಕನ್ನಡ ನಾಡಿನ ಬಹುಭಾಗದಿಂದ ಹಿಡಿದು ತಮಿಳುನಾಡಿನ ಮದುರೆಯವರೆಗೂ ಆಳಿದ ಹೊಯ್ಸಳರ ದೊರೆ ಬಲ್ಲಾಳನ ಕಾಲದಿಂದಲೂ ಬೆಂಗಳೂರಿನ ಉಲ್ಲೇಖವು ನಮಗೆ ಅನೇಕ ಕಡೆಗಳಲ್ಲಿ ಸಿಗುತ್ತದೆ.
18 ಬಗೆಯ ಕಸುಬುಗಳನ್ನು ಆಧರಿಸಿದ ಮೂಲ ಬೆಂಗಳೂರಿನ ‘ಪೇಟೆ’ಗಳನ್ನು (ಉದಾ: ದೊಡ್ಡಪೇಟೆ, ಚಿಕ್ಕಪೇಟೆ, ತಿಗಳರ ಪೇಟೆ, ಕುರುಬರ ಪೇಟೆ, ಅರಳೇಪೇಟೆ, ಬಳೇಪೇಟೆ, ತರಗುಪೇಟೆ, ಅಕ್ಕಿಪೇಟೆ, ರಾಗಿಪೇಟೆ, ಕುಂಬಾರರ ಪೇಟೆ, ನಗರ್ತರ ಪೇಟೆ, ಗಾಣಿಗರ ಪೇಟೆ, ಮಡಿವಾಳ ಪೇಟೆ, ಉಪ್ಪಾರಪೇಟೆ ಇತ್ಯಾದಿಗಳು) ನೋಡಿದರೆ, ಇದು ಗೊತ್ತಾಗುತ್ತದೆ.

ಈ ‘ಮೂಲ ಬೆಂಗಳೂರೇ’ ಕೆಂಪೇಗೌಡರು ಕಟ್ಟಿದ ಬೆಂಗಳೂರು ಎನ್ನುವುದು ಅಧ್ಯಯನಗಳಿಂದ ತಿಳಿದುಬಂದಿದೆ. ಇದರ ಆಧಾರದ ಮೇಲೆ, ನಂತರದ ಕಾಲದಲ್ಲಿ ಬಂದ ಆಳ್ವಿಕೆಗಾರರು ಬೆಂಗಳೂರನ್ನು ಪೇಟೆಯಾಗಿ, ಪಟ್ಟಣವಾಗಿ, ನಗರವಾಗಿ, ಮಹಾನಗರವಾಗಿ ಬೆಳೆಸಿದ್ದಾರೆ. ಈಗಂತೂ ನಮ್ಮ ರಾಜಧಾನಿಯು ಈ ಹಿರಿಮೆಗಳನ್ನೆಲ್ಲ ದಾಟಿ, ಜಪಾನಿನಿಂದ ಹಿಡಿದು ಅಮೆರಿಕದವರೆಗೂ ಎಲ್ಲರಿಗೂ ಗೊತ್ತಿರುವ ಒಂದು ‘ಕಾಸ್ಮೋಪಾಲಿಟನ್‌ ಸಿಟಿ’ ಆಗಿ, ಹೆಮ್ಮರದಂತೆ ಬೆಳೆದಿದೆಪೇಟೆಯಿಂದ ಸಿಟಿಯವರೆಗೆ
ಬೆಂಗಳೂರು ಇಂದು ಐಟಿ ಸಿಟಿ, ಬಿಟಿ ಸಿಟಿ, ನವೋದ್ಯಮಗಳ ನಗರ, ಸಂಶೋಧನೆಗಳ ನಗರ, ಏರೋನಾಟಿಕ್ಸ್‌ ಸಿಟಿ.. ಇತ್ಯಾದಿಗಳೆಲ್ಲ ಆಗಿದೆ. ಜೊತೆಗೆ, ಉದ್ಯಾನ ನಗರಿ ಎಂಬ ಖ್ಯಾತಿಯನ್ನೂ ಉಳಿಸಿಕೊಂಡಿದೆ. ಇದಲ್ಲದೆ, ಇತ್ತೀಚಿನ ವರ್ಷಗಳಲ್ಲಿ ಭಾರತದ ಆರ್ಥಿಕ ಕೇಂದ್ರವಾಗಿಯೂ ನಮ್ಮ ಬೆಂಗಳೂರು ಬೆಳೆದಿದೆ; ಇದಕ್ಕೆ ಪೂರಕವಾಗಿ ಇದು ನಿಜವಾದ ಅರ್ಥದಲ್ಲಿ ‘ನಾಲೆಡ್ಜ್‌ ಸಿಟಿ’ಯೂ ಆಗಿ ಬೆಳೆಯುತ್ತಿದೆ. ಒಟ್ಟಿನಲ್ಲಿ, ಇಲ್ಲಿ ಎಲ್ಲವೂ ಕೆಂಪೇಗೌಡರು ಹಾಕಿದ ಬುನಾದಿಯ ಮೇಲೆಯೇ ವಿಸ್ತರಣೆ ಆಗುತ್ತಿವೆ ಎನ್ನುವುದು ಹೆಮ್ಮೆಯ ಸಂಗತಿ.ಹೀಗಾಗಿಯೇ ಬೆಂಗಳೂರು ಇಂದು ಬಹುದೊಡ್ಡ ಶಿಕ್ಷಣ ತಾಣವಾಗಿದೆ; ಒಂದೂ ಕಾಲು ಕೋಟಿ ಜನರ ಪಾಲಿಗೆ ಸೂರಾಗಿದೆ; ವಿದೇಶೀಯರ ಪಾಲಿಗೆ ಅಚ್ಚುಮೆಚ್ಚಿನ ‘ಡೆಸ್ಟಿನೇಶನ್‌’ ಆಗಿದೆ! ಕಲಿಕೆ, ಹೂಡಿಕೆ, ಕೈಗಾರಿಕೆ, ಆಡಳಿತ, ಸಂಸ್ಕೃತಿ, ಶಾಂತಿ, ಹಿತಕರ ಹವೆ- ಹೀಗೆ ಎಲ್ಲದಕ್ಕೂ ಬೆಂಗಳೂರು ಇನ್ನೊಂದು ಹೆಸರಾಗಿದೆ. ಇವೆಲ್ಲಕ್ಕೆ ಕಿರೀಟವಿಟ್ಟಂತೆ ಈಗ ಇದು ‘ದೇಶದ ಡೆಕಾಕಾರ್ನ್‌ ಕಂಪನಿಗಳ ರಾಜಧಾನಿ’ಯಾಗಿಯೂ ಹೊರಹೊಮ್ಮಿದೆ. ಐಟಿ-ಬಿಟಿ ಖಾತೆಗಳ ಜವಾಬ್ದಾರಿಯನ್ನೂ ಹೊತ್ತುಕೊಂಡಿರುವ ನನಗೆ ದಿನನಿತ್ಯವೂ ಇದರ ಸಾಕ್ಷಾತ್‌ ದರ್ಶನವೇ ಆಗುತ್ತಿದೆ.

ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ

ಕೆಂಪೇಗೌಡರಿಗೆ ಸಂಬಂಧಿಸಿದ 46 ತಾಣಗಳನ್ನು ಅಭಿವೃದ್ಧಿಪಡಿಸಲು ‘ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರ’ವನ್ನೇ ರಚಿಸಲಾಗಿದ್ದು, ಇದಕ್ಕೆ ಅಗತ್ಯ ಹಣಕಾಸಿನ ಅನುದಾನ ಒದಗಿಸಲಾಗುತ್ತಿದೆ. ಇದರಡಿಯಲ್ಲಿ ಮಾಗಡಿ ತಾಲ್ಲೂಕಿನಲ್ಲಿರುವ ಕೆಂಪೇಗೌಡರ ಸಮಾಧಿ ಸ್ಥಳವಾದ ಕೆಂಪಾಪುರವನ್ನು ಸ್ಥಳಾಂತರಿಸಿ, ಅಲ್ಲಿ ‘ವೀರಸಮಾಧಿ ಅಭಿವೃದ್ಧಿ’ಯನ್ನು ಕೋಟ್ಯಂತರ ವೆಚ್ಚದಲ್ಲಿ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಭೂಸ್ವಾಧೀನ ಕಾರ್ಯ ಈಗಾಗಲೇ ಅಂತಿಮ ಹಂತದಲ್ಲಿ ಪ್ರಗತಿಯಲ್ಲಿದೆ. ಹಾಗೆಯೇ, ಮಾಗಡಿಯಲ್ಲಿ ಕೆಂಪೇಗೌಡರು ಕಟ್ಟಿದ ಕೋಟೆಯನ್ನು ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡಲಾಗುತ್ತಿದೆ. ಒಟ್ಟಿನಲ್ಲಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಕೆಂಪೇಗೌಡರಿಗೆ ಸಂಬಂಧಿಸಿದ ಸ್ಥಳಗಳನ್ನೆಲ್ಲ ‘ಮಾಗಡಿ, ಬೆಂಗಳೂರು ಮತ್ತು ನಂದಿ ಸಕ್ರ್ಯೂಟ್‌ ಗಳನ್ನಾಗಿ’ ವಿಂಗಡಿಸಿ, ಆಕರ್ಷಕ ಸ್ಥಳಗಳನ್ನಾಗಿ ಮಾಡಲಾಗುತ್ತಿದೆ. ಇದರಿಂದ ಪ್ರವಾಸೋದ್ಯಮ ಚಟುವಟಿಕೆಗಳೂ ಗರಿಗೆದರುತ್ತವೆ. ಈಗಾಗಲೇ ಈ ಪೈಕಿ ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳ ತಾಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ, ‘ಐಡೆಕ್‌’ ಸಂಸ್ಥೆಯಿಂದ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ.
ಒಟ್ಟಿನಲ್ಲಿ, ಕೆಂಪೇಗೌಡರು ಕಟ್ಟಿಸಿದ ಕೋಟೆಗಳು, ಕೆರೆಗಳು, ಪಾರಂಪರಿಕ ತಾಣಗಳೆಲ್ಲವೂ ಚಿರಸ್ಥಾಯಿಯಾಗಿ ಉಳಿಯಬೇಕೆನ್ನುವುದು ನಮ್ಮ ಸರ್ಕಾರದ ಸಂಕಲ್ಪವಾಗಿದೆ. ಮಿಗಿಲಾಗಿ, ಕೆಂಪೇಗೌಡರ ವಂಶಕ್ಕೆ ಸೇರಿದ ಇತಿಹಾಸ, ಕಲೆ, ಸಾಹಿತ್ಯ, ವಾಸ್ತುಶಿಲ್ಪ, ನೀರಾವರಿ, ಯೋಜನೆಗಳು ಇತ್ಯಾದಿಗಳ ಬಗ್ಗೆ ಆಯಾ ಕ್ಷೇತ್ರಗಳ ತಜ್ಞರಿಂದ ಸಮಗ್ರ ಮತ್ತು ತಲಸ್ಪರ್ಶಿ ಅಧ್ಯಯನಕ್ಕೆ ಬೇಕಾದ ಸೌಲಭ್ಯವನ್ನು ಮಾಡಿಕೊಡುವುದೂ ಸರ್ಕಾರದ ಚಿಂತನೆಯಲ್ಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ

ಕೆಂಪೇಗೌಡರ ಗೌರವಾರ್ಥವಾಗಿ, ಈ ವರ್ಷದಿಂದಲೇ ನಾನಾ ಕ್ಷೇತ್ರಗಳ ಅನುಪಮ ಸಾಧಕರಿಗೆ ‘ಅಂತಾರಾಷ್ಟ್ರೀಯ ಪ್ರಶಸ್ತಿ’ಯನ್ನು ಸರ್ಕಾರ ಆರಂಭಿಸಿದೆ. ಮೊದಲ ವರ್ಷದ ಈ ಪ್ರಶಸ್ತಿಗೆ ಬೆಂಗಳೂರು ವಿಶ್ವ ಭೂಪಟದಲ್ಲಿ ಕಾಣಿಸಿಕೊಳ್ಳುವಂತೆ ಮಾಡಿದ ಎಸ್‌.ಎಂ.ಕೃಷ್ಣ, ಇಸ್ಫೋಸಿಸ್‌ ಕಂಪನಿಯನ್ನು ಸ್ಥಾಪಿಸುವ ಮೂಲಕ ನಮ್ಮ ನಗರಕ್ಕೆ ‘ಭಾರತದ ಸಿಲಿಕಾನ್‌ ಸಿಟಿ’ ಎನ್ನುವ ಶ್ರೇಯಸ್ಸನ್ನು ತಂದಿತ್ತ ಎನ್‌.ಆರ್‌.ನಾರಾಯಣಮೂರ್ತಿ ಮತ್ತು ಬ್ಯಾಡ್ಮಿಂಟನ್‌ ತಾರೆ ಪ್ರಕಾಶ್‌ ಪಡುಕೋಣೆ ಅವರನ್ನು ತಜ್ಞರ ಸಮಿತಿಯು ಆರಿಸಿದೆ. ಇಂದು ನಡೆಯಲಿರುವ ‘ಕೆಂಪೇಗೌಡರ ಜಯಂತಿ’ಯಲ್ಲಿ ಈ ಮೂವರಿಗೂ ತಲಾ 5 ಲಕ್ಷ ರು. ನಗದಿನೊಂದಿಗೆ ಈ ಪ್ರತಿಷ್ಠಿತ ಪುರಸ್ಕಾರವನ್ನು ಪ್ರದಾನ ಮಾಡಲಾಗುವುದು.

ಕೆಂಪೇಗೌಡರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ಹೀಗೆ ಹಲವು ಅರ್ಥಪೂರ್ಣ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಇಂದು ಗಳಿಸಿರುವ ಅತಿಶಯವಾದ ಕೀರ್ತಿಗೆ ಕೆಂಪೇಗೌಡರೇ ಮೂಲಕಾರಣ! ಅವರು ಹಾಕಿಕೊಟ್ಟಿರುವ ಹಾದಿಯಲ್ಲೇ ನಾವೂ ಹೆಜ್ಜೆ ಇಡುತ್ತಿದ್ದೇವೆ. ನಾಡಿನ ಸಮಸ್ತ ಜನತೆ ಗುಡ್ ನ್ಯೂಸ್ ವಾಹಿನಿಯ ವತಿಯಿಂದ ನಾಡಪ್ರಭು ಕೆಂಪೇಗೌಡರ ಜನ್ಮದಿನದ ಶುಭಾಶಯಗಳು!

The post ನಾಡಪ್ರಭು ಕೆಂಪೇಗೌಡರ ಜನ್ಮದಿನದ ಶುಭಾಶಯಗಳು! appeared first on Good News 24x7.

]]>
ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ https://www.goodnews24x7.com/sdpi-urges-government-to-drop-bus-fare-hike-proposal/ Fri, 26 Jun 2026 12:37:53 +0000 https://www.goodnews24x7.com/?p=9678 ಮೈಸೂರು, ಜೂನ್ 26: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ರಾಜ್ಯ ಸರ್ಕಾರ ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು. ಅದೇ…

The post ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ appeared first on Good News 24x7.

]]>

ಮೈಸೂರು, ಜೂನ್ 26: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ರಾಜ್ಯ ಸರ್ಕಾರ ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು. ಅದೇ ರೀತಿ ರಾಜ್ಯದ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಪ್ರಯತ್ನವನ್ನು ಕೈಬಿಡಬೇಕು ಹಾಗೂ ಸಾರಿಗೆ ನಿಗಮಗಳ ನಷ್ಟದ ನೆಪದಲ್ಲಿ ಮತ್ತೆ ಬಸ್ ಪ್ರಯಾಣ ದರ ಹೆಚ್ಚಿಸುವ ಪ್ರಸ್ತಾವವನ್ನು ಸರ್ಕಾರ ತಕ್ಷಣವೇ ತಿರಸ್ಕರಿಸಬೇಕು ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಆಗ್ರಹಿಸಿದರು.
ಇಂದು ಮೈಸೂರಿನ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಜನಹಿತಕ್ಕೆ ಸಂಬಂಧಿಸಿದ ಮೂರು ಮಹತ್ವದ ವಿಷಯಗಳ ಕುರಿತು ಎಸ್‌ಡಿಪಿಐ ಪಕ್ಷದ ನಿಲುವನ್ನು ವಿವರಿಸಿದರು.
1. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಹಕ್ಕು ರಕ್ಷಣೆ ಸರ್ಕಾರದ ಹೊಣೆ
ಭಾರತದ ಚುನಾವಣಾ ಆಯೋಗವು ದೇಶಾದ್ಯಂತ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಅದರ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸಿಬ್ಬಂದಿಯೇ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಹೀಗಾಗಿ ಯಾವುದೇ ಅರ್ಹ ಮತದಾರರ ಹೆಸರು ಅನಗತ್ಯವಾಗಿ ಮತದಾರರ ಪಟ್ಟಿಯಿಂದ ಕೈಬಿಡದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿಯೂ ಆಗಿದೆ ಎಂದು ಅಬ್ದುಲ್ ಮಜೀದ್ ಹೇಳಿದರು.
ಪಶ್ಚಿಮ ಬಂಗಾಳದಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಪರಿಶೀಲನೆ ವೇಳೆ “Logical Discrepancy” ಎಂಬ ಕಾರಣವನ್ನು ಉಲ್ಲೇಖಿಸಿ ಲಕ್ಷಾಂತರ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ವರದಿಗಳು ಆತಂಕಕಾರಿ ಬೆಳವಣಿಗೆಯಾಗಿದೆ. ಭಾರತದಂತಹ ಬಹುಭಾಷಾ, ಬಹುಸಂಸ್ಕೃತಿಯ ದೇಶದಲ್ಲಿ ಹೆಸರುಗಳ ಕಾಗುಣಿತ ಅಥವಾ ದಾಖಲೆಗಳಲ್ಲಿನ ಸಣ್ಣಪುಟ್ಟ ವ್ಯತ್ಯಾಸಗಳನ್ನು ಆಧಾರವಾಗಿಸಿಕೊಂಡು ಮತದಾರರನ್ನು ಹೊರಗಿಡುವುದು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.
ಕೃತಕ ಬುದ್ಧಿಮತ್ತೆಯ ತಾಂತ್ರಿಕ ದೋಷ ಅಥವಾ ಆಡಳಿತಾತ್ಮಕ ಲೋಪದಿಂದ ಒಬ್ಬ ಅರ್ಹ ನಾಗರಿಕನೂ ಮತದಾನದ ಹಕ್ಕು ಕಳೆದುಕೊಳ್ಳಬಾರದು. ಆದ್ದರಿಂದ ರಾಜ್ಯ ಸರ್ಕಾರ ಚುನಾವಣಾ ಆಯೋಗದೊಂದಿಗೆ ಚರ್ಚಿಸಿ, “Logical Discrepancy”ಯನ್ನು ಮತದಾರರನ್ನು ಕೈಬಿಡುವ ಮಾನದಂಡವಾಗಿ ಬಳಸಬಾರದು ಎಂದು ಒತ್ತಾಯಿಸಬೇಕು. ಯಾವುದೇ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವ ಮೊದಲು ಮನೆ-ಮನೆಗೆ ಪರಿಶೀಲನೆ, ನೇರ ಭೇಟಿ ಹಾಗೂ ಸಂಬಂಧಪಟ್ಟ ವ್ಯಕ್ತಿಗೆ ಪೂರ್ವ ನೋಟಿಸ್ ನೀಡುವಂತಹ ಮಾನವೀಯ ಮತ್ತು ಪಾರದರ್ಶಕ ಕ್ರಮಗಳನ್ನು ಕಡ್ಡಾಯಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
2. ವಿದ್ಯುತ್ ವಿತರಣಾ ಕಂಪನಿಗಳ ಖಾಸಗೀಕರಣ ಜನವಿರೋಧಿ ಕ್ರಮ
ರಾಜ್ಯ ಸರ್ಕಾರ ವಿದ್ಯುತ್ ವಿತರಣಾ ಸಂಸ್ಥೆಗಳ (ESCOMs) ಕಾರ್ಯಾಚರಣೆಯನ್ನು ಹಂತ ಹಂತವಾಗಿ ಖಾಸಗಿ ಕಂಪನಿಗಳಿಗೆ ಒಪ್ಪಿಸುವ ಪ್ರಯತ್ನ ನಡೆಸುತ್ತಿರುವ ವರದಿಗಳು ಸಾರ್ವಜನಿಕರಲ್ಲಿ ತೀವ್ರ ಆತಂಕವನ್ನು ಉಂಟುಮಾಡಿವೆ ಎಂದು ಅಬ್ದುಲ್ ಮಜೀದ್ ಹೇಳಿದರು.
ವಿದ್ಯುತ್ ಎಂಬುದು ಸಾಮಾನ್ಯ ವಾಣಿಜ್ಯ ವಸ್ತುವಲ್ಲ; ಅದು ಜನಜೀವನ, ಕೃಷಿ, ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಅಭಿವೃದ್ಧಿಯ ಬೆನ್ನೆಲುಬಾಗಿದೆ. ಈ ಸೇವೆಯನ್ನು ಖಾಸಗಿ ಕಂಪನಿಗಳ ಲಾಭದ ಉದ್ದೇಶಕ್ಕೆ ಒಪ್ಪಿಸಿದರೆ ವಿದ್ಯುತ್ ದರ ಏರಿಕೆ, ಗ್ರಾಮೀಣ ಪ್ರದೇಶಗಳ ನಿರ್ಲಕ್ಷ್ಯ ಹಾಗೂ ಸೇವೆಯ ಗುಣಮಟ್ಟ ಕುಸಿಯುವ ಅಪಾಯವಿದೆ.
ಸರ್ಕಾರ ಖಾಸಗೀಕರಣದ ಮೂಲಕ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯುವ ಬದಲು, ಎಸ್ಕಾಂಗಳನ್ನು ಆರ್ಥಿಕವಾಗಿ ಸದೃಢಗೊಳಿಸಿ, ತಾಂತ್ರಿಕ ಸುಧಾರಣೆಗಳನ್ನು ಜಾರಿಗೆ ತಂದು, ಸಾರ್ವಜನಿಕ ಸ್ವಾಮ್ಯದಲ್ಲಿಯೇ ಉತ್ತಮ ಗುಣಮಟ್ಟದ ವಿದ್ಯುತ್ ಸೇವೆ ಒದಗಿಸಲು ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.
3. ಬಸ್ ದರ ಏರಿಕೆ ಪ್ರಸ್ತಾವವನ್ನು ಸರ್ಕಾರ ತಕ್ಷಣ ತಿರಸ್ಕರಿಸಲಿ
ರಾಜ್ಯದ ರಸ್ತೆ ಸಾರಿಗೆ ನಿಗಮಗಳು ಮತ್ತೊಮ್ಮೆ ಬಸ್ ಪ್ರಯಾಣ ದರ ಹೆಚ್ಚಿಸುವ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಿರುವುದು ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದೆ ಎಂದು ಅಬ್ದುಲ್ ಮಜೀದ್ ಹೇಳಿದರು.
ಈಗಾಗಲೇ 2025ರ ಜನವರಿ 5ರಿಂದ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸಲಾಗಿದೆ. ಇದೀಗ ಬಿಎಂಟಿಸಿ ಶೇ.44, ಕೆಎಸ್‌ಆರ್‌ಟಿಸಿ ಶೇ.33 ಹಾಗೂ ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯೂಕೆಆರ್‌ಟಿಸಿಗಳೂ ದರ ಏರಿಕೆಗೆ ಪ್ರಸ್ತಾವ ಸಲ್ಲಿಸಿರುವುದು ಸಾಮಾನ್ಯ ಜನರ ಬದುಕಿನ ಮೇಲೆ ಮತ್ತಷ್ಟು ಹೊರೆ ಹೊರಿಸುವ ಕ್ರಮವಾಗಿದೆ.
ಬೆಲೆ ಏರಿಕೆ, ನಿರುದ್ಯೋಗ ಹಾಗೂ ಜೀವನೋಪಾಯದ ಸಂಕಷ್ಟದಿಂದ ಜನರು ತತ್ತರಿಸಿರುವ ಸಂದರ್ಭದಲ್ಲಿ ಮತ್ತೆ ಬಸ್ ದರ ಹೆಚ್ಚಿಸುವುದು ವಿದ್ಯಾರ್ಥಿಗಳು, ಕಾರ್ಮಿಕರು, ರೈತರು, ಮಹಿಳೆಯರು, ಉದ್ಯೋಗಿಗಳು ಹಾಗೂ ಪ್ರತಿದಿನ ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಿರುವ ಲಕ್ಷಾಂತರ ಜನರಿಗೆ ದೊಡ್ಡ ಹೊಡೆತವಾಗಲಿದೆ.
ಸಾರಿಗೆ ನಿಗಮಗಳ ಆರ್ಥಿಕ ಸಂಕಷ್ಟಕ್ಕೆ ಪ್ರಯಾಣಿಕರು ಕಾರಣರಲ್ಲ. ಸರ್ಕಾರದ ನೀತಿ ವೈಫಲ್ಯ, ಸಮರ್ಪಕ ಅನುದಾನದ ಕೊರತೆ ಮತ್ತು ಆಡಳಿತಾತ್ಮಕ ದೌರ್ಬಲ್ಯವೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಈ ವೈಫಲ್ಯದ ಹೊರೆ ಜನರ ಮೇಲೆ ಹಾಕುವುದು ಸರಿಯಲ್ಲ. ಸರ್ಕಾರ ದರ ಏರಿಕೆಯನ್ನು ಸುಲಭ ಪರಿಹಾರವಾಗಿ ಪರಿಗಣಿಸದೆ, ನಿಗಮಗಳ ಆರ್ಥಿಕ ಪುನಶ್ಚೇತನಕ್ಕಾಗಿ ಸಮಗ್ರ ಕಾರ್ಯಯೋಜನೆ ರೂಪಿಸಬೇಕು. ಬಸ್ ದರ ಏರಿಕೆ ಪ್ರಸ್ತಾವವನ್ನು ತಕ್ಷಣವೇ ತಿರಸ್ಕರಿಸಿ ಜನಸಾಮಾನ್ಯರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಅವರು ಒತ್ತಾಯಿಸಿದರು.
ಅಂತಿಮವಾಗಿ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು, ಸಾರ್ವಜನಿಕ ವಿದ್ಯುತ್ ಸೇವೆ ಹಾಗೂ ಕೈಗೆಟುಕುವ ಸಾರ್ವಜನಿಕ ಸಾರಿಗೆ ಇವು ಜನರ ಮೂಲಭೂತ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳಾಗಿದ್ದು, ಸರ್ಕಾರವು ಜನವಿರೋಧಿ ನೀತಿಗಳನ್ನು ಕೈಬಿಟ್ಟು ಜನಪರ ಆಡಳಿತಕ್ಕೆ ಆದ್ಯತೆ ನೀಡಬೇಕು ಎಂದು ಅಬ್ದುಲ್ ಮಜೀದ್ ಕರೆ ನೀಡಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷರಾದ ದೇವನೂರು ಪುಟ್ಟನಂಜಯ್ಯ, ರಾಜ್ಯ ಕಾರ್ಯದರ್ಶಿ ಮೌಲಾನಾ ಅಕ್ರಮ್, ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್, ಮೈಸೂರು ಜಿಲ್ಲಾ ಕಾರ್ಯಾಧ್ಯಕ್ಷ ಶಫಿವುಲ್ಲಾ ಹಾಗೂ ಜಿಲ್ಲಾ ಉಪಾಧ್ಯಕ್ಷ ಎಸ್. ಸ್ವಾಮಿ ಉಪಸ್ಥಿತರಿದ್ದರು.
ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI), ಕರ್ನಾಟಕ

The post ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ appeared first on Good News 24x7.

]]>
ಯುವತಿ ಸೇರಿ ಹೆತ್ತವರ ದಾರುಣ ಅ*0ತ್ಯ https://www.goodnews24x7.com/a-young-woman-who-was-supposed-to-get-married-and-her-parents-met-a-tragic-end/ Mon, 22 Jun 2026 11:26:14 +0000 https://www.goodnews24x7.com/?p=9632 ಮೈಸೂರಿನ ಟಿ.ನರಸೀಪುರದಲ್ಲಿ ನಾಡಿದ್ದು ಮದುವೆಯಾಗಬೇಕಿದ್ದ ಯುವತಿ ಹಾಗೂ ಆಕೆಯ ಹೆತ್ತವರು ಅದೇ ಗ್ರಾಮದ ವ್ಯಕ್ತಿಯೋರ್ವನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ದಾರುಣವಾಗಿ ಅಂ*ತ್ಯ ಕಂಡಿದ್ದಾರೆ. ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲೀಗ ಸೂತಕ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನವೂ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ವರುಣ…

The post ಯುವತಿ ಸೇರಿ ಹೆತ್ತವರ ದಾರುಣ ಅ*0ತ್ಯ appeared first on Good News 24x7.

]]>

ಮೈಸೂರಿನ ಟಿ.ನರಸೀಪುರದಲ್ಲಿ ನಾಡಿದ್ದು ಮದುವೆಯಾಗಬೇಕಿದ್ದ ಯುವತಿ ಹಾಗೂ ಆಕೆಯ ಹೆತ್ತವರು ಅದೇ ಗ್ರಾಮದ ವ್ಯಕ್ತಿಯೋರ್ವನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ದಾರುಣವಾಗಿ ಅಂ*ತ್ಯ ಕಂಡಿದ್ದಾರೆ. ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲೀಗ ಸೂತಕ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನವೂ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ವರುಣ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರು, ಜೂನ್​​ 22: ದಾಂಪತ್ಯ ಜೀವನದ ಕನಸು ಕಂಡಿದ್ದ ಯುವತಿ ಸೇರಿ ಆಕೆಯ ಹೆತ್ತವರು ದಾರುಣ ಅಂ*ತ್ಯ ಕಂಡಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ವ್ಯಕ್ತಿಯೋರ್ವನಿಂದ ಯುವತಿಗೆ ಕಿರುಕುಳ ಹಿನ್ನೆಲೆ ವಿಷ ಸೇವಿಸಿ ಮೂವರು ಒಟ್ಟಿಗೆ ಪ್ರಾಣಬಿಟ್ಟಿದ್ದಾರೆ. ಶಿವಣ್ಣ, ನಾಗರತ್ನ ಹಾಗೂ ರಕ್ಷಿತಾ ಮೃ*ತರಾಗಿದ್ದು, ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜೂನ್​​ 24, ಅಂದರೆ ನಾಡಿದ್ದು ರಕ್ಷಿತಾ ವಿವಾಹ ನಡೆಯಬೇಕಿತ್ತು. ಆದರೆ ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲೀಗ ಸೂತಕ ಆವರಿಸಿದೆ.

ರಕ್ಷಿತಾಗೆ ಉಲ್ಲಾಸ್ ಗೌಡ ಎಂಬಾತ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಈತನಿಗೆ ರಕ್ಷಿತಾ ಕಳುಹಿಸಿದ್ದ ಮೆಸೇಜ್ ಹಾಗೂ ಕೆಲವು ಫೋಟೋಗಳನ್ನು ಇಟ್ಟುಕೊಂಡು ಮಾನಸಿಕ ಹಿಂಸೆ ನೀಡಿದ್ದ ಎನ್ನಲಾಗಿದೆ. ರಕ್ಷಿತಾ ಜೊತೆ ಮದುವೆ ನಿಶ್ಚಯವಾಗಿದ್ದ ಹುಡುಗನಿಗೂ ಈತ ಫೋಟೋಗಳನ್ನು ಕಳುಹಿಸಿದ್ದ. ಹೀಗಾಗಿ ಮಾನಕ್ಕೆ ಅಂಜಿದ ಕುಟುಂಬಸ್ಥರು ಮನೆಯಲ್ಲೇ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿದ್ದಾರೆ. ಮೂವರ ಸಾ*ವಿಗೂ ಉಲ್ಲಾಸ್ ಗೌಡ‌ನೇ ಕಾರಣನೆಂದು ರಕ್ಷಿತಾ ಡೆ*ತ್​ನೋಟ್ ಬರೆದಿರೋದು ಕೂಡ ಪತ್ತೆಯಾಗಿದ್ದು, ಘಟನಾ ಸ್ಥಳಕ್ಕೆ ವರುಣ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಕರ ಆಕ್ರಂದನ

ಹಸೆಮಣೆ ಏರಬೇಕಿದ್ದ ಮೊಮ್ಮಗಳ ಜೊತೆ ಅಳಿಯ-ಮಗಳು ಕೂಡ ಮಸಣಕ್ಕೆ ಸೇರಿದ್ದಾರೆ. ರಕ್ಷಿತಾ ಮದುವೆಗೆ ಎಲ್ಲ ಸಿದ್ಧತೆಗಳು ನಡೆದಿತ್ತು. ಆದರೆ ಉಲ್ಲಾಸ್​​ ಗೌಡ ಎಂಬಾತ ಮದುವೆ ನಿಲ್ಲಿಸಬೇಕೆಂದು ನನ್ನ ಮೊಮ್ಮಗಳ ಮಾನ ತೆಗೆದಿದ್ದಾನೆ. ಈತ ನನ್ನ ಅಳಿಯನಿಗೆ ಪರಿಚಯಸ್ಥನಾಗಿದ್ದು, ಟ್ರ್ಯಾಕ್ಟರ್ ಓಡಿಸುತ್ತಿದ್ದ ಈತನಿಗೆ ಅಳಿಯನ ಜೊತೆ ಒಡನಾಟ ಇತ್ತು. ಆಗಾಗ ಮನೆಗೆ ಕೂಡ ಆತ ಬಂದು ಹೋಗುತ್ತಿದ್ದ. ನನ್ನ ಮಗಳು, ಅಳಿಯ ಮತ್ತು ಮೊಮ್ಮಗಳ ಸಾ*ವಿಗೆ ಕಾರಣವಾದ ಉಲ್ಲಾಸ್ ಗೌಡನಿಗೆ ಶಿಕ್ಷೆ ಆಗಬೇಕು ಎಂದು ರಕ್ಷಿತಾಳ ಅಜ್ಜಿ ಚಿನ್ನಮ್ಮ ಆಗ್ರಹಿಸಿದ್ದಾರೆ. ಮದುವೆ ಸಂಭ್ರಮದಲ್ಲಿದ್ದ ಕುಟುಂಬಸ್ಥರ ಆಕ್ರಂದನವೂ ಮುಗಿಲು ಮುಟ್ಟಿದೆ.

ಆ್ಯಂಬುಲೆನ್ಸ್​​ಗೆ ಗ್ರಾಮಸ್ಥರ ಮುತ್ತಿಗೆ

ಆರೋಪಿ ಉಲ್ಲಾಸ್ ಗೌಡ ಬಂಧನಕ್ಕೆ ಗ್ರಾಮಸ್ಥರು ಪಟ್ಟುಹಿಡಿದಿದ್ದು, ಬಂಧನವರೆಗೂ ಮೃ*ತದೇಹಗಳನ್ನು ತೆಗೆದುಕೊಂಡು ಹೋಗದಂತೆ ತಾಕೀತು ಮಾಡಿದ್ದಾರೆ. ಹೀಗಾಗಿ ಪೊಲೀಸರ ಜೊತೆ ಸಂಬಂಧಿಕರು ಹಾಗೂ ಗ್ರಾಮಸ್ಥರ ಮಾತಿನ ಚಕಮಕಿ ನಡೆದಿದೆ. ವಿರೋಧದ ನಡುವೆಯೂ ಶ*ವಗಳನ್ನು ಕೊಂಡೊಯ್ಯುತ್ತಿದ್ದ ಕಾರಣ ಆ್ಯಂಬುಲೆನ್ಸ್​ಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ ಪ್ರಸಂಗವೂ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಸಹಾಯಕ ಸಿ. ಟಿ.ಕುಮಾರ್ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರೂ ಗ್ರಾಮಸ್ಥರು ಮಾತ್ರ ನಿರ್ಧಾರದಿಂದ ಹಿಂದೆ ಸರಿದಿಲ್ಲ.

The post ಯುವತಿ ಸೇರಿ ಹೆತ್ತವರ ದಾರುಣ ಅ*0ತ್ಯ appeared first on Good News 24x7.

]]>
ಫ್ರಿಜ್ ಮೇಲೆ 5 ವಸ್ತು ಇಡಬೇಡಿ, ಹಣದ ನಷ್ಟ ಗ್ಯಾರಂಟಿ! https://www.goodnews24x7.com/dont-keep-5-things-on-the-fridge-money-loss-guaranteed/ Sun, 21 Jun 2026 12:40:27 +0000 https://www.goodnews24x7.com/?p=9620 ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ಸಣ್ಣ ವಸ್ತುಗಳಿಗೂ ಅದರದ್ದೇ ಆದ ಪ್ರಾಮುಖ್ಯತೆ ಇರುತ್ತದೆ. ಅದರಲ್ಲಿಯೂ ಅಡುಗೆಮನೆಯಲ್ಲಿರುವ ಫ್ರಿಜ್ (Refrigerator) ಅತ್ಯಂತ ಪ್ರಮುಖವಾದ ಸಾಧನವಾಗಿದೆ. ಏಕೆಂದರೆ ಇದರಲ್ಲಿ ನಾವು ನಮ್ಮ ಆಹಾರ ಮತ್ತು ತಿನ್ನುವ ವಸ್ತುಗಳನ್ನು ಸಂಗ್ರಹಿಸಿಡುತ್ತೇವೆ. ವಾಸ್ತು ಶಾಸ್ತ್ರದಲ್ಲಿ ಫ್ರಿಜ್…

The post ಫ್ರಿಜ್ ಮೇಲೆ 5 ವಸ್ತು ಇಡಬೇಡಿ, ಹಣದ ನಷ್ಟ ಗ್ಯಾರಂಟಿ! appeared first on Good News 24x7.

]]>

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ಸಣ್ಣ ವಸ್ತುಗಳಿಗೂ ಅದರದ್ದೇ ಆದ ಪ್ರಾಮುಖ್ಯತೆ ಇರುತ್ತದೆ. ಅದರಲ್ಲಿಯೂ ಅಡುಗೆಮನೆಯಲ್ಲಿರುವ ಫ್ರಿಜ್ (Refrigerator) ಅತ್ಯಂತ ಪ್ರಮುಖವಾದ ಸಾಧನವಾಗಿದೆ. ಏಕೆಂದರೆ ಇದರಲ್ಲಿ ನಾವು ನಮ್ಮ ಆಹಾರ ಮತ್ತು ತಿನ್ನುವ ವಸ್ತುಗಳನ್ನು ಸಂಗ್ರಹಿಸಿಡುತ್ತೇವೆ. ವಾಸ್ತು ಶಾಸ್ತ್ರದಲ್ಲಿ ಫ್ರಿಜ್ ಅನ್ನು ‘ಜಲ ತತ್ವ’ದ (ನೀರಿನ ಅಂಶ) ಪ್ರತೀಕ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ, ಫ್ರಿಜ್ ಅನ್ನು ಇಡುವ ದಿಕ್ಕು ಮತ್ತು ಅದರ ಸುತ್ತಮುತ್ತಲಿನ ವಾತಾವರಣವು ಮನೆಯ ಧನಾತ್ಮಕ ಶಕ್ತಿ ಹಾಗೂ ಆರ್ಥಿಕ ಸ್ಥಿತಿಯ ಮೇಲೆ ನೇರ ಪರಿಣಾಮ ಬೀರುತ್ತದೆ. ಅನೇಕರು ಸ್ಥಳಾವಕಾಶದ ಕೊರತೆಯಿಂದ ಫ್ರಿಜ್ ಮೇಲ್ಭಾಗವನ್ನು ವಸ್ತುಗಳನ್ನು ಇಡಲು ಬಳಸುತ್ತಾರೆ, ಆದರೆ ಈ ಅಭ್ಯಾಸವು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸಿ, ವಾಸ್ತು ದೋಷಕ್ಕೆ ಕಾರಣವಾಗಬಹುದು.

ವಾಸ್ತು ನಿಯಮಗಳ ಪ್ರಕಾರ, ಫ್ರಿಜ್ ಮೇಲೆ ಯಾವುದೇ ಕಾರಣಕ್ಕೂ ಔಷಧಿಗಳನ್ನು ಇಡಬಾರದು. ಹೀಗೆ ಮಾಡುವುದರಿಂದ ಔಷಧಿಗಳ ಪ್ರಭಾವ ಅಥವಾ ಶಕ್ತಿ ಕಡಿಮೆಯಾಗುತ್ತದೆ ಎಂದು ನಂಬಲಾಗಿದೆ. ಅಷ್ಟೇ ಅಲ್ಲದೆ, ಇದು ಮನೆಯಲ್ಲಿ ಅನಾರೋಗ್ಯದ ವಾತಾವರಣ ಮತ್ತು ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಕೆಲವರು ಗಡಿಬಿಡಿಯಲ್ಲಿ ಅಥವಾ ಅಭ್ಯಾಸಬಲದಿಂದ ಹಣ, ನಾಣ್ಯಗಳು ಅಥವಾ ಚಿನ್ನಾಭರಣಗಳನ್ನು ಫ್ರಿಜ್ ಮೇಲೆ ಇಡುತ್ತಾರೆ. ಆದರೆ ವಾಸ್ತು ಪ್ರಕಾರ, ಈ ಜಾಗದಲ್ಲಿ ಹಣ ಇಡುವುದರಿಂದ ಮನೆಗೆ ಲಕ್ಷ್ಮಿ ಬರುವ ಹಾದಿ ಮುಚ್ಚಿಹೋಗುತ್ತದೆ ಮತ್ತು ಆರ್ಥಿಕ ನಷ್ಟ ಉಂಟಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ.

ಮೈಕ್ರೋವೇವ್ ಅಥವಾ ಭಾರೀ ಎಲೆಕ್ಟ್ರಾನಿಕ್ ಉಪಕರಣಗಳು:
ಫ್ರಿಜ್ ಮೇಲೆ ಮೈಕ್ರೋವೇವ್ ಓವನ್ ಅಥವಾ ಟೋಸ್ಟರ್‌ಗಳಂತಹ ಭಾರವಾದ ಎಲೆಕ್ಟ್ರಿಕಲ್ ಉಪಕರಣಗಳನ್ನು ಇಡಬೇಡಿ. ಇವೆರಡೂ ಭಿನ್ನ ತರಂಗಗಳನ್ನು ಹೊರಸೂಸುವುದರಿಂದ ಇವುಗಳ ಶಕ್ತಿಗಳ ನಡುವೆ ಘರ್ಷಣೆ ಏರ್ಪಡುತ್ತದೆ. ಅಲ್ಲದೆ, ಫ್ರಿಜ್ ಚಾಲನೆಯಲ್ಲಿರುವಾಗ ಉಂಟಾಗುವ ಕಂಪನದಿಂದ (Vibration) ಮೇಲಿಟ್ಟ ವಸ್ತುಗಳು ಕೆಳಗೆ ಬಿದ್ದು ಹಾಳಾಗುವ ಅಪಾಯವೂ ಇರುತ್ತದೆ.

ಒಣಗಿದ ಹೂವುಗಳು ಅಥವಾ ಬೋನ್ಸಾಯ್ ಗಿಡಗಳು

ಶಾಸ್ತ್ರದ ಪ್ರಕಾರ, ಒಣಗಿದ ಅಥವಾ ಬೆಳವಣಿಗೆ ಕುಂಠಿತಗೊಂಡ ಗಿಡಗಳು ಮನೆಯಲ್ಲಿ ‘ಮೃತ ಶಕ್ತಿ’ಯನ್ನು (Dead Energy) ಮತ್ತು ನಕಾರಾತ್ಮಕತೆಯನ್ನು ಆಕರ್ಷಿಸುತ್ತವೆ.

ವಾಸ್ತು ಶಾಸ್ತ್ರದ ನಿಯಮಗಳ ಪ್ರಕಾರ, ಫ್ರಿಜ್ ಅನ್ನು ಯಾವಾಗಲೂ ಅಡುಗೆಮನೆ ಅಥವಾ ಡೈನಿಂಗ್ ರೂಮ್‌ನ ದಕ್ಷಿಣ-ಪಶ್ಚಿಮ (South-West) ಅಥವಾ ದಕ್ಷಿಣ-ಪೂರ್ವ (South-East) ದಿಕ್ಕಿನಲ್ಲಿ ಇಡುವುದು ಅತ್ಯಂತ ಶುಭ ತರಲಿದೆ. ಯಾವುದೇ ಕಾರಣಕ್ಕೂ ಫ್ರಿಜ್ ಅನ್ನು ಈಶಾನ್ಯ (North-East) ದಿಕ್ಕಿನಲ್ಲಿ ಇಡಬಾರದು. ಇದರೊಂದಿಗೆ, ಫ್ರಿಜ್ ಅನ್ನು ಯಾವಾಗಲೂ ಸ್ವಚ್ಛವಾಗಿ ಹಾಗೂ ವ್ಯವಸ್ಥಿತವಾಗಿ ಇಟ್ಟುಕೊಳ್ಳಬೇಕು; ಅದರಲ್ಲಿ ಅನಗತ್ಯ ವಸ್ತುಗಳನ್ನು ತುಂಬಿಸಿ ಕಸದ ತೊಟ್ಟಿಯಂತೆ ಮಾಡಬಾರದು.

The post ಫ್ರಿಜ್ ಮೇಲೆ 5 ವಸ್ತು ಇಡಬೇಡಿ, ಹಣದ ನಷ್ಟ ಗ್ಯಾರಂಟಿ! appeared first on Good News 24x7.

]]>