Kempegowda Archives - Good News 24x7 https://www.goodnews24x7.com/tag/kempegowda/ Kannada Sat, 27 Jun 2026 05:55:31 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Kempegowda Archives - Good News 24x7 https://www.goodnews24x7.com/tag/kempegowda/ 32 32 ನಾಡಪ್ರಭು ಕೆಂಪೇಗೌಡರ ಜನ್ಮದಿನದ ಶುಭಾಶಯಗಳು! https://www.goodnews24x7.com/happy-birthday-to-nadaprabhu-kempegowda/ Sat, 27 Jun 2026 05:50:23 +0000 https://www.goodnews24x7.com/?p=9683 ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಎಲ್ಲರೂ ಗೌರವ ಭಾವದಿಂದ ಸ್ಮರಿಸಬೇಕಾದ ದಿನ; ಆಡಳಿತಗಾರರು ಕೃತಜ್ಞತೆಯಿಂದ ನೆನಪಿಸಿಕೊಳ್ಳಬೇಕಾದ ದಿನ. ಏಕೆಂದರೆ, ಬೆಂಗಳೂರಿನಂಥ ಮಹಾಮಹಿಮ ನಗರಕ್ಕೆ ತಳಪಾಯ ಹಾಕಿದ ನಾಡಪ್ರಭುಗಳ 513ನೇ ಜನ್ಮದಿನವಿದು. ಇದನ್ನು ಸರ್ಕಾರವೇ ವಿಜೃಂಭಣೆಯಿಂದ ಆಚರಿಸುತ್ತಿದ್ದು, ‘ಬೆಂಗಳೂರಿನ ಜನಕ’ರನ್ನು ಸ್ಮರಿಸುತ್ತಿದೆ. ಈ ಮೂಲಕ,…

The post ನಾಡಪ್ರಭು ಕೆಂಪೇಗೌಡರ ಜನ್ಮದಿನದ ಶುಭಾಶಯಗಳು! appeared first on Good News 24x7.

]]>

ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಎಲ್ಲರೂ ಗೌರವ ಭಾವದಿಂದ ಸ್ಮರಿಸಬೇಕಾದ ದಿನ; ಆಡಳಿತಗಾರರು ಕೃತಜ್ಞತೆಯಿಂದ ನೆನಪಿಸಿಕೊಳ್ಳಬೇಕಾದ ದಿನ. ಏಕೆಂದರೆ, ಬೆಂಗಳೂರಿನಂಥ ಮಹಾಮಹಿಮ ನಗರಕ್ಕೆ ತಳಪಾಯ ಹಾಕಿದ ನಾಡಪ್ರಭುಗಳ 513ನೇ ಜನ್ಮದಿನವಿದು. ಇದನ್ನು ಸರ್ಕಾರವೇ ವಿಜೃಂಭಣೆಯಿಂದ ಆಚರಿಸುತ್ತಿದ್ದು, ‘ಬೆಂಗಳೂರಿನ ಜನಕ’ರನ್ನು ಸ್ಮರಿಸುತ್ತಿದೆ. ಈ ಮೂಲಕ, ಕೆಂಪೇಗೌಡರ ವೈಭವದ ಪರಂಪರೆಯನ್ನು ತರುಣ ತಲೆಮಾರುಗಳಿಗೆ ವರ್ಗಾಯಿಸುವ ಕೆಲಸವೂ ಆಗುತ್ತಿದೆ.

ಬೆಂಗಳೂರಿಗೆ ಏನಿಲ್ಲವೆಂದರೂ 1,100 ವರ್ಷಗಳ ಇತಿಹಾಸವಿದೆ. ಕನ್ನಡ ನಾಡಿನ ಬಹುಭಾಗದಿಂದ ಹಿಡಿದು ತಮಿಳುನಾಡಿನ ಮದುರೆಯವರೆಗೂ ಆಳಿದ ಹೊಯ್ಸಳರ ದೊರೆ ಬಲ್ಲಾಳನ ಕಾಲದಿಂದಲೂ ಬೆಂಗಳೂರಿನ ಉಲ್ಲೇಖವು ನಮಗೆ ಅನೇಕ ಕಡೆಗಳಲ್ಲಿ ಸಿಗುತ್ತದೆ.
18 ಬಗೆಯ ಕಸುಬುಗಳನ್ನು ಆಧರಿಸಿದ ಮೂಲ ಬೆಂಗಳೂರಿನ ‘ಪೇಟೆ’ಗಳನ್ನು (ಉದಾ: ದೊಡ್ಡಪೇಟೆ, ಚಿಕ್ಕಪೇಟೆ, ತಿಗಳರ ಪೇಟೆ, ಕುರುಬರ ಪೇಟೆ, ಅರಳೇಪೇಟೆ, ಬಳೇಪೇಟೆ, ತರಗುಪೇಟೆ, ಅಕ್ಕಿಪೇಟೆ, ರಾಗಿಪೇಟೆ, ಕುಂಬಾರರ ಪೇಟೆ, ನಗರ್ತರ ಪೇಟೆ, ಗಾಣಿಗರ ಪೇಟೆ, ಮಡಿವಾಳ ಪೇಟೆ, ಉಪ್ಪಾರಪೇಟೆ ಇತ್ಯಾದಿಗಳು) ನೋಡಿದರೆ, ಇದು ಗೊತ್ತಾಗುತ್ತದೆ.

ಈ ‘ಮೂಲ ಬೆಂಗಳೂರೇ’ ಕೆಂಪೇಗೌಡರು ಕಟ್ಟಿದ ಬೆಂಗಳೂರು ಎನ್ನುವುದು ಅಧ್ಯಯನಗಳಿಂದ ತಿಳಿದುಬಂದಿದೆ. ಇದರ ಆಧಾರದ ಮೇಲೆ, ನಂತರದ ಕಾಲದಲ್ಲಿ ಬಂದ ಆಳ್ವಿಕೆಗಾರರು ಬೆಂಗಳೂರನ್ನು ಪೇಟೆಯಾಗಿ, ಪಟ್ಟಣವಾಗಿ, ನಗರವಾಗಿ, ಮಹಾನಗರವಾಗಿ ಬೆಳೆಸಿದ್ದಾರೆ. ಈಗಂತೂ ನಮ್ಮ ರಾಜಧಾನಿಯು ಈ ಹಿರಿಮೆಗಳನ್ನೆಲ್ಲ ದಾಟಿ, ಜಪಾನಿನಿಂದ ಹಿಡಿದು ಅಮೆರಿಕದವರೆಗೂ ಎಲ್ಲರಿಗೂ ಗೊತ್ತಿರುವ ಒಂದು ‘ಕಾಸ್ಮೋಪಾಲಿಟನ್‌ ಸಿಟಿ’ ಆಗಿ, ಹೆಮ್ಮರದಂತೆ ಬೆಳೆದಿದೆಪೇಟೆಯಿಂದ ಸಿಟಿಯವರೆಗೆ
ಬೆಂಗಳೂರು ಇಂದು ಐಟಿ ಸಿಟಿ, ಬಿಟಿ ಸಿಟಿ, ನವೋದ್ಯಮಗಳ ನಗರ, ಸಂಶೋಧನೆಗಳ ನಗರ, ಏರೋನಾಟಿಕ್ಸ್‌ ಸಿಟಿ.. ಇತ್ಯಾದಿಗಳೆಲ್ಲ ಆಗಿದೆ. ಜೊತೆಗೆ, ಉದ್ಯಾನ ನಗರಿ ಎಂಬ ಖ್ಯಾತಿಯನ್ನೂ ಉಳಿಸಿಕೊಂಡಿದೆ. ಇದಲ್ಲದೆ, ಇತ್ತೀಚಿನ ವರ್ಷಗಳಲ್ಲಿ ಭಾರತದ ಆರ್ಥಿಕ ಕೇಂದ್ರವಾಗಿಯೂ ನಮ್ಮ ಬೆಂಗಳೂರು ಬೆಳೆದಿದೆ; ಇದಕ್ಕೆ ಪೂರಕವಾಗಿ ಇದು ನಿಜವಾದ ಅರ್ಥದಲ್ಲಿ ‘ನಾಲೆಡ್ಜ್‌ ಸಿಟಿ’ಯೂ ಆಗಿ ಬೆಳೆಯುತ್ತಿದೆ. ಒಟ್ಟಿನಲ್ಲಿ, ಇಲ್ಲಿ ಎಲ್ಲವೂ ಕೆಂಪೇಗೌಡರು ಹಾಕಿದ ಬುನಾದಿಯ ಮೇಲೆಯೇ ವಿಸ್ತರಣೆ ಆಗುತ್ತಿವೆ ಎನ್ನುವುದು ಹೆಮ್ಮೆಯ ಸಂಗತಿ.ಹೀಗಾಗಿಯೇ ಬೆಂಗಳೂರು ಇಂದು ಬಹುದೊಡ್ಡ ಶಿಕ್ಷಣ ತಾಣವಾಗಿದೆ; ಒಂದೂ ಕಾಲು ಕೋಟಿ ಜನರ ಪಾಲಿಗೆ ಸೂರಾಗಿದೆ; ವಿದೇಶೀಯರ ಪಾಲಿಗೆ ಅಚ್ಚುಮೆಚ್ಚಿನ ‘ಡೆಸ್ಟಿನೇಶನ್‌’ ಆಗಿದೆ! ಕಲಿಕೆ, ಹೂಡಿಕೆ, ಕೈಗಾರಿಕೆ, ಆಡಳಿತ, ಸಂಸ್ಕೃತಿ, ಶಾಂತಿ, ಹಿತಕರ ಹವೆ- ಹೀಗೆ ಎಲ್ಲದಕ್ಕೂ ಬೆಂಗಳೂರು ಇನ್ನೊಂದು ಹೆಸರಾಗಿದೆ. ಇವೆಲ್ಲಕ್ಕೆ ಕಿರೀಟವಿಟ್ಟಂತೆ ಈಗ ಇದು ‘ದೇಶದ ಡೆಕಾಕಾರ್ನ್‌ ಕಂಪನಿಗಳ ರಾಜಧಾನಿ’ಯಾಗಿಯೂ ಹೊರಹೊಮ್ಮಿದೆ. ಐಟಿ-ಬಿಟಿ ಖಾತೆಗಳ ಜವಾಬ್ದಾರಿಯನ್ನೂ ಹೊತ್ತುಕೊಂಡಿರುವ ನನಗೆ ದಿನನಿತ್ಯವೂ ಇದರ ಸಾಕ್ಷಾತ್‌ ದರ್ಶನವೇ ಆಗುತ್ತಿದೆ.

ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ

ಕೆಂಪೇಗೌಡರಿಗೆ ಸಂಬಂಧಿಸಿದ 46 ತಾಣಗಳನ್ನು ಅಭಿವೃದ್ಧಿಪಡಿಸಲು ‘ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರ’ವನ್ನೇ ರಚಿಸಲಾಗಿದ್ದು, ಇದಕ್ಕೆ ಅಗತ್ಯ ಹಣಕಾಸಿನ ಅನುದಾನ ಒದಗಿಸಲಾಗುತ್ತಿದೆ. ಇದರಡಿಯಲ್ಲಿ ಮಾಗಡಿ ತಾಲ್ಲೂಕಿನಲ್ಲಿರುವ ಕೆಂಪೇಗೌಡರ ಸಮಾಧಿ ಸ್ಥಳವಾದ ಕೆಂಪಾಪುರವನ್ನು ಸ್ಥಳಾಂತರಿಸಿ, ಅಲ್ಲಿ ‘ವೀರಸಮಾಧಿ ಅಭಿವೃದ್ಧಿ’ಯನ್ನು ಕೋಟ್ಯಂತರ ವೆಚ್ಚದಲ್ಲಿ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಭೂಸ್ವಾಧೀನ ಕಾರ್ಯ ಈಗಾಗಲೇ ಅಂತಿಮ ಹಂತದಲ್ಲಿ ಪ್ರಗತಿಯಲ್ಲಿದೆ. ಹಾಗೆಯೇ, ಮಾಗಡಿಯಲ್ಲಿ ಕೆಂಪೇಗೌಡರು ಕಟ್ಟಿದ ಕೋಟೆಯನ್ನು ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡಲಾಗುತ್ತಿದೆ. ಒಟ್ಟಿನಲ್ಲಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಕೆಂಪೇಗೌಡರಿಗೆ ಸಂಬಂಧಿಸಿದ ಸ್ಥಳಗಳನ್ನೆಲ್ಲ ‘ಮಾಗಡಿ, ಬೆಂಗಳೂರು ಮತ್ತು ನಂದಿ ಸಕ್ರ್ಯೂಟ್‌ ಗಳನ್ನಾಗಿ’ ವಿಂಗಡಿಸಿ, ಆಕರ್ಷಕ ಸ್ಥಳಗಳನ್ನಾಗಿ ಮಾಡಲಾಗುತ್ತಿದೆ. ಇದರಿಂದ ಪ್ರವಾಸೋದ್ಯಮ ಚಟುವಟಿಕೆಗಳೂ ಗರಿಗೆದರುತ್ತವೆ. ಈಗಾಗಲೇ ಈ ಪೈಕಿ ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳ ತಾಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ, ‘ಐಡೆಕ್‌’ ಸಂಸ್ಥೆಯಿಂದ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ.
ಒಟ್ಟಿನಲ್ಲಿ, ಕೆಂಪೇಗೌಡರು ಕಟ್ಟಿಸಿದ ಕೋಟೆಗಳು, ಕೆರೆಗಳು, ಪಾರಂಪರಿಕ ತಾಣಗಳೆಲ್ಲವೂ ಚಿರಸ್ಥಾಯಿಯಾಗಿ ಉಳಿಯಬೇಕೆನ್ನುವುದು ನಮ್ಮ ಸರ್ಕಾರದ ಸಂಕಲ್ಪವಾಗಿದೆ. ಮಿಗಿಲಾಗಿ, ಕೆಂಪೇಗೌಡರ ವಂಶಕ್ಕೆ ಸೇರಿದ ಇತಿಹಾಸ, ಕಲೆ, ಸಾಹಿತ್ಯ, ವಾಸ್ತುಶಿಲ್ಪ, ನೀರಾವರಿ, ಯೋಜನೆಗಳು ಇತ್ಯಾದಿಗಳ ಬಗ್ಗೆ ಆಯಾ ಕ್ಷೇತ್ರಗಳ ತಜ್ಞರಿಂದ ಸಮಗ್ರ ಮತ್ತು ತಲಸ್ಪರ್ಶಿ ಅಧ್ಯಯನಕ್ಕೆ ಬೇಕಾದ ಸೌಲಭ್ಯವನ್ನು ಮಾಡಿಕೊಡುವುದೂ ಸರ್ಕಾರದ ಚಿಂತನೆಯಲ್ಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ

ಕೆಂಪೇಗೌಡರ ಗೌರವಾರ್ಥವಾಗಿ, ಈ ವರ್ಷದಿಂದಲೇ ನಾನಾ ಕ್ಷೇತ್ರಗಳ ಅನುಪಮ ಸಾಧಕರಿಗೆ ‘ಅಂತಾರಾಷ್ಟ್ರೀಯ ಪ್ರಶಸ್ತಿ’ಯನ್ನು ಸರ್ಕಾರ ಆರಂಭಿಸಿದೆ. ಮೊದಲ ವರ್ಷದ ಈ ಪ್ರಶಸ್ತಿಗೆ ಬೆಂಗಳೂರು ವಿಶ್ವ ಭೂಪಟದಲ್ಲಿ ಕಾಣಿಸಿಕೊಳ್ಳುವಂತೆ ಮಾಡಿದ ಎಸ್‌.ಎಂ.ಕೃಷ್ಣ, ಇಸ್ಫೋಸಿಸ್‌ ಕಂಪನಿಯನ್ನು ಸ್ಥಾಪಿಸುವ ಮೂಲಕ ನಮ್ಮ ನಗರಕ್ಕೆ ‘ಭಾರತದ ಸಿಲಿಕಾನ್‌ ಸಿಟಿ’ ಎನ್ನುವ ಶ್ರೇಯಸ್ಸನ್ನು ತಂದಿತ್ತ ಎನ್‌.ಆರ್‌.ನಾರಾಯಣಮೂರ್ತಿ ಮತ್ತು ಬ್ಯಾಡ್ಮಿಂಟನ್‌ ತಾರೆ ಪ್ರಕಾಶ್‌ ಪಡುಕೋಣೆ ಅವರನ್ನು ತಜ್ಞರ ಸಮಿತಿಯು ಆರಿಸಿದೆ. ಇಂದು ನಡೆಯಲಿರುವ ‘ಕೆಂಪೇಗೌಡರ ಜಯಂತಿ’ಯಲ್ಲಿ ಈ ಮೂವರಿಗೂ ತಲಾ 5 ಲಕ್ಷ ರು. ನಗದಿನೊಂದಿಗೆ ಈ ಪ್ರತಿಷ್ಠಿತ ಪುರಸ್ಕಾರವನ್ನು ಪ್ರದಾನ ಮಾಡಲಾಗುವುದು.

ಕೆಂಪೇಗೌಡರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ಹೀಗೆ ಹಲವು ಅರ್ಥಪೂರ್ಣ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಇಂದು ಗಳಿಸಿರುವ ಅತಿಶಯವಾದ ಕೀರ್ತಿಗೆ ಕೆಂಪೇಗೌಡರೇ ಮೂಲಕಾರಣ! ಅವರು ಹಾಕಿಕೊಟ್ಟಿರುವ ಹಾದಿಯಲ್ಲೇ ನಾವೂ ಹೆಜ್ಜೆ ಇಡುತ್ತಿದ್ದೇವೆ. ನಾಡಿನ ಸಮಸ್ತ ಜನತೆ ಗುಡ್ ನ್ಯೂಸ್ ವಾಹಿನಿಯ ವತಿಯಿಂದ ನಾಡಪ್ರಭು ಕೆಂಪೇಗೌಡರ ಜನ್ಮದಿನದ ಶುಭಾಶಯಗಳು!

The post ನಾಡಪ್ರಭು ಕೆಂಪೇಗೌಡರ ಜನ್ಮದಿನದ ಶುಭಾಶಯಗಳು! appeared first on Good News 24x7.

]]>
ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ -ಮುಖ್ಯಮಂತ್ರಿ ಸಿದ್ದರಾಮಯ್ಯ. https://www.goodnews24x7.com/kempegowda-is-a-visionary-politician-who-has-built-an-inclusive-society-chief-minister-siddaramaiah/ Fri, 27 Jun 2025 11:23:24 +0000 https://www.goodnews24x7.com/?p=4720 ಬೆಂಗಳೂರು : ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು…

The post ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ -ಮುಖ್ಯಮಂತ್ರಿ ಸಿದ್ದರಾಮಯ್ಯ. appeared first on Good News 24x7.

]]>

ಬೆಂಗಳೂರು : ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು
ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇವರ ವತಿಯಿಂದ ಬಾಬು ಜಗಜೀವನ ರಾಮ್ ಭವನ ದಲ್ಲಿ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರದಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಪ್ರಾರಂಭ
ಇಂದು ಸರ್ಕಾರದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಗುತ್ತಿದ್ದು, ನಾಡಿನ ಎಲ್ಲರಿಗೂ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಗಳು, 2017ರಲ್ಲಿ ನಮ್ಮ ಸರ್ಕಾರ ಪ್ರತಿ ವರ್ಷ ಜೂನ್ 27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸುವ ತೀರ್ಮಾನವನ್ನು ಕೈಗೊಂಡಿತು. ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರವನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಪ್ರಾರಂಭಿಸಲಾಯಿತು.ಮಾಗಡಿಯ ಕೆಂಪಾಪುರದಲ್ಲಿ ಕೆಂಪೇಗೌಡರ ಸಮಾಧಿಯ ಅಭಿವೃದ್ಧಿ ಕಾರ್ಯವನ್ನು ಸರ್ಕಾರ ಕೈಗೆತ್ತಿಗೊಂಡಿದೆ ಎಂದರು.


ವೃತ್ತಿಯಾಧಾರಿತ ಪೇಟೆಗಳನ್ನು ನಿರ್ಮಿಸಿದ ಕೀರ್ತಿ ಕಂಪೇಗೌಡರದ್ದು

ಬೆಂಗಳೂರು ನಗರ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯಲು ಕೆಂಪೇಗೌಡರೇ ಮೂಲ ಕಾರಣ.ವಿಶ್ವಮಟ್ಟದಲ್ಲಿ ಬೆಂಗಳೂರು ಅತಿವೇಗದಲ್ಲಿ ಬೆಳೆಯುತ್ತಿರುವ ನಗರ. ಎಲ್ಲ ಜನರನ್ನೊಳಗೊಂಡ ಅಭಿವೃದ್ಧಿಗೊಳಿಸುವ, ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಅವರು ಕೈಗೊಂಡಿದ್ದರು. ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣವೇ ನಮ್ಮ ಸಂವಿಧಾನದ ಆಶಯ. 500 ವರ್ಷಗಳ ಹಿಂದೆಯೇ ನಾಡಪ್ರಭು ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಿಸುವ ದೂರದೃಷ್ಟಿಯನ್ನು ಹೊಂದಿದ್ದ ಮುತ್ಸದ್ದಿ ನಾಯಕರಾಗಿದ್ದರು. ವೃತ್ತಿಯಾಧಾರಿತ ಪೇಟೆಗಳನ್ನು ನಿರ್ಮಿಸಿ, ಬೆಂಗಳೂರನ್ನು ವಾಣಿಜ್ಯ ಕೇಂದ್ರವಾಗಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ.

ಬೆಂಗಳೂರಿನ ಅಭಿವೃದ್ಧಿಗೆ ಕೆಂಪೇಗೌಡರು ಕಾರಣ

ಹಂಪಿ ಬಹಳ ಪ್ರವರ್ಧಮಾನಕ್ಕೆ ಬಂದಿದ್ದ ಕಾಲದಲ್ಲಿ ಪ್ರೇರಣೆ ಪಡೆದು ಬೆಂಗಳೂರನ್ನು ಅಭಿವೃದ್ಧಿಪಡಿಸುವ ಉದ್ದೇಶ ಕೆಂಪೇಗೌಡರಿಗಿತ್ತು.ಹಾಗಾಗಿ ಬೆಂಗಳೂರು ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ, ಸ್ಟಾರ್ಟ್ ಅಪ್ ರಾಜಧಾನಿ , ಶೈಕ್ಷಣಿಕ ಹಾಗೂ ಆರೋಗ್ಯ ಕೇಂದ್ರವಾಗಿದ್ದರೆ ಅದಕ್ಕೆ ಈ ನಗರದ ಅಡಿಪಾಯ ಹಾಕಿದ ಕೆಂಪೇಗೌಡರು ಕಾರಣ ಎಂದರು.

ಬೆಂಗಳೂರಿನ ಅಭಿವೃದ್ಧಿ ಸರ್ಕಾರದ ಕರ್ತವ್ಯ ಮತ್ತು ಜವಾಬ್ದಾರಿ
ಬೆಂಗಳೂರನ್ನು ಇನ್ನಷ್ಟು ಅಭಿವೃದ್ಧಿ ಮಾಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಅದನ್ನು ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ಬಹುತೇಕ ಜಯಂತಿಗಳನ್ನು ಆಚರಣೆಗೆ ತಂದಿರುವುದು ಕಾಂಗ್ರೆಸ್ ಸರ್ಕಾರ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಟ್ಟಿದ್ದು ನಮ್ಮ ಸರ್ಕಾರ. ಸರ್ಕಾರದ ವತಿಯಿಂದ 33 ಜಯಂತಿಗಳನ್ನು ಆಚರಿಸಲಾಗುತ್ತಿದ್ದು, ಅದರಲ್ಲಿ ಅರ್ಧಕ್ಕಿಂತ ಹೆಚ್ಚು ಜಯಂತಿಗಳನ್ನು ನಮ್ಮ ಸರ್ಕಾರ ಜಾರಿಗೆ ತಂದಿರುವ ಬಗ್ಗೆ ಅಭಿಮಾನ, ಗೌರವವಿದೆ. ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಕೃಷ್ಣ ಜಯಂತಿ, ಮಹಾವೀರ ಜಯಂತಿ, ವಾಮನ ಜಯಂತಿ ಸೇರಿದಂತೆ ಮುಖ್ಯವಾದ ಜಯಂತಿಗಳ ಆಚರಣೆಯನ್ನು ಜಾರಿಗೆ ತಂದಿದ್ದು ನಮ್ಮ ಸರ್ಕಾರ.

ಕೆಂಪೇಗೌಡರ ಆಡಳಿತದ ವೈಖರಿ ನಮ್ಮೆಲ್ಲರಿಗೂ ಸ್ಪೂರ್ತಿ.
ಕೆಂಪೇಗೌಡರ ಆಡಳಿತ ಜನಪರವಾಗಿದ್ದು, ಅವರನ್ನು ನೆನೆದು ಸ್ಪೂರ್ತಿಯನ್ನು ಪಡೆದುಕೊಳ್ಳಬೇಕಾಗುತ್ತದೆ. ಕೆಂಪೇಗೌಡರ ಬಗ್ಗೆ ಅಗಾಧ ಗೌರವವನ್ನು ಇಟ್ಟುಕೊಂಡಿದ್ದು, ಅವರ ಆಡಳಿತದ ವೈಖರಿ ನಮ್ಮೆಲ್ಲರಿಗೂ ಸ್ಪೂರ್ತಿ. ಎಲಾ ಜಾತಿಗಳಿಗೂ ಸಾಮಾಜಿಕ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದರು.

ಪ್ರಶಸ್ತಿಗೆ ಭಾಜನವಾಗಿದೆ ಸಂಸ್ಥೆಗಳಿಗೆ ಅಭಿನಂದನೆ
ಐಐಎಸ್ಸಿ ,ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ,ಮೈಸೂರು ಸೋಪ್ಸ್ ಅಂಡ್ ಡಿಟಜೆಂಟ್ಸ್ ಸಂಸ್ಥೆ ಪ್ರಶಸ್ತಿಗೆ ಭಾಜನವಾಗಿದೆ. ಈ ಸಂಸ್ಥೆಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಮುಖ್ಯಮಂತ್ರಿಗಳು ಅಭಿನಂದಿಸಿದರು.

ಕೆಂಪೇಗೌಡ ಭವನಕ್ಕೆ ಶಂಕುಸ್ಥಾಪನೆ
ಕಳೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಸುಮನಹಳ್ಳಿ ವೃತ್ತದಲ್ಲಿ ಕೆಂಪೇಗೌಡ ಭವನವನ್ನು ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಲಾಗಿದೆ. ಆದಷ್ಟೂ ಶೀಘ್ರವಾಗಿ ಕಟ್ಟಡವನ್ನು ನಿರ್ಮಾಣ ಮಾಡಿ ತಾವೇ ಉದ್ಘಾಟಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

The post ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ -ಮುಖ್ಯಮಂತ್ರಿ ಸಿದ್ದರಾಮಯ್ಯ. appeared first on Good News 24x7.

]]>