KRS Archives - Good News 24x7 https://www.goodnews24x7.com/tag/krs/ Kannada Tue, 14 Jul 2026 06:11:54 +0000 en-US hourly 1 https://wordpress.org/?v=7.0.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg KRS Archives - Good News 24x7 https://www.goodnews24x7.com/tag/krs/ 32 32 KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ! https://www.goodnews24x7.com/9836-2huge-drop-in-krs-inflow-farmers-and-bengaluruans-worried/ Tue, 14 Jul 2026 06:11:54 +0000 https://www.goodnews24x7.com/?p=9836 ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಕಡಿಮೆಯಾಗುತ್ತಿದ್ದಂತೆಯೇ, ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ (KRS) ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ. ಇದು ಕೇವಲ ಕೃಷಿಯನ್ನೇ ನಂಬಿದ ಅನ್ನದಾತರ ನಿದ್ದೆಗೆಡಿಸಿರುವುದು ಮಾತ್ರವಲ್ಲದೆ, ಕಾವೇರಿ ನೀರನ್ನೇ ಅವಲಂಬಿಸಿರುವ ಸಿಲಿಕಾನ್ ಸಿಟಿ ಬೆಂಗಳೂರಿಗೂ…

The post KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ! appeared first on Good News 24x7.

]]>

ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಕಡಿಮೆಯಾಗುತ್ತಿದ್ದಂತೆಯೇ, ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ (KRS) ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ. ಇದು ಕೇವಲ ಕೃಷಿಯನ್ನೇ ನಂಬಿದ ಅನ್ನದಾತರ ನಿದ್ದೆಗೆಡಿಸಿರುವುದು ಮಾತ್ರವಲ್ಲದೆ, ಕಾವೇರಿ ನೀರನ್ನೇ ಅವಲಂಬಿಸಿರುವ ಸಿಲಿಕಾನ್ ಸಿಟಿ ಬೆಂಗಳೂರಿಗೂ ಕುಡಿಯುವ ನೀರಿನ ಸಂಕಷ್ಟದ ಮುನ್ಸೂಚನೆ ನೀಡಿದೆ. ಒಳಹರಿವಿನಲ್ಲಿ ದಿಢೀರ್ ಕುಸಿತಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಯಿಂದಾಗಿ ಕೆಆರ್‌ಎಸ್ ಡ್ಯಾಂಗೆ ಬರುವ ನೀರಿನ ಪ್ರಮಾಣ 12 ಸಾವಿರ ಕ್ಯೂಸೆಕ್ ದಾಟಿತ್ತು. ಆದರೆ ಈಗ ಮಳೆ ಬಿಡುವು ನೀಡಿರುವುದರಿಂದ ಒಳಹರಿವು ಗಣನೀಯವಾಗಿ ಕುಸಿದಿದೆ.ನಿನ್ನೆಯ ಒಳಹರಿವು: 7,500 ಕ್ಯೂಸೆಕ್ಇಂದಿನ ಒಳಹರಿವು: ಕೇವಲ 3,685 ಕ್ಯೂಸೆಕ್ಮುಂಗಾರು ಆರಂಭದ ಮಳೆ ನೋಡಿ ಕೃಷಿ ಚಟುವಟಿಕೆಗಳಿಗೆ ಸಜ್ಜಾಗಿದ್ದ ಮಂಡ್ಯ ಭಾಗದ ರೈತರು, ಈಗ ಬೆಳೆಗಳಿಗೆ ನೀರು ಸಿಗುತ್ತದೋ ಇಲ್ಲವೋ ಎಂಬ ಆತಂಕದಲ್ಲಿದ್ದಾರೆ. ಬೆಂಗಳೂರಿಗರಿಗೂ ಕಾದಿದೆಯೇ ನೀರಿನ ಕ್ಷಾಮ?ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಕುಸಿಯುತ್ತಿರುವುದು ಬೆಂಗಳೂರು ನಗರದ ಪಾಲಿಗೆ ಆತಂಕದ ಸಂಗತಿಯಾಗಿದೆ. ಬೆಂಗಳೂರಿನ ಬಹುತೇಕ ಭಾಗಗಳಿಗೆ ಕುಡಿಯುವ ನೀರು ಪೂರೈಕೆಯಾಗುವುದು ಇದೇ ಕಾವೇರಿ ನದಿಯಿಂದ. ಸದ್ಯ ಕುಡಿಯುವ ಉದ್ದೇಶಕ್ಕಾಗಿ ಜಲಾಶಯದಿಂದ 623 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಒಂದು ವೇಳೆ ಮಳೆ ಮತ್ತೆ ಚುರುಕುಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆಯಿದೆ.ಜಲಾಶಯದ ಇಂದಿನ ಸ್ಥಿತಿಗತಿ (KRS Today’s Status)ವಿವರಗಳುಮಾಹಿತಿಗರಿಷ್ಠ ಮಟ್ಟ124.80 ಅಡಿಇಂದಿನ ಮಟ್ಟ92.54 ಅಡಿಗರಿಷ್ಠ ಸಾಮರ್ಥ್ಯ49.452 ಟಿಎಂಸಿಸದ್ಯದ ನೀರಿನ ಸಂಗ್ರಹ17.509 ಟಿಎಂಸಿಇಂದಿನ ಒಳಹರಿವು3,685 ಕ್ಯೂಸೆಕ್ಇಂದಿನ ಹೊರಹರಿವು623 ಕ್ಯೂಸೆಕ್ಮುಖ್ಯ
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿರುವುದು ರೈತರಿಗೂ ಮತ್ತು ಜನಸಾಮಾನ್ಯರಿಗೂ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮುಂಬರುವ ದಿನಗಳಲ್ಲಿ ಮಳೆ ಮತ್ತೆ ಚುರುಕಾಗದಿದ್ದರೆ ನೀರಿನ ಸಂಕಷ್ಟ ಎದುರಾಗುವುದು ಅನಿವಾರ್ಯ ಎಂಬಂತಾಗಿದೆ.

The post KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ! appeared first on Good News 24x7.

]]>
ಕೆಆರ್ಎಸ್ ಹಿನ್ನೀರಿನಲ್ಲಿ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಜಲಸ*ಮಾಧಿ https://www.goodnews24x7.com/three-nursing-students-drown-in-krs-backwater/ Mon, 21 Jul 2025 08:06:00 +0000 https://www.goodnews24x7.com/?p=5162 ಮೈಸೂರು : ಪ್ರವಾಸ ಕ್ಕೆಂದು ಬಂದಿದ್ದ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮೈಸೂರು ತಾಲೂಕಿನ ಮೀನಾಕ್ಷಿಪುರದ ಕೆಆರ್ಎಸ್ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಮಂಡ್ಯದ ಸರ್ಕಾರಿ ವೈದ್ಯಕೀಯ ಕಾಲೇಜಿನ (ಮಿಮ್ಸ್) ನರ್ಸಿಂಗ್ ವಿದ್ಯಾರ್ಥಿಗಳಾದ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ…

The post ಕೆಆರ್ಎಸ್ ಹಿನ್ನೀರಿನಲ್ಲಿ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಜಲಸ*ಮಾಧಿ appeared first on Good News 24x7.

]]>

ಮೈಸೂರು : ಪ್ರವಾಸ ಕ್ಕೆಂದು ಬಂದಿದ್ದ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮೈಸೂರು ತಾಲೂಕಿನ ಮೀನಾಕ್ಷಿಪುರದ ಕೆಆರ್ಎಸ್ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಮಂಡ್ಯದ ಸರ್ಕಾರಿ ವೈದ್ಯಕೀಯ ಕಾಲೇಜಿನ (ಮಿಮ್ಸ್) ನರ್ಸಿಂಗ್ ವಿದ್ಯಾರ್ಥಿಗಳಾದ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಅನವಾಲು ಗ್ರಾಮದ ಪ್ರಶಾಂತ್ (21), ಚಾಮ ರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಸಂತೇಮರಹಳ್ಳಿಯ ಸಿದ್ದೇಶ್(22), ಕೊಪ್ಪಳ ಜಿಲ್ಲೆಯ ಕೃಷ್ಣ(21) ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟ ನರ್ಸಿಂಗ್ ವಿದ್ಯಾರ್ಥಿಗಳು.
ತುಂಬಿ ತುಳುಕುತ್ತಿರುವ ಕೆಆರ್ಎಸ್ ಜಲಾ ಶಯದ ಹಿನ್ನೀರಿನ ಪ್ರದೇಶಗಳು ಪ್ರವಾಸಿತಾಣವಾಗಿ ಮಾರ್ಪಟ್ಟಿದ್ದು, ಪ್ರತಿ ದಿನ ನೂರಾರು ಮಂದಿ ಪ್ರವಾಸಿಗರು ಹಿನ್ನೀರಿನ ಪ್ರದೇಶಕ್ಕೆ ಬಂದು ವಿಹರಿಸಿ ವಾಪಸ್ಸಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನರ್ಸಿಂಗ್ ಕಾಲೇಜಿನ 6 ವಿದ್ಯಾರ್ಥಿಗಳು 3 ಬೈಕ್ ಗಳಲ್ಲಿ ಭಾನುವಾರ ಬೆಳಗ್ಗೆ ವಿದ್ಯಾರ್ಥಿನಿಲಯ ದಿಂದ ಮೈಸೂರು ತಾಲೂಕಿನ ಮೀನಾಕ್ಷಿಪುರದ ಕೆಆರ್ಎಸ್ ಹಿನ್ನೀರಿನ ಪ್ರದೇಶಕ್ಕೆ ಪಿಕ್ನಿಕ್ ಬಂದಿದ್ದರು. ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಐವರು ವಿದ್ಯಾರ್ಥಿಗಳು ಈಜಲು ಮುಂದಾಗಿ ದ್ದರೆ, ಓರ್ವ ವಿದ್ಯಾರ್ಥಿ ದಡದಲ್ಲಿಯೇ ನಿಂತಿದ್ದ ಎನ್ನಲಾಗಿದೆ. ಕೆಲ ಸಮಯದ ನಂತರ ಈಜುತ್ತಿದ್ದ ಐವರು ವಿದ್ಯಾರ್ಥಿ ಗಳು ನೀರಿನ ಸೆಳೆತಕ್ಕೆ ಒಳಗಾಗಿದ್ದಾರೆ. ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರನ್ನು ದಡದಲ್ಲಿ ನಿಂತಿದ್ದ ರಕ್ಷಿಸಿದ್ದಾನೆ.
ಸ್ಥಳೀಯರು ಮತ್ತು ಇನ್ನಿತರ ಪ್ರವಾಸಿಗರು ನೆರವಿಗೆ ಬರುವ ವೇಳೆಗೆ ಮೂವರೂ ಹಿನ್ನೀರಿನಲ್ಲಿ ಸಂಪೂರ್ಣವಾಗಿ ಮುಳುಗಿದ್ದರು. ಇದರಿಂದ ಅವರನ್ನು ಸ್ಥಳೀಯರಿಗೆ ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಹಿನ್ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ಮುಳುಗಿರುವ ವಿಷಯ ತಿಳಿಯುತ್ತಿದ್ದಂತೆ ಇಲವಾಲ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಹೇಂದ್ರ ಸಿಬ್ಬಂದಿಗಳೊಂದಿಗೆ ಆಗಮಿಸಿ ಪರಿಶೀಲಿಸಿದರು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ನುರಿತ ಈಜುಗಾರರನ್ನು ಕರೆಸಿ ಸತತ 2 ಗಂಟೆ ಕಾರ್ಯಾಚರಣೆ ನಡೆಸಿದ ಬಳಿಕ ಸಂಜೆ 4 ಗಂಟೆಗೆ ಮೂವರು ವಿದ್ಯಾರ್ಥಿಗಳ ಮೃತದೇಹ ಪತ್ತೆಯಾ ಯಿತು.
ನಂತರ ಮಹಜರ್ ನಡೆಸಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜಿನ ಶವಾಗಾರಕ್ಕೆ ದೇಹಗಳನ್ನು ಸ್ಥಳಾಂತರಿಸ ಲಾಯಿತು. ಮೃತಪಟ್ಟ ವರು ವಿದ್ಯಾರ್ಥಿ ಗಳ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಸಂಜೆ ವೇಳೆಗೆ ಪಿರಿಯಾ ಪಟ್ಟಣದ ಪ್ರಶಾಂತ್ ಹಾಗೂ ಸಂತೇಮರ ಹಳ್ಳಿಯ ಸಿದ್ದೇಶ್ ಪೋಷಕರು ಶವಾ ಗಾರದ ಬಳಿ ಆಗಮಿಸಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಅವರ ಗೋಳಾಟ ಹೇಳತೀರದ್ದಾಗಿದೆ. ಬೆಳಗ್ಗೆ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸು ದಾರರಿಗೆ ದೇಹವನ್ನು ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಇಲವಾಲ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.

The post ಕೆಆರ್ಎಸ್ ಹಿನ್ನೀರಿನಲ್ಲಿ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಜಲಸ*ಮಾಧಿ appeared first on Good News 24x7.

]]>
4ನೇ ಬಾರಿಗೆ ಸಿಎಂ ಸಿದ್ದರಾಮಯ್ಯ KRSಗೆ ಬಾಗಿನ ಸಮರ್ಪಣೆ.. https://www.goodnews24x7.com/cm-siddaramaiah-dedicates-a-plot-to-krs-for-the-4th-time/ Mon, 30 Jun 2025 09:48:30 +0000 https://www.goodnews24x7.com/?p=4855 ಮಂಡ್ಯ: 93 ವರ್ಷಗಳ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಕೆಆರ್ಎಸ್ (ಕೃಷ್ಣರಾಜಸಾಗರ) ಡ್ಯಾಂ ಸಂಪೂರ್ಣ ಭರ್ತಿ ಆಗಿದ್ದು ಸಿಎಂ ಸಿದ್ದರಾಮಯ್ಯ ಅವರು ಇಂದು ಬಾಗಿನ ಸಮರ್ಪಣೆ ಮಾಡಿದರು. ಇದೇ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಎನ್ ಚೆಲುವರಾಯಸ್ವಾಮಿ…

The post 4ನೇ ಬಾರಿಗೆ ಸಿಎಂ ಸಿದ್ದರಾಮಯ್ಯ KRSಗೆ ಬಾಗಿನ ಸಮರ್ಪಣೆ.. appeared first on Good News 24x7.

]]>

ಮಂಡ್ಯ: 93 ವರ್ಷಗಳ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಕೆಆರ್ಎಸ್ (ಕೃಷ್ಣರಾಜಸಾಗರ) ಡ್ಯಾಂ ಸಂಪೂರ್ಣ ಭರ್ತಿ ಆಗಿದ್ದು ಸಿಎಂ ಸಿದ್ದರಾಮಯ್ಯ ಅವರು ಇಂದು ಬಾಗಿನ ಸಮರ್ಪಣೆ ಮಾಡಿದರು. ಇದೇ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಎನ್ ಚೆಲುವರಾಯಸ್ವಾಮಿ ಹಾಗೂ ಹೆಚ್.ಸಿ ಮಹದೇವಪ್ಪ ಸೇರಿ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.


ಸಿಎಂ ಸಿದ್ದರಾಮಯ್ಯ ಅವರು ಅಭಿಜಿತ್ ಶುಭ ಮುಹೂರ್ತದಲ್ಲಿ ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡಿದರು. ವೈದಿಕ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯಗಳು ನೆರವೇರಿದವು. ಕೆಆರ್ಎಸ್ ಜಲಾಶಯಕ್ಕೆ 4ನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಿ ಖುಷಿ ಪಟ್ಟರು. ನಂತರ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಇದೇ ವೇಳೆ ನಾಡಿನ ಜನರಿಗೆ ಒಳ್ಳೆಯದಾಗಲಿ ಎಂದು ತಾಯಿ ಕಾವೇರಿ ಬಳಿ ಪ್ರಾರ್ಥನೆ ಮಾಡಿದರು.

ದಾಖಲೆ ಬರೆದ ಸಿಎಂ
ಕೆಆರ್ಎಸ್ ಜಲಾಶಯ ಇತಿಹಾಸದಲ್ಲೇ ಇದೇ ಮೊಟ್ಟ ಮೊದಲ ಬಾರಿಗೆ ಜೂನ್ನಲ್ಲಿ ಸಂಪೂರ್ಣವಾಗಿ ಭರ್ತಿಯಾಗಿದೆ. ಜೂನ್ ತಿಂಗಳಲ್ಲೇ ಕೆಆರ್ಎಸ್ಗೆ ಬಾಗಿನ ಅರ್ಪಿಸಿದ ಕರ್ನಾಟಕದ ಮೊಟ್ಟ ಮೊದಲ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಿದ್ದಾರೆ. 1979 ರಂದು ಡಿ ದೇವರಾಜ ಅರಸು ಅವರ ಕಾಲದಲ್ಲಿ ಬಾಗಿನ ಕಾರ್ಯಕ್ರಮ ಆರಂಭವಾದರೂ ಈ ಹಿಂದಿನ ಯಾವ ಮುಖ್ಯಮಂತ್ರಿ ಕೂಡ ಜೂನ್ನಲ್ಲಿ ಬಾಗಿನ ಅರ್ಪಿಸಿರಲಿಲ್ಲ. ಆದರೆ ಈಗ ಸಿಎಂ ಸಿದ್ದರಾಮಯ್ಯ ಅವರು ಜೂನ್ನಲ್ಲೇ ಕೆಆರ್ಎಸ್ಗೆ ಬಾಗಿನ ಸಮರ್ಪಣೆ ಮಾಡಿ ನೂತನ ದಾಖಲೆ ಬರೆದಿದ್ದಾರೆ.

ಕೆಆರ್ಎಸ್ ಬಾಗಿನ ಸಮರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯವನ್ನು ಬಣ್ಣ ಬಣ್ಣದ ಹೂವುಗಳಿಂದ ಶೃಂಗಾರ ಮಾಡಲಾಗಿತ್ತು. ಅಣೆಕಟ್ಟೆ ಗೋಡೆಗೆ ಸುಣ್ಣ, ಬಣ್ಣ ಬಳೆದಿದ್ದು ಎಲ್ಲೆಡೆ ಕನ್ನಡ ಬಾವುಟಗಳು ರಾರಾಜಿಸುತ್ತಿದ್ದವು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಎನ್ ಚಲುವರಾಯಸ್ವಾಮಿ, ಹೆಚ್. ಸಿ ಮಹದೇವಪ್ಪ, ಕೆ ವೆಂಕಟೇಶ್, ಎನ್.ಎಸ್ ಬೋಸರಾಜು ಹಾಗೂ ಸ್ಥಳೀಯ ಶಾಸಕರು ಇದ್ದರು.

The post 4ನೇ ಬಾರಿಗೆ ಸಿಎಂ ಸಿದ್ದರಾಮಯ್ಯ KRSಗೆ ಬಾಗಿನ ಸಮರ್ಪಣೆ.. appeared first on Good News 24x7.

]]>
ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ! https://www.goodnews24x7.com/cm-siddaramaiah-to-set-new-record-by-offering-water-to-krs-reservoir/ Mon, 30 Jun 2025 05:09:26 +0000 https://www.goodnews24x7.com/?p=4824 ಮಂಡ್ಯ: ಇಂದು ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯ ಶೃಂಗಾರಗೊಂಡಿದೆ. ಕನ್ನಂಬಾಡಿ ಕಟ್ಟೆ ಹಸಿರು ತಳಿರು-ತೋರಣ ಹೂಗಳಿಂದ ಹಾಗೂ ಕನ್ನಡ ಬಾವುಟಗಳಿಂದ ಕಂಗೊಳಿಸುತ್ತಿದ್ದು ನೋಡುಗರನ್ನು ಸೆಳೆಯುವಂತ್ತಿದೆ. ಕೆಆರ್ಎಸ್ ಜಲಾಶಯ ಜೂನ್ ತಿಂಗಳಲ್ಲಿ ಸಂಪೂರ್ಣವಾಗಿ…

The post ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ! appeared first on Good News 24x7.

]]>

ಮಂಡ್ಯ: ಇಂದು ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯ ಶೃಂಗಾರಗೊಂಡಿದೆ. ಕನ್ನಂಬಾಡಿ ಕಟ್ಟೆ ಹಸಿರು ತಳಿರು-ತೋರಣ ಹೂಗಳಿಂದ ಹಾಗೂ ಕನ್ನಡ ಬಾವುಟಗಳಿಂದ ಕಂಗೊಳಿಸುತ್ತಿದ್ದು ನೋಡುಗರನ್ನು ಸೆಳೆಯುವಂತ್ತಿದೆ.


ಕೆಆರ್ಎಸ್ ಜಲಾಶಯ ಜೂನ್ ತಿಂಗಳಲ್ಲಿ ಸಂಪೂರ್ಣವಾಗಿ ಭರ್ತಿ ಆಗುವ ಮೂಲಕ 93 ವರ್ಷಗಳ ಇತಿಹಾಸದಲ್ಲಿ ಐತಿಹಾಸಕ ದಾಖಲೆ ಬರೆದಿದೆ. ಡ್ಯಾಂ ನಿರ್ಮಾಣ ಆದಾಗಿನಿಂದ ಜೂನ್ ತಿಂಗಳಲ್ಲಿ ಇದುವರೆಗೂ ತುಂಬಿರಲಿಲ್ಲ. ಆದರೆ 93 ವರ್ಷಗಳ ನಂತರ ಮೊಟ್ಟ ಮೊದಲ ಬಾರಿಗೆ ಈಗ ಕೆಆರ್ಎಸ್ ಭರ್ತಿಯಾಗಿದೆ. 124.80 ಅಡಿಗಳ ಗರಿಷ್ಠ ಮಟ್ಟ ಸಂಪೂರ್ಣ ಭರ್ತಿ ಆಗಿದ್ದು ಹೊಸ ಮೈಲಿಗಲ್ಲು ಸೃಷ್ಟಿಯಾಗಿದೆ.

ಈ ಹಿನ್ನೆಲೆಯಲ್ಲಿ ಇಂದು 11.30ಕ್ಕೆ ಅಭಿಜಿತ್ ಶುಭ ಮುಹೂರ್ತದಲ್ಲಿ ಕಾವೇರಿ ಮಾತೆಗೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಣೆ ಮಾಡಲಿದ್ದಾರೆ. ವೈದಿಕ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯ ನಡೆಯಲಿದೆ. ಸಿದ್ದರಾಮಯ್ಯಗೆ ನಾಲ್ಕನೇ ಬಾರಿಗೆ ಬಾಗಿನ ಅರ್ಪಿಸುವ ಸೌಭಾಗ್ಯ ದೊರಕಿದೆ. ಇದಾದ ಬಳಿಕ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ.

ಹೊಸ ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ

ಸಾಂದರ್ಭಿಕ ಚಿತ್ರ
ಕೆಆರ್ಎಸ್ ಜಲಾಶಯ ಇತಿಹಾಸದಲ್ಲೇ ಇದೇ ಮೊಟ್ಟ ಮೊದಲ ಬಾರಿಗೆ ಜೂನ್ನಲ್ಲಿ ಸಂಪೂರ್ಣವಾಗಿ ಭರ್ತಿಯಾಗಿದೆ. ಜೂನ್ ತಿಂಗಳಲ್ಲೇ ಕೆಆರ್ಎಸ್ಗೆ ಬಾಗಿನ ಅರ್ಪಿಸುತ್ತಿರುವ ಕರ್ನಾಟಕದ ಮೊಟ್ಟ ಮೊದಲ ಮುಖ್ಯಮಂತ್ರಿ ಆಗಲಿದ್ದಾರೆ. 1979 ರಂದು ಡಿ ದೇವರಾಜ ಅರಸು ಅವರ ಕಾಲದಲ್ಲಿ ಬಾಗಿನ ಕಾರ್ಯಕ್ರಮ ಆರಂಭವಾಗಿತ್ತು. ಅಂದಿನಿಂದ ಇಂದಿನವರೆಗೂ ಜೂನ್ನಲ್ಲಿ ಯಾರು ಬಾಗಿನ ಸಲ್ಲಿಸಿರಲಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ನೂತನ ದಾಖಲೆ ಬರೆಯಲಿದ್ದಾರೆ.

The post ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ! appeared first on Good News 24x7.

]]>
ಕೆ.ಆರ್.ಎಸ್ ಗೆ ಜೂ. 30 ರಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ: ಸಚಿವ ಎನ್.ಚಲುವರಾಯಸ್ವಾಮಿ. https://www.goodnews24x7.com/cm-siddaramaiah-to-offer-water-to-krs-on-june-30-minister-n-chaluvarayaswamy/ Fri, 27 Jun 2025 11:07:26 +0000 https://www.goodnews24x7.com/?p=4716 ಮಂಡ್ಯ : ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುತ್ತಿದ್ದು, ಜೂನ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು. ಸಾಂದರ್ಭಿಕ ಚಿತ್ರ…

The post ಕೆ.ಆರ್.ಎಸ್ ಗೆ ಜೂ. 30 ರಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ: ಸಚಿವ ಎನ್.ಚಲುವರಾಯಸ್ವಾಮಿ. appeared first on Good News 24x7.

]]>

ಮಂಡ್ಯ : ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುತ್ತಿದ್ದು, ಜೂನ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು.

ಸಾಂದರ್ಭಿಕ ಚಿತ್ರ

ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳು ಜೂನ್ 30 ರಂದು ಬೆಳಿಗ್ಗೆ 10.30 ಗಂಟೆಯ ನಂತರ ಕೆ‌ಆರ್.ಎಸ್ ಗೆ ಆಗಮಿಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಿದ್ದಾರೆ. ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದರು.
ವೇದಿಕೆ, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಿ ಎಂದು ಸೂಚನೆ ನೀಡಿದರು.

ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ
ಸರ್ಕಾರ ಇ- ಆಫೀಸ್ ನಲ್ಲಿ ಕಾರ್ಯನಿರ್ವಹಿಸಲು ಅವಶ್ಯಕವಿರುವ ಲ್ಯಾಪ್ ಟಾಪ್ ಅನ್ನು ಜಿಲ್ಲೆಯ 185 ಗ್ರಾಮ ಆಡಳಿತಾಧಿಕಾರಿಗಳಿಗೆ ಒದಗಿಸಿದ್ದು, ಸಂಕೇತಿಕವಾಗಿ ಗ್ರಾಮ ಆಡಳಿತಾಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಲ್ಯಾಪ್ ಟಾಪ್ ವಿತರಿಸಿದರು.

ಜಿಲ್ಲಾ ಹಾಗೂ ತಾಲ್ಲೂಕು ಆಡಳಿತದಲ್ಲಿ ಸರ್ಕಾರಿ ಕೆಲಸಗಳನ್ನು ಇ- ಆಫೀಸ್ ಮೂಲಕ ನಿರ್ವಹಿಸಬೇಕಿದ್ದು, ಕೆಲಸವನ್ನು ಪಾರದರ್ಶಕ ಹಾಗೂ ದಕ್ಷತೆಯಿಂದ ನಿರ್ವಹಿಸಿ ಎಂದರು.
ಭೂ ಸುರಕ್ಷಾ ಯೋಜನೆಯಡಿ ದಾಖಲೆಗಳ ಗಣಕೀಕರಣ ಪ್ರಕ್ರಿಯೆ ತಾಲ್ಲೂಕು ಕಚೇರಿಗಳಲ್ಲಿ ನಡೆಯುತ್ತಿದ್ದು, ಮಂಡ್ಯ ತಾಲ್ಲೂಕು ಕಚೇರಿಯಿಂದ ಸಂಕೇತಿಕವಾಗಿ ಗಣಕೀಕೃತ ಪ್ರತಿಯನ್ನು ಸಚಿವ ಚಲುವರಾಯಸ್ವಾಮಿ ವಿತರಿಸಿದರು.

ಸಭೆಯಲ್ಲಿ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಕಾ.ನೀ.ನಿ.ನಿ ಅಧೀಕ್ಷಕ ಅಭಿಯಂತರ ರಘುರಾಮ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

The post ಕೆ.ಆರ್.ಎಸ್ ಗೆ ಜೂ. 30 ರಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ: ಸಚಿವ ಎನ್.ಚಲುವರಾಯಸ್ವಾಮಿ. appeared first on Good News 24x7.

]]>
ರೈತರಿಗೆ ಗುಡ್ನ್ಯೂಸ್, KRS ಡ್ಯಾಂ ಭರ್ತಿಗೆ ಅಡಿ ನೀರು..! https://www.goodnews24x7.com/good-news-for-farmers-krs-dam-filled-with-feet-of-water/ Sun, 22 Jun 2025 10:57:04 +0000 https://www.goodnews24x7.com/?p=4595 ಮಂಡ್ಯ: ಮೊನ್ನೆಯಷ್ಟೇ ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿತ್ತು. ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಕೆಆರ್ಎಸ್ ಡ್ಯಾಂನ ಒಳಹರಿವು ಹೆಚ್ಚಾಗಿತ್ತು. ಮಂಡ್ಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನಲ್ಲಿ ಆಗ ದಿಢೀರನೇ 16 ಸಾವಿರ ಕ್ಯೂಸೆಕ್ಗೆ ಒಳಹರಿವು ಏರಿಕೆಯಾಗಿತ್ತು. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ…

The post ರೈತರಿಗೆ ಗುಡ್ನ್ಯೂಸ್, KRS ಡ್ಯಾಂ ಭರ್ತಿಗೆ ಅಡಿ ನೀರು..! appeared first on Good News 24x7.

]]>

ಮಂಡ್ಯ: ಮೊನ್ನೆಯಷ್ಟೇ ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿತ್ತು. ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಕೆಆರ್ಎಸ್ ಡ್ಯಾಂನ ಒಳಹರಿವು ಹೆಚ್ಚಾಗಿತ್ತು. ಮಂಡ್ಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನಲ್ಲಿ ಆಗ ದಿಢೀರನೇ 16 ಸಾವಿರ ಕ್ಯೂಸೆಕ್ಗೆ ಒಳಹರಿವು ಏರಿಕೆಯಾಗಿತ್ತು.


ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ತಗ್ಗಿದೆ. ಹೀಗಾಗಿ ಕೆಆರ್ಎಸ್ ಡ್ಯಾಂನ ಒಳಹರಿವು ಕುಗ್ಗಿದೆ. ಇನ್ನೂ ಈ ನಡುವೆ 13,359 ಕ್ಯೂಸೆಕ್ಗೆ ಡ್ಯಾಂ ಒಳಹರಿವು ಇಳಿದಿದೆ. ಸದ್ಯ ಕೆಆರ್ಎಸ್ ಡ್ಯಾಂ ಭರ್ತಿಗೆ ಕೇವಲ 5 ಅಡಿ ಮಾತ್ರ ಬೇಕಿದೆ. ಹೀಗಾಗಿ ಇತಿಹಾಸ ನಿರ್ಮಿಸುವ ತವಕದಲ್ಲಿದೆ. ಜೂನ್ ತಿಂಗಳಿನಲ್ಲಿಯೇ ಭರ್ತಿಯಾದ್ರೆ ಹೊಸ ದಾಖಲೆ ನಿರ್ಮಾಣವಾಗುತ್ತದೆ.

ಆದ್ರೆ ಈ ಹೊತ್ತಿನಲ್ಲಿ ಒಳಹರಿವು ಕಡಿಮೆಯಾಗಿದೆ. 124.80 ಅಡಿಯ ಕೆಆರ್ಎಸ್ ಡ್ಯಾಂ 119.40 ಅಡಿಯಷ್ಟು ಭರ್ತಿಯಾಗಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ 42.291 ಟಿಎಂಸಿ ನೀರು ಸಂಗ್ರಹವಾಗಿದೆ. ಡ್ಯಾಂನಿಂದ 1,664 ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ.

The post ರೈತರಿಗೆ ಗುಡ್ನ್ಯೂಸ್, KRS ಡ್ಯಾಂ ಭರ್ತಿಗೆ ಅಡಿ ನೀರು..! appeared first on Good News 24x7.

]]>