Malayalam Archives - Good News 24x7 https://www.goodnews24x7.com/tag/malayalam/ Kannada Tue, 17 Feb 2026 12:26:47 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Malayalam Archives - Good News 24x7 https://www.goodnews24x7.com/tag/malayalam/ 32 32 SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ. https://www.goodnews24x7.com/sslc-puc-exam-schedule-published/ Tue, 17 Feb 2026 12:26:31 +0000 https://www.goodnews24x7.com/?p=8374 ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ…

The post SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ. appeared first on Good News 24x7.

]]>

ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ತಿಳಿಸಿದರು.

SSLC ಪರೀಕ್ಷಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ
ಮಾರ್ಚ್​ 18ರಿಂದ ಆರಂಭವಾಗಲಿರುವ ಎಸ್​​ಎಸ್​​ಎಲ್​ಸಿ ಪರೀಕ್ಷೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿವೆ. ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ 9,02,889. ಹೊಸಬರು 8,12,855, ಪುನರಾವರ್ತಿತ 62,845 ವಿದ್ಯಾರ್ಥಿಗಳು. 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಒಟ್ಟು ಪರೀಕ್ಷಾ ಕೇಂದ್ರಗಳ ಸಂಖ್ಯೆ 2871
1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ

ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ
ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಪೈಕಿ 6,46,801 ಹೊಸಬರು, 50,540 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 13,022 ಖಾಸಗಿ ಅಭ್ಯರ್ಥಿಗಳು ಪಿಯು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ರಾಜ್ಯಾದ್ಯಂತ ಒಟ್ಟು 1217 ದ್ವಿತೀಯ ಪಿಯು ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದ್ದು, ಏಪ್ರಿಲ್ 7ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.

ಎಸ್​​ಎಸ್​​ಎಲ್​ಸಿ ಪರೀಕ್ಷಾ ವೇಳಾಪಟ್ಟಿ: ಮೇ 18ರಿಂದ ಆರಂಭವಾಗಲಿರುವ ಎಸ್​ಎಲ್​ಎಲ್​ಸಿ ಪರೀಕ್ಷೆ-2; ಮೇ 18ರಂದು ಪ್ರಥಮ ಭಾಷೆ, ಮೇ 19ರಂದು ವಿಜ್ಞಾನ, ಮೇ 20ರಂದು ದ್ವೀತಿಯ ಭಾಷೆ, ಮೇ 21ರಂದು ಗಣಿತ, ಮೇ 22ರಂದು ತೃತೀಯ ಭಾಷೆ, ಮೇ 23ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

ಪಿಯುಸಿ ಪರೀಕ್ಷೆ 1 ವೇಳಾಪಟ್ಟಿ
ಫೆಬ್ರವರಿ 28- ಕನ್ನಡ, ಅರೇಬಿಕ್
ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3- ಇಂಗ್ಲಿಷ್
ಮಾರ್ಚ್ 4- ತಮಿಳು,ತೆಲುಗು,ಮಲಯಾಳಂ, ಮರಾಠಿ,ಉರ್ದು,ಸಂಸ್ಕೃತ ಫ್ರೆಂಚ್.
ಮಾರ್ಚ್ 5- ಇತಿಹಾಸ
ಮಾರ್ಚ್ 6- ಭೌತಶಾಸ್ತ್ರ
ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ,ಭೂಗರ್ಭ ಶಾಸ್ತ್ರ.
ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10- ಅರ್ಥಶಾಸ್ತ್ರ
ಮಾರ್ಚ್ 11- ತರ್ಕಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗೃಹ ವಿಜ್ಞಾನ
ಮಾರ್ಚ್ 12- ಹಿಂದಿ
ಮಾರ್ಚ್ 13- ರಾಜ್ಯಶಾಸ್ತ್ರ
ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16- ಸಮಾಜಶಾಸ್ತ್ರ,ಜೀವಶಾಸ್ತ್ರ,ಗಣಕ ವಿಜ್ಞಾನ.
ಮಾರ್ಚ್ 17- ಹಿಂದುಸ್ತಾನಿ, ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ

The post SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ. appeared first on Good News 24x7.

]]>
‘ಕಾಂತಾರ ಚಾಪ್ಟರ್ 1’ಎರಡು ವಾರಗಳಲ್ಲಿ ವಿಶ್ವಾದ್ಯಂತ 717.50 ಕೋಟಿ ರೂ. ಕಲೆಕ್ಷನ್ https://www.goodnews24x7.com/kantara-cap%e1%b9%adar-1era%e1%b8%8du-varaga%e1%b8%b7alli-visvadyanta-717-50-ko%e1%b9%adi-ru-kalek%e1%b9%a3an-kantarachapter1movieactorrishabshettyindianboxofficetamiltelugu/ Sun, 19 Oct 2025 10:09:28 +0000 https://www.goodnews24x7.com/?p=7778 ‘ಕಾಂತಾರ ಚಾಪ್ಟರ್ 1’ : ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಬಿಡುಗಡೆ ಆಗಿ 17 ದಿನ ಕಳೆದರೂ ಸಹ ಈ ಸಿನಿಮಾಗೆ ಎಲ್ಲ ಕಡೆಗಳಲ್ಲಿ ಉತ್ತಮವಾಗಿ ಕಲೆಕ್ಷನ್ ಆಗುತ್ತಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್ ಮುಖ್ಯ ಭೂಮಿಕೆ ನಿಭಾಯಿಸಿರುವ…

The post ‘ಕಾಂತಾರ ಚಾಪ್ಟರ್ 1’ಎರಡು ವಾರಗಳಲ್ಲಿ ವಿಶ್ವಾದ್ಯಂತ 717.50 ಕೋಟಿ ರೂ. ಕಲೆಕ್ಷನ್ appeared first on Good News 24x7.

]]>

‘ಕಾಂತಾರ ಚಾಪ್ಟರ್ 1’ : ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಬಿಡುಗಡೆ ಆಗಿ 17 ದಿನ ಕಳೆದರೂ ಸಹ ಈ ಸಿನಿಮಾಗೆ ಎಲ್ಲ ಕಡೆಗಳಲ್ಲಿ ಉತ್ತಮವಾಗಿ ಕಲೆಕ್ಷನ್ ಆಗುತ್ತಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್ ಮುಖ್ಯ ಭೂಮಿಕೆ ನಿಭಾಯಿಸಿರುವ ಈ ಸಿನಿಮಾದ ಕಲೆಕ್ಷನ್ ವರದಿ ಇಲ್ಲಿದೆ.

ನಟ ರಿಷಬ್ ಶೆಟ್ಟಿ (Rishab Shetty) ಅವರು ಸೂಪರ್ ಸ್ಟಾರ್ ಆಗಿದ್ದಾರೆ. ಅತಿ ಬೇಡಿಕೆಯ ನಟನಾಗಿ, ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದಾರೆ. ಇದಕ್ಕೆಲ್ಲ ಕಾರಣ ಆಗಿರುವುದು ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾದ ಗೆಲುವು. ಅಕ್ಟೋಬರ್ 2ರಂದು ಬಿಡುಗಡೆ ಆದ ಈ ಸಿನಿಮಾ ಇಂದಿಗೂ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಎಲ್ಲ ಭಾಷೆಗಳಲ್ಲೂ ಅಬ್ಬರಿಸುತ್ತಿದೆ. 17 ದಿನಗಳು ಕಳೆದರೂ ಕೂಡ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಉತ್ತಮವಾಗಿಯೇ ಕಲೆಕ್ಷನ್ (Kantara Chapter 1 Collection) ಆಗುತ್ತಿದೆ. ಭಾರತದ ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾದ ಗಳಿಕೆ 500 ಕೋಟಿ ರೂಪಾಯಿ ಮೀರಿದೆ.

ಈ ಬಗ್ಗೆ ಇಲ್ಲಿದೆ ವಿವರ Sacnilk ವರದಿ ಪ್ರಕಾರ ‘ಕಾಂತಾರ: ಚಾಪ್ಟರ್ 1’ ಸಿನಿಮಾ 17ನೇ ದಿನ ಭಾರತದ ಗಲ್ಲಾಪೆಟ್ಟಿಗೆಯಲ್ಲಿ 12.50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅಲ್ಲಿಗೆ, ಭಾರತದಲ್ಲಿ ಸಿನಿಮಾದ ಒಟ್ಟು ಕಲೆಕ್ಷನ್ 506 ಕೋಟಿ ರೂಪಾಯಿ ಆಗಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಮುಂತಾದ ಭಾಷೆಯಲ್ಲಿ ಬಿಡುಗಡೆ ಆದ ಈ ಸಿನಿಮಾಗೆ ಜನರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಭಾರತದ ಆಚೆ ಕೂಡ ಹಲವು ದೇಶಗಳಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ಉತ್ತಮವಾಗಿ ಪ್ರದರ್ಶನ ಕಂಡಿದೆ. ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯೇ ಹಂಚಿಕೊಂಡಿರುವ ಮಾಹಿತಿ ಪ್ರಕಾರ, ಎರಡು ವಾರಗಳಲ್ಲಿ ಈ ಸಿನಿಮಾಗೆ ವಿಶಾದ್ಯಂತ 717.50 ಕೋಟಿ ರೂಪಾಯಿ ಆಗಿದೆ. ಇನ್ನೂ ಹೆಚ್ಚಿನ ಕಲೆಕ್ಷನ್ ಮಾಡುವ ಸಾಧ್ಯತೆ ದಟ್ಟವಾಗಿದೆ.

ಭಾನುವಾರ (ಅಕ್ಟೋಬರ್ 19) ಕೂಡ ಅನೇಕ ಕಡೆಗಳಲ್ಲಿ ಬುಕಿಂಗ್ ಚೆನ್ನಾಗಿದೆ. ಅಲ್ಲದೇ, ದೀಪಾವಳಿ ಹಬ್ಬದ ರಜೆ ಬಂದಿರುವುದರಿಂದ ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರ ಸಂಖ್ಯೆ ಹೆಚ್ಚುವ ನಿರೀಕ್ಷೆ ಜಾಸ್ತಿ ಇದೆ. ಈ ಎಲ್ಲದರ ಪರಿಣಾಮವಾಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಇನ್ನೂ ಉತ್ತಮವಾಗಿ ಕಲೆಕ್ಷನ್ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದಿಂದ ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಗೆ ಭರ್ಜರಿ ಲಾಭ ಆಗಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಾಗಿದೆ. ನಟಿ ರುಕ್ಮಿಣಿ ವಸಂತ್ ಅವರು ಪ್ಯಾನ್ ಇಂಡಿಯಾ ನಟಿಯಾಗಿ ಫೇಮಸ್ ಆಗಿದ್ದಾರೆ. ಪರಭಾಷೆ ಮಂದಿ ಮತ್ತೆ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಾಗಿದೆ. ರಿಷಬ್ ಶೆಟ್ಟಿ ಅವರ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ.

The post ‘ಕಾಂತಾರ ಚಾಪ್ಟರ್ 1’ಎರಡು ವಾರಗಳಲ್ಲಿ ವಿಶ್ವಾದ್ಯಂತ 717.50 ಕೋಟಿ ರೂ. ಕಲೆಕ್ಷನ್ appeared first on Good News 24x7.

]]>
ಬಾಕ್ಸ್ ​​ಆಫೀಸ್​​ನಲ್ಲಿ ಹೊಸ ದಾಖಲೆ ಸೃಷ್ಟಿಸಿದ ‘ಮಹಾವತಾರ್ ನರಸಿಂಹ’ https://www.goodnews24x7.com/mahavatar-narasimha-creates-new-record-at-the-box-office/ Wed, 27 Aug 2025 09:20:35 +0000 https://www.goodnews24x7.com/?p=6793 ಹೊಂಬಾಳೆ ಫಿಲಮ್ಸ್ ಪ್ರಸ್ತುತ ಪಡಿಸಿ, ದೇಶದಾದ್ಯಂತ ವಿತರಣೆ ಸಹ ಮಾಡಿರುವ ‘ಮಹಾವತಾರ್ ನರಸಿಂಹ’ ಅನಿಮೇಷನ್ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆ ಬರೆದಿದೆ. ಜುಲೈ 25 ರಂದು ಬಿಡುಗಡೆ ಆಗಿದ್ದ ಈ ಸಿನಿಮಾ ‘ಕೂಲಿ’, ‘ವಾರ್ 2‘, ‘ಸು ಫ್ರಂ ಸೋ’,…

The post ಬಾಕ್ಸ್ ​​ಆಫೀಸ್​​ನಲ್ಲಿ ಹೊಸ ದಾಖಲೆ ಸೃಷ್ಟಿಸಿದ ‘ಮಹಾವತಾರ್ ನರಸಿಂಹ’ appeared first on Good News 24x7.

]]>

ಹೊಂಬಾಳೆ ಫಿಲಮ್ಸ್ ಪ್ರಸ್ತುತ ಪಡಿಸಿ, ದೇಶದಾದ್ಯಂತ ವಿತರಣೆ ಸಹ ಮಾಡಿರುವ ‘ಮಹಾವತಾರ್ ನರಸಿಂಹ’ ಅನಿಮೇಷನ್ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆ ಬರೆದಿದೆ. ಜುಲೈ 25 ರಂದು ಬಿಡುಗಡೆ ಆಗಿದ್ದ ಈ ಸಿನಿಮಾ ‘ಕೂಲಿ’, ‘ವಾರ್ 2‘, ‘ಸು ಫ್ರಂ ಸೋ’, ‘ಕಿಂಗ್ಡಮ್’ ಇನ್ನೂ ಕೆಲ ಸಿನಿಮಾಗಳ ಎದುರು ಗಟ್ಟಿಯಾಗಿ ನಿಂತು ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಗೆಲುವನ್ನು ತನ್ನದಾಗಿಸಿಕೊಂಡಿದೆ.
‘ಕೂಲಿ’, ‘ವಾರ್ 2’ ಅದಕ್ಕೂ ಮುಂಚೆ ‘ಕಿಂಗ್ಡಮ್’, ‘ಸು ಫ್ರಂ ಸೋ’ ಸಿನಿಮಾಗಳ ಅಬ್ಬರಗಳ ಎದುರು ಅಲುಗದೆ ನಿಂತ ‘ಮಹಾವತಾರ್ ನರಸಿಂಹ’ ಸಿನಿಮಾ ಭಾರತೀಯ ಬಾಕ್ಸ್ ಆಫೀಸ್​​ನಲ್ಲಿ ಹೊಸ ಮೈಲಿಗಲ್ಲಿ ಸ್ಥಾಪನೆ ಮಾಡಿದೆ. ಹಿಂದೆಂದೂ ಯಾವ ಅನಿಮೇಷನ್ ಸಿನಿಮಾ ಸಹ ಸೃಷ್ಟಿಸದ ದಾಖಲೆಯೊಂದನ್ನು ಸೃಷ್ಟಿಸಿದೆ ಈ ಸಿನಿಮಾ.

‘ಮಹಾವತಾರ್ ನರಸಿಂಹ’ ಸಿನಿಮಾ ಜುಲೈ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಹೊಂಬಾಳೆ ಫಿಲಮ್ಸ್​ನವರ ಬೆಂಬಲದಿಂದಾಗಿ ಸಿನಿಮಾ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ದೇಶದೆಲ್ಲೆಡೆ ಪ್ರಮುಖ ನಗರಗಳಲ್ಲಿ ಬಿಡುಗಡೆ ಆಯ್ತು. ಆರಂಭದಲ್ಲಿ ಹೆಚ್ಚು ಸದ್ದು ಮಾಡದಿದ್ದರೂ ಕೇವಲ ಒಂದೇ ವಾರದಲ್ಲಿ ತನ್ನ ಕಂಟೆಂಟ್ ಹಾಗೂ ಹೊಂಬಾಳೆಯು ಶಕ್ತಿಯುತ ಮಾರ್ಕೆಟಿಂಗ್​​ನಿಂದಾಗಿ ಪ್ರೇಕ್ಷಕರನ್ನು ಸೆಳೆಯಲು ಆರಂಭಿಸಿತು.

 

ಇದೀಗ ಸಿನಿಮಾ ಬಿಡುಗಡೆ ಆಗಿ 30 ದಿನಗಳ ಬಳಿಕ ‘ಮಹಾವತಾರ್ ನರಸಿಂಹ’ ಸಿನಿಮಾ 300 ಕೋಟಿ ರೂಪಾಯಿಗೆ ಹೆಚ್ಚಿನ ಗಳಿಕೆ ಮಾಡಿದೆ. ಭಾರತದ ಇನ್ಯಾವುದೇ ಅನಿಮೇಷನ್ ಸಿನಿಮಾ ಸಹ ಇಷ್ಟು ದೊಡ್ಡ ಮೊತ್ತದ ಹಣವನ್ನು ಈ ವರೆಗೆ ಗಳಿಕೆ ಮಾಡಿಲ್ಲ. ಭಾರತದ ಅನಿಮೇಷನ್ ಸಿನಿಮಾಗಳು ಮಾತ್ರವೇ ಅಲ್ಲದೆ. ವಿದೇಶದ ಅನಿಮೇಷನ್ ಸಿನಿಮಾಗಳು ಸಹ ಭಾರತದಲ್ಲಿ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡಿಲ್ಲ. ಕಳೆದೆರಡು ವರ್ಷಗಳಲ್ಲಿ ಬಿಡುಗಡೆ ಆದ ‘ಸ್ಪೈಡರ್​​ಮ್ಯಾನ್’, ‘ಡಾಕ್ಟರ್ ಸ್ಟ್ರೇಂಜ್’, ‘ಥಾರ್’, ‘ಅವತಾರ್’ ಸಿನಿಮಾಗಳೂ ಸಹ ಇಷ್ಟು ದೊಡ್ಡ ಮೊತ್ತದ ಹಣವನ್ನು ಭಾರತದ ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಮಾಡಿಲ್ಲ ಎಂಬುದು ಗಮನಿಸಬೇಕಾದ ಅಂಶ.

‘ಮಹಾವತಾರ್ ನರಸಿಂಹ’ ಸಿನಿಮಾನಲ್ಲಿ ವಿಷ್ಣುವಿನ ನರಸಿಂಹ ಅವತಾರದ ಕತೆಯನ್ನು ಅನಿಮೇಷನ್ ಮೂಲಕ ಹೇಳಲಾಗಿದೆ. ‘ಮಹಾವತಾರ: ನರಸಿಂಹ’ ಸಿನಿಮಾವನ್ನು ಅಶ್ವಿಕ್‌ ಕುಮಾರ್‌ ನಿರ್ದೇಶನ ಮಾಡಿದ್ದಾರೆ. ಶಿಲ್ಪಾ ಧವನ್, ಕುಶಾಲ್ ದೇಸಾಯಿ, ಚೈತನ್ಯ ದೇಸಾಯಿ ನಿರ್ಮಾಣ ಮಾಡಿದ್ದಾರೆ. ಕಡಿಮೆ ಬಜೆಟ್​ ಕಾರಣದಿಂದಾಗಿ ಈ ಸಿನಿಮಾ ನಿರ್ಮಾಣ ಮಾಡಲು ಅಶ್ವಿಕ್ ಅವರಿಗೆ ಬಹಳ ಸಮಯ ಹಿಡಿಯಿತಂತೆ. ಆದರೆ ಈ ಸಿನಿಮಾ ಹಣ ಮಾಡಿರುವ ಕಾರಣ ಮುಂದಿನ ಸಿನಿಮಾಗಳನ್ನು ಅತ್ಯುತ್ತಮ ಗುಣಮಟ್ಟದಲ್ಲಿ ಪ್ರೇಕ್ಷಕರ ಮುಂದೆ ತರುವುದಾಗಿ ಅಶ್ವಿಕ್ ಹೇಳಿದ್ದಾರೆ.

“ಮಹಾವತಾರ್” ಸಿನಿಮ್ಯಾಟಿಕ್ ಯೂನಿವರ್ಸ್​ ನಿರ್ಮಿಸಲು ಚಿತ್ರತಂಡ ಮುಂದಾಗಿದ್ದು, ಭಗವಾನ್ ವಿಷ್ಣುವಿನ ದಶಾವತಾರಗಳ ಆಧಾರದ ಮೇಲೆ ಬರಲಿರುವ ಸಿನಿಮಾ ಆಗಿರಲಿದೆ. ಮುಂದಿನ ಹತ್ತು ವರ್ಷಗಳಲ್ಲಿ ‘ಮಹಾವತಾರ್’ ಯೂನಿವರ್ಸ್​ನ ಏಳು ಸಿನಿಮಾಗಳು ತೆರೆಗೆ ಬರಲಿದೆ.

The post ಬಾಕ್ಸ್ ​​ಆಫೀಸ್​​ನಲ್ಲಿ ಹೊಸ ದಾಖಲೆ ಸೃಷ್ಟಿಸಿದ ‘ಮಹಾವತಾರ್ ನರಸಿಂಹ’ appeared first on Good News 24x7.

]]>
ಕೇರಳ ಕಾಂಗ್ರೆಸ್ ಶಾಸಕನ ವಿರುದ್ಧ ತೃತೀಯಲಿಂಗಿ ದೂರು https://www.goodnews24x7.com/transgender-woman-files-complaint-against-kerala-congress-mla/ Fri, 22 Aug 2025 06:29:39 +0000 https://www.goodnews24x7.com/?p=6453 ಪಾಲಕ್ಕಾಡ್ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್ ವಿರುದ್ಧ ತೃತೀಯಲಿಂಗಿಯೊಬ್ಬರು ಲೈಂಗಿಕ ಕಿರುಕುಳ ಆರೋಪಹೊರಿಸಿದ್ದಾರೆ. ರಾಹುಲ್ ತನ್ನ ಮೇಲೆ ಅತ್ಯಾಚಾರ ಮಾಡುವ ಬಯಕೆಯನ್ನು ವ್ಯಕ್ತಪಡಿಸಿ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ ನನ್ನನ್ನು ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಒತ್ತಾಯಿಸಿದ್ದ, ಬೆಂಗಳೂರು ಅಥವಾ ಹೈದರಾಬಾದ್​ಗೆ ಹೋಗೋಣ…

The post ಕೇರಳ ಕಾಂಗ್ರೆಸ್ ಶಾಸಕನ ವಿರುದ್ಧ ತೃತೀಯಲಿಂಗಿ ದೂರು appeared first on Good News 24x7.

]]>

ಪಾಲಕ್ಕಾಡ್ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್ ವಿರುದ್ಧ ತೃತೀಯಲಿಂಗಿಯೊಬ್ಬರು ಲೈಂಗಿಕ ಕಿರುಕುಳ ಆರೋಪಹೊರಿಸಿದ್ದಾರೆ. ರಾಹುಲ್ ತನ್ನ ಮೇಲೆ ಅತ್ಯಾಚಾರ ಮಾಡುವ ಬಯಕೆಯನ್ನು ವ್ಯಕ್ತಪಡಿಸಿ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ ನನ್ನನ್ನು ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಒತ್ತಾಯಿಸಿದ್ದ, ಬೆಂಗಳೂರು ಅಥವಾ ಹೈದರಾಬಾದ್​ಗೆ ಹೋಗೋಣ ಬಾ ಎಂದು ಕರೆದಿದ್ದ ಎಂದು ತೃತೀಯಲಿಂಗಿ ಎಂದು ಹೇಳಿದ್ದಾರೆ.

ಪಾಲಕ್ಕಾಡ್: ಪಾಲಕ್ಕಾಡ್ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್ ವಿರುದ್ಧ ತೃತೀಯಲಿಂಗಿಯೊಬ್ಬರು ಲೈಂಗಿಕ ಕಿರುಕುಳ ಆರೋಪಹೊರಿಸಿದ್ದಾರೆ. ರಾಹುಲ್ ತನ್ನ ಮೇಲೆ ಅತ್ಯಾಚಾರ ಮಾಡುವ ಬಯಕೆಯನ್ನು ವ್ಯಕ್ತಪಡಿಸಿ ಸಂದೇಶಗಳನ್ನು ಕಳುಹಿಸಿದ್ದ ಎಂದು ಆರೋಪಿಸಿದ್ದಾರೆ. ನನ್ನನ್ನು ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಒತ್ತಾಯಿಸಿದ್ದ, ಬೆಂಗಳೂರು ಅಥವಾ ಹೈದರಾಬಾದ್​ಗೆ ಹೋಗೋಣ ಬಾ ಎಂದು ಕರೆದಿದ್ದ ಎಂದು ತೃತೀಯಲಿಂಗಿ ಎಂದು ಹೇಳಿದ್ದಾರೆ. ಚುನಾವಣಾ ಚರ್ಚೆಯ ಸಮಯದಲ್ಲಿ ಅವರು ಮೊದಲು ಭೇಟಿಯಾಗಿದ್ದರು. ಸಾಮಾನ್ಯ ಸ್ನೇಹವಾಗಿ ಪ್ರಾರಂಭವಾದದ್ದು ಸಾಮಾಜಿಕ ಮಾಧ್ಯಮದಲ್ಲಿನ ಸಂದೇಶಗಳ ಮೂಲಕ ಅಸಹ್ಯಕರ ಅನುಭವವಾಗಿ ಬದಲಾಯಿತು ಎಂದು ಅವಂತಿಕಾ ಹೇಳಿದ್ದಾರೆ.

ಮಲಯಾಳಂ ನಟಿ ರಿನಿ ಜಾರ್ಜ್ ಮತ್ತು ನಂತರ ಬರಹಗಾರ ಹನಿ ಭಾಸ್ಕರನ್ ಅವರು ನೀಡಿದ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ರಾಹುಲ್ ಗುರುವಾರ ಕೇರಳ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ . ಪ್ರಮುಖ ರಾಜಕೀಯ ಪಕ್ಷದ ನಾಯಕಿಯೊಬ್ಬರು ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿ ಹೋಟೆಲ್‌ಗೆ ಆಹ್ವಾನಿಸಿದ್ದಾರೆ ಎಂದು ರಿನಿ ಆರೋಪಿಸಿದ್ದರು . ಅವರು ಯಾರನ್ನೂ ಹೆಸರಿಸದಿದ್ದರೂ, ಬಿಜೆಪಿ ಮತ್ತು ಡಿವೈಎಫ್‌ಐ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಮ್‌ಕೂಟತಿಲ್ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದ್ದವು. ಹನಿ ಭಾಸ್ಕರನ್, ರಾಹುಲ್ ಅವರನ್ನು ಹೆಸರಿಸಿ , ಪದೇ ಪದೇ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸುತ್ತಿದ್ದರು ಎಂದು ಆರೋಪಿಸಿದ್ದಾರೆ, ಯುವ ಕಾಂಗ್ರೆಸ್‌ನೊಳಗಿನ ದೂರುಗಳು ಬಗೆಹರಿಯದೆ ಉಳಿದಿವೆ ಎಂದು ಹೇಳಿದರು.

ತಮ್ಮ ರಾಜೀನಾಮೆಯಲ್ಲಿ, ರಾಹುಲ್ ಅವರು ತಾವು ರಾಜೀನಾಮೆ ನೀಡುತ್ತಿರುವುದು ತಪ್ಪು ಕಾರಣದಿಂದಲ್ಲ, ಬದಲಾಗಿ ಪಕ್ಷದ ಕಾರ್ಯಕರ್ತರು ಮುಂಬರುವ ಚುನಾವಣೆಗಳತ್ತ ಗಮನಹರಿಸಲು ಅವಕಾಶ ನೀಡುವ ಉದ್ದೇಶದಿಂದ ಎಂದು ಹೇಳಿದ್ದಾರೆ. ಪಕ್ಷದ ಯಾವುದೇ ನಾಯಕರು ರಾಜೀನಾಮೆ ನೀಡುವಂತೆ ತಮ್ಮನ್ನು ಕೇಳಿಲ್ಲ ಎಂದು ಅವರು ಒತ್ತಿ ಹೇಳಿದರು ಮತ್ತು ಅದು ತಮ್ಮ ವೈಯಕ್ತಿಕ ಜವಾಬ್ದಾರಿ ಎಂದು ಹೇಳಿದರು. ರಾಜೀನಾಮೆ ಬಗ್ಗೆ ಕೇರಳ ಸಚಿವೆ ಆರ್ ಬಿಂದು ಪ್ರತಿಕ್ರಿಯೆ ನೀಡಿದ್ದು, ಯುವ ಶಾಸಕ ರಾಹುಲ್ ವಿರುದ್ಧ ಅನೇಕ ಮಹಿಳೆಯರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಅವರು ಯುವ ಕಾಂಗ್ರೆಸ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಸಮಾಜವನ್ನು ರಕ್ಷಿಸಲು ಅವರು ಶಾಸಕ ಸ್ಥಾನದಿಂದ ಕೆಳಗಿಳಿಯುವುದು ಸೂಕ್ತ ಎಂದು ಹೇಳಿದರು.

The post ಕೇರಳ ಕಾಂಗ್ರೆಸ್ ಶಾಸಕನ ವಿರುದ್ಧ ತೃತೀಯಲಿಂಗಿ ದೂರು appeared first on Good News 24x7.

]]>