MaleMahadeshwar Archives - Good News 24x7 https://www.goodnews24x7.com/tag/malemahadeshwar/ Kannada Sat, 28 Jun 2025 05:44:54 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg MaleMahadeshwar Archives - Good News 24x7 https://www.goodnews24x7.com/tag/malemahadeshwar/ 32 32 ಮಲೆಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾ*ವಿನ ಹಿಂದಿನ ಕಾರಣ ಅನಾವರಣ ; ಇಬ್ಬರು ಆರೋಪಿಗಳ ಬಂಧಿನ! https://www.goodnews24x7.com/reason-behind-death-of-five-tigers-in-male-mahadeshwar-wildlife-sanctuary-revealed-two-accused-arrested/ Sat, 28 Jun 2025 05:44:54 +0000 https://www.goodnews24x7.com/?p=4739 ಚಾಮರಾಜನಗರ : ‘ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ವಲಯದಲ್ಲಿ ಐದು ಹುಲಿಗಳಅಸಹಜ ಸಾವಿಗೆ ವಿಷಪ್ರಾಶನವೇ ಕಾರಣವೆಂದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು. ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು. ‘ಸಾವಿನ ತನಿಖೆಗೆ…

The post ಮಲೆಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾ*ವಿನ ಹಿಂದಿನ ಕಾರಣ ಅನಾವರಣ ; ಇಬ್ಬರು ಆರೋಪಿಗಳ ಬಂಧಿನ! appeared first on Good News 24x7.

]]>

ಚಾಮರಾಜನಗರ : ‘ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ವಲಯದಲ್ಲಿ ಐದು ಹುಲಿಗಳಅಸಹಜ ಸಾವಿಗೆ ವಿಷಪ್ರಾಶನವೇ ಕಾರಣವೆಂದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.
ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು. ‘ಸಾವಿನ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆಯೂ ತನಿಖೆಗೆ ಸೂಚಿಸಲಾಗಿದ್ದು. ಅವರ ವಿರುದ್ಧವೂ ಶಿಸ್ತು ಕ್ರಮವನ್ನು ಜರುಗಿಸಲಾಗುವುದು’ ಎಂದರು.   ‘ವಿಷಪೂರಿತ ಜಾನುವಾರು ಕಳೇಬರವನ್ನು ತಿಂದು ಹುಲಿಗಳು ಸತ್ತಿವೆ. ಹುಲಿಗಳ ಹಾಗೂ ಹಸುವಿನ ಅಂಗಾಂಗಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಚಾಮರಾಜನಗರ ವೃತ್ತ CCF ಟಿ.ಹೀರಾಲಾಲ್ ಮಾಹಿತಿ ನೀಡಿದರು.


ರಾಷ್ಟ್ರೀಯ ವನ್ಯಪ್ರಾಣಿ ಹುಲಿಗಳ ಕಗ್ಗೊಲೆ ನಡೆದಿರುವ ಸ್ಥಳ ಚಾಮರಾಜ ನಗರ ಜಿಲ್ಲೆಯಲ್ಲಿದೆ. ನಿರ್ದಿಷ್ಟವಾಗಿ ಹನೂರು ತಾಲ್ಲೂಕು ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ರಂ ವಲಯದ ಮೀಣ್ಯಂ ಉಪ ವಲಯದಲ್ಲಿ ನಡೆದಿದೆ
ಕಾಡಿನಲ್ಲಿ ತಮ್ಮ ಪಾಡಿಗೆ ಸಂಚರಿಸುತ್ತಿದ್ದ ತಾಯಿ ಹುಲಿ, ಐದು ಮರಿ ಹುಲಿಗಳ ಸಾವಿಗೆ ಕಾರಣಗಳೇನು. ಎಂಬುದನ್ನು ನಿಖರವಾಗಿ ತಿಳಿಯಲು ಪರಿಸರ ವನ್ಯಜೀವಿ ವಲಯದ ಸಂರಕ್ಷಣೆಗಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು ತೊಡಗಿದ್ದಾರೆ. ಮುಖ್ಯವಾಗಿ ಈ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ವನ್ಯಜೀವನ ತಜ್ಞರಾದ ಜೋಸೆಫ್ ಹೂವ‌ರ್, ವಿನೋದ್ ಕುಮಾರ್ ಬಿ. ನಾಯಕ್ ತಾವು ಸಂಗ್ರಹಿಸಿದ ಮಾಹಿತಿ ಹಂಚಿ ಕೊಂಡಿದ್ದಾರೆ.

“ಈ ಘಟನೆಯಲ್ಲಿ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿ ಸಹ ತೀವ್ರವಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಯಾವುದೇ ರೀತಿಯ ಜನಜಾಗೃತಿ ಕೆಲಸವನ್ನು ಅರಣ್ಯ ಸಿಬ್ಬಂದಿ ಮಾಡಿಲ್ಲ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಅರಣ್ಯ- ವನ್ಯಜೀವಿ ಸಂರಕ್ಷಣೆ ಸಾಧ್ಯವೇ ಇಲ್ಲ ವಿಷ ಪ್ರಾಶನದಿಂದ ಮೃತಪಟ್ಟ 5 ಹುಲಿಗಳು ನಮ್ಮ ಅರಣ್ಯ ಇಲಾಖೆಗೆ ಕಾಡಂಚಿನ ಜನರಿಗೆ ಮತ್ತು ನಮ್ಮನ್ನು ಆಳುವ ಜನಪ್ರತಿನಿಧಿಗಳಿಗೆ ಯಾವ ಪಾಠ ಕಳಿಸಿ ಹೋಗಿವೆ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ’ ಎಂದು ಹೇಳುತ್ತಾರೆ.

ಹುಲಿ ಸಂರಕ್ಷಣೆ ಯೋಜನೆ ಜಾರಿಯಾದ ನಂತರ ಹುಲಿಗಳನ್ನು ಕೊಂದ ದುರ್ಘಟನೆಗಳಿವೆ. ಆದರೆ ಏಕಕಾಲದಲ್ಲಿ ಒಂದು ತಾಯಿ ಹುಲಿ ಮತ್ತು ಐದು ಮರಿ ಹುಲಿಗಳನ್ನು ಕೊಂದ ನಿದರ್ಶನಗಳಿಲ್ಲ. ಇದೇ ಮೊದಲಬಾರಿಗೆ ಇಂಥ ದುರಂತ ನಡೆದಿದೆ. ಹುಲಿಗಳು ಸತ್ತು ಬಿದ್ದಿದ್ದ ಸ್ಥಳದಿಂದ 150 ಅಡಿ ದೂರದಲ್ಲಿ ಜಾನುವಾರು ಕಳೇಬರವಿದೆ. ಇದಕ್ಕೆ ದುಷ್ಕರ್ಮಿಗಳು ವಿಷ ಸಿಂಪಡಿಸಿದ್ದು ಅದರ ಮಾಂಸವನ್ನು ಹುಲಿಗಳು ತಿಂದ ಕಾರಣ ಸಾವನ್ನಪಿರುವ ಶಂಕೆ ಇದೆ. ನಿಯಮಾವಳಿಯಂತೆ ಮರಣೋತ್ತರ ಪರೀಕ್ಷೆ ನಡೆದಿದೆ. ಅದರ ವರದಿ ಬರಬೇಕಾಗಿದೆ. ಮೇಲ್ನೋಟಕ್ಕೆ ವಿಷ ಪ್ರಾಶನದಿಂದಲೇ ಹುಲಿಗಳು ಸತ್ತಿರಬಹುದು ಎಂದು ತಿಳಿಯುತ್ತದೆ.


ಮಲೆಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ಅನ್ನೋದು ಖಚಿತವಾಗಿತ್ತು. ಆದರೆ ವಿಷವಿಟ್ಟವರು ಯಾರು ಅನ್ನೋದು ಗೊತ್ತಾಗಿರಲಿಲ್ಲ. ಇದೀಗ ಅದು ಕೂಡ ಬಯಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮತ್ತು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಮಾದ ಅಲಿಯಾಸ್ ಮಾದುರಾಜು ಹಾಗೂ ನಾಗರಾಜ್ ಬಂಧಿತರು. ಸದ್ಯ ಪೊಲೀಸರು ಮತ್ತು ಅರಣ್ಯ ಸಿಬ್ಬಂದಿಗಳಿಂದ ವಿಚಾರಣೆ ನಡಲಾಗುತ್ತಿದೆ.

The post ಮಲೆಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾ*ವಿನ ಹಿಂದಿನ ಕಾರಣ ಅನಾವರಣ ; ಇಬ್ಬರು ಆರೋಪಿಗಳ ಬಂಧಿನ! appeared first on Good News 24x7.

]]>