MallikarjunKharge Archives - Good News 24x7 https://www.goodnews24x7.com/tag/mallikarjunkharge/ Kannada Mon, 09 Mar 2026 11:41:25 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg MallikarjunKharge Archives - Good News 24x7 https://www.goodnews24x7.com/tag/mallikarjunkharge/ 32 32 ಇಂಧನ ಭದ್ರತೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ https://www.goodnews24x7.com/aicc-president-mallikarjun-kharges-proposal-on-energy-security/ Mon, 09 Mar 2026 11:38:21 +0000 https://www.goodnews24x7.com/?p=8794 ನವದೆಹಲಿ: ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಪ್ರಾರಂಭಗೊಂಡಿದ್ದು, ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಅದರಿಂದ ಭಾರತದ ಇಂಧನ ಭದ್ರತೆಯ ಮೇಲೆ ಉಂಟಾಗುತ್ತಿರುವ…

The post ಇಂಧನ ಭದ್ರತೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ appeared first on Good News 24x7.

]]>

ನವದೆಹಲಿ: ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಪ್ರಾರಂಭಗೊಂಡಿದ್ದು, ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಅದರಿಂದ ಭಾರತದ ಇಂಧನ ಭದ್ರತೆಯ ಮೇಲೆ ಉಂಟಾಗುತ್ತಿರುವ ಪರಿಣಾಮಗಳ’ ಕುರಿತು ಪ್ರಸ್ತಾಪಿಸಿದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಅಡ್ಡಿಪಡಿಸಿದ್ದರಿಂದ ಸದನದಲ್ಲಿ ಗದ್ದಲ ಉಂಟಾಯಿತು.

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಅದರಿಂದ ಭಾರತದ ಇಂಧನ ಭದ್ರತೆಯ ಮೇಲೆ ಉಂಟಾಗುತ್ತಿರುವ ಪರಿಣಾಮಗಳ ಕುರಿತು ನಿಯಮ 176ರ ಅಡಿಯಲ್ಲಿ ‘ಅಲ್ಪಾವಧಿ ಚರ್ಚೆ’ಗೆ ಅವಕಾಶ ಕೋರಿ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯ ಅಧ್ಯಕ್ಷರಿಗೆ ನೋಟಿಸ್ ನೀಡಿದ್ದರು. ಪಶ್ಚಿಮ ಏಷ್ಯಾದಲ್ಲಿನ ಅಸ್ಥಿರತೆಯಿಂದಾಗಿ ಭಾರತಕ್ಕೆ ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಭಾರತವು ತನ್ನ ಒಟ್ಟು ಕಚ್ಚಾ ತೈಲದ ಸುಮಾರು 55%ರಷ್ಟನ್ನು ಈ ಪ್ರದೇಶದಿಂದಲೇ ಆಮದು ಮಾಡಿಕೊಳ್ಳುತ್ತಿದೆ ಎಂದು ಖರ್ಗೆ ತಮ್ಮ ನೋಟಿಸ್‌ನಲ್ಲಿ ಆತಂಕ ವ್ಯಕ್ತಪಡಿಸಿದ್ದರು. ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯ ನಾಗರಿಕರ ಸುರಕ್ಷತೆಯ ಬಗ್ಗೆಯೂ ಚರ್ಚೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದರು.

ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪಶ್ಚಿಮ ಏಷ್ಯಾದ ಸ್ಥಿತಿಗತಿ ಕುರಿತು ಹೇಳಿಕೆ ನೀಡಲು ಮುಂದಾದಾರು. ಈ ವೇಳೆ ವಿರೋಧ ಪಕ್ಷದ ನಾಯಕರಿಗೆ ಮೊದಲು ಮಾತನಾಡಲು ಅವಕಾಶ ನೀಡಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಇದರಿಂದಾಗಿ ಸದನದಲ್ಲಿ ತೀವ್ರ ಗದ್ದಲ ಉಂಟಾಯಿತು. ಗದ್ದಲದ ನಡುವೆಯೇ, ಪದೇ ಪದೇ ವಿನಂತಿಸಿದ ನಂತರ ಸಭಾಧ್ಯಕ್ಷರು ನಿಯಮ 176ರ ಅಡಿಯಲ್ಲಿ (ಅಲ್ಪಾವಧಿ ಚರ್ಚೆ) ವಿಷಯವನ್ನು ಪ್ರಸ್ತಾಪಿಸಲು ಖರ್ಗೆ ಅವರಿಗೆ ಅವಕಾಶ ಮಾಡಿಕೊಟ್ಟರು. ಅಂತಿಮವಾಗಿ, ಖರ್ಗೆ ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಭಾರತದ ಇಂಧನ ಭದ್ರತೆಯ ಮೇಲಾಗುವ ಪರಿಣಾಮಗಳ ಕುರಿತು ಮಾತನಾಡಿದರು.

ಖರ್ಗೆ ಮಾತನಾಡುತ್ತಿದ್ದಾಗ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮತ್ತು ಸಭಾಧ್ಯಕ್ಷರು ಭಾಷಣ ಮುಕ್ತಾಯಗೊಳಿಸಲು ಸೂಚಿಸಿದ್ದರಿಂದ ಸದನದಲ್ಲಿ ಮತ್ತೆ ಗದ್ದಲ ಮುಂದುವರಿಯಿತು. ಈ ನಡುವೆ ವಿರೋಧ ಪಕ್ಷಗಳ ಸದಸ್ಯರು ನಿಯಮ 267ರ ಅಡಿಯಲ್ಲಿ ಚರ್ಚೆಗೆ ಅವಕಾಶ ಕೋರಿ ನೀಡಿದ್ದ ನೋಟಿಸ್‌ಗಳನ್ನು ಸಭಾಧ್ಯಕ್ಷರು ತಿರಸ್ಕರಿಸಿದರು.

ಪಶ್ಚಿಮ ಏಷ್ಯಾದ ಉದ್ವಿಗ್ನತೆಯಿಂದ ಭಾರತಕ್ಕಾಗುವ ಪರಿಣಾಮಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್‌ನ ರಣದೀಪ್ ಸಿಂಗ್ ಸುರ್ಜೇವಾಲಾ ನೋಟಿಸ್ ನೀಡಿದ್ದರು. ಇಂಧನ ಭದ್ರತೆ, ಆರ್ಥಿಕತೆ ಮತ್ತು ಅನಿವಾಸಿ ಭಾರತೀಯರ ರಕ್ಷಣೆಯ ಬಗ್ಗೆ ಚರ್ಚಿಸಲು ಕೋರಿ ಎಎಪಿಯ ಸಂಜಯ್ ಸಿಂಗ್ ನೋಟಿಸ್ ಸಲ್ಲಿಸಿದ್ದರು. ಮತದಾರರ ಹಕ್ಕು ಕಸಿದುಕೊಳ್ಳುವಿಕೆ ಕುರಿತು ಚರ್ಚಿಸಲು ಟಿಎಂಸಿಯ ನದಿಮುಲ್ ಹಕ್ ಮತ್ತು ಸಾಕೇತ್ ಗೋಖಲೆ ನಿಯಮ 267ರ ಅಡಿ ನೋಟಿಸ್ ನೀಡಿದ್ದರು. ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಚರ್ಚಿಸಲು ಸಿಪಿಐನ ಪಿ. ಸಂತೋಷ್ ನೋಟಿಸ್ ಸಲ್ಲಿಸಿದ್ದರು ಎಂದು ವರದಿಯಾಗಿದೆ. ಸಭಾಧ್ಯಕ್ಷರು ಈ ಎಲ್ಲಾ 267ರ ಅಡಿಯ ನೋಟಿಸ್‌ಗಳನ್ನು ತಿರಸ್ಕರಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತ್ರ ನಿಯಮ 176ರ ಅಡಿಯಲ್ಲಿ ಅಲ್ಪಾವಧಿ ಚರ್ಚೆಗೆ ಅವಕಾಶ ನೀಡಿದರು.

The post ಇಂಧನ ಭದ್ರತೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ appeared first on Good News 24x7.

]]>
ಕೆ.ಎನ್.ರಾಜಣ್ಣ ವಜಾಗೆ ಕಾರಣ ರಣದೀಪ್ ಸುರ್ಜೇವಾಲಾ.? https://www.goodnews24x7.com/is-randeep-surjewala-the-reason-for-k-n-rajannas-dismissal/ Tue, 12 Aug 2025 11:12:15 +0000 https://www.goodnews24x7.com/?p=5946 ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಕ್ಯಾಬಿನೆಟ್ ನಿಂದ ವಜಾಗೊಂಡಿದ್ದಾರೆ. ಇದರ ಹಿಂದೆ ದೊಡ್ಡ ಪಿತೂರಿ, ಷಡ್ಯಂತ್ರ ನಡೆದಿದೆ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ. ರಾಜಣ್ಣ ಕ್ಯಾಬಿನೆಟ್ ನಿಂದ ವಜಾ ಹಿಂದೆ ಸಕ್ರಿಯವಾಗಿ ಕೆಲಸ ಮಾಡಿರೋದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಎಂಬ…

The post ಕೆ.ಎನ್.ರಾಜಣ್ಣ ವಜಾಗೆ ಕಾರಣ ರಣದೀಪ್ ಸುರ್ಜೇವಾಲಾ.? appeared first on Good News 24x7.

]]>

ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಕ್ಯಾಬಿನೆಟ್ ನಿಂದ ವಜಾಗೊಂಡಿದ್ದಾರೆ. ಇದರ ಹಿಂದೆ ದೊಡ್ಡ ಪಿತೂರಿ, ಷಡ್ಯಂತ್ರ ನಡೆದಿದೆ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ. ರಾಜಣ್ಣ ಕ್ಯಾಬಿನೆಟ್ ನಿಂದ ವಜಾ ಹಿಂದೆ ಸಕ್ರಿಯವಾಗಿ ಕೆಲಸ ಮಾಡಿರೋದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಎಂಬ ಮಾತು ಕೆಪಿಸಿಸಿ ಅಂಗಳದಲ್ಲಿ ಚರ್ಚೆಯಾಗುತ್ತಿದೆ.

ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣರನ್ನ ವಜಾಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ..! ಹಾಲಿ ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲಾ ಇತ್ತೀಚೆಗೆ ಬೆಂಗಳೂರಿಗೆ ಬಂದು ಸಚಿವರು, ಶಾಸಕರ ಸಭೆ ನಡೆಸಿದ್ದರು. ಇದನ್ನು ಸಹಕಾರ ಖಾತೆ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಬಹಿರಂಗವಾಗಿ ಪ್ರಶ್ನಿಸಿದ್ದರು. ಜೊತೆಗೆ ರಣದೀಪ್ ಸುರ್ಜೇವಾಲಾ, ಎಲ್ಲ ಕ್ಯಾಬಿನೆಟ್ ಸಚಿವರನ್ನು ಪ್ರತ್ಯೇಕವಾಗಿ ಕರೆದು ಮಾತುಕತೆ ನಡೆಸಿದ್ದರು. ಈ ಮಾತುಕತೆಗೆ ಸಹಕಾರ ಸಚಿವರಾಗಿದ್ದ ಕೆ.ಎನ್‌.ರಾಜಣ್ಣ ಹೋಗಿರಲಿಲ್ಲ. ರಣದೀಪ್ ಸುರ್ಜೇವಾಲಾ, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಚಿವರ ಜೊತೆ ನಡೆಸುವಾಗ ಕೆ.ಎನ್.ರಾಜಣ್ಣ, ತಮ್ಮ ಕುಟುಂಬದ ಜೊತೆ ಅಮೆರಿಕಾ ಪ್ರವಾಸ ಹೋಗಿದ್ದರು. ನಂತರ ಹೋಗಿ ರಣದೀಪ್ ಸುರ್ಜೇವಾಲಾರನ್ನು ಭೇಟಿಯಾಗುತ್ತೇನೆ ಎಂದಿದ್ದರು. ಆ ರೀತಿ ರಣದೀಪ್ ಸುರ್ಜೇವಾಲಾರನ್ನು ರಾಜಣ್ಣ ಭೇಟಿಯಾಗಲಿಲ್ಲ ಜೊತೆಗೆ ರಣದೀಪ್ ಸುರ್ಜೇವಾಲಾ, ಕಾಂಗ್ರೆಸ್ ಪಕ್ಷದ ನಾಯಕರು ರಣದೀಪ್ ಸುರ್ಜೇವಾಲಾಗೆ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕರೆದು ಸಭೆ ನಡೆಸುವ ಅಧಿಕಾರ ಇಲ್ಲ. ಅಧಿಕಾರಿಗಳನ್ನು ಕರೆದು ಸಭೆ ನಡೆಸಿದ್ದು ಸರಿಯಲ್ಲ ಎಂದೆಲ್ಲಾ ಬಹಿರಂಗವಾಗಿ ರಣದೀಪ್ ಸುರ್ಜೇವಾಲಾ ವಿರುದ್ಧ ಮಾತನಾಡಿದ್ದರು.

ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತೊರೆಯಲು ಕಾರಣ ಯಾರು.?

ಇದು ಸಹಜವಾಗಿಯೇ ರಾಜ್ಯದ ಕಾಂಗ್ರೆಸ್ ಸರ್ಕಾರ, ಪಕ್ಷದ ಬೆಳವಣಿಗೆಗಳ ಬಗ್ಗೆ ಕಣ್ಣಿಟ್ಟಿರುವ ರಣದೀಪ್ ಸುರ್ಜೇವಾಲಾ ಗಮನಕ್ಕೆ ಬಂದಿದೆ. ಹೀಗಾಗಿ ರಣದೀಪ್ ಸುರ್ಜೇವಾಲಾಗೆ ಕೆ.ಎನ್.ರಾಜಣ್ಣ ಬಗ್ಗೆ ಒಳಗೊಳಗೆ ಅಸಮಾಧಾನ ಇತ್ತು. ಹೀಗಾಗಿ ಈಗ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿ ಕ್ಯಾಂಪೇನ್ ಮಾಡುವಾಗ ಅದರ ವಿರುದ್ಧವೂ ರಾಜಣ್ಣ ಹೇಳಿಕೆ ಕೊಟ್ಟಿದ್ದನ್ನೇ ರಣದೀಪ್ ಸುರ್ಜೇವಾಲಾ, ರಾಜಣ್ಣ ವಿರುದ್ಧ ಅಸ್ತ್ರವಾಗಿ ಬಳಕೆ ಮಾಡಿಕೊಂಡಿದ್ದಾರೆ. ತಮ್ಮ ವಿರುದ್ಧ ಮಾತನಾಡಿದ, ತಮ್ಮನ್ನು ಪ್ರಶ್ನಿಸಿದ ಕೆ.ಎನ್‌.ರಾಜಣ್ಣರನ್ನು ಹಣಿಯಲು ಅವರ ಹೇಳಿಕೆಯನ್ನೇ ಅವರ ವಿರುದ್ಧ ಅಶಿಸ್ತು ಎಂದು ಅಸ್ತ್ರ ಪ್ರಯೋಗಿಸಿ, ರಾಹುಲ್ ಗಾಂಧಿ ಮುಂದಿಟ್ಟಿದ್ದಾರೆ. ತಮ್ಮ ಹೋರಾಟವನ್ನು ಪ್ರಶ್ನಿಸಿದ ತಮ್ಮದೇ ಪಕ್ಷದ ಸಚಿವರ ಮಾತು ಅನ್ನು ಒಪ್ಪಿಕೊಳ್ಳಲು ಆಗಲ್ಲ. ಇದು ಅಶಿಸ್ತು ಎಂದು ರಾಹುಲ್ ಗಾಂಧಿ ಪರಿಗಣಿಸಿದ್ದಾರೆ. ಜೊತೆಗೆ ರಾಜಣ್ಣರ ಈ ಹಿಂದಿನ ವಿವಾದಾತ್ಮಕ ಹೇಳಿಕೆಗಳನ್ನು ಆಗಸ್ಟ್ 8 ರಂದು ರಾಹುಲ್ ಗಾಂಧಿ ಬೆೆಂಗಳೂರಿಗೆ ಬಂದಿದ್ದ ವೇಳೆಯೇ ರಣದೀಪ್ ಸುರ್ಜೇವಾಲಾ, ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದರಂತೆ.
ಆಗಲೂ ರಾಹುಲ್ ಗಾಂಧಿ, ಕೆ.ಎನ್.ರಾಜಣ್ಣ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಕರ್ನಾಟಕದಲ್ಲಿ ನಾವು 140 ಶಾಸಕರ ಸರ್ಕಾರ ನಡೆಸುತ್ತಿದ್ದೇವೋ, 115 ಮಂದಿಯ ಶಾಸಕರ ಸರ್ಕಾರ ನಡೆಸುತ್ತಿದ್ದೇವೋ? ಬಹುಮತ ಇದ್ದರೂ, ಪದೇ ಪದೇ ಸರ್ಕಾರದಲ್ಲಿ ಗೊಂದಲ ಏಕೆ ಎಂದು ರಾಹುಲ್ ಗಾಂಧಿ ಅವರು ನೇರವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅವರನ್ನು ಪ್ರಶ್ನಿಸಿದ್ದಾರೆ.

ಕೆ.ಎನ್.ರಾಜಣ್ಣ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದ್ದರೂ, ಏಕೆ ಯಾವುದೇ ಕ್ರಮ ಆಗಿಲ್ಲವೆಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದರಂತೆ. ರಾಜಣ್ಣ ಪದೇ ಪದೇ ಪಕ್ಷ , ಸರ್ಕಾರಕ್ಕೆ ಮುಜುಗರ ಆಗುವ ಹೇಳಿಕೆ ನೀಡುತ್ತಿದ್ದಾರೆ ಎಂದು ರಣದೀಪ್ ಸುರ್ಜೇವಾಲಾ ನೇರವಾಗಿ ರಾಹುಲ್ ಗಾಂಧಿಗೆ ಹೇಳಿದ್ದಾರೆ. ಇದರಿಂದಾಗಿಯೇ ರಾಹುಲ್ ಗಾಂಧಿಯೇ ಈಗ ಸಚಿವ ಸಂಪುಟದಿಂದ ಕೆ.ಎನ್.ರಾಜಣ್ಣರನ್ನು ವಜಾಗೊಳಿಸಬೇಕೆಂದು ಸಿಎಂ ಸಿದ್ದರಾಮಯ್ಯಗೆ ಫರ್ಮಾನು ಹೊರಡಿಸಿದ್ದರು. ಹೀಗಾಗಿ ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ, ಅದನ್ನು ಅಂಗೀಕರಿಸಿ, ರಾಜ್ಯಪಾಲರಿಗೆ ಕಳಿಸದೇ, ಸಿಎಂ ಸಿದ್ದರಾಮಯ್ಯ, ರಾಜಣ್ಣರನ್ನು ಕ್ಯಾಬಿನೆಟ್ ನಿಂದ ವಜಾಗೊಳಿಸುವ ಶಿಫಾರಸ್ಸು ಅನ್ನು ರಾಜ್ಯಪಾಲರಿಗೆ ಕಳಿಸಿದ್ದಾರೆ. ಬಳಿಕ ರಾಜಭವನದಿಂದ ರಾಜಣ್ಣರನ್ನು ಕ್ಯಾಬಿನೆಟ್ ನಿಂದ ವಜಾಗೊಳಿಸುವ ಪತ್ರ ಬಿಡುಗಡೆ ಆಗಿದೆ. ಆ ಪತ್ರವನ್ನು ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ ಅವರಿಗೆ ರವಾನೆ ಮಾಡಿದ್ದಾರೆ.
ಹೀಗೆ ಸಚಿವ ಸ್ಥಾನದಿಂದ ಕೆ.ಎನ್‌. ರಾಜಣ್ಣರ ತಲೆದಂಡಕ್ಕೆ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಎಂಬ ಮಾತು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯ ಅಂಗಳದಲ್ಲಿ ನಿನ್ನೆಯಿಂದ ಚರ್ಚೆಯಾಗುತ್ತಿದೆ. ಕೆ.ಎನ್‌. ರಾಜಣ್ಣ ಕಿಕ್ ಔಟ್ ಎಪಿಸೋಡ್ ನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ರಣದೀಪ್ ಸುರ್ಜೇವಾಲಾ.

ಬ್ಯಾಕ್ ಟು ಬ್ಯಾಕ್ ರಾಜಣ್ಣರ ಗೊಂದಲದ ಹೇಳಿಕೆಗಳ ಪಟ್ಟಿಯನ್ನೇ ರಣದೀಪ್ ಸುರ್ಜೇವಾಲಾ ಸಂಗ್ರಹಿಸಿಕೊಂಡಿದ್ದರು. ಕೆಲ ರಾಜ್ಯ ನಾಯಕರ ಮೂಲಕ ಸಾಕ್ಷಿ ಸಮೇತ ವರದಿಯನ್ನು ತರಿಸಿಕೊಂಡು ಸೂಕ್ತ ಸಮಯಕ್ಕಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಕಾಯುತ್ತಿದ್ದರು. ಡಿಕೆಶಿ ವಿರುದ್ಧ ಸಿಎಂ ಗಾದಿ, ಐದು ಡಿಸಿಎಂ ಹುದ್ದೆ ಸೃಷ್ಟಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಕೆ.ಎನ್‌. ರಾಜಣ್ಣ ಬಹಿರಂಗವಾಗಿ ಮಾತನಾಡಿದ್ದರು. ಈ ಬಗ್ಗೆ ಉಸ್ತುವಾರಿ ಸುರ್ಜೇವಾಲಾಗೆ ನಿರಂತರವಾಗಿ ದೂರು ನೀಡುತ್ತಿದ್ದಿದ್ದು ಡಿಸಿಎಂ ಡಿಕೆಶಿ. ರಾಜಣ್ಣರ ಪ್ರತಿಯೊಂದು ಹೇಳಿಕೆಗಳ ಮಾಹಿತಿ ಪಡೆಯುತ್ತಿದ್ದಾಗಲೇ ಉಸ್ತುವಾರಿ ರಣದೀಪ್ ಸುರ್ಜೇವಾಲಾ ವಿರುದ್ಧವೂ ಹೇಳಿಕೆಯನ್ನು ಕೆ.ಎನ್‌. ರಾಜಣ್ಣ ನೀಡಿದ್ದರು.
ಈಗ ರಾಹುಲ್ ಗಾಂಧಿ ಹೋರಾಟವನ್ನ ಅಣಕಿಸುವಂತೆ ಹೇಳಿಕೆ ನೀಡಿದ್ದನ್ನೆ ರಾಜಣ್ಣ ವಿರುದ್ಧ ಪ್ರಬಲ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ. ಹನಿಟ್ರ್ಯಾಪ್ ಪ್ರಕರಣದ ಜೊತೆಗೆ ಮತಗಳ್ಳತನ ಸಂಬಂಧ ರಾಜಣ್ಣ ನೀಡಿದ್ದ ಹೇಳಿಕೆಯನ್ನ ರಣದೀಪ್ ಸುರ್ಜೇವಾಲಾ ಬಳಸಿಕೊಂಡಿದ್ದಾರೆ. ಮೊದಲ ಹಂತವಾಗಿ ಕೆ.ಸಿ ವೇಣುಗೋಪಾಲ್ ಗಮನಕ್ಕೆ ರಾಜಣ್ಣರ ವಿವಾದಾತ್ಮಕ ಹೇಳಿಕೆಗಳನ್ನು ತರುವಲ್ಲಿ ಯಶಸ್ವಿಯಾಗಿದ್ದರು. ಬಳಿಕ ನೇರವಾಗಿ ರಾಹುಲ್ ಗಾಂಧಿಗೆ ರಾಜಣ್ಣ ಹೇಳಿಕೆ ಬಗ್ಗೆ ಮನವರಿಕೆ ಮಾಡುವಲ್ಲಿ ರಣದೀಪ್ ಸುರ್ಜೇವಾಲಾ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ರಾಜ್ಯ ಕ್ಯಾಬಿನೆಟ್ ನಿಂದ ಕೆ.ಎನ್.ರಾಜಣ್ಣ ವಜಾ ಆದೇಶ ಹೈಕಮ್ಯಾಂಡ್ ನಿಂದ ಸಿಎಂ ಸಿದ್ದರಾಮಯ್ಯಗೆ ರವಾನೆಯಾಗಿದೆ.

The post ಕೆ.ಎನ್.ರಾಜಣ್ಣ ವಜಾಗೆ ಕಾರಣ ರಣದೀಪ್ ಸುರ್ಜೇವಾಲಾ.? appeared first on Good News 24x7.

]]>
ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ : ಸಿಎಂ ಸಿದ್ದರಾಮಯ್ಯಗೆ ಖರ್ಗೆ ಪತ್ರ. https://www.goodnews24x7.com/sc-st-employees-are-being-violated-in-their-promotion-kharge-writes-to-cm-siddaramaiah5110-2/ Tue, 15 Jul 2025 08:56:27 +0000 https://www.goodnews24x7.com/?p=5110 ಕರ್ನಾಟಕದ ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕೆಲವು ಇಲಾಖೆಗಳು ಸರ್ಕಾರದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ. ಖರ್ಗೆ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ…

The post ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ : ಸಿಎಂ ಸಿದ್ದರಾಮಯ್ಯಗೆ ಖರ್ಗೆ ಪತ್ರ. appeared first on Good News 24x7.

]]>

ಕರ್ನಾಟಕದ ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕೆಲವು ಇಲಾಖೆಗಳು ಸರ್ಕಾರದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ. ಖರ್ಗೆ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಮತ್ತು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚನೆ ನೀಡಿದ್ದಾರೆ.

​ಬೆಂಗಳೂರು, ಜುಲೈ 15: ತಾವು ಎಸ್​​​ಸಿ ಎಸ್​​ಟಿ (SC ST) ಪರ, ಹಿಂದುಳಿದ ವರ್ಗಗಳ ಹಿತ ಕಾಯುವುದೇ ಆದ್ಯತೆ ಹಾಗೂ ಸಂವಿಧಾನಾತ್ಮಕಾಗಿಯೇ ಆಡಳಿತ ನಡೆಸುವುದು ಎಂದೇ ಸದಾ ಬಿಂಬಿಸಿಕೊಂಡು ಬಂದಿರುವ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿಯೇ ಹಿಂದುಳಿದ ವರ್ಗಗಳ ನೌಕರರಿಗೆ ಸಮಸ್ಯೆಯಾಗುತ್ತಿದೆಯೇ? ಇಂಥದ್ದೊಂದು ಪ್ರಶ್ನೆಗೆ ಈಗ ನಡೆದಿರುವ ಬೆಳವಣಿಗೆ ಕಾರಣವಾಗಿದೆ. ಎಸ್​​​ಸಿ ಎಸ್​​ಟಿ ನೌಕರರ ಮುಂಬಡ್ತಿಯಲ್ಲಿ ನಿಯಮ ಪಾಲನೆಯಾಗುತ್ತಿಲ್ಲ. ಈ ಕುರಿತು ಗಮನಹರಿಸಿ ತಕ್ಷಣವೇ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ./ಎಸ್.ಟಿ. ನೌಕರರ ಸಂಘದವರು ಎಸ್.ಸಿ.ಎಸ್.ಟಿ ನೌಕರರಿಗೆ ಮುಂಬಡ್ತಿಯನ್ನು ನೀಡುವಲ್ಲಿ ರೋಸ್ಟ‌ರ್ ಬಿಂದುವನ್ನು ಸರ್ಕಾರದ ಆದೇಶದ ಪ್ರಕಾರ ನಗದಿಪಡಿಸಿದ್ದರೂ, ಅದನ್ನು ಕಟುನಿಟ್ಟಾಗಿ ಪಾಲನೆ ಮಾಡಬೇಕೆಂಬ ನಿರ್ದೇಶನವಿದ್ದರೂ ಕೆಲವು ಇಲಾಖೆಗಳ ಅಧಿಕಾರಿಗಳು ಪಾಲನೆ ಮಾಡದಿರುವ ಬಗ್ಗೆ ಪತ್ರಿಕೆಯಲ್ಲಿ ಬಂದಿರುವ ಕೆಲವು ಪ್ರಮುಖ ಅಂಶಗಳ ಜೊತೆಗೆ ಈ ವಿಚಾರವಾಗಿ ನಿಮಗೂ ಕೂಡ ಬರೆದಿರುವ ಪತ್ರದ ಪ್ರತಿಯನ್ನು ಸಂಘದ ಅಧ್ಯಕ್ಷರು ನನ್ನ ಗಮನಕ್ಕೆ ತಂದಿದ್ದಾರೆ.

ಇದರ ಜೊತೆ ಲಗತ್ತಿಸಿರುವ ಪತ್ರಿಕೆಯಲ್ಲಿ ಬಂದಿರುವ ವಿವರಗಳನ್ನು ಹಾಗೂ ಸಂಘದವರು ನಿಮಗೆ ಈಗಾಗಲೇ ನೀಡಿರುವ ಪತ್ರವನ್ನು ಸ್ವತಃ ಅವಲೋಕಿಸುವುದರ ಜೊತೆಗೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಿ ಸರ್ಕಾರವೇ ಹೊರಡಿಸಿರುವ ಅದೇಶ ಹಾಗೂ ಸುತ್ತೋಲೆಗಳಲ್ಲಿ ತಿಳಿಸಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸ್ಪಷ್ಟ ಆದೇಶವನ್ನು ನೀಡುವುದು ಸೂಕ್ತ. ಇಲ್ಲದಿದ್ದರೆ ಅಧಿಕಾರಿಗಳ ಮಟ್ಟದಲ್ಲಿ ಅಸಮಧಾನ ಉಂಟಾಗಿ ಸರ್ಕಾರದ ಕೆಲಸ ಕಾರ್ಯಗಳು ಸುಲಲಿತವಾಗಿ ನಡೆಯಲು ಕಷ್ಟವಾಗುತ್ತದೆ ಎಂದು ಖರ್ಗೆ ಅವರು ಸಿದ್ದರಾಮಯ್ಯಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

The post ಎಸ್ಸಿ ಎಸ್ಟಿ ನೌಕರರ ಮುಂಬಡ್ತಿಯಲ್ಲಿ ರೋಸ್ಟರ್ ನಿಯಮ ಉಲ್ಲಂಘನೆಯಾಗುತ್ತಿದೆ : ಸಿಎಂ ಸಿದ್ದರಾಮಯ್ಯಗೆ ಖರ್ಗೆ ಪತ್ರ. appeared first on Good News 24x7.

]]>
ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ. https://www.goodnews24x7.com/minister-zameer-ahmed-khans-statement-union-minister-prahlad-joshis-sarcasm/ Sat, 03 May 2025 10:45:24 +0000 https://www.goodnews24x7.com/?p=3576 ವಿಜಯಪುರ : ಮೋದಿ ಅವಕಾಶ ಕೊಟ್ರೆ ನಾನು ಪಾಕ್ ಮೇಲೆ ಯುದ್ದ ಮಾಡೋಕೆ ಸಿದ್ಧ ಪ್ರಧಾನಿ ಮೋದಿ ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಲಿ ಎಂಬ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.…

The post ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ. appeared first on Good News 24x7.

]]>

ವಿಜಯಪುರ : ಮೋದಿ ಅವಕಾಶ ಕೊಟ್ರೆ ನಾನು ಪಾಕ್ ಮೇಲೆ ಯುದ್ದ ಮಾಡೋಕೆ ಸಿದ್ಧ ಪ್ರಧಾನಿ ಮೋದಿ ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಲಿ ಎಂಬ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.

 

 

 

 

 

ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ. ಜಮೀರ್ ಅಹ್ಮದ್ ಖಾನ್ ಶಾಂತವಾಗಿದ್ದರೇ ಸಾಕು. ನೀವೇನು ಮಾಡೋದು ಬೇಡ ಮಿಲಿಟರಿಯನ್ನ ನಂಬಿ ಸುಮ್ಮನಿರಿ ಸಾಕು ನಿಮ್ಮ ಭಾಷಣ ಬೇಡ. ನೀವು ಗಡಿಗೆ ಹೋಗೋದು ಬೇಡ ಎಂದರು.

ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ ಎಂದು ಲೇವಡಿ ಮಾಡಿದ ಪ್ರಹ್ಲಾದ್ ಜೋಶಿ, ಸೈನಿಕರು ಇಂಟೆಲಿಜೆನ್ಸ್ ಬಗ್ಗೆ ವಿಶ್ವಾಸವಿಡಿ. ಜಮೀರ್ ಶಾಂತವಾಗಿರುವುದೇ ದೇಶಕ್ಕೆ ದೊಡ್ಡ ಸೇವೆ. ಭಾರತೀಯ ಸೈನಿಕರನ್ನ ನಂಬಿ ಸುಮ್ಮನಿರಿ ಸಾಕು. ಜಮೀರ್, ಸಂತೋಷ್ ಲಾಡ್, ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಸುಮ್ಮನಿದ್ದರೇ ಸಾಕು ಎಂದರು.

The post ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ. appeared first on Good News 24x7.

]]>