#MLAs meet Archives - Good News 24x7 https://www.goodnews24x7.com/tag/mlas-meet/ Kannada Tue, 17 Mar 2026 12:10:56 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg #MLAs meet Archives - Good News 24x7 https://www.goodnews24x7.com/tag/mlas-meet/ 32 32 ಬಜೆಟ್​​ ಅಧಿವೆಶನದ ನಡುವೆ ಮಹತ್ವದ ಬೆಳವಣಿಗೆ: ​​ ಸಿಎಂ ಭೇಟಿಯಾಗಿದ್ದೇಕೆ ಕಾಂಗ್ರೆಸ್​​ನ ಹಿರಿಯ ಶಾಸಕರ ತಂಡ? https://www.goodnews24x7.com/amidst-the-budget-session-a-significant-development-has-taken-place-in-state-politics-why-did-a-team-of-senior-congress-mlas-meet-the-cm8908-2/ Tue, 17 Mar 2026 12:08:38 +0000 https://www.goodnews24x7.com/?p=8908   ಬಜೆಟ್ ಅಧಿವೇಶನದ ನಡುವೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹಿರಿಯ ಕಾಂಗ್ರೆಸ್ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸಚಿವ ಸಂಪುಟ ಪುನಾರಚನೆ ವೇಳೆ ಕನಿಷ್ಠ 20 ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂಬ ಆಗ್ರಹ ವ್ಯಕ್ತಪಡಿಸಿದ್ದಾರೆ.…

The post ಬಜೆಟ್​​ ಅಧಿವೆಶನದ ನಡುವೆ ಮಹತ್ವದ ಬೆಳವಣಿಗೆ: ​​ ಸಿಎಂ ಭೇಟಿಯಾಗಿದ್ದೇಕೆ ಕಾಂಗ್ರೆಸ್​​ನ ಹಿರಿಯ ಶಾಸಕರ ತಂಡ? appeared first on Good News 24x7.

]]>

 

ಬಜೆಟ್ ಅಧಿವೇಶನದ ನಡುವೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹಿರಿಯ ಕಾಂಗ್ರೆಸ್ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸಚಿವ ಸಂಪುಟ ಪುನಾರಚನೆ ವೇಳೆ ಕನಿಷ್ಠ 20 ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂಬ ಆಗ್ರಹ ವ್ಯಕ್ತಪಡಿಸಿದ್ದಾರೆ. ಉಪಚುನಾವಣೆ ಬಳಿಕ ಹೈಕಮಾಂಡ್ ಜತೆ ಮಾತನಾಡುವುದಾಗಿ ಸಿಎಂ ಭರವಸೆ ನೀಡಿದ್ದು, ಇತ್ತ ಶಾಸಕರೂ ಏಪ್ರಿಲ್ 11 ರಂದು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಲು ಸಿದ್ಧತೆ ನಡೆಸಿರೋದಾಗಿ ತಿಳಿದುಬಂದಿದೆ.

ಬಜೆಟ್​​ ಅಧಿವೆಶನದ ನಡುವೆಯೇ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ ನಡೆದಿದೆ. ಸಚಿವ ಸಂಪುಟ ಪುನಾರಚನೆ ವೇಳೆ ಕನಿಷ್ಠ 20 ಹಿರಿಯ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡುವಂತೆ ವಿಧಾನಸೌಧ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಎಂಎಲ್​​ಎಗಳು ಮನವಿ ಮಾಡಿದ್ದಾರೆ. ಭೋಜನ ವಿರಾಮದ ಸಮಯದಲ್ಲಿ ಸಿಎಂ ಭೇಟಿಯಾಗಿರುವ ‘ಕೈ’ ಶಾಸಕರು 3ಕ್ಕೂ ಹೆಚ್ಚು ಬಾರಿ ನಾವು ಎಂಎಲ್​​ಎಗಳಾಗಿದ್ದೇವೆ. ಹೀಗಾಗಿ ನಮಗೂ ಅವಕಾಶ ನೀಡಿ ಎಂಬ ಆಗ್ರಹ ಮುಂದಿಟ್ಟಿದ್ದಾರೆ. ಶಾಸಕರಾದ ಎನ್​.ಎ.ಹ್ಯಾರಿಸ್​, ಹಂಪನಗೌಡ ಬಾದರ್ಲಿ, ಬಾಲಕೃಷ್ಣ, ನಾರಾಯಣಸ್ವಾಮಿ, ಅಶೋಕ ಪಟ್ಟಣ, ಯಶವಂತರಾಯಗೌಡ ಪಾಟೀಲ್, ತನ್ವೀರ್ ಸೇಠ್, ರಾಘವೇಂದ್ರ ಹಿಟ್ನಾಳ್ ಸೇರಿ 16 ಶಾಸಕರಿಂದ ಈ ಬಗ್ಗೆ ಮನವಿ ಮಾಡಲಾಗಿದೆ.

ಸಚಿವ ಸಂಪುಟ ವಿಚಾರವಾಗಿ ಸ್ವತಃ ನಾನೇ ದೆಹಲಿಗೆ ಹೋಗುತ್ತೇನೆ. ಉಪಚುನಾವಣೆ ಬಳಿಕ ಹೈಕಮಾಂಡ್​ ನಾಯಕರನ್ನು ಭೇಟಿ ಮಾಡಲಿದ್ದು, ಆ ವೇಳೆ ನಿಮ್ಮ ಆಗ್ರಹವನ್ನು ವರಿಷ್ಠರಿ ಗಮನಕ್ಕೆ ತರೋದಾಗಿ ಸಿಎಂ ಸಿದ್ದರಾಮಯ್ಯ ಈ ವೇಳೆ ಹಿರಿಯ ಶಾಸಕರಿಗೆ ತಿಳಿಸಿದ್ದಾರೆ. ಅಲ್ಲದೆ, ಉಪಚುನಾವಣೆ ಬಳಿಕ ಸಂಪುಟ ಪುನಾರಚನೆ ಮಾಡುವುದಾಗಿ ಭರವಸೆಯನ್ನೂ ನೀಡಿದ್ದಾರೆ ಎನ್ನಲಾಗಿದೆ.

ಏಪ್ರಿಲ್ 11ರಂದು ದೆಹಲಿಗೆ ಹೋಗಲು ಪ್ಲ್ಯಾನ್,ಇನ್ನು ಸಿಎಂ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಹೆಚ್​.ಸಿ. ಬಾಲಕೃಷ್ಣ, ಮೂಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಶಾಸಕರೆಲ್ಲರೂ ಈ ವೇಳೆ ಉಪಸ್ಥಿತರಿದ್ದರು. ಮಂತ್ರಿ ಮಂಡಲ ಪುನಾರಚನೆ ವೇಳೆ ನಮ್ಮನ್ನು ಪರಿಗಣಿಸುವಂತೆ ಕೇಳಿದ್ದೇವೆ. ಕನಿಷ್ಠ 20 ಹಿರಿಯ ಶಾಸಕರಿಗೆ ಅವಕಾಶ ಕೊಡುವಂತೆ ಆಗ್ರಹಿಸಲಾಗಿದೆ. ಈ ವೇಳೆ ಹೈಕಮಾಂಡ್​ ಜೊತೆ ನಾನು ಮಾತನಾಡ್ತೇನೆ, ನೀವೂ ಮಾತನಾಡಿ ಎಂದು ಸಿಎಂ ಹೇಳಿದ್ದಾರೆ. ಹೀಗಾಗಿ ನಾವು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ. ಏಪ್ರಿಲ್ 11ರಂದು ದೆಹಲಿಗೆ ಹೋಗಲು ಪ್ಲ್ಯಾನ್ ಮಾಡಿದ್ದು, 40 ಶಾಸಕರು ಒಟ್ಟಾಗಿ ಹೈಕಮಾಂಡ್ ಗೆ ​ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

The post ಬಜೆಟ್​​ ಅಧಿವೆಶನದ ನಡುವೆ ಮಹತ್ವದ ಬೆಳವಣಿಗೆ: ​​ ಸಿಎಂ ಭೇಟಿಯಾಗಿದ್ದೇಕೆ ಕಾಂಗ್ರೆಸ್​​ನ ಹಿರಿಯ ಶಾಸಕರ ತಂಡ? appeared first on Good News 24x7.

]]>