murder Archives - Good News 24x7 https://www.goodnews24x7.com/tag/murder/ Kannada Wed, 10 Sep 2025 06:31:10 +0000 en-US hourly 1 https://wordpress.org/?v=6.9.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg murder Archives - Good News 24x7 https://www.goodnews24x7.com/tag/murder/ 32 32 15 ಲಕ್ಷಕ್ಕೆ ಸುಪಾರಿ ಕೊಟ್ಟು ಗರ್ಭಿಣಿ ಪತ್ನಿಯನ್ನೇ ಮುಗಿಸಿದ; ಸೀನಿಯರ್ ಮೇಲೆ ಮೋಹ.. ಪತ್ನಿಗೆ ಚಟ್ಟ! https://www.goodnews24x7.com/he-killed-his-pregnant-wife-by-giving-her-a-betel-nut-for-15-lakhs-infatuation-with-a-senior-wife-was-shocked/ Wed, 10 Sep 2025 06:31:10 +0000 https://www.goodnews24x7.com/?p=7449 ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆರು ತಿಂಗಳ ಗರ್ಭಿಣಿಯನ್ನಾಗಿ ಮಾಡಿ ಇದೀಗ ಇನ್ನೊಬ್ಬಳ ಮೇಲಿನ ವ್ಯಾಮೋಹಕ್ಕೆ ಬಿದ್ದು 15 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಹೆಂಡತಿಯನ್ನೇ ಮುಗಿಸಿದ ಘಟನೆ ಕಾಗವಾಡ ತಾಲೂಕಿನ ಬಿ.ಕೆ.ಉಗಾರದಲ್ಲಿ ನಡೆದಿದೆ. ಬೆಳಗಾವಿ: ಎರಡು ವರ್ಷಗಳ ಹಿಂದೆ…

The post 15 ಲಕ್ಷಕ್ಕೆ ಸುಪಾರಿ ಕೊಟ್ಟು ಗರ್ಭಿಣಿ ಪತ್ನಿಯನ್ನೇ ಮುಗಿಸಿದ; ಸೀನಿಯರ್ ಮೇಲೆ ಮೋಹ.. ಪತ್ನಿಗೆ ಚಟ್ಟ! appeared first on Good News 24x7.

]]>

ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆರು ತಿಂಗಳ ಗರ್ಭಿಣಿಯನ್ನಾಗಿ ಮಾಡಿ ಇದೀಗ ಇನ್ನೊಬ್ಬಳ ಮೇಲಿನ ವ್ಯಾಮೋಹಕ್ಕೆ ಬಿದ್ದು 15 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಹೆಂಡತಿಯನ್ನೇ ಮುಗಿಸಿದ ಘಟನೆ ಕಾಗವಾಡ ತಾಲೂಕಿನ ಬಿ.ಕೆ.ಉಗಾರದಲ್ಲಿ ನಡೆದಿದೆ.

ಬೆಳಗಾವಿ: ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆರು ತಿಂಗಳ ಗರ್ಭಿಣಿಯನ್ನಾಗಿ ಮಾಡಿ ಇದೀಗ ಇನ್ನೊಬ್ಬಳ ಮೇಲಿನ ವ್ಯಾಮೋಹಕ್ಕೆ ಬಿದ್ದು 15 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಹೆಂಡತಿಯನ್ನೇ ಮುಗಿಸಿದ ಘಟನೆ ಕಾಗವಾಡ ತಾಲೂಕಿನ ಬಿ.ಕೆ.ಉಗಾರದಲ್ಲಿ ನಡೆದಿದೆ. ಚೈತಾಲಿ ಗಂಡನ ಸುಪಾರಿಗೆ ಬಲಿಯಾದ ಮಹಿಳೆ. ಪ್ರದೀಪ್ ಪ್ರಮುಖ ಆರೋಪಿ. ಪ್ರಕರಣ ಸಂಬಂಧ ಪ್ರದೀಪ್ ಸೇರಿ, ಸಾಥ್ ನೀಡಿದ್ದ ಇನ್ನಿಬ್ಬರು ಆರೋಪಿಗಳನ್ನು ಕಾಗವಾಡ ಪೊಲೀಸರು ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ. ಪತಿ ಪ್ರದೀಪ್ ಹಾಗೂ ಮೃತ ಚೈತಾಲಿ ಉಗಾರ್ ಬಿ.ಕೆ.ಗ್ರಾಮದವರು. ಒಂದೇ ಗ್ರಾಮದವರಾದ ಇವರು ಪ್ರೀತಿಸಿ ಎರಡು ವರ್ಷಗಳ ಹಿಂದಷ್ಟೇ ಮದುವೆ ಆಗಿದ್ದರು. ಸಾಕ್ಷಿಯಾಗಿ ಆರು ತಿಂಗಳ ಗರ್ಭಿಣಿ ಕೂಡ ಆಗಿದ್ದಳು ಎಂದು ತಿಳಿದುಬಂದಿದೆ.

ಆಗಿದ್ದೇನು..? ಕಾನೂನು ಪದವಿ ಪಡೆದಿದ್ದ ಪ್ರದೀಪ್ ಕಿರಣಗಿ, ಕಾಗವಾಡ ಕೋರ್ಟ್‌ನಲ್ಲಿ ವಕೀಲ ವೃತ್ತಿಯಲ್ಲಿದ್ದ. ಪ್ರೇಮ-ವಿವಾಹದ ಬಳಿಕವೂ ಕಾಲೇಜಿನ ಸೀನಿಯರ್ ಜೊತೆಗೆ ಪ್ರದೀಪ್​​ಗೆ ಲವ್ ಶುರುವಾಗಿತ್ತಂತೆ. ಸೀನಿಯರ್ ಲೇಡಿಯನ್ನ ಬುಟ್ಟಿಗೆ ಹಾಕಿಕೊಳ್ಳಲು ತನಗೆ ಮದುವೆಯೇ ಆಗಿಲ್ಲ ಎಂದು ನಾಟಕವಾಡಿದ್ದಾನೆ ಎನ್ನಲಾಗಿದೆ. ಜೂನಿಯರ್ ಪ್ರದೀಪ್ ಮಾತು ನಂಬಿದ್ದ ಸೀನಿಯರ್​, ಪ್ರೀತಿಯ ಬಲೆಗೆ ಬಿದ್ದಿದ್ದಳು. ಯಾವಾಗ ಸೀನಿಯರ್ ಮೇಲೆ ಮೋಹ ಹೆಚ್ಚಾಯಿತೋ ಆಗಲೇ ಪತ್ನಿಯನ್ನು ಮುಗಿಸಲು ಪ್ಲಾನ್ ಮಾಡಿದ್ದಾನೆ ಅನ್ನೋದು ತನಿಖೆಯಿಂದ ತಿಳಿದುಬಂದಿದೆ.

ಮಾಡಿದ್ದೇನು..? ಪ್ರದೀಪ್ ತನ್ನ ಹೆಂಡತಿಯನ್ನ ಮುಗಿಸಲು ಸ್ನೇಹಿತನ ಸಹಾಯ ಪಡೆದಿದ್ದಾನೆ. ಸ್ನೇಹಿತ ರಾಜೇಂದ್ರ ಜೊತೆ ಮಾತುಕತೆ ನಡೆಸಿ 15 ಲಕ್ಷ ರೂಪಾಯಿಗೆ ಸೂಪಾರಿ ಕೊಟ್ಟಿದ್ದ ಎನ್ನಲಾಗಿದೆ. ಅಂತೆಯೇ ಚೈತಾಲಿಯನ್ನ ಮುಗಿಸಲು ಎರಡು ಬಾರಿ ಪ್ರಯತ್ನಿಸಿದ್ದಾರೆ. ಆದರೆ ಅದು ಫೇಲ್ ಆಗಿತ್ತು. ಮೂರನೇ ಬಾರಿಗೆ ಯಶಸ್ವಿಯಾಗಿದ್ದಾರೆ. ಭಾರವಾದ ವಸ್ತುವಿನಿಂದ ತಲೆಗೆ ಹೊಡೆದು ಆರು ತಿಂಗಳ ಗರ್ಭಿಣಿಯ ಜೀವ ತೆಗೆದಿದ್ದರು.

ಮುಂದೆ ಏನಾಯ್ತು..? ಆರೋಪಿಗಳಿಬ್ಬರು ಹಾಗೂ ಪ್ರದೀಪ್ ಸೇರಿ ಪ್ಲಾನ್ ಮಾಡಿದ್ದಾರೆ. ಪ್ಲಾನ್ ಪ್ರಕಾರವೇ ಆಕೆಯನ್ನು ಮುಗಿಸಿ, ಮೃತದೇಹವನ್ನು ಕೆಲ ಹೊತ್ತು ರಸ್ತೆಗೆ ತಂದು ಕಾಲ ಕಳೆದಿದ್ದಾರೆ. ಅದಾದ ನಂತರ ಆರೋಪಿ ಪ್ರದೀಪ್ ಪೊಲೀಸರಿಗೆ ಖುದ್ದು ಕರೆ ಮಾಡಿದ್ದಾನೆ. ಸೆಪ್ಟೆಂಬರ್ 7 ರಂದು ರಾತ್ರಿ 9.30ಕ್ಕೆ ಕರೆ ಮಾಡಿದ ಆತ, ಸರ್​ ರಸ್ತೆಯಲ್ಲಿ ಹೋಗುವಾಗ ಅಪಘಾತ ಆಗಿದೆ. ನನ್ನದೇ ಕಾರಿನಲ್ಲಿ ಹೋಗುವಾಗ ಅಪಘಾತ ಆಗಿದೆ. ಹೆಂಡತಿಗೆ ಗಂಭೀರ ಪೆಟ್ಟು ಬಿದ್ದಿದೆ. ನನಗೂ ಗಾಯವಾಗಿದೆ. ಪತ್ನಿ ಚೈತಾಲಿಯನ್ನು ಕಾಗವಾಡ ತಾಲೂಕು ಆಸ್ಪತ್ರೆಗೆ ದಾಖಲಿಸುತ್ತಿರೋದಾಗಿ ಹೇಳಿದ್ದಾನೆ. ವಿಷಯ ತಿಳಿದ ಪೊಲೀಸರು ತಕ್ಷಣವೇ ಕಾಗವಾಡ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಸಿಕ್ಕಿಬಿದ್ದಿದ್ದು ಹೇಗೆ..? ಪೊಲೀಸರು ಆಸ್ಪತ್ರೆಗೆ ಹೋದಾಗ ಚೈತ್ರಾಲಿ ಅನ್ನೋರು ಯಾರೂ ಇರಲಿಲ್ಲ. ಕೂಡಲೇ ಪೊಲೀಸರು ಪ್ರದೀಪ್​ಗೆ ಕರೆ ಮಾಡಿದ್ದಾರೆ. ಆಗ ಕಾಗವಾಡ ಬದಲು ಮಹಾರಾಷ್ಟ್ರದ ಮೀರಜ್‌‌ ಆಸ್ಪತ್ರೆಗೆ ಚೈತ್ರಾಣಿ ‌ಕರೆತಂದಿರುವುದಾಗಿ ಪೊಲೀಸರಿಗೆ ಪ್ರದೀಪ್ ಮಾಹಿತಿ ನೀಡಿದ್ದಾನೆ. ತಕ್ಷಣವೇ ‌ಪ್ರದೀಪ್ ನಿವಾಸಕ್ಕೆ ಕಾಗವಾಡ ಪೊಲೀಸರು ಭೇಟಿ ನೀಡಿದ್ದಾರೆ. ಆಗ ಪ್ರದೀಪ್ ನಿವಾಸದ ಎದುರು ಕಾರು ನಿಂತಿತ್ತು. ಇದರಿಂದ ಪ್ರದೀಪ್ ನಡೆ ಮೇಲೆ ಪೊಲೀಸರಿಗೆ ಅನುಮಾನ ಬಂದಿದೆ. ಇದರ ನಡುವೆ ಪ್ರದೀಪ್ ಮೀರಜ್ ಪೊಲೀಸರನ್ನ ಭೇಟಿಯಾಗಿ, ಪತ್ನಿ ಅಪಘಾತದಿಂದ ಮೃತರಾಗಿದ್ದು ದೂರು ದಾಖಲಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾನೆ. ಆಗ ಮೀರಜ್ ಪೊಲೀಸರು ‌ಕಾಗವಾಡ ಠಾಣೆಯ ‌ಪೊಲೀಸರನ್ನ ಸಂಪರ್ಕಿಸುತ್ತಾರೆ. ಆಗ ನಾವು ಮೀರಜ್‌ಗೆ ಬರ್ತಿದ್ದೇವೆ, ಯಾವುದೇ ‌ದೂರು ದಾಖಲಿಸಿಕೊಳ್ಳದಂತೆ ಮನವಿ ಮಾಡುತ್ತಾರೆ.

ಮೀರಜ್‌ಗೆ ಬರುತ್ತಿದ್ದಂತೆಯೇ ಪೊಲೀಸರು ಪ್ರದೀಪ್​ನ ವಿಚಾರಣೆಗೆ ಒಳಪಡಿಸುತ್ತಾರೆ. ಆಗ ಪ್ರದೀಪ್​​ಗೆ ಅಪಘಾತದಿಂದ ಯಾವುದೇ ಗಾಯ ಆಗದಿರೋದು ಗೊತ್ತಾಗಿದೆ. ಚೈತಾಲಿ ‌ಮೃತದೇಹ ನೋಡಿದ ಪೊಲೀಸರು ಇದು ಅಪಘಾತವಲ್ಲ, ಕೊ*ಲೆ ಎಂಬುದನ್ನ ಮೇಲ್ನೋಟಕ್ಕೆ ಪತ್ತೆಹಚ್ಚಿಕೊಳ್ತಾರೆ. ತಕ್ಷಣವೇ ಪ್ರದೀಪ್​ನನ್ನ ‌ತೀವ್ರ ವಿಚಾರಣೆ ಮಾಡಿದಾಗ ಕೊ*ಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಮಾತ್ರವಲ್ಲ, ಸ್ಥಳ ಮಹಜರು ವೇಳೆ ಪ್ರಕರಣಕ್ಕೆ ಸಾಥ್ ನೀಡಿದವರ ಹೆಸರನ್ನೂ ಹೇಳಿದ್ದಾನೆ. ಪ್ರಕರಣದಲ್ಲಿ ಐವರು ಆರೋಪಿಗಳು ಬಾಗಿಯಾಗಿರುವ ಶಂಕೆಯಿದ್ದ, ಮೂವರ ಬಂಧನವಾಗಿದೆ. ಮತ್ತಿಬ್ಬರ ಬಂಧನಕ್ಕೆ ಬಲೆ ಬೀಸಿದ್ದಾರೆ.

The post 15 ಲಕ್ಷಕ್ಕೆ ಸುಪಾರಿ ಕೊಟ್ಟು ಗರ್ಭಿಣಿ ಪತ್ನಿಯನ್ನೇ ಮುಗಿಸಿದ; ಸೀನಿಯರ್ ಮೇಲೆ ಮೋಹ.. ಪತ್ನಿಗೆ ಚಟ್ಟ! appeared first on Good News 24x7.

]]>
ಗರ್ಭಿಣಿಯಾದ ಪ್ರೇಯಸಿ, ಮದುವೆ ವಿಚಾರಕ್ಕೆ ತನ್ನ ಪ್ರಿಯಕರನಿಂದಲೇ ಕೊಲೆ https://www.goodnews24x7.com/pregnant-lover-murdered-by-her-lover-over-marriage-issue/ Wed, 20 Aug 2025 11:09:46 +0000 https://www.goodnews24x7.com/?p=6407 ಆರೋಪಿ ಚೇತನ್ ಬಂಧಿಸಿದಾಗ, ಆತನಿಗೆ ಕ್ಯಾನ್ಸರ್ ಇರೋದು ಬೆಳಕಿಗೆ ಕೋಟೆ ನಾಡು ಚಿತ್ರದುರ್ಗದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರನ್ನು ಕೊಲೆಗೈದು ಸುಟ್ಟು ಹಾಕಲಾಗಿದೆ. ನಿನ್ನೆ ಸಂಜೆ ವಿದ್ಯಾರ್ಥಿನಿಯ ಶವ ನಗರದ ಹೊರವಲಯದಲ್ಲಿ ಪತ್ತೆಯಾಗಿತ್ತು. ಪ್ರಾರಂಭದಲ್ಲಿ ಶವದ ಗುರುತು ಕೂಡ ಪತ್ತೆಯಾಗಿರಲಿಲ್ಲ. ಬಳಿಕ ಕೊಲೆಯಾದ ವಿದ್ಯಾರ್ಥಿನಿಯನ್ನು…

The post ಗರ್ಭಿಣಿಯಾದ ಪ್ರೇಯಸಿ, ಮದುವೆ ವಿಚಾರಕ್ಕೆ ತನ್ನ ಪ್ರಿಯಕರನಿಂದಲೇ ಕೊಲೆ appeared first on Good News 24x7.

]]>

ಆರೋಪಿ ಚೇತನ್ ಬಂಧಿಸಿದಾಗ, ಆತನಿಗೆ ಕ್ಯಾನ್ಸರ್ ಇರೋದು ಬೆಳಕಿಗೆ
ಕೋಟೆ ನಾಡು ಚಿತ್ರದುರ್ಗದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರನ್ನು ಕೊಲೆಗೈದು ಸುಟ್ಟು ಹಾಕಲಾಗಿದೆ. ನಿನ್ನೆ ಸಂಜೆ ವಿದ್ಯಾರ್ಥಿನಿಯ ಶವ ನಗರದ ಹೊರವಲಯದಲ್ಲಿ ಪತ್ತೆಯಾಗಿತ್ತು. ಪ್ರಾರಂಭದಲ್ಲಿ ಶವದ ಗುರುತು ಕೂಡ ಪತ್ತೆಯಾಗಿರಲಿಲ್ಲ. ಬಳಿಕ ಕೊಲೆಯಾದ ವಿದ್ಯಾರ್ಥಿನಿಯನ್ನು ವರ್ಷಿತಾ ಎಂದು ಗುರುತಿಸಲಾಗಿದೆ. ಈ ವರ್ಷಿತಾ ಚಿತ್ರದುರ್ಗ ನಗರದಲ್ಲಿ ದ್ವಿತೀಯ ಬಿಎ ಓದುತ್ತಿದ್ದಳು. ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ವಾಸ ಇದ್ದಳು. ನಿನ್ನೆ ಸಂಜೆ ಹಾಸ್ಟೆಲ್ ವಾರ್ಡನ್​ಗೆ ರಜೆ ಚೀಟಿ ಕೊಟ್ಟು ಊರಿಗೆ ಹೋಗುತ್ತೇನೆಂದು ಹೇಳಿ ಹೊರಟಿದ್ದಳು. ಆದರೇ, ವರ್ಷಿತಾ ತನ್ನ ಊರಿಗೆ ಹೋಗಿಲ್ಲ. ರಾತ್ರಿ 11ರ ವೇಳೆಗೆ ವರ್ಷಿತಾ ಕೊಲೆಯಾಗಿರುವ ವಿಷಯ ಹಾಸ್ಟೆಲ್ ವಾರ್ಡನ್​​​ಗೆ ಗೊತ್ತಾಗಿದೆ.

 

ಪ್ರೀತಿ ವಿಚಾರಕ್ಕೆ ವರ್ಷಿತಾ- ಚೇತನ್ ನಡುವೆ ಗಲಾಟೆ ನಡೆದಿದೆ. ಗಲಾಟೆಯ ವೇಳೆ ಚೇತನ್, ವರ್ಷಿತಾಗೆ ಹೊಡೆದು ಕೊಂದಿದ್ದಾನೆ, ಬಳಿಕ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ್ದಾನೆ. ಚಿತ್ರದುರ್ಗದ ಸಿಪಿಐ ಮುದ್ದುರಾಜ್, ಡಿವೈಎಸ್ಪಿ ದಿನಕರ್ ನೇತೃತ್ವದಲ್ಲಿ ತನಿಖೆಯನ್ನು ನಡೆಸಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.

ಯುವತಿಯನ್ನು ಗರ್ಭಿಣಿಯಾಗಿಸಿ ಮದುವೆ ಆಗಲು ನಿರಾಕರಣೆ

ಚಿತ್ರದುರ್ಗ ವಿದ್ಯಾರ್ಥಿನಿ ಕೊಲೆ ಕೇಸ್​ಗೆ ಸ್ಟಫೋಕ ತಿರುವು ಸಿಕ್ಕಿದೆ. ಪೊಲೀಸರ ಮುಂದೆ ಕೊಲೆ ರಹಸ್ಯ ಆರೋಪಿ ಚೇತನ್ ಬಾಯ್ಬಿಟ್ಟಿದ್ದಾನೆ. ಯುವತಿಯನ್ನ ಗರ್ಭಿಣಿ ಮಾಡಿ ಮೋಸ ಮಾಡಲು ಆರೋಪಿ ಮುಂದಾಗಿದ್ದ. ನಿನ್ನಿಂದ ಗರ್ಭಿಣಿ ಆಗಿದ್ದೇನೆ, ಈಗ ಮದುವೆ ಆಗು ಎಂದು ಯುವತಿ ಪಟ್ಟು ಹಿಡಿದಿದ್ದಳು. ಮದುವೆ ಆಗಲು ಆರೋಪಿ ನಿರಾಕರಿಸಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ನಿನಗೆ ಬೇರೋಬ್ಬನ ಜೊತೆ ಸಂಬಂಧ ಇದೆ ಎಂದು ಆರೋಪಿ ಚೇತನ್, ಹಲ್ಲೆ ಮಾಡಿ, ಕೊಲೆಗೈದಿದ್ದಾನೆ. ಬಳಿಕ ಪೆಟ್ರೋಲ್ ಹಾಕಿ ಶವವನ್ನು ಸುಟ್ಟಿದ್ದಾನೆ.

ಚೇತನ್ ಬಂಧನದ ಬಳಿಕ ಆರೋಪಿಗೆ ಕ್ಯಾನ್ಸರ್ ರೋಗ ಇರೋದು ಬೆಳಕಿಗೆ ಬಂದಿದೆ. ಇದೇ ಪ್ರಕರಣದಲ್ಲಿ ಒಂದೇ ಸಿಮ್ ಕಾರ್ಡ್​​ಗೆ 16 ಮೊಬೈಲ್ ಬಳಕೆ ಮಾಡಿ ಯುವತಿ ವರ್ಷಿತಾ ಮಾತನಾಡಿರುವುದು ಬೆಳಕಿಗೆ ಬಂದಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಕೊಲೆ, ಸಾಕ್ಷ್ಯ ನಾಶ ಕೇಸ್ ದಾಖಲಾಗಿದೆ.

ಚಿತ್ರದುರ್ಗ ನಗರದ ಅಂಬೇಡ್ಕರ್ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಗೃಹ ಸಚಿವ ಡಾ.ಜಿ ಪರಮೇಶ್ವರ ಫೋಟೋ ಹಿಡಿದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಸ್ಪತ್ರೆಯ ಮುಂಭಾಗ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕೊಲೆಯಾದ ಯುವತಿ ಕುಟುಂಬಸ್ಥರ ಮಧ್ಯೆ ವಾಗ್ವಾದ ನಡೆದಿದೆ.

ಹೋರಾಟಕ್ಕೆ ದಲಿತಪರ ಸಂಘಟನೆಗಳು ಸೇರಿ ಹಲವು ಸಂಘಟನೆಗಳು ಸಾಥ್ ಕೊಟ್ಟಿವೆ. ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪೊಲೀಸರ ಹರಸಾಹಸ ಪಟ್ಟರು. ಅವಳು ನನ್ನ ತಂಗಿ ಇದ್ದಂತೆ, ಆರೋಪಿನ ಕೂಡಲೇ ಬಂಧನ ಮಾಡ್ತೀವಿ ಎಂದು ಯುವತಿಯ ಕುಟುಂಬಸ್ಥರಿಗೆ DYSP ದಿನಕರ್ ಭರವಸೆ ನೀಡಿದ್ದರು.

The post ಗರ್ಭಿಣಿಯಾದ ಪ್ರೇಯಸಿ, ಮದುವೆ ವಿಚಾರಕ್ಕೆ ತನ್ನ ಪ್ರಿಯಕರನಿಂದಲೇ ಕೊಲೆ appeared first on Good News 24x7.

]]>
ದರ್ಶನ್ ಬಂಧನದ ಬಳಿಕ ವಿಜಯಲಕ್ಷ್ಮೀ ಭಾವುಕ ಪೋಸ್ಟ್ .. https://www.goodnews24x7.com/vijayalakshmis-emotional-post-after-darshans-arrest/ Sat, 16 Aug 2025 09:30:14 +0000 https://www.goodnews24x7.com/?p=6216 ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರನ್ನು ಮತ್ತೆ ಬಂಧಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿ, ವಿಜಯಲಕ್ಷ್ಮೀ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಒಡೆದ ಹೃದಯದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದ್ದು, ದರ್ಶನ್ ಅವರ ಬಂಧನದಿಂದಾಗಿ ಅವರು ಎಷ್ಟು ದುಃಖಿತರಾಗಿದ್ದಾರೆ…

The post ದರ್ಶನ್ ಬಂಧನದ ಬಳಿಕ ವಿಜಯಲಕ್ಷ್ಮೀ ಭಾವುಕ ಪೋಸ್ಟ್ .. appeared first on Good News 24x7.

]]>

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರನ್ನು ಮತ್ತೆ ಬಂಧಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿ, ವಿಜಯಲಕ್ಷ್ಮೀ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಒಡೆದ ಹೃದಯದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದ್ದು, ದರ್ಶನ್ ಅವರ ಬಂಧನದಿಂದಾಗಿ ಅವರು ಎಷ್ಟು ದುಃಖಿತರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ.

ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿದ್ದಾರೆ. ಇಷ್ಟು ದಿನ ಜಾಮೀನು ಪಡೆದು ಹೊರಗೆ ಇದ್ದ ಅವರು ಮತ್ತೆ ಜೈಲು ಸೇರಿದ್ದಾರೆ. ಇದರ ಬೆನ್ನಲ್ಲೇ ವಿಜಯಲಕ್ಷ್ಮೀ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಮನಸ್ಸು ಒಡೆದಿದೆ ಎಂದು ಹೇಳಿಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ವೈರಲ್ ಆಗುತ್ತಿದೆ.

ನಟ ದರ್ಶನ್ ಮೊದಲ ಬಾರಿ ಬಂಧನದ ಬಳಿಕವೂ ಸೈಲೆಂಟ್ ಆಗಿಯೇ ಇದ್ದರು ವಿಜಯಲಕ್ಷ್ಮೀ. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿ ಅಭಿಮಾನಿಗಳಿಗೆ ಧೈರ್ಯ ತುಂಬಿದರು. ದರ್ಶನ್ ಜಾಮೀನು ಪಡೆದು ಬಿಡುಗಡೆ ಆದ ಬಳಿಕ ಅವರಷ್ಟು ಖುಷಿಪಟ್ಟವರು ಮತ್ತೊಬ್ಬರು ಇರಲಿಲ್ಲ. ದರ್ಶನ್ ಈಗ ಮತ್ತೆ ಅರೆಸ್ಟ್ ಆಗಿರೋದು ಅವರಿಗೆ ಬೇಸರ ಮೂಡಿಸಿದೆ.

ದರ್ಶನ್ ಅವರು ಕೊನೆಯದಾಗಿ ಬಂಧನಕ್ಕೆ ಒಳಗಾಗಿದ್ದು ವಿಜಯಲಕ್ಷ್ಮೀ ಅವರ ನಿವಾಸದಿಂದಲೇ. ಅವರನ್ನು ಅಲ್ಲಿಂದಲೇ ಅರೆಸ್ಟ್ ಮಾಡಲಾಗಿತ್ತು. ಆ ಬಳಿಕ ವಿಜಯಲಕ್ಷ್ಮೀ ಅವರು ಸೈಲೆಂಟ್ ಆಗಿದ್ದರು. ಈಗ ಸೋಶಿಯಲ್ ಮೀಡಿಯಾದಲ್ಲಿ ಅವರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ದರ್ಶನ್ ಬ್ಯಾಕ್ ಪೋಸ್​ನ ಫೋಟೋ ಹಾಕಿದ್ದಾರೆ. ದರ್ಶನ್ ಸರಳಿನ ಹಿಂದೆ ನಿಂತು ಏನನ್ನೋ ನೋಡುತ್ತಿದ್ದಾರೆ. ಈ ಪೋಸ್ಟ್​ಗೆ ಅವರು ಒಡೆದ ಹೃದಯದ ಎಮೋಜಿ ಹಾಕಿದ್ದಾರೆ. ಎಲ್ಲವನ್ನೂ ಅವರು ಸೂಕ್ಷ್ಮವಾಗಿ ಹೇಳಿದ್ದಾರೆ.

ದರ್ಶನ್ ಅವರ ಬಂಧನ ಈ ಬಾರಿ ಮತ್ತಷ್ಟು ಗಂಭೀರ ಸ್ವರೂಪ ಪಡೆದಿದೆ. ಕಳೆದ ಬಾರಿ ಬಂಧನ ಆದಾಗ ಅವರಿಗೆ ಕೆಳ ಹಂತದಲ್ಲಿ ಅಲ್ಲದೆ ಇದ್ದರೂ ಮೇಲಿನ ಕೋರ್ಟ್​ನಲ್ಲಿ ಜಾಮೀನು ಸಿಗಬಹುದು ಎಂಬ ನಂಬಿಕೆ ಇತ್ತು. ಆದರೆ, ಈ ಬಾರಿ ಸಾಕಷ್ಟು ಚಾಲೆಂಜ್​ಗಳು ಇವೆ. ದರ್ಶನ್ ಜಾಮೀನು ರದ್ದಾಗಿರುವುದು ಸುಪ್ರೀಂಕೋರ್ಟ್​ನಿಂದ. ಉಚ್ಚ ನ್ಯಾಯಲಯ ಜಾಮೀನು ರದ್ದು ಮಾಡಿರುವುದರಿಂದ ಕೆಳ ಹಂತದ ಕೋರ್ಟ್​ನಲ್ಲೂ ಬೇಲ್ ಸಿಗೋದು ಅನುಮಾನವಾಗಿದೆ.

The post ದರ್ಶನ್ ಬಂಧನದ ಬಳಿಕ ವಿಜಯಲಕ್ಷ್ಮೀ ಭಾವುಕ ಪೋಸ್ಟ್ .. appeared first on Good News 24x7.

]]>
ರೇಣುಕಾಸ್ವಾಮಿ ಕೇಸ್; ಸೆ.9 ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್! https://www.goodnews24x7.com/renukaswamy-case-court-adjourns-hearing-to-september-9/ Tue, 12 Aug 2025 07:50:52 +0000 https://www.goodnews24x7.com/?p=5909 ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರಾ ಗೌಡ ಸೇರಿದಂತೆ ಉಳಿದ ಆರೋಪಿಗಳು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾದರು. ಸಿಸಿಹೆಚ್ 63ರ ನ್ಯಾಯಾಧೀಶರ ಮುಂದೆ ಆರೋಪಿಗಳು ಹಾಜರಾದರು. ಚಾರ್ಜ್ ಫ್ರೇಮ್‌ಗೆ ನ್ಯಾಯಾಧೀಶರು ಸಮಯ ನಿಗದಿಪಡಿಸಿದರು. ಪ್ರಕರಣದ ವಿಚಾರಣೆಯನ್ನು…

The post ರೇಣುಕಾಸ್ವಾಮಿ ಕೇಸ್; ಸೆ.9 ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್! appeared first on Good News 24x7.

]]>

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರಾ ಗೌಡ ಸೇರಿದಂತೆ ಉಳಿದ ಆರೋಪಿಗಳು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾದರು.

ಸಿಸಿಹೆಚ್ 63ರ ನ್ಯಾಯಾಧೀಶರ ಮುಂದೆ ಆರೋಪಿಗಳು ಹಾಜರಾದರು. ಚಾರ್ಜ್ ಫ್ರೇಮ್‌ಗೆ ನ್ಯಾಯಾಧೀಶರು ಸಮಯ ನಿಗದಿಪಡಿಸಿದರು. ಪ್ರಕರಣದ ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.

ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್, ಪುಟ್ಟಸ್ವಾಮಿ, ರಾಘವೇಂದ್ರ, ನಂದೀಶ್, ರವಿಶಂಕರ್, ನಾಗರಾಜು, ಲಕ್ಷ್ಮಣ್, ದೀಪಕ್ ಕುಮಾರ್ ನ್ಯಾಯಾಲಯದ ಮುಂದೆ ಹಾಜರಿದ್ದರು. ವಿನಯ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ಗೈರಾಗಿದ್ದರು.

ವಿಚಾರಣೆ ಬಳಿಕ ಪವಿತ್ರಾ ಗೌಡ ಕೋರ್ಟ್ ಆವರಣದಲ್ಲೇ ನಿಂತಿದ್ದರು. ದರ್ಶನ್ ಹೋಗುವುದನ್ನು ನೋಡಿಕೊಂಡು ನಿಂತಿದ್ದರು. ಆದರೆ, ಪವಿತ್ರಾ ಗೌಡ ಕಡೆ ತಿರುಗಿ ನೋಡದೇ ದರ್ಶನ್ ತೆರಳಿದರು. ವಿಚಾರಣೆಗೆ ಹಾಜರಾಗಿದ್ದ ದರ್ಶನ್‌ಗೆ ನಟ ಧನ್ವೀರ್ ಸಾಥ್ ಕೊಟ್ಟಿದ್ದರು.

The post ರೇಣುಕಾಸ್ವಾಮಿ ಕೇಸ್; ಸೆ.9 ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್! appeared first on Good News 24x7.

]]>
ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಬೆನ್ನಿಗೆ ಗುಂಡು ಹಾರಿಸಿ ಕೊಂ*ದ ತಂದೆ! https://www.goodnews24x7.com/tennis-player-radhika-yadav-shot-dead-by-father/ Fri, 11 Jul 2025 10:35:09 +0000 https://www.goodnews24x7.com/?p=5031 ನವದೆಹಲಿ : ತನ್ನದೇ ಸ್ವಂತ ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3…

The post ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಬೆನ್ನಿಗೆ ಗುಂಡು ಹಾರಿಸಿ ಕೊಂ*ದ ತಂದೆ! appeared first on Good News 24x7.

]]>

ನವದೆಹಲಿ : ತನ್ನದೇ ಸ್ವಂತ ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3 ಬಾರಿ ಗುಂಡು ಹಾರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ಆಕೆಯ ಪ್ರಮುಖ ಅಂಗಗಳಿಗೆ ಗಾಯಗಳಾಗಿ ಅವರು ತಕ್ಷಣವೇ ಸಾವನ್ನಪ್ಪಿದ್ದಾರೆ.


ಕೊಲೆ ಆರೋಪಿ ಹಾಗೂ ಮೃತ ಯುವತಿಯ ತಂದೆ ದೀಪಕ್ ಯಾದವ್ ಅವರನ್ನು ಬಂಧಿಸಲಾಗಿದೆ. ಅವರ ಬಳಿಯಿದ್ದ ಲೈಸೆನ್ಸ್ ಪಡೆದ ರಿವಾಲ್ವರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆಯ ಪ್ರಾಥಮಿಕ ತನಿಖೆಯಲ್ಲಿ ರಾಧಿಕಾ ಯಾದವ್ ಅವರ 51 ವರ್ಷದ ತಂದೆ ತಮ್ಮ ಮಗಳು ಸ್ವಂತ ಟೆನಿಸ್ ಅಕಾಡೆಮಿ ನಡೆಸುತ್ತಿದ್ದುದಕ್ಕೆ ಅಸಮಾಧಾನಗೊಂಡಿದ್ದರು ಎಂದು ತಿಳಿದುಬಂದಿದೆ.


ಪೊಲೀಸರ ಪ್ರಕಾರ, ದೀಪಕ್ ಯಾದವ್ ಅವರ ಊರಾದ ವಜೀರಾಬಾದ್ನಲ್ಲಿ ಗ್ರಾಮಸ್ಥರು ಮತ್ತು ಗೆಳೆಯರಿಂದ ಬಂದ ನಿಂದನೆಗಳಿಂದ ಕೋಪಗೊಂಡಿದ್ದರು. ಅವರ ಗೆಳೆಯರು, ಸಂಬಂಧಿಕರು ದೀಪಕ್ ತಮ್ಮ ಮಗಳ ಟೆನಿಸ್ ಅಕಾಡೆಮಿಯಿಂದ ಪಡೆಯುವ ಆದಾಯದಿಂದ ಬದುಕುತ್ತಿದ್ದಕ್ಕಾಗಿ ಅಪಹಾಸ್ಯ ಮಾಡಿದ್ದರು. ಇದರಿಂದ ದೀಪಕ್ ಯಾದವ್ ಮಗಳ ಮೇಲೆ ಕೋಪಗೊಂಡಿದ್ದರು. ಮಗಳಿಗೆ ಟೆನಿಸ್ ಅಕಾಡೆಮಿ ಮುಚ್ಚುವಂತೆ ಅನೇಕ ಬಾರಿ ಹೇಳಿದ್ದರು. ಆದರೆ, ಆಕೆ ಒಪ್ಪಿರಲಿಲ್ಲ. ಇದೇ ವಿಷಯದ ಜಗಳದಿಂದ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸರ ಪ್ರಕಾರ, ತಂದೆ ತನ್ನ ಮಗಳ ವೃತ್ತಿಜೀವನ ಮತ್ತು ಗಳಿಕೆಯ ಬಗ್ಗೆ ಸಾಮಾಜಿಕ ಟೀಕೆಗಳಿಂದಾಗಿ ಕಳೆದ 15 ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ. ತಂದೆ ಮತ್ತು ಮಗಳ ನಡುವಿನ ಇತ್ತೀಚಿನ ವಾಗ್ವಾದವು ರಾಧಿಕಾ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊದಿಂದ ಹುಟ್ಟಿಕೊಂಡಿರಬಹುದು ಎಂದು ತನಿಖಾಧಿಕಾರಿಯೊಬ್ಬರು ಹೇಳಿದ್ದಾರೆ.

ರಾಧಿಕಾ ಯಾದವ್ ಯಾರು?


ರಾಧಿಕಾ ಒಬ್ಬ ಪ್ರತಿಭಾನ್ವಿತ ಮತ್ತು ಭರವಸೆಯ ಟೆನಿಸ್ ಕ್ರೀಡಾಪಟು. ಸ್ಕಾಟಿಷ್ ಹೈ ಇಂಟರ್ನ್ಯಾಷನಲ್ ಶಾಲೆಯ ಪದವೀಧರೆ. ಆಕೆ 2018ರಲ್ಲಿ ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಶಾಲೆಯಲ್ಲಿ ಓದುವಾಗಲೇ ಆಕೆ ಟೆನಿಸ್ಗೆ ಕಾಲಿಟ್ಟರು. ರಾಧಿಕಾ ಅಂತಾರಾಷ್ಟ್ರೀಯ ಟೆನಿಸ್ ಫೆಡರೇಶನ್ (ಐಟಿಎಫ್) ನಲ್ಲಿ ಡಬಲ್ಸ್ ಟೆನಿಸ್ ಆಟಗಾರ್ತಿಯಾಗಿ 113ನೇ ಸ್ಥಾನ ಪಡೆದಿದ್ದರು. ಐಟಿಎಫ್ ಡಬಲ್ಸ್ನಲ್ಲಿ ಅವರು ಅಗ್ರ 200ರೊಳಗೆ ಸ್ಥಾನ ಪಡೆದಿದ್ದರು. ಆಕೆ ಇತ್ತೀಚೆಗೆ ಭುಜದ ಗಾಯದಿಂದ ಬಳಲುತ್ತಿದ್ದರು ಮತ್ತು ಚಿಕಿತ್ಸೆಗೂ ಒಳಗಾಗಿದ್ದರು. ಆದರೂ ಅಕಾಡೆಮಿಯನ್ನು ನಡೆಸುವುದನ್ನು ನಿಲ್ಲಿಸಲಿಲ್ಲ.

The post ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಬೆನ್ನಿಗೆ ಗುಂಡು ಹಾರಿಸಿ ಕೊಂ*ದ ತಂದೆ! appeared first on Good News 24x7.

]]>
ರಾಮನಗರ ದಿವ್ಯಾಂಗ ಬಾಲಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! https://www.goodnews24x7.com/big-twist-in-ramanagara-divyang-girl-case/ Sun, 18 May 2025 07:21:47 +0000 https://www.goodnews24x7.com/?p=3947 ರಾಮನಗರ : ರಾಮನಗರದಲ್ಲಿ ನಡೆದಿದ್ದ ದಿವ್ಯಾಂಗ ಬಾಲಕಿಯ ಕೊ*ಲೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಮರ್ಡ*ರ್ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಆದರೆ ಇದೀಗ ಮರ್ಡ*ರ್ ಕೇಸ್ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇನೆಂದರೆ ಅತ್ಯಾ*ಚಾರ ನಡೆದಿಲ್ಲವೆಂಬುದು…

The post ರಾಮನಗರ ದಿವ್ಯಾಂಗ ಬಾಲಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! appeared first on Good News 24x7.

]]>

ರಾಮನಗರ : ರಾಮನಗರದಲ್ಲಿ ನಡೆದಿದ್ದ ದಿವ್ಯಾಂಗ ಬಾಲಕಿಯ ಕೊ*ಲೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಮರ್ಡ*ರ್ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಆದರೆ ಇದೀಗ ಮರ್ಡ*ರ್ ಕೇಸ್ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇನೆಂದರೆ ಅತ್ಯಾ*ಚಾರ ನಡೆದಿಲ್ಲವೆಂಬುದು ಎಫ್ಎಸ್ಎಲ್ ವರದಿಯಲ್ಲಿ ಧೃಡಪಟ್ಟಿದೆ. ಜೊತೆಗೆ ಪ್ರಕರಣದ ತನಿಖೆ ಬಗ್ಗೆ ಅಲೆಮಾರಿ ಹಕ್ಕಿಪಿಕ್ಕಿ ಬುಡುಕಟ್ಟು ಸಮುದಾಯದ ರಾಜ್ಯಾಧ್ಯಕ್ಷ ಜಗ್ಗು ಅನುಮಾನ ವ್ಯಕ್ತಪಡಿಸಿದ್ದಾರೆ.

ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದ್ದ 14 ವರ್ಷದ ದಿವ್ಯಾಂಗ ಬಾಲಕಿಯ ಕೊ*ಲೆ ಪ್ರಕರಣಕ್ಕೆ ಬಿಗ್ ಟಿಸ್ಟ್ ಸಿಕ್ಕಿದ್ದು, ಮೇಲ್ನೋಟಕ್ಕೆ ಬಾಲಕಿಯದ್ದು ಕೊ*ಲೆ ಅಲ್ಲ, ರೈಲು ಡಿಕ್ಕಿ ಹೊಡೆದು ಸಾ*ವನ್ನಪ್ಪಿದ್ದಾಳೆ. ಜೊತೆಗೆ ಬಾಲಕಿಯ ಮೇಲೆ ಯಾವುದೇ ಅತ್ಯಾ*ಚಾರ ನಡೆದಿಲ್ಲವೆಂಬುವುದು ಎಫ್ಎಸ್ಎಲ್ ವರದಿಯಲ್ಲಿ ಧೃಡವಾಗಿದೆ. ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯ 14 ವರ್ಷದ ದಿವ್ಯಾಂಗ ಬಾಲಕಿ ಮೇ 11 ರ ಸಂಜೆಯಿಂದ ಏಕಾಏಕಿ ನಾಪತ್ತೆಯಾಗಿದ್ದಳು. ಆನಂತರ ಮೇ 12 ರಂದು ಹಕ್ಕಿಪಿಕ್ಕಿ ಕಾಲೋನಿ ಬಳಿಯ ರೈಲ್ವೆ ಹಳಿ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಬಾಲಕಿಯ ಸಾ*ವು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಅತ್ಯಾ*ಚಾರ ಎಸಗಿ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದರು. ಈ ನಿಟ್ಟಿನಲ್ಲಿ ಬಿಡದಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.


ವಿಶೇಷ ತಂಡಗಳನ್ನ ರಚನೆ ಮಾಡಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದ ಬಿಡದಿ ಪೊಲೀಸರು, ಮರಣೋತ್ತರ ಪರೀಕ್ಷೆ ಜೊತೆಗೆ ಎಫ್ಎಸ್ಎಲ್ಗೂ ಕಳುಹಿಸಿದ್ದರು. ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಬಾಲಕಿಯ ಮೇಲೆ ಯಾವುದೇ ಅತ್ಯಾ*ಚಾರ ನಡೆದಿರುವುದು ಧೃಡವಾಗಿಲ್ಲ. ಜೊತೆ ಬಾಲಕಿಯ ಮೇಲೆ ಯಾವುದೇ ಸುಟ್ಟ ಗುರುತುಗಳು ಪತ್ತೆಯಾಗಿಲ್ಲ. ಅಲ್ಲದೆ ಸಿಸಿ ಟಿವಿ ಆಧಾರದ ಮೇಲೆ ಮೇಲ್ನೋಟಕ್ಕೆ ರೈಲು ಡಿಕ್ಕಿ ಹೊಡೆದು ಬಾಲಕಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಇನ್ನು ಪೊಲೀಸರ ಕೈ ಸೇರಿರುವ FSL ವರದಿಯಿಂದ ಬಾಲಕಿಯ ಮೇಲೆ ಅತ್ಯಾ*ಚಾರ ನಡೆದಿಲ್ಲದಿರುವುದು ಗೊತ್ತಾಗಿದೆ. ಆದರೆ ಮರಣೋತ್ತರ ಪರೀಕ್ಷೆ ವರದಿಯಿಂದ ಇದು ಆತ್ಮ*ಹತ್ಯೆಯಾ ಅಥವಾ ಕೊ*ಲೆಯಾ ಎಂಬುವುದು ತಿಳಿಯಲಿದೆ. ಮರಣೋತ್ತರ ವರದಿ ಸೋಮವಾರ ಪೊಲೀಸರ ಕೈ ಸೇರಲಿದೆ. ಆ ಬಳಿಕ ಸಾ*ವಿಗೆ ನಿಖರ ಕಾರಣ ತಿಳಿಯಲಿದೆ. ಇನ್ನು ಬಾಲಕಿಯ ಸಾ*ವಿನ ಸುದ್ದಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕೂಡ ಕ್ರಮ ತೆಗೆದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ.

The post ರಾಮನಗರ ದಿವ್ಯಾಂಗ ಬಾಲಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! appeared first on Good News 24x7.

]]>
ರೌಡಿ ಶೀಟರ್ ದೊರೆಸ್ವಾಮಿ ಹ* ಪ್ರಕರಣದಲ್ಲಿ ಎಂಟು ಮಂದಿ ಬಂಧನ; ಪ್ರೇಯಸಿ ಪೊಲೀಸ್ ವಶಕ್ಕೆ. https://www.goodnews24x7.com/%e0%b2%b0%e0%b3%8c%e0%b2%a1%e0%b2%bf-%e0%b2%b6%e0%b3%80%e0%b2%9f%e0%b2%b0%e0%b3%8d-%e0%b2%a6%e0%b3%8a%e0%b2%b0%e0%b3%86%e0%b2%b8%e0%b3%8d%e0%b2%b5%e0%b2%be%e0%b2%ae%e0%b2%bf-%e0%b2%b9-%e0%b2%aa/ Wed, 19 Mar 2025 09:09:09 +0000 https://www.goodnews24x7.com/?p=2823 ಮೈಸೂರು:- ರೌಡಿ ಶೀಟರ್ ದೊರೆಸ್ವಾಮಿ ಹತ್ಯೆ ಪ್ರಕರಣದಲ್ಲಿ ಈವರೆಗೆ 8 ಮಂದಿಯನ್ನು ಬಂಧಿಸಿರುವ ಪೊಲೀಸರು, ಘಟನೆ ವೇಳೆ ದೊರೆಸ್ವಾಮಿ ಜೊತೆಯಲ್ಲಿದ್ದ ಮಹಿಳೆಯ ವಿಚಾರಣೆ ನಡೆಸಿದ್ದಾರೆ. ದೊರೆಸ್ವಾಮಿ ಕೊಲೆಯಾದ ವೇಳೆ ಜೊತೆಯಲ್ಲಿದ್ದ ಬೆಂಗಳೂರು ಮೂಲದ ಶ್ವೇತಾಳನ್ನು ಮಂಗಳವಾರ ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗಿದೆ.…

The post ರೌಡಿ ಶೀಟರ್ ದೊರೆಸ್ವಾಮಿ ಹ* ಪ್ರಕರಣದಲ್ಲಿ ಎಂಟು ಮಂದಿ ಬಂಧನ; ಪ್ರೇಯಸಿ ಪೊಲೀಸ್ ವಶಕ್ಕೆ. appeared first on Good News 24x7.

]]>

ಮೈಸೂರು:- ರೌಡಿ ಶೀಟರ್ ದೊರೆಸ್ವಾಮಿ ಹತ್ಯೆ ಪ್ರಕರಣದಲ್ಲಿ ಈವರೆಗೆ 8 ಮಂದಿಯನ್ನು ಬಂಧಿಸಿರುವ ಪೊಲೀಸರು, ಘಟನೆ ವೇಳೆ ದೊರೆಸ್ವಾಮಿ ಜೊತೆಯಲ್ಲಿದ್ದ ಮಹಿಳೆಯ ವಿಚಾರಣೆ ನಡೆಸಿದ್ದಾರೆ.
ದೊರೆಸ್ವಾಮಿ ಕೊಲೆಯಾದ ವೇಳೆ ಜೊತೆಯಲ್ಲಿದ್ದ ಬೆಂಗಳೂರು ಮೂಲದ ಶ್ವೇತಾಳನ್ನು ಮಂಗಳವಾರ ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗಿದೆ. ಆಕೆಯ ಮೊಬೈಲ್ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯ ಲಾಗಿದ್ದು, ಬುಧವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಘಟನೆ ಸಂಬಂಧ ನಿನ್ನೆ ಮತ್ತು ಮೊನ್ನೆ ಒಟ್ಟು 8 ಜನ ಆರೋಪಿಗಳನ್ನು ಬಂಧಿಸಲಾಗಿದೆ.
ಮೈಸೂರು ತಾಲೂಕು, ಜಯಪುರ ಹೋಬಳಿ, ಅನಗನಹಳ್ಳಿ ಸಮೀಪದ ತೋಟದ ಮನೆಯಲ್ಲಿ ಕೆಲ ದಿನಗಳ ಹಿಂದೆ ದೊರೆಸ್ವಾಮಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಆ ರಾತ್ರಿ ಆತನ ಜೊತೆಯಲ್ಲಿದ್ದ ಪ್ರೇಯಸಿ ಬೆಂಗ ಳೂರು ಮೂಲದ ಶ್ವೇತಾ ನಾಪತ್ತೆಯಾಗಿ ದ್ದಳು. ಆದ್ದರಿಂದ ಶ್ವೇತಾ ಮೇಲೆ ಅನುಮಾನ ವ್ಯಕ್ತವಾಗಿತ್ತು. ಆಕೆಯೇ ಕೊಲೆ ಮಾಡಿ, ತಲೆಮರೆಸಿಕೊಂಡಿರುವುದಾಗಿ ದೊರೆಸ್ವಾಮಿ ಪತ್ನಿಯ ಆರೋಪಿಸಿದ್ದರು. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮೇಲಧಿಕಾರಿಗಳ ನಿರ್ದೇಶನದಂತೆ ವೃತ್ತ ನಿರೀಕ್ಷಕ ಶಿವನಂಜಶೆಟ್ಟಿ ನೇತೃತ್ವದಲ್ಲಿ ತನಿಖೆ ನಡೆಸಿದ ತಂಡ, ಹಳೇ ದ್ವೇಷಕ್ಕೆ ಹತ್ಯೆ ಮಾಡಲಾಗಿದೆ ಎಂಬುದನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿತ್ತು. ಇದೀಗ ಹತ್ಯೆ ನಡೆದ ವೇಳೆ ಜೊತೆಯಲ್ಲಿದ್ದರು ಎನ್ನಲಾದ ಶ್ವೇತಾಳ ವಿಚಾರಣೆ ನಡೆಸ ಲಾಗಿದ್ದು, ಈಕೆ ಭಾಗಿಯಾಗಿದ್ದಾಳೋ, ಇಲ್ಲವೋ ಎನ್ನುವುದು ಮುಂದಿನ ತನಿಖೆಯಲ್ಲಿ ತಿಳಿಯಲಿದೆ.

The post ರೌಡಿ ಶೀಟರ್ ದೊರೆಸ್ವಾಮಿ ಹ* ಪ್ರಕರಣದಲ್ಲಿ ಎಂಟು ಮಂದಿ ಬಂಧನ; ಪ್ರೇಯಸಿ ಪೊಲೀಸ್ ವಶಕ್ಕೆ. appeared first on Good News 24x7.

]]>
ಹಾಡುಹಗಲೇ ವೃದ್ದ ದಂಪತಿ ಭೀಕರ ಕೊ*, ಹುಣಸೂರು ತೋಟದ ಮನೆಯಲ್ಲಿ ಘಟನೆ. https://www.goodnews24x7.com/%e0%b2%b9%e0%b2%be%e0%b2%a1%e0%b3%81%e0%b2%b9%e0%b2%97%e0%b2%b2%e0%b3%87-%e0%b2%b5%e0%b3%83%e0%b2%a6%e0%b3%8d%e0%b2%a6-%e0%b2%a6%e0%b2%82%e0%b2%aa%e0%b2%a4%e0%b2%bf-%e0%b2%ad%e0%b3%80%e0%b2%95/ Wed, 05 Mar 2025 07:16:28 +0000 https://www.goodnews24x7.com/?p=2600 ಹುಣಸೂರು :- ಹಾಡುಹಗಲೇ ತೋಟದ ಮನೆಯಲ್ಲಿ ವೃದ್ದ ದಂಪತಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಾಡಪ್ಪನ ಹಳ್ಳಿಯಲ್ಲಿ ನಡೆದಿದೆ. ಖಾರ ಆಡಿಸುವ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65) ಇವರ ಪತ್ನಿ…

The post ಹಾಡುಹಗಲೇ ವೃದ್ದ ದಂಪತಿ ಭೀಕರ ಕೊ*, ಹುಣಸೂರು ತೋಟದ ಮನೆಯಲ್ಲಿ ಘಟನೆ. appeared first on Good News 24x7.

]]>

ಹುಣಸೂರು :- ಹಾಡುಹಗಲೇ ತೋಟದ ಮನೆಯಲ್ಲಿ ವೃದ್ದ ದಂಪತಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಾಡಪ್ಪನ ಹಳ್ಳಿಯಲ್ಲಿ ನಡೆದಿದೆ. ಖಾರ ಆಡಿಸುವ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65) ಇವರ ಪತ್ನಿ ಶಾಂತಮ್ಮ (52)ಮೃತಪಟ್ಟವರು.
ಇವರಿಗೆ ಗ್ರಾಮ‌ ಪಂಚಾಯ್ತಿ ಸದಸ್ಯ ದೇವರಾಜ್ ಸೇರಿದಂತೆ ಇಬ್ಬರು ಗಂಡು ಓರ್ವ ಮಗಳಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಇಂದು ಸಂಜೆ ಶುಂಠಿ ತುಂಬಿಕೊಳ್ಳಲು ಕುಕ್ಕೆ ತರಲು ಕಾರ್ಮಿಕ ಗಣೇಶ್ ತೋಟದ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.ರಕ್ತದ ಮಡುವಿನಲ್ಲಿ ಮೃತದೇಹಗಳನ್ನ ಕಂಡ ಗಣೇಶ್ ಕೂಡಲೇ ಪುತ್ರ ದೇವರಾಜ್ ಗೆ ತಿಳಿಸಿದ್ದಾರೆ.

ದೇವರಾಜ್ಮ ನೆಗೆ ಬಂದ ವೇಳೆಗೆ ಇಬ್ಬರೂ ಸಾವನ್ನಪ್ಪಿದ್ದರೆಂದು ಹೇಳಲಾಗಿದೆ. ಕೂಡಲೇ ಬಿಳಿಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ಡಾ.ಬೋರಲಿಂಗಯ್ಯ,ಎಸ್ಪಿ ವಿಷ್ಣುವರ್ಧನ್ ,ಡಿವೈಎಸ್ಪಿ ಗೋಪಾಲಕೃಷ್ಣ,ಸಬ್ ಇನ್ಸ್ಪೆಕ್ಟರ್ ಲೋಲಾಕ್ಷಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮೈಸೂರಿನಿಂದ ಶ್ವಾನದಳ. ಬೆರಳಚ್ಚು ತಜ್ಞರು ಭೇಟಿ ನೀಡಿದ್ದಾರೆ…

The post ಹಾಡುಹಗಲೇ ವೃದ್ದ ದಂಪತಿ ಭೀಕರ ಕೊ*, ಹುಣಸೂರು ತೋಟದ ಮನೆಯಲ್ಲಿ ಘಟನೆ. appeared first on Good News 24x7.

]]>
ವ್ಯಕ್ತಿಯನ್ನು ಹೊಡೆದು ಕೊಂ* ಗೆಳತಿಯ ಪ್ರಿಯಕರ: ತ್ರಿಕೋನ ಪ್ರೇಮದಲ್ಲಿ ಐವರ ಬಂಧನ.. https://www.goodnews24x7.com/%e0%b2%b5%e0%b3%8d%e0%b2%af%e0%b2%95%e0%b3%8d%e0%b2%a4%e0%b2%bf%e0%b2%af%e0%b2%a8%e0%b3%8d%e0%b2%a8%e0%b3%81-%e0%b2%b9%e0%b3%8a%e0%b2%a1%e0%b3%86%e0%b2%a6%e0%b3%81-%e0%b2%95%e0%b3%8a%e0%b2%82/ Tue, 31 Dec 2024 12:13:34 +0000 https://www.goodnews24x7.com/?p=1426 ಛತ್ತೀಸ್ಗಢ :- ವ್ಯಕ್ತಿಯೊಬ್ಬನನ್ನು ಗೆಳತಿಯ ಪ್ರಿಯಕರ ತನ್ನ ಸ್ನೇಹಿತರೊಟ್ಟಿಗೆ ಸೇರಿ ಕೊಲೆ ಮಾಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಯುವತಿಯ ಪ್ರಿಯಕರ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 9.30ರ ಸುಮಾರಿಗೆ ಕೆಲವರು ದೊಣ್ಣೆಗಳಿಂದ ಅಮಾನುಷವಾಗಿ ಥಳಿಸಿದ್ದರಿಂದ ಚೇತನ್ ಎಂಬ ವ್ಯಕ್ತಿಗೆ ತುಂಬಾ…

The post ವ್ಯಕ್ತಿಯನ್ನು ಹೊಡೆದು ಕೊಂ* ಗೆಳತಿಯ ಪ್ರಿಯಕರ: ತ್ರಿಕೋನ ಪ್ರೇಮದಲ್ಲಿ ಐವರ ಬಂಧನ.. appeared first on Good News 24x7.

]]>

ಛತ್ತೀಸ್ಗಢ :- ವ್ಯಕ್ತಿಯೊಬ್ಬನನ್ನು ಗೆಳತಿಯ ಪ್ರಿಯಕರ ತನ್ನ ಸ್ನೇಹಿತರೊಟ್ಟಿಗೆ ಸೇರಿ ಕೊಲೆ ಮಾಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಯುವತಿಯ ಪ್ರಿಯಕರ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 9.30ರ ಸುಮಾರಿಗೆ ಕೆಲವರು ದೊಣ್ಣೆಗಳಿಂದ ಅಮಾನುಷವಾಗಿ ಥಳಿಸಿದ್ದರಿಂದ ಚೇತನ್ ಎಂಬ ವ್ಯಕ್ತಿಗೆ ತುಂಬಾ ಗಾಯಗಳಾಗಿತ್ತು, ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ಕೊಲೆಯೇ ನಡೆದು ಹೋಗಿದೆ. ವ್ಯಕ್ತಿಯೊಬ್ಬನನ್ನು ಗೆಳತಿಯ ಪ್ರಿಯಕರ ತನ್ನ ಸ್ನೇಹಿತರೊಟ್ಟಿಗೆ ಸೇರಿ ಕೊಲೆ ಮಾಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಯುವತಿಯ ಪ್ರಿಯಕರ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 9.30ರ ಸುಮಾರಿಗೆ ಕೆಲವರು ದೊಣ್ಣೆಗಳಿಂದ ಅಮಾನುಷವಾಗಿ ಥಳಿಸಿದ್ದರಿಂದ ಚೇತನ್ ಎಂಬ ವ್ಯಕ್ತಿಗೆ ತುಂಬಾ ಗಾಯಗಳಾಗಿತ್ತು, ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ, ಅದರ ಪ್ರಕಾರ ಚೇತನ್ ಯುವತಿಯೊಂದಿಗೆ ಸಂಬಂಧ ಹೊಂದಿದ್ದ. ಇವರಿಬ್ಬರ ತಾಯಂದಿರು ಪೊಲೀಸ್ ಇಲಾಖೆಯಲ್ಲಿದ್ದಾರೆ. ಕೆಲವು ದಿನಗಳ ಹಿಂದೆ, ಹುಡುಗಿಯ ತಾಯಿಯನ್ನು ಸುರ್ಗುಜಾ ಜಿಲ್ಲೆಯ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು, ನಂತರ ಹುಡುಗಿಯೂ ಆ ಜಾಗ ಬಿಡಬೇಕಾಯಿತು.
ಬಳಿಕ ಆಕೆ ಸುರ್ಗುಜಾಗೆ ಹೋದಾಗ ಅಲ್ಲಿ ಲೋಕೇಶ್ ಸಾಹು ಎಂಬುವವನನ್ನು ಭೇಟಿಯಾದಳು, ಕ್ರಮೇಣ ಅದು ಪ್ರೀತಿಗೆ ತಿರುಗಿತ್ತು. ಇದೇ ವೇಳೆ ಚೇತನ್ ಆಕೆಯನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದ, ಆತನ ಕರೆಗೆ ಪ್ರತಿಕ್ರಿಯೆ ಕೂಡ ನೀಡುತ್ತಿರಲಿಲ್ಲ. ಡಿಸೆಂಬರ್ 24 ರಂದು ಯುವತಿ ತನ್ನ ತಾಯಿಯೊಂದಿಗೆ ದುರ್ಗಕ್ಕೆ ಬಂದಿದ್ದಳು, ಅದು ಚೇತನ್ಗೆ ತಿಳಿದಾಗ, ತನ್ನನ್ನು ಭೇಟಿಯಾಗುವಂತೆ ಕೇಳಿದ್ದ, ಆದರೆ ಆಕೆ ನಿರಾಕರಿಸಿದ್ದಳು.
ಯುವತಿ ಲೋಕೇಶ್ಗೆ ಚೇತನ್ ಬಗ್ಗೆ ತಿಳಿಸಿದ್ದಾಳೆ, ಬಳಿಕ ಆತನಿಗೆ ಕರೆ ಮಾಡಿ ಭೇಟಿಯಾಗುವಂತೆ ಕೇಳಿದ್ದಳು. ಆತ ಆಕೆಯನ್ನು ಭೇಟಿಯಾಗಲು ಬಂದಾಗ ಲೋಕೇಶ್ ತನ್ನ ಸ್ನೇಹಿತರೊಂದಿಗೆ ಅಲ್ಲಿಯೇ ಇದ್ದ. ಇದಾದ ಕೆಲವೇ ಹೊತ್ತಿನಲ್ಲಿ ಇಬ್ಬರ ನಡುವೆ ವಾಗ್ವಾದ ನಡೆಯಿತು.
ಲೋಕೇಶ್ ವ್ಯಕ್ತಿಯ ಮೇಲೆ ದೊಣ್ಣೆಯಿಂದ ಅಮಾನುಷವಾಗಿ ಥಳಿಸಿದ್ದಾನೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಯುವತಿಯನ್ನೂ ವಶಕ್ಕೆ ಪಡೆಯಲಾಗಿದೆ. ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

The post ವ್ಯಕ್ತಿಯನ್ನು ಹೊಡೆದು ಕೊಂ* ಗೆಳತಿಯ ಪ್ರಿಯಕರ: ತ್ರಿಕೋನ ಪ್ರೇಮದಲ್ಲಿ ಐವರ ಬಂಧನ.. appeared first on Good News 24x7.

]]>