murder Archives - Good News 24x7 https://www.goodnews24x7.com/tag/murder/ Kannada Mon, 29 Jun 2026 10:54:31 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg murder Archives - Good News 24x7 https://www.goodnews24x7.com/tag/murder/ 32 32 ಪತಿ ಕೊಂ*ದು ಕಥೆ ಕಟ್ಟಿದ್ದ ಪತ್ನಿ https://www.goodnews24x7.com/wife-who-fabricated-story-of-husbands-murder/ Mon, 29 Jun 2026 10:54:31 +0000 https://www.goodnews24x7.com/?p=9702 29 ಜೂನ್ 2026 , ಮೈಸೂರು: ಮೈಸೂರಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾ*ವಿನ ಪ್ರಕರಣ ಕೊ*ಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ ಅವರೇ ಗಂಡನನ್ನು ಹ*ತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.…

The post ಪತಿ ಕೊಂ*ದು ಕಥೆ ಕಟ್ಟಿದ್ದ ಪತ್ನಿ appeared first on Good News 24x7.

]]>

29 ಜೂನ್ 2026 , ಮೈಸೂರು: ಮೈಸೂರಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾ*ವಿನ ಪ್ರಕರಣ ಕೊ*ಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ ಅವರೇ ಗಂಡನನ್ನು ಹ*ತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದಂಪತಿಗೆ ಮಕ್ಕಳಿರಲಿಲ್ಲ ಸಾಂಸಾರಿಕ ಕಲಹ, ಹಣಕಾಸು ಮತ್ತು ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು 50 ವರ್ಷದ ನಿತ್ಯಾನಂದ ಅವರು ಖಾಸಗಿ ಮಹೀಂದ್ರಾ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿ ಸುಶೀಲ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದರು. ಎನ್ನಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ನಿತ್ಯಾನಂದ ಪ್ರತಿನಿತ್ಯ ಮದ್ಯಪಾನ ಮಾಡುತ್ತಿದ್ದರು. ಶನಿವಾರ ರಾತ್ರಿ ಕೂಡ ಸ್ನೇಹಿತರೊಂದಿಗೆ ಮದ್ಯಪಾನ ಮಾಡಿ ಮನೆಗೆ ತೆರಳಿದ್ದರು. ಬಳಿಕ ಮದ್ಯದ ಅಮಲಿನಲ್ಲಿ ಮಲಗಿದ್ದ ವೇಳೆ ಪತ್ನಿ ಸುಶೀಲ ಕುತ್ತಿಗೆಗೆ ಹಗ್ಗ ಬಿಗಿದು ಹ*ತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕೊ*ಲೆ ಬಳಿಕ ಘಟನೆಗೆ ಹೃದಯಾಘಾತದ ಬಣ್ಣ ನೀಡಲು ಸುಶೀಲ ಯತ್ನಿಸಿದ್ದಾಳೆ ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಬಹಳ ಹೊತ್ತಾದರೂ ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ನಿತ್ಯಾನಂದ ಅವರ ಸ್ನೇಹಿತ ದರ್ಶನ್ ಹಲವು ಬಾರಿ ಕರೆ ಮಾಡಿದ್ದರು. ಕರೆಗಳಿಗೆ ಸಮರ್ಪಕ ಉತ್ತರ ಸಿಗದ ಕಾರಣ ಅವರು ಮನೆ ಬಳಿ ಬಂದು ಬಾಗಿಲು ತಟ್ಟಿದರೂ ಸುಶೀಲ ಬಾಗಿಲು ತೆರೆಯಲಿಲ್ಲ ಎಂದು ತಿಳಿದುಬಂದಿದೆ.

ಬಳಿಕ ಸುಶೀಲ ಅವರು ನಿತ್ಯಾನಂದ ಅವರ ಅಣ್ಣನಿಗೆ ಕರೆ ಮಾಡಿ, “ನಿಮ್ಮ ತಮ್ಮನಿಗೆ ಹೃದಯಾಘಾತವಾಗಿದೆ” ಎಂದು ಮಾಹಿತಿ ನೀಡಿದ್ದಾರೆ. ತಕ್ಷಣ ಮನೆಗೆ ಆಗಮಿಸಿದ ನಿತ್ಯಾನಂದ ಅವರ ಅಣ್ಣ ಮೃ*ತದೇಹವನ್ನು ಪರಿಶೀಲಿಸಿದಾಗ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳು ಕಂಡುಬಂದಿವೆ.

ಇದರಿಂದ ಅನುಮಾನಗೊಂಡ ಅವರು ಕುವೆಂಪುನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಸುಶೀಲ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲೇ ಕೊ*ಲೆ ಮಾಡಿರುವ ವಿಚಾರವನ್ನು ಸುಶೀಲ ಒಪ್ಪಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಮ*ರಣೋತ್ತರ ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆಯ ಬಳಿಕ ಪ್ರಕರಣದ ಕುರಿತು ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

The post ಪತಿ ಕೊಂ*ದು ಕಥೆ ಕಟ್ಟಿದ್ದ ಪತ್ನಿ appeared first on Good News 24x7.

]]>
ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ​ ಬರ್ಬರ ಹ*! https://www.goodnews24x7.com/youth-congress-general-secretary-barbaric-murderyouth-congress-general-secretary-barbaric-murder/ Sat, 11 Apr 2026 04:54:22 +0000 https://www.goodnews24x7.com/?p=9179   ಧಾರವಾಡದ ಹಾಶ್ಮಿ ನಗರದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರವಾಗಿ ಹ*ತ್ಯೆಗೀಡಾಗಿದ್ದಾರೆ. ಆರು ಜನರ ತಂಡವೊಂದು ಈ ಕೃತ್ಯ ಎಸಗಿದ್ದು, ಕೊಲೆ ಸಂಚು ರೂಪಿಸಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮುಖ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ವೈಯಕ್ತಿಕ…

The post ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ​ ಬರ್ಬರ ಹ*! appeared first on Good News 24x7.

]]>

 

ಧಾರವಾಡದ ಹಾಶ್ಮಿ ನಗರದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರವಾಗಿ ಹ*ತ್ಯೆಗೀಡಾಗಿದ್ದಾರೆ. ಆರು ಜನರ ತಂಡವೊಂದು ಈ ಕೃತ್ಯ ಎಸಗಿದ್ದು, ಕೊಲೆ ಸಂಚು ರೂಪಿಸಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮುಖ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ.

ಅವಳಿ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದುದ್ದು, ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್​ನನ್ನು ಧಾರವಾಡ ನಗರದ ಹಾಶ್ಮಿ ನಗರದಲ್ಲಿರುವ ಅವರ ಮನೆಯಲ್ಲಿ ಬರ್ಬರವಾಗಿ ಹತ್ಯೆಗೈಯಲಾಗಿದೆ. ಶುಕ್ರವಾರ ರಾತ್ರಿ ಆತನ ಮನೆಗೆ ನುಗ್ಗಿದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರು ಮಂದಿ ಸೇರಿ ಈ ಕೃತ್ಯವನ್ನೆಸಗಿದ್ದಾರೆ ಎನ್ನಲಾಗಿದೆ.

ಮೊಹಮ್ಮದ್ ಶಾ ಸೇರಿದಂತೆ ಸದ್ದಾಂ, ಗೌಸ್, ಪರ್ವೇಜ್ ಹತ್ಯೆಗೈದ ಆರೋಪಿಗಳು ಎಂದು ತಿಳಿದುಬಂದಿದೆ. ಕೊಲೆ ಸಂಚು ರೂಪಿಸಿದ್ದ ಅರ್ಬಾಜ್ ಪಠಾಣ್ ಮತ್ತು ಗುಲಾಬ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹತ್ಯೆಗೈದ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದ್ದು, ಉಪನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

The post ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ​ ಬರ್ಬರ ಹ*! appeared first on Good News 24x7.

]]>
ರೇಣುಕಾ ಸ್ವಾಮಿ ಪ್ರಕರಣ: ಆರೋಪಿ ಪವನ್ ವಕೀಲರಿಗೆ ದಂಡ ! https://www.goodnews24x7.com/renuka-swamy-case-fine-for-accused-pawans-lawyerrenuka-swamy-case-fine-for-accused-pawans-lawyer/ Tue, 17 Mar 2026 12:59:51 +0000 https://www.goodnews24x7.com/?p=8933   ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. ಕಳೆದ ವಿಚಾರಣೆ ವೇಳೆ, ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಪವನ್ ಪರ ವಕೀಲರು, ಪ್ರಕರಣದ ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ್ದರು ಮಾತ್ರವಲ್ಲದೆ, ತನಿಖಾಧಿಕಾರಿಗಳಲ್ಲಿ ಒಬ್ಬರಾಗಿರುವ ಎಸಿಪಿ ಚಂದನ್ ಅವರನ್ನು ರೇಣುಕಾ ಸ್ವಾಮಿ ಕೊಲೆ…

The post ರೇಣುಕಾ ಸ್ವಾಮಿ ಪ್ರಕರಣ: ಆರೋಪಿ ಪವನ್ ವಕೀಲರಿಗೆ ದಂಡ ! appeared first on Good News 24x7.

]]>

 

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. ಕಳೆದ ವಿಚಾರಣೆ ವೇಳೆ, ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಪವನ್ ಪರ ವಕೀಲರು, ಪ್ರಕರಣದ ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ್ದರು ಮಾತ್ರವಲ್ಲದೆ, ತನಿಖಾಧಿಕಾರಿಗಳಲ್ಲಿ ಒಬ್ಬರಾಗಿರುವ ಎಸಿಪಿ ಚಂದನ್ ಅವರನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ಪರಿಗಣಿಸಬೇಕು ಎಂದು ವಾದಿಸಿದ್ದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ವಿಚಾರಣೆ ಚಾಲ್ತಿಯಲ್ಲಿದ್ದು, ಆರೋಪಿಗಳ ಪರ ವಕೀಲರು ವಾದ ಮಂಡನೆ ಮಾಡುತ್ತಿದ್ದಾರೆ. ಕಳೆದ ವಿಚಾರಣೆ ವೇಳೆ, ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಪವನ್ ಪರ ವಕೀಲರು, ಪ್ರಕರಣದ ತನಿಖಾಧಿಕಾರಿಗಳ ವಿರುದ್ಧವೇ ಆರೋಪ ಮಾಡಿದ್ದರು ಮಾತ್ರವಲ್ಲದೆ, ತನಿಖಾಧಿಕಾರಿಗಳಲ್ಲಿ ಒಬ್ಬರಾಗಿರುವ ಎಸಿಪಿ ಚಂದನ್ ಅವರನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ಪರಿಗಣಿಸಬೇಕು ಎಂದು ವಾದಿಸಿದ್ದರು.

ಬಳಿಕ ನ್ಯಾಯಾಲವು ವಿಚಾರಣೆ ಮುಂದೂಡಿತ್ತು. ಪವನ್ ಪರ ವಕೀಲರ ಅರ್ಜಿ ಕುರಿತು ಆದೇಶ ನೀಡಿರುವ ನ್ಯಾಯಾಲಯವು, ಪವನ್ ಪರ ವಕೀಲರಿಗೆ ದಂಡ ವಿಧಿಸಿದೆ. ಆರೋಪಿಗಳ ಮೊಬೈಲ್ ಗಳನ್ನು ವಶಕ್ಕೆ ಪಡೆಯುವಾಗ ಪೊಲೀಸರು ಫೋಟೋ ತೆಗೆದಿದ್ದರು. ಆ ಫೋಟೊನಲ್ಲಿರುವ ಟೈಲ್ಸ್​​ನ ಬಣ್ಣವನ್ನು ಉಲ್ಲೇಖಿಸಿ, ತನಿಖಾಧಿಕಾರಿಗಳ ವಿರುದ್ಧ ಸುಳ್ಳು ಸಾಕ್ಷ್ಯ ಸೃಷ್ಟಿ, ಸಾಕ್ಷ್ಯ ತಿದ್ದಿದ ಆರೋಪಗಳನ್ನು ಪವನ್ ಪರ ವಕೀಲರು ಮಾಡಿದ್ದರು. ಆದರೆ ನ್ಯಾಯಾಲವು ಅರ್ಜಿಯನ್ನು ತಿರಸ್ಕರಿಸಿದ್ದು ಮಾತ್ರವೇ ಅಲ್ಲದೆ, ನ್ಯಾಯಾಲಯದ ಸಮಯ ಹಾಳು ಮಾಡಿದ್ದಕ್ಕೆ ವಕೀಲರಿಗೆ ಐದು ಸಾವಿರ ರೂಪಾಯಿ ದಂಡ ಸಹ ಹೇರಿದೆ. ಈ ಹಣವನ್ನು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೀಡಲು ಸೂಚನೆ ನೀಡಿದೆ.

ಕುಟುಂಬ ಸದಸ್ಯರ ಭೇಟಿ ಮಾಡಲು ಕೋರಿ ಆರೋಪಿ ದರ್ಶನ್ ಅರ್ಜಿ ಸಲ್ಲಸಿದ್ದರು. ಈ ಅರ್ಜಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ. ಕುಟುಂಬ ಸದಸ್ಯರು, ಸ್ನೇಹಿತರ ಭೇಟಿಗೆ ಕೋರ್ಟ್ ಅನುಮತಿ ನೀಡಿದೆ. ಜೈಲು ಕೈಪಿಡಿಗನುಗುಣವಾಗಿ ಭೇಟಿಗೆ ಅವಕಾಶ ನೀಡಲು ನ್ಯಾಯಾಲಯವು ಆದೇಶ ನೀಡಿದೆ. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ನ್ಯಾಯಾಲಯವು ನಿರ್ದೇಶನವನ್ನು ನೀಡಿದೆ. ದರ್ಶನ್ ಸೆಲೆಬ್ರಿಟಿ ಎಂಬ ಕಾರಣಕ್ಕೆ ಆರೋಪಿಯ ಭೇಟಿಯ ಕುರಿತು ಕೆಲವು ನಿಯಮಗಳನ್ನು ಜೈಲು ಅಧಿಕಾರಿಗಳು ಹೇರಿದ್ದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣ ನಡೆದು ಎರಡು ವರ್ಷವಾಗುತ್ತಾ ಬಂದಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವು ಆರೋಪಿಗಳು ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ದರ್ಶನ್, ಜೈಲು ಸೇರಿ ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಆದರೆ ಸುಪ್ರೀಂಕೋರ್ಟ್ ಮತ್ತೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇದೀಗ ದರ್ಶನ್ ಸೇರಿದಂತೆ ಹಲವು ಆರೋಪಿಗಳು ಪರಪ್ಪನ ಅಗ್ರಹಾರ ಸೇರಿದಂತೆ ಇತರೆ ಕೆಲವು ಜೈಲುಗಳಲ್ಲಿ ಇದ್ದಾರೆ. ದರ್ಶನ್ ಪರ ವಕೀಲರು ಮತ್ತೆ ಜಾಮೀನಿಗೆ ಅರ್ಜಿ ಹಾಕಿಲ್ಲ ಆದರೆ ವಿಚಾರಣೆಯನ್ನು ಬೇಗನೆ ನಡೆಸುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿದ್ದಾರೆ. ಆದರೆ ಎಸ್​​ಪಿಪಿ ಅವರು ಸತತ ವಿಚಾರಣೆ ಅಥವಾ ತ್ವರಿತ ವಿಚಾರಣೆಗೆ ಒಪ್ಪಿಲ್ಲ.

The post ರೇಣುಕಾ ಸ್ವಾಮಿ ಪ್ರಕರಣ: ಆರೋಪಿ ಪವನ್ ವಕೀಲರಿಗೆ ದಂಡ ! appeared first on Good News 24x7.

]]>
15 ಲಕ್ಷಕ್ಕೆ ಸುಪಾರಿ ಕೊಟ್ಟು ಗರ್ಭಿಣಿ ಪತ್ನಿಯನ್ನೇ ಮುಗಿಸಿದ; ಸೀನಿಯರ್ ಮೇಲೆ ಮೋಹ.. ಪತ್ನಿಗೆ ಚಟ್ಟ! https://www.goodnews24x7.com/he-killed-his-pregnant-wife-by-giving-her-a-betel-nut-for-15-lakhs-infatuation-with-a-senior-wife-was-shocked/ Wed, 10 Sep 2025 06:31:10 +0000 https://www.goodnews24x7.com/?p=7449 ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆರು ತಿಂಗಳ ಗರ್ಭಿಣಿಯನ್ನಾಗಿ ಮಾಡಿ ಇದೀಗ ಇನ್ನೊಬ್ಬಳ ಮೇಲಿನ ವ್ಯಾಮೋಹಕ್ಕೆ ಬಿದ್ದು 15 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಹೆಂಡತಿಯನ್ನೇ ಮುಗಿಸಿದ ಘಟನೆ ಕಾಗವಾಡ ತಾಲೂಕಿನ ಬಿ.ಕೆ.ಉಗಾರದಲ್ಲಿ ನಡೆದಿದೆ. ಬೆಳಗಾವಿ: ಎರಡು ವರ್ಷಗಳ ಹಿಂದೆ…

The post 15 ಲಕ್ಷಕ್ಕೆ ಸುಪಾರಿ ಕೊಟ್ಟು ಗರ್ಭಿಣಿ ಪತ್ನಿಯನ್ನೇ ಮುಗಿಸಿದ; ಸೀನಿಯರ್ ಮೇಲೆ ಮೋಹ.. ಪತ್ನಿಗೆ ಚಟ್ಟ! appeared first on Good News 24x7.

]]>

ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆರು ತಿಂಗಳ ಗರ್ಭಿಣಿಯನ್ನಾಗಿ ಮಾಡಿ ಇದೀಗ ಇನ್ನೊಬ್ಬಳ ಮೇಲಿನ ವ್ಯಾಮೋಹಕ್ಕೆ ಬಿದ್ದು 15 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಹೆಂಡತಿಯನ್ನೇ ಮುಗಿಸಿದ ಘಟನೆ ಕಾಗವಾಡ ತಾಲೂಕಿನ ಬಿ.ಕೆ.ಉಗಾರದಲ್ಲಿ ನಡೆದಿದೆ.

ಬೆಳಗಾವಿ: ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆರು ತಿಂಗಳ ಗರ್ಭಿಣಿಯನ್ನಾಗಿ ಮಾಡಿ ಇದೀಗ ಇನ್ನೊಬ್ಬಳ ಮೇಲಿನ ವ್ಯಾಮೋಹಕ್ಕೆ ಬಿದ್ದು 15 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಹೆಂಡತಿಯನ್ನೇ ಮುಗಿಸಿದ ಘಟನೆ ಕಾಗವಾಡ ತಾಲೂಕಿನ ಬಿ.ಕೆ.ಉಗಾರದಲ್ಲಿ ನಡೆದಿದೆ. ಚೈತಾಲಿ ಗಂಡನ ಸುಪಾರಿಗೆ ಬಲಿಯಾದ ಮಹಿಳೆ. ಪ್ರದೀಪ್ ಪ್ರಮುಖ ಆರೋಪಿ. ಪ್ರಕರಣ ಸಂಬಂಧ ಪ್ರದೀಪ್ ಸೇರಿ, ಸಾಥ್ ನೀಡಿದ್ದ ಇನ್ನಿಬ್ಬರು ಆರೋಪಿಗಳನ್ನು ಕಾಗವಾಡ ಪೊಲೀಸರು ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ. ಪತಿ ಪ್ರದೀಪ್ ಹಾಗೂ ಮೃತ ಚೈತಾಲಿ ಉಗಾರ್ ಬಿ.ಕೆ.ಗ್ರಾಮದವರು. ಒಂದೇ ಗ್ರಾಮದವರಾದ ಇವರು ಪ್ರೀತಿಸಿ ಎರಡು ವರ್ಷಗಳ ಹಿಂದಷ್ಟೇ ಮದುವೆ ಆಗಿದ್ದರು. ಸಾಕ್ಷಿಯಾಗಿ ಆರು ತಿಂಗಳ ಗರ್ಭಿಣಿ ಕೂಡ ಆಗಿದ್ದಳು ಎಂದು ತಿಳಿದುಬಂದಿದೆ.

ಆಗಿದ್ದೇನು..? ಕಾನೂನು ಪದವಿ ಪಡೆದಿದ್ದ ಪ್ರದೀಪ್ ಕಿರಣಗಿ, ಕಾಗವಾಡ ಕೋರ್ಟ್‌ನಲ್ಲಿ ವಕೀಲ ವೃತ್ತಿಯಲ್ಲಿದ್ದ. ಪ್ರೇಮ-ವಿವಾಹದ ಬಳಿಕವೂ ಕಾಲೇಜಿನ ಸೀನಿಯರ್ ಜೊತೆಗೆ ಪ್ರದೀಪ್​​ಗೆ ಲವ್ ಶುರುವಾಗಿತ್ತಂತೆ. ಸೀನಿಯರ್ ಲೇಡಿಯನ್ನ ಬುಟ್ಟಿಗೆ ಹಾಕಿಕೊಳ್ಳಲು ತನಗೆ ಮದುವೆಯೇ ಆಗಿಲ್ಲ ಎಂದು ನಾಟಕವಾಡಿದ್ದಾನೆ ಎನ್ನಲಾಗಿದೆ. ಜೂನಿಯರ್ ಪ್ರದೀಪ್ ಮಾತು ನಂಬಿದ್ದ ಸೀನಿಯರ್​, ಪ್ರೀತಿಯ ಬಲೆಗೆ ಬಿದ್ದಿದ್ದಳು. ಯಾವಾಗ ಸೀನಿಯರ್ ಮೇಲೆ ಮೋಹ ಹೆಚ್ಚಾಯಿತೋ ಆಗಲೇ ಪತ್ನಿಯನ್ನು ಮುಗಿಸಲು ಪ್ಲಾನ್ ಮಾಡಿದ್ದಾನೆ ಅನ್ನೋದು ತನಿಖೆಯಿಂದ ತಿಳಿದುಬಂದಿದೆ.

ಮಾಡಿದ್ದೇನು..? ಪ್ರದೀಪ್ ತನ್ನ ಹೆಂಡತಿಯನ್ನ ಮುಗಿಸಲು ಸ್ನೇಹಿತನ ಸಹಾಯ ಪಡೆದಿದ್ದಾನೆ. ಸ್ನೇಹಿತ ರಾಜೇಂದ್ರ ಜೊತೆ ಮಾತುಕತೆ ನಡೆಸಿ 15 ಲಕ್ಷ ರೂಪಾಯಿಗೆ ಸೂಪಾರಿ ಕೊಟ್ಟಿದ್ದ ಎನ್ನಲಾಗಿದೆ. ಅಂತೆಯೇ ಚೈತಾಲಿಯನ್ನ ಮುಗಿಸಲು ಎರಡು ಬಾರಿ ಪ್ರಯತ್ನಿಸಿದ್ದಾರೆ. ಆದರೆ ಅದು ಫೇಲ್ ಆಗಿತ್ತು. ಮೂರನೇ ಬಾರಿಗೆ ಯಶಸ್ವಿಯಾಗಿದ್ದಾರೆ. ಭಾರವಾದ ವಸ್ತುವಿನಿಂದ ತಲೆಗೆ ಹೊಡೆದು ಆರು ತಿಂಗಳ ಗರ್ಭಿಣಿಯ ಜೀವ ತೆಗೆದಿದ್ದರು.

ಮುಂದೆ ಏನಾಯ್ತು..? ಆರೋಪಿಗಳಿಬ್ಬರು ಹಾಗೂ ಪ್ರದೀಪ್ ಸೇರಿ ಪ್ಲಾನ್ ಮಾಡಿದ್ದಾರೆ. ಪ್ಲಾನ್ ಪ್ರಕಾರವೇ ಆಕೆಯನ್ನು ಮುಗಿಸಿ, ಮೃತದೇಹವನ್ನು ಕೆಲ ಹೊತ್ತು ರಸ್ತೆಗೆ ತಂದು ಕಾಲ ಕಳೆದಿದ್ದಾರೆ. ಅದಾದ ನಂತರ ಆರೋಪಿ ಪ್ರದೀಪ್ ಪೊಲೀಸರಿಗೆ ಖುದ್ದು ಕರೆ ಮಾಡಿದ್ದಾನೆ. ಸೆಪ್ಟೆಂಬರ್ 7 ರಂದು ರಾತ್ರಿ 9.30ಕ್ಕೆ ಕರೆ ಮಾಡಿದ ಆತ, ಸರ್​ ರಸ್ತೆಯಲ್ಲಿ ಹೋಗುವಾಗ ಅಪಘಾತ ಆಗಿದೆ. ನನ್ನದೇ ಕಾರಿನಲ್ಲಿ ಹೋಗುವಾಗ ಅಪಘಾತ ಆಗಿದೆ. ಹೆಂಡತಿಗೆ ಗಂಭೀರ ಪೆಟ್ಟು ಬಿದ್ದಿದೆ. ನನಗೂ ಗಾಯವಾಗಿದೆ. ಪತ್ನಿ ಚೈತಾಲಿಯನ್ನು ಕಾಗವಾಡ ತಾಲೂಕು ಆಸ್ಪತ್ರೆಗೆ ದಾಖಲಿಸುತ್ತಿರೋದಾಗಿ ಹೇಳಿದ್ದಾನೆ. ವಿಷಯ ತಿಳಿದ ಪೊಲೀಸರು ತಕ್ಷಣವೇ ಕಾಗವಾಡ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಸಿಕ್ಕಿಬಿದ್ದಿದ್ದು ಹೇಗೆ..? ಪೊಲೀಸರು ಆಸ್ಪತ್ರೆಗೆ ಹೋದಾಗ ಚೈತ್ರಾಲಿ ಅನ್ನೋರು ಯಾರೂ ಇರಲಿಲ್ಲ. ಕೂಡಲೇ ಪೊಲೀಸರು ಪ್ರದೀಪ್​ಗೆ ಕರೆ ಮಾಡಿದ್ದಾರೆ. ಆಗ ಕಾಗವಾಡ ಬದಲು ಮಹಾರಾಷ್ಟ್ರದ ಮೀರಜ್‌‌ ಆಸ್ಪತ್ರೆಗೆ ಚೈತ್ರಾಣಿ ‌ಕರೆತಂದಿರುವುದಾಗಿ ಪೊಲೀಸರಿಗೆ ಪ್ರದೀಪ್ ಮಾಹಿತಿ ನೀಡಿದ್ದಾನೆ. ತಕ್ಷಣವೇ ‌ಪ್ರದೀಪ್ ನಿವಾಸಕ್ಕೆ ಕಾಗವಾಡ ಪೊಲೀಸರು ಭೇಟಿ ನೀಡಿದ್ದಾರೆ. ಆಗ ಪ್ರದೀಪ್ ನಿವಾಸದ ಎದುರು ಕಾರು ನಿಂತಿತ್ತು. ಇದರಿಂದ ಪ್ರದೀಪ್ ನಡೆ ಮೇಲೆ ಪೊಲೀಸರಿಗೆ ಅನುಮಾನ ಬಂದಿದೆ. ಇದರ ನಡುವೆ ಪ್ರದೀಪ್ ಮೀರಜ್ ಪೊಲೀಸರನ್ನ ಭೇಟಿಯಾಗಿ, ಪತ್ನಿ ಅಪಘಾತದಿಂದ ಮೃತರಾಗಿದ್ದು ದೂರು ದಾಖಲಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾನೆ. ಆಗ ಮೀರಜ್ ಪೊಲೀಸರು ‌ಕಾಗವಾಡ ಠಾಣೆಯ ‌ಪೊಲೀಸರನ್ನ ಸಂಪರ್ಕಿಸುತ್ತಾರೆ. ಆಗ ನಾವು ಮೀರಜ್‌ಗೆ ಬರ್ತಿದ್ದೇವೆ, ಯಾವುದೇ ‌ದೂರು ದಾಖಲಿಸಿಕೊಳ್ಳದಂತೆ ಮನವಿ ಮಾಡುತ್ತಾರೆ.

ಮೀರಜ್‌ಗೆ ಬರುತ್ತಿದ್ದಂತೆಯೇ ಪೊಲೀಸರು ಪ್ರದೀಪ್​ನ ವಿಚಾರಣೆಗೆ ಒಳಪಡಿಸುತ್ತಾರೆ. ಆಗ ಪ್ರದೀಪ್​​ಗೆ ಅಪಘಾತದಿಂದ ಯಾವುದೇ ಗಾಯ ಆಗದಿರೋದು ಗೊತ್ತಾಗಿದೆ. ಚೈತಾಲಿ ‌ಮೃತದೇಹ ನೋಡಿದ ಪೊಲೀಸರು ಇದು ಅಪಘಾತವಲ್ಲ, ಕೊ*ಲೆ ಎಂಬುದನ್ನ ಮೇಲ್ನೋಟಕ್ಕೆ ಪತ್ತೆಹಚ್ಚಿಕೊಳ್ತಾರೆ. ತಕ್ಷಣವೇ ಪ್ರದೀಪ್​ನನ್ನ ‌ತೀವ್ರ ವಿಚಾರಣೆ ಮಾಡಿದಾಗ ಕೊ*ಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಮಾತ್ರವಲ್ಲ, ಸ್ಥಳ ಮಹಜರು ವೇಳೆ ಪ್ರಕರಣಕ್ಕೆ ಸಾಥ್ ನೀಡಿದವರ ಹೆಸರನ್ನೂ ಹೇಳಿದ್ದಾನೆ. ಪ್ರಕರಣದಲ್ಲಿ ಐವರು ಆರೋಪಿಗಳು ಬಾಗಿಯಾಗಿರುವ ಶಂಕೆಯಿದ್ದ, ಮೂವರ ಬಂಧನವಾಗಿದೆ. ಮತ್ತಿಬ್ಬರ ಬಂಧನಕ್ಕೆ ಬಲೆ ಬೀಸಿದ್ದಾರೆ.

The post 15 ಲಕ್ಷಕ್ಕೆ ಸುಪಾರಿ ಕೊಟ್ಟು ಗರ್ಭಿಣಿ ಪತ್ನಿಯನ್ನೇ ಮುಗಿಸಿದ; ಸೀನಿಯರ್ ಮೇಲೆ ಮೋಹ.. ಪತ್ನಿಗೆ ಚಟ್ಟ! appeared first on Good News 24x7.

]]>
ಗರ್ಭಿಣಿಯಾದ ಪ್ರೇಯಸಿ, ಮದುವೆ ವಿಚಾರಕ್ಕೆ ತನ್ನ ಪ್ರಿಯಕರನಿಂದಲೇ ಕೊಲೆ https://www.goodnews24x7.com/pregnant-lover-murdered-by-her-lover-over-marriage-issue/ Wed, 20 Aug 2025 11:09:46 +0000 https://www.goodnews24x7.com/?p=6407 ಆರೋಪಿ ಚೇತನ್ ಬಂಧಿಸಿದಾಗ, ಆತನಿಗೆ ಕ್ಯಾನ್ಸರ್ ಇರೋದು ಬೆಳಕಿಗೆ ಕೋಟೆ ನಾಡು ಚಿತ್ರದುರ್ಗದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರನ್ನು ಕೊಲೆಗೈದು ಸುಟ್ಟು ಹಾಕಲಾಗಿದೆ. ನಿನ್ನೆ ಸಂಜೆ ವಿದ್ಯಾರ್ಥಿನಿಯ ಶವ ನಗರದ ಹೊರವಲಯದಲ್ಲಿ ಪತ್ತೆಯಾಗಿತ್ತು. ಪ್ರಾರಂಭದಲ್ಲಿ ಶವದ ಗುರುತು ಕೂಡ ಪತ್ತೆಯಾಗಿರಲಿಲ್ಲ. ಬಳಿಕ ಕೊಲೆಯಾದ ವಿದ್ಯಾರ್ಥಿನಿಯನ್ನು…

The post ಗರ್ಭಿಣಿಯಾದ ಪ್ರೇಯಸಿ, ಮದುವೆ ವಿಚಾರಕ್ಕೆ ತನ್ನ ಪ್ರಿಯಕರನಿಂದಲೇ ಕೊಲೆ appeared first on Good News 24x7.

]]>

ಆರೋಪಿ ಚೇತನ್ ಬಂಧಿಸಿದಾಗ, ಆತನಿಗೆ ಕ್ಯಾನ್ಸರ್ ಇರೋದು ಬೆಳಕಿಗೆ
ಕೋಟೆ ನಾಡು ಚಿತ್ರದುರ್ಗದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರನ್ನು ಕೊಲೆಗೈದು ಸುಟ್ಟು ಹಾಕಲಾಗಿದೆ. ನಿನ್ನೆ ಸಂಜೆ ವಿದ್ಯಾರ್ಥಿನಿಯ ಶವ ನಗರದ ಹೊರವಲಯದಲ್ಲಿ ಪತ್ತೆಯಾಗಿತ್ತು. ಪ್ರಾರಂಭದಲ್ಲಿ ಶವದ ಗುರುತು ಕೂಡ ಪತ್ತೆಯಾಗಿರಲಿಲ್ಲ. ಬಳಿಕ ಕೊಲೆಯಾದ ವಿದ್ಯಾರ್ಥಿನಿಯನ್ನು ವರ್ಷಿತಾ ಎಂದು ಗುರುತಿಸಲಾಗಿದೆ. ಈ ವರ್ಷಿತಾ ಚಿತ್ರದುರ್ಗ ನಗರದಲ್ಲಿ ದ್ವಿತೀಯ ಬಿಎ ಓದುತ್ತಿದ್ದಳು. ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ವಾಸ ಇದ್ದಳು. ನಿನ್ನೆ ಸಂಜೆ ಹಾಸ್ಟೆಲ್ ವಾರ್ಡನ್​ಗೆ ರಜೆ ಚೀಟಿ ಕೊಟ್ಟು ಊರಿಗೆ ಹೋಗುತ್ತೇನೆಂದು ಹೇಳಿ ಹೊರಟಿದ್ದಳು. ಆದರೇ, ವರ್ಷಿತಾ ತನ್ನ ಊರಿಗೆ ಹೋಗಿಲ್ಲ. ರಾತ್ರಿ 11ರ ವೇಳೆಗೆ ವರ್ಷಿತಾ ಕೊಲೆಯಾಗಿರುವ ವಿಷಯ ಹಾಸ್ಟೆಲ್ ವಾರ್ಡನ್​​​ಗೆ ಗೊತ್ತಾಗಿದೆ.

 

ಪ್ರೀತಿ ವಿಚಾರಕ್ಕೆ ವರ್ಷಿತಾ- ಚೇತನ್ ನಡುವೆ ಗಲಾಟೆ ನಡೆದಿದೆ. ಗಲಾಟೆಯ ವೇಳೆ ಚೇತನ್, ವರ್ಷಿತಾಗೆ ಹೊಡೆದು ಕೊಂದಿದ್ದಾನೆ, ಬಳಿಕ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ್ದಾನೆ. ಚಿತ್ರದುರ್ಗದ ಸಿಪಿಐ ಮುದ್ದುರಾಜ್, ಡಿವೈಎಸ್ಪಿ ದಿನಕರ್ ನೇತೃತ್ವದಲ್ಲಿ ತನಿಖೆಯನ್ನು ನಡೆಸಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.

ಯುವತಿಯನ್ನು ಗರ್ಭಿಣಿಯಾಗಿಸಿ ಮದುವೆ ಆಗಲು ನಿರಾಕರಣೆ

ಚಿತ್ರದುರ್ಗ ವಿದ್ಯಾರ್ಥಿನಿ ಕೊಲೆ ಕೇಸ್​ಗೆ ಸ್ಟಫೋಕ ತಿರುವು ಸಿಕ್ಕಿದೆ. ಪೊಲೀಸರ ಮುಂದೆ ಕೊಲೆ ರಹಸ್ಯ ಆರೋಪಿ ಚೇತನ್ ಬಾಯ್ಬಿಟ್ಟಿದ್ದಾನೆ. ಯುವತಿಯನ್ನ ಗರ್ಭಿಣಿ ಮಾಡಿ ಮೋಸ ಮಾಡಲು ಆರೋಪಿ ಮುಂದಾಗಿದ್ದ. ನಿನ್ನಿಂದ ಗರ್ಭಿಣಿ ಆಗಿದ್ದೇನೆ, ಈಗ ಮದುವೆ ಆಗು ಎಂದು ಯುವತಿ ಪಟ್ಟು ಹಿಡಿದಿದ್ದಳು. ಮದುವೆ ಆಗಲು ಆರೋಪಿ ನಿರಾಕರಿಸಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ನಿನಗೆ ಬೇರೋಬ್ಬನ ಜೊತೆ ಸಂಬಂಧ ಇದೆ ಎಂದು ಆರೋಪಿ ಚೇತನ್, ಹಲ್ಲೆ ಮಾಡಿ, ಕೊಲೆಗೈದಿದ್ದಾನೆ. ಬಳಿಕ ಪೆಟ್ರೋಲ್ ಹಾಕಿ ಶವವನ್ನು ಸುಟ್ಟಿದ್ದಾನೆ.

ಚೇತನ್ ಬಂಧನದ ಬಳಿಕ ಆರೋಪಿಗೆ ಕ್ಯಾನ್ಸರ್ ರೋಗ ಇರೋದು ಬೆಳಕಿಗೆ ಬಂದಿದೆ. ಇದೇ ಪ್ರಕರಣದಲ್ಲಿ ಒಂದೇ ಸಿಮ್ ಕಾರ್ಡ್​​ಗೆ 16 ಮೊಬೈಲ್ ಬಳಕೆ ಮಾಡಿ ಯುವತಿ ವರ್ಷಿತಾ ಮಾತನಾಡಿರುವುದು ಬೆಳಕಿಗೆ ಬಂದಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಕೊಲೆ, ಸಾಕ್ಷ್ಯ ನಾಶ ಕೇಸ್ ದಾಖಲಾಗಿದೆ.

ಚಿತ್ರದುರ್ಗ ನಗರದ ಅಂಬೇಡ್ಕರ್ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಗೃಹ ಸಚಿವ ಡಾ.ಜಿ ಪರಮೇಶ್ವರ ಫೋಟೋ ಹಿಡಿದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಸ್ಪತ್ರೆಯ ಮುಂಭಾಗ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕೊಲೆಯಾದ ಯುವತಿ ಕುಟುಂಬಸ್ಥರ ಮಧ್ಯೆ ವಾಗ್ವಾದ ನಡೆದಿದೆ.

ಹೋರಾಟಕ್ಕೆ ದಲಿತಪರ ಸಂಘಟನೆಗಳು ಸೇರಿ ಹಲವು ಸಂಘಟನೆಗಳು ಸಾಥ್ ಕೊಟ್ಟಿವೆ. ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪೊಲೀಸರ ಹರಸಾಹಸ ಪಟ್ಟರು. ಅವಳು ನನ್ನ ತಂಗಿ ಇದ್ದಂತೆ, ಆರೋಪಿನ ಕೂಡಲೇ ಬಂಧನ ಮಾಡ್ತೀವಿ ಎಂದು ಯುವತಿಯ ಕುಟುಂಬಸ್ಥರಿಗೆ DYSP ದಿನಕರ್ ಭರವಸೆ ನೀಡಿದ್ದರು.

The post ಗರ್ಭಿಣಿಯಾದ ಪ್ರೇಯಸಿ, ಮದುವೆ ವಿಚಾರಕ್ಕೆ ತನ್ನ ಪ್ರಿಯಕರನಿಂದಲೇ ಕೊಲೆ appeared first on Good News 24x7.

]]>
ದರ್ಶನ್ ಬಂಧನದ ಬಳಿಕ ವಿಜಯಲಕ್ಷ್ಮೀ ಭಾವುಕ ಪೋಸ್ಟ್ .. https://www.goodnews24x7.com/vijayalakshmis-emotional-post-after-darshans-arrest/ Sat, 16 Aug 2025 09:30:14 +0000 https://www.goodnews24x7.com/?p=6216 ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರನ್ನು ಮತ್ತೆ ಬಂಧಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿ, ವಿಜಯಲಕ್ಷ್ಮೀ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಒಡೆದ ಹೃದಯದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದ್ದು, ದರ್ಶನ್ ಅವರ ಬಂಧನದಿಂದಾಗಿ ಅವರು ಎಷ್ಟು ದುಃಖಿತರಾಗಿದ್ದಾರೆ…

The post ದರ್ಶನ್ ಬಂಧನದ ಬಳಿಕ ವಿಜಯಲಕ್ಷ್ಮೀ ಭಾವುಕ ಪೋಸ್ಟ್ .. appeared first on Good News 24x7.

]]>

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರನ್ನು ಮತ್ತೆ ಬಂಧಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿ, ವಿಜಯಲಕ್ಷ್ಮೀ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಒಡೆದ ಹೃದಯದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದ್ದು, ದರ್ಶನ್ ಅವರ ಬಂಧನದಿಂದಾಗಿ ಅವರು ಎಷ್ಟು ದುಃಖಿತರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ.

ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿದ್ದಾರೆ. ಇಷ್ಟು ದಿನ ಜಾಮೀನು ಪಡೆದು ಹೊರಗೆ ಇದ್ದ ಅವರು ಮತ್ತೆ ಜೈಲು ಸೇರಿದ್ದಾರೆ. ಇದರ ಬೆನ್ನಲ್ಲೇ ವಿಜಯಲಕ್ಷ್ಮೀ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಮನಸ್ಸು ಒಡೆದಿದೆ ಎಂದು ಹೇಳಿಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ವೈರಲ್ ಆಗುತ್ತಿದೆ.

ನಟ ದರ್ಶನ್ ಮೊದಲ ಬಾರಿ ಬಂಧನದ ಬಳಿಕವೂ ಸೈಲೆಂಟ್ ಆಗಿಯೇ ಇದ್ದರು ವಿಜಯಲಕ್ಷ್ಮೀ. ಆ ಬಳಿಕ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿ ಅಭಿಮಾನಿಗಳಿಗೆ ಧೈರ್ಯ ತುಂಬಿದರು. ದರ್ಶನ್ ಜಾಮೀನು ಪಡೆದು ಬಿಡುಗಡೆ ಆದ ಬಳಿಕ ಅವರಷ್ಟು ಖುಷಿಪಟ್ಟವರು ಮತ್ತೊಬ್ಬರು ಇರಲಿಲ್ಲ. ದರ್ಶನ್ ಈಗ ಮತ್ತೆ ಅರೆಸ್ಟ್ ಆಗಿರೋದು ಅವರಿಗೆ ಬೇಸರ ಮೂಡಿಸಿದೆ.

ದರ್ಶನ್ ಅವರು ಕೊನೆಯದಾಗಿ ಬಂಧನಕ್ಕೆ ಒಳಗಾಗಿದ್ದು ವಿಜಯಲಕ್ಷ್ಮೀ ಅವರ ನಿವಾಸದಿಂದಲೇ. ಅವರನ್ನು ಅಲ್ಲಿಂದಲೇ ಅರೆಸ್ಟ್ ಮಾಡಲಾಗಿತ್ತು. ಆ ಬಳಿಕ ವಿಜಯಲಕ್ಷ್ಮೀ ಅವರು ಸೈಲೆಂಟ್ ಆಗಿದ್ದರು. ಈಗ ಸೋಶಿಯಲ್ ಮೀಡಿಯಾದಲ್ಲಿ ಅವರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ದರ್ಶನ್ ಬ್ಯಾಕ್ ಪೋಸ್​ನ ಫೋಟೋ ಹಾಕಿದ್ದಾರೆ. ದರ್ಶನ್ ಸರಳಿನ ಹಿಂದೆ ನಿಂತು ಏನನ್ನೋ ನೋಡುತ್ತಿದ್ದಾರೆ. ಈ ಪೋಸ್ಟ್​ಗೆ ಅವರು ಒಡೆದ ಹೃದಯದ ಎಮೋಜಿ ಹಾಕಿದ್ದಾರೆ. ಎಲ್ಲವನ್ನೂ ಅವರು ಸೂಕ್ಷ್ಮವಾಗಿ ಹೇಳಿದ್ದಾರೆ.

ದರ್ಶನ್ ಅವರ ಬಂಧನ ಈ ಬಾರಿ ಮತ್ತಷ್ಟು ಗಂಭೀರ ಸ್ವರೂಪ ಪಡೆದಿದೆ. ಕಳೆದ ಬಾರಿ ಬಂಧನ ಆದಾಗ ಅವರಿಗೆ ಕೆಳ ಹಂತದಲ್ಲಿ ಅಲ್ಲದೆ ಇದ್ದರೂ ಮೇಲಿನ ಕೋರ್ಟ್​ನಲ್ಲಿ ಜಾಮೀನು ಸಿಗಬಹುದು ಎಂಬ ನಂಬಿಕೆ ಇತ್ತು. ಆದರೆ, ಈ ಬಾರಿ ಸಾಕಷ್ಟು ಚಾಲೆಂಜ್​ಗಳು ಇವೆ. ದರ್ಶನ್ ಜಾಮೀನು ರದ್ದಾಗಿರುವುದು ಸುಪ್ರೀಂಕೋರ್ಟ್​ನಿಂದ. ಉಚ್ಚ ನ್ಯಾಯಲಯ ಜಾಮೀನು ರದ್ದು ಮಾಡಿರುವುದರಿಂದ ಕೆಳ ಹಂತದ ಕೋರ್ಟ್​ನಲ್ಲೂ ಬೇಲ್ ಸಿಗೋದು ಅನುಮಾನವಾಗಿದೆ.

The post ದರ್ಶನ್ ಬಂಧನದ ಬಳಿಕ ವಿಜಯಲಕ್ಷ್ಮೀ ಭಾವುಕ ಪೋಸ್ಟ್ .. appeared first on Good News 24x7.

]]>
ರೇಣುಕಾಸ್ವಾಮಿ ಕೇಸ್; ಸೆ.9 ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್! https://www.goodnews24x7.com/renukaswamy-case-court-adjourns-hearing-to-september-9/ Tue, 12 Aug 2025 07:50:52 +0000 https://www.goodnews24x7.com/?p=5909 ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರಾ ಗೌಡ ಸೇರಿದಂತೆ ಉಳಿದ ಆರೋಪಿಗಳು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾದರು. ಸಿಸಿಹೆಚ್ 63ರ ನ್ಯಾಯಾಧೀಶರ ಮುಂದೆ ಆರೋಪಿಗಳು ಹಾಜರಾದರು. ಚಾರ್ಜ್ ಫ್ರೇಮ್‌ಗೆ ನ್ಯಾಯಾಧೀಶರು ಸಮಯ ನಿಗದಿಪಡಿಸಿದರು. ಪ್ರಕರಣದ ವಿಚಾರಣೆಯನ್ನು…

The post ರೇಣುಕಾಸ್ವಾಮಿ ಕೇಸ್; ಸೆ.9 ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್! appeared first on Good News 24x7.

]]>

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರಾ ಗೌಡ ಸೇರಿದಂತೆ ಉಳಿದ ಆರೋಪಿಗಳು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾದರು.

ಸಿಸಿಹೆಚ್ 63ರ ನ್ಯಾಯಾಧೀಶರ ಮುಂದೆ ಆರೋಪಿಗಳು ಹಾಜರಾದರು. ಚಾರ್ಜ್ ಫ್ರೇಮ್‌ಗೆ ನ್ಯಾಯಾಧೀಶರು ಸಮಯ ನಿಗದಿಪಡಿಸಿದರು. ಪ್ರಕರಣದ ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.

ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್, ಪುಟ್ಟಸ್ವಾಮಿ, ರಾಘವೇಂದ್ರ, ನಂದೀಶ್, ರವಿಶಂಕರ್, ನಾಗರಾಜು, ಲಕ್ಷ್ಮಣ್, ದೀಪಕ್ ಕುಮಾರ್ ನ್ಯಾಯಾಲಯದ ಮುಂದೆ ಹಾಜರಿದ್ದರು. ವಿನಯ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ಗೈರಾಗಿದ್ದರು.

ವಿಚಾರಣೆ ಬಳಿಕ ಪವಿತ್ರಾ ಗೌಡ ಕೋರ್ಟ್ ಆವರಣದಲ್ಲೇ ನಿಂತಿದ್ದರು. ದರ್ಶನ್ ಹೋಗುವುದನ್ನು ನೋಡಿಕೊಂಡು ನಿಂತಿದ್ದರು. ಆದರೆ, ಪವಿತ್ರಾ ಗೌಡ ಕಡೆ ತಿರುಗಿ ನೋಡದೇ ದರ್ಶನ್ ತೆರಳಿದರು. ವಿಚಾರಣೆಗೆ ಹಾಜರಾಗಿದ್ದ ದರ್ಶನ್‌ಗೆ ನಟ ಧನ್ವೀರ್ ಸಾಥ್ ಕೊಟ್ಟಿದ್ದರು.

The post ರೇಣುಕಾಸ್ವಾಮಿ ಕೇಸ್; ಸೆ.9 ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್! appeared first on Good News 24x7.

]]>
ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಬೆನ್ನಿಗೆ ಗುಂಡು ಹಾರಿಸಿ ಕೊಂ*ದ ತಂದೆ! https://www.goodnews24x7.com/tennis-player-radhika-yadav-shot-dead-by-father/ Fri, 11 Jul 2025 10:35:09 +0000 https://www.goodnews24x7.com/?p=5031 ನವದೆಹಲಿ : ತನ್ನದೇ ಸ್ವಂತ ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3…

The post ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಬೆನ್ನಿಗೆ ಗುಂಡು ಹಾರಿಸಿ ಕೊಂ*ದ ತಂದೆ! appeared first on Good News 24x7.

]]>

ನವದೆಹಲಿ : ತನ್ನದೇ ಸ್ವಂತ ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3 ಬಾರಿ ಗುಂಡು ಹಾರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ಆಕೆಯ ಪ್ರಮುಖ ಅಂಗಗಳಿಗೆ ಗಾಯಗಳಾಗಿ ಅವರು ತಕ್ಷಣವೇ ಸಾವನ್ನಪ್ಪಿದ್ದಾರೆ.


ಕೊಲೆ ಆರೋಪಿ ಹಾಗೂ ಮೃತ ಯುವತಿಯ ತಂದೆ ದೀಪಕ್ ಯಾದವ್ ಅವರನ್ನು ಬಂಧಿಸಲಾಗಿದೆ. ಅವರ ಬಳಿಯಿದ್ದ ಲೈಸೆನ್ಸ್ ಪಡೆದ ರಿವಾಲ್ವರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆಯ ಪ್ರಾಥಮಿಕ ತನಿಖೆಯಲ್ಲಿ ರಾಧಿಕಾ ಯಾದವ್ ಅವರ 51 ವರ್ಷದ ತಂದೆ ತಮ್ಮ ಮಗಳು ಸ್ವಂತ ಟೆನಿಸ್ ಅಕಾಡೆಮಿ ನಡೆಸುತ್ತಿದ್ದುದಕ್ಕೆ ಅಸಮಾಧಾನಗೊಂಡಿದ್ದರು ಎಂದು ತಿಳಿದುಬಂದಿದೆ.


ಪೊಲೀಸರ ಪ್ರಕಾರ, ದೀಪಕ್ ಯಾದವ್ ಅವರ ಊರಾದ ವಜೀರಾಬಾದ್ನಲ್ಲಿ ಗ್ರಾಮಸ್ಥರು ಮತ್ತು ಗೆಳೆಯರಿಂದ ಬಂದ ನಿಂದನೆಗಳಿಂದ ಕೋಪಗೊಂಡಿದ್ದರು. ಅವರ ಗೆಳೆಯರು, ಸಂಬಂಧಿಕರು ದೀಪಕ್ ತಮ್ಮ ಮಗಳ ಟೆನಿಸ್ ಅಕಾಡೆಮಿಯಿಂದ ಪಡೆಯುವ ಆದಾಯದಿಂದ ಬದುಕುತ್ತಿದ್ದಕ್ಕಾಗಿ ಅಪಹಾಸ್ಯ ಮಾಡಿದ್ದರು. ಇದರಿಂದ ದೀಪಕ್ ಯಾದವ್ ಮಗಳ ಮೇಲೆ ಕೋಪಗೊಂಡಿದ್ದರು. ಮಗಳಿಗೆ ಟೆನಿಸ್ ಅಕಾಡೆಮಿ ಮುಚ್ಚುವಂತೆ ಅನೇಕ ಬಾರಿ ಹೇಳಿದ್ದರು. ಆದರೆ, ಆಕೆ ಒಪ್ಪಿರಲಿಲ್ಲ. ಇದೇ ವಿಷಯದ ಜಗಳದಿಂದ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸರ ಪ್ರಕಾರ, ತಂದೆ ತನ್ನ ಮಗಳ ವೃತ್ತಿಜೀವನ ಮತ್ತು ಗಳಿಕೆಯ ಬಗ್ಗೆ ಸಾಮಾಜಿಕ ಟೀಕೆಗಳಿಂದಾಗಿ ಕಳೆದ 15 ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ. ತಂದೆ ಮತ್ತು ಮಗಳ ನಡುವಿನ ಇತ್ತೀಚಿನ ವಾಗ್ವಾದವು ರಾಧಿಕಾ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊದಿಂದ ಹುಟ್ಟಿಕೊಂಡಿರಬಹುದು ಎಂದು ತನಿಖಾಧಿಕಾರಿಯೊಬ್ಬರು ಹೇಳಿದ್ದಾರೆ.

ರಾಧಿಕಾ ಯಾದವ್ ಯಾರು?


ರಾಧಿಕಾ ಒಬ್ಬ ಪ್ರತಿಭಾನ್ವಿತ ಮತ್ತು ಭರವಸೆಯ ಟೆನಿಸ್ ಕ್ರೀಡಾಪಟು. ಸ್ಕಾಟಿಷ್ ಹೈ ಇಂಟರ್ನ್ಯಾಷನಲ್ ಶಾಲೆಯ ಪದವೀಧರೆ. ಆಕೆ 2018ರಲ್ಲಿ ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಶಾಲೆಯಲ್ಲಿ ಓದುವಾಗಲೇ ಆಕೆ ಟೆನಿಸ್ಗೆ ಕಾಲಿಟ್ಟರು. ರಾಧಿಕಾ ಅಂತಾರಾಷ್ಟ್ರೀಯ ಟೆನಿಸ್ ಫೆಡರೇಶನ್ (ಐಟಿಎಫ್) ನಲ್ಲಿ ಡಬಲ್ಸ್ ಟೆನಿಸ್ ಆಟಗಾರ್ತಿಯಾಗಿ 113ನೇ ಸ್ಥಾನ ಪಡೆದಿದ್ದರು. ಐಟಿಎಫ್ ಡಬಲ್ಸ್ನಲ್ಲಿ ಅವರು ಅಗ್ರ 200ರೊಳಗೆ ಸ್ಥಾನ ಪಡೆದಿದ್ದರು. ಆಕೆ ಇತ್ತೀಚೆಗೆ ಭುಜದ ಗಾಯದಿಂದ ಬಳಲುತ್ತಿದ್ದರು ಮತ್ತು ಚಿಕಿತ್ಸೆಗೂ ಒಳಗಾಗಿದ್ದರು. ಆದರೂ ಅಕಾಡೆಮಿಯನ್ನು ನಡೆಸುವುದನ್ನು ನಿಲ್ಲಿಸಲಿಲ್ಲ.

The post ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಬೆನ್ನಿಗೆ ಗುಂಡು ಹಾರಿಸಿ ಕೊಂ*ದ ತಂದೆ! appeared first on Good News 24x7.

]]>
ರಾಮನಗರ ದಿವ್ಯಾಂಗ ಬಾಲಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! https://www.goodnews24x7.com/big-twist-in-ramanagara-divyang-girl-case/ Sun, 18 May 2025 07:21:47 +0000 https://www.goodnews24x7.com/?p=3947 ರಾಮನಗರ : ರಾಮನಗರದಲ್ಲಿ ನಡೆದಿದ್ದ ದಿವ್ಯಾಂಗ ಬಾಲಕಿಯ ಕೊ*ಲೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಮರ್ಡ*ರ್ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಆದರೆ ಇದೀಗ ಮರ್ಡ*ರ್ ಕೇಸ್ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇನೆಂದರೆ ಅತ್ಯಾ*ಚಾರ ನಡೆದಿಲ್ಲವೆಂಬುದು…

The post ರಾಮನಗರ ದಿವ್ಯಾಂಗ ಬಾಲಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! appeared first on Good News 24x7.

]]>

ರಾಮನಗರ : ರಾಮನಗರದಲ್ಲಿ ನಡೆದಿದ್ದ ದಿವ್ಯಾಂಗ ಬಾಲಕಿಯ ಕೊ*ಲೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಮರ್ಡ*ರ್ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಆದರೆ ಇದೀಗ ಮರ್ಡ*ರ್ ಕೇಸ್ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇನೆಂದರೆ ಅತ್ಯಾ*ಚಾರ ನಡೆದಿಲ್ಲವೆಂಬುದು ಎಫ್ಎಸ್ಎಲ್ ವರದಿಯಲ್ಲಿ ಧೃಡಪಟ್ಟಿದೆ. ಜೊತೆಗೆ ಪ್ರಕರಣದ ತನಿಖೆ ಬಗ್ಗೆ ಅಲೆಮಾರಿ ಹಕ್ಕಿಪಿಕ್ಕಿ ಬುಡುಕಟ್ಟು ಸಮುದಾಯದ ರಾಜ್ಯಾಧ್ಯಕ್ಷ ಜಗ್ಗು ಅನುಮಾನ ವ್ಯಕ್ತಪಡಿಸಿದ್ದಾರೆ.

ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದ್ದ 14 ವರ್ಷದ ದಿವ್ಯಾಂಗ ಬಾಲಕಿಯ ಕೊ*ಲೆ ಪ್ರಕರಣಕ್ಕೆ ಬಿಗ್ ಟಿಸ್ಟ್ ಸಿಕ್ಕಿದ್ದು, ಮೇಲ್ನೋಟಕ್ಕೆ ಬಾಲಕಿಯದ್ದು ಕೊ*ಲೆ ಅಲ್ಲ, ರೈಲು ಡಿಕ್ಕಿ ಹೊಡೆದು ಸಾ*ವನ್ನಪ್ಪಿದ್ದಾಳೆ. ಜೊತೆಗೆ ಬಾಲಕಿಯ ಮೇಲೆ ಯಾವುದೇ ಅತ್ಯಾ*ಚಾರ ನಡೆದಿಲ್ಲವೆಂಬುವುದು ಎಫ್ಎಸ್ಎಲ್ ವರದಿಯಲ್ಲಿ ಧೃಡವಾಗಿದೆ. ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯ 14 ವರ್ಷದ ದಿವ್ಯಾಂಗ ಬಾಲಕಿ ಮೇ 11 ರ ಸಂಜೆಯಿಂದ ಏಕಾಏಕಿ ನಾಪತ್ತೆಯಾಗಿದ್ದಳು. ಆನಂತರ ಮೇ 12 ರಂದು ಹಕ್ಕಿಪಿಕ್ಕಿ ಕಾಲೋನಿ ಬಳಿಯ ರೈಲ್ವೆ ಹಳಿ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಬಾಲಕಿಯ ಸಾ*ವು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಅತ್ಯಾ*ಚಾರ ಎಸಗಿ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದರು. ಈ ನಿಟ್ಟಿನಲ್ಲಿ ಬಿಡದಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.


ವಿಶೇಷ ತಂಡಗಳನ್ನ ರಚನೆ ಮಾಡಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದ ಬಿಡದಿ ಪೊಲೀಸರು, ಮರಣೋತ್ತರ ಪರೀಕ್ಷೆ ಜೊತೆಗೆ ಎಫ್ಎಸ್ಎಲ್ಗೂ ಕಳುಹಿಸಿದ್ದರು. ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಬಾಲಕಿಯ ಮೇಲೆ ಯಾವುದೇ ಅತ್ಯಾ*ಚಾರ ನಡೆದಿರುವುದು ಧೃಡವಾಗಿಲ್ಲ. ಜೊತೆ ಬಾಲಕಿಯ ಮೇಲೆ ಯಾವುದೇ ಸುಟ್ಟ ಗುರುತುಗಳು ಪತ್ತೆಯಾಗಿಲ್ಲ. ಅಲ್ಲದೆ ಸಿಸಿ ಟಿವಿ ಆಧಾರದ ಮೇಲೆ ಮೇಲ್ನೋಟಕ್ಕೆ ರೈಲು ಡಿಕ್ಕಿ ಹೊಡೆದು ಬಾಲಕಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಇನ್ನು ಪೊಲೀಸರ ಕೈ ಸೇರಿರುವ FSL ವರದಿಯಿಂದ ಬಾಲಕಿಯ ಮೇಲೆ ಅತ್ಯಾ*ಚಾರ ನಡೆದಿಲ್ಲದಿರುವುದು ಗೊತ್ತಾಗಿದೆ. ಆದರೆ ಮರಣೋತ್ತರ ಪರೀಕ್ಷೆ ವರದಿಯಿಂದ ಇದು ಆತ್ಮ*ಹತ್ಯೆಯಾ ಅಥವಾ ಕೊ*ಲೆಯಾ ಎಂಬುವುದು ತಿಳಿಯಲಿದೆ. ಮರಣೋತ್ತರ ವರದಿ ಸೋಮವಾರ ಪೊಲೀಸರ ಕೈ ಸೇರಲಿದೆ. ಆ ಬಳಿಕ ಸಾ*ವಿಗೆ ನಿಖರ ಕಾರಣ ತಿಳಿಯಲಿದೆ. ಇನ್ನು ಬಾಲಕಿಯ ಸಾ*ವಿನ ಸುದ್ದಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕೂಡ ಕ್ರಮ ತೆಗೆದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ.

The post ರಾಮನಗರ ದಿವ್ಯಾಂಗ ಬಾಲಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! appeared first on Good News 24x7.

]]>
ರೌಡಿ ಶೀಟರ್ ದೊರೆಸ್ವಾಮಿ ಹ* ಪ್ರಕರಣದಲ್ಲಿ ಎಂಟು ಮಂದಿ ಬಂಧನ; ಪ್ರೇಯಸಿ ಪೊಲೀಸ್ ವಶಕ್ಕೆ. https://www.goodnews24x7.com/%e0%b2%b0%e0%b3%8c%e0%b2%a1%e0%b2%bf-%e0%b2%b6%e0%b3%80%e0%b2%9f%e0%b2%b0%e0%b3%8d-%e0%b2%a6%e0%b3%8a%e0%b2%b0%e0%b3%86%e0%b2%b8%e0%b3%8d%e0%b2%b5%e0%b2%be%e0%b2%ae%e0%b2%bf-%e0%b2%b9-%e0%b2%aa/ Wed, 19 Mar 2025 09:09:09 +0000 https://www.goodnews24x7.com/?p=2823 ಮೈಸೂರು:- ರೌಡಿ ಶೀಟರ್ ದೊರೆಸ್ವಾಮಿ ಹತ್ಯೆ ಪ್ರಕರಣದಲ್ಲಿ ಈವರೆಗೆ 8 ಮಂದಿಯನ್ನು ಬಂಧಿಸಿರುವ ಪೊಲೀಸರು, ಘಟನೆ ವೇಳೆ ದೊರೆಸ್ವಾಮಿ ಜೊತೆಯಲ್ಲಿದ್ದ ಮಹಿಳೆಯ ವಿಚಾರಣೆ ನಡೆಸಿದ್ದಾರೆ. ದೊರೆಸ್ವಾಮಿ ಕೊಲೆಯಾದ ವೇಳೆ ಜೊತೆಯಲ್ಲಿದ್ದ ಬೆಂಗಳೂರು ಮೂಲದ ಶ್ವೇತಾಳನ್ನು ಮಂಗಳವಾರ ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗಿದೆ.…

The post ರೌಡಿ ಶೀಟರ್ ದೊರೆಸ್ವಾಮಿ ಹ* ಪ್ರಕರಣದಲ್ಲಿ ಎಂಟು ಮಂದಿ ಬಂಧನ; ಪ್ರೇಯಸಿ ಪೊಲೀಸ್ ವಶಕ್ಕೆ. appeared first on Good News 24x7.

]]>

ಮೈಸೂರು:- ರೌಡಿ ಶೀಟರ್ ದೊರೆಸ್ವಾಮಿ ಹತ್ಯೆ ಪ್ರಕರಣದಲ್ಲಿ ಈವರೆಗೆ 8 ಮಂದಿಯನ್ನು ಬಂಧಿಸಿರುವ ಪೊಲೀಸರು, ಘಟನೆ ವೇಳೆ ದೊರೆಸ್ವಾಮಿ ಜೊತೆಯಲ್ಲಿದ್ದ ಮಹಿಳೆಯ ವಿಚಾರಣೆ ನಡೆಸಿದ್ದಾರೆ.
ದೊರೆಸ್ವಾಮಿ ಕೊಲೆಯಾದ ವೇಳೆ ಜೊತೆಯಲ್ಲಿದ್ದ ಬೆಂಗಳೂರು ಮೂಲದ ಶ್ವೇತಾಳನ್ನು ಮಂಗಳವಾರ ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗಿದೆ. ಆಕೆಯ ಮೊಬೈಲ್ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯ ಲಾಗಿದ್ದು, ಬುಧವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಘಟನೆ ಸಂಬಂಧ ನಿನ್ನೆ ಮತ್ತು ಮೊನ್ನೆ ಒಟ್ಟು 8 ಜನ ಆರೋಪಿಗಳನ್ನು ಬಂಧಿಸಲಾಗಿದೆ.
ಮೈಸೂರು ತಾಲೂಕು, ಜಯಪುರ ಹೋಬಳಿ, ಅನಗನಹಳ್ಳಿ ಸಮೀಪದ ತೋಟದ ಮನೆಯಲ್ಲಿ ಕೆಲ ದಿನಗಳ ಹಿಂದೆ ದೊರೆಸ್ವಾಮಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಆ ರಾತ್ರಿ ಆತನ ಜೊತೆಯಲ್ಲಿದ್ದ ಪ್ರೇಯಸಿ ಬೆಂಗ ಳೂರು ಮೂಲದ ಶ್ವೇತಾ ನಾಪತ್ತೆಯಾಗಿ ದ್ದಳು. ಆದ್ದರಿಂದ ಶ್ವೇತಾ ಮೇಲೆ ಅನುಮಾನ ವ್ಯಕ್ತವಾಗಿತ್ತು. ಆಕೆಯೇ ಕೊಲೆ ಮಾಡಿ, ತಲೆಮರೆಸಿಕೊಂಡಿರುವುದಾಗಿ ದೊರೆಸ್ವಾಮಿ ಪತ್ನಿಯ ಆರೋಪಿಸಿದ್ದರು. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮೇಲಧಿಕಾರಿಗಳ ನಿರ್ದೇಶನದಂತೆ ವೃತ್ತ ನಿರೀಕ್ಷಕ ಶಿವನಂಜಶೆಟ್ಟಿ ನೇತೃತ್ವದಲ್ಲಿ ತನಿಖೆ ನಡೆಸಿದ ತಂಡ, ಹಳೇ ದ್ವೇಷಕ್ಕೆ ಹತ್ಯೆ ಮಾಡಲಾಗಿದೆ ಎಂಬುದನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿತ್ತು. ಇದೀಗ ಹತ್ಯೆ ನಡೆದ ವೇಳೆ ಜೊತೆಯಲ್ಲಿದ್ದರು ಎನ್ನಲಾದ ಶ್ವೇತಾಳ ವಿಚಾರಣೆ ನಡೆಸ ಲಾಗಿದ್ದು, ಈಕೆ ಭಾಗಿಯಾಗಿದ್ದಾಳೋ, ಇಲ್ಲವೋ ಎನ್ನುವುದು ಮುಂದಿನ ತನಿಖೆಯಲ್ಲಿ ತಿಳಿಯಲಿದೆ.

The post ರೌಡಿ ಶೀಟರ್ ದೊರೆಸ್ವಾಮಿ ಹ* ಪ್ರಕರಣದಲ್ಲಿ ಎಂಟು ಮಂದಿ ಬಂಧನ; ಪ್ರೇಯಸಿ ಪೊಲೀಸ್ ವಶಕ್ಕೆ. appeared first on Good News 24x7.

]]>